Subscribe to Updates
Get the latest creative news from FooBar about art, design and business.
Author: kannadanewsnow57
ದಕ್ಷಿಣ ಕನ್ನಡ : ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಆರೋಪದ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಗೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಯೂಟ್ಯೂಬರ್ ಸಮೀರ್, ಸುಜಾತ್ ಭಟ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದಾರೆ.
ರೋಗಮುಕ್ತ ಜೀವನವೇ ಪರಿಪೂರ್ಣ ಸಂಪತ್ತು ಎಂದು ಅವರು ಹೇಳುತ್ತಾರೆ. ಆದರೆ ಇಂದಿನ ಪರಿಸ್ಥಿತಿಯಲ್ಲಿ, ನಾವು ಪರಿಪೂರ್ಣ ಸಂಪತ್ತನ್ನು ಹುಡುಕುತ್ತಾ ಓಡಾಡಬೇಕಾದ ಅನಿವಾರ್ಯತೆ ಇದೆ ಮತ್ತು ರೋಗ ಬರಲಿ. ಈ ಭೂಮಿಯಲ್ಲಿ ರೋಗಮುಕ್ತರು ಯಾರೂ ಇಲ್ಲ. ಔಷಧ ಸೇವಿಸದ ಜನರೇ ಇಲ್ಲ ಎಂಬ ಪರಿಸ್ಥಿತಿ ಇದೆ. ಅನಾರೋಗ್ಯದಿಂದ ಮುಕ್ತಿ ಪಡೆಯಲು ಧನ್ವಂತರಿ ಮಂತ್ರ ಪ್ರಧಾನ ಗುರುಗಳು ಹಾಗೂ ಭಾರತದ ಪ್ರಮುಖ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ಇದರಿಂದ ತಪ್ಪಿಸಿಕೊಳ್ಳುವ ಮಾರ್ಗವೇನು? ಒಳ್ಳೆಯ ಆಹಾರ, ಒಳ್ಳೆಯ ನಿದ್ರೆ, ಒಳ್ಳೆಯ ವಿಶ್ರಾಂತಿ, ಒತ್ತಡ ರಹಿತ ಜೀವನ, ಸಂತೋಷದ ಜೀವನ, ಇವೆಲ್ಲವೂ ಒಬ್ಬ ವ್ಯಕ್ತಿಯಲ್ಲಿ ಇದ್ದರೆ, ಅವನು ಖಂಡಿತವಾಗಿಯೂ ಈ ಸಮಸ್ಯೆಗಳಿಂದ ಮುಕ್ತನಾಗಬಹುದು. ಆದರೆ ಇಂದಿನ ಪರಿಸ್ಥಿತಿಯಲ್ಲಿ ಕಲಬೆರಕೆಯಿಲ್ಲದ ಆಹಾರ, ಒಳ್ಳೆಯ ನಿದ್ರೆ ಮತ್ತು…
ಭಿಲಾಯಿ: ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಚಲಿಸುವ ಬೈಕ್ನಲ್ಲಿ ಪ್ರೇಮಿಗಳು ಸಿನಿಮೀಯ ಶೈಲಿಯಲ್ಲಿ ಪ್ರಣಯ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಚಲಿಸುವ ಬೈಕ್ನ ಪೆಟ್ರೋಲ್ ಟ್ಯಾಂಕ್ ಮೇಲೆ ಕುಳಿತಿದ್ದ ಹುಡುಗಿ, ಸವಾರನನ್ನು ತಬ್ಬಿಕೊಂಡು, ಸಂಚಾರ ನಿಯಮಗಳನ್ನು ನಿರ್ಲಜ್ಜವಾಗಿ ಉಲ್ಲಂಘಿಸುತ್ತಿರುವುದನ್ನು ಈ ದೃಶ್ಯಗಳು ತೋರಿಸುತ್ತವೆ. ಈ ವಿಡಿಯೋ ಭಿಲಾಯಿ ಟೌನ್ಶಿಪ್ನ ಸೆಕ್ಟರ್ 10 ರದ್ದಾಗಿದೆ ಎಂದು ವರದಿಯಾಗಿದೆ. ಅವರಿಬ್ಬರೂ ಹೆಲ್ಮೆಟ್ ಧರಿಸಿಲ್ಲ. ಬೈಕ್ ಹಿಂದೆ ಕಾರು ಚಾಲನೆ ಮಾಡುತ್ತಿದ್ದಾಗ ಈ ವಿಡಿಯೋ ಚಿತ್ರೀಕರಣಗೊಂಡಿರುವಂತೆ ತೋರುತ್ತಿದೆ. ವೈರಲ್ ವಿಡಿಯೋವನ್ನು ಗಮನದಲ್ಲಿಟ್ಟುಕೊಂಡು, ಭಿಲಾಯಿ ನಗರ ಪೊಲೀಸರು ಬೈಕ್ ಸವಾರಿ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮೋಟಾರ್ ವಾಹನ ಕಾಯ್ದೆಯಡಿಯಲ್ಲಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಯುವಕನನ್ನು ಮನೀಷ್ ಎಂದು ಗುರುತಿಸಲಾಗಿದೆ. https://twitter.com/JayManikpuri2/status/1957720975262548022?ref_src=twsrc%5Etfw%7Ctwcamp%5Etweetembed%7Ctwterm%5E1957720975262548022%7Ctwgr%5Ecff95565cc28fde269cd24e31a37f4302633b3a6%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fenglish%3Fmode%3Dpwalangchange%3Dtrue
ಉಡುಪಿ: ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಸಂಬಂಧ ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆಯ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಠಾಣೆ ಬಳಿ ಬಿಗಿ ಭದ್ರತೆ ನೀಡಲಾಗಿದೆ. ಠಾಣೆ ಬಳಿ ಗುಂಪು ಸೇರುವಂತಿಲ್ಲ, ಪ್ರತಿಭಟನೆ ನಡೆಸುವಂತಿಲ್ಲ. ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಮಹೇಶ್ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆ ನಿವಾಸಕ್ಕೆ ಉಡುಪಿಯ ಎಸ್ ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಆಗಮಿಸಿ ವಶಕ್ಕೆ ಪಡೆದಿದೆ. ಆಗಸ್ಟ್ 16 ರಂದು ಫೇಸ್ಬುಕ್ ಪೇಜ್ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ರವರ…
ಉಡುಪಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಸಂಬಂಧ ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಮಹೇಶ್ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆ ನಿವಾಸಕ್ಕೆ ಉಡುಪಿಯ ಎಸ್ ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಆಗಮಿಸಿ ವಶಕ್ಕೆ ಪಡೆದಿದೆ. ಆಗಸ್ಟ್ 16 ರಂದು ಫೇಸ್ಬುಕ್ ಪೇಜ್ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ರವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂಧೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮಹೇಶ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮ…
ಯುವಕನೊಬ್ಬ ತನ್ನ ಗೆಳತಿಯನ್ನು ಭೇಟಿಯಾಗಲು 100 ಕಿಲೋಮೀಟರ್ ನಡೆದ. ಆದರೆ, ಕೊನೆಗೆ ಅಲ್ಲಿಗೆ ಹೋದ ನಂತರ, ಅವನಿಗೆ ಭಯಾನಕ ಅನುಭವವಾಯಿತು. ಗೆಳತಿಯನ್ನು ಭೇಟಿಯಾಗಲು ಹೋದ ಪ್ರೇಮಿಯನ್ನು ಕುಟುಂಬ ಸದಸ್ಯರು ಒತ್ತೆಯಾಳಾಗಿಟ್ಟುಕೊಂಡು ಥಳಿಸಿದ್ದಾರೆ. ಸುಮಾರು 13 ಗಂಟೆಗಳ ಕಾಲ ಆತನನ್ನು ಒತ್ತೆಯಾಳಾಗಿಟ್ಟ ನಂತರ, ಗ್ರಾಮಸ್ಥರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಲ್ಲಿ ಪೊಲೀಸರು ಎರಡೂ ಪಕ್ಷಗಳ ನಡುವೆ ರಾಜಿ ಮಾಡಿಕೊಂಡರು. ಈಗ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಪ್ರಕರಣವು ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯ ಬುಡಕಟ್ಟು ಪ್ರದೇಶವಾದ ಪಿಪ್ರಾಹಿಯಲ್ಲಿ ನಡೆದಿದೆ. ಸ್ವೀಕರಿಸಿದ ಮಾಹಿತಿಯ ಪ್ರಕಾರ, ರೇವಾ ಜಿಲ್ಲೆಯ ಬೈಕುಂತ್ಪುರ ಪೊಲೀಸ್ ಠಾಣೆ ಪ್ರದೇಶದ ನಿವಾಸಿ ಯುವಕನೊಬ್ಬ ಸಾಮಾಜಿಕ ಮಾಧ್ಯಮದಲ್ಲಿ ಪಿಪ್ರಾಹಿಯ ಹುಡುಗಿಯೊಬ್ಬಳೊಂದಿಗೆ ಸ್ನೇಹ ಬೆಳೆಸಿಕೊಂಡ. ಇದರ ನಂತರ, ಆಗಸ್ಟ್ 17 ರಂದು, ಪ್ರೇಮಿ ತನ್ನ ಗೆಳತಿಯನ್ನು ಭೇಟಿಯಾಗಲು ಮೌಗಂಜ್ ಜಿಲ್ಲೆಯ ಪಿಪ್ರಾಹಿ ಗ್ರಾಮಕ್ಕೆ ತಲುಪಿದನು. ಹುಡುಗಿಯ ಕುಟುಂಬಕ್ಕೆ ಇದರ ಸುಳಿವು ಸಿಕ್ಕಿತು. https://youtu.be/VBn_D9PceME?si=4xKmNabPX9CSRQQG ಹುಡುಗಿಯ ಕುಟುಂಬ…
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಯಲ್ಲಿ ನೋಂದಣಿಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ ಸೀಡೆಡ್ ಬ್ಯಾಂಕ್ ಖಾತೆ ಹೊಂದಿರಬೇಕು. ಸೇವಾ ಸಿಂಧೂ ವೆಬ್ ಸೈಟ್ https://sevasindhugs.karnataka.gov.in ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಿಕೊಂಡು, ಹಾಗೂ ಪರಿಶೀಲನೆಗೆ ಬಾಕಿ ಉಳಿದಿರುವ ಅಭ್ಯರ್ಥಿಗಳು ಮಾತ್ರ ಸೂಚಿಸಲ್ಪಟ್ಟ ಇಲಾಖೆಯ ಕಚೆÃರಿಗಳಿಗೆ ತಮ್ಮ ಎಲ್ಲ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ, ಪರಿಶೀಲಿಸಿ ಶೀಘ್ರವಾಗಿ ದೃಢೀಕರಿಸಿಕೊಳ್ಳುವಂತೆ ಸೂಚಿಸಲಾಗಿದೆ. ಹಾಗೂ ಈಗಾಗಲೇ ನೋಂದಾಯಿಸಿಕೊAಡು ಹಣ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ಮೂರು ತಿಂಗಳಿಗೊಮ್ಮೆ 25ನೇ ದಿನಾಂಕದೊಳಗೆ ಸ್ವಯಂ-ಘೋಷಣೆಯನ್ನು ಮಾಡಿಕೊಳ್ಳಬೇಕಾಗಿರುತ್ತದೆ. ಜೂನ್, ಜುಲೈ, ಆಗಸ್ಟ್ ಮಾಹೆಯ ಸ್ವಯಂ-ಘೋಷಣೆಯನ್ನು ಆಗಸ್ಟ್ ತಿಂಗಳಿನ 25ನೇ ದಿನಾಂಕದೊಳಗೆ ಸ್ವಯಂ-ಘೋಷಣೆಯನ್ನು ಮಾಡಿಕೊಳ್ಳಬೇಕೆಂದು ಈ ಮೂಲಕ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚÉÃರಿ ದೂರವಾಣಿ ಸಂಖ್ಯೆ: 08172-296374 ನ್ನು ಸಂಪರ್ಕಿಸುವAತೆ ಹಾಸನ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ನವದೆಹಲಿ : `INDIA’ ಮೈತ್ರಿಕೂಟದ ಉಪರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿರುವ ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶ ಬಿ. ಸುದರ್ಶನ್ ರೆಡ್ಡಿ ಅವರು ಕಾಂಗ್ರೆಸ್ ಅಧ್ಯಕ್ಷ-ರಾಜ್ಯಸಭೆಯ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ಸದಸ್ಯ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಎನ್ಸಿಪಿ-ಎಸ್ಸಿಪಿ ಮುಖ್ಯಸ್ಥ ಶರದ್ ಪವಾರ್, ಎಸ್ಪಿ ಸಂಸದ ರಾಮ್ ಗೋಪಾಲ್ ಯಾದವ್, ಡಿಎಂಕೆ ಸಂಸದ ತಿರುಚಿ ಶಿವ, ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಮತ್ತು ಮೈತ್ರಿಕೂಟದ ಹಲವಾರು ನಾಯಕರು ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದರು. INDIA ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ, ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶ ಬಿ. ಸುದರ್ಶನ್ ರೆಡ್ಡಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪ್ರೇರಣಾ ಸ್ಥಳದಲ್ಲಿ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಿದರು. https://twitter.com/ANI/status/1958410550833995922?ref_src=twsrc%5Egoogle%7Ctwcamp%5Eserp%7Ctwgr%5Etweet https://twitter.com/ANI/status/1958411780918480901?ref_src=twsrc%5Egoogle%7Ctwcamp%5Eserp%7Ctwgr%5Etweet https://twitter.com/ANI/status/1958404797465522604?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಸಭೆಯಲ್ಲಿ ಮಂಡಿಸಿದ್ದಂತ ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ. ಈ ಬಗ್ಗೆ ಇಂದು ಗೃಹ ಸಚಿವ.ಡಾ.ಜಿ.ಪರಮೇಶ್ವಾರ್ ವಿವರಣೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಜನಸಂದಣಿ ನಿಯಂತ್ರಣ ವಿಧೇಯಕ ಮಂಡಿಸಿದ್ದರು. 2025ನೇ ಸಾಲಿನ ಜನಸಂದಣಿ ನಿಯಂತ್ರಣ ವಿಧೇಯಕವನ್ನು ಮಂಡಿಸಲಾಗಿತ್ತು. ಜನಸಂದಣಿ ನಿಯಂತ್ರಣ ಮಾಡಲು ಸರ್ಕಾರದಿಂದ ಕಾನೂನು ರೂಪಿಸಲು ಈ ಮಸೂಧೆಯನ್ನು ಮಂಡಿಸಲಾಗಿತ್ತು. ಆರ್ ಸಿ ಬಿ ಘಟನೆ ಬಳಿಕ ಸರ್ಕಾರ ಎಚ್ಚೆತ್ತು ಈ ಕಾನೂನು ರೂಪಿಸಲಾಗಿತ್ತು. ಸಾರ್ವಜನಿಕ ಸ್ಥಳಗಳಲ್ಲಿ 7 ಸಾವಿರಕ್ಕಿಂತ ಕಡಿಮೆ ಜನ ಸೇರಿದಂದ್ರೆ ಠಾಣೆಯಿಂದ ಅನುಮತಿ ಪಡೆಯಬೇಕು. 7-50 ಸಾವಿರದೊಳಗೆ ಜನ ಸೇರಿದ್ರೆ ಡಿವೈಎಸ್ ಪಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರದಿಂದ ಜನಸಂದಣಿ ನಿಯಂತ್ರಣಕ್ಕೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಈ ತಿದ್ದುಪಡಿ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.
ಮುಂಬೈ : : ದೇಶೀಯ ಷೇರು ಮಾರುಕಟ್ಟೆಗಳು ಗುರುವಾರದ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಏರಿಕೆ ದಾಖಲಿಸಿದವು. ಆರಂಭಿಕ ವಹಿವಾಟಿನಲ್ಲಿ ಬಿಎಸ್ಇ ಸೆನ್ಸೆಕ್ಸ್ 373.33 ಅಂಕಗಳ ಏರಿಕೆಯಾಗಿ 82,231.17 ಅಂಕಗಳಿಗೆ ತಲುಪಿತು ಮತ್ತು ಎನ್ಎಸ್ಇ ನಿಫ್ಟಿ 94.3 ಅಂಕಗಳ ಏರಿಕೆಯಾಗಿ 25,144.85 ಅಂಕಗಳಿಗೆ ತಲುಪಿತು. ಸೆನ್ಸೆಕ್ಸ್ನಲ್ಲಿ ಸೇರಿಸಲಾದ 30 ಕಂಪನಿಗಳಲ್ಲಿ, ಬಜಾಜ್ ಫಿನ್ಸರ್ವ್, ರಿಲಯನ್ಸ್ ಇಂಡಸ್ಟ್ರೀಸ್, ಟ್ರೆಂಟ್, ಐಸಿಐಸಿಐ ಬ್ಯಾಂಕ್, ಟಾಟಾ ಮೋಟಾರ್ಸ್ ಮತ್ತು ಭಾರತ್ ಎಲೆಕ್ಟ್ರಾನಿಕ್ಸ್ ಷೇರುಗಳು ಲಾಭದಲ್ಲಿವೆ. ಮತ್ತೊಂದೆಡೆ, ಎಟರ್ನಲ್, ಹಿಂದೂಸ್ತಾನ್ ಯೂನಿಲಿವರ್, ಇನ್ಫೋಸಿಸ್ ಮತ್ತು ಟೆಕ್ ಮಹೀಂದ್ರಾ ಷೇರುಗಳು ಕುಸಿತ ಕಂಡವು. ಏಷ್ಯಾದ ಮಾರುಕಟ್ಟೆಗಳಲ್ಲಿ, ಚೀನಾದ ಶಾಂಘೈ ಎಸ್ಎಸ್ಇ ಕಾಂಪೋಸಿಟ್ ಮತ್ತು ದಕ್ಷಿಣ ಕೊರಿಯಾದ ಕೋಸ್ಪಿ ಲಾಭದಲ್ಲಿದ್ದರೆ, ಹಾಂಗ್ ಕಾಂಗ್ನ ಹ್ಯಾಂಗ್ ಸೆಂಗ್ ಮತ್ತು ಜಪಾನ್ನ ನಿಕ್ಕಿ 225 ನಷ್ಟದಲ್ಲಿದ್ದವು. ಬುಧವಾರ ಯುಎಸ್ ಮಾರುಕಟ್ಟೆಗಳು ನಕಾರಾತ್ಮಕ ಪ್ರವೃತ್ತಿಯೊಂದಿಗೆ ಮುಕ್ತಾಯಗೊಂಡವು. ಅಂತರರಾಷ್ಟ್ರೀಯ ಮಾನದಂಡ ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್ಗೆ ಶೇ 0.43 ರಷ್ಟು ಏರಿಕೆಯಾಗಿ $67.13…














