Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಆಂಟಿ ರೇಬೀಸ್ ವ್ಯಾಕ್ಸಿನ್ (ARV) ಮತ್ತು ರೇಬೀಸ್ ಇಮ್ಯುನೊಗ್ಲಾಬ್ಯುಲಿನ್ (RIG) ಉಚಿತವಾಗಿ ಒದಗಿಸುವುದಕ್ಕಾಗಿ ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಪ್ರಾಣಿ ಕಡಿತದ ಪ್ರಕರಣಗಳಿಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಅಂಟಿ ರೇಬೀಸ್ ಲಸಿಕೆ (ARV) ಮತ್ತು Equine ರೇಬೀಸ್ ಇಮ್ಯುನೊಗ್ಲಾಬ್ಯುಲಿನ್ (ERIG) ಒದಗಿಸುವ ಬಗ್ಗೆ ಹಿಂದಿನ ಸುತ್ತೋಲೆಯನ್ನು ಉಲ್ಲೇಖಿಸಿ, ಈ ಅಗತ್ಯ ಚಿಕಿತ್ಸೆಗಳ ಲಭ್ಯತೆಯನ್ನು ಸುಗಮಗೊಳಿಸಲು ಈ ಕೆಳಗಿನ ಪರಿಷ್ಕೃತ ಮಾರ್ಗಸೂಚಿಗಳನ್ನು ನೀಡಲಾಗಿದೆ. ಪ್ರಾಣಿ ಕಡಿತದ ಪ್ರಕರಣಗಳಿಗೆ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತ ರೇಬೀಸ್ ವಿರೋಧಿ ಲಸಿಕೆ (ARV) ಮತ್ತು Equine ರೇಬೀಸ್ ಇಮ್ಯುನೊಗ್ಲಾಬ್ಯುಲಿನ್ (ERIG) ಒದಗಿಸುವ ಕುರಿತು 30.11.2024 ರಂದು ಹೊರಡಿಸಲಾದ ಅದೇ ಸಮ ಸಂಖ್ಯೆಯ ಹಿಂದಿನ ಸುತ್ತೋಲೆಯನ್ನು ಉಲ್ಲೇಖಿಸಿ, 2025 ರ 07.11.2025 ರ ರಿಟ್ ಅರ್ಜಿ (ಸಿವಿಲ್) ಸಂಖ್ಯೆ (ಗಳು) 5 ರಲ್ಲಿ ಭಾರತದ ಗೌರವಾನ್ವಿತ ಸುಪ್ರೀಂ ಕೋರ್ಟ್ ಆದೇಶಗಳು ಮತ್ತು ಕರ್ನಾಟಕ ಸರ್ಕಾರದ ಸಚಿವಾಲಯದಿಂದ ಹೊರಡಿಸಲಾದ ಸುತ್ತೋಲೆಯನ್ನು ಗಮನದಲ್ಲಿಟ್ಟುಕೊಂಡು…
2025-26ನೇ ಸಾಲಿನಲ್ಲಿ ಬಿ.ಎಡ್.ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮದಡಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯು ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದವರಾಗಿರಬೇಕು. ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಅಲ್ಪಸಂಖ್ಯಾತರ ಅಭ್ಯರ್ಥಿಗಳ ಪೋಷಕರ ವಾರ್ಷಿಕ ಗರಿಷ್ಠ ವರಮಾನ ರೂ.6 ಲಕ್ಷ ಮೀರಿರಬಾರದು. ಈ ಕೋರ್ಸ್ಗಳ ಅವಧಿಗೆ ತಕ್ಕಂತೆ ಪ್ರತಿ ವರ್ಷ ರೂ.25 ಸಾವಿರದಂತೆ (ಗರಿಷ್ಟ 2 ವರ್ಷ) ಅನುದಾನವನ್ನು ನೀಡಲಾಗುವುದು. ವಿದ್ಯಾರ್ಥಿಗಳನ್ನು ಅರ್ಹತಾ ಪರೀಕ್ಷೆ/ ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡತಕ್ಕದ್ದು. ವಿದ್ಯಾರ್ಥಿಗಳು ಬಿ.ಎಡ್.ಕೋರ್ಸ್ನಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸಿರುವ ಬಗ್ಗೆ ಎಲ್ಲಾ ಅಧಿಕೃತ ದಾಖಲಾತಿಗಳನ್ನು ಸಲ್ಲಿಸತಕ್ಕದ್ದು. ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿನಿಂದ ಮಾನ್ಯತೆ ಪಡೆದಿರುವ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್. ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ…
ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಾಧೀನಾನುಭವ ಪ್ರಮಾಣಪತ್ರ (OC) ಪಡೆಯದ 1,200 ಚದರ ಅಡಿ (30/40) ನಿವೇಶನದಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಪಡೆಯಲು ಅವಕಾಶ ಕಲ್ಪಿಸಿ ಸಚಿವ ಸಂಪುಟಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಹೌದು, ರಾಜ್ಯದ ಗ್ರಾಮೀಣ ಭಾಗದಲ್ಲಿ ಒಸಿ ಇಲ್ಲದ ಕಾರಣಕ್ಕಾಗಿ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ಪಡೆಯಲಾಗದೆ ಸಮಸ್ಯೆ ಅನುಭವಿಸುತ್ತಿರುವ ಲಕ್ಷಾಂತರ ಮನೆ ಮಾಲೀಕರಿಗೆ ಇದು ಅನುಕೂಲವಾಗಲಿದೆ. 1,200 ಚದರ ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳು ಸ್ವಾಧೀನಾನು ಭವ ಪತ್ರ ಪಡೆಯುವುದರಿಂದ ವಿನಾಯಿತಿ ದೊರೆಯ ಲಿದೆ. ರಾಜ್ಯ ಸರ್ಕಾರವು ಉಪವಿಧಿಗಳ ಅಡಿಯಲ್ಲಿ ಒಸಿ, ಸಿಸಿ ಇಲ್ಲದ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ನೀಡಲು ಅವಕಾಶ ಕಲ್ಪಿಸಿದೆ. ಈ ಮೂಲಕ ಗ್ರಾಮೀಣ ಭಾಗದ ಕಟ್ಟಡ ಮಾಲೀಕರಿಗೆ ಸಿಹಿಸುದ್ದಿ ಸಿಕ್ಕಂತಾಗಿದೆ.
ಬೆಂಗಳೂರು : ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ವೃಂದದಿಂದ ಗ್ರೂಪ್-ಬಿ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡಿ ಕೌನ್ಸಲಿಂಗ್ ಮೂಲಕ ಸ್ಥಳನಿಯುಕ್ತಿಗೊಳಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ. ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ವೃಂದದಿಂದ ಗ್ರೂಪ್-ಬಿ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡುವ ಬಗ್ಗೆ ದಿನಾಂಕ 09-12-2025 ರಂದು ನಡೆಸಲಾದ ಇಲಾಖಾ ಮುಂಬಡ್ತಿ ಸಮಿತಿ ಸಭೆಯಲ್ಲಿನ ನಡಾವಳಿಯಂತೆ ಸ್ಥಾನಪನ್ನ ಬಡ್ತಿ ನೀಡಿ ಕೌನ್ಸಿಲಿಂಗ್ ಮೂಲಕ ಸ್ಥಳನಿಯುಕ್ತಿಗೊಳಿಸುವ ಸಂಬಂಧ ದಿನಾಂಕ 15-12-2025 ರಂದು ಅಪರ ಆಯುಕ್ತರ ಕಚೇರಿ ಆವರಣದಲ್ಲಿರುವ ಡಯಟ್ ಪ್ರಾರ್ಥನಾ ಮಂದಿರದಲ್ಲಿ ಮುಂಜಾನೆ 10-30 ಗಂಟೆಗೆ ಕೌನ್ಸಿಲಿಂಗ್ ಹಮ್ಮಿಕೊಳ್ಳಾಗಿದ್ದು, ಆ ಪ್ರಕಾರ ಬಡ್ತಿಗೆ ಅರ್ಹತೆ ಹೊಂದಿದ ಅರ್ಹತಾ ಪಟ್ಟಿಯಲ್ಲಿನ ಶಿಕ್ಷಕರುಗಳು ಕೌನ್ಸಿಲಿಂಗ್ಗೆ ಹಾಜರಾಗುವಂತೆ ತಿಳಿಸಲು ವಿಭಾಗದ ಎಲ್ಲಾ ಉಪನಿರ್ದೇಶಕರುಗಳಿಗೆ ಸೂಚಿಸಿದೆ. ವಿಭಾಗದ ಎಲ್ಲಾ ಉಪನಿರ್ದೇಶಕರು (ಆಡಳಿತ) ಶಾಲಾ…
ರಾಷ್ಟ್ರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದಂತೆ, ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಇದೇ ಡಿ.13 ರಂದು ಈ ವರ್ಷದ ಕೊನೆಯ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು, ಸಾರ್ವಜನಿಕರು ಬಾಕಿ ಇರುವ ಮತ್ತು ರಾಜಿಯಾಗಬಹುದಾದಂತಹ ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಹೇಳಿದರು. ನಗರದ ತಾಳೂರು ರಸ್ತೆಯ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮೊದಲನೇ ಮಹಡಿಯ ವಿಡೀಯೋ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಲೋಕ್ ಅದಾಲತ್ ನ್ಯಾಯಾಂಗದ ಒಂದು ಭಾಗ. ಉಭಯ ಕಕ್ಷಿದಾರರ ಪರಸ್ಪರ ಹೊಂದಾಣಿಕೆಗಾಗಿ ಮತ್ತು ತ್ವರಿತ ನ್ಯಾಯಕ್ಕಾಗಿಯೂ ರಾಷ್ಟಿçÃಯ ಲೋಕ್ ಅದಾಲತ್ ಸಹಕಾರಿಯಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಅದಾಲತ್ ದಿನದಂದು 15 ಬೆಂಚ್ ಗಳಲ್ಲಿ ಅದಾಲತ್ ನಡೆಯಲಿದ್ದು, ಅಂದು ಬಗೆಹರಿಸಬಹುದಾದ ವಿವಿಧ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಹಾಗೂ ನ್ಯಾಯಾಲಯದ ಶುಲ್ಕವನ್ನು ಮರು…
ಬೆಂಗಳೂರು : ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಆಯ್ಕೆ ಮಾಡಲು ಈ ಮಾನದಂಡಗಳ ಪಾಲನೆ ಕಡ್ಡಾಯವಾಗಿದೆ. ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಆಯ್ಕೆಯ ಮಾನದಂಡಗಳು 1. ಅರ್ಹತೆ: ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. II. ವಯೋಮಿತಿ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವರ್ಷ ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ಯ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು ಹಾಗೂ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ. III. ಸ್ಥಳೀಯತೆ 1. ಗ್ರಾಮಾಂತರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ಗ್ರಾಮದಲ್ಲಿ ವಾಸ್ತವ್ಯ ಹೊಂದಿರಬೇಕು. ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಆಯ್ಕೆಗೆ ಸ್ಥಳೀಯ ಮಜಿರೆ, ತಾಂಡಾ ಹಾಗೂ ಹಾಡಿಗೆ ಸೇರಿದವರಾಗಿದ್ದರೆ ಸಂಬಂಧಿಸಿದ ವಾಸ್ತವ್ಯ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ ಪಡೆಯುವುದು. 2. ನಗರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ವಾರ್ಡ್ನಲ್ಲಿ ವಾಸ್ತವ್ಯ ಹೊಂದಿರಬೇಕು ಹಾಗೂ ವಾಸ್ತವ್ಯ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ [ಚುನಾವಣಾ ವಾರ್ಡ್ಗಳನ್ನು ಪರಿಗಣಿಸುವಂತಿಲ್ಲ…
ಬೆಂಗಳೂರು : ಇ-ಸ್ವತ್ತು ಅಭಿಯಾನ ಕುರಿತಾದ ಯಾವುದೇ ಗೊಂದಲಗಳ ಪರಿಹಾರಕ್ಕೆ ರಾಜ್ಯಾದ್ಯಂತ ಜಿಲ್ಲಾ ಸಹಾಯವಾಣಿ ಸಂಖ್ಯೆಯನ್ನು ಪ್ರಾರಂಭಿಸಲಾಗಿದೆ. ಈ ಕೆಳಗಿನ ಪೋರ್ಟಲ್ಗೆ ಲಾಗಿನ್ ಆಗಿ ನಿಮ್ಮ ಆಸ್ತಿ ವಿವರಗಳನ್ನು ತುಂಬಿಸಿ, ಅರ್ಜಿ ಸಲ್ಲಿಸಿ: https://eswathu.karnataka.gov.in/ ಈ ಯೋಜನೆಯನ್ನು ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿಸಲಾಗಿದೆ. ಹೀಗಿವೆ ಜಿಲ್ಲಾವಾರು ಸಹಾಯವಾಣಿ ಸಂಖ್ಯೆಗಳು ಬಾಗಲಕೋಟೆ- 08354-200180 ಬಳ್ಳಾರಿ- 08392267453 ಬೆಳಗಾವಿ – 9187082089 ಬೆಂಗಳೂರು ಗ್ರಾಮಾಂತರ- 080-29781057 ಬೆಂಗಳೂರು -080-26710580 ಬೆಂಗಳೂರು ದಕ್ಷಿಣ-080-27276714 ಬೀದರ್-08482-231494 ಚಿಕ್ಕಬಳ್ಳಾಪುರ-08156-277016 ಚಿಕ್ಕಮಗಳೂರು- 9480528888 ಚಾಮರಾಜನಗರ-0822-224015 ಗದಗ-08372-234364 ದಾವಣಗೆರೆ-8192261825 ಧಾರವಾಡ- 0836-2448481 ಚಿತ್ರದುರ್ಗ-18004251978 ದಕ್ಷಿಣ ಕನ್ನಡ- 0824-2451036
ಬೆಂಗಳೂರು : ವಾಹನ ತಪಾಸಣಾ/ಪರೀಶೀಲನೆ ಸಮಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ವಾಹನ ಚಾಲಕರಿಗೆ ಕಿರುಕುಳ ಹಲ್ಲೆ. ಅವಾಚ್ಯ ಶಬ್ದಗಳ ಬಳಕೆ ಮಾಡಿ ದುರ್ನಡತೆ ತೋರುವುದನ್ನು ಕಡಿವಾಣ ಹಾಕಲು ಸೂಕ್ತ ಸುತ್ತೋಲೆ ಹೊರಡಿಸಲಾಗಿದೆ. ಈ ಮೇಲ್ಕಂಡ ವಿಷಯಕ್ಕೆ ಸಂಬಂದಿಸಿದಂತೆ ರಾಜ್ಯ ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆಯಾಗಿದ್ದು ಕೆಲವು ಅಧಿಕಾರಿ ಸಿಬ್ಬಂದಿಗಳು ತೋರುತ್ತಿರುವ ದುರ್ನಡತೆ, ಅಧಿಕಾರ ದುರ್ಬಳಕೆಯಿಂದ ಸಂಪೂರ್ಣ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ಉಂಟಾಗುತ್ತಿದ್ದು ಕಾಲಕಾಲಕ್ಕೆ ಇಲಾಖೆಯಿಂದ ಹಲವಾರು ಸುತ್ತೋಲೆ ಜ್ಞಾಪನಗಳನ್ನು ಹೊರಡಿಸಿದ್ದರು ಕೆಲವು ಪೊಲೀಸ್ ಸಿಬ್ಬಂದಿಗಳು ವಾಹನ ತಪಾಸಣಾ ಸಂದರ್ಭದಲ್ಲಿ ವಾಹನ ಚಾಲಕರ ಮೇಲೆ ದೌರ್ಜನ್ಯ, ಹಲ್ಲೆ, ಕಿರುಕುಳ, ಅವಹೇಳನಕಾರಿ ಅವಾಚ್ಯ ಶಬ್ದಗಳ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ವಾಗ್ವಾದಕ್ಕಿಳಿದು ಅವಮಾನ ಮಾಡುವಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ವರದಿಯಾಗುತ್ತಿರುತ್ತವೆ. ಕೆಲವು ದಿನಗಳ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ಸಂಚಾರಿ ಪೊಲೀಸರು ವಾಹನ ತಪಾಸಣಾ ಸಂದರ್ಭದಲ್ಲಿ ಮಗು ಮೃತಪಟ್ಟ ಪ್ರಕರಣ ಹಾಗೂ ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ಸಾರಿಗೆ ಬಸ್…
ಮನೆಯಲ್ಲಿ ಫ್ರಿಡ್ಜ್ ಬಳಸುವವರೇ ಎಚ್ಚರ, ಫ್ರಿಡ್ಜ್ ಸ್ಪೋಟಗೊಂಡು ತಾಯಿ-ಮಗ ದುರಂತವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಜೋಗುಳಂಬ ಗಡ್ವಾಲ್ ಜಿಲ್ಲೆಯಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಧಾರೂರು ಮಂಡಲ ಕೇಂದ್ರದಲ್ಲಿರುವ ಅವರ ಮನೆಯಲ್ಲಿ ರೆಫ್ರಿಜರೇಟರ್ ಕಂಪ್ರೆಸರ್ ಸ್ಫೋಟಗೊಂಡು ಇಬ್ಬರು ಮಹಿಳೆಯರು ಮತ್ತು 11 ತಿಂಗಳ ಗಂಡು ಮಗು ಗಂಭೀರವಾಗಿ ಗಾಯಗೊಂಡಿತ್ತು. ಈ ಮಧ್ಯೆ, ಚಿಕಿತ್ಸೆ ಪಡೆಯುತ್ತಿದ್ದಾಗ ತಾಯಿ ಮತ್ತು 11 ತಿಂಗಳ ಮಗು ಸಾವನ್ನಪ್ಪಿದೆ. ಮತ್ತೊಬ್ಬ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಸೆಂಬರ್ 6 ರಂದು, ಧಾರೂರು ಮಂಡಲ ಕೇಂದ್ರದಲ್ಲಿ ಮುಚ್ಚಿದ ಅಂಗಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಅಶ್ವಿನಿ ಮತ್ತು ಸುನೀತಾ ಎಂಬ ಮಹಿಳೆಯರು ಅಂಗಡಿಯ ಶಟರ್ ತೆರೆದರು. ಇದ್ದಕ್ಕಿದ್ದಂತೆ, ಫ್ರಿಡ್ಜ್ ಸ್ಫೋಟಗೊಂಡು, ಇಬ್ಬರು ಮಹಿಳೆಯರು ಮತ್ತು ಅವರ 11 ತಿಂಗಳ ಮಗುವಿಗೆ ಗಂಭೀರ ಗಾಯಗಳಾಗಿದ್ದವು. ಸ್ಥಳೀಯರು ತಕ್ಷಣ ಅವರನ್ನು ಗಡ್ವಾಲ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿಂದ ಅವರನ್ನು ಉತ್ತಮ ಚಿಕಿತ್ಸೆಗಾಗಿ ಕರ್ನೂಲ್ಗೆ ಕರೆದೊಯ್ಯಲಾಯಿತು. ಫ್ರಿಡ್ಜ್ನಲ್ಲಿನ ಕಂಪ್ರೆಸರ್ ಸ್ಫೋಟಗೊಂಡ ಕಾರಣ ಅಪಘಾತ ಸಂಭವಿಸಿದೆ ಎಂದು…
ಬೆಂಗಳೂರು : ಎಸ್ ಎಸ್ ಎಲ್ ಸಿ ಪಾಸಾದ ಮಹಿಳೆಯರಿಗೆ ಸಿಹಿಸುದ್ದಿ, ತುಮಕೂರು ಜಿಲ್ಲೆಯಲ್ಲಿನ ಖಾಲಿ ಇರುವ 117 ಅಂಗನವಾಡಿ ಕಾರ್ಯಕರ್ತೆ ಹಾಗೂ 829 ಅಂಗನವಾಡಿ ಸಹಾಯಕಿಯರ ಗೌರವಧನ ಸೇವಾ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯ ಪರಿಷ್ಕೃತ ಮಾರ್ಗಸೂಚಿಯಂತೆ ಮಾನ್ಯ ಜಿಲ್ಲಾಧಿಕಾರಿಗಳು, ತುಮಕೂರು ಜಿಲ್ಲೆ ಇವರ ಅನುಮೋದನೆಯಂತೆ ತುಮಕೂರು ಜಿಲ್ಲೆಯ 11 ತಿರು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಯ ಗೌರವಧನ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ವೆಬ್ಸೈಟ್ ಕೆಳಗಿನ ಮಾರ್ಗಸೂಚಿ/ನಿಬಂಧನೆಗಳಲ್ಲಿ ತಿಳಿಸಿರುವಂತೆ ಅರ್ಹ ಮಹಿಳಾ ಅಭ್ಯರ್ಥಿಗಳು ಹಾಗೂ ಮಹಿಳಾ ಲಿಂಗತ್ವ ಅಲ್ಪ ಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗೆ ದಿನಾಂಕ: 10-12-2025 ರಿಂದ 09-01-2026 (ಸಂಜೆ 5.30 ರವರೆಗೆ) ಅರ್ಜಿ ಸಲ್ಲಿಸಲು: https://karnemakaone.kar.nic.in/abcd/ ಭೇಟಿ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.…














