Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : 2025-26 ನೇ ಸಾಲಿನಲ್ಲಿ ವಿಶೇಷ ದಾಖಲಾತಿ ಅಂದೋಲನ ಹಾಗೂ ಸಾಮಾನ್ಯ ದಾಖಲಾತಿ ಆಂದೋಲನ ನಡೆಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009 ಹಾಗೂ ಕರ್ನಾಟಕ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ನಿಯಮಗಳು 2012 ರಿಂದ ಜಾರಿಗೆ ಬಂದಿರುತ್ತದೆ. ಈ ಕಾಯ್ದೆಯ ಪ್ರಕಾರ ಶಿಕ್ಷಣವು ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕಾಗಿರುತ್ತದೆ. ಎಲ್ಲಾ ಮಕ್ಕಳಿಗೂ ಗುಣಾತ್ಮಕ ಶಿಕ್ಷಣವನ್ನು ಒದಗಿಸುವುದು ಸರ್ಕಾರದ, ಪೋಷಕರ ಮತ್ತು ನಮ್ಮೆಲ್ಲರ ಕರ್ತವ್ಯವಾಗಿರುತ್ತದೆ. 6-14 ವಯೋಮಾನದ ಎಲ್ಲಾ ಮಕ್ಕಳಿಗೆ ಯಾವುದೇ ತಾರತಮ್ಯವಿಲ್ಲದೆ ಕಡ್ಡಾಯ ಮತ್ತು ಉಚಿತ ಪ್ರಾಥಮಿಕ ಶಿಕ್ಷಣವನ್ನು ಒದಗಿಸುವುದು, ಎಲ್ಲಾ ಮಕ್ಕಳು ಕಡ್ಡಾಯವಾಗಿ ಶಾಲೆಗೆ ದಾಖಲಾಗುವುದು ಹಾಗೂ ದಾಖಲಾದ ಎಲ್ಲಾ ಮಕ್ಕಳು ಶಾಲೆಯಲ್ಲಿ ಉಳಿಯಬೇಕು ಎನ್ನುವುದು ಶಿಕ್ಷಣ ಹಕ್ಕು ಕಾಯ್ದೆಯ ಮುಖ್ಯ ಉದ್ದೇಶವಾಗಿದೆ. 2024-25 ನೇ ಸಾಲಿನಲ್ಲಿ ಮೊಬೈಲ್ ಆಪ್ ಮೂಲಕ RDPR, UDD ಹಾಗೂ…
ವಡೋದರಾ : ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮತ್ತು ಮಂಗಳವಾರ ಗುಜರಾತ್ಗೆ ಭೇಟಿ ನೀಡಿದ್ದಾರೆ. ಆಪರೇಷನ್ ಸಿಂಧೂರ್ ನಂತರ ಪ್ರಧಾನಿ ಮೋದಿ ಗುಜರಾತ್ಗೆ ನೀಡುತ್ತಿರುವ ಮೊದಲ ಭೇಟಿ ಇದು. ಪ್ರಧಾನಿ ಬೆಳಿಗ್ಗೆ ವಡೋದರಾ ತಲುಪಿದರು. ಇದಾದ ನಂತರ, ದಾಹೋದ್ನಲ್ಲಿ 9000 ಅಶ್ವಶಕ್ತಿಯ ಎಂಜಿನ್ ಸ್ಥಾವರವನ್ನು ಉದ್ಘಾಟಿಸಲಾಯಿತು. ಪ್ರಧಾನಿ ಮೋದಿ ದಾಹೋದ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಅವರು ಇಲ್ಲಿ ಮಾತನಾಡಲು ಪ್ರಾರಂಭಿಸಿದಾಗ, ಮೊದಲು ಜನರನ್ನು ಗುಜರಾತಿಯಲ್ಲಿ ಸ್ವಾಗತಿಸಿದರು. ಪ್ರಧಾನಿಯವರು ಇಲ್ಲಿ ಆಪರೇಷನ್ ಸಿಂಧೂರ್ ಬಗ್ಗೆಯೂ ಪ್ರಸ್ತಾಪಿಸಿದರು. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 2014 ರ ಈ ದಿನದಂದು ನಾನು ಮೊದಲ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆ ಎಂದು ಹೇಳಿದರು. ನಾನು ದೇಶ ಸೇವೆಯಲ್ಲಿ ನಿರತನಾಗಿದ್ದೇನೆ. ಈ ವರ್ಷಗಳಲ್ಲಿ, ದೇಶವು ಊಹಿಸಲೂ ಅಸಾಧ್ಯವಾದ ನಿರ್ಧಾರಗಳನ್ನು ತೆಗೆದುಕೊಂಡಿತು. ಈ ವರ್ಷಗಳಲ್ಲಿ, ನಾವು ದಶಕಗಳಷ್ಟು ಹಳೆಯದಾದ ಸರಪಳಿಗಳನ್ನು ಮುರಿದಿದ್ದೇವೆ. ದೇಶವು ಎಲ್ಲಾ ಕ್ಷೇತ್ರಗಳಲ್ಲಿಯೂ ಪ್ರಗತಿ ಸಾಧಿಸುತ್ತಿದೆ. ಇಂದು ದೇಶವು ಹತಾಶೆಯ ಕತ್ತಲೆಯಿಂದ ಹೊರಬಂದಿದೆ…
ಮಂಡ್ಯ : ಮಂಡ್ಯದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಹೆಲ್ಮೆಟ್ ತಪಾಸಣೆಗಾಗಿ ಪೊಲೀಸರು ಬೈಕ್ ಅಡ್ಡಗಟ್ಟುತ್ತಿದ್ದಂತೆ ಬೈಕ್ ಸವಾರ ಬಿದ್ದ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದ ವಾಣಿ-ಅಶೋಕ್ ದಂಪತಿಯ ಮೂರುವರೆ ವರ್ಷದ ಮಗು ಹೃತೀಕ್ಷಳಿಗೆ ನಾಯಿ ಕಡಿದೆ ಎಂದು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಸಂಚಾರಿ ಪೊಲೀಸರು ಹೆಲ್ಮೆಟ್ ತಪಾಸಣೆ ವೇಳೆ ಆಯತಪ್ಪಿ ಬೈಕ್ ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವದಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಘಟನೆ ಮಂಡ್ಯದ ನಂದ ಸರ್ಕಲ್ ಬಳಿ ಹೆಲ್ಮೆಟ್ ತಪಾಸಣೆಗಾಗಿ ಸಂಚಾರಿ ಪೊಲೀಸರು ಬೈಕ್ ನಲ್ಲಿ ಬರುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿದ್ದಾರೆ. ಏಕಾಏಕಿ ಬ್ರೇಕ್ ಹಾಕುತ್ತಿದ್ದಂತೆ ಬೈಕ್ ಸವಾರ ಆಯತಪ್ಪಿ ಕೆಳಗೆ ಬೀದ್ದಿದ್ದಾನೆ. ಬೈಕ್ ನಲ್ಲಿದ್ದ ಆತನ ಪತ್ನಿ ಹಾಗೂ ಮಗು ಕೂಡ ಕೆಳಗೆ ಬಿದ್ದಿದ್ದು, ಮಗುವಿನ ತಲೆ ನೆಲಕ್ಕೆ ಅಪ್ಪಳಿಸಿದ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಘಟನೆಯನ್ನು ಕಣ್ಣಾರೆ ಕಂಡ…
ಪಶ್ಚಿಮ ಕೊಲಂಬಿಯಾದ ಬುಗಾ ಪಟ್ಟಣದ ಮೇಲೆ ಆಕಾಶದಿಂದ ಬಿದ್ದ ಲೋಹೀಯ ಗೋಳವು ವ್ಯಾಪಕ ಕುತೂಹಲವನ್ನು ಹುಟ್ಟುಹಾಕಿದೆ, ಅದರ ಅನ್ಯಲೋಕದ ಮೂಲದ ಬಗ್ಗೆ ಊಹಾಪೋಹಗಳು ಮತ್ತು ಹಕ್ಕುಗಳು ಹೊರಹೊಮ್ಮುತ್ತಿವೆ. ಸುಮಾರು 4.5 ಪೌಂಡ್ಗಳಷ್ಟು ತೂಕವಿರುವ ಈ ವಸ್ತುವು ಮಾರ್ಚ್ನಲ್ಲಿ ಇಳಿಯುವ ಮೊದಲು ಅಸಾಮಾನ್ಯವಾಗಿ ಹಾರುತ್ತಿರುವುದು ಕಂಡುಬಂದಿದೆ. ನಂತರ ಅದನ್ನು ಸಂಶೋಧನಾ ತಂಡವು ವಶಪಡಿಸಿಕೊಂಡು ಪರಿಶೀಲಿಸಿತು. ವಸ್ತುವಿನ ಹಾರಾಟ ಮತ್ತು ಇಳಿಯುವಿಕೆಯ ವೀಡಿಯೊಗಳನ್ನು @Truthpolex ನಂತಹ ಬಳಕೆದಾರರು ಆನ್ಲೈನ್ನಲ್ಲಿ ಹಂಚಿಕೊಂಡಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ಗೋಳವನ್ನು ಪರಿಶೀಲಿಸಿದ ರೇಡಿಯಾಲಜಿಸ್ಟ್ ಡಾ. ಜೋಸ್ ಲೂಯಿಸ್ ವೆಲಾಜ್ಕ್ವೆಜ್, ಇದು ಯಾವುದೇ ಗೋಚರ ಬೆಸುಗೆಗಳು ಅಥವಾ ಕೀಲುಗಳನ್ನು ಹೊಂದಿಲ್ಲ ಮತ್ತು ಹೆಚ್ಚಿನ ಸಾಂದ್ರತೆಯ ವಸ್ತುಗಳನ್ನು ಹೊಂದಿದೆ ಎಂದು ಹೇಳಿದರು. “ಇದು ಕೃತಕ ಮೂಲವಾಗಿದೆ ಏಕೆಂದರೆ ಇದು ವೆಲ್ಡಿಂಗ್ಗೆ ಯಾವುದೇ ಪುರಾವೆಗಳನ್ನು ತೋರಿಸುವುದಿಲ್ಲ ಮತ್ತು ಅದರ ಆಂತರಿಕ ರಚನೆಯು ಹೆಚ್ಚಿನ ಸಾಂದ್ರತೆಯ ಅಂಶಗಳಿಂದ ಕೂಡಿದೆ. ಅದರ ಮೂಲವನ್ನು ಸ್ಥಾಪಿಸಲು ಹೆಚ್ಚಿನ ಪರೀಕ್ಷೆಯ ಅಗತ್ಯವಿದೆ” ಎಂದು ವೆಲಾಜ್ಕ್ವೆಜ್ X…
ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಮೈನಿಂಗ್ ಸಾಗಿಸುತ್ತಿದ್ದ ಟಿಪ್ಪರ್ ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಸಂಡೂರಿನ ಜೈ ಸಿಂಗಪುರ ಬಳಿ ಈ ಅಪಘಾತ ಸಂಭವಿಸಿದೆ. ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಂದು ಅನೇಕ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಟೈಪ್ 1 ಮಧುಮೇಹವು ಆನುವಂಶಿಕವಾಗಿ ಮಾತ್ರವಲ್ಲ, ಜೀವನಶೈಲಿಯ ಬದಲಾವಣೆಯಿಂದಲೂ ಉಂಟಾಗುತ್ತದೆ. ಟೈಪ್-2 ಮಧುಮೇಹವು ಹಲವು ಕಾರಣಗಳಿಂದ ಉಂಟಾಗುತ್ತದೆ, ಅವುಗಳಲ್ಲಿ ಅತಿಯಾದ ತೂಕ ಹೆಚ್ಚಾಗುವುದು, ವ್ಯಾಯಾಮದ ಕೊರತೆ, ಸರಿಯಾದ ಸಮಯಕ್ಕೆ ಊಟ ಮಾಡದಿರುವುದು, ರಾತ್ರಿ ತುಂಬಾ ತಡವಾಗಿ ಎಚ್ಚರವಾಗಿರುವುದು ಇತ್ಯಾದಿ. ಆದರೆ ನಿಮಗೆ ಯಾವುದೇ ರೀತಿಯ ಮಧುಮೇಹವಿದ್ದರೂ, ನೀವು ಇನ್ನೂ ಔಷಧಿಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಶಾಶ್ವತ ಚಿಕಿತ್ಸೆ ಇಲ್ಲ. ಆದರೆ… ಕೆಳಗೆ ಸೂಚಿಸಿದಂತೆ ನೀವು ಮಾಡಿದರೆ, ನೀವು ಮಧುಮೇಹವನ್ನು ನಿಯಂತ್ರಿಸಬಹುದು, ಅದು ಟೈಪ್ 1 ಅಥವಾ 2 ಆಗಿರಲಿ. ಅಂಗೈಯನ್ನು ನಾಲ್ಕು ಬೆರಳುಗಳಿಂದ ಒಳಮುಖವಾಗಿ ಮಡಚಬೇಕು. ಆ ಬೆರಳುಗಳು ಅಂಗೈಯ ಮಧ್ಯಭಾಗವನ್ನು ಮುಟ್ಟಬೇಕು. ಸ್ಪರ್ಶಿಸಲು, ನೀವು ನಿಮ್ಮ ಬೆರಳುಗಳನ್ನು ಒಟ್ಟಿಗೆ ಒತ್ತಿ ಮತ್ತು ಅವುಗಳನ್ನು ದೃಢವಾಗಿ ಒತ್ತಬೇಕು. ಇದನ್ನು 10 ಬಾರಿ ಮಾಡಿ. ನಂತರ ಇನ್ನೊಂದು ಕೈಯಿಂದ ಅದೇ ರೀತಿ ಮಾಡಿ. ಇದನ್ನು ಎರಡೂ ಕೈಗಳಿಗೆ ಒಟ್ಟು 10+10=20 ಬಾರಿ ಮಾಡಬೇಕು. ಈ ಆಕ್ಯುಪ್ರೆಶರ್ ಚಿಕಿತ್ಸೆಯನ್ನು…
ನವದೆಹಲಿ : ದೇಶಾದ್ಯಂತ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿದ್ದು, ಕಳೆದ ಒಂದು ವಾರದಲ್ಲಿ ಸೋಂಕಿತರ ಸಂಖ್ಯೆ 1009ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 100 ದಾಟಿದ್ರೆ, ಕೇರಳದಲ್ಲಿ ಸೋಂಕಿತರ ಸಂಖ್ಯೆ 400 ರ ಗಡಿ ಮುಟ್ಟಿದೆ. ಈ ಮೂಲಕ ದೇಶಾದ್ಯಂತ ಸೋಂಕಿತರ ಸಂಖ್ಯೆ 1009ಕ್ಕೆ ಏರಿಕೆಯಾಗಿದೆ. https://twitter.com/ANI/status/1926892365467316434?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಳಗಾವಿ : ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿಯಾಗಿದ್ದು, ಗೋಡೆ ಕುಸಿದು 3 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಲಗಿದ್ದಾಗ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯನ್ನು ಕೀರ್ತಿಲಾ ನಾಗೇಶ್ ಪೂಜಾರಿ (3) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕಿ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಫಲಿತಾಂಶ ಪ್ರಕಟವಾಗದ ಅಭ್ಯರ್ಥಿಗಳಿಗೆ ತಮ್ಮ ಅರ್ಹತಾ ಪರೀಕ್ಷೆಯ ಅಂಕಗಳನ್ನು ದಾಖಲಿಸಲು KEA ತನ್ನ ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ. ಅಂಕ ದಾಖಲಿಸಿದವರಿಗೆ ಮೇ 29ರ ನಂತರ SpotRank ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. https://twitter.com/KEA_karnataka/status/1926867515415613901?ref_src=twsrc%5Etfw%7Ctwcamp%5Etweetembed%7Ctwterm%5E1926867515415613901%7Ctwgr%5E61739cb2ba5afc22d03a333f35617af5b76ff164%7Ctwcon%5Es1_c10&ref_url=https%3A%2F%2Fkannadadunia.com%2Fe0b297e0b2aee0b2a8e0b2bfe0b2b8e0b2bf-ugcet-e0b2abe0b2b2e0b2bfe0b2a4e0b2bee0b282e0b2b6-e0b2aae0b38de0b2b0e0b295e0b29fe0b2b5%2F
ರಾಯಚೂರು : ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯಪಾಲರು, ಕೃಷಿ ಸಚಿವರಿದ್ದ ಹೆಲಿಕಾ್ಪಟರ್ ತುರ್ತು ಭೂಸ್ಪರ್ಶ ಮಾಡಲಾಗಿದೆ. ರಾಯಚೂರಿನಲ್ಲಿ ಕೃಷಿ ವಿಶ್ವವಿದ್ಯಾಲಯದ 14 ನೇ ಘಟಿಕೋತ್ಸವಕ್ಕೆ ಹೋಗುವ ವೇಳೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ಬೆಂಗಳೂರಿನಿಂದ ಬರುವಾಗ ಚಿತ್ರದುರ್ಗದಲ್ಲಿ ಇಂಧನ ಹಾಕಿಸಲಾಗಿತ್ತು. ಬಳಿಕ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಜಿಂದಾಲ್ ನಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ. ಬಳ್ಳಾರಿಯ ಜಿಂದಾಲ್ ನಿಂದ ಹೆಲಿಕಾಪ್ಟರ್ ಟೇಕ್ ಅಫ್ ಗೆ ಯತ್ನ. ಒಮ್ಮೆ ಟೇಕ್ ಆಫ್ ಆಗಿ ವಿಶೇಷ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ.