Subscribe to Updates
Get the latest creative news from FooBar about art, design and business.
Author: kannadanewsnow57
ಗುವಾಹಟಿ : ಅಸ್ಸಾಂ ಸರ್ಕಾರ ಮಂಗಳವಾರ ಚಳಿಗಾಲದ ಅಧಿವೇಶನದ ಮೊದಲ ದಿನದಂದು ರಾಜ್ಯ ವಿಧಾನಸಭೆಯಲ್ಲಿ ಬಹುಪತ್ನಿತ್ವವನ್ನು ನಿಷೇಧಿಸುವ ಹೊಸ ಮಸೂದೆಯನ್ನು ಮಂಡಿಸಿದೆ. ಅಸ್ಸಾಂ ಬಹುಪತ್ನಿತ್ವ ನಿಷೇಧ ಮಸೂದೆ, 2025 ಅಪರಾಧಿಗಳಿಗೆ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ, ಚುನಾವಣೆಗಳಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸುವುದು ಮತ್ತು ಸರ್ಕಾರಿ ಯೋಜನೆಗಳ ಫಲಾನುಭವಿಗಳ ಪಟ್ಟಿಯಿಂದ ಹೆಸರುಗಳನ್ನು ಅಳಿಸುವುದನ್ನು ಸೂಚಿಸಿದೆ. ಬಹುಪತ್ನಿತ್ವ ಕಾನೂನು ಆರನೇ ವೇಳಾಪಟ್ಟಿ ಪ್ರದೇಶಗಳಿಗೆ ಮತ್ತು ಯಾವುದೇ ಪರಿಶಿಷ್ಟ ಪಂಗಡದ ಸಮುದಾಯದ ಸದಸ್ಯರಿಗೆ ಅನ್ವಯಿಸುವುದಿಲ್ಲ.ಯಾವುದೇ ವ್ಯಕ್ತಿ ಜೀವಂತ ಸಂಗಾತಿಯನ್ನು ಹೊಂದಿದ್ದರೆ ಅಥವಾ ಮದುವೆಯ ನಂತರ ಕಾನೂನಿನ ಕಾರ್ಯವಿಧಾನವನ್ನು ಅನುಸರಿಸಿ ಇತರ ಸಂಗಾತಿಯಿಂದ ಕಾನೂನುಬದ್ಧವಾಗಿ ಬೇರ್ಪಟ್ಟಿಲ್ಲದಿದ್ದರೆ ಮದುವೆಯಾಗಬಾರದು ಎಂದು ಮಸೂದೆ ಹೇಳುತ್ತದೆ. ತನ್ನ ಸಂಗಾತಿಯ ಜೀವಿತಾವಧಿಯಲ್ಲಿ ಅಥವಾ ಮಾನ್ಯ ವಿವಾಹದ ಅವಧಿಯಲ್ಲಿ ಅಥವಾ ಸಂಗಾತಿಯಿಂದ ಕಾನೂನುಬದ್ಧವಾಗಿ ವಿಚ್ಛೇದನ ಪಡೆಯದೆ, ಅಥವಾ ವಿವಾಹವನ್ನು ಅಮಾನ್ಯ ಮತ್ತು ಅನೂರ್ಜಿತ ಎಂದು ಘೋಷಿಸದೆ ಅಥವಾ ವಿವಾಹವನ್ನು ರದ್ದುಗೊಳಿಸಿದ ಒಪ್ಪಂದಗಳನ್ನು ಮಾಡಿಕೊಳ್ಳದೆ ಯಾರಾದರೂ ಮದುವೆಯಾದರೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡದೊಂದಿಗೆ…
ನೀವು WhatsApp ನಲ್ಲಿ ಈ ಕೆಲಸಗಳನ್ನು ಮಾಡಿದರೆ, ನಿಮ್ಮ ಖಾತೆಯನ್ನು ಯಾವುದೇ ಸಮಯದಲ್ಲಿ ನಿಷೇಧಿಸಬಹುದು. WhatsApp ವಿಶ್ವಾದ್ಯಂತ ಜನಪ್ರಿಯ ತ್ವರಿತ ಸಂದೇಶ ವೇದಿಕೆಯಾಗಿದೆ. ಭಾರತದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಇದನ್ನು ಪ್ರತಿದಿನ ಬಳಸುತ್ತಾರೆ. ಈ ವೇದಿಕೆಯಲ್ಲಿನ ತಪ್ಪುಗಳು ನಿಮ್ಮ ಖಾತೆಯ ಮೇಲೆ ಶಾಶ್ವತ ನಿಷೇಧಕ್ಕೆ ಕಾರಣವಾಗಬಹುದು. ನಿಮಗೆ ಎಚ್ಚರಿಕೆ ಕೂಡ ಸಿಗದಿರಬಹುದು. ನೀವು WhatsApp ನ ಅನಧಿಕೃತ ಆವೃತ್ತಿಯನ್ನು ಬಳಸುತ್ತಿದ್ದರೆ, ನಿಮ್ಮ ಖಾತೆಯನ್ನು ನಿಷೇಧಿಸಬಹುದು. GB WhatsApp, Yo WhatsApp, ಅಥವಾ WhatsApp Plus ಹೆಚ್ಚುವರಿ ವೈಶಿಷ್ಟ್ಯಗಳನ್ನು ನೀಡುವ ಆವೃತ್ತಿಗಳಾಗಿವೆ ಆದರೆ ಅವು ಅಧಿಕೃತ ಆವೃತ್ತಿಯಲ್ಲ. ಹೆಚ್ಚಿನ ಸಂಖ್ಯೆಯ ಜನರಿಗೆ ಸಂದೇಶಗಳನ್ನು ಕಳುಹಿಸುವುದರಿಂದ ಖಾತೆ ನಿಷೇಧಕ್ಕೆ ಕಾರಣವಾಗಬಹುದು, ವಿಶೇಷವಾಗಿ ಈ ಸಂದೇಶಗಳನ್ನು ನಿಮ್ಮ ಸಂಖ್ಯೆಯನ್ನು ಉಳಿಸದ ಜನರಿಗೆ ಕಳುಹಿಸಿದರೆ. ಅಲ್ಲದೆ, ಸಂದೇಶವನ್ನು ಹಲವು ಬಾರಿ ಫಾರ್ವರ್ಡ್ ಮಾಡುವುದು ಅಥವಾ ಅಪರಿಚಿತ ಜನರನ್ನು ಗುಂಪಿಗೆ ಸೇರಿಸುವುದು WhatsApp ನಿಮ್ಮನ್ನು ಸ್ಪ್ಯಾಮ್ ಎಂದು ಪರಿಗಣಿಸಲು ಮತ್ತು ನಿಮ್ಮ ಖಾತೆಯನ್ನು ನಿಷೇಧಿಸಲು ಕಾರಣವಾಗಬಹುದು. ನಿಂದನೀಯ ಸಂದೇಶಗಳನ್ನು…
ಬೆಂಗಳೂರು: ನಾಳೆ ರಾಜ್ಯ ಸರ್ಕಾರದ ಕಾರ್ಯಕ್ರಮವೊಂದನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ವಾಹನ ಸವಾರರಿಗೆ ಮಹತ್ವದ ಮಾಹಿತಿ ಎನ್ನುವಂತೆ ಸಂಚಾರ ಬದಲಾವಣೆ ಮಾಡಿರುವುದಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಅರಮನೆ ಮೈದಾನದ ಕೃಷ್ಣವಿಹಾರ ಗೇಟ್ ಹಾಗೂ ಬಳ್ಳಾರಿ ರಸ್ತೆ, ನಂ-01, ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಿನಾಂಕ 28.11.2025 ರಂದು ಬೆಳಿಗ್ಗೆ 07:00 ಗಂಟೆಯಿಂದ ಸಂಜೆ 04:00 ಗಂಟೆಯವರೆಗೆ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ. ಈ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳು, ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಕ್ಯಾಬಿನೆಟ್ ದರ್ಜೆ ಸಚಿವರು. ಇತರೆ ಗಣ್ಯವ್ಯಕ್ತಿಗಳು ಸೇರಿದಂತೆ ಅಂದಾಜು 40,000 ಸಾರ್ವಜನಿಕರು ಹಾಗೂ 959 ವಾಹನಗಳು ಬರುವ ನಿರೀಕ್ಷೆ ಇರುತ್ತದೆ ಎಂದಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳವಾದ ಅರಮನೆ ಮೈದಾನದ ಕೃಷ್ಣವಿಹಾರ ಗೇಟ್ ಸಿ ವಿ ರಾಮನ್ ರಸ್ತೆ,…
ತಂಬಾಕು ಸೇವನೆಯಿಂದಾಗಿ ಪ್ರತಿ ವರ್ಷ ಭಾರತದಲ್ಲಿ 13.5 ಲಕ್ಷ ಜನ ಸಾವನ್ನಪ್ಪುತ್ತಿದ್ದಾರೆ. ತಂಬಾಕು ಸಂಬಂಧಿತ ಕಾಯಿಲೆಗಳಿಗಾಗಿ ಭಾರತೀಯರು 1.77 ಲಕ ಕೋಟಿ ರು ಗೂ ಅಧಿಕ ಹಣವನ್ನು ಖರ್ಚು ಮಾಡುತ್ತಿದ್ದಾರೆ ಎಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರದ(ಸಿಡಿಸಿ) ವರದಿ ತಿಳಿಸಿದೆ. 10 ಭಾರತೀಯರಲ್ಲಿ ಒಬ್ಬರು ತಂಬಾಕು ಸಂಬಂಧಿತ ಕಾಯಿಲೆಗಳಿಂದ ಅಕಾಲಿಕವಾಗಿ ಸಾವನ್ನಪ್ಪುತ್ತಿದ್ದಾರೆ. ಭಾರತದಲ್ಲಿ ಧೂಮಪಾನ ತ್ಯಜಿಸುವ ಪ್ರಮಾಣ ಮಾತ್ರ ಕಡಿಮೆಯೇ ಉಳಿದಿವೆ. ಕೇವಲ ಶೇ.7ರಷ್ಟು ಧೂಮಪಾನಿಗಳು ಧೂಮಪಾನ ತ್ಯಜಿಸುತ್ತಾರೆ ಎಂದು ಅದು ತಿಳಿಸಿದೆ. ತಜ್ಞರ ಪ್ರಕಾರ, ಧೂಮಪಾನವು ಹೃದಯ ಕಾಯಿಲೆಯ ಅಪಾಯವನ್ನು 2 ರಿಂದ 3 ಪಟ್ಟು ಹೆಚ್ಚಿಸುತ್ತದೆ. ತಂಬಾಕಿನಲ್ಲಿರುವ ನಿಕೋಟಿನ್ ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತದೆ, ಇದರಿಂದಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಸಿಗುವುದಿಲ್ಲ. ಇದರ ಹೊರತಾಗಿ, ಧೂಮಪಾನವು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ ಮತ್ತು ಅಪಧಮನಿಗಳಲ್ಲಿ ಪ್ಲೇಕ್ ಸಂಗ್ರಹವಾಗಲು ಪ್ರಾರಂಭಿಸುತ್ತದೆ, ಇದು ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿದೆ. ಹೃದಯ ಕಾಯಿಲೆಗಳ ಹೊರತಾಗಿ, ಧೂಮಪಾನವು ದೇಹದ ಬಹುತೇಕ ಎಲ್ಲಾ ಭಾಗಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ತಂಬಾಕು…
ಬೆಂಗಳೂರು : ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಅಂಗವಾಗಿ ಇದೇ ಮೊದಲ ಬಾರಿಗೆ ಲಾಲ್ ಬಾಗ್ ಮಾದರಿಯಲ್ಲೇ ಕಬ್ಬನ್ ಉದ್ಯಾನದಲ್ಲಿ ನ.27ರ ಇಂದಿನಿಂದ ಡಿಸೆಂಬರ್ 7 ರವರೆಗೆ ಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಇಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಪ್ರದರ್ಶನವು ಡಿಸೆಂಬರ್ 7 ರವರೆಗೆ ನಡೆಯಲಿದೆ. ಪ್ರದರ್ಶನದಲ್ಲಿ ಹೈಡ್ರಾಂಜಿ, ಕ್ಯಾಲಲಿಲಿ, ಆರ್ಕಿಟ್ಸ್, ಟ್ಯೂಬ್ರೆಟ್ಸ್ ಬೆಗೆನಿಯಾ ಸೇರಿದಂತೆ 105ಕ್ಕೂ ವಿಶೇಷವಾದ ವಾರ್ಷಿಕ ಹೂವುಗಳ ಬಳಕೆ ಮಾಡಲಾಗಿದೆ. ಆ.7ರಿಂದ 18ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಈ ಪುಷ್ಪ ಪ್ರದರ್ಶನದಲ್ಲಿ ಬೋನ್ಸಾಯಿ ಗಿಡಗಳ ಪ್ರದರ್ಶನ, ಚಿತ್ರಕಲಾ ಪ್ರದರ್ಶನ, ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಕಾರ್ಯಕ್ರಮ, ಸೇನಾ ಶಸ್ತ್ರಾಸ್ತ್ರ ಹಾಗೂ ಉಪಕರಣಗಳ ಪ್ರದರ್ಶನ, ಇಕೆಬಾನ ಪ್ರದರ್ಶನ ಮತ್ತು ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಳ್ಳಲಿವೆ. ತೋಟಗಾರಿಕೆ ಇಲಾಖೆ ವತಿಯಿಂದ ಸುಮಾರು 25ರಿಂದ 30 ಸಾವಿರ ಹೂಕುಂಡಗಳನ್ನು ಬಳಸಿ ಪ್ರದರ್ಶನವನ್ನು ಆಕರ್ಷಣೀಯಗೊಳಿಸಲು ಯೋಜಿಸಲಾಗಿದೆ. ಟಿಕೆಟ್ ಬೆಲೆ ಎಷ್ಟು..? ಸಾಮಾನ್ಯ ದಿನಗಳಲ್ಲಿ ವಯಸ್ಕರಿಗೆ 80 ರೂ. ಹಾಗೂ…
ಕೊಪ್ಪಳ : ವಿದ್ಯುತ್ ಕಂಬ, ಟ್ರಾನ್ಸಫಾರ್ಮರ್ ಸೇರಿದಂತೆ ಇತರೆ ಯಾವುದೇ ಕೆಲಸ ಕಾರ್ಯಗಳನ್ನು ಮಾಡುವಾಗ ನಮ್ಮ ಇಲಾಖೆಯ ಅಧಿಕಾರಿಗಳು ಆಯಾ ಭಾಗದ ಜನಪ್ರತಿನಿಧಿಗಳ ಗಮನಕ್ಕೆ ತಂದು ಕೆಲಸ ಮಾಡಬೇಕು ಮತ್ತು ತಮ್ಮ ಯಾವುದೇ ಸಮಸ್ಯೆಗಳಿದ್ದರೆ ಮೇಲಾಧಿಕಾರಿಗಳ ಗಮನಕ್ಕೆ ತರಬೇಕೆಂದು ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಹೇಳಿದರು. ಅವರು ಬುಧವಾರ ಕೊಪ್ಪಳ ಜಿಲ್ಲಾ ಪಂಚಾಯತ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಸಹಯೋಗದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಇಂಧನ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಆಯಾ ಭಾಗದ ಸಮಸ್ಯೆಗಳು ತಮಗಿಂತ ಜನಪ್ರತಿನಿಧಿಗಳಿಗೆ ಚೆನ್ನಾಗಿ ಗೊತ್ತಿರುತ್ತವೆ. ಅವರ ಸಹಾಯ ಪಡೆದುಕೊಳ್ಳುವುದರ ಜೊತೆಗೆ ಅಧಿಕಾರಿಗಳು ಪಿಲ್ಡಿಗೆ ಹೋಗಿ ಕೆಲಸ ಮಾಡಬೇಕು. ಅಕ್ರಮ ಸಕ್ರಮ, ಶೀಘ್ರ ಸಂಪರ್ಕ ಯೋಜನೆ ಸಣ್ಣ ಮತ್ತು ದೊಡ್ಡ ರೈತರಿಗೆ ನೀಡುವ ಸಹಾಯ ಸೌಲಭ್ಯಗಳನ್ನು ಅವರಿಗೆ ತಿಳಿಸಬೇಕು. ಈ ಸಭೆ ಕಾಟಾಚಾರಕ್ಕೆ ಆಗದೆ ಇದರಿಂದ ಜನರಿಗೆ…
ವಿಜಯಪುರ : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 600 ಪಿಎಸ್ ಐ, 4,500 ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಶೀಘ್ರವೇ ಆರಂಭಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 4500 ಕಾನ್ಸ್ಟೇಬಲ್ ಮತ್ತು 600 ಪಿಎಸ್ಐ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಲಾಗುವುದು, ಉದ್ಯೋಗ ಆಕಾಂಕ್ಷಿಗಳ ಅನುಕೂಲಕ್ಕಾಗಿ ಎರಡು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಸುಮಾರು 15 ಸಾವಿರ ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಆರ್ಥಿಕ ಇಲಾಖೆಯಿಂದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಒಪ್ಪಿಗೆ ಸಿಕ್ಕಿದ್ದು, ಚಳಿಗಾಲದ ಅಧಿವೇಶನದ ಬಳಿಕ 600 ಪಿಎಸ್ ಐ, 4500 ಕಾನ್ಸ್ಟೇಬಲ್ ಗಳ ಹುದ್ದೆ ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ. 5 ವರ್ಷದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ತುಂಬುವ ಪ್ರಯತ್ನ ನಡೆಯುತ್ತಿದೆ.…
ದೇಶದಲ್ಲಿ ಪೋಲಿಯೋ ರೋಗವು ಮರುಕಳಿಸಬಾರದು ಎಂಬ ಮುನ್ನೆಚ್ಚರಿಕೆಯೊಂದಿಗೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳನ್ನು ಪೋಲಿಯೊ ವೈರಸ್ ವಿರುದ್ಧ ರಕ್ಷಿಸಲು ಡಿ.21 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವ ಕುರಿತು ಜಿಲ್ಲೆಯಾದ್ಯಂತ ವ್ಯಾಪಕ ಪ್ರಚಾರ ನೀಡಲು ಕ್ರಮವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಶ್ವ ಆರೋಗ್ಯ ಸಂಸ್ಥೆ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು, ಕ್ಷೇತ್ರ ಮಟ್ಟದ ಮೇಲ್ವಿಚಾರಕರಿಗೆ ಮಂಗಳವಾರ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಲು ಆರೋಗ್ಯ ಇಲಾಖೆಯ ಸಿಬ್ಬಂದಿ ಹೆಚ್ಚಿನ ರೀತಿಯಲ್ಲಿ ಪೋಷಕರಿಗೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು. 2011 ರ ಜ.13 ರಂದು ಭಾರತದಲ್ಲಿ ಪೋಲಿಯೋ ಕೊನೆಯ ಪ್ರಕರಣ ವರದಿಯಾದ ನಂತರ ಇಲ್ಲಿಯವರೆಗೆ ನಿರಂತರ…
ಬೆಂಗಳೂರು : ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ ಆದ್ಯತಾ ಪಡಿತರ ಚೀಟಿಗಳನ್ನು (PHH) ಹೊಂದಿರುವ ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಿ ನಿಯಮಾನುಸಾರ ಕ್ರಮಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (1)(2) ಮತ್ತು (3) ರಲ್ಲಿನ ಆದೇಶಗಳಲ್ಲಿ ಸಾರ್ವಜನಿಕ ವಿತರಣಾ ಪದ್ಧತಿಯಲ್ಲಿ ಆದ್ಯತೇತರ ಕುಟುಂಬಗಳನ್ನು ಗುರುತಿಸಲು ಹೊರಗಿಡುವ ಮಾನದಂಡಗಳನ್ನು (Exclusion criteria) ಹೊರಡಿಸಲಾಗಿದೆ. ಸದರಿ ಮಾನದಂಡಗಳಲ್ಲಿ ಸ್ಪಷ್ಟಿಕರಿಸಿರುವಂತೆ ಪಡಿತರ ಚೀಟಿಗಳನ್ನು ವಿತರಿಸಲಾಗುತ್ತಿದ್ದು, ಪ್ರಸ್ತುತ ಕೇಂದ್ರ ಸರ್ಕಾರವು ಎನ್ಎಫ್ಎಸ್ಎ ಮಿತಿಯನ್ನು 4,01,93,000ಕ್ಕೆ ನಿಗಧಿಪಡಿಸಿದೆ. ಆದಾಗ್ಯೂ ದಿನಾಂಕ:25.08.2025ಕ್ಕೆ ಇರುವಂತೆ ರಾಜ್ಯದಲ್ಲಿ ಒಟ್ಟು 4,54,00,838 ಪಡಿತರ ಫಲಾನುಭವಿಗಳಿದ್ದು ಕೇಂದ್ರ ಸರ್ಕಾರವು ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಫಲಾನುಭವಿಗಳಿರುತ್ತಾರೆ. ಮೇಲೆ ಓದಲಾದ ಕ್ರಮ ಸಂಖ್ಯೆ (4)ರಲ್ಲಿನ ಆರ್ಥಿಕ ಇಲಾಖೆಯ ದಿನಾಂಕ:16.09.2023 ರ ಹಿಂಬರಹದಲ್ಲಿ ಈ ಕೆಳಕಂಡಂತೆ ಅಭಿಪ್ರಾಯಿಸಲಾಗಿದೆ. “ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. ಹಣಕಾಸು ಇಲಾಖೆಯು ಅಸ್ತಿತ್ವದಲ್ಲಿರುವ 2.96 PHH ಅರ್ಜಿಗಳನ್ನು ಈ ಕೆಳಗಿನ ಷರತ್ತುಗಳಿಗೆ ಒಳಪಟ್ಟು…
ವಿಜಯನಗರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಇಂಧನ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ, ಪಂಪ್ ಸೆಟ್ ಗಳ ಅಕ್ರಮ-ಸಕ್ರಮ ಯೋಜನೆಯಡಿ 4.5 ಲಕ್ಷ ಅರ್ಜಿಗಳು ಬಾಕಿ ಇದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಕಾರದಿಂದ ಈಗಾಗಲೇ 3.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಉಳಿದವುಗಳನ್ನು ಸಕ್ರಮಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಮಧ್ಯೆ, ನವೀಕೃತ ಶೀಘ್ರ ಸಂಪರ್ಕ ಯೋಜನೆಯಡಿ ತಾವೇ ಮೂಲ ಸೌಕರ್ಯ ಕಲ್ಪಿಸಿಕೊಳ್ಳುವವರ ಸಂಪರ್ಕಗಳನ್ನು ಸಕ್ರಮಗೊಳಿಸಲಾಗುತ್ತಿದೆ,” ಎಂದರು. “ವಿದ್ಯುತ್…














