Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ನರೇಂದ್ರ ಮೋದಿ ಸರ್ಕಾರದ ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ನಿರ್ಮಿಸಲಾದ ಶೌಚಾಲಯಗಳು ಪ್ರತಿ ವರ್ಷ 60,000-70,000 ಶಿಶು ಮರಣಗಳನ್ನು ತಡೆಯಲು ಸಹಾಯ ಮಾಡಿದೆ.ಗುರುವಾರ ನಡೆದ ಅಧ್ಯಯನದಲ್ಲಿ ಈ ವಿಷಯ ಹೇಳಲಾಗಿದೆ. ಈ ಅಧ್ಯಯನವನ್ನು ಸೈಂಟಿಫಿಕ್ ರಿಪೋರ್ಟ್ಸ್ ಎಂಬ ಪತ್ರಿಕೆಯಲ್ಲಿ ಪ್ರಕಟಿಸಲಾಗಿದೆ. ಇದು ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ನಿರ್ಮಿಸಲಾದ ಶೌಚಾಲಯಗಳು ಮತ್ತು 2000 ರಿಂದ 2020 ರವರೆಗೆ ಶಿಶುಗಳು ಮತ್ತು ಐದು ವರ್ಷದೊಳಗಿನ ಮಕ್ಕಳ ಸಾವಿನ ಕಡಿತವನ್ನು ಉಲ್ಲೇಖಿಸುತ್ತದೆ. ಯುಎಸ್ನ ಇಂಟರ್ನ್ಯಾಷನಲ್ ಫುಡ್ ಪಾಲಿಸಿ ರಿಸರ್ಚ್ ಇನ್ಸ್ಟಿಟ್ಯೂಟ್ನ ಸಂಶೋಧಕರು 20 ವರ್ಷಗಳಲ್ಲಿ 35 ರಾಜ್ಯಗಳು/ಯುಟಿಗಳು ಮತ್ತು 600 ಕ್ಕೂ ಹೆಚ್ಚು ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಮಟ್ಟದಲ್ಲಿ ಡೇಟಾವನ್ನು ಅಧ್ಯಯನ ಮಾಡಿದ್ದಾರೆ ಎಂದು ಪಿಟಿಐ ವರದಿ ತಿಳಿಸಿದೆ. ಸ್ವಚ್ಛ ಭಾರತ್ ಮಿಷನ್ ಭಾರತ ಸರ್ಕಾರದ ಪ್ರಮುಖ ಉಪಕ್ರಮವಾಗಿದೆ, ಇದರ ಉದ್ದೇಶವು ದೇಶಾದ್ಯಂತ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಉತ್ತೇಜಿಸುವುದು. ಇದನ್ನು 2 ಅಕ್ಟೋಬರ್ 2014 ರಂದು ಮಹಾತ್ಮ ಗಾಂಧಿಯವರ 145 ನೇ…
ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿ ಜೊತೆಗೆ ಗೋಧಿ, ರಾಗಿ ಹಾಗೂ ಅಡುಗೆ ಎಣ್ಣೆ ಸೇರಿ ಆಹಾರ ಕಿಟ್ ವಿತರಿಸುವ ಪ್ರಸ್ತಾವನೆಯನ್ನು ಕೈಬಿಟ್ಟು ಪ್ರತಿಯೊಬ್ಬ ಸದಸ್ಯರಿಗೂ ನೀಡುತ್ತಿದ್ದ 170 ರೂ. ನೇರ ನಗದು ವರ್ಗಾವನೆ ಮುಂದುವರೆಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿಯನ್ನು ಕಾನೂನು ಸಚಿವ ಹೆಚ್.ಕೆ ಪಾಟೀಲ್ ನೀಡಿದರು. ಅನ್ನಭಾಗ್ಯ ಯೋಜನೆ ಯಥಾಸ್ಥಿತಿ ಮುಂದುವರಿಕೆ ಮಾಡಲಾಗುತ್ತಿದೆ. ಡಿಬಿಟಿ ವ್ಯವಸ್ಥೆ ಮುಂದುವರಿಕೆಗೆ ಒಪ್ಪಿಗೆ ನೀಡಲಾಗಿದೆ. ಸಂಪುಟದ ಮುಂದೆ ಮೂರು ಪ್ರಸ್ತಾವನೆ ಬಂದಿದ್ದವು. ಅದರಲ್ಲಿ ಫುಡ್ ಕಿಟ್ ನೀಡುವ ಪ್ರಸ್ತಾಪವಿತ್ತು. ಅರ್ಧ ಕೆಜಿ ತೊಗರಿ, ಎಣ್ಣೆ, ಸಕ್ಕರೆ ಕೊಡುವ ಪ್ರಸ್ತಾವನೆ ಇತ್ತು. ಆದರೆ ಅದನ್ನ ಕೈಬಿಡಲಾಗಿದೆ. ಯಥಾಸ್ಥಿತಿ 170 ರೂ ಹಣ ವಿತರಣೆ ಮುಂದುವರಿಕೆ ಮಾಡಲಾಗುತ್ತಿದೆ ಎಂದರು. ರಾಜ್ಯದ ಸಿವಿಲ್ ಸೇವೆಗಳಲ್ಲಿನ ಗ್ರೂಪ್- ಬಿ ಮತ್ತು ಗ್ರೂಪ್- ಸಿ ಹುದ್ದೆಗಳಿಗೆ ಪ್ರಸ್ತುತ ಸಾಮಾನ್ಯ ವರ್ಗಕ್ಕೆ 35 ವರ್ಷ, ಪ್ರ.ವರ್ಗ…
ಬೆಂಗಳೂರು: ಸೆಪ್ಟೆಂಬರ್.7ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶಿಸಿದೆ. ದಿನಾಂಕ: 07-09-2024ರ ಶನಿವಾರದಂದು “ಗಣೇಶ ಚತುರ್ಥಿ ಹಬ್ಬದ ” ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು ತಿಳಿಸಿದ್ದಾರೆ. ಸಹಾಯ 2.0 ಮೂಲಕ ನಾಗರೀಕರ ದೂರುಗಳಿಗೆ ತ್ವರಿತ ಸ್ಪಂದನೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯ 2.0 ತಂತ್ರಾಂಶದ ಮೂಲಕ ಬರುವ ದೂರುಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥ ಮಾಡಲಾಗುತ್ತಿದೆ. ಈ ಸಂಬಂಧ 1ನೇ ಜನವರಿ 2023 ರಿಂದ 3ನೇ ಸೆಪ್ಟೆಂಬರ್ 2024 ರವರೆಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ವಲಯವಾರು ಬಂದಿರುವ ದೂರುಗಳು(237359), ಇತ್ಯರ್ಥಪಡಿಸಲಾದ ದೂರುಗಳು(224933), ಬಾಕಿಯಿರುವ ದೂರುಗಳು(6875) ಇದ್ದು, ಈ ಪೈಕಿ 3987 ದೂರುಗಳು ಇತ್ಯರ್ಥ ಪಡಿಸುವ ಕಾರ್ಯ ಪ್ರಕ್ರಿಯೆಯಲ್ಲಿದ್ದು, 2535 ಲಾಂಗ್ ಟರ್ಮ್ ಸೆಲ್ಯೂಷನ್(LTS) ಆಗಿರುತ್ತದೆ. ಸದರಿ ಮಾಹಿಯನ್ನು ನೀಡಲಾಗಿದೆ. ಪಾಲಿಕೆಗ ಸಹಾಯವಾಣಿ…
ಬೆಂಗಳೂರು: ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗೆ ಗೌರಿ ಹಬ್ಬವಾದ (ಸೆಪ್ಟೆಂಬರ್ 6) ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ. ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ. ಹೆಬ್ಬನಹಳ್ಳಿ ವಿತರಣಾ ತೊಟ್ಟಿ 4 ರಿಂದ 32 ಕಿ. ಮೀ. ದೂರದಲ್ಲಿ ಎಸ್ಕೇಪ್ ಚಾನೆಲ್ ಮಾಡಿದ್ದು, ಅಲ್ಲಿಂದ ನಾಲೆ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಲಾಗುವುದು. ನವೆಂಬರ್ 1 ರ ವೇಳೆಗೆ ಸುಮಾರು 5 ಟಿಎಂಸಿ ನೀರನ್ನು ಮೇಲಕ್ಕೆ ಎತ್ತಲಾಗುವುದು. ಅರಣ್ಯ ಇಲಾಖೆಯಿಂದ 502 ಎಕರೆ ಜಮೀನು ಪಡೆಯಬೇಕಾಗಿದ್ದು, ಇದಕ್ಕೆ ಬದಲಿಯಾಗಿ ನಾವು 452 ಎಕರೆ ಜಮೀನು ನೀಡಿದ್ದೇವೆ. ಮುಂದಿನ 4 ತಿಂಗಳಲ್ಲಿ ಈ ಕೆಲಸ ಮುಗಿಯಲಿದ್ದು, ಆನಂತರ ತುಮಕೂರು ಭಾಗದ ಕೆಲಸವನ್ನು ತ್ವರಿತವಾಗಿ ಮುಗಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರವು 2014 ರಲ್ಲಿ…
ಕಣ್ಣುಗಳಲ್ಲಿ ಸ್ಕ್ವಿಂಟಿಂಗ್ ಗಂಭೀರ ಸಮಸ್ಯೆಯಾಗಿದೆ ಮತ್ತು ಅದರ ನಿಜವಾದ ಕಾರಣಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಸಕಾಲಿಕವಾಗಿ ಚಿಕಿತ್ಸೆ ನೀಡುವುದು ಬಹಳ ಮುಖ್ಯ. ಮಗುವಿನ ಕಣ್ಣುಗಳು: ಮಗುವಿನ ಕಣ್ಣುಗಳ ಆಕಾರದಲ್ಲಿ ಬದಲಾವಣೆ ಅಥವಾ ಕಣ್ಣುಗಳ ನೋಟವು ಯಾವುದೇ ಪೋಷಕರಿಗೆ ಬಹಳ ನೋವಿನ ಪರಿಸ್ಥಿತಿಯಾಗಿದೆ. ಕಣ್ಣು ಕುಕ್ಕುವುದು ನಿಮ್ಮ ಮಗುವಿಗೆ ಸರಿಯಾಗಿ ನೋಡಲು ತೊಂದರೆ ಇದೆ ಎಂಬುದರ ಸಂಕೇತವಾಗಿದೆ. ಕಣ್ಣುಗಳಲ್ಲಿ ಜುಮ್ಮೆನ್ನುವುದು ಗಂಭೀರ ಸಮಸ್ಯೆಯಾಗಿದ್ದು, ಅದರ ನಿಜವಾದ ಕಾರಣಗಳನ್ನು ಅರ್ಥಮಾಡಿಕೊಂಡು ಸಕಾಲದಲ್ಲಿ ಚಿಕಿತ್ಸೆ ನೀಡುವುದು ಬಹಳ ಮುಖ್ಯ. ಸಾಮಾನ್ಯವಾಗಿ, ಈ ಕಾರಣಗಳಿಂದ ಮಕ್ಕಳಲ್ಲಿ ಸ್ಕ್ವಿಂಟಿಂಗ್ ಹೆಚ್ಚಾಗುತ್ತದೆ (ಮಕ್ಕಳಲ್ಲಿ ಕಣ್ಣುಗುಡ್ಡೆಯ ಸಾಮಾನ್ಯ ಕಾರಣಗಳು)- ವಕ್ರೀಕಾರಕ ದೋಷಗಳು ಇದು ಸ್ಕ್ವಿಂಟಿಂಗ್ಗೆ ಸಾಮಾನ್ಯ ಕಾರಣವಾಗಿದೆ. ಇದು ನಿಮ್ಮ ರೆಟಿನಾದ ಮೇಲೆ ಬೆಳಕು ಹೇಗೆ ಬೀಳುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಕೆಲವು ವಿಧದ ವಕ್ರೀಕಾರಕ ದೋಷಗಳೂ ಇವೆ (ವಕ್ರೀಕಾರಕ ದೋಷಗಳ ವಿಧಗಳು ಸೇರಿವೆ). ಹಾಗೆ- ಈ ಸ್ಥಿತಿಯಲ್ಲಿ, ಮಕ್ಕಳು ದೂರದ ವಿಷಯಗಳನ್ನು ಸ್ಪಷ್ಟವಾಗಿ ನೋಡುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಮಗು ತನ್ನ ಕಣ್ಣುಗಳನ್ನು…
ಬೆಂಗಳೂರು : ರಾಜ್ಯದ ಸಿವಿಲ್ ಸೇವೆಗಳಲ್ಲಿನ ಗ್ರೂಪ್- ಬಿ ಮತ್ತು ಗ್ರೂಪ್- ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಸೀಮಿತವಾಗಿ ಮೂರು ವರ್ಷದಷ್ಟು ಹೆಚ್ಚಳ ಮಾಡಿ ವಯೋಮಿತಿ ಸಡಿಲಿಕೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿಯನ್ನು ಕಾನೂನು ಸಚಿವ ಹೆಚ್.ಕೆ ಪಾಟೀಲ್ ನೀಡಿದರು. ರಾಜ್ಯದ ಸಿವಿಲ್ ಸೇವೆಗಳಲ್ಲಿನ ಗ್ರೂಪ್- ಬಿ ಮತ್ತು ಗ್ರೂಪ್- ಸಿ ಹುದ್ದೆಗಳಿಗೆ ಪ್ರಸ್ತುತ ಸಾಮಾನ್ಯ ವರ್ಗಕ್ಕೆ 35 ವರ್ಷ, ಪ್ರ.ವರ್ಗ 2ಎ, 2ಬಿ ಗಳಿಗೆ 38 ವರ್ಷ, ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ-1ಕ್ಕೆ 40 ವರ್ಷ ಗರಿಷ್ಠ ವಯೋಮಿತಿ ಇದ್ದು, ಇದೀಗ 1 ವರ್ಷಕ್ಕೆ ಸೀಮಿತವಾಗಿ ವಯೋಮಿತಿ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಮಹದಾಯಿ ಕುಡಿಯುವ ನೀರು ಯೋಜನೆವಿಚಾರವಾಗಿ ವನ್ಯಜೀವಿ ಮಂಡಳಿ ನಡೆಯ ವಿರುದ್ಧ ದೂರು ನೀಡಲಾಗುತ್ತದೆ. ಸುಪ್ರೀಂ ಮೆಟ್ಟಿಲೇರೋಕೆ ರಾಜ್ಯದ ನಿರ್ಧಾರಿಸಿದೆ. ಸರ್ವಪಕ್ಷ…
ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಐವರಿಗೆ ನೇಮಕಾತಿ ಆದೇಶ ಪ್ರತಿ ವಿತರಿಸಿದ್ದಾರೆ. 2021 ರಲ್ಲಿ 1,242 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಪರೀಕ್ಷೆ ಆರಂಭದಿಂದಲೂ ನೇಮಕಾತಿ ಆದೇಶದವರೆಗೂ ಒಂದು ಒಂದು ಸಮಸ್ಯೆ ಎದುರಾಗಿತ್ತು. ಇಂದಿಗೂ ಮೀಸಲಾತಿ ವಿಚಾರವಾಗಿ ಪ್ರಕರಣ ಕೋರ್ಟ್ ನಲ್ಲಿದ್ದು, ಈ ಮೀಸಲಾತಿ ಹೊರತಾಗಿರುವ 1,001 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಣೆಗೆ ಚಾಲನೆ ನೀಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ. ಸರ್ಕಾರಕ್ಕೆ ಸಲ್ಲಿಸಿದ : 92 22 2023 (2), ದಿನಾಂಕ:03.11.2023 ರಲ್ಲಿ ಪ್ರಕಟಿಸಿದ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಸಹಾಯಕ ಪ್ರಾಧ್ಯಾಪಕರ ನೇಮಕಾತಿ) (ವಿಶೇಷ) ನಿಯಮಗಳು, 2020 ನಿಯಮ…
ಬೆಂಗಳೂರು :ಗೌರಿ ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಗಣಪತಿ ವಿಸರ್ಜನೆ ದಿನಗಳಾದ 3ನೇ, 5ನೇ ದಿನ ಮತ್ತು 11 ನೇ ದಿನಗಳಂದು ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಮಾಡದಂತೆ, ಮದ್ಯದಂಗಡಿ, ಬಾರ್-ರೆಸ್ಟೋರೆಂಟ್ಗಳನ್ನು ತೆರೆಯದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 ರನ್ವಯ ಪ್ರದತ್ತ ಅಧಿಕಾರ ಚಲಾಯಿಸಿ, ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಗಣಪತಿ ವಿಸರ್ಜನೆಯ ಮೂರನೇ ದಿನವಾದ ಸೆ.09 ರಂದು ಬೆಳಿಗ್ಗೆ 06 ಗಂಟೆಯಿಂದ ಸೆ.10 ರ ಬೆಳಿಗ್ಗೆ 06 ಗಂಟೆಯವರೆಗೆ ಮತ್ತು ಐದನೇ ದಿನವಾದ ಸೆ.11 ರಂದು ಬೆಳಿಗ್ಗೆ 06 ಗಂಟೆಯಿAದ ಸೆ.12 ರ ಬೆಳಿಗ್ಗೆ 06 ಗಂಟೆಯವರೆಗೆ ನಿಷೇಧಿಸಲಾಗಿದೆ. ಗಣಪತಿ ವಿಸರ್ಜನೆಯ 11ನೇ ದಿನವಾದ ಸೆ.17 ರಂದು ಬೆಳಿಗ್ಗೆ 06 ಗಂಟೆಯಿಂದ ಸೆ.18 ಬೆಳಿಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಹಾಗೂ ಮದ್ಯದಂಗಡಿ, ಬಾರ್-ರೆಸ್ಟೋರೆಂಟ್ಗಳನ್ನು ತೆರೆಯುವಂತಿಲ್ಲ. ಈ ಆದೇಶವು ಡಿಸ್ಟಲರೀಸ್ ರಾಜ್ಯ ವಿವಿಧ ಕೆಎಸ್ಪಿಬಿಸಿಎಲ್ ಡಿಪೊಗಳಿಗೆ ದಾಸ್ತಾನು ವಿಲೇವಾರಿ ಮಾಡಲು ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.
ನವದೆಹಲಿ : ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗುರುವಾರ ರಾತ್ರಿ ತಿಳಿಸಿವೆ. ಯೆಚೂರಿ ಅವರ ಆರೋಗ್ಯ ಹದಗೆಟ್ಟ ಸ್ವಲ್ಪ ಸಮಯದ ನಂತರ ಅವರನ್ನು ವೆಂಟಿಲೇಟರ್ಗೆ ದಾಖಲಿಸಲಾಯಿತು. ಶ್ವಾಸಕೋಶದ ಸೋಂಕಿನ ಚಿಕಿತ್ಸೆಗಾಗಿ ಅವರನ್ನು ಏಮ್ಸ್ ನಲ್ಲಿ ದಾಖಲಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಯೆಚೂರಿ (72) ಅವರನ್ನು ಆಗಸ್ಟ್ 19 ರಂದು ಏಮ್ಸ್ನ ತುರ್ತು ವಾರ್ಡ್ಗೆ ದಾಖಲಿಸಲಾಗಿತ್ತು. ನಂತರ ಅವರನ್ನು ತೀವ್ರ ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಯಿತು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ತಂಡವು ಅವರ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ. ನ್ಯುಮೋನಿಯಾ ತರಹದ ಸೋಂಕಿನ ಚಿಕಿತ್ಸೆಗಾಗಿ ಯೆಚೂರಿ ಅವರನ್ನು ಏಮ್ಸ್ ಗೆ ದಾಖಲಿಸಲಾಗಿತ್ತು. ಆದಾಗ್ಯೂ, ಅವರ ಕಾಯಿಲೆಯ ನಿಖರ ಸ್ವರೂಪವನ್ನು ಆಸ್ಪತ್ರೆ ಬಹಿರಂಗಪಡಿಸಿಲ್ಲ. ಅವರು ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಪ್ಲಾಸ್ಟಿಕ್ ಮನುಷ್ಯನ ಆರೋಗ್ಯಕ್ಕೆ ಹಾಗು ಪರಿಸರಕ್ಕೂ ಹಾನಿಯುಂಟ ಮಾಡುತ್ತದೆ ಎಂದು ಪ್ಲಾಸ್ಟಿಕ್ನ ಅನೇಕ ಕಡೆ ಬ್ಯಾನ್ ಮಾಡಲಾಗಿದೆ. ಇದಕ್ಕೆ ಪರ್ಯಾಯವಾಗಿ ಪೇಪರ್ ಬಂದಿದೆ. ಅಂದರೆ ಪೇಪರ್ ಕಪ್ಗಳು ಬಂದಿವೆ. ಈ ಪೇಪರ್ ಕಪ್ನಲ್ಲಿ ಟೀ ಕಾಫಿ ಸೇವನೆ ಎಷ್ಟು ಸೇಫ್? ಎಷ್ಟು ಅಪಾಯ ಅನ್ನೋದನ್ನ ತಿಳಿದುಕೊಳ್ಳೊಣ. ಹೌದು. ಸಂಶೋಧನೆಯೊಂದರ ಪ್ರಕಾರ ಪೇಪರ್ ಕಪ್ಗಳಲ್ಲಿ ಟೀ ಕಾಫಿಯಂತ ಬಿಸಿ ಪಾನೀಯಗಳ ಸೇವನೆ ಅಪಾಯಕಾರಿ ಎಂದು ಹೇಳಲಾಗುತ್ತದೆ. ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಪೇಪರ್ ಕಪ್ನಲ್ಲಿ 100ಮಿಲಿ 75,000ದರದಲ್ಲಿ ಬಿಸಿ ಟೀ ಅಥವಾ ಕಾಫಿ ಸೇವಿಸಿದರೆ ಸೂಕ್ಷ್ಮಜೀವಿಯ ಹಾನಿಕಾರಕ ಪ್ಲಾಸ್ಟಿಕ್ ಕೋಶಗಳು ದೇಹಕ್ಕೆ ಪ್ರವೇಶವಾಗುತ್ತವೆ. 100ಮಿಲಿ 80 ರಿಂದ 90 ಡಿಗ್ರಿ ಸೆಂಟಿಗ್ರೇಡ್ಗೆ ಬಿಸಿ ಮಾಡಿದರೆ 25,000 ಮೈಕ್ರಾನ್ ಪ್ಲಾಸ್ಟಿಕ್ ಕಣಗಳು ನಮ್ಮ ದೇಹದ ಇಳಗೆ ಹೋಗುತ್ತವೆ. ಅಂದರೆ ಕ್ರೋಮಿಯಂ, ಹಾಗು ಕ್ಯಾಡ್ಮಿಯಂನಂತಹ ಹಾನಿಕಾರಕ ಲೋಹಗಳು ದೇವನ್ನು ಪ್ರವೇಶಿಸುತ್ತವೆ ಎಂದು ಅರ್ಥ. ಪೇಪರ್ ಕಪ್ಗಳನ್ನು ತಯಾರಿಸುವಾಗ ಹಗುರವಾದ ಹಾಗು ಮೃದುವಾದ…