Author: kannadanewsnow57

ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳ ಜಾಬ ಕಾರ್ಡಗಳಲ್ಲಿರುವ ಎಲ್ಲಾ ಸದಸ್ಯರು ಸೆಪ್ಟೆಂಬರ್, 30ರ ಒಳಗಾಗಿ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿರುವ ಸಿಬ್ಬಂದಿಗಳು, ಬೇರ್‌ಫೂಟ್ ಟೆಕ್ನಿಷಿಯನ್ ಗಳು, ಜಿಕೆಎಂಗಳಿಗೆ ತರಬೇತಿ ನೀಡುವ ಮೂಲಕ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಮೊದಲನೇ ಹಂತದಲ್ಲಿ ಪ್ರಾಯೋಗಿಕವಾಗಿ ತುಮಕೂರು, ಕೊಪ್ಪಳ, ಕೋಲಾರ, ಹಾಸನ ಹಾಗೂ ಹಾವೇರಿ ಜಿಲ್ಲೆಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯದಿಂದ ಆಯ್ಕೆ ಮಾಡಿಕೊಳ್ಳಲಾಗಿದ್ದು, ನರೇಗಾ ಯೋಜನೆಯಡಿ ಅನುಷ್ಠಾನಗೊಳ್ಳುವ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ ಕೂಲಿಕಾರರ ಪ್ರತಿಯೊಬ್ಬರ ಏಣಿಕೆ ಮೂಲಕ ಎನ್.ಎಂ.ಎಂ.ಎಸ್ ಹಾಜರಾತಿ ಸಂಖ್ಯೆ ಆನ್ಲೈನ್ ತೆಗೆದುಕೊಳ್ಳುತ್ತಿದ್ದು ಇ-ಕೆವೈಸಿ ಹೊಂದಿರುವರು ಅವರ ಹಾಜರಾತಿ ತೆಗೆದುಕೊಳ್ಳುವಾಗ ಅವರ ಆಧಾರ್ ನಂಬರ್ ಮತ್ತು ಸ್ಥಳದಲ್ಲಿ ಹಾಜರಿದ್ದವರ ಮುಖ ಹೊಂದಾಣಿಕೆಯಾಗಿದ್ದಲ್ಲಿ ಮಾತ್ರ ಅವರ ಎನ್.ಎಂ.ಎಂ.ಎಸ್ ಪರಿಗಣಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಕೊಪ್ಪಳ ತಾಲೂಕಿನಲ್ಲಿ ಒಟ್ಟು 1,11,030 ಸಕ್ರೀಯ(Active) ಕೂಲಿಕಾರರಿದ್ದು ಇಲ್ಲಿಯವರೆಗೆ 43,849 ಕೂಲಿಕಾರರು ಇ-ಕೆವೈಸಿ ಹೊಂದಿದ್ದು, 67,181…

Read More

ನವದೆಹಲಿ : ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಯಿಂದ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್) ಗೆ ಮರಳಲು ಬಯಸುವ ತನ್ನ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಒಂದು ಬಾರಿ, ಒಂದು ಮಾರ್ಗದ ಬದಲಾವಣೆಯನ್ನು ಸುಗಮಗೊಳಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆಯಲ್ಲಿ, ಅರ್ಹ ಉದ್ಯೋಗಿಗಳು ಮತ್ತು ಎನ್‌ಪಿಎಸ್ ಅಡಿಯಲ್ಲಿ ನಿವೃತ್ತರಾದ ನೌಕರರು ಸೆಪ್ಟೆಂಬರ್ 30, 2025 ರವರೆಗೆ ಯುಪಿಎಸ್‌ನಿಂದ ಎನ್‌ಪಿಎಸ್ ಆಯ್ಕೆ ಮಾಡಬಹುದು ಎಂದು ಹೇಳಿದ್ದಾರೆ. ಈ ಸೌಲಭ್ಯವು ಒಮ್ಮೆ ಮಾತ್ರ ಲಭ್ಯವಿರುತ್ತದೆ ಮತ್ತು ಇದರ ನಂತರ ಮತ್ತೆ ಯುಪಿಎಸ್‌ಗೆ ಮರಳಲು ಸಾಧ್ಯವಾಗುವುದಿಲ್ಲ. ಸೆಪ್ಟೆಂಬರ್ 30 ರ ನಂತರ ಎನ್‌ಪಿಎಸ್‌ನಲ್ಲಿ ಉಳಿಯುವ ಉದ್ಯೋಗಿಗಳು ಯುಪಿಎಸ್ ಆಯ್ಕೆಯನ್ನು ಆರಿಸಿಕೊಳ್ಳಲಾಗುವುದಿಲ್ಲ ಎಂದು ಸಚಿವಾಲಯ ಹೇಳಿದೆ. ಯುಪಿಎಸ್ ಮತ್ತು ಎನ್‌ಪಿಎಸ್ ನಡುವೆ ಬದಲಾಯಿಸಲು ಸಚಿವಾಲಯವು ಕೆಲವು ಷರತ್ತುಗಳನ್ನು ವಿಧಿಸಿದೆ. ಯಾವ ಉದ್ಯೋಗಿಗಳಿಗೆ ಪ್ರಯೋಜನ ಸಿಗುವುದಿಲ್ಲ? ಇವು ಷರತ್ತುಗಳು – ಅರ್ಹ ಉದ್ಯೋಗಿಗಳು ಒಮ್ಮೆ ಮಾತ್ರ ಎನ್‌ಪಿಎಸ್‌ಗೆ ಬದಲಾಯಿಸಬಹುದು ಮತ್ತು ಯುಪಿಎಸ್‌ಗೆ ಹಿಂತಿರುಗಲು ಸಾಧ್ಯವಿಲ್ಲ. ಉದ್ಯೋಗಿ ನಿವೃತ್ತಿಗೆ…

Read More

ನವದೆಹಲಿ : ಡಿಜಿಟಲ್ ಪಾವತಿ ವೇದಿಕೆ ಫೋನ್‌ಪೇ ಶುಕ್ರವಾರ ಭಾರತೀಯ ರಿಸರ್ವ್ ಬ್ಯಾಂಕ್‌’ನಿಂದ (RBI) ಆನ್‌ಲೈನ್ ಪಾವತಿ ಸಂಗ್ರಾಹಕವಾಗಿ ಕಾರ್ಯನಿರ್ವಹಿಸಲು ಅಂತಿಮ ಅಧಿಕಾರವನ್ನ ಪಡೆದಿದೆ ಎಂದು ಘೋಷಿಸಿದೆ. ಆರ್‌ಬಿಐ ಅನುಮೋದನೆಯ ಕುರಿತು ಮಾತನಾಡಿದ ಸಿಬಿಒ ಮರ್ಚೆಂಟ್ ಬಿಸಿನೆಸ್‌’ನ ಯುವರಾಜ್ ಸಿಂಗ್ ಶೇಖಾವತ್, “ಈ ಅಧಿಕಾರದೊಂದಿಗೆ, ಫೋನ್‌ಪೇ ಹಿಂದೆ ಸೇವೆ ಸಲ್ಲಿಸದ ವ್ಯವಹಾರಗಳಿಗೆ, ವಿಶೇಷವಾಗಿ ಎಸ್‌ಎಂಇ ವಿಭಾಗದಲ್ಲಿ ಪ್ರವೇಶಿಸಬಹುದಾದ ಪಾವತಿ ಪರಿಹಾರಗಳನ್ನು ಒದಗಿಸುವ ಮೂಲಕ ಆರ್ಥಿಕ ಸೇರ್ಪಡೆಯನ್ನು ವೇಗಗೊಳಿಸಲು ಉತ್ತಮ ಸ್ಥಾನದಲ್ಲಿದೆ” ಎಂದು ಹೇಳಿದರು. ವಿಶ್ವಾಸಾರ್ಹ ಮತ್ತು ಸುರಕ್ಷಿತ ಪಾವತಿ ಪ್ರಕ್ರಿಯೆ ಪರಿಹಾರಗಳನ್ನು ಬಯಸುವ ಉದ್ಯಮಗಳ ವಿಶಾಲ ವರ್ಣಪಟಲಕ್ಕೆ ಸೇವೆ ಸಲ್ಲಿಸಲು ಈ ಅಭಿವೃದ್ಧಿಯು ಸ್ಥಾನ ನೀಡುತ್ತದೆ ಎಂದು ಕಂಪನಿ ಹೇಳಿದೆ. “ಸ್ಥಾಪಿತ ಉದ್ಯಮಗಳು ಮತ್ತು ಉದಯೋನ್ಮುಖ ವ್ಯವಹಾರಗಳೆರಡಕ್ಕೂ ಸೇವೆ ಸಲ್ಲಿಸುವ ಕಂಪನಿಯ ಗಮನವು ವಿಶಾಲವಾದ ಡಿಜಿಟಲ್ ಹಣಕಾಸು ಸೇರ್ಪಡೆಯನ್ನು ಸಕ್ರಿಯಗೊಳಿಸುವ ಗುರಿಯೊಂದಿಗೆ ಹೊಂದಿಕೆಯಾಗುತ್ತದೆ” ಎಂದು ಶೇಖಾವತ್ ಹೇಳಿದರು. ಅಂದ್ಹಾಗೆ, PhonePeಯ ಪ್ರಮುಖ ಉತ್ಪನ್ನವಾದ PhonePe ಡಿಜಿಟಲ್ ಪಾವತಿ ಅಪ್ಲಿಕೇಶನ್ ಆಗಸ್ಟ್ 2016…

Read More

ಇಂದಿನ ಡಿಜಿಟಲ್ ಭಾರತದಲ್ಲಿ, ಆಧಾರ್ ಕಾರ್ಡ್ ಕೇವಲ ಐಡಿ ಪ್ರೂಫ್ ಅಲ್ಲ, ಬದಲಾಗಿ ಪ್ರತಿಯೊಬ್ಬ ನಾಗರಿಕನ ಡಿಜಿಟಲ್ ಗುರುತಿನ ಬೆನ್ನೆಲುಬಾಗಿ ಮಾರ್ಪಟ್ಟಿದೆ. ಸರ್ಕಾರಿ ಯೋಜನೆಗಳನ್ನು ಪಡೆಯಲು, ಬ್ಯಾಂಕ್ ಖಾತೆ ತೆರೆಯಲು ಅಥವಾ ಶಾಲೆಯಲ್ಲಿ ಮಗುವಿನ ಪ್ರವೇಶಕ್ಕಾಗಿ – ಆಧಾರ್ ಎಲ್ಲೆಡೆ ಕಡ್ಡಾಯವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಆಧಾರ್ನಲ್ಲಿ ಹೆಸರು, ವಿಳಾಸ ಅಥವಾ ಜನ್ಮ ದಿನಾಂಕದಂತಹ ಯಾವುದೇ ಮಾಹಿತಿಯು ತಪ್ಪಾಗಿದ್ದರೆ ಅಥವಾ ತುಂಬಾ ಹಳೆಯದಾಗಿದ್ದರೆ, ಅದನ್ನು ನವೀಕರಿಸುವುದು ಬಹಳ ಮುಖ್ಯವಾಗುತ್ತದೆ. ಈಗ ಒಳ್ಳೆಯ ಸುದ್ದಿ ಏನೆಂದರೆ ಯುಐಡಿಎಐ (ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ) ಮತ್ತೊಮ್ಮೆ ಆಧಾರ್ ನವೀಕರಿಸುವ ಉಚಿತ ಸೌಲಭ್ಯವನ್ನು ವಿಸ್ತರಿಸಿದೆ – ಮತ್ತು ಈ ಬಾರಿ ಅವಕಾಶ ಜೂನ್ 14, 2026 ರವರೆಗೆ ಇದೆ… ಆಧಾರ್ ನವೀಕರಿಸುವುದು ಏಕೆ ಅಗತ್ಯ? ನಿಮ್ಮ ಆಧಾರ್ ಕಾರ್ಡ್ 10 ವರ್ಷಕ್ಕಿಂತ ಹಳೆಯದಾಗಿದ್ದರೆ ಮತ್ತು ನೀವು ಅದರಲ್ಲಿ ಯಾವುದೇ ಬದಲಾವಣೆಗಳನ್ನು ಮಾಡದಿದ್ದರೆ, ಅದನ್ನು ಮರುಪರಿಶೀಲಿಸಲು ಮತ್ತು ಅಗತ್ಯ ನವೀಕರಣಗಳನ್ನು ಮಾಡಲು ಇದು ಸಮಯ. ಕಾಲಕಾಲಕ್ಕೆ, ಯಾವುದೇ…

Read More

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಸೆ.23ರವರೆಗೆ ವ್ಯಾವಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ನಾಳೆಯಿಂದ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಮಳೆಯಾಗಲಿದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ 22 ಮತ್ತು 23 ರಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Read More

ನವದೆಹಲಿ: ನವರಾತ್ರಿ ಹಬ್ಬಕ್ಕೂ ಮುನ್ನ ಆಭರಣ ಪ್ರಿಯರಿಗೆ ಶಾಕ್ ಎದುರಾಗಿದ್ದು, ಚಿನ್ನದ ಬೆಲೆ 800 ರೂ.ಏರಿಕೆಯಾಗಿದೆ.ಈ ಮೂಲಕ 1.14 ಲಕ್ಷ ರೂ.ಗೆ ತಲುಪಿದೆ. ಶುಕ್ರವಾರ ರಾಷ್ಟ್ರ ರಾಜಧಾನಿಯ ಬುಲಿಯನ್ ಮಾರುಕಟ್ಟೆಯಲ್ಲಿ 10 ಗ್ರಾಂಗೆ ಚಿನ್ನದ ಬೆಲೆ 800 ರೂ. ಏರಿಕೆಯಾಗಿ 1,14,000 ರೂ.ಗೆ ತಲುಪಿದೆ. ಜಾಗತಿಕ ಉದ್ವಿಗ್ನತೆ ಮತ್ತು ಯುಎಸ್-ಚೀನಾ ವ್ಯಾಪಾರ ಉದ್ವಿಗ್ನತೆಗಳ ನಡುವೆ ಬಲವಾದ ಜಾಗತಿಕ ಸೂಚನೆಗಳು ಈ ಏರಿಕೆಗೆ ಕಾರಣವಾಗಿವೆ. ಬೆಳ್ಳಿ ಬೆಲೆಯೂ ಸಹ 500 ರೂ.ಗಳಷ್ಟು ಏರಿಕೆಯಾಗಿ ಪ್ರತಿ ಕೆಜಿಗೆ 1,32,000 ರೂ.ಗಳಿಗೆ ತಲುಪಿದೆ (ಎಲ್ಲಾ ತೆರಿಗೆಗಳು ಸೇರಿದಂತೆ). ಅಖಿಲ ಭಾರತ ಸರಾಫಾ ಸಂಘದ ಪ್ರಕಾರ, 99.9 ಪ್ರತಿಶತ ಶುದ್ಧತೆಯ ಚಿನ್ನ ಗುರುವಾರ 10 ಗ್ರಾಂಗೆ 1,13,200 ರೂ.ಗಳಿಗೆ ಮುಕ್ತಾಯಗೊಂಡಿದೆ. ಸ್ಥಳೀಯ ಬುಲಿಯನ್ ಮಾರುಕಟ್ಟೆಯಲ್ಲಿ, 99.5 ಪ್ರತಿಶತ ಶುದ್ಧತೆಯ ಚಿನ್ನವು 10 ಗ್ರಾಂಗೆ 700 ರೂ.ಗಳಷ್ಟು ಏರಿಕೆಯಾಗಿ 1,13,500 ರೂ.ಗಳಿಗೆ ತಲುಪಿದೆ (ಎಲ್ಲಾ ತೆರಿಗೆಗಳು ಸೇರಿದಂತೆ). ಹಿಂದಿನ ವಹಿವಾಟಿನ ಅವಧಿಯಲ್ಲಿ ಇದು 10 ಗ್ರಾಂಗೆ 1,12,800 ರೂ.ಗಳಿಗೆ…

Read More

ಬೆಂಗಳೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಗೃಹ ಇಲಾಖೆಯಲ್ಲಿ ಖಾಲಿ ಇರುವ 15,000 ಪೇದೆ ಹುದ್ದೆಗಳ ನೇಮಕಾತಿಗಾಗಿ ವೇಳಾಪಟ್ಟಿ ಮಾಡಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,. 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪೂರ್ಣಗೊಂಡಿದೆ. 402 ಪಿಎಸ್‌ಐ ಹುದ್ದೆಗಳಲ್ಲಿ ಈಗಾಗಲೇ 398 ಹುದ್ದೆಗಳಿಗೆ ಆದೇಶ ಹೊರಡಿಸಲಾಗಿದ್ದು, ಗೃಹ ಇಲಾಖೆಯಲ್ಲಿ ಖಾಲಿ ಇರುವ 15,000 ಪೇದೆ ಹುದ್ದೆಗಳ ನೇಮಕಾತಿಗಾಗಿ ವೇಳಾಪಟ್ಟಿ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಡ್ರಗ್ಸ್ ಹಾವಳಿ ಬಗ್ಗೆ ಚರ್ಚೆ ಮಾಡಲಾಗಿದ್ದು, ನಿಯಂತ್ರಣಕ್ಕೆ ಸೂಚಿಸಲಾಗಿದೆ. ಡ್ರಗ್ ಪೆಡ್ಲ‌ರ್ ಜತೆ ನಂಟು ಸಂಬಂಧ 11 ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇಲಾಖಾ ವಿಚಾರಣೆ ಮಾಡಿ ಬಳಿಕ ವಜಾ ಮಾಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

Read More

ಬೆಂಗಳೂರು : ರಾಜ್ಯದ ಜನತೆಗೆ ಸಿಹಿ ಸುದ್ದಿಯೊಂದು ಇದ್ದು, ಕೆಎಂಎಫ್ ಗ್ರಾಹಕರಿಗೆ GST ಪರಿಷ್ಕರಣೆಯಾದ ಬೆನ್ನಲ್ಲೇ ಸೋಮವಾರದಿಂದಲೇ ನಂದಿನಿಯ ಕೆಲ ಉತ್ಪನ್ನಗಳ ದರ ಇಳಿಕೆಯಾಗಲಿದೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಕೇಂದ್ರ ಸರ್ಕಾರ GST ತೆರಿಗೆಯಲ್ಲಿ ಶೇ. 5 ರಷ್ಟು ಇಳಿಕೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ನಂದಿನಿ ಹಾಲಿನ ಕೆಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ. ತುಪ್ಪ, ಬೆಣ್ಣೆ, ಮೊಸರು ಸೇರಿ ನಂದಿನಿ ಉತ್ಪನ್ನಗಳ ಮೇಲಿನ ಜಿಎಸ್‌ಟಿ ದರದಲ್ಲಿ ಗಣನೀಯ ಇಳಿಕೆ ಮಾಡಿರುವುದರಿಂದ ಸೋಮವಾರದಿಂದ ಮಾರಾಟ ಬೆಲೆಯೂ ಇಳಿಕೆ ಆಗಲಿದೆ. ಆದರೆ, ಹಾಲಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಎಂಎಫ್ ತಿಳಿಸಿದೆ. ಜಿಎಸ್‌ಟಿ ತೆರಿಗೆ ತಗ್ಗಿರುವುದರಿಂದ ಉತ್ಪಾದನಾ ವೆಚ್ಚದ ಜತೆ ಮತ್ತೊಮ್ಮೆ ಪರಾಮರ್ಶಿಸಿ ಹೊಸ ದರ ಪ್ರಕಟಿಸಲು ಕೆಎಂಎಫ್ ಸಿದ್ಧತೆ ನಡೆಸಿದೆ. ನಂದಿನಿ ಉತ್ಪನ್ನಗಳಾದ ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು 12% ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು 5%ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ  ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ದಾಳಿ ನಡೆಸಲಾಗಿದೆ. ಭಾರತಿನಗರ, ಹಲಸೂರು, ಶಿವಾಜಿನಗರ, ಹೆಣ್ಣೂರು, ಬಾಣಸವಾಡಿ, ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ಡಿಸಿಪಿ ದೇವರಾಜ್ ನಿರ್ದೇಶನದಲ್ಲಿ ದಾಳಿ ನಡೆಸಲಾಗಿದೆ. ಹಲಸೂರು ರೌಡಿಶೀಟರ್ ಅಪೋಯ್, ಪ್ರಭು ಪೊಲೀಸರು ವಶಕ್ಕೆ ಪಡೆದಿದ್ದು, ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತರಿಗೆ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ- 2025 ರಲ್ಲಿ ಭಾಗವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ 2,000 ರೂ. ಗೌರವ ಧನವನ್ನು ಬುಧವಾರ ಘೋಷಣೆ ಮಾಡಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ 2 20:22-09-2025 ರಿಂದ 07-10-20250 ವರೆಗೆ ಕೈಗೊಳ್ಳಲಾಗುವ ಸಮೀಕ್ಷೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯದಲ್ಲಿ ಭಾಗವಹಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಂಬಂಧಿಸಿದ ಆಶಾ ಕಾರ್ಯಕರ್ತೆಯರಿಗೆ ನಿರ್ದೇಶನ ನೀಡಲು ಸರ್ಕಾರದ ಅನುಮೋದನೆ ನೀಡಿ ಆದೇಶಿಸಿದೆ. ಮುಂದುವರೆದು, ಆರೋಗ್ಯ ಇಲಾಖೆಯಿಂದ ನಿಯೋಜಿಸಲಾದ ಆಶಾ ಕಾರ್ಯಕರ್ತೆಯರು ಶೇ.90% ರಷ್ಟು ಮನೆಗಳಿಗೆ ಭೇಟಿ ನೀಡಿ ಜಾಗೃತಿ ಅಭಿಯಾನ ಆ್ಯಪ್ ಮೂಲಕ ಯು.ಹೆಚ್.ಐ.ಡಿ. ನಂಬರ್ ಹಾಗೂ ಮೊಬೈಲ್ ದೂರವಾಣಿ ಸಂಖ್ಯೆಗಳನ್ನು ಸಂಗ್ರಹಿಸುವ…

Read More