Author: kannadanewsnow57

ಬೆಂಗಳೂರು : ಮನದ ಕಡಲು ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಸಾವನ್ನಪ್ಪಿದ್ದು, ಸಿನಿಮಾದ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯ ವಿ.ಆರ್.ಎಲ್ ಗೋಡೌನ್​ನಲ್ಲಿ ಈ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಕೊರಟಗೆರೆಯ ಶಿವರಾಜ್(30) ಮೃತಪಟ್ಟಿದ್ದು, ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳದೇ ನಿರ್ಲಕ್ಷ್ಯದ ವಹಿಸಿದ ಹಿನ್ನೆಲೆಯಲ್ಲಿ ಮನದ ಕಡಲು ಚಿತ್ರದ ನಿರ್ದೇಶಕ ಯೋಗರಾಜ್ ಭಟ್, ನಿರ್ಮಾಪಕ ಅಡಕಮಾರನಹಳ್ಳಿಯ ಈ.ಕೆ. ಕೃಷ್ಣಪ್ಪ, ಮಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್ ವಿರುದ್ಧ ದೂರು ದಾಖಲಾಗಿದೆ. ಮಂಗಳವಾರ ಸಂಜೆ 30 ಅಡಿ ಎತ್ತರದ ಅಲ್ಯುಮಿನಿಯಂ ರೊಸ್ಟ್ರಮ್ ಮೇಲೆ ಹತ್ತಿ ಲೈಟ್ ಬಿಚ್ಚುತ್ತಿದ್ದಾಗ ಆಯಾತಪ್ಪಿ ಲೈಟ್ ಮ್ಯಾನ್ ಮೋಹನ್ ಕುಮಾರ್ ಕೆಳಗೆ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮೋಹನ್ ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಟಿಪ್ಪರ್ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಪಟ್ಟಣದಲ್ಲಿ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಹೋಟೆಲ್ ಗೆ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಹೋಟೆಲ್ ಕ್ಯಾಶಿಯರ್ ಶಿವಾನಂದ ಹಾಗೂ ಅಡುಗೆ ಬಟ್ಟ ಶಾಂತಕುಮಾರ್ ಎಂದು ಗುರುತಿಸಲಾಗಿದೆ. ಇನ್ನು ಅಪಗಾತದಲ್ಲಿ ಗಾಯಗೊಂಡಿರುವ ಶ್ರೀನಿವಾಸ್ ಬಾಬು ಎಂಬುವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಂತಾಮಣಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ನವದೆಹಲಿ : ಎಎನ್‌ಐನ ವಿಕಿಪೀಡಿಯಾ ಪುಟದಲ್ಲಿ ಸಂಪಾದನೆ ಮಾಡಿದವರ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸುವಂತೆ ನಿರ್ದೇಶಿಸಿದ ನ್ಯಾಯಾಲಯದ ಆದೇಶವನ್ನು ಪಾಲಿಸದ ಕಾರಣಕ್ಕಾಗಿ ದೆಹಲಿ ಹೈಕೋರ್ಟ್ ಗುರುವಾರ ವಿಕಿಪೀಡಿಯಾಕ್ಕೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸುದ್ದಿ ಸಂಸ್ಥೆ ಎಎನ್‌ಐ ಮೀಡಿಯಾ ಪ್ರೈವೇಟ್ ಲಿಮಿಟೆಡ್ ವಿಕಿಪೀಡಿಯಾ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಮಾನಹಾನಿಕರ ವಿವರಣೆಯ ಮೇಲೆ ಮೊಕದ್ದಮೆ ಹೂಡಿದೆ. ಪ್ಲಾಟ್‌ಫಾರ್ಮ್‌ನಲ್ಲಿರುವ ಸುದ್ದಿ ಸಂಸ್ಥೆಯ ಪುಟದಲ್ಲಿ ಮಾನಹಾನಿಕರವಾದ ವಿಷಯವನ್ನು ಪ್ರಕಟಿಸುವುದರಿಂದ ವಿಕಿಪೀಡಿಯಾವನ್ನು ನಿರ್ಬಂಧಿಸಲು ANI ಪ್ರಯತ್ನಿಸಿದೆ. ಏಜೆನ್ಸಿಯು ವಿಷಯವನ್ನು ತೆಗೆದುಹಾಕುವಂತೆಯೂ ಕೋರಿದೆ. ಅಲ್ಲದೆ, ಎಎನ್‌ಐ ವಿಕಿಪೀಡಿಯಾದಿಂದ 2 ಕೋಟಿ ರೂಪಾಯಿ ನಷ್ಟವನ್ನು ಕೋರಿದೆ.

Read More

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ರಾಜ್ಯ ಸರ್ಕಾರವು ಒಂದು ತಿಂಗಳ ಗೌರವಧನವನ್ನು ಬಿಡುಗಡೆ ಮಾಡಿದೆ. ಈ ಮೂಲಕ ಕಳೆದ ಎರಡು ತಿಂಗಳಿನಿಂದ ಸಂಬಳ ಇಲ್ಲದೇ ಪರದಾಟ ನಡೆಸಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಕಳೆದ 3-4 ತಿಂಗಳಿನಿಂದ ಸಂಬಳ ಬಾರದೇ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪರದಾಟ ನಡೆಸಿದ್ದರು. ಕಳೆದ ಮೂರು ತಿಂಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರಿಗೆ ಗೌರವಧನ ನೀಡುತ್ತಿಲ್ಲ ಎಂದು ಅಂಗನವಾಡಿ ಸಿಬ್ಬಂದಿ ತಮ್ಮ ಅಳಲು ತೋಡಿಕೊಂಡಿದ್ದರು. ಇದೀಗ ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಒಂದು ತಿಂಗಳ ಗೌರವಧನ ಬಿಡುಗಡೆ ಮಾಡಿದ್ದು, ಉಳಿದ 2 ತಿಂಗಳ ಗೌರವಧನವನ್ನು ಶೀಘ್ರವೆ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದೆ.

Read More

ಅಧಿಕ ಕೊಲೆಸ್ಟ್ರಾಲ್ ಅನ್ನು ಸಾಮಾನ್ಯವಾಗಿ “ಮೂಕ ಕೊಲೆಗಾರ” ಎಂದು ಕರೆಯಲಾಗುತ್ತದೆ ಏಕೆಂದರೆ ಇದು ಸಾಮಾನ್ಯವಾಗಿ ರೋಗಲಕ್ಷಣಗಳನ್ನು ಉಂಟುಮಾಡುವುದಿಲ್ಲ, ಆದರೆ ಇದು ಹೃದಯ ಕಾಯಿಲೆ ಮತ್ತು ಪಾರ್ಶ್ವವಾಯುಗಳಂತಹ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ನಮ್ಮ ದೇಹದಲ್ಲಿನ ಜೀವಕೋಶಗಳ ಉತ್ಪಾದನೆಗೆ ಕೊಲೆಸ್ಟ್ರಾಲ್ ಅತ್ಯಗತ್ಯ, ಆದರೆ ಅದರ ಅತಿಯಾದ ಪ್ರಮಾಣವು ರಕ್ತದಲ್ಲಿ ಕೊಬ್ಬಿನ ಶೇಖರಣೆಗೆ ಕಾರಣವಾಗಬಹುದು, ಇದು ಅಪಧಮನಿಗಳನ್ನು ಕಿರಿದಾಗಿಸುತ್ತದೆ. ಇದು ರಕ್ತದ ಹರಿವನ್ನು ಅಡ್ಡಿಪಡಿಸಬಹುದು. ಆದಾಗ್ಯೂ, ಅಧಿಕ ಕೊಲೆಸ್ಟ್ರಾಲ್ನ ಕೆಲವು ಚಿಹ್ನೆಗಳು ನಮ್ಮ ದೇಹದ ವಿವಿಧ ಭಾಗಗಳಲ್ಲಿ, ವಿಶೇಷವಾಗಿ ಕೈಗಳು ಮತ್ತು ಪಾದಗಳಲ್ಲಿ ಕಂಡುಬರುತ್ತವೆ. ಈ ಚಿಹ್ನೆಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಗುರುತಿಸುವುದು ಮತ್ತು ಸಮಯಕ್ಕೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ, ಇದರಿಂದ ಇದು ಗಂಭೀರ ಕಾಯಿಲೆಗಳಾಗಿ ಬದಲಾಗುವುದನ್ನು ತಡೆಯಬಹುದು. ಈ ಲೇಖನದಲ್ಲಿ, ಕೈ ಮತ್ತು ಕಾಲುಗಳ ಮೇಲೆ ಕಂಡುಬರುವ ಪ್ರಮುಖ ರೋಗಲಕ್ಷಣಗಳ ಬಗ್ಗೆ ಮತ್ತು ಅವುಗಳು ಅಧಿಕ ಕೊಲೆಸ್ಟ್ರಾಲ್ನ ಚಿಹ್ನೆಯಾಗಿರಬಹುದು. ಕೊಲೆಸ್ಟ್ರಾಲ್ ಎಂದರೇನು? ಕೊಲೆಸ್ಟ್ರಾಲ್ ರಕ್ತದಲ್ಲಿ ಕಂಡುಬರುವ ಕೊಬ್ಬಿನ ವಸ್ತುವಾಗಿದೆ. ಇದು ದೇಹದ ಜೀವಕೋಶಗಳನ್ನು…

Read More

ಕುಬೇರನ ಕೃಪೆಯಿಂದ ನಾಳೆ ಈ ಸಮಯದಲ್ಲಿ ಈ ಸಮಯದಲ್ಲಿ ಕುಬೇರನನ್ನು ಪೂಜಿಸುವವರಿಗೆ ಎಲ್ಲಾ ಹಣಕಾಸಿನ ಸಮಸ್ಯೆಗಳು ದೂರವಾಗುತ್ತವೆ ಮತ್ತು ಸಾಲದ ಸಮಸ್ಯೆಗಳು ಸಂಪೂರ್ಣವಾಗಿ ದೂರವಾಗುತ್ತವೆ. ನಗದು ಬಿಕ್ಕಟ್ಟು ಪರಿಹರಿಸಲು ಕುಬೇರ ದೀಪ ಕುಬೇರನು ಸಂಪತ್ತಿನ ಅಧಿಪತಿ. ಕಾರಣ ಅವರಿಗೆ ಸಂಘ ನೀತಿ ಮತ್ತು ಪದುಮ ನೀತಿ ಇದೆ. ಮತ್ತು ಅವನು ಶಿವನಿಂದ ಪಡೆದ ವರದಿಂದಲೇ ಅವನು ಸಂಪತ್ತಿನ ಅಧಿಪತಿ. ಆತನ ಕೃಪೆಯನ್ನು ಪರಿಪೂರ್ಣವಾಗಿ ಪಡೆದವರ ಜೀವನದಲ್ಲಿ ಎಂದೂ ಹಣದ ಕೊರತೆ ಇರುವುದಿಲ್ಲ. ಅಂತಹ ವಿಶೇಷ ದೇವತೆಯಾಗಬಲ್ಲವನು ಭಗವಂತ ಕುಬೇರ. ಅಂತಹ ಭಗವಂತ ಕುಬೇರನ ಕೃಪೆಗೆ ಪಾತ್ರರಾಗಲು ಮತ್ತು ಆರ್ಥಿಕ ಮುಗ್ಗಟ್ಟಿನ ಪರಿಹಾರಕ್ಕೆ ಹಚ್ಚಬೇಕಾದ ದೀಪದ ಬಗ್ಗೆ ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ…

Read More

ಬೆಂಗಳೂರು : ಶಿಕ್ಷಕರ ದಿನಾಚರಣೆಯ ಪ್ರಯುಕ್ತ ತಮಗೆ ಅಕ್ಷರಾಭ್ಯಾಸ ಮಾಡಿಸಿ ರಾಜಪ್ಪ ಮೇಷ್ಟ್ರು ನೆನೆದು ಸಿಎಂ ಸಿದ್ದರಾಮಯ್ಯ ನಾಡಿನ ಸಮಸ್ತ ಶಿಕ್ಷಕ ಬಂಧುಗಳಿಗೆ ಶಿಕ್ಷಕರ ದಿನಾಚರಣೆಯ ಶುಭ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ವಿದ್ಯಾರ್ಥಿಗಳನ್ನು ಕೇವಲ ಶಿಕ್ಷಿತನಾಗಿಸದೆ, ಜ್ಞಾನಿಯಾಗಿಸುವ ಕೆಲಸ ಮಾಡುತ್ತಾ, ಶಾಲೆಗಳನ್ನು ಜೀವನಪಾಠ ಶಾಲೆಗಳಾಗಿ ರೂಪಿಸುವವನೇ ಆದರ್ಶ ಶಿಕ್ಷಕ.ಎಲ್ಲ ಶಿಕ್ಷಕರು ಇಂತಹ ಆದರ್ಶ ಮೈಗೂಡಿಸಿಕೊಳ್ಳಲಿ, ಎಲ್ಲ ಮಕ್ಕಳಿಗೆ ಇಂತಹ ಆದರ್ಶ ಶಿಕ್ಷಕರು ಸಿಗಲಿ ಎಂದು ಹಾರೈಸಿದ್ದಾರೆ. https://twitter.com/siddaramaiah/status/1831554848233341046?ref_src=twsrc%5Egoogle%7Ctwcamp%5Eserp%7Ctwgr%5Etweet ಬಾಲ್ಯದಲ್ಲಿ ಬೆರಳು ಹಿಡಿದು ಅಕ್ಷರಾಭ್ಯಾಸ ಮಾಡಿಸಿದ ರಾಜಪ್ಪ ಮೇಸ್ಟ್ರು, ಹೋರಾಟದ ಚಿಂತನೆಗಳಿಗೆ ದಾರಿ ತೋರಿದ ಪ್ರೊ. ನಂಜುಂಡಸ್ವಾಮಿಯವರು, ಸೈದ್ಧಾಂತಿಕ ಬದ್ಧತೆಗೆ ಬಲತುಂಬಿದ ಬುದ್ಧ, ಬಸವಣ್ಣ, ಮಹಾತ್ಮ ಗಾಂಧಿ, ಬಾಬಾ ಸಾಹೇಬರು, ಕನಕದಾಸರು, ನಾರಾಯಣ ಗುರುಗಳು ಹೀಗೆ ಮಾರ್ಗದರ್ಶನ ನೀಡಿದ ಎಲ್ಲಾ ಗುರುಗಳನ್ನು ಈ ದಿನ ಅತ್ಯಂತ ಗೌರವದಿಂದ ನೆನೆದು, ನಮಿಸುತ್ತೇನೆ. ನಾಡಿನ ಸಮಸ್ತ ಶಿಕ್ಷಕ ಬಂಧುಗಳಿಗೆ ಶಿಕ್ಷಕರ ದಿನದ ಶುಭಾಶಯಗಳು ಎಂದು ತಿಳಿಸಿದ್ದಾರೆ.

Read More

ಶಿವಮೊಗ್ಗ : ಮಕ್ಕಳನ್ನು ಒಬ್ಬಂಟಿಯಾಗಿ ಆಟವಾಡಲು ಬಿಡುವ ಪೋಷಕರೇ ಎಚ್ಚರ, ಆಟವಾಡುವಾಗ ಜ್ಯೂಸ್ ಬಾಟಲ್ ನ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹರಗುವಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಮಗ ಮನೆಯಲ್ಲಿ ಆಟವಾಡುತ್ತಿದ್ದ ಮಗುವೊಂದು ಅಲ್ಲೇ ಬಿದ್ದಿದ್ದ ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿದ್ದು, ಕೂಡಲೇ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

Read More

ಬೆಂಗಳೂರು : ಇಂದಿನ ಡಿಜಿಟಲ್ ಜಗತ್ತಿನಲ್ಲಿ, ಸ್ಮಾರ್ಟ್‌ಫೋನ್‌ಗಳು ನಮ್ಮ ವಹಿವಾಟುಗಳನ್ನು ಬಹಳ ಸುಲಭಗೊಳಿಸಿವೆ, ನೀವು ನಿಮ್ಮ ಫೋನ್‌ನಿಂದ ಯುಪಿಐ ಮೂಲಕ ಯಾರಿಗಾದರೂ ಹಣವನ್ನು ವರ್ಗಾಯಿಸಬಹುದು, ಆದರೆ ಯಾರಾದರೂ ನಿಮ್ಮ ಖಾತೆಗೆ ತರಾತುರಿಯಲ್ಲಿ ಹಣವನ್ನು ಹಾಕಿದರೆ ಅದು ನಿಮಗೆ ಆಹ್ಲಾದಕರ ಅನುಭವವನ್ನು ನೀಡುತ್ತದೆ , ಆದರೆ ನೀವು ಇನ್ನೊಬ್ಬ ವ್ಯಕ್ತಿಗೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ, ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಖಾತೆಗೆ ಬೇರೆಯವರ ಹಣ ಬಂದಿದೆ ಎಂದು ನೀವು ಭಾವಿಸಿದರೆ, RBI ನ ಈ ನಿಯಮವನ್ನು ಅನುಸರಿಸಿ. 1. ತಕ್ಷಣವೇ ನಿಮ್ಮ ಬ್ಯಾಂಕ್ ಅನ್ನು ಸಂಪರ್ಕಿಸಿ ನಿಮ್ಮ ಖಾತೆಯಲ್ಲಿ ಅನಿರೀಕ್ಷಿತ ಠೇವಣಿಗಳನ್ನು ನೀವು ಕಂಡುಕೊಂಡರೆ, ತಕ್ಷಣವೇ ನಿಮ್ಮ ಬ್ಯಾಂಕ್‌ಗೆ ತಿಳಿಸುವುದು ಮೊದಲ ಹಂತವಾಗಿದೆ. ಅವರಿಗೆ ವಿವರವಾದ ಮಾಹಿತಿಯನ್ನು ಒದಗಿಸಿ ಮೊತ್ತವನ್ನು ಸ್ವೀಕರಿಸಲಾಗಿದೆ ಠೇವಣಿ ದಿನಾಂಕ ವಹಿವಾಟಿನ ಉಲ್ಲೇಖ ಸಂಖ್ಯೆ ಅಂತಹ ಸಂದರ್ಭಗಳನ್ನು ಎದುರಿಸಲು ಬ್ಯಾಂಕ್‌ಗಳು ಪ್ರೋಟೋಕಾಲ್‌ಗಳನ್ನು ಸ್ಥಾಪಿಸಿವೆ ಮತ್ತು ಹಣದ ಮೂಲವನ್ನು ತನಿಖೆ ಮಾಡುತ್ತವೆ. 2. ಬ್ಯಾಂಕ್ ಚೆಕ್ಗಾಗಿ ನಿರೀಕ್ಷಿಸಿ ಸಂಪೂರ್ಣ ತನಿಖೆ ಮಾಡಲು ನಿಮ್ಮ…

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ನಾಳೆ ಅಥವಾ ನಾಡಿದ್ದು ಗೃಹಲಕ್ಷ್ಮಿ ಯೋಜನೆಯ 12 ಮತ್ತು 13 ನೇ ಕಂತಿನ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ. ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ ಎಂದು ಇಲಾಖೆ ತಿಳಿಸಿದ್ದು, ಸದ್ಯ ತಾಂತ್ರಿಕ ಸಮಸ್ಯೆ ಪರಿಹರಿಸಲಾಗಿದ್ದು, ನಾಳೆ ಅಥವಾ ನಾಡಿದ್ದು ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನು ಈ ಬಗ್ಗೆ ಮಾಹಿತಿ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಲ್ಕರ್, ಎಲ್ಲಾ ಜಿಲ್ಲೆಗಳಿಗೂ 11 ನೇ ಕಂತು ಹಣ ಬಿಡುಗಡೆ ಆಗಿದ್ದು, ನಾಲ್ಕೈದು ದಿನಗಳಲ್ಲಿ 12ನೇ ಹಾಗೂ 13ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ, ಗೃಹಲಕ್ಷ್ಮೀ ಖಾತೆಗಳು ಡಿಲೀಟ್ ಆಗಿವೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇದುವರೆಗೂ ಒಂದೇ ಒಂದು ಕೂಡ ಡಿಲೀಟ್ ಆಗಿಲ್ಲ. ಯಾರು ಜಿ‌ಎಸ್ ಟಿ, ಆದಾಯ ತೆರಿಗೆ ಕಟ್ಟುತ್ತಿದ್ದಾರೆ, ಅಂತಹವರದ್ದು ಅವರು…

Read More