Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಘೀ, ಚಿಕೂನ್ ಗುನ್ಯಾಗೆ ಕಡಿವಾಣ ಹಾಕುವ ಸಲುವಾಗಿ ಸೊಳ್ಳೆ ನಿರ್ಮೂಲನೆಗೆ ಆರೋಗ್ಯ ಇಲಾಖೆ ಮುಂದಾಗಿದ್ದು, ರಾಜ್ಯಾದ್ಯಂತ 1500 ಸ್ವಯಂಸೇವಕರನ್ನು ನೇಮಿಸಿಕೊಳ್ಳಲಿದೆ. ನೀರಿನ ಮೂಲಗಳಲ್ಲಿಯೇ ಲಾರ್ವಾ ನಿರ್ಮೂಲನೆಗೆ ರಾಜ್ಯಾದ್ಯಂತ 1500 ಸ್ವಯಂಸೇವಕರನ್ನು ನೇಮಿಸಿ ಪ್ರತಿದಿನ 400 ರೂಪಾಯಿ ಕೂಲಿ ನೀಡಲು ಆರು ಕೋಟಿ ರೂಪಾಯಿ ವೆಚ್ಚ ಸೇರಿದಂತೆ ರೋಗ ನಿಯಂತ್ರಣಕ್ಕೆ ವಿವಿಧ ಕ್ರಮಗಳಿಗೆ ಒಟ್ಟು 7.25 ಕೋಟಿ ರೂಪಾಯಿ ವೆಚ್ಚ ಮಾಡುವ ಪ್ರಸ್ತಾಪಕ್ಕೆ ಆರೋಗ್ಯ ಇಲಾಖೆ ಅನುಮೋದನೆ ನೀಡಿದೆ. ಸಾಂಕ್ರಾಮಿಕ ರೋಗಗಳಾದ ಚಿಕನ್ ಗುನ್ಯ, ಡೆಂಗ್ಯೂ ಖಾಯಿಲೆಗಳ ಪರಿಣಾಮಕಾರಿಯಾಗಿ ನಿಯಂತ್ರಣಕ್ಕಾಗಿ ವಿಶೇಷ ಅಭಿಯಾನ ರೂಪದಲ್ಲಿ ಮುಂಜಾಗ್ರತಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ಕುರಿತ ಸರ್ಕಾರ ಆದೇಶ ಹೊರಡಿಸಿದೆ. ಈ ಯೋಜನೆಯಡಿ ನೀರಿನಲ್ಲಿರುವ ಲಾರ್ವಾ ನಿರ್ಮೂಲನೆಗೆ 100 ದಿನದ ಮಟ್ಟಿಗೆ 1,500 ಸ್ವಯಂಸೇವಕರನ್ನು ನೇಮಕ ಮಾಡಿಕೊಳ್ಳಲು 6 ಕೋಟಿ ರೂ. ವೆಚ್ಚಕ್ಕೆ ಅವಕಾಶ ನೀಡಲಾಗಿದೆ. ಸ್ಥಳೀಯ ಸಂಸ್ಥೆಗಳು, ಜಿಲ್ಲೆ, ತಾಲೂಕು ಮಟ್ಟದಲ್ಲಿ ಪ್ರತಿದಿನ 400 ರೂ. ಕೂಲಿಯಂತೆ ಸ್ವಯಂ ಸೇವಕರು…
ಬೆಂಗಳೂರು : ಹಾಸನದಲ್ಲಿ ಸರಣಿ ಹೃದಯಘಾತ ಸಂಭವಿಸುತ್ತಿದ್ದ ಹಿನ್ನೆಲೆಯಲ್ಲಿ ಸರ್ಕಾರ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಾಂತ್ರಿಕ ಸಲಹಾ ಸಮಿತಿಯನ್ನು ನೇಮಕ ಮಾಡಿತ್ತು. ನಿನ್ನೆ ಈ ಒಂದು ಸಮಿತಿ ರಜೆ ಸರ್ಕಾರಕ್ಕೆ ಸಂಪೂರ್ಣ ವರದಿ ಸಲಿಸಿದ್ದು ವರದಿಯಲ್ಲಿ ಚಾಲಕರಿಗೆ ಅತಿ ಹೆಚ್ಚು ಹೃದಯಘಾತ ಆಗಿರುವುದು ಬಹಿರಂಗವಾಗಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಒಟ್ಟು 8 ಲಕ್ಷ ಚಾಲಕರಿಗೆ ಹೆಲ್ತ್ ಕ್ಯಾಂಪ್ ಆಯೋಜನೆ ಮಾಡಿ ಆರೋಗ್ಯ ತಪಾಸಣೆ ಮಾಡಲು ನಿರ್ಧಾರ ಕೈಗೊಂಡಿದೆ. ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಹೃದಯಾಘಾತದ ವರದಿಯನ್ನು ಬುಧವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಹಿರಂಗಪಡಿಸಿದ್ದಾರೆ. ಈ ವೇಳೆ ವಾಹನ ಚಾಲಕರ ಬಗ್ಗೆ ಆಘಾತಕಾರಿ ಅಂಶವೊಂದನ್ನು ತಿಳಿಸಿದ್ದು, ಹೃದಯಾಘಾತದಿಂದ ಮೃತಪಟ್ಟವರ ಪೈಕಿ ಶೇ.30ರಷ್ಟು ಮಂದಿ ಅಂದರೆ ಆರು ಜನ ಆಟೋ ಹಾಗೂ ಕ್ಯಾಬ್ ಚಾಲಕರು ಎಂದಿದ್ದಾರೆ. ಪ್ರಮುಖವಾಗಿ ವಾಯುಮಾಲಿನ್ಯ, ಹೊರಗಿನ ತಿಂಡಿ, ಕುಳಿತಲ್ಲೇ ಕುಳಿತಿರುವುದು ಮೊದಲಾದ ಕಾರಣಗಳಿಂದ ಹೃದಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ…
ಬೆಂಗಳೂರು : ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ನಾಲ್ಕು ಹಂತದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಲಾಗುತ್ತಿದೆ. ಈ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಮಾಹಿತಿ ನೀಡಿದ್ದು, ಅನ್ನಭಾಗ್ಯ ಯೋಜನೆಯ ಕುರಿತು ಜನರಲ್ಲಿ ಅರಿವು ಮೂಡಿಸಲು, ಕಾಳಸಂತೆ ಮಾರಾಟಕ್ಕೆ ಕಡಿವಾಣ ಹಾಕಲು ನಾಲ್ಕು ಹಂತದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಲಾಗುತ್ತಿದೆ. ಈಗಾಗಲೇ ರಾಜ್ಯಮಟ್ಟದ ಸಮಿತಿ ರಚಿಸಲಾಗಿದೆ. ಜಿಲ್ಲಾ, ತಾಲೂಕು ಸಮಿತಿಗಳನ್ನು ರಚಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ನ್ಯಾಯಬೆಲೆ ಅಂಗಡಿಗಳ ಮಟ್ಟದ ಸಮಿತಿಗಳನ್ನು ಪುನರ್ ರಚಿಸಲಾಗಿದೆ. ಈ ಸಮಿತಿಗಳ ಕಾರ್ಯನಿರ್ವಹಣೆ, ಅಧಿಕಾರ ವ್ಯಾಪ್ತಿ ನಿಗದಿಪಡಿಸಲು ನಿಯಮಗಳನ್ನು ರೂಪಿಸಲಾಗಿದೆ. ರಾಜ್ಯಮಟ್ಟದ ಸಮಿತಿಗೆ ಆಹಾರ ಸಚಿವರೇ ಅಧ್ಯಕ್ಷರಾಗಿರುತ್ತಾರೆ. ನ್ಯಾಯಬೆಲೆ ಅಂಗಡಿ ಹಂತದ ಜಾಗೃತಿ ಸಮಿತಿಗೆ ಆ ವ್ಯಾಪ್ತಿಯಲ್ಲಿ ಪಡಿತರ ಹೊಂದಿರುವ ಮೂವರು ಮಹಿಳೆಯರ ಪ್ರಾತಿನಿಧ್ಯವನ್ನು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ನವದೆಹಲಿ : ಭಾರತದ ಇದುವರೆಗಿನ ಅತ್ಯಂತ ಭೀಕರ ವಿಮಾನ ಅಪಘಾತಗಳಲ್ಲಿ ಒಂದಾದ ಏರ್ ಇಂಡಿಯಾ ಫ್ಲೈಟ್ 171 ಅಪಘಾತದ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಶನಿವಾರ ಮಧ್ಯರಾತ್ರಿಯ ನಂತರ ತನ್ನ ಪ್ರಾಥಮಿಕ ವರದಿಯನ್ನು ಬಿಡುಗಡೆ ಮಾಡಿತು. 260 ಜನರು ಸಾವನ್ನಪ್ಪಿದ ವಿಮಾನ ಅಪಘಾತದ ಒಂದು ತಿಂಗಳ ನಂತರ ಈ ವರದಿ ಬಂದಿದೆ. ಕಾಕ್ಪಿಟ್ ಧ್ವನಿ ರೆಕಾರ್ಡರ್ನಲ್ಲಿ (CVR) ಕಂಡುಬರುವ ಆಘಾತಕಾರಿ ಸಂಭಾಷಣೆಗಳನ್ನು ವರದಿ ಬಹಿರಂಗಪಡಿಸಿದೆ. ವರದಿಯಲ್ಲಿ ದಾಖಲಾಗಿರುವ ಕಾಕ್ಪಿಟ್ ಸಂಭಾಷಣೆಯ ಪ್ರಕಾರ, ಹಾರಾಟದ ಸ್ವಲ್ಪ ಸಮಯದ ನಂತರ, ಎರಡೂ ಎಂಜಿನ್ಗಳಲ್ಲಿ ಹಠಾತ್ ಇಂಧನ ಕಡಿತವಾಯಿತು. ನಂತರ ಒಬ್ಬ ಪೈಲಟ್ ಇನ್ನೊಬ್ಬರನ್ನು “ನೀವು ಇಂಧನವನ್ನು ಏಕೆ ಕಡಿತಗೊಳಿಸಿದ್ದೀರಿ?” ಎಂದು ಕೇಳಿದರು, ಇನ್ನೊಬ್ಬ ಪೈಲಟ್, “ನಾನು ಹಾಗೆ ಮಾಡಲಿಲ್ಲ” ಎಂದು ಉತ್ತರಿಸಿದರು. ವಿಮಾನವು ಟೇಕ್ ಆಫ್ ಆದ ತಕ್ಷಣ ಗರಿಷ್ಠ 180 ಗಂಟುಗಳ ವೇಗವನ್ನು ತಲುಪಿತು. ಅದೇ ಸಮಯದಲ್ಲಿ, ಎರಡೂ ಎಂಜಿನ್ಗಳ ಇಂಧನ ಕಡಿತ ಸ್ವಿಚ್ಗಳು 1 ಸೆಕೆಂಡ್ ವ್ಯತ್ಯಾಸದೊಂದಿಗೆ “RUN”…
ಬೆಂಗಳೂರು: ಬೆಂಗಳೂರು: ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವೀಡಿಯೋಗಳು ಅಥವಾ ಸಾಮಾಜಿಕ ಖಾತೆಗಳಲ್ಲಿ ಶೇರ್ ಮಾಡುವುದು ಅಪರಾಧ. ಒಂದು ವೇಳೆ ಹೀಗೆ ಮಾಡಿದರೇ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ ದೂರು ನೀಡಿ, ಅಂತವರ ವಿರುದ್ಧ ಕಾನೂನು ಕ್ರಮವಾಗಲಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವಿಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿ ಅವರ ಮಾನಹಾನಿ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವೀಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ. ಇದು ನಮ್ಮ ಕರ್ನಾಟಕದ ಪರಂಪರೆಯಲ್ಲ. ಕಳೆದ ಕೆಲವು ದಿನಗಳಲ್ಲಿ ಇಂತಹ ಸಾಕಷ್ಟು ಘಟನೆಗಳು ಬೆಳಕಿಗೆ ಬಂದಿದ್ದು, ತಕ್ಷಣವೇ ಕೃತ್ಯ ಎಸಗಿದವರನ್ನು ಬಂಧಿಸಲಾಗುವುದು. ಅಲ್ಲದೇ ಎಲ್ಲಾ ಅಗತ್ಯ ಕಾನೂನು ಕ್ರಮಗಳನ್ನು ಸರ್ಕಾರ ಜರುಗಿಸಿದೆ. ಇದರ…
ನವದೆಹಲಿ : ಭಾರತದ ಇದುವರೆಗಿನ ಅತ್ಯಂತ ಭೀಕರ ವಿಮಾನ ಅಪಘಾತಗಳಲ್ಲಿ ಒಂದಾದ ಏರ್ ಇಂಡಿಯಾ ಫ್ಲೈಟ್ 171 ಅಪಘಾತದ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಶನಿವಾರ ಮಧ್ಯರಾತ್ರಿಯ ನಂತರ ತನ್ನ ಪ್ರಾಥಮಿಕ ವರದಿಯನ್ನು ಬಿಡುಗಡೆ ಮಾಡಿತು. 260 ಜನರು ಸಾವನ್ನಪ್ಪಿದ ವಿಮಾನ ಅಪಘಾತದ ಒಂದು ತಿಂಗಳ ನಂತರ ಈ ವರದಿ ಬಂದಿದೆ. ಕಾಕ್ಪಿಟ್ ಧ್ವನಿ ರೆಕಾರ್ಡರ್ನಲ್ಲಿ (CVR) ಕಂಡುಬರುವ ಆಘಾತಕಾರಿ ಸಂಭಾಷಣೆಗಳನ್ನು ವರದಿ ಬಹಿರಂಗಪಡಿಸಿದೆ. ವರದಿಯಲ್ಲಿ ದಾಖಲಾಗಿರುವ ಕಾಕ್ಪಿಟ್ ಸಂಭಾಷಣೆಯ ಪ್ರಕಾರ, ಹಾರಾಟದ ಸ್ವಲ್ಪ ಸಮಯದ ನಂತರ, ಎರಡೂ ಎಂಜಿನ್ಗಳಲ್ಲಿ ಹಠಾತ್ ಇಂಧನ ಕಡಿತವಾಯಿತು. ನಂತರ ಒಬ್ಬ ಪೈಲಟ್ ಇನ್ನೊಬ್ಬರನ್ನು “ನೀವು ಇಂಧನವನ್ನು ಏಕೆ ಕಡಿತಗೊಳಿಸಿದ್ದೀರಿ?” ಎಂದು ಕೇಳಿದರು, ಇನ್ನೊಬ್ಬ ಪೈಲಟ್, “ನಾನು ಹಾಗೆ ಮಾಡಲಿಲ್ಲ” ಎಂದು ಉತ್ತರಿಸಿದರು. ವಿಮಾನವು ಟೇಕ್ ಆಫ್ ಆದ ತಕ್ಷಣ ಗರಿಷ್ಠ 180 ಗಂಟುಗಳ ವೇಗವನ್ನು ತಲುಪಿತು. ಅದೇ ಸಮಯದಲ್ಲಿ, ಎರಡೂ ಎಂಜಿನ್ಗಳ ಇಂಧನ ಕಡಿತ ಸ್ವಿಚ್ಗಳು 1 ಸೆಕೆಂಡ್ ವ್ಯತ್ಯಾಸದೊಂದಿಗೆ “RUN”…
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಇದೇ ಜುಲೈ 12ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ.ಕಲ್ಯಾಣ ಮಂಟಪದಲ್ಲಿ “ಚಿತ್ರದುರ್ಗ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಘನ ಉಪಸ್ಥಿತಿವಹಿಸುವರು. ಕಾರ್ಮಿಕ ಸಚಿವ ಸಂತೋಷ ಎಸ್.ಲಾಡ್ ಉದ್ಘಾಟನೆ ನೆರವೇರಿಸುವರು. ಲೋಕಸಭಾ ಸದಸ್ಯ ಗೋವಿಂದ ಎಂ.ಕಾರಜೋಳ ಗೌರವ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ…
ಚಿಕ್ಕಮಗಳೂರು : ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ರಾಜ್ಯದ ಭಕ್ತರಿಗೆ ಸಿಹಿಸುದ್ದಿ ಸಿಕ್ಕಿದ್ದು, ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ರೈಲು ಸಂಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಚಾಲನೆ ನೀಡಿದ್ದಾರೆ. ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Weekly Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ. ಇಂದು ಚಿಕ್ಕಮಗಳೂರಿನಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಅವರು ಚಿಕ್ಕಮಗಳೂರು-ತಿರುಪತಿ ರೈಲು ಸಂಚಾರಕ್ಕೆ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಎಂಎಲ್ ಸಿ ಸಿ.ಟಿ ರವಿ, ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಮತ್ತಿತರರಿದ್ದರು. ರೈಲಿನ ವಿವರ ತಿರುಪತಿ-ಚಿಕ್ಕಮಗಳೂರು (ರೈಲು ಸಂಖ್ಯೆ 17423) : ಈ ರೈಲು ಪ್ರತಿ ಗುರುವಾರ ರಾತ್ರಿ 09.00 ಗಂಟೆಗೆ ತಿರುಪತಿಯಿಂದ ಹೊರಡಲಿದ್ದು ಮರುದಿನ ಶುಕ್ರವಾರ ಬೆಳಿಗ್ಗೆ 10.30 ಕ್ಕೆ…
ವಿಶ್ವದಾದ್ಯಂತ ಸ್ಟಾರ್ ಲಿಂಕ್ ಸರ್ವರ್ ಡೌನ್ ಆಗಿದ್ದು, ಬಳಕೆದಾರರು ಪರದಾಟ ನಡೆಸಿದ್ದಾರೆ. ಇಂದು ಬೆಳಗ್ಗೆ ಹಲವಾರು ಸ್ಟಾರ್ಲಿಂಕ್ ಬಳಕೆದಾರರು ಇಂಟರ್ನೆಟ್ ಅಡಚಣೆಗಳನ್ನು ವರದಿ ಮಾಡಿದ್ದಾರೆ ಎಂದು ಮಾನಿಟರಿಂಗ್ ಸೈಟ್ ಡೌನ್ಡೆಕ್ಟರ್ ತಿಳಿಸಿದೆ. ಇಂದು ಬೆಳಗಿನ ಜಾವ 2:30 ರ ಹೊತ್ತಿಗೆ, ಸೈಟ್ನಲ್ಲಿ ಸುಮಾರು 1,000 ಸರ್ವರ್ ಡೌನ್ ವರದಿಗಳು ದಾಖಲಾಗಿವೆ, ಹೆಚ್ಚಿನ ಬಳಕೆದಾರರು ಸಂಪರ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಉಲ್ಲೇಖಿಸಿದ್ದಾರೆ. ಕೆಲವರು ಪರಿಸ್ಥಿತಿಯನ್ನು “ಸಂಪೂರ್ಣ ಬ್ಲ್ಯಾಕೌಟ್” ಎಂದು ಸಹ ಉಲ್ಲೇಖಿಸಿದ್ದಾರೆ. ಎಲಾನ್ ಮಸ್ಕ್ ಸ್ಥಾಪಿಸಿದ ಏರೋಸ್ಪೇಸ್ ಕಂಪನಿಯಾದ ಸ್ಪೇಸ್ಎಕ್ಸ್ ಅಭಿವೃದ್ಧಿಪಡಿಸಿದ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆಯಾಗಿದೆ. ಪ್ರಪಂಚದಾದ್ಯಂತ – ವಿಶೇಷವಾಗಿ ದೂರದ ಮತ್ತು ಕಡಿಮೆ ಸೇವೆ ಸಲ್ಲಿಸಿದ ಪ್ರದೇಶಗಳಲ್ಲಿ – ಹೆಚ್ಚಿನ ವೇಗದ ಇಂಟರ್ನೆಟ್ ಪ್ರವೇಶವನ್ನು ಒದಗಿಸಲು ವಿನ್ಯಾಸಗೊಳಿಸಲಾದ ಸ್ಟಾರ್ಲಿಂಕ್, ಕಡಿಮೆ ಭೂಮಿಯ ಕಕ್ಷೆಯ (LEO) ಉಪಗ್ರಹಗಳ ಜಾಲದ ಮೂಲಕ ಡಿಜಿಟಲ್ ಅಂತರವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ.
ಮುಂಬೈ : ದಲಾಲ್ ಸ್ಟ್ರೀಟ್ ಶುಕ್ರವಾರವೂ ತನ್ನ ಕುಸಿತದ ವೇಗವನ್ನು ಮುಂದುವರೆಸಿತು, ಇದು ಸುಮಾರು 1% ರಷ್ಟು ಕುಸಿತ ಕಂಡಿತು, ವಿವಿಧ ವಲಯಗಳಲ್ಲಿ ವ್ಯಾಪಕ ಮಾರಾಟ ಕಂಡುಬಂದಿತು. ಎಸ್ & ಪಿ ಬಿಎಸ್ಇ ಸೆನ್ಸೆಕ್ಸ್ ಸುಮಾರು 700 ಅಂಕಗಳ ಕುಸಿತದೊಂದಿಗೆ 82,509.59 ಕ್ಕೆ ತಲುಪಿದರೆ, ಎನ್ಎಸ್ಇ ನಿಫ್ಟಿ 50 ಮಧ್ಯಾಹ್ನ 12:21 ರ ಹೊತ್ತಿಗೆ ಸುಮಾರು 200 ಅಂಕಗಳ ಕುಸಿತದೊಂದಿಗೆ 25,162.25 ಕ್ಕೆ ತಲುಪಿತು. ಟಿಸಿಎಸ್ನ ನಿರೀಕ್ಷಿತ ತ್ರೈಮಾಸಿಕ ಫಲಿತಾಂಶಗಳಿಗಿಂತ ಐಟಿ ಷೇರುಗಳು ಕುಸಿದವು, ಮಧ್ಯಾಹ್ನದ ಅವಧಿಯಲ್ಲಿ ನಿಫ್ಟಿ ಐಟಿ ಸೂಚ್ಯಂಕವು 1% ಕ್ಕಿಂತ ಹೆಚ್ಚು ಕುಸಿದವು. ಮಧ್ಯಾಹ್ನದ ಅವಧಿಯಲ್ಲಿ ಅಗ್ರ ಐದು ಲಾಭ ಗಳಿಸಿದವರು ಹಿಂದೂಸ್ತಾನ್ ಯೂನಿಲಿವರ್ 4.77%, ಸನ್ ಫಾರ್ಮಾಸ್ಯುಟಿಕಲ್ 0.51%, ಆಕ್ಸಿಸ್ ಬ್ಯಾಂಕ್ 0.48% ಮತ್ತು ಎಟರ್ನಲ್ 0.32%. ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ 2.75%, ಮಹೀಂದ್ರಾ & ಮಹೀಂದ್ರಾ 2.43%, ಭಾರ್ತಿ ಏರ್ಟೆಲ್ 2.12%, ಬಜಾಜ್ ಫಿನ್ಸರ್ವ್ 1.72% ಮತ್ತು ರಿಲಯನ್ಸ್ 1.68% ಕುಸಿತ ಕಂಡಿದ್ದರಿಂದ ವಿಶಾಲ…














