Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು :ರಾಜ್ಯ ಹಾಗೂ ಜಿಲ್ಲಾಮಟ್ಟದ ಸರ್ಕಾರಿ ಕಾರ್ಯ ಕ್ರಮಗಳಲ್ಲಿ ಶಿಸ್ತು ತರುವ ಸಲುವಾಗಿ ವೇದಿಕೆ ಮೇಲೆ ಆಸೀನರಾಗುವ ಅತಿಥಿಗಳಿಗೆ ರಾಜ್ಯ ಸರ್ಕಾರ ಕಡಿವಾಣ ವಿಧಿಸಲು ತೀರ್ಮಾನಿಸಿದ್ದು, 9ಕ್ಕೆ ಸೀಮಿತಗೊಳಿಸಲು ನಿಯಮ ರೂಪಿಸಿದೆ. ತೀರಾ ಅನಿವಾರ್ಯವಾದರೆ 13 ಮಂದಿ ಅತಿಥಿಗಳವರೆಗೆ ಅವಕಾಶ ನೀಡಬಹುದು. ಅತಿ ಥಿಗಳ ಸಂಖ್ಯೆ ನಿರ್ಧಾರ ಅಧಿಕಾರವನ್ನು ಜಿಲ್ಲಾ ಉಸ್ತುವಾರಿ ಸಚಿವರು ಹೊಂದಿರತಕ್ಕದ್ದು ಎಂದು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಾರ್ವಜನಿಕ ಸರ್ಕಾರಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆ ಮತ್ತು ವೇದಿಕೆ ಮೇಲೆ ಆಸೀನರಾಗುವ ಗಣ್ಯರ ಹೆಸರುಗಳನ್ನು ಸಂಬಂಧಪಟ್ಟ ಇಲಾಖೆಗಳ ಸಚಿವರು 9 ಅಥವಾ 9 ಅನ್ನು ಮೀರದಂತೆ, ಅನಿವಾರ್ಯ ಸಂದರ್ಭದಲ್ಲಿ 13ಕ್ಕೆ ಮೀರದಂತೆ ಆಯ್ಕೆಯ ಅವಕಾಶ ಕಲ್ಪಿಸಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ, ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲೂಕು ಮಟ್ಟದ ಆಸ್ಪತ್ರೆಗಳನ್ನು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗಳ…
ಮಂಡ್ಯ : ಬಿಜೆಪಿಯವರು ನಮ್ಮನ್ನು ಗೌರವಯುತವಾಗಿ ತೆಗೆದುಕೊಳ್ಳದಿದ್ದರೆ ಜೆಸಿಬಿ ಗುರುತಿನ ಕರ್ನಾಟಕ ಹಿಂದೂ ಪಕ್ಷ ಹೆಸರಿನಲ್ಲಿ ಹೊಸ ಪಕ್ಷ ಕಟ್ಟುತ್ತೇನೆ ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಘೋಷಿಸಿದ್ದಾರೆ. ಮದ್ದೂರು ತಾಲೂಕಿನ ಸೋಮನಹಳ್ಳಿ ಬಳಿ ಜಾಥಾ ಉದ್ದೇಶಿಸಿ ಗುರುವಾರ ಮಾತನಾಡಿದ ಅವರು, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನಾನು ಸಿಎಂ ಆಗಿ ಮುಸ್ಲಿಮರ ಮೀಸಲಾತಿ ತೆಗೆದು ಹಿಂದೂಗಳಿಗೆ ಹಂಚುತ್ತೇನೆ ಎಂದು ಹೇಳಿದ್ದಾರೆ. ಕರ್ನಾಟಕ ಬಿಜೆಪಿಯವರು ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಅದಕ್ಕೇ ಹಿಂದೂಗಳ ಪರ ಗಟ್ಟಿಯಾಗಿ ಮಾತನಾಡುವುದಿಲ್ಲ. ಮಾಜಿ ಸಂಸದ ಪ್ರತಾಪ್ ಸಿಂಹ ನಾವೆಲ್ಲಾ ಹಿಂದೂಗಳ ಪರವಾಗಿ ಗಟ್ಟಿಯಾಗಿ ಮಾತಾನಾಡುತ್ತೇವೆ. ನಾವು ಪ್ರತಾಪ್ ಒಂದಾಗಿ ಹೊಸ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಹೇಳಿದ್ದಾರೆ. ನಾನು ಅಧಿಕಾರಕ್ಕೆ ಬಂದರೆ ಗೋ ಹತ್ಯೆ ಮಾಡುವವರು ಒಂದು ಗತಿ ಕಾಣಿಸುತ್ತೇನೆ. ವಕ್ಫ್ ಅನುದಾನ ಗೋರಕ್ಷಕರಿಗೆ ನೀಡುತ್ತೇನೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಮಸೀದಿ ಮುಂದೆ ಗಂಟೆಗಟ್ಟಲೆ ಡ್ಯಾನ್ಸ್ ಮಾಡಲು ಅವಕಾಶ ಕೊಡುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ಟ್ರಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದಂತ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿ ಘೋಷಣೆ ಮಾಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪುಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಪುಕರಣಗಳ ದಂಡದ ಬಾಕಿ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023ರವರೆಗೆ ಇತ್ಯರ್ಥಗೊಳ್ಳುವ ಪುಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು. ಪೊಲೀಸ್ ಇಲಾಖೆಯ ಸಂಚಾರಿ ಇ- ಚಲನ್ನಲ್ಲಿ ದಾಖಲಾಗಿರುವ ಬಾಕಿ ಪುಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪುಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿರುತ್ತದೆ. ಮುಂದುವರೆದು ಸದರಿ ಅವಧಿಯು ಮುಕ್ತಾಯವಾಗಿರುವುದರಿಂದ ಸದರಿ ಕಾಲಾವಕಾಶವನ್ನು ದಿನಾಂಕ:23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿರುತ್ತಾರೆ. ನಿಮ್ಮ ಬಾಕಿ ದಂಡವನ್ನು…
ಭಾರತೀಯ ರಿಸರ್ವ್ ಬ್ಯಾಂಕ್ ಸಾಲಗಳ ಕುರಿತು ಹೊಸ ನಿಯಮವನ್ನು ಜಾರಿಗೆ ತರಲು ಯೋಜಿಸುತ್ತಿದೆ. ಹೊಸ ಆರ್ಬಿಐ ನಿಯಮ ಜಾರಿಗೆ ಬಂದ ನಂತರ, ಸಾಲದಾತರು ಸಾಲವನ್ನು ಮರುಪಾವತಿಸಲು ಸಾಧ್ಯವಾಗದವರ ಫೋನ್ಗಳನ್ನು ರಿಮೋಟ್ ಆಗಿ ಲಾಕ್ ಮಾಡುತ್ತಾರೆ. ಆದರೆ ಇದು ಗ್ರಾಹಕರ ಹಕ್ಕುಗಳ ಕಳವಳವನ್ನು ಹೆಚ್ಚಿಸುವ ಸಾಧ್ಯತೆಯಿದೆ. 2024 ರಲ್ಲಿ ಹೋಮ್ ಕ್ರೆಡಿಟ್ ಫೈನಾನ್ಸ್ ನಡೆಸಿದ ಅಧ್ಯಯನವು ಪ್ರಮುಖ ಅಂಶಗಳನ್ನು ಬಹಿರಂಗಪಡಿಸಿದೆ. ಗ್ರಾಹಕರು ಮೊಬೈಲ್ ಫೋನ್ಗಳು ಸೇರಿದಂತೆ ಮೂರನೇ ಒಂದು ಭಾಗಕ್ಕಿಂತ ಹೆಚ್ಚಿನ ಎಲೆಕ್ಟ್ರಾನಿಕ್ಸ್ ಅನ್ನು ಕ್ರೆಡಿಟ್ನಲ್ಲಿ ಖರೀದಿಸುತ್ತಾರೆ ಎಂದು ಕಂಡುಬಂದಿದೆ. ಟೆಲಿಕಾಂ ನಿಯಂತ್ರಕದ ಪ್ರಕಾರ, 1.4 ಬಿಲಿಯನ್ಗಿಂತಲೂ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶದಲ್ಲಿ 1.16 ಬಿಲಿಯನ್ಗಿಂತಲೂ ಹೆಚ್ಚು ಮೊಬೈಲ್ ಸಂಪರ್ಕಗಳಿವೆ. ಭಾರತದಲ್ಲಿ ಮಾರಾಟವಾಗುವ ಮೊಬೈಲ್ ಸೇರಿ ಗ್ರಾಹಕ ಬಳಕೆಯ ಎಲೆಕ್ಟ್ರಾನಿಕ್ ಉಪಕರ ಣಗಳ ಪೈಕಿ 3ನೇ 1ರಷ್ಟನ್ನು ಜನರು ಇಎಂಐ ಮೂಲಕವೇ ಖರೀದಿಸುತ್ತಾರೆ. ದೇಶದಲ್ಲಿ 140 ಕೋಟಿ ಜನಸಂಖ್ಯೆ ಇದ್ದು, 116 ಕೋಟಿ ಮಂದಿ ಮೊಬೈಲ್ ಸಂಪರ್ಕ ಪಡೆದಿದ್ದಾರೆ. ಹಲವು ಮಂದಿ ಕಂತಿನಲ್ಲಿ…
ನವದೆಹಲಿ : ದೇಶದ ನೂತನ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಧಾಕೃಷ್ಣನ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ರಾಧಾಕೃಷ್ಣನ್ ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ಅವರನ್ನು ಸೋಲಿಸುವ ಮೂಲಕ ಗೆಲುವು ಸಾಧಿಸಿದ್ದಾರೆ. ಜುಲೈ 21 ರಂದು ಮಾಜಿ ಉಪಾಧ್ಯಕ್ಷ ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯ ನಂತರ ಚುನಾವಣೆ ನಡೆಯಿತು. ಎನ್ಡಿಎ ಅಭ್ಯರ್ಥಿ ರಾಧಾಕೃಷ್ಣನ್ ಮಂಗಳವಾರ ಭಾರತದ 15 ನೇ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ಅಧಿಕಾರಿ ಪಿ.ಸಿ. ಮೋದಿ ಫಲಿತಾಂಶಗಳನ್ನು ಘೋಷಿಸಿದರು ಮತ್ತು 781 ಸಂಸದರಲ್ಲಿ 767 ಮತ ಚಲಾಯಿಸಿದ್ದಾರೆ, ಇದು ಶೇಕಡಾ 98.2 ರಷ್ಟು ಮತದಾನವಾಗಿದೆ ಎಂದು ಹೇಳಿದರು. ಎನ್ಡಿಎ ಅಭ್ಯರ್ಥಿ 452 ಮತಗಳನ್ನು ಪಡೆದರೆ, ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ 300…
ಬೆಂಗಳೂರು: ರಾಜ್ಯ ಸರ್ಕಾರವು ಒಳ ಮೀಸಲಾತಿ ಅಳವಡಿಸಿಕೊಂಡು ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸುವ ಸಲುವಾಗಿ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ರವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾದ ಹಿನ್ನಲೆಯಲ್ಲಿ ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ಹೂಸದಾಗಿ ನೇರ ನೇಮಕಾತಿಯನ್ನು ಮಾಡುವುದನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿರುತ್ತದೆ ಎಂದಿದ್ದಾರೆ. ಪ್ರಸ್ತುತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ಆಯೋಗವು ವರದಿಯನ್ನು ಸಲ್ಲಿಸಿದ್ದು, ಸಚಿವ ಸಂಪುಟವು ಕೆಲವು ಮಾರ್ಪಾಡುಗಳೊಂದಿಗೆ ಸದರಿ ವರದಿಯನ್ನು ಅಂಗಿಕರಿಸಿದ್ದು, ಸರ್ಕಾರದಿಂದ ಈ ಕೆಳಕಂಡ ಆದೇಶ/ ಸುತ್ತೋಲೆಗಳನ್ನು ಹೊರಡಿಸಲಾಗಿರುತ್ತದೆ. 1. ದಿನಾಂಕ 25.08.2025 ರ ಸರ್ಕಾರದ ಆದೇಶ ಸಂಖ್ಯೆ: ಸಕಇ 8 ಎಸ್ಎಲ್ಪಿ 2024. 2. ದಿನಾಂಕ: 03.09.2025 ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 02…
ಸಾಕಿದ ಅಥವಾ ಬೀದಿ ನಾಯಿ ಕಚ್ಚಿದಲ್ಲಿ, ಉಗುರಿನಿಂದ ಗಿರಿದರೆ, ನಮ್ಮ ಮೈಮೇಲೆ ಈಗಾಗಲೇ ಇರುವ ಗಾಯವನ್ನು ನಾಲಿಗೆಯಿಂದ ನೆಕ್ಕಿದರೆ ಏನೂ ಆಗುವುದಿಲ್ಲವೆಂದು ನಿರ್ಲಕ್ಷ್ಯ ವಹಿಸದೇ ನಾಯಿ ಕಚ್ಚಿದ ಜಾಗವನ್ನು ಸೋಪು ಮತ್ತು ನೀರಿನಿಂದ ತೊಳೆದು, ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆಯಂತೆ ಮಾರಣಾಂತಿಕವಾದ ರೇಬಿಸ್ ರೋಗ ತಡೆಗಟ್ಟುವ ಲಸಿಕೆ ಪಡೆಯಬೇಕು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕೌಲ್ಬಜಾರ್ ಇವರ ಸಂಯುಕ್ತಾಶ್ರಯದಲ್ಲಿ ಕೌಲ್ಬಜಾರ್ ನ ಆರೋಗ್ಯ ಕೇಂದ್ರದಲ್ಲಿ ನಾಯಿ ಕಡಿತ ಹಾಗೂ ಹಾವು ಕಡಿತ ಕುರಿತು ಬುಧವಾರ ಏರ್ಪಡಿಸಿದ್ದ ಜನಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರೇಬೀಸ್ ಸೋಂಕುಳ್ಳ ನಾಯಿ ಕಚ್ಚಿದಾಗ ರೇಬೀಸ್ ನಿರೋಧಕ ಚುಚ್ಚುಮದ್ದು ಪಡೆಯದಿದ್ದರೆ ಅಂತಹ ವ್ಯಕ್ತಿಯು ರೇಬೀಸ್ ಕಾಯಿಲೆಯ ಸೋಂಕಿಗೆ ಒಳಗಾಗಿ ರೋಗ ದೀರ್ಘವಾದಾಗ ಮರಣ ಸಂಭವಿಸಬಹುದು…
ರಾಷ್ಟ್ರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದಂತೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಇದೇ ಸೆ.13 ರಂದು ಈ ವರ್ಷದ ಮೂರನೇ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು, ಸಾರ್ವಜನಿಕರು ಬಾಕಿ ಇರುವ ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರಮೋದ್ ಬಿ.ಜಿ ಅವರು ಕರೆ ನೀಡಿದರು. ನಗರದ ತಾಳೂರು ರಸ್ತೆಯ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮೂರನೇ ಮಹಡಿಯ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಉಭಯ ಕಕ್ಷಿದಾರರ ಪರಸ್ಪರ ಹೊಂದಾಣಿಕೆಗಾಗಿ ಮತ್ತು ತ್ವರಿತ ನ್ಯಾಯಕ್ಕಾಗಿ ರಾಷ್ಟಿçÃಯ ಲೋಕ್ ಅದಾಲತ್ ಸಹಕಾರಿ. ಅಖಂಡ (ಬಳ್ಳಾರಿ ಮತ್ತು ವಿಜಯನಗರ) ಜಿಲ್ಲೆಯ 31 ನ್ಯಾಯಾಲಯಗಳಲ್ಲಿ ಅಂದು ಬಗೆಹರಿಸಬಹುದಾದ ವಿವಿಧ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಹಾಗೂ ನ್ಯಾಯಾಲಯದ ಶುಲ್ಕವನ್ನು ಮರು ಪಾವತಿಸಲಾಗುತ್ತದೆ ಎಂದರು. ವೈವಾಹಿಕ, ಕೌಟುಂಬಿಕ, ಮೋಟಾರು ಅಪಘಾತ, ಚೆಕ್ ಅಮಾನ್ಯದ, ವಾಣಿಜ್ಯ, ಸೇವಾ ಪ್ರಕರಣಗಳು ಮತ್ತು ರಾಜೀಯಾಗಬಲ್ಲ, ಗ್ರಾಹಕ ವ್ಯಾಜ್ಯ, ಡಿಆರ್…
ನವದೆಹಲಿ : ಸಂಬಳ ಪಡೆಯುವ ವ್ಯಕ್ತಿಗೆ ಪ್ರತಿ ತಿಂಗಳು ಸಂಬಳ ಸಿಗುವುದಲ್ಲದೆ, ಅವರ ಪಿಎಫ್ (ಪಿಎಫ್ ನಿಯಮಗಳು 2025) ಅನ್ನು ಅವರ ಸಂಬಳದಿಂದ ಕಡಿತಗೊಳಿಸಿದರೆ, ಅವರು ಇನ್ನೂ ಅನೇಕ ಪ್ರಯೋಜನಗಳನ್ನು ಪಡೆಯುತ್ತಾರೆ. ಆಶ್ಚರ್ಯಕರ ಸಂಗತಿಯೆಂದರೆ, ಹೆಚ್ಚಿನ ಉದ್ಯೋಗಿಗಳಿಗೆ ಪಿಎಫ್ನ ಈ 7 ಪ್ರಯೋಜನಗಳ ಬಗ್ಗೆ ತಿಳಿದಿಲ್ಲ. ಪ್ರತಿ ತಿಂಗಳು ನಿಮ್ಮ ಸಂಬಳದಿಂದ ಪಿಎಫ್ ಅನ್ನು ಕಡಿತಗೊಳಿಸಿದರೆ, ಈ ಪ್ರಯೋಜನಗಳನ್ನು ತ್ವರಿತವಾಗಿ ಗಮನಿಸಿ.ಪ್ರತಿ ಉದ್ಯೋಗಿಯ ಪಿಎಫ್ (ಪಿಎಫ್ ಖಾತೆ ಕೆ ಫಾಯ್ಡೆ) ಅನ್ನು ನೌಕರರ ಭವಿಷ್ಯ ನಿಧಿ ಸಂಸ್ಥೆಯು ಪ್ರತಿ ತಿಂಗಳು ಠೇವಣಿ ಮಾಡುತ್ತದೆ. ಇದನ್ನು ಉದ್ಯೋಗಿಯ ಸಂಬಳದಿಂದಲೇ ನೀಡಲಾಗುತ್ತದೆ. ಇದರ ನಂತರ, ಈ ಠೇವಣಿ ಮಾಡಿದ ಪಿಎಫ್ ಮೊತ್ತದ ಮೇಲೆ ಇಪಿಎಫ್ಒ (ನೌಕರರ ಭವಿಷ್ಯ ನಿಧಿ ಸಂಸ್ಥೆ) 7 ದೊಡ್ಡ ಪ್ರಯೋಜನಗಳನ್ನು ನೀಡುತ್ತದೆ. ಅನೇಕ ಜನರಿಗೆ ಈ ಪ್ರಯೋಜನಗಳ ಬಗ್ಗೆ ತಿಳಿದಿಲ್ಲ. ಪ್ರತಿಯೊಬ್ಬ ಉದ್ಯೋಗಿ ವ್ಯಕ್ತಿಯು ಈ ಪ್ರಯೋಜನಗಳನ್ನು (ಪಿಎಫ್ ಪ್ರಯೋಜನಗಳು) ತಿಳಿದಿರಬೇಕು ಇದರಿಂದ ಅವರು ಅಗತ್ಯವಿದ್ದಾಗ ಈ ಪ್ರಯೋಜನಗಳ ಲಾಭವನ್ನು…
ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಗಂಡ-ಹೆಂಡತಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ಕೊಟ್ಟಿದ್ದು, ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 07 ವರ್ಷಗಳ ಸೇವಾವಧಿ ಪೂರ್ಣಗೊಳಿಸಿರುವ ಪೊಲೀಸ್ ಕಾನ್ಸ್ಟೇಬಲ್ ಮತ್ತು ಹೆಡ್-ಕಾನ್ಸ್ಟೇಬಲ್ಗಳು (ಪತಿ-ಪತ್ನಿ ಪ್ರಕರಣಗಳು) ಅಂತರಜಿಲ್ಲಾ ವರ್ಗಾವಣೆ ಕೋರಿದ್ದಲ್ಲಿ, ಅಂತಹ ಪ್ರಕರಣಗಳನ್ನು ಕಡ್ಡಾಯವಾಗಿ ಪರಿಗಣಿಸಿ ಸಿಬ್ಬಂದಿಗಳು ಕೋರಿರುವ ಜಿಲ್ಲೆಗಳಿಗೆ ಕೂಡಲೇ ವರ್ಗಾವಣೆಗೊಳಿಸುವಂತೆ ಹಾಗೂ ಸದರಿ ಮಾಹಿತಿಯನ್ನು ನಮ್ಮ ಕಚೇರಿಗೆ ಒದಗಿಸುವಂತೆ ಸೂಚನೆ ನೀಡಲಾಗಿದೆ.













