Subscribe to Updates
Get the latest creative news from FooBar about art, design and business.
Author: kannadanewsnow57
ಮೇಷ ರಾಶಿ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ, ಕೈಗೊಂಡ ಕೆಲಸಗಳು ಕಷ್ಟದಿಂದಲೂ ಪೂರ್ಣಗೊಳ್ಳುವುದಿಲ್ಲ. ಪ್ರಯಾಣಗಳು ಮುಂದೂಡಲ್ಪಡುತ್ತವೆ, ಉದ್ಯೋಗಿಗಳು ಬರಬೇಕಾದ ಸ್ಥಾನಗಳಲ್ಲಿ ಸ್ವಲ್ಪ ವಿಳಂಬವಾಗುತ್ತದೆ. ದೈವಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಮನೆಯ ಹೊರಗೆ ಜವಾಬ್ದಾರಿಗಳು ಹೆಚ್ಚಾಗುತ್ತವೆ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಪ್ರಗತಿ ಹೊಂದುತ್ತವೆ. 9980060275 ವೃಷಭ ರಾಶಿ ದೂರದ ಸಂಬಂಧಿಕರಿಂದ ನಿಮಗೆ ಶುಭ ಸುದ್ದಿ ಸಿಗುತ್ತದೆ. ಹಠಾತ್ ಧನ ಲಾಭ ಸಿಗುತ್ತದೆ. ಸಮಾಜದಲ್ಲಿ ಪ್ರಮುಖ ವ್ಯಕ್ತಿಗಳನ್ನು ಭೇಟಿಯಾಗುತ್ತೀರಿ. ಬಾಲ್ಯದ ಸ್ನೇಹಿತರಿಂದ ನಿಮಗೆ ಕೆಲವು ಪ್ರಮುಖ ಮಾಹಿತಿ ಸಿಗುತ್ತದೆ. ನೀವು ಹೊಸ ವಾಹನವನ್ನು ಖರೀದಿಸುತ್ತೀರಿ. ವ್ಯವಹಾರದಲ್ಲಿ ಸಮಸ್ಯೆಗಳನ್ನು ನಿವಾರಿಸುತ್ತೀರಿ. ಉದ್ಯೋಗದ ವಾತಾವರಣ ಅನುಕೂಲಕರವಾಗಿರುತ್ತದೆ, ಮಿಥುನ ರಾಶಿ ದೂರ ಪ್ರಯಾಣದ ಸಮಯದಲ್ಲಿ ನೀವು ವಾಹನ ಸಮಸ್ಯೆಗಳನ್ನು ಎದುರಿಸುತ್ತೀರಿ. ಕುಟುಂಬ ಸದಸ್ಯರೊಂದಿಗೆ ವಿವಾದಗಳು ಇರುತ್ತವೆ. ನೀವು ಹಣಕಾಸಿನ ವಿಷಯಗಳಲ್ಲಿ ಜಾಗರೂಕರಾಗಿರಬೇಕು. ಹೊಸ ಸಾಲದ ಪ್ರಯತ್ನಗಳು ಫಲ ನೀಡುವುದಿಲ್ಲ. ವೃತ್ತಿಪರ ವ್ಯವಹಾರಗಳು ಸ್ವಲ್ಪ ಮಟ್ಟಿಗೆ ಪ್ರಗತಿ ಹೊಂದುತ್ತವೆ. ಉದ್ಯೋಗದ ವಾತಾವರಣವು ನಿರುತ್ಸಾಹಗೊಳಿಸುತ್ತದೆ,9980060275 ಕರ್ಕ ರಾಶಿ ನೀವು ಆರ್ಥಿಕವಾಗಿ ಹೆಚ್ಚಿನ…
ಜಾರ್ಖಂಡ್ : ಜಾರ್ಖಂಡ್ನಿಂದ ಒಂದು ನೈಜ ಮತ್ತು ಭಾವನಾತ್ಮಕ ಘಟನೆ ಬೆಳಕಿಗೆ ಬಂದಿದೆ, ಇದು ಲಕ್ಷಾಂತರ ಜನರ ಹೃದಯಗಳನ್ನು ಮುಟ್ಟಿದೆ. ಇಲ್ಲಿ, ಕಾಡು ಆನೆಯೊಂದು ರೈಲ್ವೆ ಹಳಿಯಲ್ಲಿ ತನ್ನ ಮಗುವಿಗೆ ಜನ್ಮ ನೀಡಲು ಪ್ರಾರಂಭಿಸಿದಾಗ, ರೈಲು ಸುಮಾರು ಎರಡು ಗಂಟೆಗಳ ಕಾಲ ನಿಂತಿತ್ತು. ಈ ಘಟನೆ ಕ್ಯಾಮೆರಾದಲ್ಲಿ ಸೆರೆಹಿಡಿಯಲ್ಪಟ್ಟಿತು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವೀಡಿಯೊವನ್ನು ನೋಡಿದ ನಂತರ ಜನರು ಭಾವುಕರಾಗುವುದಲ್ಲದೆ, ಮಾನವೀಯತೆ ಮತ್ತು ಕರುಣೆಯ ಈ ಉದಾಹರಣೆಯನ್ನು ಶ್ಲಾಘಿಸುತ್ತಿದ್ದಾರೆ. ವಾಸ್ತವವಾಗಿ, ಗರ್ಭಿಣಿ ಆನೆಯೊಂದು ಕಾಡಿನಿಂದ ದಾರಿ ತಪ್ಪಿ ರೈಲ್ವೆ ಹಳಿಯ ಬಳಿ ಬಂದಿತ್ತು. ನಂತರ ಅದಕ್ಕೆ ಹೆರಿಗೆ ನೋವು ಶುರುವಾಯಿತು. ಇದನ್ನು ನೋಡಿದ ರೈಲ್ವೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಒಟ್ಟಾಗಿ ರೈಲು ನಿಲ್ಲಿಸಲು ನಿರ್ಧರಿಸಿದರು. ಆನೆ ತನ್ನ ಮಗುವಿಗೆ ಭಯವಿಲ್ಲದೆ ಜನ್ಮ ನೀಡಲು ಸಾಧ್ಯವಾಗುವಂತೆ ಸುಮಾರು ಎರಡು ಗಂಟೆಗಳ ಕಾಲ ರೈಲನ್ನು ನಿಲ್ಲಿಸಲಾಯಿತು. ಈ ಸಮಯದಲ್ಲಿ, ಅಲ್ಲಿದ್ದ ಜನರು ಆನೆಯನ್ನು ದೂರದಿಂದಲೇ ನೋಡಿಕೊಂಡರು ಮತ್ತು ಅದಕ್ಕೆ…
ವಡೋದರಾ: 4 ದಶಕಗಳ ಹಳೆಯ ಸೇತುವೆ ಯೊಂದು ಕುಸಿದ ಪರಿಣಾಮ ವಾಹನ ಸಮೇತ ನದಿಗೆ ಬಿದ್ದ ಇಬ್ಬರು ಮಕ್ಕಳು ಸೇರಿ 18 ಜನರು ಸಾವನ್ನಪ್ಪಿದ ಭೀಕರ ಘಟನೆ ಗುಜರಾತ್ನಲ್ಲಿ ನಡೆದಿದೆ. 3 ವರ್ಷಗಳ ಹಿಂದೆ ಗುಜರಾತ್ನ ಮೋರ್ಬಿಯಲ್ಲಿ ಸೇತುವೆಯೊಂದು ಕುಸಿದು 135 ಜನರು ಸಾವನ್ನಪ್ಪಿದ್ದರು. ಅದರ ಬೆನ್ನ ಲ್ಲೇ ಈ ದುರ್ಘಟನೆ ಸಂಭವಿಸಿದೆ. ಘಟನೆ ಕುರಿತು ರಾಷ್ಟ್ರಪತಿ ದೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿಯಾಗಿ ಗಣ್ಯರು ಕಂಬನಿ ಮಿಡಿದಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳೀಯ ಆಡಳಿತ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಆರಂಭಿಸಲಾಯಿತು. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ವಡೋದರಾ ಜಿಲ್ಲೆಯ ಪದ್ರಾದಲ್ಲಿ ಬೆಳಿಗ್ಗೆ 7.30 ರ ಸುಮಾರಿಗೆ ಸೇತುವೆ ಕುಸಿದಿದೆ. ರಾಜ್ಯ ಹೆದ್ದಾರಿಯ ಉದ್ದಕ್ಕೂ ಮಹಿಸಾಗರ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಈ ಸೇತುವೆ ವಡೋದರಾ ಮತ್ತು ಆನಂದ್ ಅನ್ನು ಸಂಪರ್ಕಿಸುತ್ತದೆ. ಮುಜ್ಪುರ್ ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು, ಎರಡು ಟ್ರಕ್ಗಳು, ಒಂದು ಬೊಲೆರೊ ಜೀಪ್…
ದಾವಣಗೆರೆ : ದಾವಣಗೆರೆಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿದ ರೈಲ್ವೇ ಸೇತುವೆ ಬಳಿ ತಾಯಿ ಮಗಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ಬಳಿ ಇರುವ ತುಂಗಭದ್ರಾ ನದಿ ಸೇತುವೆ ಬಳಿ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳನ್ನ ಗಂಗನರಸಿ ಗ್ರಾಮದ ಸುವರ್ಣಮ್ಮ (65) ಮತ್ತು ಗೌರಮ್ಮ (45) ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆಯರಿಬ್ಬರ ರುಂಡ, ಮುಂಡ ಪ್ರತ್ಯೇಕವಾಗಿದ್ದು, ಅಂಗಾಂಗಗಳು ರಕ್ತಸಿಕ್ತವಾಗಿ ಛಿದ್ರವಾಗಿವೆ. ಫೈನಾನ್ಸ್ ಸಾಲ ಕಟ್ಟಲಾಗದೆ ರೈಲಿಗೆ ತಲೆ ಕೊಟ್ಟು ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೆಲವು ವರ್ಷಗಳ ಹಿಂದೆ ಸುವರ್ಣಮ್ಮ ಅವರ ಪತಿ ನಿಧನರಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಿದ್ದು, ಮತ್ತೊಬ್ಬ ಪುತ್ರಿ ದಿವ್ಯಾಂಗರಾಗಿದ್ದರು. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಿ ವರ್ಷ ಜಾಗತಿಕ ಜನಸಂಖ್ಯಾ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತದೆ. 2025 ರಲ್ಲಿ ವಿಶ್ವದ ಜನಸಂಖ್ಯೆಯು 8.23 ಬಿಲಿಯನ್ ದಾಟುವ ನಿರೀಕ್ಷೆಯಿದೆ. 1989 ರಲ್ಲಿ, ವಿಶ್ವಸಂಸ್ಥೆಯು ಈ ದಿನವನ್ನು ಸ್ಥಾಪಿಸಿತು, ಇದು ಜುಲೈ 11, 1987 ರಂದು ಐದು ಬಿಲಿಯನ್ ತಲುಪಿದ ವಿಶ್ವ ಜನಸಂಖ್ಯೆಯಿಂದ ಪ್ರೇರಿತವಾಗಿದೆ. ವಿಶ್ವ ಜನಸಂಖ್ಯಾ ದಿನ: ಇತಿಹಾಸ ವಿಶ್ವ ಬ್ಯಾಂಕಿನ ಹಿರಿಯ ಜನಸಂಖ್ಯಾಶಾಸ್ತ್ರಜ್ಞ ಡಾ. ಕೆ.ಸಿ. ಜಕಾರಿಯಾ ಅವರು ಜುಲೈ 11, 1987 ರಂದು ವಿಶ್ವ ಜನಸಂಖ್ಯೆಯು 5 ಬಿಲಿಯನ್ ತಲುಪಿದಾಗ ‘ಐದು ಬಿಲಿಯನ್ ದಿನ’ದಿಂದ ಸ್ಫೂರ್ತಿ ಪಡೆದ ನಂತರ, ಈ ಸಂದರ್ಭವನ್ನು ವಿಶ್ವ ಜನಸಂಖ್ಯಾ ದಿನವೆಂದು ಗುರುತಿಸಲು ಪ್ರಸ್ತಾಪಿಸಿದರು. ವಿಶ್ವ ಜನಸಂಖ್ಯಾ ದಿನ: ಮಹತ್ವ ವಿಶ್ವ ಜನಸಂಖ್ಯಾ ದಿನದೊಂದಿಗೆ, ವಿಶ್ವಸಂಸ್ಥೆಯು ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಪರಿಹರಿಸುವ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುವ ಜಾಗತಿಕ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಲು ಬಯಸುತ್ತದೆ. ಕಾಲಕ್ರಮೇಣ, ವಿಶ್ವ ಜನಸಂಖ್ಯಾ ದಿನದ ಗಮನವು…
ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಮರಣ ಹೊಂದಿದವರಿಗೆ ಮತ್ತು ತೀವ್ರ ಗಾಯಗೊಂಡವರಿಗೆ ಪರಿಹಾರ ನೀಡಲು ಅನುಷ್ಠಾನಗೊಳಿಸಲಾಗಿರುವ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಸೂಚನೆ ನೀಡಿದ್ದಾರೆ. ಹಿಟ್ ಅಂಡ್ ರನ್ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶಗಳನ್ವಯ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮೋಟಾರು ವಾಹನಗಳ ಕಾಯಿದೆಯಡಿ ಅಪರಿಚಿತ ವಾಹನ ಡಿಕ್ಕಿಯಾಗಿ ಅಪಘಾತದಲ್ಲಿ ಮರಣ ಹೊಂದಿದ ವಾರಸುದಾರರಿಗೆ ರೂ.2 ಲಕ್ಷಗಳು ಮತ್ತು ತೀವು ಗಾಯಗೊಂಡವರಿಗೆ ರೂ.50.000 ಗಳನ್ನು ಪರಿಹಾರ ನೀಡಲು ಆದೇಶಿಸಲಾಗಿರುತ್ತದ. ಈ ಯೋಜನೆಯಲ್ಲಿ ಸಂತ್ರಸ್ತರು ಸಲ್ಲಿಸಿದ ಅರ್ಜಿ ಮತ್ತು ದಾಖಲೆಗಳನ್ನು ತಹಶೀಲ್ದಾರ ಅಥವಾ ಉಪವಿಭಾಗಾಧಿಕಾರಿಗಳು 30 ದಿನಗಳ ಒಳಗಾಗಿ ಪರಿಶೀಲಿಸಿ ಶಿಫಾರಸ್ಸು ಮಾಡಿ ಪರಿಹಾರದ ಆದೇಶಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕಾಗುತ್ತದೆ ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಪ್ರಸ್ತಾವನೆಯನ್ನು ಪರಿಶೀಲಿಸಿ 15 ದಿನದೊಳಗೆ ಪರಿಹಾರ ಮಂಜೂರಾತಿ…
ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ಯುವ ವಯಸ್ಕರಲ್ಲಿ ಹೆಚ್ಚುತ್ತಿರುವ ಹಠಾತ್ ಸಾವುಗಳನ್ನು ಕುರಿತು ಸಾರ್ವಜನಿಕ ಮತ್ತು ಮಾಧ್ಯಮ ವಲಯದಲ್ಲಿ ವ್ಯಾಪಕ ಆತಂಕ ವ್ಯಕ್ತವಾದ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಔಪಚಾರಿಕ ತನಿಖೆಗೆ ಆದೇಶಿಸಿತ್ತು ಇದೀಗ ಅದರ ಸಂಪೂರ್ಣ ವರದಿ ಬಂದಿದ್ದು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ನಗರದ ಜಯದೇವ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಚಿವರು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರ ನೇತೃತ್ವದಲ್ಲಿ ರಚಿಸಲಾದ ಸಮಿತಿಯು, ಮೇ-ಜೂನ್ 2025ರ ಅವಧಿಯಲ್ಲಿ ಹಾಸನ ಜಿಲ್ಲೆಯಲ್ಲಿ ಸಂಭವಿಸಿದ 24 ಸಾವುಗಳನ್ನು ವಿಶ್ಲೇಷಿಸುವ ಮತ್ತು ಜಿಲ್ಲೆಯಲ್ಲಿ ಹೃದಯ ಸಂಬಂಧಿ ಪ್ರಕರಣಗಳು ಹಾಗೂ ಸಾವುಗಳ ಕುರಿತು ಅಧ್ಯಯನ ಕುರಿತ ವರದಿಯನ್ನು ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಸಚಿವರು ತನಿಖೆಗೆ ಒಳಪಡಿಸಿದ 24 ಸಾವುಗಳಲ್ಲಿ, 14 ಮಂದಿ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದರೆ, 10 ಮಂದಿ 45 ವರ್ಷಕ್ಕಿಂತ…
ಬೆಂಗಳೂರು: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ವೃದ್ಧಿಸುವುದು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಕ್ರಮ ವಹಿಸಿದೆ. ಇದನ್ನು ಸಾಧಿಸುವ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳಲ್ಲಿ ಅನುಸರಿಸಬೇಕಾದ ವಿವಿಧ ಕ್ರಮಗಳ ಬಗ್ಗೆ ಸುತ್ತೋಲೆ ಹೊರಡಿಸಿದೆ. ಈ ಕ್ರಮಗಳನ್ನು ಶಾಲೆಗಳು ಕಡ್ಡಾಯವಾಗಿ ಪಾಲಿಸುವಂತೆಯೂ ಸೂಚಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ವೃದ್ಧಿಗಾಗಿ ರಾಜ್ಯ ಹಾಗು ಜಿಲ್ಲೆಯಲ್ಲಿನ ವಿವಿಧ ಹಂತದ ಅಧಿಕಾರಿಗಳು ಈ ಮುಂದಿನಂತೆ ಕಾರ್ಯನಿರ್ವಹಿಸುವುದು. 1. ಡಿಸೆಂಬರ್-2025 ರ ಅಂತ್ಯದೊಳಗೆ ಪಠ್ಯಕ್ರಮ ಪೂರ್ಣಗೊಳಿಸುವಿಕೆ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಪಠ್ಯವಸ್ತುವನ್ನು ಶೈಕ್ಷಣಿಕ ವಾರ್ಷಿಕ ಮಾರ್ಗಸೂಚಿಯಂತೆ ಡಿಸೆಂಬರ್-2025 ರ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮವಹಿಸುವುದು. 2. ಶಾಲೆಯಲ್ಲಿಯೇ ಪರಿಹಾರ ಬೋಧನೆ: ಶಾಲಾ ವರ್ಷದ ಆರಂಭದಿಂದಲೇ ವಿದ್ಯಾರ್ಥಿಗಳ ಮೂಲಭೂತ ಸಾಮರ್ಥ್ಯಗಳ ಮೌಲ್ಯಮಾಪನ ಮತ್ತು ಸೇತುಬಂಧ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಪರಿಹಾರ ಒದಗಿಸಲು ವಿವಿಧ ಅಭ್ಯಾಸಗಳನ್ನು ಈ ವರ್ಷ ಅಳವಡಿಸಿಕೊಳ್ಳಲಾಗಿದೆ. DSERTಯು 2025ರ ಜೂನ್ನಲ್ಲಿ ಎಲ್ಲಾ ಸರ್ಕಾರಿ…
ನವದೆಹಲಿ: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವ ಉದ್ದೇಶದಿಂದ ಯಾವುದೇ ವಾಟ್ಸಾಪ್ ಗ್ರೂಪ್ ರಚನೆಯಾಗಿದ್ದರೆ ಅದನ್ನು ರ್ಯಾಗಿಂಗ್ ಎಂದು ಪರಿಗಣಿಸಲು ಯುಜಿಸಿ ಸೂಚಿಸಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಾಟ್ಸಾಪ್ ಗುಂಪುಗಳ ಮೂಲಕ ಜೂನಿಯರ್ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದರೆ ಅದನ್ನು ರ್ಯಾ ಗ್ಗಿಂಗ್ ಎಂದು ಪರಿಗಣಿಸಲಾಗುತ್ತದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಹೇಳಿದೆ. ಅಂತಹ ಸಂದರ್ಭಗಳಲ್ಲಿ, ರ್ಯಾ ಗ್ಗಿಂಗ್ ವಿರೋಧಿ ನಿಯಮಗಳ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅನೌಪಚಾರಿಕ ವಾಟ್ಸಾಪ್ ಗುಂಪುಗಳನ್ನು ಮೇಲ್ವಿಚಾರಣೆ ಮಾಡಲು ಯುಜಿಸಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ಅನೇಕ ಸಂದರ್ಭಗಳಲ್ಲಿ ಹಿರಿಯ ವಿದ್ಯಾರ್ಥಿಗಳು ಅನೌಪಚಾರಿಕ ವಾಟ್ಸಾಪ್ ಗುಂಪುಗಳನ್ನು ರಚಿಸುತ್ತಾರೆ, ಜೂನಿಯರ್ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಕಿರುಕುಳ ನೀಡುತ್ತಾರೆ ಎಂದು ಯುಜಿಸಿ ನಿರ್ದೇಶನದಲ್ಲಿ ತಿಳಿಸಿದೆ. ಇದು ರ್ಯಾ ಗ್ಗಿಂಗ್ನಂತೆಯೇ ಇರುತ್ತದೆ ಮತ್ತು ಇದಕ್ಕಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಕ್ಯಾಂಪಸ್ನಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಅತ್ಯಂತ ಮುಖ್ಯ ಎಂದು ಯುಜಿಸಿ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದೆ.…
ಬೆಂಗಳೂರು: ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ. ರಾಜ್ಯದಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ. ಈ ಯೋಜನೆಯಡಿ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ, ವಾರಸುದಾರರಿಗೆ ಮೊಬೈಲ್ ಮೂಲಕ ಪೌತಿ ಖಾತೆಯನ್ನು ನೋಂದಾಯಿಸಲಿದ್ದಾರೆ. ಈ ಪ್ರಕ್ರಿಯೆಯಲ್ಲಿ ಆಧಾರ್ ಸೀಡಿಂಗ್ನ ಮೂಲಕ ಭೂಮಿ ಹಿಡುವಳಿಯ ನಿಖರ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಜಿಲ್ಲೆಯಲ್ಲಿ ಮೃತಪಟ್ಟ 75,000 ಜಮೀನುಗಳ ಮಾಲೀಕರ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಇ-ಪೌತಿ ಆಂದೋಲನವನ್ನು ಆರಂಭಿಸಿದೆ. ಆಧಾರ್ ಜೋಡಣೆಯಿಂದ ಕೃಷಿ…













