Author: kannadanewsnow57

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕರೋನಾ ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆ ಯಾಗಿ, ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಮಹಾಮಾರಿ ಕರೋನಾಗೆ ರಾಜ್ಯದಲ್ಲಿ ಎರಡನೇ ಬಲಿಯಾದಂತಾಗಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆಯು ಟೆಸ್ಟ್ ಕಡ್ಡಾಯಗೊಳಿಸಿದೆ. ರಾಜ್ಯದಲ್ಲಿ ಸದ್ಯ ಕರೋನಾ ಸಕ್ರಿಯ ಪ್ರಕರಣ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. 46 ಮಂದಿ ಹೋಮ್ ಐಸೋಲೇಶನಲ್ಲಿದ್ದು, ಒಬ್ಬರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ 24 ಗಂಟೆಯಲ್ಲಿ 104 ಮಂದಿಯನ್ನು ಕರೋನಾ ಪರೀಕ್ಷೆಗೆ ಒಳಪಡಿಸಿದ್ದು, 9 ಹೊಸ ಪ್ರಕರಣ ದಾಖಲಾಗಿವೆ.  ಕಳೆದ 24 ಗಂಟೆಗಳಲ್ಲಿ ಕೊರೊನಾ ಪಾಸಿಟಿವಿ ದರ ಶೇ.8.65 ನಷ್ಟಿದೆ. ಕೇರಳ ಮತ್ತು ಆಂಧ್ರಪ್ರದೇಶದಲ್ಲೂ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿವೆ. ರಾಜ್ಯದಲ್ಲಿ ಯಾವುದೇ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

Read More

ಬೆಂಗಳೂರು : 2025-26ನೇ ಸಾಲಿಗೆ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸುವ ಸಲುವಾಗಿ ಈ ಕೆಳಕಂಡಂತೆ ಆದೇಶಿಸಲಾಗಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳಿಗಾಗಿ 2025-26ನೇ ಸಾಲಿನ ವರ್ಗಾವಣೆ ಮಾರ್ಗಸೂಚಿಗಳನ್ನು ಸರ್ಕಾರವು ಹೊರಡಿಸಲು ಇಚ್ಚಿಸುತ್ತದೆ. ಈ ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ. 2. ವಿವರಣೆ:-ಈ ಆದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸದ ಹೊರತು,- (1) “ಸಕ್ಷಮ ಪ್ರಾಧಿಕಾರ” ಎಂದರೆ ನೇಮಕಾತಿ ಪ್ರಾಧಿಕಾರ ಅಥವಾ ವರ್ಗಾವಣೆ/ಚಲನವಲನ ಮಾಡಲು ಅಧಿಕಾರ ಹೊಂದಿರುವ ಪ್ರಾಧಿಕಾರ. (2) “ವರ್ಗಾವಣೆ” ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ಥಾನಕ್ಕೆ ಅಥವಾ ಒಂದು ಇಲಾಖೆ/ಕ್ಷೇತ್ರ ಇಲಾಖೆ/ಆಯುಕ್ತಾಲಯ/ನಿರ್ದೇಶನಾಲಯ, ಇತರೆ ಕಛೇರಿಯ ಪ್ರಸ್ತುತ ಇರುವ ಕೇಂದ್ರ ಸ್ನಾನವನ್ನು ಬದಲಾಯಿಸಿ ಬೇರೊಂದು ಕೇಂದ್ರ ಸ್ಥಾನಕ್ಕೆ ಕಛೇರಿಯನ್ನು ಬದಲಾಯಿಸಿದ ಸಂದರ್ಭದಲ್ಲಿ ಮಾಡುವ ಸ್ಥಳ ನಿಯುಕ್ತಿ. (3) “ಚಲನವಲನ” ಎಂದರೆ ನಗರ…

Read More

ಬೆಂಗಳೂರು : ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿಗಳು ಮತ್ತು ರಜಾ ಅವಧಿಗಳನ್ನು ನಿಗದಿಪಡಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಲ್ಲಿದ್ದು, ಮುಂದಿನ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2025 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ. ಪ್ರಯುಕ್ತ ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದ್ದು, ರಾಜ್ಯ…

Read More

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ  ಮೇ.26ರ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಪ್ರಮುಖ ನಿಯಮ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸುವುದು ಕಡ್ಡಾಯವಾಗಿರುತ್ತದೆ. ಸಿಸಿಟಿವಿ ಗಳು ಪರೀಕ್ಷಾ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ಹಾಗೂ ಜಿಲ್ಲಾ ಪಂಚಾಯ್ತಿಯ ಸಿಇಓ ಕಚೇರಿಯಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾನಿಟರ್ ಮಾಡಲಾಗುತ್ತದೆ ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ. ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ…

Read More

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದು ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮುಂದಿನ ಮೂರು ದಿನಕ್ಕೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್, ಮೈಸೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಮುಂಗಾರು ಮಳೆ ಪದಾರ್ಪಣೆಯಾಗಿ ಒಂದೇ ದಿನಕ್ಕೆ ಕರಾವಳಿ, ಮಲೆನಾಡು ಸೇರಿ ಒಳನಾಡಿನ ವಿವಿಧ ಜಿಲ್ಲೆಗಳನ್ನು ಪ್ರವೇಶಿಸಿದ್ದು, ಉತ್ತಮ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನಿನ್ನೆ ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ ಸೇರಿ ಮೊದಲಾದ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಮುಂಗಾರು ಮಾರುತಗಳು ಪ್ರಬಲವಾಗಿರುವುದರಿಂದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಮೇ.29 2025-26ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷ ಹಾಗೂ ತರಗತಿ ಚಟುವಟಿಕೆಗಳು ಆರಂಭವಾಗಲಿವೆ. ಮೇ 29 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವದ ಮೂಲಕ ಮಕ್ಕಳನ್ನು ಸ್ವಾಗತಿಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ. ಶಾಲೆ ಆರಂಭದ  ದಿನದಿಂದಲೇ ಮಕ್ಕಳ ದಾಖಲಾತಿ ಪ್ರಕ್ರಿಯೆ ಆರಂಭಿಸಿ ಜೂ.30ರೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ಪುಯುಕ್ತ ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತ ನಿಗದಿಪಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ತಿಳಿಸಿದೆ. ಮೊದಲನೇ ಅವಧಿ – ದಿನಾಂಕ: 29-05-2025 ರಿಂದ ದಿನಾಂಕ: 19-09-2025 ರವರೆಗೆ ಎರಡನೇ ಅವಧಿ – ದಿನಾಂಕ: 08-10-2025 ರಿಂದ…

Read More

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ  ಮೇ.26ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಪ್ರಮುಖ ನಿಯಮ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸುವುದು ಕಡ್ಡಾಯವಾಗಿರುತ್ತದೆ. ಸಿಸಿಟಿವಿ ಗಳು ಪರೀಕ್ಷಾ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ಹಾಗೂ ಜಿಲ್ಲಾ ಪಂಚಾಯ್ತಿಯ ಸಿಇಓ ಕಚೇರಿಯಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾನಿಟರ್ ಮಾಡಲಾಗುತ್ತದೆ ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ. ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ…

Read More

ಮೊರಾದಾಬಾದ್ : ಮದುವೆಯಾದ ಕೇವಲ ನಾಲ್ಕು ತಿಂಗಳ ನಂತರ, ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ 22 ವರ್ಷದ ಅಮ್ರೀನ್ ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ತನ್ನ ಮಾವ ಮತ್ತು ಅತ್ತಿಗೆಯನ್ನು ದೂಷಿಸುವ ವೀಡಿಯೊವನ್ನು ರೆಕಾರ್ಡ್ ಮಾಡಿದ ನಂತರ, ಅವರು ಕೋಣೆಯಲ್ಲಿ ನೇಣು ಹಾಕಿಕೊಂಡರು. 35 ಸೆಕೆಂಡುಗಳ ಕ್ಲಿಪ್ ಕಾಣಿಸಿಕೊಂಡಿದ್ದು, ಅದರಲ್ಲಿ ಸಂತ್ರಸ್ತೆ ತನ್ನ ಪತಿ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದಾಗ ತನ್ನ ಮಾವ ಮತ್ತು ಅತ್ತಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾಳೆ. ತನ್ನ ಸಾವಿಗೆ ಕೆಲವು ಕ್ಷಣಗಳ ಮೊದಲು ಅವಳು ತನ್ನ ತಂದೆಗೆ ವೀಡಿಯೊ ಕರೆ ಮಾಡಿ, ದೌರ್ಜನ್ಯದ ಬಗ್ಗೆ ತಿಳಿಸಿದಳು, ಆದರೆ ಅವರು ಬರುವ ಹೊತ್ತಿಗೆ, ಅವಳು ಈಗಾಗಲೇ ಸಾವನ್ನಪ್ಪಿದ್ದಳು. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಔಪಚಾರಿಕ ದೂರಿಗಾಗಿ ಕಾಯುತ್ತಿದ್ದಾರೆ. https://twitter.com/priyarajputlive/status/1926518375699657173?ref_src=twsrc%5Etfw%7Ctwcamp%5Etweetembed%7Ctwterm%5E1926518375699657173%7Ctwgr%5E3408c9d3ba7181bccfeb4dfa44b79ced4478b030%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fenglish%2Flatestly-epaper-dh91bfc27fb6cf46a58e6b6df12965bd61%2Fmoradabadwomandiesbysuicideblamesinlawsinfinalvideobeforehangingherselfinuttarpradesh-newsid-n665729599

Read More

ಬೆಂಗಳೂರು : ಜನರಿಗೆ ಸುಗಮ ಆಡಳಿತ ನೀಡುವ ಭಾಗವಾಗಿ ಜೂನ್ 1 ರಿಂದ ನೋಂದಣಿ ಕಚೇರಿಗಳು ಶನಿವಾರ-ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರಾದ ಕೆ.ಎ. ದಯಾನಂದ ಈ ಬಗ್ಗೆ ಮಾಹಿತಿ ನೀಡಿದ್ದು, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಜೂನ್ 1ರಿಂದಲೇ ರಜಾ ದಿನಗಳಲ್ಲಿಯೂ ಸಬ್ ರಿಜಿಸ್ಟರ್ ಕಚೇರಿಗಳನ್ನು ತೆರೆಯಲು ನಿರ್ಧರಿಸಿವೆ. ರಾಜ್ಯದ ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಯಲ್ಲಿ ಬರುವ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಒಂದು ಕಚೇರಿ ಮಾತ್ರ ಕಾರ್ಯನಿರ್ವಹಿಸಲಿದೆ. ಪ್ರತಿ ಸಬ್ ರಿಜಿಸ್ಟ್ರಾರ್ ಕಚೇರಿಗಳು ಸರದಿ ಆಧಾರದ ಮೇಲೆ ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರ ರಜಾ ದಿನದಂದು ಕಾರ್ಯ ನಿರ್ವಹಿಸಬೇಕು.ರಜಾ ದಿನ ಕಾರ್ಯನಿರ್ವಹಿಸಿದ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿ, ಸಿಬ್ಬಂದಿಗೆ ಮಂಗಳವಾರ ರಜಾ ದಿನವೆಂದು ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿರುವ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳ ರಜಾ ದಿನ ಕರ್ತವ್ಯ ನಿರ್ವಹಿಸುವ ವೇಳಾಪಟ್ಟಿಯನ್ನು ಕಾವೇರಿ 2.0 ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಏನಾದರೂ…

Read More

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನಧಿಕೃತ ವಸತಿ, ವಾಣಿಜ್ಯ ಕಟ್ಟಡ ನಿರ್ಮಾಣ ನಿರ್ಬಂಧಿಸಲು ಮಾರ್ಗಸೂಚಿ ಹೊರಡಿಸಿ ರುವ ರಾಜ್ಯ ಸರಕಾರವು, ಸಾರ್ವಜನಿಕ ಆಸ್ತಿಗಳಲ್ಲಿ ಅನಧಿಕೃತವಾಗಿ ನಿರ್ಮಿಸಿದ ಕಟ್ಟಡಗಳ ನೆಲಸಮಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹಾಗೂ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದ್ದವರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರ, ಸಾರ್ವಜನಿಕ ಸ್ವತ್ತಿನ ಹಾಗೂ ಕರೆ ಕುಂಟೆ, ಕಾಲುವೆ ಮತ್ತಿತರ ಸಾರ್ವಜನಿಕ ಹಿತಾಸಕ್ತಿಯುಳ್ಳ ಸ್ವತ್ತಿನಲ್ಲಿ ನಿರ್ಮಾಣ ಮಾಡಿರುವಂತ ಕಟ್ಟಡ ನೆಲ ಸಮಗೊಳಿಸಲು ಎಲ್ಲಾ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿಗಳಿಗೆ ಸೂಚಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಉಲ್ಲೇಖಿತ (1)ರ ಟಿಪ್ಪಣಿಯೊಡನೆ ಲಗತ್ತಿಸಿರುವ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಉಲ್ಲೇಖ (2) ರಲ್ಲಿನ ತೀರ್ಪಿನಲ್ಲಿ, ಅನಧಿಕೃತವಾಗಿ ನಿರ್ಮಿಸುತ್ತಿರುವ ಹಾಗೂ ಕಟ್ಟಡ ನಿರ್ಮಾಣದ ನಿಯಮಗಳನ್ನು ಉಲ್ಲಂಘಿಸಿ, ನಿರ್ಮಿಸುತ್ತಿರುವ…

Read More