Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಜುಲೈ 9, 2025 ರಂದು, ಭೂಮಿಯು ಸಾಮಾನ್ಯ ದಿನಗಳಿಗಿಂತ 1.3 ರಿಂದ 1.51 ಮಿಲಿಸೆಕೆಂಡ್ಗಳಷ್ಟು ಮುಂಚಿತವಾಗಿ ತನ್ನ ಅಕ್ಷದ ಮೇಲೆ ಪೂರ್ಣ ತಿರುಗುವಿಕೆಯನ್ನು ಪೂರ್ಣಗೊಳಿಸಿತು. ವಿಜ್ಞಾನಿಗಳ ಪ್ರಕಾರ, ಇದನ್ನು ಇದುವರೆಗಿನ ಅತ್ಯಂತ ಕಡಿಮೆ ದಿನವೆಂದು ಪರಿಗಣಿಸಬಹುದು. ಜುಲೈ 22 ಮತ್ತು ಆಗಸ್ಟ್ 5 ರಂದು ಇದೇ ರೀತಿಯ ಏನಾದರೂ ಸಂಭವಿಸುವ ಸಾಧ್ಯತೆಯಿದೆ, ಆಗ ಭೂಮಿಯು ಮತ್ತೆ ಸಮಯಕ್ಕಿಂತ ಮುಂಚಿತವಾಗಿ ತನ್ನ ತಿರುಗುವಿಕೆಯನ್ನು ಪೂರ್ಣಗೊಳಿಸುತ್ತದೆ. ಜುಲೈ 5, 2024 ರಂದು, ಭೂಮಿಯು 1.66 ಮಿಲಿಸೆಕೆಂಡ್ಗಳ ಮುಂಚಿತವಾಗಿ ತನ್ನ ತಿರುಗುವಿಕೆಯನ್ನು ಪೂರ್ಣಗೊಳಿಸಿತ್ತು. ಭೂಮಿಯು ಸಾಮಾನ್ಯವಾಗಿ 24 ಗಂಟೆಗಳಲ್ಲಿ ಅಂದರೆ 86400 ಸೆಕೆಂಡುಗಳಲ್ಲಿ ತನ್ನ ಅಕ್ಷದ ಮೇಲೆ ಒಂದು ತಿರುಗುವಿಕೆಯನ್ನು ಪೂರ್ಣಗೊಳಿಸುತ್ತದೆ, ಇದನ್ನು ಒಂದು ದಿನ ಎಂದು ಕರೆಯಲಾಗುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಭೂಮಿಯ ವೇಗವು ಸ್ಥಿರವಾಗಿರುವುದಿಲ್ಲ ಎಂದು ವಿಜ್ಞಾನಿಗಳು ಗಮನಿಸಿದ್ದಾರೆ. ಈ ವೇಗವು ಸೂರ್ಯ ಮತ್ತು ಚಂದ್ರನ ಸ್ಥಾನ, ಕಾಂತಕ್ಷೇತ್ರದಲ್ಲಿನ ಬದಲಾವಣೆಗಳು, ಧ್ರುವಗಳಲ್ಲಿ ಮಂಜುಗಡ್ಡೆಯ ಕರಗುವಿಕೆ ಮತ್ತು ಸಮುದ್ರ ಮಟ್ಟದಂತಹ ಹಲವು…
ನವದೆಹಲಿ : ಭಾರತದಲ್ಲಿ ಹೈ-ಸ್ಪೀಡ್ ಸ್ಯಾಟಲೈಟ್ ಇಂಟರ್ನೆಟ್ ಕ್ಷೇತ್ರದಲ್ಲಿ ಒಂದು ದೊಡ್ಡ ಆರಂಭ ಸಂಭವಿಸಲಿದೆ. ಎಲಾನ್ ಮಸ್ಕ್ ಅವರ ಕಂಪನಿ ಸ್ಟಾರ್ಲಿಂಕ್ ಅಂತಿಮವಾಗಿ ಭಾರತದಲ್ಲಿ ವಾಣಿಜ್ಯ ಉಡಾವಣೆಗೆ ಅಂತಿಮ ನಿಯಂತ್ರಕ ಅನುಮೋದನೆಯನ್ನು ಪಡೆದುಕೊಂಡಿದೆ. ರಾಯಿಟರ್ಸ್ ವರದಿಯ ಪ್ರಕಾರ, ಭಾರತದ ಬಾಹ್ಯಾಕಾಶ ಇಲಾಖೆ ಈಗ ಸ್ಟಾರ್ಲಿಂಕ್ಗೆ ತನ್ನ ಅನುಮೋದನೆಯನ್ನು ನೀಡಿದೆ, ಇದು ಈ ಅಮೇರಿಕನ್ ಸ್ಯಾಟಲೈಟ್ ಬ್ರಾಡ್ಬ್ಯಾಂಡ್ ಕಂಪನಿಗೆ ಕೊನೆಯ ಅಡಚಣೆಯಾಗಿತ್ತು. ಸ್ಟಾರ್ಲಿಂಕ್ ಭಾರತದಲ್ಲಿ ತನ್ನ ಸೇವೆಗಳನ್ನು ಪ್ರಾರಂಭಿಸಲು 2022 ರಿಂದ ಪರವಾನಗಿಗಾಗಿ ಕಾಯುತ್ತಿತ್ತು. ಕಳೆದ ತಿಂಗಳಷ್ಟೇ, ಕಂಪನಿಯು ಭಾರತದ ಟೆಲಿಕಾಂ ಸಚಿವಾಲಯದಿಂದ ಪ್ರಮುಖ ಪರವಾನಗಿಯನ್ನು ಪಡೆದುಕೊಂಡಿತು, ಆದರೆ ಅದನ್ನು ಪ್ರಾರಂಭಿಸಲು ಬಾಹ್ಯಾಕಾಶ ಇಲಾಖೆಯ ಅನುಮೋದನೆ ಬಾಕಿ ಇತ್ತು, ಅದನ್ನು ಈಗ ಸ್ವೀಕರಿಸಲಾಗಿದೆ. ಸ್ಟಾರ್ಲಿಂಕ್ ಮೂರನೇ ಕಂಪನಿಯಾಗಿದೆ ಸ್ಟಾರ್ಲಿಂಕ್ ಭಾರತದಲ್ಲಿ ಸ್ಯಾಟಲೈಟ್ ಇಂಟರ್ನೆಟ್ ಸೇವೆಗೆ ಅನುಮೋದನೆ ಪಡೆದ ಮೂರನೇ ಕಂಪನಿಯಾಗಿದೆ. ಈ ಹಿಂದೆ, ಭಾರತ ಸರ್ಕಾರ ರಿಲಯನ್ಸ್ ಜಿಯೋ ಮತ್ತು ಒನ್ವೆಬ್ (ಯೂಟೆಲ್ಸ್ಯಾಟ್) ಗೆ ಅನುಮೋದನೆ ನೀಡಿತ್ತು. ಈಗ ಸ್ಟಾರ್ಲಿಂಕ್ ಆಗಮನದೊಂದಿಗೆ, ಈ…
ಮೈಸೂರು: ಸಿದ್ದರಾಮಯ್ಯ ಅವರು ರಾಷ್ಟ್ರರಾಜಕಾರಣಕ್ಕೆ ಹೋಗಲ್ಲ. 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ರಾಷ್ಟ್ರರಾಜಕಾರಣಕ್ಕೆ ಹೋಗುವುಇದಲ್ಲ. 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ. ಸಿಎಂ ಬದಲಾವಣೆ ಚರ್ಚೆ ಹೈಕಮಾಂಡ್ ಮುಂದೆ ನಡೆದಿಲ್ಲ ಎಂದು ತಿಳಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿ ಎಂದು ರಂಭಾಪುರಿ ಶ್ರೀಗಳು ಹೇಳಿರುವುದು ತಪ್ಪಲ್ಲ. ಸಿಎಂ ಸ್ಥಾನದ ಬಗ್ಗೆ ನಿರ್ಧಾರ ಮಾಡುವುದು ಹೈಕಮಾಂಡ್, ನನ್ನ ಪ್ರಕಾರ 5 ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೆ ಎಂದರು.
ಮಂಡ್ಯ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಶಾಲಾ ವಿದ್ಯಾರ್ಥಿನಿ ಮೇಲೆ ವೃದ್ಧ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಮದ್ದೂರು ತಾಲೂಕಿನ ತೈಲೂರು ಗ್ರಾಮದಲ್ಲಿ ನಡೆದಿದೆ. ಕಳೆದ ಸೋಮವಾರ ನಡೆದಿರುವುದು ಬೆಳಕಿಗೆ ಬಂದಿದ್ದು, ಘಟನೆ ಸಂಬಂಧ ಮಂಡ್ಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ನೀಡಿದ ದೂರಿನ ಅನ್ವಯ ಗ್ರಾಮದ ಟಿ.ಜಿ.ರಾಮಯ್ಯನ ವಿರುದ್ಧ ಮದ್ದೂರು ಪೊಲೀಸರು ಪೋಕ್ಸೋ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. 65 ವರ್ಷದ ರಾಮಯ್ಯ ತೈಲೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದ 11 ವರ್ಷದ ಬಾಲಕಿಯನ್ನು ಆಕೆಯ ಪೋಷಕರು ಕೂಲಿ ಕೆಲಸಕ್ಕೆ ಹೋದಾಗ ಮನೆಗೆ ಎತ್ತಿಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದ್ದು, ಘಟನೆ ಸಂಬಂಧ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮಹಜರು ನಡೆಸಿದ್ದಾರೆ.
ಅತ್ಯಂತ ಶಕ್ತಿಶಾಲಿ ಗುರು ಪೂರ್ಣಿಮೆ ಪೂಜೆ ಗುರುವನ್ನು ನೋಡುವುದರಿಂದ ಕೋಟ್ಯಂತರ ಲಾಭವಾಗುತ್ತದೆ ಎಂದು ಹೇಳಲಾಗುತ್ತದೆ. ಇಂದು ಗುರು ಪೂರ್ಣಿಮೆ. ಪ್ರತಿ ವರ್ಷ ಗುರು ಪೂರ್ಣಿಮೆ ಬರುತ್ತದೆ. ಇಂದು ಎಂತಹ ಶಕ್ತಿಶಾಲಿ ಗುರು ಪೂರ್ಣಿಮೆ. ಗುರು ಪೂರ್ಣಿಮೆ ಗುರುವಾರ ಬರುತ್ತದೆ ಎಂದು ಹೇಳಲಾಗುತ್ತದೆ, ಇದು ಗುರುಗಳಿಗೆ ಶುಭ ದಿನ, ಇದು ತುಂಬಾ ವಿಶೇಷವಾಗಿದೆ. ಈ ದಿನ, ನಾವು ಗುರುಗಳಿಗೆ ಧನ್ಯವಾದ ಹೇಳಲು ಮತ್ತು ಗುರುಗಳನ್ನು ಪೂಜಿಸಲು ಎಂದಿಗೂ ಮರೆಯಬಾರದು. ಈ ಗುರು ಪೂರ್ಣಿಮೆಯನ್ನು ವೇದವ್ಯಾಸರ ಜನ್ಮದಿನವೆಂದು ಆಚರಿಸಲಾಗುತ್ತದೆ. ಇದು ನಮ್ಮ ಹಿಂದೂ ಧರ್ಮದಲ್ಲಿ ಮಾತ್ರವಲ್ಲ. ಬೌದ್ಧರು ಮತ್ತು ಜೈನರು ಸಹ ಈ ಬುದ್ಧ ಪೂರ್ಣಿಮೆಯನ್ನು ಆಚರಿಸುತ್ತಾರೆ ಮತ್ತು ಆನಂದಿಸುತ್ತಾರೆ ಎಂಬುದು ಗಮನಾರ್ಹ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ.…
ಚಿತ್ರದುರ್ಗ : ಕಡಿಮೆ ಬೆಲೆಗೆ ಚಿನ್ನ ಸಿಗುತ್ತೆ ಅಂತ ಕೊಳ್ಳುವ ಮುನ್ನ ಎಚ್ಚರವಾಗಿರಿ, ನಕಲಿ ಚಿನ್ನ ನೀಡಿ ಬರೋಬ್ಬರಿ 35 ಲಕ್ಷ ರೂ. ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ತಮಿಳುನಾಡು ಮೂಲದ ಕೆ.ಪಾಂಡಿ ಎಂಬುವರಿಗೆ 2ಕೆಜಿ ಚಿನ್ನ ಕೊಡುವುಆಗಿ 35 ಲಕ್ಷ ರೂ. ಪಡೆದು, ನಕಲಿ ಚಿನ್ನ ನೀಡಿ ವಂಚಿಸಿ ಪರಾರಿಯಾಗಿದ್ದರು, ಇದೀಗ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ದಾವಣಗೆರೆ ಮೂಲದ ರಮೇಶ್ ಹಾಗೂ ವಿಜಯನಗರ ಮೂಲದ ರಾಮಕೃಷ್ಣ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಡಿಕೇರಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಹಠಾತ್ ಹೃದಯಾಘಾತದಿಂದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ಹೃದಯಾಘಾತದಿಂದ ಮಹಿಳೆ ಸಾವನ್ನಪ್ಪಿದ್ದಾರೆ. ಹಠಾತ್ ಹೃದಯಾಘಾತದಿಂದ ಸುಮಾ (58) ಮೃತಪಟ್ಟಿದ್ದಾರೆ. ಸುಮಾ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇದ್ದಿಲ್ಲ. ಆದರೆ ಹಠಾತ್ ಹೃದಯಘಾತದಿಂದ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಮಹಿಳೆ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ದೊಡ್ಡ ನಾಗಮಂಗಲದ ಸಾಯಿ ಲೇಔಟ್ ನಲ್ಲಿ ಈ ಕೃತ್ಯ ನಡೆದಿದ್ದು, ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳು ನಂತರ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಹಣ ಪಡೆದ ಕಾಮುಕರು ಮನೆಯಲ್ಲಿದ್ದ ಫ್ರಿಡ್ಜ್ ಹಾಗೂ ವಾಷಿಂಗ್ ಮಷಿನ್, ಎರಡು ಮೊಬೈಲ್ ಸೇರಿದಂತೆ ಮನೆಯಲ್ಲಿದ್ದ ಪೀಠೋಪಕರಣ ದೋಚಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ಧಾರೆ. ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋಗೆ ಅನುಮತಿ ನೀಡುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಲಾಗಿತ್ತು. ಈ ಮನವಿಗೆ ಸಕಾರಾತ್ಮಕವಾಗಿಯೇ ಪ್ರತಿಸ್ಪಂದಿಸಿರುವಂತ ರಾಜನಾಥ್ ಸಿಂಗ್ ಅವರು, ದಸರಾ ಏರ್ ಶೋಗೆ ಒಪ್ಪಿಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ. ಬುಧವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಎಂ.ಬಿ ಪಾಟೀಲ್ ಅವರನ್ನೊಳಗೊಂಡು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ರಕ್ಷಣಾ ಇಲಾಖೆಯ ವಿವಿಧ ವಿಚಾರಗಳ ಕುರಿತಂತೆ ಚರ್ಚಿಸಲಾಯಿತು. ಇನ್ನೂ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಅನುಮತಿ ನೀಡುವಂತೆಯೂ ಮನವಿ ಮಾಡಲಾಯಿತು. ಈ ಮನವಿಗೆ ಸಕಾರಾತ್ಮಕವಾಗಿಯೇ ಸ್ಪಂದಿಸಿರುವಂತ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ದಸರಾದಲ್ಲಿ ಏರ್ ಶೋಗೆ ಗ್ರೀನ್ ಸಿಗ್ನಲ್ ನೀಡಿರುವುದಾಗಿ ತಿಳಿದು ಬಂದಿದೆ.
ಹಾಸನ : ಹಾಸನದಲ್ಲಿ ಡಬರ್ ಮರ್ಡರ್ ನಡೆದಿದ್ದು ಆಸ್ತಿ ವಿಚಾರಕ್ಕೆ ಸಹೋದರನೇ ತಂದೆ, ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹೊಳೆನರಸೀಪುರದಲ್ಲಿ ನಡೆದಿದೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಅಣ್ಣ, ತಮ್ಮ ಹಾಗೂ ತಂದೆಯ ನಡುವೆ ಗಲಾಟೆ ನಡೆದಿದೆ. ನಂತರ ಗಲಾಟೆ ತಾರಕಕ್ಕೇರಿ ತಂದೆ ಹಾಗೂ ಅಣ್ಣನನ್ನೇ ತಮ್ಮ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ತಂದೆ ದೇವೇಗೌಡ ಹಾಗೂ ಅಣ್ಣ ಮಂಜುನಾಥ್ ನನ್ನು ಮೋಹನ್ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.












