Subscribe to Updates
Get the latest creative news from FooBar about art, design and business.
Author: kannadanewsnow57
ಮೈಸೂರು : ರಾಜ್ಯದಲ್ಲಿ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದ್ದು, ಈಗಾಗಲೇ ಹಲವು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಸಾಮಾಜಿಕವಾಗಿ ಮಾದರಿಯಾಗಿದ್ದಾರೆ. ಆದರೆ ಇದೀಗ ಮೂರು ತಿಂಗಳಿಗೊಮ್ಮೆ ಗ್ರಹಲಕ್ಷ್ಮಿ ಹಣ ಹಾಕುತ್ತೇವೆ ಪ್ರತಿ ತಿಂಗಳು ಹಾಕೋಕೆ ಕೆಲವು ತೊಡಕುಗಳಿವೆ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್ಎಂ ರೇವಣ್ಣ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ. ಜಿಎಸ್ಟಿ ವಿಚಾರದಲ್ಲಿ 1 ಲಕ್ಷ 20 ಸಾವಿರ ಜನರಿಗೆ ಹಣ ಹೋಗಿರಲಿಲ್ಲ. ಅದರಲ್ಲಿ ಈಗ 58 ಸಾವಿರ ಜನರ ಸಮಸ್ಯೆಯನ್ನ ಬಗೆಹರಿಸಿದ್ದೇವೆ. ಉಳಿದ ಜನರ ಸಮಸ್ಯೆ ಬಗೆ ಹರಿಸುತ್ತೇವೆ.ನಾವು ಅಧಿಕಾರಕ್ಕೆ ಬಂದಾಗಿನಿಂದ ಗೃಹಲಕ್ಷ್ಮಿ ಹಣ ನಿಲ್ಲಿಸಿಲ್ಲ. ಪ್ರತಿ ತಿಂಗಳು ಹಣ ಕೊಡೋದಕ್ಕೆ ಕೆಲವು ತೊಡಕುಗಳಿವೆ ಎಂದರು. ಹೀಗಾಗಿ ಪ್ರತಿ ತಿಂಗಳು ಹಣ ಕೊಡಲು ಆಗುತ್ತಿಲ್ಲ ಎನ್ನುವ ಮೂಲಕ ಪ್ರತಿ ತಿಂಗಳ ಗೃಹಲಕ್ಷ್ಮಿ ಹಣ ಕೊಡಲು ಆಗಲ್ಲ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ರಾಜ್ಯದ…
ಹೊಸ ಔಷಧಿಗಳಿಂದಾಗಿ ಏಡ್ಸ್ ವಿರುದ್ಧದ ಹೋರಾಟದಲ್ಲಿ ಜಗತ್ತು ಗೆಲುವಿನ ಸಮೀಪದಲ್ಲಿದೆ ಎಂದು ತೋರುತ್ತಿದ್ದರೂ, ಅಮೆರಿಕದ ಹಠಾತ್ ನಿರ್ಧಾರವು ಎಲ್ಲಾ ಭರವಸೆಗಳನ್ನು ಹುಸಿಗೊಳಿಸಿದೆ. ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾದ ನಂತರ, ಅಮೆರಿಕವು ಎಚ್ಐವಿ ಕಾರ್ಯಕ್ರಮಗಳಿಗೆ ನೀಡಲಾಗುತ್ತಿದ್ದ ಅಂತರರಾಷ್ಟ್ರೀಯ ನೆರವನ್ನು ನಿಲ್ಲಿಸಿದೆ. ಅಮೆರಿಕದ ಈ ಹಣವನ್ನು ಸರಿದೂಗಿಸದಿದ್ದರೆ, 2029 ರ ವೇಳೆಗೆ ಅಂದರೆ ಮುಂದಿನ 4 ವರ್ಷಗಳಲ್ಲಿ, 40 ಲಕ್ಷ ಜನರು ಸಾಯಬಹುದು ಮತ್ತು 60 ಲಕ್ಷಕ್ಕೂ ಹೆಚ್ಚು ಹೊಸ ಸೋಂಕಿನ ಪ್ರಕರಣಗಳು ವರದಿಯಾಗಬಹುದು ಎಂದು ವಿಶ್ವಸಂಸ್ಥೆಯ ಸಂಸ್ಥೆ UNAIDS ಎಚ್ಚರಿಸಿದೆ. 2003 ರಲ್ಲಿ, ಆಗಿನ ಅಮೆರಿಕ ಅಧ್ಯಕ್ಷ ಜಾರ್ಜ್ ಬುಷ್ PEPFAR ಕಾರ್ಯಕ್ರಮವನ್ನು (ಏಡ್ಸ್ ಪರಿಹಾರಕ್ಕಾಗಿ ಅಧ್ಯಕ್ಷರ ತುರ್ತು ಯೋಜನೆ) ಪ್ರಾರಂಭಿಸಿದರು. ಇದು HIV ವಿರುದ್ಧ ವಿಶ್ವದ ಅತಿದೊಡ್ಡ ವಿದೇಶಿ ನೆರವು ಕಾರ್ಯಕ್ರಮವಾಗಿತ್ತು. ಇದು ಇಲ್ಲಿಯವರೆಗೆ 8 ಕೋಟಿಗೂ ಹೆಚ್ಚು ಜನರನ್ನು ಪರೀಕ್ಷಿಸಿದೆ ಮತ್ತು 2 ಕೋಟಿಗೂ ಹೆಚ್ಚು ಜನರಿಗೆ ಉಚಿತ ಚಿಕಿತ್ಸೆಯನ್ನು ಒದಗಿಸಿದೆ. ನೈಜೀರಿಯಾದ ಬಗ್ಗೆ ಹೇಳುವುದಾದರೆ, HIV ಔಷಧಿಗಳ ಬಜೆಟ್ನ 99.9%…
ಬೆಂಗಳೂರು : ಯಾವುದೇ ಮಾನಸಿಕ ಸಮಸ್ಯೆಗಳಿಗೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ. ಟೆಲಿ ಮನಸ್ ಶುಲ್ಕ ರಹಿತ ದೂರವಾಣಿ ಸಂಖ್ಯೆ 14416 ಗೆ ಕರೆ ಮಾಡಿ, ಸಹಾಯ ಪಡೆಯಿರಿ ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ. ಸಂಬಂಧಗಳಲ್ಲಿ ಸಮಸ್ಯೆಗಳು, ನಿದ್ರೆಯಿಲ್ಲದಿರುವುದು, ಆತಂಕ, ಒತ್ತಡ ಅಥವಾ ಭಾವನಾತ್ಮಕ ಏರುಪೇರಾಗುತ್ತಿದೆಯೇ? ಟೆಲಿ-ಮನಸ್ – 14416 ಸಹಾಯವಾಣಿಗೆ ಕರೆ ಮಾಡಿ. ವೃತ್ತಿಪರರಿಂದ ಉಚಿತ ಮಾನಸಿಕ ಆರೋಗ್ಯ ಬೆಂಬಲ. ವೀಡಿಯೊ ಕರೆ ಆಯ್ಕೆಯೂ ಲಭ್ಯವಿದೆ! ಮಾನಸಿಕ ಕಾಯಿಲೆಗಳ ಕುರಿತು ಮಾಹಿತಿಗಳು ದೆವ್ವ ಭೂತಗಳ ಚೇಷ್ಟೆಯಿಂದ, ಮಾಟ ಮಂತ್ರಗಳಿಂದ, ಪೂರ್ವಜನ್ಮದ ಪಾಪಗಳಿಂದ, ಮದ್ದು ಹಾಕುವುದರಿಂದ ಮಾನಸಿಕ ಕಾಯಿಲೆಗಳು ಬರುವುದಿಲ್ಲ. ಮಿದುಳಿನಲ್ಲಿ ಆಗುವ ಕೆಲವು ಬದಲಾವಣೆಗಳು, ಮಿದುಳಿನ ಕಾಯಿಲೆಗಳು, ವಾತಾವರಣದಲ್ಲಿ ಕಂಡು ಬರುವ ತೊಂದರೆಗಳು, ಕಷ್ಟನಷ್ಟಗಳು, ಮೇಲಿಂದ ಮೇಲೆ ಮನಸ್ಸಿಗೆ ಆಗುವ ನೋವು ನಿರಾಶೆಗಳು, ಮದ್ಯಪಾನ ಮತ್ತು ಮಾದಕ ವಸ್ತುಗಳ ಸೇವನೆ ಇವುಗಳಿಂದ ಮಾನಸಿಕ ಕಾಯಿಲೆಗಳು ಬರುತ್ತವೆ. ಮಾನಸಿಕ ಅಸ್ವಸ್ಥರು ತಮ್ಮ ಚಿಕಿತ್ಸೆಗಾಗಿ ಮುಂಚಿತ ನಿರ್ದೇಶನ ನೀಡಬಹುದು ಮತ್ತು…
ದಾವಣಗೆರೆ : ದಾವಣಗೆರೆಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿದ ರೈಲ್ವೇ ಸೇತುವೆ ಬಳಿ ತಾಯಿ ಮಗಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ಬಳಿ ಇರುವ ತುಂಗಭದ್ರಾ ನದಿ ಸೇತುವೆ ಬಳಿ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳನ್ನ ಗಂಗನರಸಿ ಗ್ರಾಮದ ಸುವರ್ಣಮ್ಮ (65) ಮತ್ತು ಗೌರಮ್ಮ (45) ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆಯರಿಬ್ಬರ ರುಂಡ, ಮುಂಡ ಪ್ರತ್ಯೇಕವಾಗಿದ್ದು, ಅಂಗಾಂಗಗಳು ರಕ್ತಸಿಕ್ತವಾಗಿ ಛಿದ್ರವಾಗಿವೆ. ಫೈನಾನ್ಸ್ ಸಾಲ ಕಟ್ಟಲಾಗದೆ ರೈಲಿಗೆ ತಲೆ ಕೊಟ್ಟು ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೆಲವು ವರ್ಷಗಳ ಹಿಂದೆ ಸುವರ್ಣಮ್ಮ ಅವರ ಪತಿ ನಿಧನರಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಿದ್ದು, ಮತ್ತೊಬ್ಬ ಪುತ್ರಿ ದಿವ್ಯಾಂಗರಾಗಿದ್ದರು. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು : ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ರಾಜ್ಯದ ಭಕ್ತರಿಗೆ ಸಿಹಿಸುದ್ದಿ ಸಿಕ್ಕಿದ್ದು, ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ರೈಲು ಸಂಚಾರ ಇಂದಿನಿಂದ ಅರಂಭವಾಗಲಿದೆ. ಇಂದು ಬೆಳಗ್ಗೆ 11 : 30 ಕ್ಕೆ ಕೇಂದ್ರ ರೈಲ್ವೇ ಸಚಿವ ವಿ ಸೋಮಣ್ಣ ಅವರು ಚಿಕ್ಕಮಗಳೂರು-ತಿರುಪತಿ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Weekly Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ. https://twitter.com/VSOMANNA_BJP/status/1938841431210115245?ref_src=twsrc%5Etfw%7Ctwcamp%5Etweetembed%7Ctwterm%5E1938841431210115245%7Ctwgr%5E1dc133d6b2cf81aec5fb6ca7e6f2ef60ba0ca4cb%7Ctwcon%5Es1_&ref_url=https%3A%2F%2Fkannadadunia.com%2Fgood-news-for-devotees-of-tirupati-thimmappa-chikkamagaluru-tirupati-train-service-starts-from-today%2F ರೈಲಿನ ವಿವರ ತಿರುಪತಿ-ಚಿಕ್ಕಮಗಳೂರು (ರೈಲು ಸಂಖ್ಯೆ 17423) : ಈ ರೈಲು ಪ್ರತಿ ಗುರುವಾರ ರಾತ್ರಿ 09.00 ಗಂಟೆಗೆ ತಿರುಪತಿಯಿಂದ ಹೊರಡಲಿದ್ದು ಮರುದಿನ ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಚಿಕ್ಕಮಗಳೂರು ತಲುಪಲಿದೆ. ಚಿಕ್ಕಮಗಳೂರು-ತಿರುಪತಿ (ರೈಲು ಸಂಖ್ಯೆ 17424) : ಈ ರೈಲು…
ಬೆಂಗಳೂರು : ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್’ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳೇ ಓದುತ್ತಿದ್ದಾರೆ. ಎಲ್ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ದೊರೆಯುತ್ತಿದೆ. ಅಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಈ ನಿರ್ಧಾರ ಮಾಡಲಾಗಿದೆ. ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳು ಓದುತ್ತಿದ್ದಾರೆ. ಎಲ್ಕೆಜಿಯಿಂದ ಪಿಯುಸಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಈ ಶಾಲೆಯ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತವಾಗಿ ಬಸ್ ವ್ಯವಸ್ಥೆ ಆರಂಭಿಸಲು ಸರ್ಕಾರ ತೀರ್ಮಾನ ನಿರ್ಧಾರ ಕೈಗೊಂಡಿದೆ. ಯಾವ ಭಾಗದಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಉಚಿತ ಬಸ್ ವ್ಯವಸ್ಥೆಗಳನ್ನು ಮೊದಲು ಕಲ್ಪಿಸಲಾಗುವುದು. https://twitter.com/DKShivakumar/status/1943497975059358197?ref_src=twsrc%5Etfw%7Ctwcamp%5Etweetembed%7Ctwterm%5E1943497975059358197%7Ctwgr%5E8d9928f10b9536d7a8079c43490d024fd15de823%7Ctwcon%5Es1_&ref_url=https%3A%2F%2Fpublictv.in%2Ffree-bus-service-for-government-school-children-karnataka-government-announcement%2F
ಬೆಂಗಳೂರು :ವಿಧಾನ ಪರಿಷತ್ ಮಾಜಿ ಸಭಾಪತಿ, ಅಖಿಲ ಭಾರತ ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ ಎನ್ ತಿಪ್ಪಣ್ಣ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಬಳ್ಳಾರಿಯ ಗಾಂಧಿನಗರದ ನಿವಾಸದಲ್ಲಿ ತಮ್ಮ 98ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಎರಡು ಬಾರಿ ವಿಧಾನ ಪರಿಷತ್ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು. ಜೊತೆಗೆ ಅನುಭವಿ ಹಿರಿಯ ನ್ಯಾಯವಾದಿ, ಸಮಾಜ ಸೇವಕರಾಗಿ ಸಾಕಷ್ಟು ಹೆಸರು ಮಾಡಿದ್ದರು. ಇಂದು ಬಳ್ಳಾರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಶನಿವಾರ ತಿಪ್ಪಣ್ಣ ಅವರ ಸ್ವಗ್ರಾಮ ಚಿತ್ರದುರ್ಗ ಜಿಲ್ಲೆಯ ತುರುವನೂರು ಗ್ರಾಮದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.
ಬಲೂಚಿಸ್ತಾನ್ : ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಶಸ್ತ್ರಸಜ್ಜಿತ ಉಗ್ರರು ಬಸ್ನಲ್ಲಿ ಒಂಬತ್ತು ಪ್ರಯಾಣಿಕರನ್ನು ಅಪಹರಿಸಿ ಕೊಂದಿದ್ದಾರೆ. ಪಾಕಿಸ್ತಾನದ ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳ ಗುಂಪೊಂದು ಒಂಬತ್ತು ಬಸ್ ಪ್ರಯಾಣಿಕರನ್ನು ಅಪಹರಿಸಿ ಕೊಂದಿದೆ ಎಂದು ಅಧಿಕಾರಿಗಳು ಶುಕ್ರವಾರ ದೃಢಪಡಿಸಿದ್ದಾರೆ. ಪ್ರಾಂತೀಯ ಸರ್ಕಾರದ ವಕ್ತಾರ ಶಾಹಿದ್ ರಿಂಡ್ ಅವರ ಪ್ರಕಾರ, ಗುರುವಾರ ಸಂಜೆ ಪ್ರಯಾಣಿಕರನ್ನು ಹಲವಾರು ಬಸ್ಗಳಿಂದ ಅಪಹರಿಸಲಾಗಿದೆ. ನಂತರ ದಾಳಿಕೋರರು ಅವರನ್ನು ಹತ್ತಿರದ ಪರ್ವತ ಪ್ರದೇಶಕ್ಕೆ ಕರೆದೊಯ್ದರು. ಮತ್ತೊಬ್ಬ ಸರ್ಕಾರಿ ಅಧಿಕಾರಿ ನವೀದ್ ಆಲಂ, ಬಲಿಪಶುಗಳ ಶವಗಳು ರಾತ್ರಿಯಿಡೀ ಪತ್ತೆಯಾಗಿವೆ ಎಂದು ಹೇಳಿದರು. “ಗುಂಡಿನ ಗಾಯಗಳೊಂದಿಗೆ ಅವರ ಶವಗಳು ರಾತ್ರಿಯಿಡೀ ಪರ್ವತಗಳಲ್ಲಿ ಪತ್ತೆಯಾಗಿವೆ” ಎಂದು ಅವರು ಹೇಳಿದರು.
ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ…
ಶಿವಮೊಗ್ಗ : ಶಿವಮೊಗ್ಗದಲ್ಲಿ ಮತ್ತೊಂದು ಬರ್ಬರ ಹತ್ಯೆಯಾಗಿದ್ದು, ರಾತ್ರಿ ಪಾರ್ಟಿ ವೇಳೆ ಗಲಾಟೆಯಾಗಿ ಸ್ನೇಹಿತನೆ ಯುವಕನ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಬೊಮ್ಮನಕಟ್ಟೆಯ ಇ-ಬ್ಲಾಕ್ನಲ್ಲಿ ನಡೆದಿದೆ. ಬೊಮ್ಮನಕಟ್ಟೆ ಎ-ಬ್ಲಾಕ್ ನಿವಾಸಿ ಪವನ್ (28) ಕೊಲೆಯಾದ ಯುವಕ. ಪವನ್ ಕಳೆದ ರಾತ್ರಿ ಸ್ನೇಹಿತ ಶಿವಕುಮಾರ್ ಮನೆಯಲ್ಲಿ ಪಾರ್ಟಿಗೆ ತೆರೆಳಿದ್ದ. ಮದ್ಯ ಸೇವಿಸಿದ ಬಳಿಕ ಸ್ನೇಹಿತರ ಮಧ್ಯೆ ಗಲಾಟೆಯಾಗಿದೆ ಎಂದು ಆರೋಪಿಸಲಾಗಿದೆ. ಗಲಾಟೆಯ ವೇಳೆ ಪವನ್ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ಜಿ.ಕೆ. ಮಿಥುನ್ ಕುಮಾರ್, ವಿನೋಬನಗರ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.