Author: kannadanewsnow57

ಶಿವಮೊಗ್ಗ: ರಾಜ್ಯದಲ್ಲಿ ಮತ್ತೊಂದು ಆಘಾತಕಾರಿ ಘಟನೆಯೊಂದು ನಡೆದಿದ್ದು ದೆವ್ವ ಬಿಡಿಸುವುದಾಗಿ ಹೇಳಿ ಚಿತ್ರಹಿಂಸೆ ನೀಡಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಜಂಬರಗಟ್ಟೆಯಲ್ಲಿ ಮಹಿಳೆಗೆ ದೆವ್ವ ಸೇರಿಕೊಂಡಿದ್ದು ಅದನ್ನು ಬೀಡಿಸುವುದಾಗಿ ಹೇಳಿ ಚಿತ್ರಹಿಂಸೆ ನೀಡಿದ್ದಾರೆ. ಈ ವೇಳೆ ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಸಾವನ್ನಪ್ಪಿದ್ದಾರೆ. ಜಂಬರಗಟ್ಟೆ ನಿವಾಸಿ ಗೀತಮ್ಮ (50) ಸಾವನ್ನಪ್ಪಿದ ಮಹಿಳೆ. ತಾಯಿಗೆ ಹುಷಾರಿಲ್ಲದ ಹಿನ್ನೆಲೆ ಮಗನೇ ದೆವ್ವ ಬಿಡಿಸಲು ಹೊಸ ಜಂಬರಘಟ್ಟಕ್ಕೆ ಕರೆದುಕೊಂಡು ಹೋಗಿದ್ದ. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಗೀತಮ್ಮನನ್ನು ದೆವ್ವ ಹಿಡಿದಿದೆ ಎಂದು ಕರೆದುಕೊಂಡು ಹೋಗಿದ್ದ. ಈ ವೇಳೆ ದೆವ್ವಾ ಬಿಡಿಸುತ್ತೇನೆ ಎಂದು ಶಾಂತಮ್ಮ ಎಂಬ ಮಹಿಳೆ ಗೀತಮ್ಮನಿಗೆ ಚಿತ್ರಹಿಂಸೆ ನೀಡಿದ್ದಾಳೆ ಎನ್ನಲಾಗಿದ್ದು, ಚಿತ್ರಹಿಂಸೆ ತಾಳಲಾರದೇ ಗೀತಮ್ಮ ಸಾವನ್ನಪ್ಪಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರಸ್ತುತ ಮಾಸಿಕವಾಗಿ ದಾಖಲಿಸುತ್ತಿರುವ ಸ್ವಯಂ ಘೋಷಣೆಯ ಬದಲಾಗಿ ಇನ್ನು ಮುಂದೆ ಮೂರು ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಸಲ್ಲಿಸಲು ಸೂಚಿಸಲಾಗಿದೆ. ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಅಂತಿಮ ದಿನಾಂಕ ಇರುವುದಿಲ್ಲ. ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಚಾಲನೆಯಲ್ಲಿರುತ್ತದೆ. ಆದಕಾರಣ 2023 ಅಥವಾ 2024ನೇ ಸಾಲಿನಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ತೇರ್ಗಡೆಯಾಗಿ ಅರ್ಜಿ ಸಲ್ಲಿಸದೇ ಇರುವ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ http://sevasindhugs.karnataka.gov.in ನಲ್ಲಿ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಎರಡು ದಿನಗಳ ನಂತರ ಡಿಡಿಪಿಐ ಇಲಾಖೆಯಲಲಿ ಎಸ್‌ಎಸ್‌ಎಲ್‌ಸಿ, ಡಿಡಿಪಿಯು ಇಲಾಖೆಯಲ್ಲಿ ಪಿಯುಸಿ ಮತ್ತು ಡಿಇಇಒ ಇಲಾಖೆಯಲ್ಲಿ ಡಿಪ್ಲೊಮಾ/ಪದವಿ ಮೂಲ ಅಂಕಪಟ್ಟಿಗಳೊAದಿಗೆ ಭೇಟಿ ನೀಡಿ ಪರಿಶೀಲನೆ ಮಾಡಿಕೊಳ್ಳಬೇಕು. ಈ ಮೂರು ಇಲಾಖೆಗಳು ಜಿಲ್ಲಾಡಳಿತ ಭವನದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತವೆ. ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ…

Read More

ಕೊಪ್ಪಳ : ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಬೇಕೆಂಬುದು ನಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು. ಅವರು ಸೋಮವಾರ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿನ ನೂತನ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಕೆಲಸಗಳು ಆಗುತ್ತಿವೆ. ರಾಜ್ಯ ಸರ್ಕಾರ ಮತ್ತು ಅಜೀಮ್ ಪ್ರೇಮಜಿ ಫೌಂಡೇಶನ್ ಸಹಯೋಗದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ ಮತ್ತು ಬಾಳೆ ಹಣ್ಣುಗಳನ್ನು ವಿತರಣೆ ಮಾಡಲಾಗುತ್ತಿದೆ. ಇದರ ಜೊತೆಗೆ ಮಕ್ಕಳಿಗೆ ಬಿಸಿಊಟ, ಹಾಲು, ಪಠ್ಯ ಪುಸ್ತಕ, ಸಮವಸ್ತ್ರದೊಂದಿಗೆ ಶೂಗಳು ಮತ್ತು ಸಾಕ್ಸ್ ಹಾಗೂ ವಿಶೇಷವಾಗಿ ಮಕ್ಕಳ ಪೌಷ್ಠಿಕ ಬೆಳವಣಿಗೆಗೆ ರಾಗಿ ಮಾಲ್ಟ್ ಕೊಡಲಾಗುತ್ತಿದೆ. ಒಂದು ಸಮೀಕ್ಷಾ ವರದಿ ಪ್ರಕಾರ ರಾಜ್ಯದಲ್ಲಿ ಕಳೆದ ಎರಡು ಮೂರು ವರ್ಷಗಳಲ್ಲಿ ಮಕ್ಕಳ ಪೌಷ್ಠಿಕತೆ ಉನ್ನತ ಸ್ಥಾನವನ್ನು ಪಡೆದಿದೆ. ಉತ್ತಮ…

Read More

ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (Unique Identification Authority of India – UIDAI) ಆಧಾರ್ ನೋಂದಣಿ ( Aadhaar registration ) ಮತ್ತು 2025–26ರ ಮೌಲ್ಯಮಾಪನ ವರ್ಷಕ್ಕೆ ಅನ್ವಯವಾಗುವ ಮಾರ್ಪಾಡುಗಳಿಗಾಗಿ ಪರಿಷ್ಕೃತ ಮಾನ್ಯ ದಾಖಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆಧಾರ್ ಸುತ್ತಲಿನ ಪ್ರಮುಖ ನಿಯಮಗಳಲ್ಲಿ ಒಂದೆಂದರೆ, ಪ್ರತಿಯೊಬ್ಬ ವ್ಯಕ್ತಿಯು ಒಂದೇ ಆಧಾರ್ ಸಂಖ್ಯೆಯನ್ನು ಮಾತ್ರ ಹೊಂದಲು ಅನುಮತಿಸಲಾಗಿದೆ. ಒಬ್ಬ ವ್ಯಕ್ತಿಯು ಬಹು ಆಧಾರ್ ಐಡಿಗಳನ್ನು ಪಡೆದಿರುವ ಸಂದರ್ಭಗಳಲ್ಲಿ – ಬಹುಶಃ ವ್ಯವಸ್ಥೆಯ ದೋಷಗಳು ಅಥವಾ ಪುನರಾವರ್ತಿತ ಅರ್ಜಿಗಳಿಂದಾಗಿ – ಬಯೋಮೆಟ್ರಿಕ್ ವಿವರಗಳೊಂದಿಗೆ ರಚಿಸಲಾದ ಮೊದಲ ಆಧಾರ್ ಮಾತ್ರ ಸಕ್ರಿಯ ಮತ್ತು ಮಾನ್ಯವಾಗಿರುತ್ತದೆ. ಹೆಚ್ಚುವರಿಯಾಗಿ, ಆಧಾರ್ ಸೇವೆಗಳಿಗೆ ಸ್ವೀಕಾರಾರ್ಹ ದಾಖಲೆಗಳ ಪಟ್ಟಿಯನ್ನು ಆಧಾರ್ (ದಾಖಲಾತಿ ಮತ್ತು ನವೀಕರಣ) ಮೊದಲ ತಿದ್ದುಪಡಿ ನಿಯಮಗಳು, 2025 ರ ಪ್ರಕಾರ ಪರಿಷ್ಕರಿಸಲಾಗಿದೆ. ನವೀಕರಿಸಿದ ಮಾರ್ಗಸೂಚಿಗಳು ಈಗ ಗುರುತು, ವಿಳಾಸ, ಜನ್ಮ ದಿನಾಂಕ ಮತ್ತು ಕುಟುಂಬ ಸಂಬಂಧಗಳನ್ನು ಪರಿಶೀಲಿಸಲು ಬಳಸಬಹುದಾದ ದಾಖಲೆಗಳ ಪ್ರಕಾರಗಳನ್ನು ಸ್ಪಷ್ಟವಾಗಿ ನಿರ್ದಿಷ್ಟಪಡಿಸುತ್ತವೆ. ಪರಿಶೀಲನೆಗೆ…

Read More

ಬೆಂಗಳೂರು : ಎದೆನೋವು, ಉಸಿರಾಟದ ತೊಂದರೆ, ಒಸಡು ಅಥವಾ ತೋಳಿನಲ್ಲಿ ನೋವು, ಬೆವರುವಿಕೆ ಅಥವಾ ತಲೆತಿರುಗುವಿಕೆಯ ಅನುಭವವಾಗುತ್ತಿದೆಯೇ? ನಿರ್ಲಕ್ಷಿಸದಿರಿ. ತಕ್ಷಣವೇ 108ಕ್ಕೆ ಕರೆ ಮಾಡಿ ಅಥವಾ ಸಮೀಪದ ಆಸ್ಪತ್ರೆಗೆ ತೆರಳಿ, ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ರಾಜ್ಯ ಸರ್ಕಾರ ತಿಳಿಸಿದೆ. ಆಸ್ಪತ್ರೆಯ ಹೊರೆಗೆ ನಡೆಯುವ ಎಲ್ಲ ಹಠಾತ್ ಸಾವುಗಳು ಇನ್ಮುಂದೆ ನೋಟಿಫೈಯಾಗಲಿದ್ದು, ಹೃದಯಾಘಾತಗಳ ಬಗ್ಗೆ ಸಂಶೋಧನೆಗೆ ಹೆಚ್ಚಿನ ಅಂಕಿ ಅಂಶಗಳು ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕೋವಿಡ್ ಅಡ್ಡ ಪರಿಣಾಮಗಳ ಕುರಿತು ತಜ್ಞರ ಸಮಿತಿಯ ವರದಿ ಸ್ವೀಕರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮಧುಮೇಹ, ರಕ್ತದೊತ್ತಡ, ಒಬೆಸಿಟಿ ಹೆಚ್ಚಾಗಿದೆ. ಸ್ಟೀರಾಯ್ಡ್ ಹೆಚ್ಚಿನ ಬಳಕೆಯೂ ಕೂಡ ಕಾರಣವಾಗಿದೆ. ಕೋವಿಡ್ ಪೂರ್ವದಲ್ಲಿ ಜಯದೇವ ಆಸ್ಪತ್ರೆ ಮೆಡಿಕಲ್ ರೆಕಾರ್ಡ್ಸ್ ಗೆ ಹೊಲಿಕೆ ಮಾಡಿ ಕೂಡಾ ವರದಿ ಸಿದ್ಧಪಡಿಸಲಾಗಿದೆ. ಜಯದೇವ ಆಸ್ಪತ್ರೆಯಲ್ಲಿ 253 ಹೃದ್ರೋಗ ರೋಗಿಗಳ ಮೇಲೆ ಅಧ್ಯಯನ ಮಾಡಲಾಗಿದೆ. ಹೃದಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ ಎಂದು ತಿಳಿದುಬಂದಿದೆ. ಎಂಆರ್ ಎನ್…

Read More

ಮೇಷ ರಾಶಿ ದೇವಾಲಯ ಭೇಟಿ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಪ್ರಯಾಣದಲ್ಲಿ ಅಡೆತಡೆಗಳು ಉಂಟಾಗುತ್ತವೆ. ಅಡೆತಡೆಗಳಿದ್ದರೆ ಕೆಲಸಗಳು ನಿಧಾನವಾಗಿ ಪೂರ್ಣಗೊಳ್ಳುತ್ತವೆ. ವಿವಾದಗಳಿಂದ ದೂರವಿರುವುದು ಉತ್ತಮ. ಆರೋಗ್ಯಕ್ಕೆ ಗಮನ ಬೇಕು. ವ್ಯವಹಾರಗಳು ಹೆಚ್ಚು ನಿರುತ್ಸಾಹಗೊಳಿಸುತ್ತವೆ. ಉದ್ಯೋಗಗಳಲ್ಲಿ ಕೆಲಸದ ಒತ್ತಡ ಹೆಚ್ಚಾಗುತ್ತದೆ, ಹೆಚ್ಚಿನ ಮಾಹಿತಿಗಾಗಿ : 9980060275 ಅನಿರುದ್ದ್ ಜೋಶಿ  BSC ಇನ್ astro ವೃಷಭ ರಾಶಿ ದೂರದ ಸಂಬಂಧಿಕರಿಂದ ನಿಮಗೆ ಶುಭ ಸುದ್ದಿ ಸಿಗುತ್ತದೆ. ಕೈಗೊಂಡ ಕೆಲಸದಲ್ಲಿ ಯಾವುದೇ ಅಡೆತಡೆಗಳು ಇರುವುದಿಲ್ಲ. ವೃತ್ತಿಪರ ಉದ್ಯೋಗಗಳಲ್ಲಿ ನೀವು ನಿರೀಕ್ಷೆಗಳನ್ನು ಪೂರೈಸುತ್ತೀರಿ. ವ್ಯವಹಾರಗಳಲ್ಲಿ ನಿಮಗೆ ಸಾಕಷ್ಟು ಲಾಭ ಸಿಗುತ್ತದೆ. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ಸಿಗುತ್ತವೆ, ಹೆಚ್ಚಿನ ಮಾಹಿತಿಗಾಗಿ : 9980060275 ಅನಿರುದ್ದ್ ಜೋಶಿ  BSC ಇನ್ astro ಮಿಥುನ ರಾಶಿ ವ್ಯವಹಾರಗಳು ಸ್ವಲ್ಪ ನಿಧಾನವಾಗಿ ಪ್ರಗತಿ ಹೊಂದುತ್ತವೆ. ನಿರ್ಧಾರಗಳಲ್ಲಿ ಬದಲಾವಣೆಗಳನ್ನು ಮಾಡಲು ನಿಮಗೆ ತೊಂದರೆ ಉಂಟಾಗುತ್ತದೆ. ಉದ್ಯೋಗದಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ. ಆಧ್ಯಾತ್ಮಿಕ ವಿಷಯಗಳತ್ತ ಗಮನಹರಿಸುವುದು ಉತ್ತಮ. ಬಂಧು ಮಿತ್ರರೊಂದಿಗೆ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ. ಪ್ರಯಾಣ…

Read More

ಬೆಂಗಳೂರು : ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳು ತಮ್ಮದೇ ಆದ ಪ್ರತ್ಯೇಕ ಲಾಂಛನವನ್ನು ಅಳವಡಿಸಿಕೊಂಡು ಉಪಯೋಗಿಸಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 6ರಲ್ಲಿ ಪ್ರತಿಯೊಂದು ಗ್ರಾಮ ಪಂಚಾಯತಿಯು ನಿಗಮಿತ ನಿಕಾಯವಾಗಿದ್ದು, ಶಾಶ್ವತ ಉತ್ತರಾಧಿಕಾರವನ್ನು ಹೊಂದಿರುವುದರಿಂದ ಸಾಮಾನ್ಯ ಮೊಹರನ್ನು ಹೊಂದಲು ಅವಕಾಶ ನೀಡಿದೆ ಎಂದು ತಿಳಿಸಿರುವ ಸಚಿವರು ಈ ಸಂಬಂಧ ಇಲಾಖೆಯು ಈಗಾಗಲೆ ಆದೇಶ ಹೊರಡಿಸಿದೆ ಎಂದಿದ್ದಾರೆ. ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು ಮತ್ತು ಸದಸ್ಯರುಗಳು ತಮ್ಮ ಅಧಿಕೃತ ವಿಸಿಟಿಂಗ್ ಕಾರ್ಡ್ ಮೇಲೆ ತಮ್ಮ ಅಧಿಕಾರದ ಅವಧಿಯಲ್ಲಿ ಮಾತ್ರ ಈ ಲಾಂಛನವನ್ನು ಬಳಸಬಹುದಾಗಿದ್ದು, ಮಾಜಿ ಜನ ಪ್ರತಿನಿಧಿಗಳು, ನಿವೃತ್ತ ಅಧಿಕಾರಿಗಳು, ನೌಕರರಿಗೆ ಹಾಗೂ ಇನ್ನಿತರ ಸಂದರ್ಭಗಳಲ್ಲಿ ಬಳಕೆಯ ಮೇಲೆ ಕೆಲವು ನಿರ್ಬಂಧಗಳನ್ನು ಹೇರಲಾಗಿದೆ. ಈ…

Read More

ಬೆಂಗಳೂರು: ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ. ರಾಜ್ಯದಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ. ಈ ಯೋಜನೆಯಡಿ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ, ವಾರಸುದಾರರಿಗೆ ಮೊಬೈಲ್ ಮೂಲಕ ಪೌತಿ ಖಾತೆಯನ್ನು ನೋಂದಾಯಿಸಲಿದ್ದಾರೆ. ಈ ಪ್ರಕ್ರಿಯೆಯಲ್ಲಿ ಆಧಾರ್ ಸೀಡಿಂಗ್‌ನ ಮೂಲಕ ಭೂಮಿ ಹಿಡುವಳಿಯ ನಿಖರ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಜಿಲ್ಲೆಯಲ್ಲಿ ಮೃತಪಟ್ಟ 75,000 ಜಮೀನುಗಳ ಮಾಲೀಕರ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಇ-ಪೌತಿ ಆಂದೋಲನವನ್ನು ಆರಂಭಿಸಿದೆ. ಆಧಾರ್ ಜೋಡಣೆಯಿಂದ ಕೃಷಿ ಭೂಮಿಯ…

Read More

ಬೆಂಗಳೂರು : :ಕರ್ನಾಟಕ ಪಬ್ಲಿಕ್ ಶಾಲೆ, (KPS) ಬೆಂಗಳೂರು ಪಬ್ಲಿಕ್ ಶಾಲೆ (BPS) ಹಾಗೂ ಪಿ ಎಂ ಶ್ರೀ ಶಾಲೆಗಳಲ್ಲಿ ದ್ವಿ-ಭಾಷಾ ಮಾಧ್ಯಮದ (Bilingual Classes)ತರಗತಿಗಳಿಗೆ ಮಕ್ಕಳ ಗರಿಷ್ಟ ದಾಖಲಾತಿ ಮಿತಿಯನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪಬ್ಲಿಕ್ ಶಾಲೆ (KPS) ಬೆಂಗಳೂರು ಪಬ್ಲಿಕ್ ಶಾಲೆ (BPS) ಹಾಗೂ ಪಿ ಎಂ ಶ್ರೀ ಶಾಲೆಗಳಲ್ಲಿ ದ್ವಿ-ಭಾಷಾ ಮಾಧ್ಯಮದ (Bilingual Classes) ತರಗತಿಗಳಿಗೆ ಮಕ್ಕಳ ಗರಿಷ್ಟ ದಾಖಲಾತಿ ಮಿತಿಯನ್ನು ಈ ಕೆಳಕಂಡಂತೆ ಹೆಚ್ಚಿಸಲು ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ಷರತ್ತು ಬದ್ಧವಾಗಿ ಅನುಮತಿಸಿದೆ. ಷರತ್ತುಗಳು 2025-26ನೇ ಶೈಕ್ಷಣಿಕ ಸಾಲಿನಿಂದಲೇ ಮೇಲಿನಂತೆ ಎಲ್ಲಾ ಶಾಲೆಗಳಲ್ಲಿ ದಾಖಲಾತಿ ಹೆಚ್ಚಳದ ಮಿತಿಯ ನಿಯಮಗಳಂತೆ ಅನುಷ್ಠಾನಗೊಳಿಸಲು ಕ್ರಮವಹಿಸ ತಕ್ಕದ್ದು. ಪೂರ್ವ ಪ್ರಾಥಮಿಕ ವಿಭಾಗದ ಪ್ರತಿ ತರಗತಿಯ ಶಿಕ್ಷಕ/ಶಿಕ್ಷಕಿಯ ಜೊತೆ ಒಂದು ಆಯಾ ಕಡ್ಡಾಯವಾಗಿ ಇರತಕ್ಕದ್ದು. ಶಾಲಾ ಆವರಣದಲ್ಲಿ ಲಭ್ಯವಿರುವ ಕಟ್ಟಡಗಳನ್ನು ಹಾಗೂ ಇನ್ನಿತರ ಸಂಪನ್ಮೂಲಗಳನ್ನು ಬಳಸಿಕೊಂಡು ಮಕ್ಕಳ ದಾಖಲಾತಿ ಹಾಗು ವಿದ್ಯಾಭ್ಯಾಸಕ್ಕಾಗಿ…

Read More

ಬೆಂಗಳೂರು : ರಾಜ್ಯಾದ್ಯಂತ ನ್ಯಾಯಬೆಲೆ ಅಂಗಡಿಗೆ ಪಡಿತರ ಆಹಾರಧಾನ್ಯ ಸಾಗಣೆ ಬಾಕಿ 260 ಕೋಟಿ ರು. ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಪಡಿತರ ಸಾಗಣೆ ಸ್ಥಗಿಗೊಳಿಸಿ ಇಂದಿನಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಡಿತರ ವಿತರಣೆ ಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಮುಷ್ಕರ ಘೋಷಿಸಿದರು. ಆಹಾರ ಧಾನ್ಯ ಸಾಗಾಣಿಕೆ ವೆಚ್ಚ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಹಣ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ 15 ದಿನಗಳ ಕಾಲ ಗಡುವು ನೀಡಲಾಗಿತ್ತು. ಯಾವುದೇ ಭರವಸೆ ಈಡೇರಿಸಿದ ಹಿನ್ನೆಲೆಯಲ್ಲಿ ಅನ್ನಭಾಗ್ಯ ಸಾಗಾಣಿಕೆ ಬಂದ್ ಮಾಡಲಾಗಿದೆ ಎಂದು ಹೇಳಿದ್ದಾರೆ. ಹಣ ಬಿಡುಗಡೆ ಮಾಡದ ಸರ್ಕಾರದ ವಿರುದ್ಧ ಪಡಿತರ ಆಹಾರ ಧಾನ್ಯಗಳ ಸಗಟು ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರ ಸಂಘ ತೀವು ಆಕ್ರೋಶ ವ್ಯಕ್ತಪಡಿಸಿದೆ. ಇಂದಿನಿಂದ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣೆ ಬಂದ್ ಮಾಡುವಂತೆ ಷಣ್ಮುಖಪ್ಪ ಕರೆ ನೀಡಿದ್ದಾರೆ. ಬಾಕಿ…

Read More