Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳ ಗೋಡೆಗಳ ಮಕ್ಕಳ ಸಹಾಯವಾಣಿ-1098 ಕುರಿತು ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಪದವಿ ಪೂರ್ವ ಕಾಲೇಜುಗಳ ಕಟ್ಟಡಗಳ ಸೂಕ್ತ ಸ್ಥಳಗಳ ಮೇಲೆ ಗೋಡೆ ಬರಹ ಬರೆಸುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪಾಲನೆ ಮತ್ತು ರಕ್ಷಣೆ ಅವಶ್ಯಕತೆ ಇರುವ ಮಕ್ಕಳು ಸೇರಿದಂತೆ ಎಲ್ಲಾ ಮಕ್ಕಳಿಗೆ ತುರ್ತು ಸೇವೆಯನ್ನು ಒದಗಿಸುವ 24*7 ಉಚಿತ ಮಕ್ಕಳ ಸಹಾಯವಾಣಿ- 1098 ಕುರಿತು ಹೆಚ್ಚಿನ ಪ್ರಚಾರ ನೀಡುವ ಕುರಿತಂತೆ ಸಾರ್ವಜನಿಕರಲ್ಲಿ ಹಾಗೂ ಮಕ್ಕಳಲ್ಲಿ ಅರಿವು ಮೂಡಿಸುವ ಮೂಲಕ ಮಕ್ಕಳ ಘನತೆಯ ಬದುಕಿನ ನಿರ್ಮಾಣ ಮಾಡಬೇಕಾಗಿರುವುದರಿಂದ ಹಾಗೂ ಮಕ್ಕಳ ರಕ್ಷಣೆ ಎಲ್ಲರ ಕರ್ತವ್ಯವಾಗಿದ್ದು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಮಕ್ಕಳ ಸಹಾಯವಾಣಿ 1098 ಕುರಿತು ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಪದವಿ ಪೂರ್ವ ಕಾಲೇಜುಗಳ ಕಟ್ಟಡಗಳ ಸೂಕ್ತ ಸ್ಥಳಗಳ ಮೇಲೆ ಗೋಡೆ ಬರಹ ಬರೆಸಲು ಹಾಗೂ ಎಲ್ಲಾ ಶಾಲೆಗಳ ವೆಬ್ಸೈಟ್ ನಲ್ಲಿ 1098…
ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದ್ದು, ಹಿಂದೂ ಮುಖಂಡರು ಕೆರಳಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸದ್ಯ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹಿಂದೂ ದೇವರುಗಳಿಗೆ ಅವಮಾನ ಮಾಡಿದ್ದಾರೆ ಎಂದು ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ಜಿ.ಕೆ ಮಿಥುನ್ ಕುಮಾರ್, ಶಿವಮೊಗ್ಗ ಸಬ್ ಡಿವಿಜನ್-2 ಡಿವೈಎಸ್ಪಿ ಸಂಜೀವ್ ಕುಮಾರ್ ದೌಡಾಯಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಬೆಳಗಾವಿ: ಜಿಲ್ಲೆಯಲ್ಲಿ ಜಾತ್ರೆಯೊಂದರಲ್ಲಿ ಪಾಲ್ಗೊಂಡಿದ್ದಂತ ರಮೇಶ್ ಜಾರಕಿಹೊಳಿ ಪುತ್ರ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದನು. ಈ ಘಟನೆ ಸಂಬಂಧ ಇದೀಗ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಲಕ್ಷ್ಮೀದೇವಿ ಜಾತ್ರೆ ನಡೆಯುತ್ತಿದ್ದು, ಈ ವೇಳೆ ಸಂತೋಷ್ ಜಾರಕಿಹೊಳಿ ಸಾರ್ವಜನಿಕರ ಮಧ್ಯೆ ಕೈಯಲ್ಲಿ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಾಚರಣೆ ನಡೆಸಿದ್ದಾರೆ. ಪೊಲೀಸರ ಸಮ್ಮುಖದಲ್ಲಿಯೇ ಶಾಸಕನ ಪುತ್ರ ಸಂತೋಷ್ ಜಾರಕಿಹೊಳಿ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದರು. ಈ ಘಟನೆಯ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಘಟನೆ ಸಂಬಂಧ ಗೋಕಾಕ್ ನ ಶಹರ ಪೊಲೀಸ್ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಎಸ್ ಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮಪಂಚಾಯಿತಿ ಬಿ ಖಾತಾ ಆಸ್ತಿಗೆ ತೆರಿಗೆ ವಿಧಿಸುವ ಹೊಸ ಕರಡು ನಿಯಮಗಳನ್ನು ಪ್ರಕಟಿಸಿದ್ದು, ಗ್ರಾ.ಪಂ. ವ್ಯಾಪ್ತಿಗಳಲ್ಲಿ ತೆರಿಗೆ ವ್ಯಾಪ್ತಿಗೊಳಪಡದ (ಬಿ ಖಾತಾ-199ಸಿ) ಆಸ್ತಿಗಳನ್ನು ಪತ್ತೆ ಮಾಡಿ, ಅವುಗಳಿಂದಲೂ ತೆರಿಗೆ, ಶುಲ್ಕವಸೂಲಿ ಮಾಡುವುದು ಹಾಗೂ ಎಲ್ಲ ಗ್ರಾಪಂಗಳಲ್ಲೂ ಏಕರೂಪ ತೆರಿಗೆ, ಶುಲ್ಕ ವಿಧಿಸಲಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಯಮಬದ್ದ ವಾಗಿ ತೆರಿಗೆ ಮತ್ತು ಶುಲ್ಕಗಳ ವಸೂಲಿ ಸಂಬಂಧ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಫೀಸುಗಳು) ಕರಡು ನಿಯಮ 2025ನ್ನು ರೂಪಿಸಿ ರಾಜ್ಯ ಸರ್ಕಾರ ಪ್ರಕಟಿಸಿದೆ. ಕರಡು ನಿಯಮದ ಪ್ರಕಾರ, ಗ್ರಾ.ಪಂ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಶುಲ್ಕ ವಿಧಿಸಿ, ನಂತರ ಅನುಮತಿ ನೀಡುವಂತೆ ಸೂಚಿಸಲಾಗಿದೆ. ಅದರೊಂದಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರತಿ ವಸತಿ, ವಸತಿಯೇತರ ಕಟ್ಟಡ, ವಾಣಿಜ್ಯ ಉದ್ದೇಶದ ಭೂಮಿ ಸೇರಿದಂತೆ ಇನ್ನಿತರ ಎಲ್ಲ ಆಸ್ತಿಗಳಿಗೆ ಆಸ್ತಿ ಗುರುತಿನ ಸಂಖ್ಯೆ (ಪಿಐಡಿ) ನೀಡಿ, ನೋಂದಣಿ ಮಾಡುವಂತೆಯೂ ಗ್ರಾಮ ಪಂಚಾಯತಿ…
ಶಿವಮೊಗ್ಗ : ದೇಶದ ಎರಡನೇ ಅತಿ ಉದ್ದದ ತೂಗು ಸೇತುವೆ ಸಿಗಂದೂರು ಸೇತುವೆ ಜುಲೈ 14ರಂದು ಲೋಕಾರ್ಪಣೆ ಆಗಲಿದೆ. ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸೇತುವೆ ಉದ್ಘಾಟಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸ್ಥಳ ಇನ್ನಷ್ಟೆ ನಿಗದಿ ಆಗಬೇಕಿದೆ.ಇಂದಿನಿಂದ ಎರಡನೇ ಹಂತದ ಲೋಡ್ ಟೆಸ್ಟ್ ನಡೆಯಲಿದೆ. ಅಲ್ಲದೆ ಕೊನೆಯ ಹಂತದ ಕೆಲಸ ಕಾರ್ಯ ಬಾಕಿ ಇದೆ ಎಂದು ತಿಳಿಸಿದರು. ಇನ್ನು, ಸರ್ಕಾರದ ಆದೇಶದಲ್ಲಿ ಈ ಸೇತುವೆಗೆ ಹೊಳೆಬಾಗಿಲು ಕಳಸವಳ್ಳಿ ಸೇತುವೆ ಎಂದು ಉಲ್ಲೇಖಿಸಲಾಗಿದೆ. ಆದರೆ ಈ ಸೇತುವೆಗೆ ಸಿಗಂದೂರು ಚೌಡೇಶ್ವರಿ ಸೇತುವೆ ಎಂದು ನಾಮಕರಣ ಮಾಡಬೇಕು. ಈ ಸಂಬಂಧ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸುತ್ತೇವೆ ಎಂದು ರಾಘವೇಂದ್ರ ತಿಳಿಸಿದರು.
ಬೆಂಗಳೂರು : ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ ಯೋಜನೆಯನ್ನು (ಪಿಎಂಎಫ್ ಎಂಇ) 1 ವರ್ಷ ವಿಸ್ತರಿಸಿದೆ. ಯೋಜನೆಯಡಿ ರಾಜ್ಯಕ್ಕೆ 5 ಸಾವಿರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆ ಗುರಿ ನೀಡಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ಕರ್ನಾಟಕದಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿಗಾಗಿ PMFME ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸುವ ಸಭೆಯಲ್ಲಿ ಮಾತನಾಡಿದ ಅವರು, ಈ ಯೋಜನೆ ಅಡಿಯಲ್ಲಿ ಸಿರಿಧಾನ್ಯಗಳು, ಬೆಲ್ಲ, ಬೇಕರಿ ಉತ್ಪನ್ನಗಳು ಸೇರಿದಂತೆ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಶೇ. 50 ಅಥವಾ ಗರಿಷ್ಠ ₹15 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತಿದೆ. ಇದರಲ್ಲಿ ಕೇಂದ್ರದ ₹6 ಲಕ್ಷ ಮತ್ತು ರಾಜ್ಯದ ₹9 ಲಕ್ಷ ಪಾಲು ಸೇರಿದ್ದು, ವೈಯಕ್ತಿಕ ಉದ್ದಿಮೆದಾರರು, ಗುಂಪುಗಳು ಮತ್ತು ಸ್ವಸಹಾಯ ಸಂಘಗಳಿಗೆ ಇದು ವರದಾನವಾಗಿದೆ. ಸ್ವಸಹಾಯ ಸಂಘಗಳ ಸದಸ್ಯರಿಗೆ ₹40,000 ವರೆಗೆ ಬೀಜ ಬಂಡವಾಳ ಮತ್ತು ಸಂಘಗಳಿಗೆ ₹4 ಲಕ್ಷದ ವರೆಗೆ…
ಹುಬ್ಬಳ್ಳಿ : ಅಪ್ರಾಪ್ತ ಮಕ್ಕಳ ಕೈಗೆ ವಾಹನ ಕೊಡುವ ಪೋಷಕರೇ ಎಚ್ಚರ, ಮಗ ಬೈಕ್ ವ್ಹೀಲಿಂಗ್ ಮಾಡಿದಕ್ಕೆ ತಂದಗೆ ಬರೋಬ್ಬರಿ 25,000 ರೂ. ದಂಡ ವಿಧಿಸಲಾಗಿದೆ. ಹೌದು, ಹುಬ್ಬಳ್ಳಿಯ ಉಣಕಲ್ ಹತ್ತಿರ ಅಪ್ರಾಪ್ತನೊಬ್ಬ ಬೈಕ್ ವೀಲಿಂಗ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ತಂದೆಗೆ ನ್ಯಾಯಾಲಯ 25 ಸಾವಿರ ದಂಡ ವಿಧಿಸಿದೆ. ಹಳೇ ಹುಬ್ಬಳ್ಳಿಯ ಅಬ್ದುಲ್ ರಸೂಲ್ಖಾನ್ ಟಿನ್ವಾಲೆ ಅವರ ಮಗ ಉಣಕಲ್ ಹತ್ತಿರ ಬೈಕ್ ವೀಲಿಂಗ್ ಮಾಡಿದ್ದ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ಹಂಚಿಕೊಂಡಿದ್ದ. ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿದ್ದ ಉತ್ತರ ಸಂಚಾರ ಠಾಣೆ ಪೊಲೀಸರು ಬೈಕನ್ನು ವಶಪಡಿಸಿಕೊಂಡಿದ್ದರು. ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟ ಆರೋಪದಡಿ ತಂದೆಗೆ 25 ಸಾವಿರ ದಂಡ ವಿಧಿಸಿದ್ದಾರೆ.
ಮಂಡ್ಯ : ಮಂಡ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿ ನೀಡಿದ ಕಿರುಕುಳದಿಂದ ಕಿರುಕುಳದಿಂದ ಬೇಸತ್ತ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿ ನೀಡಿದ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅನಿಕೇತನ ವಿದ್ಯಾಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ಎಚ್.ಎಲ್.ಮಿಲನಾ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಲಕ್ಷ್ಮಿ ಪ್ರಸಾದ್, ಎಚ್.ಎಸ್.ರಶ್ಮಿ ದಂಪತಿ ಪುತ್ರಿ, ಮಿಲನಾ ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಗೆ ಆಯ್ಕೆ ಆಗಿದ್ದರೂ ಸಹ ಶಾಲೆ ಆಡಳಿತ ಮಂಡಳಿ, ಮುಖ್ಯಶಿಕ್ಷಕಿ ಶೈಲಜಾ ಸೇರಿದಂತೆ ಮೂವರು ಶಿಕ್ಷಕರು ಶಾಲಾ ಶುಲ್ಕ ಪಾವತಿ ಮಾಡುವಂತೆ ವಿದ್ಯಾರ್ಥಿನಿಗೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಪ್ರಾರ್ಥನಾ ಸಮಯದಲ್ಲಿ ಭಾಗವಹಿಸಲು ಅವಕಾಶ ಕೊಡದೆ ಬಹಿಷ್ಕಾರ ಹಾಕಿದ್ದರು ಎನ್ನಲಾಗಿದೆ.…
ಬೆಂಗಳೂರು: ರಾಜ್ಯದಲ್ಲಿ ಚಿಕ್ಕವಯಸ್ಸಿನವರಲ್ಲಿ ಉಂಟಾಗುತ್ತಿರುವ ಹಠಾತ್ ಹೃದಯಾಘಾತ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಗೆ ಕೊರೋನಾ ಸೋಂಕು ಅಥವಾ ಕೋವಿಡ್ ಲಸಿಕೆ ಕಾರಣವಲ್ಲ ಎಂದು ಜಯ ದೇವ ಆಸ್ಪತ್ರೆ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ಅಧ್ಯಕ್ಷತೆಯ ತಜ್ಞರ ಸಮಿತಿಯು ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದೆ. ರಾಜ್ಯದಲ್ಲಿ ಹೃದಯಾಘಾತದಿಂದ ದಿನೇ ದಿನೇ ಸಾವು ಪ್ರಕರಣಗಳ ಹೆಚ್ಚಳದ ಬಗ್ಗೆ ಆರೋಗ್ಯ ಇಲಾಖೆಗೆ ಟೆಕ್ನಿಕಲ್ ಕಮಿಟಿಯಿಂದ ವರದಿಯನ್ನು ಸಲ್ಲಿಸಲಾಗಿದೆ. ರಾಜ್ಯದ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಟೆಕ್ನಿಕಲ್ ಕಮಿಟಿಯ ವರದಿಯ ಅಂಶಗಳನ್ನು ಚರ್ಚಿಸಲಾಗಿದೆ. ಹೃದಯಾಘಾತ ಅಧ್ಯಯನ ಕುರಿತ ಸಂಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ನೀಡಲಾಗಿದೆ. ಅಲ್ಲದೇ ಸರ್ಕಾರಕ್ಕೆ ನೀಡಬೇಕಾದ ಸಲಹೆ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರ ನಾಥ್ ತಂಡದಿಂದ ತಾಂತ್ರಿಕ ಸಲಹಾ ಸಮಿತಿಯು ವರದಿಯನ್ನು ನೀಡಲಾಗಿದ್ದು, ವರದಿಯಲ್ಲಿ ಪ್ರಮುಖ ಅಂಶಗಳನ್ನು ಉಲ್ಲೇಖಿಸಲಾಗಿದೆ. ರಾಜ್ಯ ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಸಲ್ಲಿಸಿದಂತ ವರದಿಯಲ್ಲಿ ಒಟ್ಟು 251 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ.…
ಹಾಸನ : ಫೀಡರ್ಗಳಿಂದ 500 ಮೀಟರ್ ಒಳಗಿನ ಪಂಪ್ಸೆಟ್ಗಳಿಗೆ ಇಲಾಖೆಯೇ ಟ್ರಾನ್ಸ್ಫಾರ್ಮರ್ ಒದಗಿಸಲಿದೆ. 500 ಮೀಟರ್ ನಿಂದ ಹೊರಗಿನ ಪಂಪ್ ಸೆಟ್ಗಳಿಗೆ ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ಗಳನ್ನು ಒದಗಿಸಲಾಗುತ್ತದೆ. ಅದೇ ರೀತಿ ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಕುಸುಮ್-ಸಿ ಯೋಜನೆಯಡಿ ಫೀಡರ್ ಸೌರೀಕರಣ ಮಾಡಲಾಗುತ್ತಿದೆ ಎಂದು ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿAದು ಜಿಲ್ಲೆಯ ಎಲ್ಲಾ ಚುನಾಯಿತ ಜನ ಪ್ರತಿನಿಧಿಗಳೊಂದಿಗೆ ಇಂಧನ ಇಲಾಖೆಗೆ ಸಂಬAಧಪಟ್ಟAತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ರೈತರಿಗೆ ಅವಶ್ಯವಿರುವ ಕಡೆಗಳಲ್ಲಿ ಕುಡಿಯುವ ನೀರಿಗೆ ಟ್ರಾನ್ಸ್ ಫಾರ್ಮ್ ಮರ್ ಅಳವಡಿಸಿ ಎಂದು ತಿಳಿಸಿದರು. ರಾಜ್ಯದಲ್ಲಿ 2500 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಟೆಂಡರ್ ಆಹ್ವಾನಿಸಲಾಗಿದ್ದು, ಇದಕ್ಕಾಗಿ ಖಾಸಗಿಯವರು 10 ಸಾವಿರ ಕೋಟಿ ಹಣ ಹೂಡಲು ಸಿದ್ಧರಿದ್ದಾರೆ ಎಂದು ತಿಳಿಸಿದರು. ಖಾಸಗಿಯವರು ವಿದ್ಯುತ್ ಉತ್ಪಾದನೆ ಮಾಡಲಿದ್ದಾರೆ. ಹಾಗೆಯೇ ದೊಡ್ಡ ದೊಡ್ಡ ಸಬ್ ಸ್ಟೇಷನ್ ಸಹ ಆಗಲಿವೆ. ನಾವು ಅವರಿಂದ…













