Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ: ದೆಹಲಿಯಲ್ಲಿ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿದ್ದು, 10 ಗ್ರಾಂಗೆ 1,37,600 ರು. ಗೆ ತಲುಪಿದೆ. ಇದು ಚಿನ್ನದ ಸಾರ್ವಕಾಲಿಕ ಗರಿಷ್ಠಮಟ್ಟಕ್ಕೆ ಏರಿಕೆಯಾಗಿದೆ. ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆ 4,000 ರೂ.ಗಳಷ್ಟು ಏರಿಕೆಯಾಗಿ 10 ಗ್ರಾಂಗೆ 1,37,600 ರೂ.ಗಳಷ್ಟು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್ ತಿಳಿಸಿದೆ. 99.9 ಪ್ರತಿಶತ ಶುದ್ಧತೆಯ ಅಮೂಲ್ಯ ಲೋಹವು ಶುಕ್ರವಾರ 10 ಗ್ರಾಂಗೆ 1,33,600 ರೂ.ಗಳಷ್ಟು ಮುಕ್ತಾಯಗೊಂಡಿತು. ಅಂತರರಾಷ್ಟ್ರೀಯ ಸ್ಪಾಟ್ ಚಿನ್ನವು USD 4,350 ವಲಯದ ಕಡೆಗೆ ಏರುತ್ತಿದ್ದಂತೆ ಚಿನ್ನದ ಬೆಲೆಗಳು ಇನ್ನಷ್ಟು ಏರಿಕೆಯಾಗಿ ದೇಶೀಯ ಮಾರುಕಟ್ಟೆಯಲ್ಲಿ ಬಲವಾದ ರ್ಯಾಲಿಗೆ ಕಾರಣವಾಯಿತು” ಎಂದು LKP ಸೆಕ್ಯುರಿಟೀಸ್ನ ಸರಕು ಮತ್ತು ಕರೆನ್ಸಿಯ ಉಪಾಧ್ಯಕ್ಷ ಸಂಶೋಧನಾ ವಿಶ್ಲೇಷಕ ಜತೀನ್ ತ್ರಿವೇದಿ ಹೇಳಿದರು. ಹಳದಿ ಲೋಹವು ತೀಕ್ಷ್ಣವಾದ ಏರಿಕೆಯೊಂದಿಗೆ ಜಾಗತಿಕ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ, ಇದು ಹೊಸ ಜೀವಮಾನದ ಗರಿಷ್ಠ ಮಟ್ಟವನ್ನು ಮುಟ್ಟಿದೆ ಎಂದು ಅವರು ಹೇಳಿದರು. ಅಕ್ಟೋಬರ್ 17 ರಂದು ಚಿನ್ನದ…
ಬೆಂಗಳೂರು: ಅಪಘಾತ, ಅಪರಾಧ ರಹಿತವಾಗಿ ಸೇವೆ ಸಲ್ಲಿಸುವಂತ ಕೆ ಎಸ್ ಆರ್ ಟಿ ಸಿ ಚಾಲಕರಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರೋತ್ಸಾಹ ಧನವನ್ನು ಹೆಚ್ಚಳ ಮಾಡಿ ನಿಗಮವು ಆದೇಶ ಹೊರಡಿಸಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕರಾದಂತ ಅಕ್ರಂ ಪಾಷಾ ಅವರು ಸುತ್ತೋಲೆ ಹೊರಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನಿಗಮದ ವಾಹನಗಳಲ್ಲಿ ಪಯಾಣಿಸುವವರ ಸುರಕ್ಷತೆಗಾಗಿ ಹಲವಾರು ಯೋಜನೆಗಳನ್ನು ಕೈಗೊಂಡಿದ್ದು, ಅದರಲ್ಲಿ ಮುಖ್ಯವಾಗಿ ಅಪಘಾತ ರಹಿತ ಚಾಲನೆಯ ಪ್ರವೃತ್ತಿಯನ್ನು ಹೊಂದಿರುವ ಚಾಲಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಪಘಾತ ಮುಕ್ತ ಚಾಲನೆಗೆ ಪ್ರೇರೆಪಿಸುವ ಸಲುವಾಗಿ ಅಪಘಾತರಹಿತ ಮತ್ತು ಅಪರಾಧರಹಿತ ಸೇವೆ ಸಲ್ಲಿಸಿರುವ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಮತ್ತು ಬೆಳ್ಳಿ ಪದಕ ವಿತರಿಸುವ ಜೊತೆಗೆ ಪ್ರಶಂಸನಾ ಪತ್ರದೊಂದಿಗೆ ನಗದು ಪುರಸ್ಕಾರವನ್ನು ನೀಡಲಾಗುತ್ತಿದೆ. ನಂತರ ಪದಕ ಪಡೆದ ಚಾಲಕರಿಗೆ ಪ್ರತಿ ತಿಂಗಳು ಮಾಸಿಕ ಭತ್ಯೆಯನ್ನು ನೀಡಲಾಗುತ್ತಿದೆ ಎಂದಿದ್ದಾರೆ. ಮುಂದುವರೆದು, ಮುಖ್ಯ ಮಂತ್ರಿ ಚಿನ್ನದ ಪದಕ ಮತ್ತು ಬೆಳ್ಳಿ…
ಬೆಳಗಾವಿ : ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುತ್ತಿರುವ ಫಲಾನುಭವಿಗಳ ಪೈಕಿ 1.80 ಲಕ್ಷ ಮಂದಿ ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ವಿಧಾನ ಪರಿಷತ್ ನಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಇಲಾಖೆಯ ಅಧಿಕಾರಿಗಳು ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ. ಕುಟುಂಬದ ಯಜಮಾನನಿಗೆ ಪ್ರತಿ ತಿಂಗಳು ತಲಾ 2,000 ರೂ. ನಂತೆ 2023ರ ಜೂನ್ 6ರಿಂದ ಗೃಹಲಕ್ಷ್ಮಿ ಯೋಜನೆಯಡಿ ಸಹಾಯಧನ ನೀಡಲಾಗುತ್ತಿದೆ. ಅಕ್ಟೋಬರ್ ಅಂತ್ಯಕ್ಕೆ 1.28 ಕೋಟಿ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಅರ್ಹ 1.24 ಕೋಟಿ ಮಹಿಳೆಯರಿಗೆ ಆಗಸ್ಟ್ ಅಂತ್ಯದವರೆಗೆ 22 ಕಂತಿನಲ್ಲಿ ಹಣ ಪಾವತಿಸಲಾಗಿದೆ. ಒಟ್ಟಾರೆ 52,416 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಸರ್ಕಾರದ ಮಾನದಂಡದ ಅನ್ವಯ ಕುಟುಂಬದ ಯಜಮಾನಿ ಅಥವಾ ಅವರ ಪತಿಯ ಐಟಿ ಅಥವಾ ಜಿಎಸ್ಟಿ ರಿಟರ್ನ್ಸ್ ಸಲ್ಲಿಸುತ್ತಿದ್ದರೆ ಅಂತವರು ಯೋಜನೆಯ ಫಲಾನುಭವಿಗಳಾಗಲು ಅರ್ಹರಲ್ಲ ಎಂದು ತಿಳಿಸಲಾಗಿದೆ.
BIG NEWS : ರಾಜ್ಯದ ಜನತೆ ಗಮನಕ್ಕೆ : `ತಾಲೂಕು, ಗ್ರಾಮ ಪಂಚಾಯಿತಿ’ ಗಳಲ್ಲಿ ನೀವು ಈ ಮಾಹಿತಿಗಳನ್ನ ಕೇಳಿ ಪಡೆಯಬಹುದು.!
ಬೆಂಗಳೂರು : ಗ್ರಾಮ ಪಂಚಾಯಿತಿಯು ಗ್ರಾಮ ಮಟ್ಟದ ಸ್ಥಳೀಯ ಆಡಳಿತ ಸಂಸ್ಥೆಯಾಗಿದ್ದು, ಗ್ರಾಮಸ್ಥರಿಂದ ಚುನಾಯಿತರಾದ ಪ್ರತಿನಿಧಿಗಳನ್ನು ಒಳಗೊಂಡಿರುತ್ತದೆ. ಈ ಸಂಸ್ಥೆಯು ಗ್ರಾಮಗಳ ಅಭಿವೃದ್ಧಿ, ಮೂಲಸೌಕರ್ಯಗಳ ನಿರ್ವಹಣೆ (ರಸ್ತೆ, ನೀರು, ದೀಪ), ತೆರಿಗೆ ವಸೂಲಿ ಮತ್ತು ಕಲ್ಯಾಣ ಕಾರ್ಯಕ್ರಮಗಳ ಜಾರಿಯಂತಹ ಜವಾಬ್ದಾರಿಗಳನ್ನು ನಿರ್ವಹಿಸುತ್ತದೆ. ಗ್ರಾಮ ಪಂಚಾಯಿತಿಯಿಂದ ಈ ಕೆಳಕಂಡ ಮಾಹಿತಿಗಳನ್ನು ಸಾರ್ವಜನಿಕರಿಗೆ ಒದಗಿಸಬಹುದಾಗಿದೆ. 1. ಗ್ರಾಮ ಪಂಚಾಯಿತಿಗೆ ಬಿಡುಗಡೆಯಾದ ಅನುದಾನದ ವಿವರಗಳು. 2. ಗ್ರಾಮ ಪಂಚಾಯತ್ ವೆಚ್ಚ 3. ಗ್ರಾಮ ಪಂಚಾಯತಿ ಡಿ.ಸಿ.ಬಿ. ತನ್ನ ವಿವರಗಳು (ಬೇಡಿಕ, ವಸೂಲಿ ಮತ್ತು ಬಾಕಿ) 4. ಮನೆ ಖಾತೆ ಉದ್ಯತ ಭಾಗ, ಡಿಮ್ಯಾಂಡ್ ಉದ್ಯತ ಭಾಗ, ಲೈಸೆನ್ಸ್, ಮೂಟೇಶನ್ ಇತ್ಯಾದಿ ಪತ್ರಗಳು 5. ಗ್ರಾಮ ಪಂಚಾಯತಿ ಜಮಾ ಮತ್ತು ಖರ್ಚಿನ ವಿವರಗಳು (ನಮೂನೆ-9ರಲ್ಲಿ) 6. ಗ್ರಾಮ ಪಂಚಾಯತಿ ಸಾಮಾನ್ಯ ಸಭೆ ಹಾಗೂ ಸ್ನಾಯಿ ಸಮಿತಿಗಳ ನಡವಳಿಗಳು 7. ಗ್ರಾಮ ಪಂಚಾಯತಿ ಸಭಾ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮಗಳು 8. ಗ್ರಾಮ ಸಭೆ ನಡವಳಿಗಳ ಮೇಲೆ ತೆಗೆದುಕೊಂಡ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ. ಕರ್ನಾಟಕ ನಾಗರಿಕ ಸೇವೆ (ವರ್ತನೆ) ನಿಯಮಗಳು 1966ರ ಮುಖ್ಯಾಂಶಗಳು ಉಲ್ಲಂಘನೆಗೆ ವಿಧಿಸಬಹುದಾದ ದಂಡನೆಗಳು ಹಾಗೂ ಕೆ.ಸಿ.ಎಸ್. (ಸಿಸಿಎ) ನಿಯಮಗಳ ಸ್ಕೂಲ ಪರಿಚಯ ಇಲ್ಲಿದೆ. ಈ ನಿಯಮಗಳು ಸರ್ಕಾರಿ ಹುದ್ದೆಗಳಿಗೆ ನೇಮಿಸಿದ ಮತ್ತು ಸರ್ಕಾರಿ ಕಾರ್ಯ ಸಂಬಂಧಕ್ಕೆ ತೈನಾತಿಸಲ್ಪಟ್ಟ ಎಲ್ಲಾ ನೌಕರರಿಗೂ ಅನ್ವಯಿಸುತ್ತದೆ. (ನಿಯಮ 1) ಆದರೆ ಈ ಮುಂದೆ ಕಾಣಿಸಿದ ವರ್ಗಕ್ಕೆ ಸೇರಿದ ನೌಕರರಿಗೆ ಅನ್ವಯವಾಗುವುದಿಲ್ಲ. ಅ) ಅಖಿಲ ಭಾರತ ಸೇವಾ ಸದಸ್ಯರು ಆ) ರಾಜ್ಯಪಾಲರು, ಸಾಮಾನ್ಯ ಅಥವಾ ವಿಶೇಷ ಅಧಿಸೂಚನೆ ಹೊರಡಿಸಿ ಯಾವ ಹುದ್ದೆಯಲಿ ಇರುವಂತಹವರಿಗೆ ಈ ನಿಯಮ ಅನ್ವಯಿಸುವುದಿಲ್ಲ ಎಂದು ತಿಳಿಸಿರುವ ನೌಕರರು. ಇ) ಔದ್ಯಮಿಕ ನಿಯೋಜನೆ (ಸ್ಥಾಯೀ ಆದೇಶಗಳು) ಶಾಸನ 1946 (1946ರ ಕೇಂದ್ರ ಶಾಸನ ಸಂಖ್ಯೆ 20)ರ ಉಪಬಂಧಗಳು ಅನ್ವಯವಾಗುವ ಸರ್ಕಾರದ ಯಾವುದೇ ಕೈಗಾರಿಕಾ ಉದ್ಯಮದ ನೌಕರರು. ಅರ್ಥವಿವರಣೆ : (ನಿಯಮ 2) (ಅ) ಸರ್ಕಾರ ಎಂದರೆ : ಕರ್ನಾಟಕ ಸಕಾರ (ಆ) ಸರ್ಕಾರಿ ನೌಕರ ಎಂದರೆ…
ಉತ್ತರ ಕೊಲಂಬಿಯಾದ ಗ್ರಾಮೀಣ ಪ್ರದೇಶದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಕಂದಕದಿಂದ ಬಿದ್ದು 17 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಶಾಲಾ ಬಸ್ ಆಂಟಿಯೋಕ್ವಿಯಾದ ಗವರ್ನರ್ ಆಂಡ್ರೆಸ್ ಜೂಲಿಯನ್, ಶಾಲಾ ಪ್ರವಾಸದ ನಂತರ ಕೆರಿಬಿಯನ್ ಪಟ್ಟಣವಾದ ಟೋಲುವಿಯಾದಿಂದ ಮೆಡೆಲಿನ್ಗೆ ಬಸ್ ಪ್ರಯಾಣಿಸುತ್ತಿತ್ತು ಮತ್ತು ಆಂಟಿಯೋಕ್ವೆನೊ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿತ್ತು ಎಂದು ಹೇಳಿದರು. ದುರಂತಕರ ಘಟನೆಯೊಂದರಲ್ಲಿ, ವಾಯುವ್ಯ ಕೊಲಂಬಿಯಾದಲ್ಲಿ ಶಾಲಾ ಬಸ್ ಕಂದರಕ್ಕೆ ಉರುಳಿ 16 ವಿದ್ಯಾರ್ಥಿಗಳು ಮತ್ತು ಚಾಲಕ ಸಾವನ್ನಪ್ಪಿದರು ಮತ್ತು 20 ಜನರು ಗಾಯಗೊಂಡರು, ಅವರಲ್ಲಿ ಮೂವರು ಗಂಭೀರ ಸ್ಥಿತಿಯಲ್ಲಿದ್ದರು. ಕೊಲಂಬಿಯಾದ ಕರಾವಳಿಯಲ್ಲಿರುವ ಕೆರಿಬಿಯನ್ ಬೀಚ್ನಿಂದ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು ಬಸ್ ಹೊತ್ತೊಯ್ಯುತ್ತಿತ್ತು. ಹೆಚ್ಚಾಗಿ 16 ರಿಂದ 18 ವರ್ಷ ವಯಸ್ಸಿನ ವಿದ್ಯಾರ್ಥಿಗಳು ತಮ್ಮ ಪದವಿ ಪ್ರದಾನವನ್ನು ಆಚರಿಸಿಕೊಂಡು ಹಿಂತಿರುಗುತ್ತಿದ್ದಾಗ ಬಸ್ 40 ಮೀಟರ್ ಆಳಕ್ಕೆ ಉರುಳಿತು ಎಂದು ಸುದ್ದಿ ಸಂಸ್ಥೆ AFP ವರದಿ ಮಾಡಿದೆ. ಮೃತರ ಶವಗಳು ವಾಯುಗಾಮಿಯಾಗಿ ಮೆಡೆಲಿನ್ ಲೀಗಲ್ ಮೆಡಿಸಿನ್ ಇನ್ಸ್ಟಿಟ್ಯೂಟ್ಗೆ ಹೋಗುತ್ತಿರುವ…
ದಾವಣಗೆರೆ : ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (95) ಭಾನುವಾರ ಸಂಜೆ ನಿಧನರಾಗಿದ್ದು, ದಾವಣಗೆರೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಅಂತಿಮ ದರ್ಶನ ಪಡೆದಿದ್ದಾರೆ. ಶಾಸಕರು ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಸಚಿವ ರೇಣುಕಾಚಾರ್ಯ ಅವರು ಅಂತಿಮ ದರ್ಶನ ಪಡೆದಿದ್ದಾರೆ. ಇಂದು ಸಂಜೆ ಕಲ್ಲೇಶ್ವರ ಮಿಲ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ ನಡೆಯಲಿದೆ.ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.
ನವದೆಹಲಿ : ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (NCR) ದಟ್ಟವಾದ ಹೊಗೆಯ ನಡುವೆ ಗೋಚರತೆ ಕಡಿಮೆಯಾದ ಕಾರಣ ಸೋಮವಾರ 100 ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ಇನ್ನೂ ಹಲವಾರು ವಿಮಾನಗಳು ವಿಳಂಬವನ್ನು ಎದುರಿಸಿದವು. ನಗರವು ಉಸಿರುಗಟ್ಟಿಸುವುದನ್ನು ಮುಂದುವರೆಸಿದ್ದರಿಂದ ಸಂಭವನೀಯ ಅಡಚಣೆಗಳು ಮತ್ತು ರದ್ದತಿಗಳ ಬಗ್ಗೆ ಪ್ರಯಾಣಿಕರಿಗೆ ತಿಳಿಸಲು ಏರ್ ಇಂಡಿಯಾ ಮತ್ತು ಇಂಡಿಗೋ ಸೇರಿದಂತೆ ವಿವಿಧ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿವೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ (CPCB) ಸಮೀರ್ ಅಪ್ಲಿಕೇಶನ್ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಓದುವಿಕೆ ಬೆಳಿಗ್ಗೆ 7:05 ಕ್ಕೆ ‘ಗಂಭೀರ’ 454 ರಷ್ಟಿತ್ತು. ಇಂದು ರದ್ದಾದ ಏರ್ ಇಂಡಿಯಾ ವಿಮಾನಗಳ ಪೂರ್ಣ ಪಟ್ಟಿ X ನಲ್ಲಿನ ಪೋಸ್ಟ್ನಲ್ಲಿ, ದೆಹಲಿಯಲ್ಲಿ ಇಂದು ಬೆಳಿಗ್ಗೆ ದಟ್ಟವಾದ ಮಂಜಿನಿಂದಾಗಿ ಎಲ್ಲಾ ವಿಮಾನಯಾನ ಸಂಸ್ಥೆಗಳ ವಿಮಾನ ಕಾರ್ಯಾಚರಣೆಗಳು ಕಳಪೆ ಗೋಚರತೆಯ ಕಾರಣದಿಂದಾಗಿ ತೊಂದರೆಗೊಳಗಾಗಿವೆ ಎಂದು ಏರ್ ಇಂಡಿಯಾ ಘೋಷಿಸಿತು. ವಿಮಾನಯಾನ ಸಂಸ್ಥೆಯ ಪ್ರಯಾಣ…
ಬೆಂಗಳೂರು : ಡಿಸೆಂಬರ್ 18 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ದಿನಾಂಕ: 18.12.2025, ಗುರುವಾರ ಸಂಜೆ 7:00 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 30ನೇ ಸಭೆಯನ್ನು ಬೆಳಗಾವಿಯ ಸುವರ್ಣ ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಸರ್ಕಾರದ ಅಪರ ಕಾರ್ಯದರ್ಶಿ ಆರ್. ಚಂದ್ರಶೇಖರ್ ಸುತ್ತೋಲೆ ಹೊರಡಿಸಿದ್ದಾರೆ.
ದಾವಣಗೆರೆ :ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. -ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಇಂದು ಸಂತಾಪ ಸೂಚಿಸಿ, ಮಾತನಾಡಿದ ಸಿಎಂ ಸಿದ್ದರಾಮಯ್ಯ,ಶಾಮನೂರು ಶಿವಶಂಕರಪ್ಪ ಅವರು ತಮ್ಮ 63ನೇ ವಯಸ್ಸಿನಲ್ಲಿ ವಿಧಾನಸಭೆ ಪ್ರವೇಶಿಸಿ ಆರು ಬಾರಿ ಶಾಸಕರಾದವರು. ಒಮ್ಮೆ ಸಂಸತ್ ಸದಸ್ಯರಾಗಿದ್ದರು. ದೀರ್ಘ ಕಾಲದ ರಾಜಕೀಯದಲ್ಲಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದರು. 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ನಂತರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾ ಕೇಂದ್ರದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಕಾಶಿಯಾಗಿಸಿದರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಜವಳಿ ಕ್ಷೇತ್ರದ ಅವನತಿ ಪ್ರಾರಂಭವಾದಾಗ ದಾವಣಗೆರೆಗೆ ಒಂದು ಬ್ರಾಂಡ್ ಹೆಸರನ್ನು ಶಿವಶಂಕರಪ್ಪ ಅವರು ತಂದುಕೊಟ್ಟರು. ದೀರ್ಘಕಾಲ ಎಐಸಿಸಿ ಖಜಾಂಚಿ ಆಗಿದ್ದರು. ಎಲ್ಲರೊಂದಿಗೂ…














