Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಪಿಒಪಿ ಗಣೇಶ ಮೂರ್ತಿಗಳನ್ನು ತಯಾರಿಸುವುದು, ಸಾಗಿಸುವುದು, ಮಾರಾಟ ಮತ್ತು ವಿಸರ್ಜಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯಾಧ್ಯಂತ ಪಿಒಪಿ ಗಣೇಶ ಮೂರ್ತಿ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಕೇವಲ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ತಯಾರಿಸಿ, ಬಳಕೆ ಮಾಡಲು ಅವಕಾಶ ನೀಡಲಾಗಿದೆ. ಒಂದು ವೇಳೆ ನಿಯಮ ಮೀರಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟ ಮಾಡಿದ್ರೇ 10,000 ದಂಡ ಹಾಗೂ ಜೈಲು ಶಿಕ್ಷೆ ಕಾಯಂ ಎಂಬುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಿದ್ದು, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸುವ ಮೂಲಕ ಪರಿಸರ ಸ್ನೇಹಿ ಹಬ್ಬ ಆಚರಿಸಬೇಕು ಎಂದು ಮನವಿ ಮಾಡಲಾಗಿದೆ. ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟ…
ಶಿವಮೊಗ್ಗ: ಶಿವಮೊಗ್ಗದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ತಾನೇ ಜನ್ಮ ನೀಡಿದ ನವಜಾತ ಶಿಶುವಿನ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಆ.16ರಂದು ಮೆಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಒಂದು ದಿನದ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿತ್ತು. ಇದೀಗ ಘಟನೆಗೆ ಸಂಬಂಧಿಸಿದಂತೆ ನವಜಾತ ಶಿಶುವಿನ ಕತ್ತು ಕೊಯ್ದು ಕೊಂದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ದಿನದ ಗಂಡು ಮಗುವನ್ನು ಕತ್ತು ಸೀಳಿ ಕೊಲೆ ಮಾಡಿರುವುದು ತನಿಖೆಯಲ್ಲಿ ಬಯಲಾದ ಹಿನ್ನೆಲೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ತಿಮ್ಲಾಪುರದ ಶೈಲಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ: ಧರ್ಮಸ್ಥಳದ ಬಗ್ಗೆ ಎಐ ವೀಡಿಯೋ ಮೂಲಕ ಅಪಪ್ರಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಸತತ ಎರಡನೇ ದಿನವೂ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾನೆ. ನಿನ್ನೆ ಸಮೀರ್ ನನ್ನು ಐದು ಗಂಟೆಗಳ ಕಾಲ ವಿಚಾರಣೆಯನ್ನು ಪೊಲೀಸರು ನಡೆಸಿದ್ದು, ಇಂದು ಮತ್ತೆ ವಿಚಾರಣೆಗೆ ಹಾಜರಾಗಿದ್ದಾನೆ. ನಿನ್ನೆ ಧರ್ಮಸ್ಥಳದ ಬಗ್ಗೆ ಅಪಪ್ರಚಾರಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಅವರನ್ನು ವಿಚಾರಣೆ ನಡೆಸಲಾಯಿತು. ಬೆಳ್ತಂಗಡಿ ಪಿಎಸ್ಐ ಸುಬ್ಬಾಪುರ್ ಮಠ್ ಅವರಿಂದ ಸತತ 5 ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು.
ನವದೆಹಲಿ : ಅಂಗವಿಕಲರ ಬಗ್ಗೆ ಅಸಂವೇದನಾಶೀಲ ಹಾಸ್ಯ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಸೋಮವಾರ ಪ್ರಸಿದ್ಧ ಸ್ಟ್ಯಾಂಡ್-ಅಪ್ ಹಾಸ್ಯನಟ ಸಮಯ್ ರೈನಾ ಅವರಿಗೆ ಛೀಮಾರಿ ಹಾಕಿದೆ. ಸಮಯ್ ರೈನಾ ಅವರು ನ್ಯಾಯಾಲಯದಲ್ಲಿ ಮಾತ್ರವಲ್ಲದೆ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿಯೂ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಎಸ್ಎಂಎ ಕ್ಯೂರ್ ಫೌಂಡೇಶನ್ ಸಲ್ಲಿಸಿದ ಅರ್ಜಿಯನ್ನು ಆಲಿಸುವಾಗ ಈ ಹೇಳಿಕೆ ನೀಡಿದೆ. ಅರ್ಜಿಯಲ್ಲಿ, ಹಾಸ್ಯನಟರಾದ ಸಮಯ್ ರೈನಾ, ವಿಪುನ್ ಗೋಯಲ್, ಬಲರಾಜ್ ಪರಮರ್ಜಿತ್ ಸಿಂಗ್ ಘಾಯ್, ಸೋನಾಲಿ ಥಕ್ಕರ್ ಮತ್ತು ನಿಶಾಂತ್ ಜಗದೀಶ್ ತನ್ವರ್ ಅವರು ಅಂಗವಿಕಲರನ್ನು ಗೇಲಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನ್ಯಾಯಾಲಯವು ಹಾಸ್ಯನಟರಿಗೆ, ‘ನೀವು ನ್ಯಾಯಾಲಯದಲ್ಲಿ ನೀಡಿದ ಕ್ಷಮೆಯಾಚನೆಯನ್ನು, ನಿಮ್ಮ ಸಾಮಾಜಿಕ ಮಾಧ್ಯಮದಲ್ಲಿಯೂ ನೀಡಿ’ ಎಂದು ಹೇಳಿತು.
ನವದೆಹಲಿ : ಆನ್ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ 2025 ಅಂಗೀಕಾರವಾದ ನಂತರ ಬಿಸಿಸಿಐ ಮತ್ತು ಡ್ರೀಮ್ 11 ತಮ್ಮ ಸಂಬಂಧವನ್ನು ಸ್ಥಗಿತಗೊಳಿಸುತ್ತಿವೆ. ಈ ಕುರಿತು ಡ್ರೀಮ್11 ಬಿಸಿಸಿಐಗೆ ಮಾಹಿತಿ ನೀಡಿದ್ದು, ಇನ್ನು ಮುಂದೆ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಾಯೋಜಕತ್ವ ವಹಿಸುವುದಿಲ್ಲ. ಬಿಸಿಸಿಐ ಮತ್ತು ಡ್ರೀಮ್ 11 ತಮ್ಮ ಸಂಬಂಧವನ್ನು ಸ್ಥಗಿತಗೊಳಿಸುತ್ತಿವೆ. ಭವಿಷ್ಯದಲ್ಲಿ ಅಂತಹ ಯಾವುದೇ ಸಂಸ್ಥೆಗಳೊಂದಿಗೆ ಬಿಸಿಸಿಐ ತೊಡಗಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ದೇವಚಿತ್ ಸೈಕಿಯಾ ತಿಳಿಸಿದ್ದಾರೆ. https://twitter.com/ANI/status/1959848080041271357?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು: ರಾಜ್ಯ ಸರ್ಕಾರದಿಂದ ಟ್ರಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದಂತ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿ ಘೋಷಣೆ ಮಾಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪುಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಪುಕರಣಗಳ ದಂಡದ ಬಾಕಿ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023ರವರೆಗೆ ಇತ್ಯರ್ಥಗೊಳ್ಳುವ ಪುಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು. ಪೊಲೀಸ್ ಇಲಾಖೆಯ ಸಂಚಾರಿ ಇ- ಚಲನ್ನಲ್ಲಿ ದಾಖಲಾಗಿರುವ ಬಾಕಿ ಪುಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪುಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿರುತ್ತದೆ. ಮುಂದುವರೆದು ಸದರಿ ಅವಧಿಯು ಮುಕ್ತಾಯವಾಗಿರುವುದರಿಂದ ಸದರಿ ಕಾಲಾವಕಾಶವನ್ನು ದಿನಾಂಕ:23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿರುತ್ತಾರೆ. ನಿಮ್ಮ ಬಾಕಿ ದಂಡವನ್ನು…
ಬೆಂಗಳೂರು : ಟ್ರಾಫಿಕ್ದಂಡದ ಮೊತ್ತವನ್ನು ಪಾವತಿಸುವವರೇ ಎಚ್ಚರ, ಸೈಬರ್ಖದೀಮರು ಇದನ್ನೇ ಬಂಡವಾಳ ಮಾಡಿಕೊಂಡು ಲಿಂಕ್ ಕಳುಹಿಸಿ ನಿಮ್ಮ ಹಣಕ್ಕೆ ಕನ್ನ ಹಾಕುತ್ತಿದ್ದಾರೆ. ಟ್ರಾಫಿಕ್ ದಂಡದ ಮೊತ್ತವನ್ನು ಪಾವಿಸಲು ಮುಂದಾದ ಬೆಂಗಳೂರಿನ ಟೆಕ್ಕಿಯೊಬ್ಬರು 2.65 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸಂಚಾರ ಪೊಲೀಸರು 50% ರಿಯಾಯಿತಿ ನೀಡಿ ದಂಡ ಕಟ್ಟಲು ಅವಕಾಶ ನೀಡಿದ್ದಾರೆ. ವಂಚಕರು ಅಪರಿಚಿತ ಲಿಂಕ್ ಗಳನ್ನು ಕಳುಹಿಸುತ್ತಿದ್ದಾರೆ. ಈ ಮೆಸೇಜ್ಗಳನ್ನು ನಂಬಿದ ಹಲವರು ಅದನ್ನು ಓಪನ್ ಮಾಡಿದ ತಕ್ಷಣ ಅಕೌಂಟ್ ನಲ್ಲಿದ್ದ ಹಣ ಖಾಲಿಯಾಗುತ್ತಿದೆ. ಕೊಡಿಗೇಹಳ್ಳಿ ವ್ಯಾಪ್ತಿಯ ಟೆಕ್ಕಿಯೊಬ್ಬರಿಗೆ ಸೈಬರ್ ವಂಚಕರು ಓಪನ್ ಮಾಡಿ ನಿಮ್ ವಾಹನದ ಫೈನ್ ಎಷ್ಟಿದೆ ಚೆಕ್ ಮಾಡಿಕೊಳ್ಳಿ ಅಂತಾ ಎಪಿಕೆ ಫೈಲ್ಕಳುಹಿಸಿದ್ದರು. ಆ ಮಸೇಜ್ ನಂಬಿದ ಟೆಕ್ಕಿ ಆ ಲಿಂಕ್ ನ ಓಪನ್ ಮಾಡಿದ ಕೆಲವೇ ನಿಮಿಷಗಳಲ್ಲಿ ಖಾತೆಯಲ್ಲಿದ್ದ 2.65 ಲಕ್ಷ ರೂ. ಹಣವನ್ನು ಸೈಬರ್ ವಂಚಕರು ಎಗರಿಸಿದ್ದಾರೆ. ಈ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಮುರಳಿ ದೂರು ನೀಡಿದ್ದಾರೆ. ನಿಮ್ಮ ಬಾಕಿ ದಂಡವನ್ನು ರಿಯಾಯಿತಿಯೊಂದಿಗೆ…
ನವದೆಹಲಿ : ಆನ್ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ 2025 ಅಂಗೀಕಾರವಾದ ನಂತರ ಬಿಸಿಸಿಐ ಮತ್ತು ಡ್ರೀಮ್ 11 ತಮ್ಮ ಸಂಬಂಧವನ್ನು ಸ್ಥಗಿತಗೊಳಿಸುತ್ತಿವೆ. ಈ ಕುರಿತು ಡ್ರೀಮ್11 ಬಿಸಿಸಿಐಗೆ ಮಾಹಿತಿ ನೀಡಿದ್ದು, ಇನ್ನು ಮುಂದೆ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಾಯೋಜಕತ್ವ ವಹಿಸುವುದಿಲ್ಲ. ಬಿಸಿಸಿಐ ಮತ್ತು ಡ್ರೀಮ್ 11 ತಮ್ಮ ಸಂಬಂಧವನ್ನು ಸ್ಥಗಿತಗೊಳಿಸುತ್ತಿವೆ. ಭವಿಷ್ಯದಲ್ಲಿ ಅಂತಹ ಯಾವುದೇ ಸಂಸ್ಥೆಗಳೊಂದಿಗೆ ಬಿಸಿಸಿಐ ತೊಡಗಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ದೇವಚಿತ್ ಸೈಕಿಯಾ ತಿಳಿಸಿದ್ದಾರೆ. https://twitter.com/ANI/status/1959848080041271357?ref_src=twsrc%5Egoogle%7Ctwcamp%5Eserp%7Ctwgr%5Etweet
ಶಿವಪುರಿ : ಮಕ್ಕಳನ್ನು ವೃದ್ಧಾಪ್ಯದ ಆಧಾರವೆಂದು ಪರಿಗಣಿಸಲಾಗುತ್ತದೆ ಮತ್ತು ಹೆಂಡತಿಯನ್ನು ಜೀವನ ಸಂಗಾತಿ ಎಂದು ಪರಿಗಣಿಸಲಾಗುತ್ತದೆ, ಆದರೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ, ಸಂಬಂಧಗಳನ್ನು ನಾಚಿಕೆಪಡಿಸುವ ಘಟನೆಯನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದೆ. ಹಣಕ್ಕಾಗಿ ನಿವೃತ್ತ ಡಿಎಸ್ಪಿಯೊಂದಿಗೆ ಅರೆನಗ್ನ ಸ್ಥಿತಿಯಲ್ಲಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವಾಸ್ತವವಾಗಿ, ನಿವೃತ್ತ ಡಿಎಸ್ಪಿ ಪ್ರತಿಪಾಲ್ ಸಿಂಗ್ ಯಾದವ್ ಅವರನ್ನು ಹಗ್ಗದಿಂದ ಕಟ್ಟಿ ಅವರ ಪತ್ನಿ ಮತ್ತು ಪುತ್ರರು ಥಳಿಸಿದ್ದಾರೆ. ಒಬ್ಬ ಮಗ ಅವರ ಎದೆಯ ಮೇಲೆ ಕೂರಿಸಿ, ಅವರ ಕೈಗಳನ್ನು ಕಟ್ಟಿ, ಇನ್ನೊಬ್ಬರು ಅವರ ಕಾಲುಗಳನ್ನು ಕಟ್ಟಿದ್ದಾರೆ. ಅವರು ಅವರನ್ನು ಬಲವಂತವಾಗಿ ತಮ್ಮೊಂದಿಗೆ ಕರೆದೊಯ್ಯಲು ಬಯಸಿದ್ದರು. ಗ್ರಾಮಸ್ಥರ ಮಧ್ಯಸ್ಥಿಕೆಯ ನಂತರ, ಡಿಎಸ್ಪಿಯನ್ನು ಬಂಧನದಿಂದ ಮುಕ್ತಗೊಳಿಸಲಾಯಿತು. ನಿವೃತ್ತಿಯ ನಂತರ ಪಡೆದ ಲಕ್ಷಾಂತರ ರೂಪಾಯಿಗಳ ಬಗ್ಗೆ ಈ ವಿವಾದ ನಡೆದಿದೆ ಎಂದು ಹೇಳಲಾಗುತ್ತಿದೆ. ಪ್ರತಿಪಾಲ್ ಸಿಂಗ್ 15 ವರ್ಷಗಳಿಂದ ಪತ್ನಿ ಮತ್ತು ಮಕ್ಕಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಇತ್ತೀಚೆಗೆ ನಿವೃತ್ತರಾದ ಡಿಎಸ್ಪಿ ಪ್ರತಿಪಾಲ್ ಸಿಂಗ್ ಅವರನ್ನು ಅವರ ಪತ್ನಿ ಮಾಯಾ ಯಾದವ್ ಮತ್ತು…
ಬೆಂಗಳೂರು : ಕರ್ನಾಟಕದಲ್ಲಿ 18 ವರ್ಷ ತುಂಬುವುದಕ್ಕಿಂತ ಮೊದಲೇ ಗರ್ಭಿಣಿ ಆಗುತ್ತಿರುವವರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ರಾಜ್ಯಾದ್ಯಂತ 3,36,000 ಕ್ಕೂ ಹೆಚ್ಚು ಟಿನೇಜ್ ಪ್ರಗ್ನೆನ್ಸಿ ಪ್ರಕರಣಗಳು ವರದಿಯಾಗಿದೆ. ಹೌದು, ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಾದ್ಯಂತ ಒಟ್ಟಾರೆಯಾಗಿ 3,36,000 ಕ್ಕೂ ಹೆಚ್ಚು ಟಿನೇಜ್ ಪ್ರಗ್ನೆನ್ಸಿ ಪ್ರಕರಣಗಳು ವರದಿಯಾಗಿದ್ದರೆ, ಕಳೆದ ಆರು ತಿಂಗಳಲ್ಲಿ ರಾಜ್ಯದಲ್ಲಿ 22000 ಹಾಗೂ ಬೆಂಗಳೂರು ಅರ್ಬನ್ನಲ್ಲಿ 8891 ಟೀನೇಜ್ ಪ್ರಗ್ನೆನ್ಸಿ ಪ್ರಕರಣಗಳು ಕಂಡು ಬಂದಿವೆ. 2020-21 ರಿಂದ 2024-25 ರವರೆಗೆ (ಫೆಬ್ರವರಿ ವರೆಗೆ) ಎಲ್ಲಾ ಜಿಲ್ಲೆಗಳಲ್ಲಿ 14 ರಿಂದ 19 ವರ್ಷದೊಳಗಿನ ಹುಡುಗಿಯರಲ್ಲಿ ಹದಿಹರೆಯದ ಗರ್ಭಧಾರಣೆಯನ್ನು RCH ಅಂಕಿಅಂಶಗಳು ಪತ್ತೆಹಚ್ಚುತ್ತವೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಕಳೆದ ವರ್ಷ ಅತಿ ಹೆಚ್ಚು 2,723 ಪ್ರಕರಣಗಳು ದಾಖಲಾಗಿವೆ, ನಂತರ ಬೆಳಗಾವಿ (2,622), ವಿಜಯಪುರ (1,919), ಮತ್ತು ರಾಯಚೂರು (1,649) ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ 2020-21 ರಲ್ಲಿ 42,120 ಪ್ರಕರಣಗಳು 2021-22 ರಲ್ಲಿ 44,631 ಮತ್ತು 2022-23 ರಲ್ಲಿ 49,875 ಪ್ರಕರಣಗಳು ದಾಖಲಾಗಿವೆ.…













