Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ಪಡಿತರ ಚೀಟಿ ನೀಡುತ್ತವೆ. ಆಹಾರ ಭದ್ರತೆಗಾಗಿ ಫಲಾನುಭವಿಗಳಿಗೆ ಉಚಿತ ಪಡಿತರ ನೀಡುತ್ತಿವೆ. ಸರಕಾರ ಉಚಿತ ಪಡಿತರ ಯೋಜನೆಯಡಿ ಪಡಿತರ ಚೀಟಿದಾರರಿಗೆ ಪಡಿತರ ಅಕ್ಕಿ ನೀಡುತ್ತಿರುವುದು ಗೊತ್ತೇ ಇದೆ. ಕರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಕೇಂದ್ರವು ಬಡವರಿಗೆ ಉಚಿತ ಅಕ್ಕಿ ವಿತರಿಸಲು ಪ್ರಾರಂಭಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸುವ ಯೋಜನೆಗಳಿಗೆ ಪಡಿತರ ಚೀಟಿ ಉಪಯುಕ್ತವಾಗಿದೆ. ಇತ್ತೀಚೆಗಷ್ಟೇ ಕೇಂದ್ರ ಶುಭ ಸುದ್ದಿ ನೀಡಿದೆ. ಭಾರತದಲ್ಲಿ ಬಡವರಿಗೆ ಸರ್ಕಾರದ ಉಚಿತ ಪಡಿತರ ಯೋಜನೆಯಡಿ 90 ಕೋಟಿ ಜನರಿಗೆ ಉಚಿತ ಪಡಿತರ ನೀಡಲಾಗುತ್ತಿದೆ. ಇಲ್ಲಿಯವರೆಗೆ ಪಡಿತರ ಚೀಟಿದಾರರಿಗೆ ಉಚಿತ ಅಕ್ಕಿ ನೀಡುತ್ತಿದ್ದರು. ಇದೀಗ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪಡಿತರ ಚೀಟಿದಾರರಿಗೆ 9 ಅಗತ್ಯ ವಸ್ತುಗಳನ್ನು ನೀಡುವ ನಿರೀಕ್ಷೆ ಇದೆ. ಇವುಗಳಲ್ಲಿ ಗೋಧಿ, ಬೇಳೆಕಾಳುಗಳು, ಧಾನ್ಯಗಳು, ಸಕ್ಕರೆ, ಉಪ್ಪು, ಸಾಸಿವೆ ಎಣ್ಣೆ, ಹಿಟ್ಟು, ಸೋಯಾಬೀನ್ ಮತ್ತು ಮಸಾಲೆಗಳು ಸೇರಿವೆ. ಬಡವರ ಆರೋಗ್ಯ ಸುಧಾರಿಸಲು,…
ಮೈಸೂರು : ಕೊರೊನಾ ಕಾಲದಲ್ಲಿ ನಡೆದಿರುವ ಹಗರಣದ ವರದಿ ಸಲ್ಲಿಕೆಯಾಗಿದ್ದು, ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡ್ರಂತೆ ಹಾಗಾಯ್ತು ಎಂದು ಸಂಸದ ಡಾ.ಕೆ. ಸುಧಾಕರ್ ಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಕಾಲದಲ್ಲಿ ನಡೆದಿರುವ ಹಗರಣಗಳ ವರದಿ ಸರ್ಕಾರಕ್ಕೆ ನಿನ್ನೆ ಅಷ್ಟೆ ಸಲ್ಲಿಕೆಯಾಗಿದೆ. ವರದಿಯಲ್ಲಿ ಏನಿದೆ ಎಂಬುದು ನನ್ನನ್ನೂ ಸೇರಿಸಿ, ಯಾರಿಗೂ ಗೊತ್ತಿಲ್ಲ. ವರದಿ ಬಹಿರಂಗ ಆಗುವ ಮೊದಲೇ ಡಾ.ಕೆ. ಸುಧಾಕರ್ ಅವರಿಗೆ ವರದಿಯಲ್ಲಿ ಏನಿದೆ ಎಂಬುದು ಗೊತ್ತಾಗಿದೆ ಎಂದರೆ ಏನರ್ಥ? ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡ್ರಂತೆ ಹಾಗಾಯ್ತು ಇದು. ಅವರೊಳಗಿನ ಅಪರಾಧಿಪ್ರಜ್ಞೆ ಅವರನ್ನು ಈ ರೀತಿ ಮಾತಾಡುವಂತೆ ಮಾಡಿದೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 4500 ಪುಟಗಳಷ್ಟು ಚಾರ್ಜ್ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದು ಇಂದು ದೋಷಾರೋಪಣೆ ಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ. ಈ ಬಗ್ಗೆ ಗೃಹ ಸಚಿವ ಡಾ.ಪರಮೇಶ್ವರ್ ಮಾಹಿತಿ ನೀಡಿದ್ದು, ರೇಣುಸ್ವಾಮಿ ಹತ್ಯೆ ಪ್ರಕರಣದ ಚಾರ್ಜ್ ಶೀಟ್ ಇಂದು ಸಲ್ಲಿಸಲಾಗುತ್ತದೆ. ಪ್ರಕರಣ ದಾಖಲಾಗಿ 90 ದಿನದೊಳಗೆ ಚಾರ್ಜ್ ಶೀಟ್ ಸಲ್ಲಿಸಬೇಕು. ಹೀಗಾಗಿ ಇಂದು ಚಾರ್ಜ್ ಶೀಟ್ ಸಲ್ಲಿಸಲಾಗುವುದು, ದರ್ಶನ್ ರನ್ನು ಎ 1 ಆರೋಪಿ ಮಾಡುವ ವಿಚಾರ ತನಿಖಾಧಿಕಾರಿಗಳಿಗೆ ಬಿಟ್ಟಿದ್ದು, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ನಿರೀಕ್ಷೆಯಿದೆ. ದರ್ಶನ್ ಪ್ರಕರಣದಲ್ಲಿ ಸರ್ಕಾರ ಮಧ್ಯ ಪ್ರವೇಶಿಸಲ್ಲ ಎಂದು ತಿಳಿಸಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೆ ಸೆಪ್ಟೆಂಬರ್ 9 ಕ್ಕೆ 3 ತಿಂಗಳು ತುಂಬಲಿವೆ. ಈಗಾಗಲೇ 4500 ಪುಟಗಳ ಚಾರ್ಜ್ಶೀಟ್ ಮುಕ್ತಾಯಗೊಂಡಿದ್ದು, ಇಂದು ಸಲ್ಲಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಅಪರಾಧಿಗಳಿಗೆ ತಪ್ಪಿಸಿಕೊಳ್ಳಲು…
ಮೈಸೂರು : ಮುಡಾ ಹಗರಣವನ್ನು ಬಯಲು ಮಾಡಿದ್ದ ಆರ್ ಟಿಐ ಕಾರ್ಯಕರ್ತ ಗಂಗಾರಾಜು ಮೇಲೆ ಹಲ್ಲೆಗೆ ಯತ್ನ ನಡೆದಿರುವ ಗಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಶ್ರೀರಂಗಪಟ್ಟಣ ಸಮೀಪ ನಾಲ್ವರು ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಗಂಗಾರಾಜು ಅವರು ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಕುಟುಂಬದವರ ಜೊತೆಗೆ ಮೈಸೂರಿಗೆ ಬರುವ ವೇಳೆ ಕಾರು ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು ಗಂಗಾರಾಜು ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಎರಡು ಬೈಕ್ ಮೇಲೆ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ಪರಾರಿಯಾಗಿದ್ದಾರೆ ಎಂದು ಮೈಸೂರು ಪೊಲೀಸ್ ಆಯುಕ್ತರಿಗೆ ಗಂಗಾರಾಜು ದೂರು ಸಲ್ಲಿಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪೂರ್ಣಗೊಳ್ಳುವವರೆಗೆ ರಾಜ್ಯದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧಗೊಳಿಸುವಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ದಿನಾಂಕ: 07.09.2024 ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ, ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಹಾಗೂ ದಿನಾಂಕ: 16.09.2024 ರಂದು ರಾಜ್ಯಾದ್ಯಂತ ಮುಸ್ಲಿಂ ಬಾಂದವರು ಈದ್ ಮಿಲಾದ್ ಹಬ್ಬವನ್ನು ಆಚರಿಸಲಿದ್ದು, ಈ ಸಂಬಂಧ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಸಂದರ್ಭಗಳಲ್ಲಿ ಡಿಜೆ ಸಿನ್ನಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ, ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ & ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆಗಳು ಪೂರ್ಣಗೊಳ್ಳುವವರೆಗೆ ಡಿಜೆ ಸಿಸ್ಟಂ ನಿಷೇಧಿಸುವಂತೆ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಲು ರಾಜ್ಯ ಸರ್ಕಾರ ಸೂಚಿಸಿದೆ.
ನವದೆಹಲಿ : ಕೆಲವು ಹೊಸ ನಿಯಮಗಳು ಸೆಪ್ಟೆಂಬರ್ 1 ರಿಂದ ಜಾರಿಗೆ ಬರಲಿವೆ. ಇತ್ತೀಚಿನ ನವೀಕರಣವು TRAI ಗೆ ಸಂಬಂಧಿಸಿದ ಹೊಸ ನಿಯಮದ ಬಗ್ಗೆಯೂ ಇದೆ. ವೈಟ್ಲಿಸ್ಟ್ ಮಾಡದ ಮತ್ತು URL ಗಳು, OTT ಲಿಂಕ್ಗಳು ಮತ್ತು Android ಅಪ್ಲಿಕೇಶನ್ ಸ್ಥಳ ಪ್ಯಾಕೇಜ್ಗಳು (APK ಗಳು) ಸಂದೇಶಗಳಿಗಾಗಿ ಬಳಸುತ್ತಿರುವ ಅಂತಹ ಸಂಖ್ಯೆಗಳ ಸೇವೆಯನ್ನು ನಿಲ್ಲಿಸುವಂತೆ TRAI ಟೆಲಿಕಾಂ ಕಂಪನಿಗಳಿಗೆ ಸೂಚನೆ ನೀಡಿದೆ. ಟೆಲಿಕಾಂ ಕಂಪನಿಗಳಲ್ಲಿ ನೋಂದಾಯಿಸದ ಸಂಖ್ಯೆಗಳಿಗೆ ಸಂಬಂಧಿಸಿದಂತೆ ಹೊಸ ಸರ್ಕಾರದ ನಿಯಮದ ಗಡುವನ್ನು ವಿಸ್ತರಿಸಲಾಗಿದೆ. ಈ ಮೊದಲು ಈ ಹೊಸ ನಿಯಮವು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುತ್ತಿತ್ತು, ಇದರ ಗಡುವು ಆಗಸ್ಟ್ 31 ಆಗಿತ್ತು. ಈಗ ಈ ಹೊಸ ನಿಯಮ ಸೆಪ್ಟೆಂಬರ್ 30 ರ ನಂತರ ಜಾರಿಗೆ ಬರಲಿದೆ. ಇದಲ್ಲದೆ, ಮುಂದಿನ ತಿಂಗಳು ಆಧಾರ್ ಕಾರ್ಡ್ಗಳು, ಗೂಗಲ್ ಪ್ಲೇ ಸ್ಟೋರ್ ಮತ್ತು ಯುಪಿಐ ವಹಿವಾಟುಗಳಿಗೆ ಸಂಬಂಧಿಸಿದ ನಿಯಮಗಳ ಬಗ್ಗೆ ವಿಶೇಷವಾಗಿರುತ್ತದೆ. ಮುಂದಿನ ತಿಂಗಳು ಯಾವ ನಿಯಮಗಳು ಜಾರಿಗೆ ಬರಲಿವೆ…
ನವದೆಹಲಿ: ವೈವಾಹಿಕ ಸಂಬಂಧಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪತಿ ಆತ್ಮಹತ್ಯೆಗೆ ಪತ್ನಿಯ ವಿವಾಹೇತರ ಸಂಬಂಧ ಕಾರಣವಾಗಿರದಿರಬಹುದು ಎಂದು ಹೇಳಿದೆ. ಮಹಿಳೆ ಮತ್ತು ಆಕೆಯ ಸಂಗಾತಿ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ತಳ್ಳಿ ಹಾಕಿದೆ. ಪತ್ನಿಯ ವಿವಾಹೇತರ ಸಂಬಂಧವೇ ಮಗನ ಸಾವಿಗೆ ಕಾರಣ ಎಂದು ಮೃತನ ತಾಯಿ ಪ್ರಕರಣ ದಾಖಲಿಸಿದ್ದಾರೆ. ಆದರೆ, ಎಫ್ಐಆರ್ನಲ್ಲಿರುವ ಅಂಶಗಳು ನಿಜವೆಂದು ಒಪ್ಪಿಕೊಂಡರೂ, ಮೃತ ಮಹಿಳೆ ಆತ್ಮಹತ್ಯೆಗೆ ಪ್ರೇರೇಪಿಸುವ ಉದ್ದೇಶವನ್ನು ಹೊಂದಿದ್ದಳು ಎಂಬುದು ಸಾಬೀತಾಗಿಲ್ಲ ಎಂದು ಹೈಕೋರ್ಟ್ ಹೇಳಿದೆ. ನ್ಯಾಯಮೂರ್ತಿ ದಿಯೇಶ್ ಎ ಜೋಶಿ ಅವರನ್ನೊಳಗೊಂಡ ಏಕ ಪೀಠವು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಮೃತರ ಪತ್ನಿಗೆ ಆತ್ಮಹತ್ಯೆಗೆ ಪ್ರೇರೇಪಿಸುವ ಉದ್ದೇಶವಿತ್ತು ಎಂದು ಹೇಳಲಾಗದು ಹಾಗಾಗಿ ಐಪಿಸಿ ಸೆಕ್ಷನ್ 306ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಕೆವಿ ಪ್ರಕಾಶ್ ಬಾಬು ವರ್ಸಸ್ ಸ್ಟೇಟ್ ಆಫ್ ಕರ್ನಾಟಕ ಪ್ರಕರಣವನ್ನು ಗುಜರಾತ್ ಹೈಕೋರ್ಟ್ ಉಲ್ಲೇಖಿಸಿದೆ. ವಿವಾಹೇತರ ಸಂಬಂಧವು ಸೆಕ್ಷನ್ 306 ಐಪಿಸಿ ಅಡಿಯಲ್ಲಿ…
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564 ಉಪಯುಕ್ತ ವಿಷಯಗಳು ರಾಶೀಗಳು (12) ಮೇಷ, ವೃಷಭ,…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ ಸ್ಟಾಗ್ರಾಂನಲ್ಲಿ ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಫೋಟೋ, ಮೆಸೇಜ್ ಮಾಡಿದ್ದು ಸತ್ಯ ಎಂದು ಇನ್ ಸ್ಟಾಗ್ರಾಂ ಸಂಸ್ಥೆ ಪೊಲೀಸರಿಗೆ ಮಾಹಿತಿ ನೀಡಿದೆ ಎನ್ನಲಾಗಿದೆ. ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 4500 ಪುಟಗಳಷ್ಟು ಚಾರ್ಜ್ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದು, ಈ ನಡುವೆ ಪವಿತ್ರಾಗೌಡಗೆ ಅಶ್ಲೀಲ ಫೋಟೋ, ಮೆಸೇಜ್ ಕಳಿಸಿದ್ದು ನಿಜ : ಇನ್ ಸ್ಟಾಗ್ರಾಂ ಸಂಸ್ಥೆ ಪೊಲೀಸರಿಗೆ ಮಾಹಿತಿ ನೀಡಿದೆ. ಇನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೆ ಸೆಪ್ಟೆಂಬರ್ 9 ಕ್ಕೆ 3 ತಿಂಗಳು ತುಂಬಲಿವೆ. ಈಗಾಗಲೇ 4500 ಪುಟಗಳ ಚಾರ್ಜ್ಶೀಟ್ ಮುಕ್ತಾಯಗೊಂಡಿದ್ದು, ಶೀಘ್ರವೇ ಸಲ್ಲಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಅಪರಾಧಿಗಳಿಗೆ ತಪ್ಪಿಸಿಕೊಳ್ಳಲು ಅವಕಾಶವಾಗಬಾರದೆಂದು ಕಾನೂನು ತಜ್ಞರ ಸಲಹೆಯನ್ನೂ ಪಡೆಯಲಾಗಿದೆ. ಎರಡ್ಮೂರು ಬಾರಿ ಪರಿಶೀಲನೆಯನ್ನೂ ನಡೆಸಲಾಗಿದೆ. 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ. ಪ್ರಕರಣ ದಾಖಲಾದ ಬಳಿಕ 90 ದಿನಗಳ…
ನವದೆಹಲಿ : Mpox ವೈರಸ್ ಏಕಾಏಕಿ: ಮಾರಣಾಂತಿಕ Mpox ವೈರಸ್ ಆಫ್ರಿಕನ್ ದೇಶಗಳಲ್ಲಿ ಹರಡುತ್ತಿದೆ. WHO ಅಂತರರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸಲು ಪರಿಗಣಿಸುತ್ತಿದೆ. ಅಕಾಡೆಮಿಕ್ ಜರ್ನಲ್ ಸೈನ್ಸ್ ಆಫ್ರಿಕನ್ ದೇಶಗಳಲ್ಲಿ mpox ವೈರಸ್ ಹರಡುವಿಕೆಯ ವಿರುದ್ಧ ಎಚ್ಚರಿಕೆ ನೀಡಿದೆ. ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದಲ್ಲಿ (DRC) ಮೊದಲು ವರದಿ ಮಾಡಿದ್ದು, ಉಗಾಂಡಾ ಮತ್ತು ಕೀನ್ಯಾಕ್ಕೆ mpox ವೈರಸ್ ಹರಡಿತು ಮತ್ತು ಈಗ ಖಂಡದಾದ್ಯಂತ ಹರಡಲು ಪ್ರಾರಂಭಿಸಿದೆ. ಶೀಘ್ರದಲ್ಲೇ, ವಿಶ್ವ ಆರೋಗ್ಯ ಸಂಸ್ಥೆಯು ಶಂಕಿತ mpox ವೈರಸ್ ಹರಡುವಿಕೆಯ ಸುತ್ತ ಬೆಳೆಯುತ್ತಿರುವ ಸಂಕಟವನ್ನು ವ್ಯಕ್ತಪಡಿಸಿತು. WHO ಅಂತರರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸುವ ಸಾಧ್ಯತೆಯಿದೆ. ಡಬ್ಲ್ಯುಎಚ್ಒ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಎಕ್ಸ್ನಲ್ಲಿನ ಪೋಸ್ಟ್ನಲ್ಲಿ, ಉಲ್ಬಣಗೊಳ್ಳುತ್ತಿರುವ ಉದ್ವಿಗ್ನತೆಯ ನಡುವೆ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸುವ ಅಗತ್ಯವಿದೆಯೇ ಎಂದು ನಿರ್ಧರಿಸಲು ಅಂತರರಾಷ್ಟ್ರೀಯ ಆರೋಗ್ಯ ನಿಯಮಗಳ ತುರ್ತು ಸಮಿತಿಯನ್ನು ರಚಿಸುವುದನ್ನು ಪರಿಗಣಿಸುತ್ತಿರುವುದಾಗಿ ಹೇಳಿದ್ದಾರೆ. ಆಫ್ರಿಕನ್ ಯೂನಿಯನ್ನ ಆರೋಗ್ಯ ಸಂಸ್ಥೆಯಾದ ಆಫ್ರಿಕಾ ಸೆಂಟರ್ಸ್ ಫಾರ್ ಡಿಸೀಸ್…