Author: kannadanewsnow57

ಬೆಂಗಳೂರು : ಸ್ಯಾಂಡಲ್ ವುಡ್ ನಟ ದರ್ಶನ್ ಅವರು ಇಂದು ಕೇರಳದ ಕೊಟ್ಟಿಯೂರು ಶಿವನ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಟ ದರ್ಶನ್ ಅವರು ಕುಟುಂಬಸ್ಥರೊಂದಿಗೆ ಕೇರಳದ ಕೊಟ್ಟಿಯೂರು ಶಿವನ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದಾರೆ. ಈ ದೇವಸ್ಥಾನ ವರ್ಷದಲ್ಲಿ ಕೇವಲ 27 ದಿನಗಳು ಮಾತ್ರ ತೆರೆದಿರುತ್ತದೆ. ಶಿವ ತಪ್ಪಸ್ಸು ಮಾಡಿದ ಎಂಬ ಪ್ರತೀತಿ ಇದೆ. ದರ್ಶನ್ ತಮಗೆ ಎದುರಾದ ಈ ಸಂಕಷ್ಟಗಳಿಂದ ಪಾರು ಮಾಡುವಂತೆ ದೇವರ ಮೊರೆ ಹೋಗಿದ್ದಾರೆ. ತನ್ನ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವ ಶತ್ರುಗಳ ನಾಶವಾಗಲಿ ಎಂದು ವಿಶೇಷ ದೇವಾಲಯವೊಂದರಲ್ಲಿ ಪೂಜೆ ಮಾಡಿದ್ದಾರೆ.

Read More

ವಾಷಿಂಗ್ಟನ್ : ಇಸ್ರೇಲ್ ಪ್ರಧಾನಿ ನೆತನ್ಯಾಹು ಇರಾನ್ನ ಅಲಿ ಖಮೇನಿ ಅವರನ್ನು ನಿರ್ಮೂಲನೆ ಮಾಡುವುದರಿಂದ ಸಂಘರ್ಷಕ್ಕೆ “ಕೊನೆ” ಬರುತ್ತದೆ ಎಂದು ಸೂಚಿಸಿದ ಮರುದಿನ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ನ ಸರ್ವೋಚ್ಚ ನಾಯಕ ಎಲ್ಲಿ “ಅವಿತುಕುಳಿತುಕೊಂಡಿದ್ದಾರೆ” ಎಂದು “ನಿಖರವಾಗಿ” ತಿಳಿದಿದ್ದಾರೆ ಮತ್ತು “ಕನಿಷ್ಠ ಈಗಲಾದರೂ, ಅವರು ಅವರನ್ನು ಕೊಲ್ಲಲು ಹೋಗುವುದಿಲ್ಲ” ಎಂದು ಹೇಳಿದರು. ಡೊನಾಲ್ಡ್ ಟ್ರಂಪ್ ಅಯತೊಲ್ಲಾ ಅಲಿ ಖಮೇನಿ ಅವರನ್ನು ಮತ್ತಷ್ಟು ದಾಳಿಗಳ ವಿರುದ್ಧ ಎಚ್ಚರಿಸಿದರು, ಏಕೆಂದರೆ ಅವರು ಟೆಹ್ರಾನ್ನ ಬೇಷರತ್ತಾದ ಶರಣಾಗತಿಯನ್ನು ಒತ್ತಾಯಿಸಿದರು. ಟ್ರೂತ್ ಸೋಷಿಯಲ್ನಲ್ಲಿ ಟ್ರಂಪ್ ಪೋಸ್ಟ್ ಮಾಡಿದ್ದಾರೆ, “” ಸರ್ವೋಚ್ಚ ನಾಯಕ” ಎಂದು ಕರೆಯಲ್ಪಡುವವರು ಎಲ್ಲಿ ಅಡಗಿದ್ದಾರೆಂದು ನಮಗೆ ನಿಖರವಾಗಿ ತಿಳಿದಿದೆ. ಅವರು ಸುಲಭವಾದ ಗುರಿ, ಆದರೆ ಅಲ್ಲಿ ಸುರಕ್ಷಿತರಾಗಿದ್ದಾರೆ – ನಾವು ಅವರನ್ನು ಹೊರಗೆ ಕರೆದೊಯ್ಯಲು ಹೋಗುವುದಿಲ್ಲ (ಕೊಲ್ಲಲು!), ಕನಿಷ್ಠ ಈಗಲಾದರೂ ಅಲ್ಲ. ಆದರೆ ನಾಗರಿಕರು ಅಥವಾ ಅಮೇರಿಕನ್ ಸೈನಿಕರ ಮೇಲೆ ಕ್ಷಿಪಣಿಗಳನ್ನು ಹಾರಿಸುವುದನ್ನು ನಾವು ಬಯಸುವುದಿಲ್ಲ. ನಮ್ಮ ತಾಳ್ಮೆ ಕ್ಷೀಣಿಸುತ್ತಿದೆ. ಈ ವಿಷಯದ…

Read More

ನವದೆಹಲಿ ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಮಾತುಕತೆ ನಡೆದಿದೆ. ಆಪರೇಷನ್ ಸಿಂಧೂರ್ ಬಗ್ಗೆ ಪ್ರಧಾನಿ ಮೋದಿ ಮತ್ತು ಟ್ರಂಪ್ ನಡುವೆ ಈ ಸಂಭಾಷಣೆ ನಡೆದಿದೆ.  ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಈ ಸಂಭಾಷಣೆಯನ್ನು ದೃಢಪಡಿಸಿದ್ದಾರೆ. ಮೋದಿ ಮತ್ತು ಟ್ರಂಪ್ ಸುಮಾರು 35 ನಿಮಿಷಗಳ ಕಾಲ ಸಂಭಾಷಣೆ ನಡೆಸಿದರು. ಈ ಸಂಭಾಷಣೆಯ ಸಮಯದಲ್ಲಿ, ಟ್ರಂಪ್ ಕೆನಡಾದಿಂದ ಪ್ರಧಾನಿ ಮೋದಿಯವರನ್ನು ಅಮೆರಿಕಕ್ಕೆ ಕರೆಯುತ್ತಿದ್ದರು, ಆದರೆ ಮುಂಬರುವ ಪ್ರವಾಸದಲ್ಲಿ ನಿರತರಾಗಿದ್ದರಿಂದ, ಪ್ರಧಾನಿ ಅಮೆರಿಕಕ್ಕೆ ಭೇಟಿ ನೀಡಲು ನಿರಾಕರಿಸಿದರು. https://twitter.com/DDNewslive/status/1935181916925235614?ref_src=twsrc%5Etfw%7Ctwcamp%5Etweetembed%7Ctwterm%5E1935181916925235614%7Ctwgr%5E45a6615798c25ce5f6e3370d4e69549e7ff2077a%7Ctwcon%5Es1_c10&ref_url=https%3A%2F%2Fkannadadunia.com%2Fbreaking-pm-modi-calls-us-president-trump-information-about-operation-sindoor-watch-video%2F ಟ್ರಂಪ್ ಪ್ರಧಾನಿಯನ್ನು ಅಮೆರಿಕಕ್ಕೆ ಬರಬಹುದೇ ಎಂದು ಕೇಳಿದರು. ಕೆನಡಾದಿಂದ ಅಮೆರಿಕಕ್ಕೆ ಹೋಗಲು ತಮ್ಮ ಅಸಾಮರ್ಥ್ಯವನ್ನು ಪ್ರಧಾನಿ ವ್ಯಕ್ತಪಡಿಸಿದರು. ಅಲ್ಲದೆ, ಪ್ರಧಾನಿ ಮೋದಿ ಟ್ರಂಪ್ಗೆ ಹೇಳಿದರು, ಭಾರತ ಮಧ್ಯಸ್ಥಿಕೆಯನ್ನು ಸ್ವೀಕರಿಸಲಿಲ್ಲ. ಆಪರೇಷನ್ ಸಿಂಧೂರ್ ನಡೆಯುತ್ತಿದೆ ಎಂದು ಪ್ರಧಾನಿ ಟ್ರಂಪ್ಗೆ ಸ್ಪಷ್ಟವಾಗಿ ತಿಳಿಸಿದ್ದಾರೆ.

Read More

ಬೆಂಗಳೂರು :  ರಾಜ್ಯದ ಹಲವು ಕಡೆ ಜೂನ್ 23 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಹವಾಮಾನ ಇಲಾಖೆಯು ಮುಂದಿನ 7 ದಿನ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ. ನಾಗರಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಸುರಕ್ಷಿತರಾಗಿರಿ ಎಂದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು. ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಹಾಸನ, ಕೊಡಗು, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಧಾರವಾಡ. ಹಾವೇರಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 19ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಜೂನ್ 19ರಂದು ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಒಳನಾಡಿನ ಮಲೆನಾಡು ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ…

Read More

ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟ್ರೋಫಿ, ಪಾರ್ಕಿನ್ಸನ್, ಮಲ್ಟಿಪಲ್ ಸ್ಕ್ಲೆರೋಸಿಸ್, ಆಟಿಸಂ, ಬೌದ್ಧಿಕ ವಿಕಲತೆ ಹಾಗೂ ಶ್ರವಣ ಮತ್ತು ದೃಷ್ಟಿನ್ಯೂನತೆ ಸೇರಿದಂತೆ ಬಹುವಿಧದ ಅಂಗವಿಕಲತೆಗಳಿAದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಮಾಸಿಕ 1000 ರೂ. ನಷ್ಟು ಗೌರವಧನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರದ ಆದೇಶನುಸಾರ ವಿಶೇಷ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಅರ್ಜಿ ಆಹ್ವಾನಿಸಿದೆ. ಅಂಗವಿಕಲತೆಯಿAದ ಬಳಲುತ್ತಿರುವ ವಿಕಲಚೇತನರ ಆರೈಕೆದಾರರು ಜೂನ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದು. ನಿಗದಿತ ಅರ್ಜಿ ನಮೂನೆ ಹಾಗೂ ಮಾಹಿತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ರಾಯಚೂರು ಜಿಲ್ಲಾ ಕಚೇರಿಯಿಂದ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು: ಭಾವಚಿತ್ರ, ಕರ್ನಾಟಕದಲ್ಲಿ ಕನಿಷ್ಠ 10 ವರ್ಷ ವಾಸವಿರುವ ತಹಶೀಲ್ದಾರರು ನೀಡುವ ವಾಸಸ್ಥಳ ಪ್ರಮಾಣಪತ್ರ, ಶೇಕಡಾ 75 ಅಥವಾ ಹೆಚ್ಚಿನ ಅಂಗವಿಕಲತೆ ಪ್ರಮಾಣಪತ್ರ (ಯುಡಿಐಡಿ ಕಾರ್ಡ್), ಬ್ಯಾಂಕ್ ಉಳಿತಾಯ ಖಾತೆಯ ಪಾಸ್ಬುಕ್ ನಕಲು ಮತ್ತು ಇತರ…

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಬಾಗೇಪಲ್ಲಿ ಪಟ್ಟಣವನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ತಾಲೂಕು ಬಾಗೇಪಲ್ಲಿ ಹೆಸರನ್ನು ಬದಲಾಯಿಸಲು ಒತ್ತಾಯ ಕೇಳಿಬಂದಿತ್ತು. ಪಲ್ಲಿ ಎಂದರೆ ತೆಲುಗು ಭಾಷೆಯಲ್ಲಿ ಹಳ್ಳಿ ಎಂದರ್ಥ, ಆದ್ದರಿಂದ ಈ ಹೆಸರನ್ನು ಬದಲಿಸಬೇಕೆಂದು ಅಭಿಯಾನ ಶುರುವಾಗಿತ್ತು.ಹೀಗಾಗಿ ರಾಜ್ಯ ಸರ್ಕಾರವು ಹೆಸರು ಬದಲಿಸಲು ನಾಳೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. ನಾಳೆ ಐತಿಹಾಸಿಕ ನಂದಿಗಿರಿಧಾಮದಲ್ಲಿ ಸಂಪುಟ ಸಭೆ ನಾಳೆ ಐತಿಹಾಸಿಕ ನಂದಿಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಸಾರ್ವಜನಿಕರಿಗೆ ನಂದಿಗಿರಿಧಾಮ ಪ್ರವೇಶ ಬಂದ್ ಮಾಡಲಾಗಿದೆ. ನಾಳೆ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಹಾಗೂ ನಾಳೆ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಮುಂಜಾಗ್ರತಾ ಕರಮವಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ…

Read More

ಬಳ್ಳಾರಿ: ಈ ಬಾರಿ ಬಜೆಟ್ ನಲ್ಲಿ ಶಾಲಾ ಶಿಕ್ಷಣ ಇಲಾಖೆಗೆ 41 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. 1008 ಶಾಲೆಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಪ್ರಾರಂಭಿಸಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳು ಸಾಕಷ್ಟು ಪ್ರಭಾವ ಬೀರುತ್ತಿವೆ. ಈ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣ ಲಭಿಸುತ್ತಿದ್ದು, ದಾಖಲಾತಿಗೆ ಬೇಡಿಕೆ ಹೆಚ್ಚುತ್ತಿದೆ. ಮಕ್ಕಳ ಭವಿಷ್ಯಕ್ಕೆ ಎಲ್ಲಾ ಸೌಲಭ್ಯ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಭಯಭೀತರಾಗಬಾರದು. ಈ ಹಿಂದೆ ಅವಕಾಶದ ಕೊರತೆಯಿಂದ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದರು. ಈಗ ಎಲ್ಲಾ ರೀತಿಯ ಅನುವು ಮಾಡಿಕೊಡಲಾಗುತ್ತಿದೆ ಎಂದರು. ಕಲ್ಯಾಣ ಕರ್ನಾಟಕ ಭಾಗದ ಶಾಲೆಯ ಮಕ್ಕಳನ್ನು ಮುಂಚೂಣಿಗೆ ತರಲು ರಾಜ್ಯ ಸರ್ಕಾರ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷ ಅನುದಾನ ನೀಡಲಾಗಿದೆ. ಶಿಕ್ಷಕರ ನೇಮಕಾತಿಯಲ್ಲಿ ಹೆಚ್ಚಿನ ಶಿಕ್ಷಕರನ್ನು ಇಲ್ಲಿಗೆ ನೀಡಲಾಗುತ್ತಿದೆ ಎಂದು ಹೇಳಿದ ಸಚಿವ ಮಧು ಬಂಗಾರಪ್ಪ ಅವರು, ಗಡಿಭಾಗದ ಶಾಲೆಗಳಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಪ್ರವೇಶಾತಿ…

Read More

ಮಗು ಹುಟ್ಟಿದಾಗಿನಿಂದ ಹೇಗೆ ಬೆಳೆಯುತ್ತಿದೆ ಎಂಬುದನ್ನು ತಿಳಿಯಲು ಪ್ರತಿ ತಿಂಗಳು ಅವರ ತೂಕ ಮತ್ತು ಎತ್ತರವನ್ನು ಪರಿಶೀಲಿಸುವುದು ಬಹಳ ಮುಖ್ಯ. ಇದು ವೈದ್ಯರಿಗೆ ಅವರ ಆರೋಗ್ಯ ಸ್ಥಿತಿಯನ್ನು ನಿರ್ಣಯಿಸಲು ಸಹಾಯ ಮಾಡುತ್ತದೆ. ಜನನದ ಸಮಯದಲ್ಲಿ ಮಗುವಿನ ಸರಾಸರಿ ತೂಕ ಭಾರತದಲ್ಲಿ ನವಜಾತ ಶಿಶುವಿನ ಸರಾಸರಿ ತೂಕ ಸಾಮಾನ್ಯವಾಗಿ 2.5 ರಿಂದ 3.5 ಕೆಜಿ ನಡುವೆ ಇರುತ್ತದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, 2.5 ಕೆಜಿಗಿಂತ ಕಡಿಮೆ ತೂಕವಿರುವ ಶಿಶುಗಳನ್ನು ‘ಕಡಿಮೆ ಜನನ ತೂಕ’ ಎಂದು ವರ್ಗೀಕರಿಸಲಾಗಿದೆ. ಈ ಸ್ಥಿತಿಯಲ್ಲಿರುವ ಶಿಶುಗಳಿಗೆ ವಿಶೇಷ ಕಾಳಜಿ ಮತ್ತು ಪೋಷಣೆಯ ಅಗತ್ಯವಿದೆ. ಮೊದಲ ವರ್ಷದಲ್ಲಿ ಬೆಳವಣಿಗೆ ಜನನದ ನಂತರದ ಮೊದಲ ವರ್ಷದಲ್ಲಿ ಮಗುವಿನ ಬೆಳವಣಿಗೆ ಅತ್ಯಂತ ವೇಗವಾಗಿರುತ್ತದೆ: ಜನನದ ಸಮಯದಲ್ಲಿ: ಸರಾಸರಿ ತೂಕ 3 ಕೆಜಿ 3 ತಿಂಗಳಲ್ಲಿ: ಸುಮಾರು 5-6 ಕೆಜಿ 6 ತಿಂಗಳಲ್ಲಿ: ಸುಮಾರು 7-8 ಕೆಜಿ 9 ತಿಂಗಳಲ್ಲಿ: ಸುಮಾರು 8-9 ಕೆಜಿ 1 ವರ್ಷದಲ್ಲಿ: ಸುಮಾರು 9-10 ಕೆಜಿ…

Read More

ಬೆಂಗಳೂರು : 2025-26 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಮುಂಗಾರು ಹಂಗಾಮಿನ ಬೆಳೆ ವಿಮಾ ನೋಂದಣಿಗಾಗಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮುಂಗಾರು ಹಂಗಾಮಿಗೆ ಆಯ್ದ ಹೋಬಳಿಗಳಲ್ಲಿ ಮಳೆ ಆಶ್ರಿತ ಬೆಳೆಗಳಾದ ರಾಗಿ, ಜೋಳ ಹಾಗೂ ಪಂಚಾಯಿತಿ ಮಟ್ಟದಲ್ಲಿ ನೀರಾವರಿ/ಮಳೆ ಆಶ್ರಿತ ಬೆಳೆಗಳಾದ ಭತ್ತ, ಮುಸುಕಿನ ಜೋಳ ಬೆಳೆಗಳು ಆಯ್ಕೆ ಆಗಿದ್ದು, ಜಿಲ್ಲೆಯಲ್ಲಿ ಬೆಳೆ ವಿಮಾ ಯೋಜನೆಯನ್ನು ಸರ್ಕಾರದಿಂದ ಆಯ್ಕೆಯಾದ ಓರಿಯೆಂಟಲ್ ಜನರಲ್ ಇನ್‌ಶ್ಯೂರೆನ್ಸ್ ಕಂಪನಿಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುವುದು. ವಿಮಾ ಬೆಳೆ ನೋಂದಣಿ ಮಾಡಿಕೊಳ್ಳಲು ಜು.31 (ಮುಸುಕಿನ ಜೋಳ) ಹಾಗೂ ಆ.16 (ಭತ್ತ, ಜೋಳ,ರಾಗಿ) ಕೊನೆಯ ದಿನಾಂಕವಾಗಿದೆ. ಬಿತ್ತನೆ/ನಾಟಿ ಮಾಡುವುದಕ್ಕಿಂತ ಮುಂಚಿತವಾಗಿಯೇ ನೋಂದಾಯಿಸಲು ಅವಕಾಶವಿದ್ದು, ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣೆ ಮತ್ತು ಆಧಾರ್ ಸಂಖ್ಯೆ ಸಹಿತ ತಮಗೆ ಹತ್ತಿರವಿರುವ ಬ್ಯಾಂಕ್/ಆರ್ಥಿಕ ಸಂಸ್ಥೆಗಳು/ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ (ಸಿಎಸ್‌ಸಿ ಕೇಂದ್ರಗಳು) ನೋಂದಾಯಿಸಿಕೊಳ್ಳಬಹುದು. ಬೆಳೆ ಸಾಲ ಪಡೆಯುವ ರೈತರನ್ನು…

Read More

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಪ್ರವೇಶಾತಿಗೆ ಜೂನ್ 21 ರವರೆಗೆ ಅವಕಾಶ ನೀಡಲಾಗಿದೆ. ಪ್ರಥಮ ಪಿಯು ತರಗತಿಗಳಿಗೆ ಪ್ರವೇಶ ಪಡೆಯಲು ಜೂ.16ರಿಂದ 21ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ. 670 ರೂ. ದಂಡ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಜೂ.23ರಿಂದ 26 ಮತ್ತು 2220 ರೂ. ವಿಶೇಷ ದಂಡ ಶುಲ್ಕ ಮತ್ತು 670 ರೂ. ದಂಡ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಜೂ.30 ಕೊನೆಯ ದಿನವಾಗಿದೆ ಎಂದು ಸುತ್ತೋಲೆ ಹೊರಡಿಸಲಾಗಿದೆ.

Read More