Subscribe to Updates
Get the latest creative news from FooBar about art, design and business.
Author: KNN IT TEAM
ಬೆಂಗಳೂರು: ಜಾತಿಗಣತಿ ಹಿನ್ನೆಲೆಯಲ್ಲಿ ಒಕ್ಕಲಿಗ ಸಮುದಾಯದ ಮಹತ್ವದ ಸಭೆ ನಡೆಯಿತು.ಈ ವೇಳೆ ಸಭೆಯಲ್ಲಿ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದ್ದು, ಅದರಂತೆ ಧರ್ಮ ಹಿಂದೂ, ಜಾತಿ ಒಕ್ಕಲಿಗ ಅಂಥ ಬರೆಸಿ ಅಂತ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಸಭೆಯಲ್ಲಿ ಯಾರೂ ಗೊಂದಲ ಮಾಡಿಕೊಳ್ಳಬೇಡಿ, ಉಪಜಾತಿಯಲ್ಲಿ ಕೂಡ ಒಕ್ಕಲಿಗೆ ಅಂತ ಬರೆಸಿ ಅಂತ ತಮ್ಮ ಜನಾಂಗದ ಜನತೆಗೆ ಮನವಿಮಾಡಿಕೊಳ್ಲಲಾಗಿದೆ. ಸಭೆಯಲ್ಲಿ ಡಿಸಿಎಂ ಶಿವಕುಮಾರ್ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಸಮಾಜದ ಹಲವು ಮಂದಿ ಹಾಜರಿದ್ದರು.
ನಿವೃತ್ತಿಯ ನಂತರ, ಜನರು ತಮ್ಮ ಖರ್ಚುಗಳನ್ನು ಹೇಗೆ ಪೂರೈಸುತ್ತಾರೆ ಎಂದು ಆಶ್ಚರ್ಯ ಪಡುತ್ತಾರೆ. ಉದ್ಯೋಗದಲ್ಲಿರುವಾಗಲೂ ಅವರಿಗೆ ಸಂಬಳ ಸಿಗುತ್ತಲೇ ಇರುತ್ತದೆ. ಆದರೆ ವೃದ್ಧಾಪ್ಯದಲ್ಲಿ, ನಿವೃತ್ತಿಯ ನಂತರ, ಆದಾಯದ ಮೂಲಗಳು ಕಡಿಮೆಯಾಗುತ್ತವೆ. ಆದ್ದರಿಂದ, ಜನರು ತಮ್ಮ ದೈನಂದಿನ ಖರ್ಚುಗಳನ್ನು ಸರಿದೂಗಿಸಲು ಸಾಕಷ್ಟು ಮಾಸಿಕ ಪಿಂಚಣಿಯನ್ನು ಪಡೆಯಲು ಬಯಸುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಅಟಲ್ ಪಿಂಚಣಿ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯಡಿಯಲ್ಲಿ, ಸಾಮಾನ್ಯ ನಾಗರಿಕರು ಪ್ರತಿ ತಿಂಗಳು ನಿಗದಿತ ಮೊತ್ತವನ್ನು ಠೇವಣಿ ಇಡುತ್ತಾರೆ. ನಿವೃತ್ತಿಯ ನಂತರ, ಅವರು ₹1,000 ರಿಂದ ₹5,000 ವರೆಗೆ ಮಾಸಿಕ ಪಿಂಚಣಿ ಪಡೆಯಬಹುದು.ಭಾರತ ಸರ್ಕಾರದ ಅಟಲ್ ಪಿಂಚಣಿ ಯೋಜನೆಯಿಂದ ಯಾರು ಪ್ರಯೋಜನ ಪಡೆಯಬಹುದು? ಅರ್ಹತಾ ಮಾನದಂಡಗಳ ಬಗ್ಗೆ ತಿಳಿಯಿರಿ. ಅಟಲ್ ಪಿಂಚಣಿ ಯೋಜನೆಯನ್ನು 2015 ರಲ್ಲಿ ಪ್ರಾರಂಭಿಸಲಾಯಿತು. ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಮತ್ತು ನಿವೃತ್ತಿಯ ನಂತರ ಯಾವುದೇ ಪ್ರಯೋಜನಗಳನ್ನು ಪಡೆಯದವರಿಗೆ ಆರ್ಥಿಕ ನೆರವು ನೀಡುವುದು ಇದರ ಉದ್ದೇಶವಾಗಿದೆ. ಈ ಸೇರಲು, ನೀವು 18 ರಿಂದ 40 ವರ್ಷ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ತಿಥಿ, ಪ್ರತಿ ದಿನಕ್ಕೆ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ವರ್ಷದಲ್ಲಿ ಹಲವು ಹುಣ್ಣಿಮೆಗಳು ಬರುವುದು. ಅವುಗಳಲ್ಲಿ ಕೆಲವು ಹುಣ್ಣಿಮೆಗೆ ವಿಶೇಷ ಮಹತ್ವವನ್ನು ನೀಡಲಾಗಿದೆ. ಅದರಲ್ಲಿ ಒಂದು ಗುರು ಪೂರ್ಣಿಮಾ. ಈ ದಿನ ಗುರುಗಳಿಗೆ ವಿಶೇಷವಾದ ಮಹತ್ವವನ್ನು ನೀಡುವ ಮೂಲಕ ವರ್ಣನೆ ಮಾಡಲಾಗುತ್ತದೆ. ಈ ಗುರುಪೂರ್ಣಿಮಾ ದಿನ ಗುರುಗಳ ಆಶೀರ್ವಾದವನ್ನು ಪಡೆಯುವುದರಿಂದ ಜೀವನದಲ್ಲಿ ಸುಖ, ಸಮೃದ್ಧಿ ನೆಲೆಸುವುದು ಎಂದು ಹೇಳಲಾಗುವುದು. ಜೊತೆಗೆ ಈ ದಿನ ವ್ಯಾಸ ಪೂರ್ಣಿಮಾ ಎಂದು ಸಹ ಕರೆಯುವರು. ಈ ದಿನ ವ್ಯಾಸ ಮಹರ್ಷಿಗಳ ಜನ್ಮದಿನ ಎಂದು ಹೇಳಲಾಗುತ್ತದೆ. ಜುಲೈ 10 ರಂದು ಈ ವರ್ಷದ ಗುರು ಪೂರ್ಣಿಮಾವನ್ನು ಆಚರಿಸಲಾಗುವುದು. ಈ ದಿನ ಗುರುಗಳ ಆಶೀರ್ವಾದವನ್ನು ಪಡೆಯುವ ಸಂದರ್ಭದಲ್ಲಿ ಅವರ ರಾಶಿಗೆ ಅನುಸಾರವಾಗಿ ಉಡುಗೊರೆಯನ್ನು ನೀಡುವುದರಿಂದ ನೀವು ಹೆಚ್ಚಿನ ಶುಭ ಫಲಗಳನ್ನು ಪಡೆಯಬಹುದಾಗಿದೆ. ಹಾಗಾಗಿ ನಿಮ್ಮ ಗುರುಗಳಿಗೆ ಅವರ ರಾಶಿಗೆ ಅನುಸಾರ ಯಾವೆಲ್ಲ ವಸ್ತುಗಳನ್ನು ಉಡುಗೊರೆಯಾಗಿ ನೀಡಬಹುದು ಎನ್ನುವ ಮಾಹಿತಿಯನ್ನು ತಿಳಿದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ :…
ನಿಮ್ಮ ಪ್ರೀತಿಪಾತ್ರರೊಂದಿಗೆ ಶಾಂತತೆಯಿಂದ ಸಮಯ ಕಳೆಯಲು ತಕ್ಕ ಸ್ಥಳವನ್ನು ಹುಡುಕುತ್ತಿದ್ದೀರಾ? ಮಂಗಳೂರಿನ ಕಿನ್ನಿಗೋಳಿ ಬಳಿ ಇರುವ ಎಸ್ಬಿಎಸ್ ಫಾರ್ಮ್ಹೌಸ್ (Sugandhi Bhoja Shetty Farm House ) ನಿಮಗೆ ಸರಿಯಾದ ಆಯ್ಕೆ. ಇದು ನಗರದ ಜೀವನದ ಜಂಜಾಟದಿಂದ ದೂರವಿದ್ದು, ನಿಸರ್ಗದ ಸೌಂದರ್ಯವನ್ನು ಅನುಭವಿಸಲು ಮತ್ತು ಕುಟುಂಬ ಹಾಗೂ ಸ್ನೇಹಿತರೊಂದಿಗೆ ಅಮೂಲ್ಯ ಕ್ಷಣಗಳನ್ನು ರಚಿಸಲು ಶಾಂತವಾದ ಪರಿಸರವನ್ನು ಹೊಂದಿದೆ. ನಿಸರ್ಗದ ಸೌಂದರ್ಯದಲ್ಲಿ ವಿಶ್ರಾಂತಿ ಎಸ್ಬಿಎಸ್ ಫಾರ್ಮ್ಹೌಸ್ ತೆಂಗಿನ ತೋಟ , ಎತ್ತರದ ಮರಗಳು ಮತ್ತು ತಾಜಾ ಗಾಳಿಯಿಂದ ಆವರಿತವಾಗಿದೆ. ಇಲ್ಲಿ ನೀವು ದಿನನಿತ್ಯದ ಒತ್ತಡ ಮತ್ತು ಗದ್ದಲವನ್ನು ಮರೆತು, ನಿಜವಾದ ವಿಶ್ರಾಂತಿಯ ಅನುಭವ ಪಡೆಯಬಹುದು. ಮರಗಳ ನೆರಳಿನಲ್ಲಿ ಕುಳಿತುಕೊಳ್ಳುವುದು ಅಥವಾ ಹುಲ್ಲಿನ ಮೇಲೆ ನಡೆಯುವುದು—ಇದಕ್ಕೆಲ್ಲ ನಿಸರ್ಗದ ಶಾಂತಿಯೇ ಸಾಥಿ. ಇದು ಶಾಂತವಾದ ಸ್ಥಳವಾದರೂ, ತುಂಬಾ ಸುಲಭವಾಗಿ ತಲುಪಬಹುದಾಗಿದೆ. ಕಿನ್ನಿಗೋಳಿ, ಮುಲ್ಕಿ ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಬಜ್ಪೆ) ಇವೆಲ್ಲದರ ಹತ್ತಿರವಿರುವ ಈ ಸ್ಥಳ ಸ್ಥಳೀಯರು ಹಾಗೂ ಪ್ರವಾಸಿಗರಿಗೆ ಸಹ ಸುಂದರವಾದ ತಾಣವಾಗಿದೆ. ಮೋಜು ಮತ್ತು ಆಚರಣೆಗಳಿಗೆ ( Event ) ಸೂಕ್ತ ಸ್ಥಳ ನೀವು ಹುಟ್ಟುಹಬ್ಬದ ಪಾರ್ಟಿ, ವಾರಾಂತ್ಯದ ಗೆಟ್-ಟುಗೆದರ್ ಅಥವಾ ಸ್ನೇಹಿತರೊಂದಿಗೆ ಮೋಜಿನ ಸಮಯವನ್ನು…
ಬೆಂಗಳೂರು : ದಿನಾಂಕ 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಆದೇಶವನ್ನು ಹೊರಡಿ ಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ದಿನಾಂಕ: 01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಲವು ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿ ಆದೇಶಿಸಲಾಗಿದೆ. 2. ಸದರಿ ಆದೇಶದನ್ವಯ ನೌಕರರು ತಮ್ಮ ಅಭಿಮತವನ್ನು ಚಲಾಯಿಸಲು ಕೊನೆಯ ದಿನಾಂಕ: 30.06.2024 ಆಗಿರುತ್ತದೆ. ನೌಕರರ ಆಯ್ಕೆಗನುಸಾರ ಅವರು ಹಿಂದಿನ…
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಪ್ರಕರಣದ ವಿಚಾರಣೆಯನ್ನು ಸಿಐಡಿಗೆ ರಾಜ್ಯ ಸರ್ಕಾರ ವಹಿಸಿದೆ. ಈ ನಡುವೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna) ಅವರನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಸೂರಜ್ ಅವರನ್ನು ಇಂದು ರಾತ್ರಿ ಬೆಂಗಳೂರಿನ ಜನ ಪ್ರತಿನಿಧಿ ನ್ಯಾಯಾಲಯಗಳ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ಇದೇ ವೇಳೇ ನ್ಯಾಯಾಧೀಶರು ಸೂರಜ್ ರನ್ನು 14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಿ ಆದೇಶ ನೀಡಿದ್ದಾರೆ. ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಭಾನುವಾರ ಮುಂಜಾನೆವರೆಗೂ ಸಿಇಎನ್ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ ಬಳಿಕ ಅವರನ್ನು ಬಂಧಿಸಿದೆ ಅಂತ ತಿಳಿದು ಬಂದಿದೆ
ನವದೆಹಲಿ: ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬದವರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಇವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಅವರ ನೋಂದಾಯಿತ ವಿವಾಹವು ಸ್ವಲ್ಪ ಸಮಯದ ಹಿಂದೆ ಪೂರ್ಣಗೊಂಡಿದೆ. ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಅವರ ನೋಂದಾಯಿತ ವಿವಾಹವು ಸ್ವಲ್ಪ ಸಮಯದ ಹಿಂದೆ ಪೂರ್ಣಗೊಂಡಿದೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿ, ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ತಮ್ಮ ಕುಟುಂಬಗಳು ಮತ್ತು ಕೆಲವು ಆಪ್ತ ಸ್ನೇಹಿತರ ಸಮ್ಮುಖದಲ್ಲಿ 1954 ರ ವಿಶೇಷ ವಿವಾಹ ಕಾಯಿದೆಯ ಅಡಿಯಲ್ಲಿ ತಮ್ಮ ವಿವಾಹವನ್ನು ನೋಂದಾಯಿಸಿಕೊಂಡರು.
ನವದೆಹಲಿ: ಪರೀಕ್ಷಾ ಪ್ರಕ್ರಿಯೆಯ ಅತ್ಯುನ್ನತ ಮಟ್ಟದ ಪಾರದರ್ಶಕತೆ ಮತ್ತು ಪಾವಿತ್ರ್ಯತೆಯನ್ನು ಖಚಿತಪಡಿಸಿಕೊಳ್ಳಲು ಯುಜಿಸಿ-ನೆಟ್ ಜೂನ್ 2024 ರ ಪರೀಕ್ಷೆಯನ್ನು ರದ್ದುಗೊಳಿಸಲು ಶಿಕ್ಷಣ ಸಚಿವಾಲಯ ನಿರ್ಧರಿಸಿದೆ. ಹೊಸದಾಗಿ ಪರೀಕ್ಷೆಯನ್ನು ನಡೆಸಲಾಗುವುದು, ಇದಕ್ಕಾಗಿ ಮಾಹಿತಿಯನ್ನು ಪ್ರತ್ಯೇಕವಾಗಿ ಹಂಚಿಕೊಳ್ಳಬೇಕು ಎಂಬುದನ್ನು ಅಭ್ಯರ್ಥಿಗಳು ಗಮನಿಸಬೇಕಾಗಿದೆ. ಏಕಕಾಲದಲ್ಲಿ, ಈ ವಿಷಯವನ್ನು ಸಮಗ್ರ ತನಿಖೆಗಾಗಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗುತ್ತಿದೆ. ಜೂನ್ 2024 ರ ಪರೀಕ್ಷೆ ರದ್ದ
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತಹಂತವಾಗಿ ಒಟ್ಟು 1,400 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಮಂಗಳವಾರ ತಮ್ಮನ್ನು ಇಲ್ಲಿ ಭೇಟಿಯಾದ ಮುತ್ತಯ್ಯ ಅವರೊಂದಿಗೆ ಸಚಿವರು ಈ ಸಂಬಂಧ ಮಾತುಕತೆ ನಡೆಸಿದರು. ಬಳಿಕ ಮಾತನಾಡಿದ ಸಚಿವರು, ಬದನಕುಪ್ಪೆಯಲ್ಲಿ ಮುರಳೀಧರನ್ ಅವರು ‘ಮುತ್ತಯ್ಯ ಬ್ರಿವರೇಜಸ್ ಮತ್ತು ಕನ್ಫೆಕ್ಷನರೀಸ್’ ಎನ್ನುವ ಬ್ರ್ಯಾಂಡ್ ನಲ್ಲಿ ತಮ್ಮ ಉದ್ದಿಮೆ ಆರಂಭಿಸುತ್ತಿದ್ದು, ಶುರುವಿನಲ್ಲಿ 230 ಕೋಟಿ ರೂಪಾಯಿ ಹೂಡಿಕೆಗೆ ಯೋಜನೆ ರೂಪಿಸಲಾಗಿತ್ತು. ನಂತರ ಅದು ಈಗ ಸಾವಿರ ಕೋಟಿ ಮುಟ್ಟುತ್ತಿದೆ. ಮುಂದಿನ ದಿನಗಳಲ್ಲಿ 1,400 ಕೋಟಿ ಆಗಲಿದೆ ಎಂದು ಮುತ್ತಯ್ಯ ತಮಗೆ ತಿಳಿಸಿದ್ದಾರೆ ಎಂದು ಅವರು ವಿವರಿಸಿದರು.ಇದಕ್ಕಾಗಿ ಅವರಿಗೆ ಈಗಾಗಲೇ 46 ಎಕರೆ ಭೂಮಿ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಲ ಸಣ್ಣಪುಟ್ಟ ತೊಡಕುಗಳಿದ್ದವು. ಅವುಗಳನ್ನು ಕೂಡಲೇ ಸರಿಪಡಿಸುವಂತೆ ಸಂಬಂಧಿಸಿದ…
ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರ ಹಾಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಗೆ ಆರೆಂಜ್ ಅಲರ್ಟ್, ಉತ್ತರಕನ್ನಡದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದಲ್ಲದೇ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮುಂದಿನ ಐದು ದಿನ ಆರೆಂಜ್ ಅಲರ್ಟ್ ಕೊಟ್ಟಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಚಾಮರಾಜನಗರದಲ್ಲಿ ಸೋಮವಾರ ಆರೆಂಜ್ ನಂತರದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಾವಣಗೆರೆಯಲ್ಲಿ ಇಂದು ಮತ್ತೆ ನಾಳೆ ಮತ್ತು ಮೇ 22 ರಂದು, ಮಂಡ್ಯದಲ್ಲಿ ಮೂರು ದಿನ ಮತ್ತು ಮೇ 23 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಮೈಸೂರಿನಲ್ಲಿ ಸೋಮವಾರ ಆರೆಂಜ್ ನಂತರದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಮನಗರ ಜಿಲ್ಲೆಯಲ್ಲಿ ಇಂದು…