Author: kannadanewslive

ಬಳ್ಳಾರಿ : ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಚೇರಿಯಿಂದ ದಿ ಫ್ಯಾಮಿಲಿ ಪಿಲ್ಲರ್ ಅಲೈಯನ್ಸ್ ಸಂಸ್ಥೆಯು ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ, ಮನೆ ಮತ್ತು ಆಸ್ಪತ್ರೆ ಆರೈಕೆ ಮಾಡುವವರಿಗೆ ಉಚಿತ ನರ್ಸಿಂಗ್ ತರಬೇತಿ ಮತ್ತು ಉದ್ಯೋಗ ಕಲ್ಪಿಸಿಕೊಡಲು ಅರ್ಹ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 50 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದ್ದು, ಮೊದಲು ಬಂದವರಿಗೆ ಆದ್ಯತೆ ಇರುತ್ತದೆ.ತರಬೇತಿಯಲ್ಲಿ 30 ದಿನಗಳ ಪಠ್ಯ ಮತ್ತು 60 ದಿನಗಳ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ಅಭ್ಯರ್ಥಿಗಳ ವಯೋಮಿತಿ 18-42 ಒಳಗಿರಬೇಕು, ಕನಿಷ್ಠ 8 ನೇ ತರಗತಿ ಉತ್ತೀರ್ಣರಾಗಿರಬೇಕು, ಸರಳ ಇಂಗ್ಲೀಷ್ ಗ್ರಹಿಕಾ ಸಾಮಥ್ರ್ಯ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಎಸ್.ಪಿ.ವೃತ್ತ, ಪಾರ್ವತಿನಗರದ ಬಸವಭವನ ರಸ್ತೆಯಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಚೇರಿ ಅಥವಾ ದೂ.08392-27398 9019847029, 9964502514, 8073852104, 984444958 ಗೆ ಸಂಪಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಬಸವರಾಜಪ್ಪ ಅವರು ತಿಳಿಸಿದ್ದಾರೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ ಮಡಿಕೇರಿ : 2022-23ನೇ…

Read More

ಉಡುಪಿ :ಬ್ರಹ್ಮಾವರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಹಳ್ಳಿಬೈಲು (ಸಾಮಾನ್ಯ), ಹೊಸಬೆಂಗ್ರೆ (ಸಾಮಾನ್ಯ), ಕೋಟಶಾಲೆ (ಸಾಮಾನ್ಯ), ಬೆರ್ಳ್ಳಪಾಡಿ (ಸಾಮಾನ್ಯ), ಚಿಪ್ಪಿಕಟ್ಟೆ(ಸಾಮಾನ್ಯ), ತೊಟ್ಟಂ (ಸಾಮಾನ್ಯ), ಉಪ್ಪೂರು ಸಾಲ್ಮರ (ಸಾಮಾನ್ಯ), ಹರಾವು (ಸಾಮಾನ್ಯ) ಮತ್ತು ಹೇರಂಜೆ (ಸಾಮಾನ್ಯ) ಅಂಗನವಾಡಿಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗೆ 18 ರಿಂದ 35 ವರ್ಷದೊಳಗಿನ, ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಸ್ಥಳೀಯ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನವಾಗಿದ್ದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹಂದಾಡಿ ಗ್ರಾಮ ಪಂಚಾಯತ್ ಹತ್ತಿರ, ಗಾಂಧಿಮೈದಾನ, ಬ್ರಹ್ಮಾವರ ದೂ.ಸಂಖ್ಯೆ: 0820-2562244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಹರ್ಕೂರು ಗ್ರಾಮ (ಸಾಮಾನ್ಯ), ಜಪ್ತಿ ಗ್ರಾಮದ ಕರಿಕಲ್…

Read More

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಕ್ಷೇತ್ರ ಆಯ್ಕೆ ಬಹಳ ಗೊಂದಲವಾಗಿದೆ. ಇದರ ನಡುವೆ ಮಾ.24 ರಂದು ಮಾಜಿ ಸಿಎಂ ಸಿದ್ದರಾಮಯ್ಯ ಬಾದಾಮಿ ಪ್ರವಾಸ ಕೈಗೊಂಡಿದ್ದಾರೆ. ಜನರ ನಾಡಿಮಿಡಿತ ತಿಳಿಯಲು ಮಾಜಿ ಸಿಎಂ ಸಿದ್ದರಾಮಯ್ಯ ಮಾ.24 ರಂದು ಬಾದಾಮಿ ಪ್ರವಾಸ ಕೈಗೊಂಡಿದ್ದಾರೆ. ಮಾ.24 ರಂದು ಬಾದಾಮಿಯಲ್ಲಿ ವಿವಿಧ ಕಾಮಗಾರಿಗಳ ನೆಪ ಮಾಡಿಕೊಂಡು ಸಿದ್ದರಾಮಯ್ಯ ಬಾದಾಮಿ ಪ್ರವಾಸ ಕೈಗೊಂಡಿದ್ದಾರೆ. ವರುಣಾ, ಕೋಲಾರ ಎಲ್ಲಾ ಬಿಟ್ಟು ಬಾದಾಮಿಯತ್ತ ಸಿದ್ದರಾಮಯ್ಯ ಮನಸ್ಸು ಮಾಡಲಿದ್ದಾರಾ ಎಂಬ ಕುತೂಹಲ ಮೂಡಿದೆ. ಜನರ ಮನಸ್ಸನ್ನು ಅರಿಯಲು ಸಿದ್ದರಾಮಯ್ಯ ಮಾ.24 ರಂದು ಬಾದಾಮಿ ಟೂರ್ ಕೈಗೊಂಡಿದ್ದಾರೆ. ಆಪ್ತರಿಂದ 5 ಕ್ಷೇತ್ರಗಳ ಸಲಹೆ ಸಿದ್ದರಾಮಯ್ಯ ಕ್ಷೇತ್ರ ಆಯ್ಕೆ ವಿಚಾರ ರಾಜ್ಯ ರಾಜಕಾರಣದಲ್ಲಿ ಬಹಳ ಕುತೂಹಲ ಮೂಡಿಸಿದೆ. ಕ್ಷೇತ್ರ ಆಯ್ಕೆಯ ಗೊಂದಲದಲ್ಲಿರುವ ಸಿದ್ದರಾಮಯ್ಯಗೆ ಆಪ್ತರು 5 ಕ್ಷೇತ್ರಗಳ ಆಯ್ಕೆಯನ್ನು ನೀಡಿದ್ದಾರೆ.ಈ ಐದರಲ್ಲಿ ಒಂದು ಕ್ಷೇತ್ರವನ್ನು ಆಯ್ಕೆ ಮಾಡಿ. ಈ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಖಂಡಿತ. ನೀವು ಗೆಲ್ಲಬಹುದು ಎಂದು ಸಲಹೆ ನೀಡಿದ್ದಾರೆ. ಹೌದು, ವರುಣಾ, ಚಾಮರಾಜಪೇಟೆ,…

Read More

ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2023-24 ನೇ ಸಾಲಿಗೆ ರೈತರ ಮಕ್ಕಳಿಗಾಗಿ ದಿ:02/05/2023 ರಿಂದ ದಿ: 29/02/2024 ರವರೆಗೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾಗಿದ್ದು, ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಆಸಕ್ತರು ಅರ್ಜಿಯನ್ನು ತೋಟಗಾರಿಕೆ ಇಲಾಖೆಯ ವೆಬ್ಸೈಟ್ https://horticulturedir.karnataka.gov.in ನಿಂದ ಡೌನ್ಲೋಡ್ ಮಾಡಿಕೊಳ್ಳುವುದು ಅಥವಾ ಶಿವಮೊಗ್ಗ ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಅಥವಾ ಆಯಾ ತಾಲ್ಲೂಕಿನಲ್ಲಿರುವ ತೋಟಗಾರಿಕೆ ಇಲಾಖೆಯ ಕಚೇರಿಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಿ: 12/04/2023 ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-222794/9964512759 ಗೆ ಸಂಪರ್ಕಿಸುವುದು. https://kannadanewsnow.com/kannada/if-you-do-this-before-leaving-for-an-important-job-you-will-definitely-get-success/ https://kannadanewsnow.com/kannada/if-you-do-this-before-leaving-for-an-important-job-you-will-definitely-get-success/

Read More

ಚಿಕ್ಕಮಗಳೂರು : ಕೆಎಸ್ ಆರ್ ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರಿನ  ಕೃಷಿ ವ್ಯವಸಾಯೋತ್ಪನ್ನ ಕಚೇರಿ ಬಳಿ ನಡೆದಿದೆ. ಮೃತರನ್ನು ಶ್ರೀಧರ್ (28) ದಯಾನಂದ (30) ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಬಸ್ ಗೆ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಚಿಕ್ಕಮಗಳೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. M.P ಕುಮಾರಸ್ವಾಮಿಗೆ ಟಿಕೆಟ್ ಕೊಡಬೇಡಿ : ಸಿ.ಟಿ ರವಿ ಮನೆ ಮುಂದೆ ‘BJP’ ಕಾರ್ಯಕರ್ತರ ಆಕ್ರೋಶ ಮೂಡಿಗೆರೆ : ಮೂಡಿಗೆರೆಯಲ್ಲಿ ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ಧ ಸ್ವಪಕ್ಷೀಯ ಕಾರ್ಯಕರ್ತರೇ ತಿರುಗಿ ಬಿದ್ದಿದ್ದು, ಈ ಬಾರಿ ಟಿಕೆಟ್ ನೀಡಬೇಡಿ ಎಂದು ಪಟ್ಟುಹಿಡಿದು ಕುಳಿತಿದ್ದಾರೆ. ಹೌದು, ಬಿಜೆಪಿ ಕಾರ್ಯಕರ್ತರು ಮೂಡಿಗೆರೆಯಿಂದ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ಪಟ್ಟುಹಿಡಿದು ಕುಳಿತಿದ್ದಾರೆ. ಇತ್ತೀಚೆಗೆ ಯಡಿಯೂರಪ್ಪ, ಸಿಟಿ ರವಿ ಕಾರಿಗೆ ಮುತ್ತಿಗೆ ಹಾಕಿದ್ದ ಬಿಜೆಪಿ ಕಾರ್ಯಕರ್ತರು ಇದೀಗ ಚಿಕ್ಕಮಗಳೂರಿನ ಬಸವನಹಳ್ಳಿ ಮುಖ್ಯ…

Read More

ಮೂಡಿಗೆರೆ : ಮೂಡಿಗೆರೆಯಲ್ಲಿ ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ಧ ಸ್ವಪಕ್ಷೀಯ ಕಾರ್ಯಕರ್ತರೇ ತಿರುಗಿ ಬಿದ್ದಿದ್ದು, ಈ ಬಾರಿ ಟಿಕೆಟ್ ನೀಡಬೇಡಿ ಎಂದು ಪಟ್ಟುಹಿಡಿದು ಕುಳಿತಿದ್ದಾರೆ. ಹೌದು, ಬಿಜೆಪಿ ಕಾರ್ಯಕರ್ತರು ಮೂಡಿಗೆರೆಯಿಂದ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ಪಟ್ಟುಹಿಡಿದು ಕುಳಿತಿದ್ದಾರೆ. ಇತ್ತೀಚೆಗೆ ಯಡಿಯೂರಪ್ಪ, ಸಿಟಿ ರವಿ ಕಾರಿಗೆ ಮುತ್ತಿಗೆ ಹಾಕಿದ್ದ ಬಿಜೆಪಿ ಕಾರ್ಯಕರ್ತರು ಇದೀಗ ಚಿಕ್ಕಮಗಳೂರಿನ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಸಿ.ಟಿ.ರವಿ ಮನೆಗೆ ಭೇಟಿ ನೀಡಿದ ಸಾವಿರಾರು ಕಾರ್ಯಕರ್ತರು, ಎಂ.ಪಿ.ಕುಮಾರಸ್ವಾಮಿಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ಆಗ್ರಹಿಸಿದರು. ಮೂಡಿಗೆರೆಯಲ್ಲಿ ಕಳೆದ ವಾರ ತಮ್ಮ ಕಾರ್ಯಕರ್ತರು ರಸ್ತೆ ಮಧ್ಯೆಯೇ ಅಡ್ಡ ಹಾಕಿ ಪ್ರತಿಭಟನೆ ನಡೆಸಿದ ಕಾರಣ ಬಿ.ಎಸ್. ಯಡಿಯೂರಪ್ಪ ಕೋಪಗೊಂಡು ರೋಡ್ ಶೋ ರದ್ದು ಮಾಡಿ ಹೆಲಿಪ್ಯಾಡ್ನತ್ತ ತೆರಳಿದ್ದರು. ಇದೀಗ ಚಿಕ್ಕಮಗಳೂರಿನ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಸಿ.ಟಿ.ರವಿ ಮನೆಗೆ ಭೇಟಿ ನೀಡಿದ ಸಾವಿರಾರು ಕಾರ್ಯಕರ್ತರು, ಎಂ.ಪಿ.ಕುಮಾರಸ್ವಾಮಿಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ಆಗ್ರಹಿಸಿದರು. ಅರಶಿನ ಬೆಳೆಗಾರ’ರಿಗೆ…

Read More

ಬೆಂಗಳೂರು : ಸಿದ್ದರಾಮಯ್ಯ ಕ್ಷೇತ್ರ ಆಯ್ಕೆ ವಿಚಾರ ರಾಜ್ಯ ರಾಜಕಾರಣದಲ್ಲಿ ಬಹಳ ಕುತೂಹಲ ಮೂಡಿಸಿದೆ. ಕ್ಷೇತ್ರ ಆಯ್ಕೆಯ ಗೊಂದಲದಲ್ಲಿರುವ ಸಿದ್ದರಾಮಯ್ಯಗೆ ಆಪ್ತರು 5 ಕ್ಷೇತ್ರಗಳ ಆಯ್ಕೆಯನ್ನು ನೀಡಿದ್ದಾರೆ. ಈ ಐದರಲ್ಲಿ ಒಂದು ಕ್ಷೇತ್ರವನ್ನು ಆಯ್ಕೆ ಮಾಡಿ. ಈ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಖಂಡಿತ. ನೀವು ಗೆಲ್ಲಬಹುದು ಎಂದು ಸಲಹೆ ನೀಡಿದ್ದಾರೆ. ಹೌದು, ವರುಣಾ, ಚಾಮರಾಜಪೇಟೆ, ಹೆಬ್ಬಾಳ, ಬಾದಾಮಿ, ಕೊಪ್ಪಳ ಕ್ಷೇತ್ರಗಳ ಪೈಕಿ ಒಂದನ್ನು ಆಯ್ಕೆ ಮಾಡುವಂತೆ ಸಿದ್ದರಾಮಯ್ಯನವರಿಗೆ ಆಪ್ತರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ವರುಣಾ ಸಿದ್ದರಾಮಯ್ಯರ ತವರು ಕ್ಷೇತ್ರವಾಗಿದ್ದು, ಅಲ್ಲಿ ಸ್ಪರ್ಧಿಸಿದ್ರೆ ಗೆಲುವು ಖಂಡಿತ. ಚಾಮರಾಜಪೇಟೆ ಸಿದ್ದರಾಮಯ್ಯರ ಆಪ್ತ ಜಮೀರ್ ಪ್ರತಿನಿಧಿಸುವ ಕ್ಷೇತ್ರವಾಗಿದೆ. ಹೆಬ್ಬಾಳ ಸಿದ್ದರಾಮಯ್ಯ ಅವರ ಆಪ್ತ ಭೈರತಿ ಸುರೇಶ್ ಪ್ರತಿನಿಧಿಸುವ ಕ್ಷೇತ್ರವಾಗಿದೆ. ಬಾದಾಮಿ ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯ ಪ್ರತಿಧಿಸಿದ್ದ ಕ್ಷೇತ್ರವಾಗಿದೆ, ಇಲ್ಲಿ ಸ್ಪರ್ಧಿಸಿದ್ರೆ ಗೆಲುವು ಫಿಕ್ಸ್ ಎಂದು ಸಲಹೆ ನೀಡಿದ್ದಾರೆ. ಇನ್ನೂ, ಕೊಪ್ಪಳ ಸಿದ್ದರಾಮಯ್ಯ ಆಪ್ತ ರಾಘವೇಂದ್ರ ಹಿಟ್ನಾಳ್ ಈ ಕ್ಷೇತ್ರವಾಗಿದ್ದು, ಇದೂ ಕೂಡ ಸಿದ್ದರಾಮಯ್ಯರಿಗೆ ಸೇಫ್ ಆಗಿದೆ. ಇಲ್ಲೂ…

Read More

ಚಿಕ್ಕಮಗಳೂರು: ಯುಗಾದಿ ಹಬ್ಬ ದಿನದಂದೇ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಮೇಗೂರಿನ ಹಿತ್ಲೆಗುಳಿ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ರೊಚ್ಚಿಗೆದ್ದ ಗ್ರಾಮದ ಮಹಿಳೆಯರು ಮೃತ ವ್ಯಕ್ತಿಯ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಮದ್ಯದಂಗಡಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಜಯಪುರ ಠಾಣಾ ಪೊಲೀಸರು ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಯುಗಾದಿ ಹಬ್ಬ ದಿನದಂದೇ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಮೇಗೂರಿನ ಹಿತ್ಲೆಗುಳಿ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ.ಹೀಗಾಗಿ ಗ್ರಾಮದಲ್ಲಿ ಮೌನ ಆವರಿಸಿದೆ. ಗ್ರಾಮದಲ್ಲಿ ದಿನದಿಂದ ದಿನಕ್ಕೆ ನಕಲಿ ಮದ್ಯ ಹಾವಳಿ ಜಾಸ್ತಿಯಾಗಿದೆ. ಅದರ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದ್ದು, ಅನ್ನ ತಡೆಯಲು ಸಾಧ್ಯವಾಗದೇ ಜನರು ಮತ್ತು ಮಹಿಳೆಯರು ಹತಾಶರಾಗಿದ್ದಾರೆ. ಇದೀಗ ಗ್ರಾಮದ ಪುಟ್ಟೇಗೌಡ ಎಂಬವರು ಯುಗಾದಿ ದಿನವೇ ನಕಲಿ ಮದ್ಯ ಸೇವಿಸಿ ಮೃತಪಟ್ಟಿದ್ದಾರೆ. ಈವಗೆರೆ ಹಿತ್ಲೆಗುಳಿ ಗ್ರಾಮದಲ್ಲಿ ಪುಟ್ಟೇಗೌಡ ಸೇರಿ ಕಳೆದ ಕೆಲವು ಸಮಯದಲ್ಲಿ ಮೂವರು ನಕಲಿ ಮದ್ಯಕ್ಕೆ ಬಲಿಯಾಗಿದ್ದಾರೆ.ಈ ಕುರಿತು ಜಿಲ್ಲಾಧಿಕಾರಿಗಳಿಗೆ ಗ್ರಾಮಸ್ಥರು…

Read More

ಕಲಬುರಗಿ : ಹಾಡಹಗಲೇ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ ಹಾಗರಗಾ ರಸ್ತೆಯಲ್ಲಿ ನಡೆದಿದೆ. ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಕೊಲೆ ಮಾಡಲಾಗಿದ್ದು, ಮೃತಪಟ್ಟ ಮಹಿಳೆಯನ್ನು ಮುಜತ್ ಸುಲ್ತಾನ್ (35) ಎಂದು ಗುರುತಿಸಲಾಗಿದೆ. ಹಂತಕರು ಮೊದಲು ಮಜತ್ ಸ್ಕೂಟಿಗೆ ಕಾರಿನಿಂದ ಡಿಕ್ಕಿ ಹೊಡೆಸಿದ್ದು, ಕೆಳಗೆ ಬಿದ್ದ ಮಜತ್ ಮೇಲೆ ಏಳಲು ಹೋದಾಗ ಆಕೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬೆಂಗಳೂರಿನ HRBR  ಲೇಔಟ್ನಲ್ಲಿ ʼರಾತ್ರೋರಾತ್ರಿ ಬಸ್ ನಿಲ್ದಾಣವೇ ನೆಲಸಮ ʼ: ಬೆಂಗಳೂರು : ಸಿಲಿಕಾನ್ ಸಿಟಿಯ ಕಲ್ಯಾಣನಗರದ ಎಚ್ಆರ್ಬಿಆರ್ ಲೇಔಟ್ನಲ್ಲಿ ಬಿಬಿಎಂಪಿಯಿಂದ ಅನುಮತಿಯಿಲ್ಲದೇ ಬಸ್ ನಿಲ್ದಾಣ ಇದ್ದಕ್ಕಿದ್ದಂತೆ ಕಣ್ಮರೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.ಈ ಬಸ್ ನಿಲ್ದಾಣವೂ ಸುಮಾರು 1990 ರಿಂದ ಪ್ರಯಾಣಿಕರು ಸದಾ ಬಳಕೆಯನ್ನು ಮಾಡುತ್ತಿದ್ದರು. ಈ ಬಸ್ ನಿಲ್ದಾಣಕ್ಕೆ 1990ರಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಅನುಮತಿ ಪಡೆದು…

Read More

ಬೆಂಗಳೂರು : 2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಗಳು ( SSLC Exam 2023 ) ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಾಮುತ್ತಾ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಜೆರಾಕ್ಸ್ ಅಂಗಡಿ , ಸೈಬರ್ , ಸ್ಟೇಷನರಿ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಿದ್ದಾರೆ. 2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಗಳು ( SSLC Exam 2023 ) ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಯಲಿದ್ದು, ಈ ಬಾರಿ ವಿದ್ಯಾರ್ಥಿಗಳಿಗೆ ಅನುಕೂಲ ಆಗಲು ಬಹು ಆಯ್ಕೆ ಪ್ರಶ್ನೆಗಳನ್ನ ನೀಡಲಾಗುತ್ತಿದೆ. ಬಿ.ಇ.ಓ ನೇತೃತ್ವದ ಸಮಿತಿಯ ಸಮ್ಮುಖದಲ್ಲಿಯೇ ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲೂಕು ಖಜಾನೆಗಳಿಂದ ಪರೀಕ್ಷೆ ಕೇಂದ್ರಗಳಿಗೆ ರವಾನಿಸಬೇಕು. ಇತರೆ ಕಾರಣಗಳಿಗೆ ಖಜಾನೆಯ ಸ್ಟ್ರಾಂಗ್ ರೂಮ್…

Read More


best web service company