Author: kannadanewslive

ಬೆಂಗಳೂರು :  ಮಾ.26 ರಂದು ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ H.D ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ಮಾ.26 ರಂದು ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಎರಡೂ ರಾಷ್ಟ್ರೀಯ  ಪಕ್ಷಗಳಿಗಿಂತ ಜೆಡಿಎಸ್ ಏನೂ ಕಳಪೆಯಿಲ್ಲ, 15 ರಿಂದ 16 ಕ್ಷೇತ್ರಗಳಲ್ಲಿ ಮಾತ್ರ ಸಮಸ್ಯೆ ಇದೆ.  ಅಂತಹ ಕ್ಷೇತ್ರದಲ್ಲಿ ಬೇರೆ ಬೇರೆ ಪಕ್ಷದಿಂದ ಬರ್ತಾರೆ. ಇದುವರೆಗೂ ರಾಷ್ಟ್ರೀಯ  ಪಕ್ಷದಲ್ಲಿ ಟಿಕೆಟ್ ಘೋಷಣೆ ಆಗಿಲ್ಲ ಎಂದರು. ಮುಂದಿನ 2-3ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಡಿ.ಕೆ ಶಿವಕುಮಾರ್ ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ರಂಗೇರಿದೆ. ಈಗಾಗಲೇ ಬಿಜೆಪಿ, ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ.ಇನ್ನು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ತಯಾರು ಮಾಡಿಕೊಂಡಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಮುಂದಿನ ಮುಂದಿನ ಎರಡು ಮೂರು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ…

Read More

ಮಡಿಕೇರಿ : 2022-23ನೇ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ಅರ್ಹ ವಿದ್ಯಾರ್ಥಿಗಳಿಂದ ಮಾತ್ರ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಧಿಯನ್ನು ಮಾರ್ಚ್, 27 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು http://shp.karnataka.gov.in ವೆಬ್ಸೈಟ್ನಲ್ಲಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್ಸಿ ಮತ್ತು ಎಸ್ಟಿ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ರೂ. 1 ಲಕ್ಷ ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ಸೈಟ್ ವಿಳಾಸ www.bcwd.karnataka.gov.in ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ತಿಳಿಸಿದ್ದಾರೆ. https://kannadanewsnow.com/kannada/direct-interview-of-kkrtc-teacher-recruitment-postponed-to-monday-27th/ https://kannadanewsnow.com/kannada/direct-interview-of-kkrtc-teacher-recruitment-postponed-to-monday-27th/

Read More

ಕಲಬುರಗಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆಯಾ ವಿಭಾಗ/ ಪ್ರಾದೇಶಿಕ ಕಾರ್ಯಾಗಾರದಲ್ಲಿ ಶಿಶಿಕ್ಷು ತರಬೇತಿದಾರರ ನೇಮಕಾತಿಗೆ ನಡೆಸುವ ನೇರ ಸಂದರ್ಶನವನ್ನು ಮಾ.27 ಕ್ಕೆ ಮುಂದೂಡಲಾಗಿದೆ. ಜಾಹೀರಾತು ಸಂಖ್ಯೆ-01/2023 ದಿ.10-03-2023ರಲ್ಲಿ ಇದೇ ಮಾರ್ಚ್ 23 ರಂದು ನಿಗದಿಪಡಿಸಿದ ನೇರ ಸಂದರ್ಶನ ಕಾರಣಾಂತರದಿಂದ ಇದೇ ಮಾರ್ಚ್ 27ಕ್ಕೆ ಮುಂದೂಡಲಾಗಿದೆ. ಅಭ್ಯರ್ಥಿಗಳು ಇದನ್ನು ಗಮನಿಸಬೇಕು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚುನಾವಣೆ ಘೋಷಣೆಗೂ ಮುನ್ನವೇ ಬೆಳಗಾವಿಯಲ್ಲಿ ಹೈ ಅಲರ್ಟ್ : 60 ಕಡೆ ಚೆಕ್ ಪೋಸ್ಟ್ ತೆರೆದು ತಪಾಸಣೆ ಬೆಳಗಾವಿ : ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ಬೆಳಗಾವಿಯಲ್ಲಿ ಪೊಲೀಸರು ಹೈಅಲರ್ಟ್ ಆಗಿದ್ದು, ಚೆಕ್ ಪೋಸ್ಟ್ ತೆರೆದು ತಪಾಸಣೆ ನಡೆಸುತ್ತಿದ್ದಾರೆ.ಕರ್ನಾಟಕ ವಿಧಾನಸಭೆ ಚುಣಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷವೊಡ್ಡದಂತೆ ಪೊಲೀಸರು ಅಲರ್ಟ್ ಆಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 60 ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. 25 ಅಂತರ್ ರಾಜ್ಯ ಚೆಕ್ ಪೋಸ್ಟ್ ನಿರ್ಮಿಸಿ ಪೊಲೀಸ್ ಸಿಬ್ಬಂದಿ…

Read More

ಉಡುಪಿ : ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಕಚೇರಿಯಲ್ಲಿ ಸ್ವಚ್ಛತೆ ಹಾಗೂ ಕಚೇರಿ ಕೆಲಸ ಸಹಾಯಕ್ಕಾಗಿ ಗುಮಾಸ್ತರ -4 ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಟೆಂಡರ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 6 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ನ್ಯಾಯಾಲಯದ ಕಚೇರಿ ಪ್ರಕಟಣೆ ತಿಳಿಸಿದೆ. ಉಚಿತ ಜೆಸಿಬಿ ಆಪರೇಟರ್ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನ ಬಳ್ಳಾರಿ : ಕೆನರಾ ಬ್ಯಾಂಕ್ ದೇಶಪಾಂಡೆ ಅರ್ಸೆಟಿ ಹಳಿಯಾಳ ಮತ್ತು ಜೆಎಸ್ಡಬ್ಲ್ಯೂ ಸ್ಟೀಲ್ ಲಿಮಿಟೆಡ್ ಇವರ ಸಂಯುಕ್ತಾಶ್ರಯದಲ್ಲಿ 30 ದಿನಗಳ ಉಚಿತ ಜೆಸಿಬಿ ಅಪರೇಟರ್ ಟ್ರೈನಿಂಗ್ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 45 ವರ್ಷ ವಯೋಮಿತಿಯ ಯುವಕರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ ಮತ್ತು ಈಗ ಮಾಡುತ್ತಿರುವ ಕೆಲಸ ಇತ್ಯಾದಿ…

Read More

ಬಳ್ಳಾರಿ : ಕೆನರಾ ಬ್ಯಾಂಕ್ ದೇಶಪಾಂಡೆ ಅರ್ಸೆಟಿ ಹಳಿಯಾಳ ಮತ್ತು ಜೆಎಸ್ಡಬ್ಲ್ಯೂ ಸ್ಟೀಲ್ ಲಿಮಿಟೆಡ್ ಇವರ ಸಂಯುಕ್ತಾಶ್ರಯದಲ್ಲಿ 30 ದಿನಗಳ ಉಚಿತ ಜೆಸಿಬಿ ಅಪರೇಟರ್ ಟ್ರೈನಿಂಗ್ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 45 ವರ್ಷ ವಯೋಮಿತಿಯ ಯುವಕರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ ಮತ್ತು ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನೊಳಗೊಂಡ ಅರ್ಜಿಯನ್ನು ಏಪ್ರಿಲ್ 25 ರೊಳಗಾಗಿ ದಾಂಡೇಲಿಯ ಹಸನಮಾಳದ ಕೆನೆರಾಬ್ಯಾಂಕ್ ದೇಶಪಾಂಡೆ ಆರ್ಸೆಟಿ ವಿಸ್ತರಣಾ ಕೇಂದ್ರ, ಇಲ್ಲಿಗೆ ಸಲ್ಲಿಸಬಹುದಾಗಿದೆ. ತರಬೇತಿಯಲ್ಲಿ ಊಟೋಪಚಾರ ಹಾಗೂ ವಸತಿ ಉಚಿತವಾಗಿರುತ್ತದೆ. ವ್ಯಾಟ್ಸ್ಪ್ ನಂಬರ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.08284-298547, 9632149217, 9449782425 ಗೆ ಸಂಪರ್ಕಿಬಹುದಾಗಿದೆ. https://kannadanewsnow.com/kannada/horrific-incident-in-belgaum-husband-commits-suicide-by-hacking-his-wife-to-death-with-handguns/ https://kannadanewsnow.com/kannada/horrific-incident-in-belgaum-husband-commits-suicide-by-hacking-his-wife-to-death-with-handguns/ https://kannadanewsnow.com/kannada/horrific-incident-in-belgaum-husband-commits-suicide-by-hacking-his-wife-to-death-with-handguns/

Read More

ಬೆಳಗಾವಿ: ಪತ್ನಿಯನ್ನು ಕೊಚ್ಚಿ ಕೊಂದ ಪತಿಯೊಬ್ಬ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ನಡೆದಿದೆ. ಜಾನವ್ವ ದ್ಯಾಮನ್ನವರ (50) ಸ್ಥಳದಲ್ಲೇ ಮೃತಪಟ್ಟಿದ್ದು, ಮಾರಕಾಸ್ತ್ರದಿಂದ ಹೊಡೆದು ಪತ್ನಿ ಜಾನವ್ವರನ್ನ ಪತಿ ಬಸವಗೌಡ ಶಾಸಪ್ಪನವರ (55) ಕೊಲೆ ಮಾಡಿದ್ದಾನೆ.  ಪತ್ನಿ ಕೊಲೆಗೈದ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಘಟನೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಪೊಲೀಸರು  ಅನುಮಾನ ವ್ಯಕ್ತಪಡಿಸಿದ್ದಾರೆ. https://kannadanewsnow.com/kannada/kendriya-vidyalaya-admissions-applications-for-class-1-admissions-to-begin-from-march-27/ https://kannadanewsnow.com/kannada/kendriya-vidyalaya-admissions-applications-for-class-1-admissions-to-begin-from-march-27/

Read More

ಚಿಕ್ಕಮಗಳೂರು : ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಮತದಾರರನ್ನು ಸೆಳೆಯಲು ರಾಜಕೀಯ ಹಲವು ತಂತ್ರಗಳನ್ನು ರೂಪಿಸಿ ಮತದಾರರಿಗೆ ಹಲವು ಆಮಿಷವೊಡ್ಡುತ್ತಿದೆ.. ಅಲ್ಲದೇ ಗಿಫ್ಟ್, ಗೃಹೋಪಯೋಗಿ ವಸ್ತುಗಳನ್ನು ನೀಡುವ ಮೂಲಕ ಮತದಾರರನ್ನು ಬುಟ್ಟಿಗೆ ಹಾಕಿಕೊಳ್ಳುತ್ತಿದೆ. ಈ ಹಿನ್ನೆಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ ಡಿ ರಾಜೇಗೌಡ ಆಪ್ತನ ಮನೆ ಮೇಲೆ ದಾಳಿ ನಡೆಸಿದ್ದಾರೆ. ರಾಜೇಗೌಡ ಆಪ್ತನ ನಿವಾಸದ ಮೇಲೆ ದಾಳಿ ನಡೆಸಿದ ಪೊಲೀಸರು ಮತದಾರರರಿಗೆ ವಿತರಿಸಲು ತಂದಿಟ್ಟಿದ್ದ ಕುಕ್ಕರ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹಾಗೂ ರಾಜೇಗೌಡ ಆಪ್ತ ಸತೀಶ್ ಅವರ ತೆಂಗಿನ ಮನೆ ಗ್ರಾಮದಲ್ಲಿರುವ ನಿವಾಸದ ಮೇಲೆ ಕೊಪ್ಪ ತಾಲೂಕಿನ ಜಯಪುರ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಮತದಾರರರಿಗೆ ವಿತರಿಸಲು ತಂದಿಟ್ಟಿದ್ದ 500 ಕ್ಕೂ ಹೆಚ್ಚು ಕುಕ್ಕರ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. JOB ALERT : ‘ಅಗ್ನಿಪಥ್’ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನ…

Read More

ಬೆಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೈಸೂರು ಭಾಗದಿಂದಲೇ ಸ್ಪರ್ಧಿಸಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸಲಹೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಇಬ್ರಾಹಿಂ ‘ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟದಲ್ಲಿ ಬ್ಯುಸಿಯಾಗಿದ್ದಾರೆ. ಅವರು ಕೋಲಾರ, ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸುವುದು ಬೇಡ, ಮೈಸೂರು ಭಾಗದಿಂದಲೇ ಸ್ಪರ್ಧಿಸಲಿ’ ಎಂದು ಹೇಳಿದ್ದಾರೆ.  ಉರಿಗೌಡ, ನಂಜೇಗೌಡ ಕಾಲ್ಪನಿಕ ಕಥೆ. ಚುನಾವಣೆ ವೇಳೆ ಒಗ್ಗಟ್ಟನ್ನು ಒಡೆಯಲು ಸಿಟಿ ರವಿ ಪ್ಲ್ಯಾನ್ ಮಾಡಿದ್ದಾರೆ ಎಂದು ಇಬ್ರಾಹಿಂ ಹೇಳಿದ್ದಾರೆ. https://kannadanewsnow.com/kannada/job-alert-application-invitation-for-agniveer-vayu-posts-under-agnipath-scheme/ https://kannadanewsnow.com/kannada/good-news-for-those-who-have-installed-ofc-poles-unauthorisedly-bbmp-fixes-fees-for-authorisation/ https://kannadanewsnow.com/kannada/good-news-for-those-who-have-installed-ofc-poles-unauthorisedly-bbmp-fixes-fees-for-authorisation/

Read More

ಬಳ್ಳಾರಿ :   ಭಾರತೀಯ ವಾಯುಪಡೆಯ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ನೊಂದಣಿಗೆ ಆಹ್ವಾನಿಸಲಾಗಿದೆ. ವಿದ್ಯಾರ್ಹತೆಯು ದ್ವಿತೀಯ ಪಿ.ಯು.ಸಿಯಲ್ಲಿ ಶೇ.50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ವಯೋಮಿತಿಯು ಅಭ್ಯರ್ಥಿಗಳು 2002 ಡಿಸೆಂಬರ್ 26 ರಿಂದ 2006 ಜೂನ್ 26 ರ ನಡುವೆ ಜನಿಸಿರಬೇಕು.ಅಭ್ಯರ್ಥಿಗಳು ನೊಂದಾಯಿಸಿಕೊಳ್ಳಲು ಕೊನೆಯ ದಿನ ಮಾರ್ಚ್ 31 ಆಗಿರುತ್ತದೆ.ಆನ್ಲೈನ್ ನೊಂದಣಿಗಾಗಿ https://agnipathvayu.cdac.in ಲಿಂಕ್ ಬಳಸಬಹುದಾಗಿದೆ. ಆನ್ಲೈನ್ ಪರೀಕ್ಷೆಯು ಮೇ ತಿಂಗಳಿನಲ್ಲಿ ನಡೆಯುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ. 08392-273988 ಅಥವಾ https://careerindianairforce.cdac.in ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/ed-attaches-immovable-property-worth-rs-1-10-crore-belonging-to-aslam-pasha-of-rajamahal-silks-in-hospet/ https://kannadanewsnow.com/kannada/bommai-will-be-a-next-cm/

Read More

ಬಾಗಲಕೋಟೆ : ನಾನೇ ಮುಂದಿನ ಮುಖ್ಯಮಂತ್ರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ( Chief Minister Basavaraj Bommai )  ಹೇಳಿದ್ದಾರೆ. ಬಾಗಲಕೋಟೆಯ ಮುಧೋಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ಸಿಎಂ ಬೊಮ್ಮಾಯಿ ‘ನಗು ನಗುತ್ತಲೇ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಸಚಿವ ಮುರುಗೇಶ್ ನಿರಾಣಿ ಕಾಲೆಳೆದಿದ್ದಾರೆ. ಚಿಂತೆ ಮಾಡಬೇಡಿ ಮುಂದೆಯೂ ಕೂಡ ಸಿಎಂ ಆಗಿಯೇ ನಾನು ಇಲ್ಲಿಗೆ ಬರುತ್ತೇನೆ ಎಂದು ಹೇಳಿದ್ದಾರೆ. ನಿಮ್ಮ ಅವಧಿಯಲ್ಲಾದ ಅಭಿವೃದ್ದಿ ಕೆಲಸಗಳ ಬಗ್ಗೆ ಪಟ್ಟಿ ಮಾಡಿ , ನಾವು ಕೂಡ ನಮ್ಮ ಅವಧಿಯಲ್ಲಾದ ಅಭಿವೃದ್ದಿ ಕೆಲಸಗಳ ಬಗ್ಗೆ ಪಟ್ಟಿ ಮಾಡುತ್ತೇವೆ. ಎಲ್ಲವನ್ನೂ ಜನರು ತೀರ್ಮಾನ ಮಾಡುತ್ತಾರೆ ಎಂದು ವಿಪಕ್ಷಗಳಿಗೆ ಟಾಂಗ್ ನೀಡಿದರು. ವಿಜಯಪುರ ಜಿಲ್ಲೆಯಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿ – ಸಿಎಂ ಬೊಮ್ಮಾಯಿ ವಿಜಯಪುರ : ಜಿಲ್ಲೆಯಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿಯಿದ್ದು, ಈಗಾಗಲೇ 2.87 ಸಾವಿರ ಮನೆಗಳಿಗೆ ನೀರು ಒದಗಿಸಲಾಗಿದೆ ಎಂದು…

Read More


best web service company