ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ತಾಯಿಯೊಬ್ಬಳು 3 ವರ್ಷದ ಕಂದಮ್ಮನನ್ನು ಕರಡಿ ಬೋನಿಗೆ ನೂಕಿದ ಘಟನೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತಾಯಿಯೊಬ್ಬಳು ನೋಡ ನೋಡುತ್ತಿದ್ದಂತೆ ಕರಡಿ ಇದ್ದ ಬೋನಿಗೆ ಬಿಸಾಡುತ್ತಾಳೆ. ಕೂಡಲೇ ಕರಡಿ ಮಗು ಬೀಳುತ್ತಿದ್ದಂತೆ ಮಗು ಬೀಳುವ ಸ್ಥಳಕ್ಕೆ ಬರುತ್ತದೆ. ಆದರೆ ಅದೃಷ್ಟವಶಾತ್ ಕೆಲವೇ ಸೆಕೆಂಡುಗಳಲ್ಲಿ ಆರು ಜನ ಮೃಗಾಲಯದ ಸಿಬ್ಬಂದಿ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗುತ್ತಾರೆ. ಇದೀಗ ತಾಯಿ ಕ್ರಿಮಿನಲ್ ಕೇಸ್ ಎದುರಿಸುತ್ತಿದ್ದು, ಆರೋಪ ಸಾಬೀತಾದಲ್ಲಿ ಜೈಲು ಶಿಕ್ಷೆಯಾಗಲಿದೆ. ಸದ್ಯ 3 ವರ್ಷದ ಪುಟ್ಟ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಸೋಶಿಯಲ್ ಮೀಡಿಯಾದಲ್ಲಿ VIDEO ವೈರಲ್ ಆಗಿದೆ. https://twitter.com/hazeycazeytv/status/1488140147006730242?ref_src=twsrc%5Etfw%7Ctwcamp%5Etweetembed%7Ctwterm%5E1488140147006730242%7Ctwgr%5E%7Ctwcon%5Es1_&ref_url=https%3A%2F%2Fnewsfirstlive.com%2F2022%2F02%2F03%2Fmother-drops-3-years-baby-bear-zoo-shocking%2F
Author: Kannada News
ಬೆಂಗಳೂರು : ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ( SCHOLARSHIP) ಅರ್ಜಿ ಸಲ್ಲಿಸುವ ದಿನಾಂಕವನ್ನು 28:02:2022 ರವರೆಗೆ ವಿಸ್ತರಿಸಿ ಹಿಂದುಳಿದ ವರ್ಗಗಳ ಇಲಾಖೆ ಆದೇಶ ಹೊರಡಿಸಿದೆ. ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ , ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ದಿನಾಂಕ 31:1:2022 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ನಂತರ ವಿದ್ಯಾರ್ಥಿಗಳು, ಶೈಕ್ಷಣಿಕ ಸಂಸ್ಥೆಗಳ ಮನವಿ ಮೇರೆಗೆ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು 28:02:2022 (ಫೆ.28) ರವರೆಗೆ ವಿಸ್ತರಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳು https://ssp.postmatric.karnataka.gov.in/ ಪೋರ್ಟಲ್ ಮೂಲಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು,…
ಉಡುಪಿ : ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾದ ಹಿಜಾಬ್ ವಿವಾದ ಅಂತ್ಯ ಕಂಡಿಲ್ಲ. ಇದರ ನಡುವೆ ಕುಂದಾಪುರ ತಾಲೂಕಿನಲ್ಲಿ ಹಿಜಾಬ್ಗೆ ವಿರುದ್ಧವಾಗಿ ಸರ್ಕಾರಿ ಪಿಯು ಕಾಲೇಜ್ನ ನೂರಾರು ವಿದ್ಯಾರ್ಥಿಗಳು ಕೇಸರಿ ಶಾಲುಗಳನ್ನು ತೊಟ್ಟು ತರಗತಿಗೆ ಬಂದಿದ್ದಾರೆ. ಸದ್ಯ ಹೈಕೋರ್ಟ್ ಮೆಟ್ಟಿಲೇರಿದೆ. ಹಿಜಾಬ್ ಧರಿಸುವುದು ಮೂಲಭೂತ ಹಕ್ಕೆಂದು ಮುಸ್ಲಿಂ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದರು.ಉಡುಪಿಯ ಮಹಿಳಾ ಸರ್ಕಾರಿ ಪಿಯು ಕಾಲೇಜಿನಲ್ಲಿ ಆರಂಭವಾದ ಹಿಜಬ್ ವಿವಾದ ಕುಂದಾಪುರಕ್ಕೆ ಹರಡಿದೆ. ಪಿಯು ಬೋರ್ಡ್ ಸಮವಸ್ತ್ರ ಮಾತ್ರ ಧರಿಸಬೇಕು ಎಂದು ಆದೇಶ ನೀಡಿತ್ತು. ಈ ಆದೇಶವನ್ನು ಆಪಾದನೆ ಮಾಡುವಂತೆ ಕುಂದಾಪುರ ಸರ್ಕಾರಿ ಪಿಯು ಕಾಲೇಜ್ ನೋಟಿಸ್ ಹೊರಡಿಸಿದೆ. ಆದರೆ ವಾರ ಕಳೆದರೂ ಹಿಜಬ್ ಬಿಚ್ಚಿಟ್ಟು ಮುಸಲ್ಮಾನ ವಿದ್ಯಾರ್ಥಿನಿಯರು ಕಾಲೇಜಿಗೆ ಬಂದಿಲ್ಲ. ಇದೀಗ ನೂರಾರು ಹಿಂದೂ ಯುವಕರು ಕೇಸರಿ ಶಾಲುಗಳನ್ನು ತೊಟ್ಟು ಕಾಲೇಜು ಕ್ಯಾಂಪಸ್ ಪ್ರವೇಶಿಸಿದ್ದಾರೆ. ಕುಂದಾಪುರ ತಾಲೂಕಿನಲ್ಲಿ ಹಿಜಾಬ್ಗೆ ವಿರುದ್ಧವಾಗಿ ಸರ್ಕಾರಿ ಪಿಯು ಕಾಲೇಜ್ನ ನೂರಾರು ವಿದ್ಯಾರ್ಥಿಗಳು ಕೇಸರಿ ಶಾಲುಗಳನ್ನು ತೊಟ್ಟು ತರಗತಿಗೆ ಬಂದಿದ್ದಾರೆ. ಉಡುಪಿ ಜಿಲ್ಲೆಯ…
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 15 ದಿನ ಟೋಯಿಂಗ್ ವ್ಯವಸ್ಥೆಗೆ ರಾಜ್ಯ ಸರ್ಕಾರದಿಂದ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಹೌದು. ಟೋಯಿಂಗ್ ವ್ಯವಸ್ಥೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಜೊತೆಗಿನ ಸಭೆ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಗೃಹ ಕಚೇರಿ ಕೃಷ್ಣಾದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು 15 ದಿನ ಟೋಯಿಂಗ್ ವ್ಯವಸ್ಥೆಗೆ ರಾಜ್ಯ ಸರ್ಕಾರದಿಂದ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ನೋ ಪಾರ್ಕಿಂಗ್ ನಲ್ಲಿ ವಾಹನ ನಿಲ್ಲಿಸಿದ್ರೆ ಪೊಲೀಸರು ದಂಡ ಹಾಕುತ್ತಾರೆ.ನೋ ಪಾರ್ಕಿಂಗ್ ಬೋರ್ಡ್ ಗಳನ್ನು ಹೆಚ್ಚು ಅಳವಡಿಸುತ್ತೇವೆ. ಯಾವ ರಸ್ತೆಯಲ್ಲಿ ಪಾರ್ಕಿಂಗ್ ಮಾಡಬೇಕು ಎಂಬುದರ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುತ್ತೇವೆ ಎಂದು ಹೇಳಿದರು. ನಗರದಲ್ಲಿ ಟೋಯಿಂಗ್ ವ್ಯವಸ್ಥೆಯ ( Toying Traffic Rules Issue In Bengaluru ) ಬಗ್ಗೆ ಸಾರ್ವಜನಿಕರು ತೀವ್ರವಾಗಿ ವಿರೋಧಿಸಿದ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಯವರ ಜೊತೆಗೆ ಚರ್ಚಿಸಿ ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂಬುದಾಗಿ ಗೃಹ…
ಬೆಂಗಳೂರು : ಬೆಂಗಳೂರಿನಲ್ಲಿ 15 ದಿನ ಟೋಯಿಂಗ್ ವ್ಯವಸ್ಥೆಗೆ ರಾಜ್ಯ ಸರ್ಕಾರದಿಂದ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಹೌದು. ಟೋಯಿಂಗ್ ವ್ಯವಸ್ಥೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಜೊತೆಗಿನ ಸಭೆ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಗೃಹ ಕಚೇರಿ ಕೃಷ್ಣಾದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು 15 ದಿನ ಟೋಯಿಂಗ್ ವ್ಯವಸ್ಥೆಗೆ ರಾಜ್ಯ ಸರ್ಕಾರದಿಂದ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ನೋ ಪಾರ್ಕಿಂಗ್ ನಲ್ಲಿ ವಾಹನ ನಿಲ್ಲಿಸಿದ್ರೆ ಪೊಲೀಸರು ದಂಡ ಹಾಕುತ್ತಾರೆ.ನೋ ಪಾರ್ಕಿಂಗ್ ಬೋರ್ಡ್ ಗಳನ್ನು ಹೆಚ್ಚು ಅಳವಡಿಸುತ್ತೇವೆ. ಯಾವ ರಸ್ತೆಯಲ್ಲಿ ಪಾರ್ಕಿಂಗ್ ಮಾಡಬೇಕು ಎಂಬುದರ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುತ್ತೇವೆ ಎಂದು ಹೇಳಿದರು. ನಗರದಲ್ಲಿ ಟೋಯಿಂಗ್ ವ್ಯವಸ್ಥೆಯ ( Toying Traffic Rules Issue In Bengaluru ) ಬಗ್ಗೆ ಸಾರ್ವಜನಿಕರು ತೀವ್ರವಾಗಿ ವಿರೋಧಿಸಿದ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಯವರ ಜೊತೆಗೆ ಚರ್ಚಿಸಿ ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂಬುದಾಗಿ ಗೃಹ ಸಚಿವ ಅರಗ…
ಬೆಂಗಳೂರು: ಕೆಶಿಪ್, ಎಸ್ ಹೆಚ್ ಡಿಪಿ ಹಾಗೂ ಕೆಆರ್ ಡಿ ಸಿ ಎಲ್ ವತಿಯಿಂದ ಅಭಿವೃದ್ಧಿ ಪಡಿಸಲಾಗಿದ್ದ ರಸ್ತೆಗಳ ಪೈಕಿ ಜೀವಿತಾವಧಿ ಮುಕ್ತಾಯಗೊಂಡ 1008 ಕಿ.ಮೀ. ರಾಜ್ಯ ಹೆದ್ದಾರಿಗಳ ಮರುಡಾಂಬರೀಕರಣಕ್ಕೆ ಡಿಪಿಆರ್ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದರು. ರಸ್ತೆ ಅಭಿವೃದ್ಧಿ ಯೋಜನೆಗಳನ್ನು ಅಗತ್ಯಕ್ಕೆ ಅನುಗುಣವಾಗಿ, ಸಂಚಾರ ದಟ್ಟಣೆಯನ್ನು ಗಮನದಲ್ಲಿರಿಸಿಕೊಂಡು ರೂಪಿಸಬೇಕು. ಬಿಡುಗಡೆ ಗೊಳಿಸಿದ ಅನುದಾನದ ಗರಿಷ್ಠ ಸದ್ಬಳಕೆಯಾಗಬೇಕು ಎಂದು ಸೂಚಿಸಿದರು. ರಾಜ್ಯವ್ಯಾಪಿ ವಿವಿಧ ಎಂಜಿನಿಯರಿಂಗ್ ಇಲಾಖೆಗಳ ಏಕ ರೂಪ ದರಪಟ್ಟಿಯನ್ನು ಲೋಕೋಪಯೋಗಿ ಇಲಾಖೆಯಡಿ ಜಾರಿಗೆ ತರಲಾಗುತ್ತಿದ್ದು, ಇದರಂತೆಯೇ ಸರ್ಕಾರಿ ಕಟ್ಟಡಗಳಲ್ಲಿ ಬಳಕೆಯಾಗುವ ವಸ್ತುಗಳಿಗೆ ಕೂಡ ಏಕರೂಪ ದರಪಟ್ಟಿಯನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.ರಾಜ್ಯ ಹೆದ್ದಾರಿಗಳು ಜಿಲ್ಲಾ ಮುಖ್ಯ ರಸ್ತೆಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳೊಂದಿಗೆ ಸಂಯೋಜನೆ(integration)ಯಾಗಬೇಕು. ಇದಕ್ಕೆ ಪೂರಕವಾಗಿ ರಸ್ತೆ ತಜ್ಞರಿಂದ ಮಾಸ್ಟರ್ ಪ್ಲಾನ್ ಸಿದ್ಧ ಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.…
ಬೆಂಗಳೂರು : ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ಮಧ್ಯಂತರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು. ಸಿಎಂ ಬೊಮ್ಮಾಯಿ ಇಂದು ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣಗಳ ಅಧ್ಯಯನ ನಡೆಸಿ ವರದಿ ಸಲ್ಲಿಸಲು ರಚಿಸಿರುವ ಸಮಿತಿ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸೂಚನೆ ನೀಡಿದರು. ರಾಜ್ಯದ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ ಹಾಗೂ ನಿರೀಕ್ಷೆಗಳನ್ನು ಹಂಚಿಕೊಂಡ ಮುಖ್ಯಮಂತ್ರಿಗಳು, ಈ ಸಂಸ್ಥೆಗಳ ಸಾಮರ್ಥ್ಯ ಗುರುತಿಸಿ, ಅವುಗಳ ದಕ್ಷ ಬಳಕೆಗೆ ಮಾರ್ಗೋಪಾಯಗಳನ್ನು ಶಿಫಾರಸು ಮಾಡುವಂತೆ ತಿಳಿಸಿದರು. ಸಾರಿಗೆ ಸಂಸ್ಥೆಗಳ ಆಸ್ತಿಗಳಿಂದ ಆದಾಯೋತ್ಪನ್ನ, ಸಂಸ್ಥೆಯ ವರ್ಕ್ ಶಾಪ್ ಗಳ ಸದ್ಬಳಕೆ, ಮಾನವ ಸಂಪನ್ಮೂಲದ ದಕ್ಷ ಬಳಕೆ, ಸಂಸ್ಥೆಗಳ ಸೇವೆಯಲ್ಲಿ ಸುಧಾರಣೆ, ತಂತ್ರಜ್ಞಾನದ ಬಳಕೆ ಮೊದಲಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ತಾವು ಕೈಗೊಂಡ ಕ್ರಮಗಳ…
ಬೆಂಗಳೂರು : ರಾಜ್ಯದ ವಿವಿಧ ಯೋಜನೆಗಳಿಗೆ ಅರಣ್ಯ ಇಲಾಖೆಯಿಂದ ಅಗತ್ಯವಿರುವ ಅನುಮೋದನೆಗಳನ್ನು ಪಡೆಯಲು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಅರಣ್ಯ ಇಲಾಖೆ ಪರಿಶೀಲನಾ ಸಭೆ ತೀರ್ಮಾನಿಸಿತು. ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಒಳಗೊಂಡಂತೆ ಸಮಿತಿ ರಚನೆಯಾಗಲಿದೆ. ಸಮಿತಿಯು ನಿಗದಿತ ಸಮಯದೊಳಗೆ ಅನುಮೋದನೆಗಳನ್ನು ನೀಡುವುದು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು. ಪರಿಸರ ನಷ್ಟಕ್ಕೆ ತಡೆ : ಕಳೆದ 5 ವರ್ಷಗಳಲ್ಲಿ ರಾಜ್ಯದ ಪರಿಸರದಲ್ಲಿ ಉಂಟಾಗಿರುವ ನಷ್ಟವನ್ನು ಮೌಲ್ಯಮಾಪನ ಮಾಡಿ ಐಸೆಕ್ ಸಂಸ್ಥೆ ಹೊರತಂದಿರುವ ವರದಿಯನ್ನು ಆಧರಿಸಿ ಪರಿಸರ ನಷ್ಟವನ್ನು ತಡೆಗಟ್ಟಲು ಹಾಗೂ ನಷ್ಟವನ್ನು ಸರಿದೂಗಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು. ಪರಿಸರ ಮತ್ತು ಆರ್ಥಿಕತೆ ಒಂದಕ್ಕೊಂದು ಪೂರಕವಾಗಿರಬೇಕು. ಈ ನಿಟ್ಟಿನಲ್ಲಿ ಪರಿಸರ ಬಜೆಟ್ ರೂಪಿಸಲು ಮುಖ್ಯಮಂತ್ರಿಗಳು ತಿಳಿಸಿದರು. ಕೃಷಿ ಅರಣ್ಯೀಕರಣ (ಆಗ್ರೋ ಫಾರೆಸ್ಟರಿ): ಕೃಷಿ…
ಬೆಂಗಳೂರು : ಬೆಂಗಳೂರು ವಿವಿ’ ಹೊರಡಿಸಿರುವ ಸುತ್ತೋಲೆಯೊಂದು ಬೆಂಗಳೂರು ವಿವಿ ವಿದ್ಯಾರ್ಥಿಗಳ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹೌದು. ಪ್ರತಿಭಟನೆಗೆ ಅವಕಾಶವಿಲ್ಲವೆಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಹೊರಡಿಸಿರುವ ಸುತ್ತೋಲೆಗೆ ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘಟನೆಗಳಾದ ಎಬಿವಿಪಿ, ಎನ್ಎಸ್ಯುಐ, ಎಸ್ಎಫ್ಐ ಮತ್ತು ಸಿಎಫ್ಐ ಸೇರಿದಂತೆ ಹಲವು ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರು ವಿವಿ ಆವರಣದಲ್ಲಿ ಯಾರೂ ಕೂಡ ಪ್ರತಿಭಟನೆ ನಡೆಸುವ ಹಾಗಿಲ್ಲ , ರಾಜಕೀಯ ಪ್ರೇರಿತ ಸಂಘಟನೆಗಳಿಗೆ ಅವಕಾಶ ಇಲ್ಲ ಇದಕ್ಕೆ ಆವರಣದಲ್ಲಿ ಅವಕಾಶವಿಲ್ಲವೆಂದು ಬೆಂಗಳೂರು ವಿವಿ ಖಡಕ್ ಸುತ್ತೋಲೆ ಹೊರಡಿಸಿತ್ತು ಇದೀಗ ಬೆಂಗಳೂರು ವಿವಿ ಸೂಚನೆಯನ್ನು ತಕ್ಷಣ ಹಿಂಪಡೆಯಬೇಕೆಂದು ವಿದ್ಯಾರ್ಥಿ ಸಂಘಟನೆಗಳು ಒತ್ತಾಯಿಸಿವೆ. ಬೆಂಗಳೂರು ವಿವಿಯಲ್ಲಿ ಈಗಾಗಲೇ ಹಲವು ಸಮಸ್ಯೆಗಳಿದೆ. ಮೊದಲು ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡಬೇಕು. ಅದು ಬಿಟ್ಟು ಇವರು ಪ್ರತಿಭಟನೆ ಹತ್ತಿಕ್ಕಲು ಹೊರಟಿದ್ದಾರೆ. ನಮ್ಮ ಪ್ರತಿಭಟನೆಗಳನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ಸಮಸ್ಯೆಗಳನ್ನು ಪರಿಹರಿಸದಿದ್ದರೆ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ. https://kannadanewsnow.com/kannada/stmt-aginst-r-sudhakar-kanrnataka/…
ಕೊಪ್ಪ : ಈಗಾಗಲೇ NSP(NATIONAL SCHOLARSHIP PORTAL) ನಲ್ಲಿ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕಡ್ಡಾಯವಾಗಿ SSP(STATE SCHOLARSHIP PORTAL) ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ ಎಂದು ಅಲ್ಪಸಂಖ್ಯಾತರ ನಿಗಮ ಪ್ರಕಟಣೆ ಹೊರಡಿಸಿದೆ. 2021-22 ನೇ ಸಾಲಿನ ನ್ಯಾಷನಲ್ ಸ್ಕಾಲರ್ಶಿಪ್ ವಿದ್ಯಾರ್ಥಿ ವೇತನ (NSP) ಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸುವಂತೆ ಪ್ರಾಂಶುಪಾಲರು ಕ್ರಮ ಕೈಗೊಳ್ಳಬೇಕಾಗಿ ನಿಗಮ ಸೂಚನೆ ನೀಡಿದೆ. ಮೆಟ್ರಿಕ್ ನಂತರದ ಅಲ್ಪಸಂಖ್ಯಾತ ಸಮುದಾಯದ ಜೈನರು, ಮುಸ್ಲಿಂ, ಕ್ರಿಶ್ವಿಯನ್, ಸಿಖ್, ಪಾರಸಿ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ. 30 ರವರೆಗೆ ಅವಕಾಶ ನೀಡಿತ್ತು, ಈಗಾಗಲೇ NSP(NATIONAL SCHOLARSHIP PORTAL) ನಲ್ಲಿ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕಡ್ಡಾಯವಾಗಿ SSP(STATE SCHOLARSHIP PORTAL) ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ ಎಂದು ಅಲ್ಪಸಂಖ್ಯಾತರ ನಿಗಮ ಪ್ರಕಟಣೆ ಹೊರಡಿಸಿದೆ. https://kannadanewsnow.com/kannada/there-are-2-different-indias-one-for-the-rich-the-other-for-the-poor-rahul-gandhi/ https://kannadanewsnow.com/kannada/stmt-aginst-r-sudhakar-kanrnataka/