Author: kannadanewslive

ಭುವನೇಶ್ವರ : ಒಡಿಶಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಬಾಲಸೋರ್ನ ಬಹನಾಗ ನಿಲ್ದಾಣದ ಬಳಿ ಡಿಕ್ಕಿ ಹೊಡೆಡ ಪರಿಣಾಮ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 240 ಕ್ಕೆ ಏರಿಕೆಯಾಗಿದೆ. ಚೆನ್ನೈ-ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು, ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ರೈಲು ಮುಖಾಮುಖಿ ಡಿಕ್ಕಿಯಾಗಿದ್ದವು. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಗ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿತು. 12841 ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾದ ರಭಸಕ್ಕೆ ಪ್ರಯಾಣಿಕರಿದ್ದ ರೈಲಿನ ಹಲವು ಬೋಗಿಗಳು ಹಳಿ ತಪ್ಪಿ, ಭೀಕರ ಅಪಘಾತದಲ್ಲಿ ಹಲವರು ಮೃತಪಟ್ಟಿದ್ದಾರೆ. ಒಡಿಶಾ ರೈಲು ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ 10 ಲಕ್ಷ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಿದೆ ಈ ಕುರಿತು ಮಾಹಿತಿ ನೀಡಿದಂತ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದಲ್ಲಿ ಮೃತಪಟ್ಟವರಿಗೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ., ಸಣ್ಣಪುಟ್ಟ ಗಾಯಗೊಂಡವರಿಗೆ 50,000 ರೂ ಪರಿಹಾರ ನೀಡಲಾಗುವುದು ಎಂದು ಘೋಷಿದರು. https://twitter.com/ANI/status/1664677827264802816…

Read More

ಬಳ್ಳಾರಿ : ಜಿಲ್ಲೆಯಲ್ಲಿ ನಗರದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜ್ ಮತ್ತು ಬಳ್ಳಾರಿ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಇಂಜಿನಿಯರಿಂಗ್ ಕಾಲೇಜ್ನಲ್ಲಿ ದೆಹಲಿಯ ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದಿಂದ ಜೂ.04 ರಂದು ಬೆಳಗ್ಗೆ 09 ರಿಂದ ಸಂಜೆ 06 ರವರೆಗೆ ಜೆಇಇ-2023 ರ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀಟರ್ ಒಳಗಿನ ಆವರಣವನ್ನು ಸಿಆರ್ಪಿಸಿ ಕಲಂ 144 ರ ಮೇರೆಗೆ ನಿರ್ಭಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪವನ್ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ. ಸದರಿ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಿದೆ ಹಾಗೂ ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನಲ್ಲಿರುವ ಜೆರಾಕ್ಸ್ ಸೆಂಟರ್ಗಳನ್ನು ಮುಚ್ಚುವಂತೆ ಆದೇಶಿಸಿರುತ್ತಾರೆ.ಈ ಆದೇಶವು ಪರೀಕ್ಷಾ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ. https://kannadanewsnow.com/kannada/heres-a-list-of-indias-10-most-fatal-train-accidents/

Read More

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಜೂನ್ 11 ರಿಂದ ವಿದ್ಯಾರ್ಥಿನಿಯರು ಸೇರಿದಂತೆ ಎಲ್ಲಾ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ರಾಜ್ಯಾದ್ಯಂತ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ ಯಾವುದು ಎಸಿ ಬಸ್ ಗಳಿದ್ದಾವೆ ಅವುಗಳನ್ನು ಬಿಟ್ಟು, ರಾಜಹಂಸ ಇರಬಹುದು, ಬೇರೆ ಬಸ್ ಇರಬಹುದು ಆ ಎಲ್ಲಾ ಬಸ್ ಗಳಲ್ಲಿ ಫ್ರೀಯಾಗಿ ಪ್ರಯಾಣ ಮಾಡಬಹುದು. ಆದರೇ ಬೆಂಗಳೂರಿನಿಂದ ತಿರುಪತಿಗೆ, ಹೈದರಾಬಾದ್ ಗೆ ಹೋಗುತ್ತೇವೆ ಎಂದರೆ ಇಲ್ಲ. ರಾಜ್ಯದ ಒಳಗೆ ಮತ್ತು ಕರ್ನಾಟಕವರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ. ಎಸಿ ಮತ್ತು ನಾನ್ ಎಸಿ ಸ್ಲೀಪರ್ ಗಳಲ್ಲಿ ಪ್ರಯಾಣಿಸಲು ಅವಕಾಶವಿಲ್ಲ ಎಂದು ತಿಳಿಸಿದರು.ಎಸಿ ಮತ್ತು ಲಕ್ಸೂರಿ ಬಸ್ ಹೊರತುಪಡಿಸಿ ಮಾಡಿದರೆ ಶೇ.94ರಷ್ಟು ಕವರ್ ಆಗಲಿದೆ. ಇವತ್ತು ಜಾರಿಗೆ ಕೊಡಲು ತೀರ್ಮಾನ ಮಾಡಲಾಗಿದೆ. ಜೂನ್ 11ನೇ ತಾರೀಕು ಬೆಂಗಳೂರಿನಲ್ಲಿ ಲೋಕಾರ್ಪಣೆಗೊಳಿಸಲಾಗುತ್ತಿದೆ. ಜೂನ್ 11ರಿಂದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು.…

Read More

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಜೂ.5 ರಿಂದ ಮಳೆ ಚುರುಕುಗೊಳ್ಳಲಿದೆ. ಮಾರ್ಚ್ 1 ರಿಂದ ಮೇ. 31 ರವರೆಗೆ ರಾಜ್ಯಾದ್ಯಂತ ವಾಡಿಕೆಯಂತೆ 115 ಮಿ.ಮೀ ಮುಂಗಾರು ಪೂರ್ವ ಮಳೆಯಾಗಬೇಕಿತ್ತು. 116 ಮಿ.ಮೀ ವಾಡಿಕೆಯಷ್ಟೇ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. https://kannadanewsnow.com/kannada/bigg-news-state-govt-orders-allotment-of-rooms-to-174-mlas-in-mlas-bhavan/  

Read More

ನವದೆಹಲಿ : ಕಳೆದ ಎರಡು ತಿಂಗಳಲ್ಲಿ ಅಂತರರಾಷ್ಟ್ರೀಯ ದರಗಳು ತೀವ್ರವಾಗಿ ಕುಸಿದಿರುವ ಹಿನ್ನೆಲೆಯಲ್ಲಿ ಅಗತ್ಯ ಸರಕುಗಳ ಚಿಲ್ಲರೆ ಬೆಲೆಯನ್ನ ತಕ್ಷಣದಿಂದ ಜಾರಿಗೆ ಬರುವಂತೆ 8 ರಿಂದ 12 ರೂಪಾಯಿವರೆಗೆ ಇಳಿಸುವಂತೆ ಖಾದ್ಯ ತೈಲ ಉದ್ಯಮಕ್ಕೆ ಸರ್ಕಾರ ಶುಕ್ರವಾರ ನಿರ್ದೇಶನ ನೀಡಿದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಕಾರ್ಯದರ್ಶಿ ಸಂಜೀವ್ ಚೋಪ್ರಾ ಅವರು ಸಭೆಯಲ್ಲಿ ಖಾದ್ಯ ತೈಲ ಸಂಘಗಳ ಪ್ರತಿನಿಧಿಗಳಿಗೆ ಈ ನಿರ್ದೇಶನವನ್ನ ನೀಡಿದರು. ಇನ್ನು ಕಡಿಮೆ ಖಾದ್ಯ ತೈಲ ಬೆಲೆಗಳ ಪ್ರಯೋಜನಗಳನ್ನ ಗ್ರಾಹಕರಿಗೆ ವರ್ಗಾಯಿಸಲು ನಿರ್ದಿಷ್ಟವಾಗಿ ತಿಳಿಸಲಾಯಿತು. ಯಾಕಂದ್ರೆ, ಕಳೆದ ಎರಡು ತಿಂಗಳಲ್ಲಿ ವಿವಿಧ ಖಾದ್ಯ ತೈಲಗಳ ಜಾಗತಿಕ ಬೆಲೆಗಳು ಪ್ರತಿ ಟನ್ಗೆ 150-200 ಡಾಲರ್ಗಳಷ್ಟು ಕುಸಿದಿವೆ ಎಂದು ಉದ್ಯಮವು ತಿಳಿಸಿದೆ. ಈ ಹಿನ್ನೆಲೆಯಲ್ಲಿ, ಮುಂದಿನ ಕೆಲವು ದಿನಗಳಲ್ಲಿ ಖಾದ್ಯ ತೈಲ ಬೆಲೆಗಳು ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಕಡಿಮೆ ಬೆಲೆಯ ಲಾಭವನ್ನ ತ್ವರಿತವಾಗಿ ಗ್ರಾಹಕರಿಗೆ ವರ್ಗಾಯಿಸುವಂತೆ ಚೋಪ್ರಾ ಖಾದ್ಯ ತೈಲ ಉತ್ಪಾದಕರಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿದುಬಂದಿದೆ.…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಸಿಎಂ, ಡಿಸಿಎಂ ಹಾಗೂ ಸಚಿವರುಗಳಿಗೆ ವಿಧಾನಸೌಧದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಿತ್ತು. ಈ ಬೆನ್ನಲ್ಲೇ  174 ಶಾಸಕರಿಗೆ ಶಾಸಕರ ಭವನದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶಿಸಿದೆ. ಈ ಸಂಬಂಧ ಕರ್ನಾಟಕ ವಿಧಾನಸಭೆ ಸಚಿವಾಲಯದ ಜಂಟಿ ಕಾರ್ಯದರ್ಶಿ ಸಿ.ಬಿ ಕೆಂಪಮ್ಮ ಅವರು ಆದೇಶ ಹೊರಡಿಸಿದ್ದಾರೆ. 16ನೇ ವಿಧಾನಸಭೆಯ ಶಾಸಕರುಗಳಿಗೆ ಶಾಸಕರ ಭವನದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಿರುವುದಾಗಿ ತಿಳಿಸಿದ್ದಾರೆ. ಆದೇಶದಂತೆ ಮೊಳಕಾಲ್ಮೂರು ಶಾಸಕ ಎನ್.ವೈ ಗೋಪಾಲಕೃಷ್ಣ ಅವರಿಗೆ ಶಾಸಕರ ಭವನದ ಕಟ್ಟಡ ಸಂಖ್ಯೆ 5ರಲ್ಲಿನ 2008 ಕೊಠಡಿಯನ್ನು ಹಂಚಿಕೆ ಮಾಡಲಾಗಿದ್ದರೇ, ಟಿ.ಬಿ ಜಯಚಂದ್ರ ಅವರಿಗೆ 1008, ಅಪ್ಪಾಜಿ ಆಲಿಯಾಸ್ ಚನ್ನಬಸವರಾಜ ಬಿನ್ ಶಂಕರ್ ರಾವ್ ನಾಡಗೌಡ ಅವರಿಗೆ 1004 ಕೊಠಡಿಯನ್ನು ಹಂಚಿಕೆ ಮಾಡಲಾಗಿದೆ. ಬಸವರಾಜ ರಾಯರೆಡ್ಡಿ ಅವರಿಗೆ ಕಟ್ಟಡ-4ರಲ್ಲಿ 288, ಶಾಮನೂರು ಶಿವಶಂಕರಪ್ಪ ಅವರಿಗೆ ಕಟ್ಟಡ-05ರ 1003, ತನ್ವೀರ್ ಸೇಠ್ 2005, ರಮೇಶ್ ಜಾರಕಿಹೊಳಿಗೆ 4010, ಹೆಚ್ ಡಿ ರೇವಣ್ಣ 3006, ಹೆಚ್ ಸಿ ಬಾಲಕೃಷ್ಣ 1001 ಕೊಠಡಿಗಳನ್ನು ಶಾಸಕರ…

Read More

ಬೆಂಗಳೂರು: 2023ರ ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಿದ ಜಿಲ್ಲಾ ಚುನಾವಣಾಧಿಕಾರಿ, ಅಪರ ಜಿಲ್ಲಾ ಚುನಾವಣಾಧಿಕಾರಿ, ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿ ಮತ್ತು ಸಹಾಯ ಚುನಾವಣಾಧಿಕಾರಿ, ಚುನಾವಣಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳಿಗೆ ಗೌರವಧನವನ್ನು ಮಂಜೂರು ಮಾಡಲಾಗಿದೆ. ಈ ಕುರಿತಂತೆ  ಸಹಾಯಕ ಮುಖ್ಯ ಚುನಾವಣಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿಯವರು ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಬರೆದಿರುವಂತ ಪತ್ರದಲ್ಲಿ 2023ರ ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿ, ಸಿಬ್ಬಂದಿಗಳಿಗೆ ಗೌರವಧನವನ್ನು ಪಾವತಿಸಲು ಆದೇಶ ಹೊರಡಿಸಲಾಗಿತ್ತು ಎಂದಿದ್ದಾರೆ. ದಿನಾಂಕ 01-01-2023ರಿಂದ 15-05-2023ರವರೆಗೆ ಪೂರ್ಣ ಅವಧಿಯವರೆಗೆ ಸಮರ್ಪಕವಾಗಿ ಚುನಾವಣಾ ಕಾರ್ಯ ನಿರ್ವಹಿಸಿರುವ ಅಧಿಕಾರಿ, ಸಿಬ್ಬಂದಿಗಳಿಗೆ ಅವರ ಒಂದು ತಿಂಗಳ ವೇತನ ಅಂದರೆ ಮೇ. 2023ರ ವೇತನದ ಪೂರ್ಣಮೊತ್ತವನ್ನು ಹಾಗೂ ಕಡಿಮೆ ಅವಧಿಗೆ ಹಾಜರಾಗ ಅಧಿಕಾರಿ, ಸಿಬ್ಬಂದಿಗಳಿಗೆ ಹಾಜರಾದ ದಿನಗಳಿಗನುಗುಣವಾಗಿ ಅವರ ಹಾಜರಾತಿ ಪ್ರಮಾಣಾನುಸಾರ ವೇತನ ಗೌರವವನ್ನಾಗಿ ನಿಗದಿಪಡಿಸಿ, ಮಂಜೂರು ಮಾಡುವಂತೆ ಆದೇಶದಲ್ಲಿ…

Read More

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೂ ಜು.1 ರಿಂದ ಅನ್ವಯವಾಗುವಂತೆ 10 ಕೆಜಿ ಆಹಾರ ಧಾನ್ಯ ವಿತರಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರತಿಯೊಬ್ಬರಿಗೂ 7 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಈ ಪ್ರಮಾಣವನ್ನು ಹಿಂದಿನ ಬಿಜೆಪಿ ಸರ್ಕಾರ 5 ಕೆಜಿಗೆ ಇಳಿಸಿತ್ತು. ಚುನಾವಣೆ ಪ್ರಣಾಳಿಕೆ ವೇಳೆ ನಮ್ಮ ಸರ್ಕಾರ ಬಂದರೆ ಪ್ರತಿ ಸದಸ್ಯರಿಗೆ 10 ಕೆಜಿ ಆಹಾರ ಧಾನ್ಯ ಒದಗಿಸುವುದಾಗಿ ಹೇಳಿದ್ದೇವು. ಅದರಂತೆ ಜುಲೈ 1 ರಿಂದ ಆಹಾರ ಧಾನ್ಯ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ಸದ್ಯ ಉಗ್ರಾಣದಲ್ಇ ಆಹಾರ ಧಾನ್ಯಗಳು ಲಭ್ಯವಿಲ್ಲದಿರುವ ಕಾರಣ ಪಡಿತರ ಚಿಟಿದಾರರಿಗೆ ಅನ್ನಭಾಗ್ಯ ಯೋಜನೆಯಡಿ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಆಹಾರ ಧಾನ್ಯಗಳನ್ನು ಒದಗಿಸುವ ಯೋಜನೆಯನ್ನು ಜು. 1 ರಿಂದ…

Read More

ಭುವನೇಶ್ವರ : ಒಡಿಶಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಬಾಲಸೋರ್ನ ಬಹನಾಗ ನಿಲ್ದಾಣದ ಬಳಿ ಡಿಕ್ಕಿ ಹೊಡೆಡ ಪರಿಣಾಮ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 233 ಕ್ಕೆ ಏರಿಕೆಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ, ಒಡಿಶಾದ ಬಾಲಸೋರ್ ನಲ್ಲಿ ಭೀಕರ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 233 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. https://twitter.com/ANI/status/1664792615533830146?ref_src=twsrc%5Egoogle%7Ctwcamp%5Eserp%7Ctwgr%5Etweet ಒಡಿಶಾ ರೈಲು ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ 10 ಲಕ್ಷ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಿದೆ ಈ ಕುರಿತು ಮಾಹಿತಿ ನೀಡಿದಂತ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದಲ್ಲಿ ಮೃತಪಟ್ಟವರಿಗೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ., ಸಣ್ಣಪುಟ್ಟ ಗಾಯಗೊಂಡವರಿಗೆ 50,000 ರೂ ಪರಿಹಾರ ನೀಡಲಾಗುವುದು ಎಂದು ಘೋಷಿದರು. https://twitter.com/ANI/status/1664677827264802816 ಸಹಾಯವಾಣಿ ಆರಂಭ ಬಾಲಸೋರ್ ನ ಬಹನಾಗ ನಿಲ್ದಾಣದ ಬಳಿ ಶಾಲಿಮಾರ್-ಚೈನ್ನೈ ಕೋರಮಂಡಲ್ ಎಕ್ಸ್ ಪ್ರೆಸ್ ರೈಲು…

Read More

ಬೆಂಗಳೂರು: 2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರು ( Primary and High School Teacher ), ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು, ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗೆ ( General Transfer ) ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿಯನ್ನು ( Transfer Timetable ) ಶಿಕ್ಷಣ ಇಲಾಖೆ ( Education Department ) ಹೊರಡಿಸಿದೆ. ಅದರಂತೆ ಜೂನ್.6ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಶಾಲಾ ಶಿಕ್ಷಕರಿಗೆ ( School Teacher ) ಗುಡ್ ನ್ಯೂಸ್ ನೀಡಿದೆ. ಈ ಸಂಬಂಧ  ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಬಿ.ಬಿ ಕಾವೇರಿ ಅವರು ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿಯನ್ನು ( Teacher Transfer Timetable ) ಪ್ರಕಟಿಸಿದ್ದಾರೆ. ಅದರಲ್ಲಿ ಹೆಚ್ಚುವರಿ ಶಿಕ್ಷಕರ ಪರಿಷ್ಕೃತ ಕರಡು ಪಟ್ಟಿಯನ್ನು ದಿನಾಂಕ 06-06-2023ರಂದು ಪ್ರಕಟಿಸಲಾಗುತ್ತದೆ. ವರ್ಗಾವಣಾ…

Read More