ತುಮಕೂರು: ಕರ್ನಾಟಕದ ಇತಿಹಾಸದಲ್ಲಿ ತುಮಕೂರಿನಲ್ಲಿ ಔದ್ಯೋಗಿಕ ಕ್ರಾಂತಿಯಾಗಿದ್ದು, ಹೆಚ್.ಎ.ಎಲ್ ಘಟಕದಿಂದ ಸುಮಾರು ಹತ್ತು ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಗುಬ್ಬಿ ತಾಲ್ಲೂಕಿನ ಬಿದರೆಹಳ್ಳಿ ಕಾವಲ್ ಗ್ರಾಮದ ಹೆಚ್.ಎ.ಎಲ್ ಘಟಕದಲ್ಲಿ ಆಯೋಜಿಸಿರುವ ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆ ಉದ್ಘಾಟನೆ, ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಶಂಕುಸ್ಥಾಪನೆ ಕಾಮಗಾರಿ ಹಾಗೂ ತುಮಕೂರು ಇಂಡಸ್ಟ್ರಿಯಲ್ ಕಾರಿಡಾರ್ ಯೋಜನೆ ಹಂತ 2 ರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯರೊಂದಿಗೆ ಪಾಲ್ಗೊಂಡು ಮಾತನಾಡಿದರು. ಸ್ವತಂತ್ರಪೂರ್ವದ ಸಂಸ್ಥೆಯಾದ ಹೆಚ್.ಎ.ಎಲ್ ತನ್ನದೇ ಆದ ಸ್ಥಾನವನ್ನು ಹೊಂದಿದೆ. ಪಿ. ಎಸ್.ಯು ಗಳ ಪೈಕಿ ಅಗ್ರಮಾನ್ಯ ಸಂಸ್ಥೆಯಾಗಿದ್ದು, ಇಡೀ ದೇಶದಲ್ಲಿಯೇ ಅತ್ಯಂತ ಶ್ರೇಷ್ಠ ಏರೋಸ್ಪೇಸ್ ಕೈಗಾರಿಕೆಯಾಗಿದೆ. ಈ ಸಂಸ್ಥೆ ತುಮಕೂರು ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಉತ್ಪಾದನೆ ಮಾಡುವ ಘಟಕವನ್ನು ತೆರೆದಿದೆ. ಮೂರು ವರ್ಷಗಳ ಹಿಂದೆ ನಮ್ಮ ಪ್ರಧಾನಿಗಳೇ ಇದಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು, ಇಂದು ಅವರೇ ಉದ್ಘಾಟನೆಯನ್ನೂ ಮಾಡುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ವೇಗಕ್ಕೆ…
Author: kannadanewslive
ಬೆಂಗಳೂರು: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಮಹತ್ವದ ನಿರ್ಧಾರ ಎನ್ನುವಂತೆ, ರಾಜ್ಯಾಧ್ಯಂತ ಬೀದಿ ನಾಯಿಗಳ ಸಂತಾನ ನಿಯಂತ್ರಣ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಇಂದು ನಗರಾಭಿವೃದ್ಧಿ ಇಲಾಖೆ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಸೇವಾ ಇಲಾಖೆಯಿಂದ ಜಂಟಿ ಸುತ್ತೋಲೆ ಹೊರಡಿಸಲಾಗಿದೆ. ಇಲಾಖೆ ಹೊರಡಿಸಿರುವಂತ ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಪುರಸಭೆ, ನಗರಸಭೆ, ಪಟ್ಟಣ ಪಂಚಾಯ್ತಿ, ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂತಾನ ನಿಯಂತ್ರಣ( Animal Birth Control – ABC) ಯೋಜನೆಯನ್ನು ಕೈಗೊಳ್ಳುವುದು ಸಂಬಂಧ ಪಟ್ಟ ಸ್ಥಳೀಯ ಸಂಸ್ಥೆಗಳ ಆದ್ಯ ಕರ್ತವ್ಯವಾಗಿರುತ್ತದೆ ಎಂದು ಹೇಳಿದೆ. ಈ ಯೋಜನೆಯನ್ನು ಕ್ರಮಬದ್ಧವಾಗಿ ಅನುಷ್ಠಾನಗೊಳಿಸುವುದರಿಂದ ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣವಾಗುವುದರ ಜೊತೆಗೆ ನಾಯಿ ಕಡಿತ ಮತ್ತು ರೆಬೀಸ್ ರೋಗ ನಿಯಂತ್ರಣ ಮಾಡಲು ಸಾಧ್ಯವಾಗುವುದು ಎಂದು ತಿಳಿಸಿದೆ. ಎಬಿಸಿ ನಿಯಮದಡಿಯಲ್ಲಿ ರಾಜ್ಯಾಧ್ಯಂತ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಣಗೊಳಿಸಲು, ಕೆಲ ಮಾರ್ಗಸೂಚಿ ಕ್ರಮಗಳನ್ನು ಕೂಡ ಇಲಾಖೆ ಹೊರಡಿಸಿದೆ. https://kannadanewsnow.com/kannada/siddaramaiah-government-made-165-promises-fulfilled-159-this-bjp-government-gave-600-and-fulfilled-only-50/ https://kannadanewsnow.com/kannada/lokayuktha-raid-in-madikeri/
ಚಿತ್ರದುರ್ಗ: ಈ ಸರ್ಕಾರದಲ್ಲಿ ಪಿಎಸ್ಐ ಸೇರಿದಂತೆ ಎಲ್ಲ ಉದ್ಯೋಗ ನೇಮಕಾತಿಗೂ ಲಂಚ ನೀಡಬೇಕು. ಈ ಸರ್ಕಾರದ ಭ್ರಷ್ಟಾಚಾರಕ್ಕೆ ಗುತ್ತಿಗೆದಾರರು ಸತ್ತರು. ಒಬ್ಬ ಮಂತ್ರಿ ಲಂಚದಿಂದ ಅಧಿಕಾರ ಕಳೆದುಕೊಂಡ, ಮತ್ತೊಬ್ಬ ಮಂಚದಿಂದ ಅಧಿಕಾರ ಕಳೆದುಕೊಂಡ. ಇನ್ನು 40 ದಿನಗಳ ನಂತರ ನಿಮ್ಮ ಸರ್ಕಾರ ಬರಲಿದೆ. ನೀವೆಲ್ಲ ವಿಧಾನಸೌಧದಲ್ಲಿ ಕೂತಿರುತ್ತೀರಿ. ನೀವೆಲ್ಲರೂ ಕಾಂಗ್ರೆಸ್ ಕಟ್ಟಾಳುಗಳು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಮಾತನಾಡಿದಂತ ಅವರು, ಈ ಸಭೆ ದೇವರ ಸನ್ನಿದಿ ಮುಂದೆ ನಡೆಯುತ್ತಿದೆ. ಈ ಸಭೆಯಲ್ಲಿ ಎಲ್ಲ ವರ್ಗದ ರೈತರು ಸೇರಿದ್ದೀರಿ. ರೈತ ಕೊಡುವ ಅನ್ನ, ಗುರು ಕಲಿಸುವ ಅಕ್ಷರ, ತಾಯಿ ಕೊಡುವ ಆಶೀರ್ವಾದ ಜಗತ್ತಿನಲ್ಲಿ ಶ್ರೇಷ್ಠವಾದುದು. ಇವುಗಳ ಜತೆಗೆ ಜನರ ಆಶೀರ್ವಾದ ತಾಯಿ ಆಶೀರ್ವಾದದಷ್ಟೇ ಮುಖ್ಯ. ಇಲ್ಲಿನ ಶಾಸಕರು ಸಮಾಜದ ಋಣ ತೀರಿಸಲು ತಮ್ಮ ಕರ್ತವ್ಯ ಮಾಡಿಕೊಂಡು ಬರುತ್ತಿದ್ದಾರೆ ಎಂದರು. ಮಹಾಭಾರತದಲ್ಲಿ ಭೀಷ್ಮ ಧರ್ಮರಾಯನಿಗೆ ಒಂದು ಮಾತು ಹೇಳುತ್ತಾರೆ. ಋಣ ತೀರಿಸುವಾಗ ನಾಲ್ಕು ಋಣ ತೀರಿಸಬೇಕಂತೆ.…
ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ( Tumkuru University ) ಕ್ರೀಡಾ ವಸತಿ ನಿಲಯದ ಅಡುಗೆ ಕೋಣೆಯ ಪಕ್ಕದಲ್ಲಿಯೇ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡದಿಂದಾಗಿ ಅಪಾರ ಪ್ರಮಾಣದ ಸಾಮಗ್ರಿಗಳು ಬೆಂಕಿಗೆ ಅಹುತಿಯಾಗಿರೋದಾಗಿ ತಿಳಿದು ಬಂದಿದೆ. ತುಮಕೂರಿನಲ್ಲಿರುವಂತ ತುಮಕೂರು ವಿವಿಯ ಕ್ರೀಡಾ ವಸತಿ ನಿಲಯದ ಹಾಸ್ಟೆಲ್ ಅಡುಗೆ ಮನೆಯ ಪಕ್ಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆಕಸ್ಮಿಕ ಬೆಂಕಿಯಿಂದಾಗಿ ಅಪಾರ ಪ್ರಮಾಣದ ಕ್ರೀಡಾ ಸಾಮಗ್ರಿ ಸುಟ್ಟು ಭಸ್ಮವಾಗಿರೋದಾಗಿ ಹೇಳಲಾಗುತ್ತಿದೆ. ಬೆಂಕಿ ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಅನಾಹುತ, ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿರುವಂತ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸೋ ಕಾರ್ಯದಲ್ಲಿ ತೊಡಗಿದ್ದಾವೆ. ಅಗ್ನಿ ಆಕಸ್ಮಿಕಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗುತ್ತಿದೆ. ಬೆಂಕಿಯನ್ನು ಹತೋಟಿಗೆ ತಂದ ನಂತ್ರ ಪರಿಶೀಲನೆಯ ಬಳಿಕ ಖಚಿತ ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/online-application-invitation-for-backward-class-hostel-admission/ https://kannadanewsnow.com/kannada/siddaramaiah-government-made-165-promises-fulfilled-159-this-bjp-government-gave-600-and-fulfilled-only-50/
ಬೆಂಗಳೂರು: ಇಂದಿನಿಂದ ಫ್ರೀಡಂ ಪಾರ್ಕ್ ನಲ್ಲಿ ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸುತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದಂತ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಚಿವ ಮುನಿರತ್ನ ಭರವಸೆಗೆ ಬಗ್ಗದೇ, ಮುಷ್ಕರ ಹಿಂತೆಗೆದುಕೊಳ್ಳದೇ ಮುಷ್ಕರ ಮುಂದುವರೆಸೋ ನಿರ್ಧಾರವನ್ನು ಕೈಗೊಂಡಿದ್ದಾರೆ. ಈ ಕುರಿತಂತೆ ನಮ್ಮ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿ ಮಾಹಿತಿ ನೀಡಿದಂತ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ವಿಶ್ವಾರಾದ್ಯ ಯಮೋಜಿ, ಇಂದಿನಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಆರೋಗ್ಯ, ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹೊರಗುತ್ತಿಗೆ ನೌಕರರಿಂದ ವಿವಿಧ ಬೇಡಿಕೆ ಈಡೇರಿಕೆಗಾಗಿ ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸಲಾಗುತ್ತಿದೆ. ಮುಷ್ಕರ ನಿರತ ಸ್ಥಳಕ್ಕೆ ಸಚಿವ ಮುನಿರತ್ನ ಭೇಟಿ ನೀಡಿ, ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ಆದ್ರೇ ನಾವು ಭರವಸೆಗೆ ಒಪ್ಪಿ, ಮುಷ್ಕರ ಹಿಂತೆಗೆದುಕೊಳ್ಳುವುದಿಲ್ಲ ಎಂದರು. ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುವ ಭರವಸೆಯನ್ನು…
ಬೆಂಗಳೂರು: 2020-21 ಮತ್ತು 2022ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿರುವಂತ ಸರ್ಕಾರಿ ಅಧಿಕಾರಿ, ನೌಕರರಿಗೆ ಪ್ರಶಸ್ತಿಯ ಮೊತ್ತದ ಹಣವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇದಲ್ಲದೇ 2022ನೇ ಸಾಲಿನಿಂದ ಅನ್ವಯವಾಗುವಂತೆ ಪ್ರಶಸ್ತಿಯ ಮೊತ್ತವನ್ನು 10 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಳ ಮಾಡಿದೆ. ಈ ಸಂಬಂಧ ನಡವಳಿಯನ್ನು ಹೊರಡಿಸಿರುವಂತ ಸರ್ಕಾರದ ಅಧೀನ ಕಾರ್ಯದರ್ಶಿಯವರು, 2020-21 ಮತ್ತು 2022ನೇ ಸಾಲಿಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾದ ಅಧಿಕಾರಿ, ನೌಕರರಿಗೆ ಪ್ರಶಸ್ತಿ ಮೊತ್ತ ರೂ.10,000 ಮತ್ತು 25,000ಗಳಂತೆ ಒಟ್ಟು 82,85,000ಗಳನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಿ ಆದೇಶಿಸಲಾಗಿರೋದಾಗಿ ತಿಳಿಸಿದ್ದಾರೆ. 2022ನೇ ಸಾಲಿನಿಂದ ಅನ್ವಯವಾಗುವಂತೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯ ಮೊತ್ತವನ್ನು ರೂ.10,000ಗಳಿಂದ ರೂ.25,000ಗಳಿಗೆ ಹೆಚ್ಚಿಸಿ ಆದೇಶಿಲಾಗಿದೆ. ದಿನಾಂಕ 06-02-2023ರ ಆದೇಶದಲ್ಲಿ ಸರ್ವೋತ್ತಮ ಸೇವಾ ಪ್ರಶಸ್ತಿ ಮೊತ್ತದ ಬಿಡುಗಡೆಗೆ ಅನುದಾನ ಕೊರತೆ ಇದ್ದ ಕಾರಮ, ಈ ಮೊತ್ತವನ್ನು ಲೆಕ್ಕ ಶೀರ್ಷಿಕೆ 2052-00-090-0-25-059ರಿಂದ ಪುನರ್ ವಿನಿಯೋಗ ಮಾಡಿಕೊಳ್ಳಲಾಗಿದೆ…
ಚಿತ್ರದುರ್ಗ: ಕಾಂಗ್ರೆಸ್ ಪಕ್ಷ ( Congress Party ) ಕೊಟ್ಟ ಮಾತು, ಬಿಜೆಪಿ (BJP ) ಕೊಟ್ಟ ಮಾತು ಏನು? ಯಾರು ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ ಎಂದು ಪರಿಶೀಲಿಸಿ. ಸಿದ್ದರಾಮಯ್ಯ ( Siddaramaiah ) ಅವರ ಸರ್ಕಾರ 165 ಭರವಸೆ ನೀಡಿ 159 ಭರವಸೆ ಈಡೇರಿಸಲಾಗಿದೆ. ಬಿಜೆಪಿ 600 ಭರವಸೆಗಳಲ್ಲಿ ಕೇವಲ 50 ಮಾತ್ರ ಈಡೇರಿಸಿದ್ದು, 550 ಈಡೇರಿಸಲು ಆಗಿಲ್ಲ. ನಾವು ಬಸವಣ್ಣನ ತತ್ವದಂತೆ ನುಡಿದಂತೆ ನಡೆಯುತ್ತೇವೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( KPCC President DK Shivakumar ) ಹೇಳಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನನಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಮಾತನಾಡಿದಂತ ಅವರು, ಕಳೆದ ಮೂರ್ನಾಲ್ಕು ತಿಂಗಳಲ್ಲಿ 3ನೇ ಬಾರಿಗೆ ಇಲ್ಲಿಗೆ ಬಂದಿದ್ದೇನೆ. ಮೊದಲು ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಬಂದಾಗ ಕೇಂಪೇಗೌಡರ ವಂಶಸ್ಥ ಡಿ.ಕೆ.ಶಿವಕುಮಾರ್ ಅವರ ಜತೆ ನಿಲ್ಲುತ್ತೇವೆ ಎಂದು ಸಂಕಲ್ಪ ಮಾಡಿದ್ದಿರಿ. ನಂತರ ಭಾರತ ಜೋಡೋ ಯಾತ್ರೆ ಸಂದರ್ಭದಲ್ಲಿ ಬಂದಾಗ ಹಿರಿಯೂರಿನ ಜನ ಧಾರಾಕಾರ ಮಳೆಯ ನಡುವೆ…
ಶಿವಮೊಗ್ಗ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ಆರ್.ಕೆ.ವಿ.ವೈ ಯೋಜನೆಯಡಿ ಕುರಿ/ಮೇಕೆ ಸಾಕಾಣಿಕೆಗಾಗಿ ನಿಗಮದಲ್ಲಿ ನೊಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಜಾತಿ ಹಾಗೂ ಸಾಮಾನ್ಯ ವರ್ಗದ 18 ರಿಂದ 60 ವರ್ಷ ವಯೋಮಿತಿಯ ಮಹಿಳಾ ಸದಸ್ಯರು, ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ ಪುರುಷ ಸದಸ್ಯರುಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಆಯಾ ತಾಲೂಕು ಸಹಾಯಕ ನಿರ್ದೇಶಕರುಗಳ ಕಚೇರಿ ಅಥವಾ ಕುರಿಗಾರರ ಸಂಘದ ಕಚೇರಿಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಫೆ. 20 ರೊಳಗಾಗಿ ಸಲ್ಲಿಸುವಂತೆ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ -7406897075, ಶಿಕಾರಿಪುರ-9972957278, ಭದ್ರಾವತಿ-8722365101, ಸಾಗರ-9481255897, ಸೊರಬ-9900632880, ತೀರ್ಥಹಳ್ಳಿ-08181-228521 ಮತ್ತು ಹೊಸನಗರ-9449623236 ಗಳನ್ನು ಸಂಪರ್ಕಿಸುವುದು. https://kannadanewsnow.com/kannada/bengaluru-bike-rider-killed-on-spot-four-injured-in-road-accident/ https://kannadanewsnow.com/kannada/former-cm-hd-kumaraswamy-clarifies-that-he-spoke-about-peshwas-dna-person-not-brahmins/ https://kannadanewsnow.com/kannada/tumkur-to-grow-as-countrys-largest-industrial-district-pm-modis-speech/
ಬೆಂಗಳೂರು: ನಗರದಲ್ಲಿ ಇಂದು ಸರಣಿ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿ, ಹಲವರು ಗಾಯಗೊಂಡಿರೋ ಘಟನೆ ನೃಪತುಂಗ ರಸ್ತೆಯಲ್ಲಿ ನಡೆದಿದೆ. ಬೆಂಗಳೂರಿನ ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿಯಲ್ಲಿ 2 ಕಾರು, 2 ಬೈಕ್ ಗಳಿಗೆ ಇನೋವಾ ಕಾರೊಂದು ಡಿಕ್ಕಿ ಹೊಡೆದಿದೆ. ಈ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಸರಣಿ ಅಪಘಾತದಲ್ಲಿ ಸಾವನ್ನಪ್ಪಿದಂತ ಬೈಕ್ ಸವಾರನನ್ನು ಮಾಜಿದ್ ಖಾನ್(39) ಎಂದು ಗುರುತಿಸಲಾಗಿದೆ. ಇನೋವಾ ಕಾರು ಬೈಕ್ ಗೆ ಡಿಕ್ಕಿಯಾದ ಪರಿಣಾಮ ಈತ ಸ್ಥಳದಲ್ಲಿಯೇ ಸಾವನ್ನಪ್ಪಿರೋದಾಗಿ ಹೇಳಲಾಗುತ್ತಿದೆ. ಮೃತ ಮಾಜಿತ್ ಖಾನ್ ಆಟೋಮೊಬೈಲ್ ಅಂಗಡಿ ಇಟ್ಟಿಕೊಂಡಿದ್ದ ಎನ್ನಲಾಗಿದೆ. ಈ ಸರಣಿ ಅಪಘಾತದಲ್ಲಿ ರಿಯಾಜ್ ಸೇರಿದಂತೆ ನಾಲ್ವರು ಗಾಯಗೊಂಡು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಎ 50, ಎಂಎ 6600 ಎಂಬ ಇನೋವಾ ಕಾರು ಸರಣಿ ಅಪಘಾತಕ್ಕೆ ಕಾರಣವಾಗಿದೆ. ಈ ಕಾರು ರಾಮುಸುರೇಶ್ ಎಂಬುವರ ಹೆಸರಿನಲ್ಲಿದೆ ಎನ್ನಲಾಗಿದೆ. ಕಾರಿನ ಮೇಲೆ ಮಾಜಿ ಎಂಎಲ್ಎ ಎಂಬ ಸ್ಟಿಕ್ಕರ್ ಕೂಡ ಅಂಟಿಸಲಾಗಿದೆ. ಅಪಘಾತದ…
ಬೆಂಗಳೂರು : ಆರೋಗ್ಯ ವಲಯದ ಮೂಲಸೌಕರ್ಯ ವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಏಕಕಾಲಕ್ಕೆ 108 ‘ನಮ್ಮ ಕ್ಲಿನಿಕ್’ ಗಳಿಗೆ ( Namma Clinic ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ತಿಳಿಸಿದ್ದಾರೆ. ಮಹಾಲಕ್ಷ್ಮಿ ಬಡಾವಣೆಯ ಮಹಾಲಕ್ಷ್ಮಿಪುರ ವಾರ್ಡ್ ನಲ್ಲಿ ಆರಂಭಿಸಿರುವ ನಮ್ಮ ಕ್ಲಿನಿಕ್ ಅನ್ನು ಉದ್ಘಾಟಿಸಲಾಗುತ್ತಿದೆ. ಇದೇ ವೇಳೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಆರಂಭವಾಗಿರುವ ಉಳಿದ 107 ಕ್ಲಿನಿಕ್ ಗಳಿಗೂ ಚಾಲನೆ ನೀಡಲಾಗುತ್ತದೆ. ಈ ದಿನದಿಂದ ಈ ಆರೋಗ್ಯ ಕೇಂದ್ರಗಳು ಜನಸೇವೆಗೆ ಮುಕ್ತವಾಗಲಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಡಿಸೆಂಬರ್ 14, 2022 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಧಾರವಾಡದ ಬೈರದೇವರಕೊಪ್ಪದಲ್ಲಿ ನಮ್ಮ ಕ್ಲಿನಿಕ್ ಅನ್ನು ಉದ್ಘಾಟಿಸುವ ಮೂಲಕ ರಾಜ್ಯದಲ್ಲಿ ಏಕಕಾಲಕ್ಕೆ 100 ನಮ್ಮ ಕ್ಲಿನಿಕ್ ಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದ್ದರು. ಸಾರ್ವಜನಿಕರಿಗೆ ನಮ್ಮ ಕ್ಲಿನಿಕ್…