Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada
suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada
kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language, Insurance, Gas/Electricity, Loans, Mortgage, Attorney, Lawyer , Donate, , Conference Call, Degree, Credit, credit card, car loans, home appliances, flipkart home appliances, flipkart , amazon home appliances, online shoping, cricket, onlinegame, medicare, weight loss, hairloss, helthtips, weight loss, online classes, Snapdeal., eBay, Myntra. Shopclues.
breaking news, kannada latest news, kannada news, kannada news live, kannada online news, kannadanewsnow.com, kannadanewsnowdotcom, kanndanew newsnow dot com, karnataka latest news, karnataka news, latest news. indianews. Narendra Damodardas Modi, india breaking news, coronavirus, covid 19 india, yeddyurappa, siddaramaiah, Politicians in India, Current affairs, Elections, Political News, Current Affairs politics, Rahul Gandhi, Indian National Congress, Amit Shah, Bharatiya Janata Party, Priyanka Gandhi, Mamata Banerjee
All India Trinamool Congress, Arvind Kejriwal, Aam Aadmi Party, Asaduddin Owaisi, All India Majlis-e-Ittehadul Muslimeen, Follow, H D Deve Gowda, Janata Dal (Secular), Harsh Vardhan, Bharatiya Janata Party, KCR, Telangana Rashtra Samithi, Kamal Hassan, Makkal Neethi, MaiamLal, Krishna, Advani, Bharatiya Janata Party, Mamata Banerjee All India Trinamool Congress, Manmohan Singh, Congress, mallikarjun kharge, Indian National Congress, Nirmala Sitharaman, Bharatiya Janata Party, Nitin Gadkari, Bharatiya Janata Party, Raj Thackeray, Maharashtra Navnirman Sena, Uma Bharti, Shivsena, V K Singh, General VK Singh, Sourav Ganguly, MS Dhoni , Virat Kohli, yogi, Adithyanath
ಕೋಲ್ಕತಾ : ಮೃತ ಪಟ್ಟಂತ ಗಂಡನ ಹೆಪ್ಪುಗಟ್ಟಿದ ವೀರ್ಯದ ಮೇಲೆ ಪತ್ನಿಗೆ ಹೊರತಾಗಿ ಆತನ ತಂದೆಗೂ ಯಾವುದೇ ಹಕ್ಕಿಲ್ಲ ಎಂಬುದಾಗಿ ಕೊಲ್ಕತ್ತಾ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ಈ ಕುರಿತಂತೆ ಕೊಲ್ಕತ್ತಾ ಹೈಕೋರ್ಟ್ ಪ್ರಕರಣವೊಂದರ ವಿಚಾರಣೆ ಕೈಗೆತ್ತಿಕೊಂಡು, ವ್ಯಕ್ತಿಯೊಬ್ಬ ತನ್ನ ಮೃತ ಮಗನ ವೀರ್ಯ ಹೆಪ್ಪುಗಟ್ಟಿರುವುದಾಗಿ ಹೇಳಿಕೊಂಡಿರುವ ಅರ್ಜಿಯ ವಿಚಾರಣೆ ನಡೆಸಲು ಕೋರ್ಟ್ ನಿರಾಕರಿಸಿದೆ. ಮೃತರನ್ನು ಹೊರತುಪಡಿಸಿ, ಆತನ ಪತ್ನಿಗೆ ಮಾತ್ರ ವೀರ್ಯ (ವೀರ್ಯ) ಪಡೆಯುವ ಹಕ್ಕಿದೆ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅಭಿಪ್ರಾಯ ಪಟ್ಟಿದೆ.
ಜನವರಿ 19ರಂದು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಸಬಿಯಾಸಾಚಿ ಭಟ್ಟಾಚಾರ್ಯ, “ಯಾಚಿಕಾಕರ್ ಅವರು ತಮ್ಮ ಮಗನ ರಕ್ಷಿತ ವೀರ್ಯವನ್ನು ತಂದೆ-ಮಗ ಎಂದು ಮಾತ್ರ ಇಟ್ಟುಕೊಳ್ಳುವ ಮೂಲಭೂತ ಹಕ್ಕನ್ನು ಹೊಂದಿಲ್ಲ. ಈ ಪ್ರಕರಣದಲ್ಲಿ ಮಗನ ಪತ್ನಿ ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸಬಾರದು. ಈ ಮನವಿಯನ್ನು ಪರಿಗಣಿಸಬೇಕೆಂದು ಅರ್ಜಿದಾರರ ವಕೀಲರು ಹೇಳಿದ್ದಾರೆ. ಆದರೆ, ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು.
ಮೃತನ ವೀರ್ಯವನ್ನು ದೆಹಲಿಯ ಆಸ್ಪತ್ರೆಯೊಂದರಲ್ಲಿ ಸುರಕ್ಷಿತವಾಗಿ ಇರಿಸಲಾಗಿದೆ ಎಂದು ಕೋರ್ಟ್ ಹೇಳಿದೆ, ಏಕೆಂದರೆ ಆತ ಮರಣದ ಸಮಯದಲ್ಲಿ ವೈವಾಹಿಕ ಸಂಬಂಧದಲ್ಲಿದ್ದಾನೆ. ಆದ್ದರಿಂದ ಅವನನ್ನು ಹೊರತುಪಡಿಸಿ ಬೇರೆ ಯಾರಿಗಾದರೂ ಹಕ್ಕಿದ್ದರೆ, ಅದು ಅತ ಹೆಂಡತಿ ಮಾತ್ರವೇ ಆಗಿದೆ ಎಂದು ತಿಳಿಸಿದೆ.
ನ್ಯಾಯಮೂರ್ತಿ ಭಟ್ಟಾಚಾರ್ಯ ಅವರು, ಅರ್ಜಿದಾರ ಮತ್ತು ಮೃತನ ನಡುವಿನ ತಂದೆ-ಮಗನ ಸಂಬಂಧವು ಅವನಿಗೆ ಯಾವುದೇ ರೀತಿಯ ಹಕ್ಕು ನೀಡುವುದಿಲ್ಲ ಎಂದು ಹೇಳಿದರು. ಮೃತನ ಪತ್ನಿಯ ಅರ್ಜಿಗೆ ಸಂಬಂಧಿಸಿದಂತೆ, ಈ ವಿಷಯನ್ಯಾಯಾಲಯದ ವ್ಯಾಪ್ತಿಯಿಂದ ಹೊರಗಿರುತ್ತದೆ ಎಂದು ಹೈಕೋರ್ಟ್ ಹೇಳಿದೆ.
ತಮ್ಮ ಮಗ ತಲಸ್ಸೇಮಿಯಾದಿಂದ ಬಳಲುತ್ತಿದ್ದು, ಮುಂದಿನ ದಿನಗಳಲ್ಲಿ ದೆಹಲಿಯ ಆಸ್ಪತ್ರೆಯೊಂದರಲ್ಲಿ ತನ್ನ ವೀರ್ಯಾಣುವನ್ನು ಇರಿಸಿದ್ದಾರೆ ಎಂದು ಅರ್ಜಿದಾರರು ವಾದಿಸಿದ್ದರು. ಅರ್ಜಿದಾರರ ಪರ ವಕೀಲರು, ಅರ್ಜಿದಾರರ ಪರ ವಕೀಲರು, ಮಗನ ಮರಣದ ನಂತರ ದೆಹಲಿಯ ಆಸ್ಪತ್ರೆಯನ್ನು ವೀರ್ಯಾಣು ತೆಗೆದುಕೊಳ್ಳಲು ಸಂಪರ್ಕಿಸಲಾಯಿತು. ಆದರೆ ಇದಕ್ಕಾಗಿ ಮೃತನ ಪತ್ನಿಯಿಂದ ಅನುಮತಿ ಪಡೆಯಬೇಕು. ಮದುವೆಯ ಪುರಾವೆಯನ್ನು ಹಾಜರುಪಡಿಸಬೇಕಾಗುತ್ತದೆ ಎಂದು ಆಸ್ಪತ್ರೆ ತಿಳಿಸಿದೆ ಎಂಬುದಾಗಿ ಕೋರ್ಟ್ ಮೊರೆ ಹೋಗಿದ್ದರು. ಇಂತಹ ಪ್ರಕರಣದಲ್ಲಿ ಕೋರ್ಟ್ ಪತ್ನಿಗೆ ಮಾತ್ರ ವೀರ್ಯದ ಮೇಲೆ ಹಕ್ಕಿದೆ ಎಂಬುದಾಗಿ ತಿಳಿಸಿದೆ.
ಶಿವಮೊಗ್ಗ : ಜನವರಿಗೆ 16ರಿಂದ ದೇಶಾದ್ಯಂತ ಬಹುದೊಡ್ಡ ಕೊರೋನಾ ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಈ ಬಳಿಕ ರಾಜ್ಯದಲ್ಲೂ ಚಾಲನೆಗೊಂಡಿತ್ತು. ಇಂತಹ ಕೊರೋನಾ ಲಸಿಕಾ ಅಭಿಯಾನಕ್ಕೆ ಉಳವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ.ಅರುಣ್ ಕುಮಾರ್ ಇಂದು ಚಾಲನೆ ನೀಡಿದರು.
ಶಿವಮೊಗ್ಗ ಜಿಲ್ಲೆಯ ಸೊರಬಾ ತಾಲೂಕಿನ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ಕೊರೋನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಿಕಾ ಕಾರ್ಯಕ್ರಮಕ್ಕೆ, ವೈದ್ಯಾಧಿಕಾರಿ ಡಾ.ಅರುಣ್ ಕುಮಾರ್ ಚಾಲನೆ ನೀಡಿದ್ದಾರೆ. ಆನಂತ್ರ ಸ್ವಯಂ ಪ್ರೇರಿತರಾಗಿ ಬಂದಂತ ಕೊರೋನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಯಿತು.
ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದಂತ ವೈದ್ಯಾಧಿಕಾರಿ ಡಾ.ಅರುಣ್ ಕುಮಾರ್, ಕೊರೋನಾ ಸೋಂಕಿನ ವಿರುದ್ಧದ ದೇಶದಲ್ಲಿ ಬಹುದೊಡ್ಡ ಲಸಿಕಾ ಅಭಿಯಾನ ಆರಂಭಗೊಂಡಿದೆ. ನಮ್ಮಲ್ಲೂ ಇಂದಿನಿಂದ ಲಸಿಕೆಯನ್ನು ಮೊದಲ ಹಂತದಲ್ಲಿ ಕೊರೋನಾ ವಾರಿಯರ್ಸ್ ಗಳಿಗೆ ನೀಡಲಾಗುತ್ತಿದೆ. ಲಸಿಕೆಯನ್ನು ಯಾವುದೇ ಭಯವಿಲ್ಲದೇ ಹಾಕಿಸಿಕೊಳ್ಳುವಂತೆ ತಿಳಿಸಿದರು.
ಈ ಕೊರೋನಾ ಲಸಿಕಾ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯಾಧಿಕಾರಿ ಡಾ.ಮುಭಾರಕ್, ಪ್ರಯೋಗಾಲಯ ತಜ್ಞರಾದಂತ ಚಂದ್ರನಾಯ್ಕ್, ಶುಶ್ರೂಷಕಿಯರಾದ ಜಯಲಕ್ಷ್ಮೀ, ಲೀಲಾವತಿ.ಕೆ, ಲಿಜಾ ಮೋಳ್, ಫಾರ್ಮಸಿಸ್ಟ್ ಪ್ರೇಮಾ, ಕಿರಿಯ ಆರೋಗ್ಯ ಸಹಾಯಕರಾದಂತ ವಿಜಯ್ ಕುಮಾರ್, ನಿರ್ಮಲಾ, ಅಕ್ಷತಾ, ಅಶ್ವಿನಿ, ಶೈಲಶ್ರೀ, ಪ್ರಥಮ ದರ್ಜೆ ಸಹಾಯಕರಾದಂತ ಅಣ್ಣಯ್ಯ, ಗ್ರೂಪ್ ಡಿ ಸಿಬ್ಬಂದಿಗಳಾದಂತ ಸಂಗಪ್ಪ, ಪ್ರದೀಪ್, ಜ್ಯೋತಿ ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರು ಸೇರಿದಂತೆ ವಿವಿಧ ಸಿಬ್ಬಂದಿಗಳು ಉಪಸ್ತಿತರಾಗಿದ್ದರು.
ಬೆಂಗಳೂರು : ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿದ್ದಂತ ರಾಜಭವನ ಚಲೋ ಸಂದರ್ಭದಲ್ಲಿ ಹೋಂ ಗಾರ್ಡ್ ಮೇಲೆ ಶಾಸಕಿ ಸೌಮ್ಯ ರೆಡ್ಡಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿತ್ತು. ಇದೀಗ ಇಂತಹ ಪ್ರಕರಣ ಸಂಬಂಧ ಜಯನಗರ ಶಾಸಕಿ ಸೌಮ್ಯ ರೆಡ್ಡಿ ವಿರುದ್ಥ ಎಫ್ ಐ ಆರ್ ದಾಖಲಾಗಿದೆ.
ಕಾಂಗ್ರೆಸ್ ಕರೆ ನೀಡಿದ್ದಂತ ರಾಜಭವನ ಚಲೋ ಸಂದರ್ಭದಲ್ಲಿ ಹೋಂ ಗಾರ್ಡ್ ಮೇಲೆ ಶಾಸಕ ಸೌಮ್ಯ ರೆಡ್ಡಿ ಹಲ್ಲೆ ನಡೆಸಿದ್ದರು. ಇದೇ ಕಾರಣಕ್ಕೆ ಅವರನ್ನು ಪೊಲೀಸರು ಬಂಧಿಸಿದ್ದರು. ಈಗ ಈ ಪ್ರಕರಣ ಸಂಬಂಧ ಅವರ ವಿರುದ್ಧ ಹೋಂ ಗಾರ್ಡ್ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದರಿಂದಾಗಿ ಜಯನಗರ ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಐಪಿಸಿ ಸೆಕ್ಷನ್ 323, 353 ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಈ ಮೂಲಕ ಜಯನಗರ ಶಾಸಕಿ ಸೌಮ್ಯ ರೆಡ್ಡಿಗೆ ಸಂಕಷ್ಟ ಎದುರಾದಂತೆ ಆಗಿದೆ.
ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಸಂಖ್ಯೆ ಇಳಿಕೆಯತ್ತ ಸಾಗಿದೆ. ಇಂದು ಹೊಸದಾಗಿ ಜಸ್ಟ್ 324 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 9,34,576ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಬೆಂಗಳೂರು ನಗರದಲ್ಲಿ 160 ಜನರು ಸೇರಿದಂತೆ ರಾಜ್ಯಾಧ್ಯಂತ 324 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 9,34,576ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 890 ಸೇರಿದಂತೆ ಇದುವರೆಗೆ 9,15,382 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 6,985 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.
ಇನ್ನೂ ಇಂದು ಬೆಂಗಳೂರು ನಗರದಲ್ಲಿ ಇಬ್ಬರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರು ಸೇರಿದಂತೆ ಮೂವರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಬಲಿಯಾದವರ ಸಂಖ್ಯೆ 12,190ಕ್ಕೆ ಏರಿಕೆಯಾಗಿದೆ.
ಬೆಂಗಳೂರು : ‘ಬಿಜೆಪಿ ಸರ್ಕಾರ ತನ್ನ ವಿರುದ್ಧ ಧ್ವನಿ ಎತ್ತಿದವರನ್ನು ಜೈಲಿಗೆ ಕಳುಹಿಸಿ ಬೆದರಿಸುವ ಪ್ರಯತ್ನ ಮಾಡುತ್ತಿದೆ. ಮಂಡ್ಯದಲ್ಲಿ ಹಂ.ಪ ನಾಗರಾಜಯ್ಯ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ಮಾಡಿರುವುದು ಕನ್ನಡ ಸಾಹಿತ್ಯ ಲೋಕ ಹಾಗೂ ರಾಜ್ಯಕ್ಕೆ ಮಾಡಿದ ಅಪಮಾನ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಂಡ್ಯದಲ್ಲಿ ಹಿರಿಯ ಸಾಹಿತಿ ಭಾಷಾ ಸಂಶೋಧಕ ಹಂ.ಪ ನಾಗರಾಜಯ್ಯ ಅವರನ್ನು ಬಂಧಿಸಿದ್ದಾರೆ. ಅವರು ಯಾವುದೇ ಪಕ್ಷಕ್ಕೆ ಸೇರಿದವರಲ್ಲ. ಸಾಹಿತಿ ಲೋಕಕ್ಕೆ ಹೆಸರು ತಂದವರು. ಅವರು ಕೇಂದ್ರ ಸರ್ಕಾರ ಧರ್ಮರಾಯನಂತೆ ಬಂದು ದುರ್ಯೋಧನಂತೆ ವರ್ತಿಸುತ್ತಿದೆ ಎಂದು ಹೇಳಿದ್ದಕ್ಕೆ ಅವರನ್ನು ಪೊಲೀಸ್ ಠಾಣೆಗೆ ಕಳುಹಿಸಿ ವಿಚಾರಣೆ ನಡೆಸುವುದರೆ ಏನಿದು? ಕನ್ನಡ ಸಾಹಿತ್ಯ ಪರಿಷತ್ ಏನು ಮಾಡುತ್ತಿದೆ? ಕನ್ನಡ ರಕ್ಷಣೆ ಹೆಸರಲ್ಲಿರುವ ಕರವೇ, ಜಯ ಕರ್ನಾಟಕ ಹಾಗೂ ಇತರೆ ಕನ್ನಡ ಪರ ಸಂಘಟನೆಗಳು ಏನು ಮಾಡುತ್ತಿವೆ? ಇವರು ಇರುವುದು ಯಾತಕ್ಕೆ? ಎಂದು ಪ್ರಶ್ನಿಸಿದರು.
ಅವರು ದೇಶದ ರೈತರ ವಿಚಾರದಲ್ಲಿ ಅವರ ಧ್ವನಿ ಎತ್ತಿದ್ದಾರೆ. ಅವರಿಗೆ ಮಾತನಾಡುವ ಹಕ್ಕಿಲ್ಲವೇ? ಅವರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿರುವುದು ಸರಿಯಲ್ಲ. ಇದು ಕರ್ನಾಟಕ ಸಾಹಿತ್ಯ ಲೋಕಕ್ಕೆ ಆಗಿರುವ ಅಪಮಾನ. ಕೂಡಲೇ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದದಕ್ಕೆ ಕಾರಣರಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸರ್ಕಾರದ ಬಗ್ಗೆ ಮಾತನಾಡುವವರನ್ನೆಲ್ಲ ಜೈಲಿಗೆ ಕಳುಹಿಸಲು, ಬೇರೆ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡುವುದು ಎಷ್ಟು ಸರಿ? ಇದೆಲ್ಲ ಎಷ್ಟು ದಿನ ನಡೆಯುತ್ತದೆ? ಇದು ರಾಜ್ಯದ ಸ್ವಾಭಿಮಾನದ ಪ್ರಶ್ನೆ. ನಾನು ಅವರ ಮನೆಗೆ ಹೋಗಿ ಅವರ ಮನೆಯವರನ್ನು ಸಂಪರ್ಕಿಸಿ ಮಾತನಾಡುತ್ತೇನೆ. ನಾನು ಚಿಕ್ಕ ವಯಸ್ಸಿನಿಂದ ಆ ಕುಟುಂಬ ನೋಡಿಕೊಂಡು ಬಂದಿದ್ದೇನೆ. ಅವರು ಯಾರ ಜತೆಗೂ ಗುರುತಿಸಿಕೊಂಡಿಲ್ಲ ಎಂದರು.
ಸ್ಫೋಟಕಗಳನ್ನು ಹೇಗೆ ಎಲ್ಲಿ ಸಂಗ್ರಹಿಸಬೇಕು, ಎಲ್ಲಿ ಸಂಗ್ರಹಿಸಬೇಕು, ಅದನ್ನು ಯಾವ ರೀತಿ ಸಾಗಿಸಬೇಕು, ಹೇಗೆ ಬಳಸಬೇಕು ಎಂದು ನಿರ್ದಿಷ್ಟ ಮಾರ್ಗದರ್ಶನ ಇದೆ. ಇಷ್ಟು ದೊಡ್ಡ ಪ್ರಮಾಣದ ಸ್ಫೋಟಕ ಹೇಗೆ ಸಾಗುಸುತ್ತಿದ್ದರು ಎಂಬುದು ಪ್ರಮುಖ ವಿಚಾರ. ಮುಖ್ಯಮಂತ್ರಿಗಳು ತನಿಖೆಗೆ ಆದೇಶಿಸಿರುವುದನ್ನು ನಾವು ನೋಡಿದ್ದೇವೆ. ಮುಂಜಾಗೃತವಾಗಿ ಜವಾಬ್ದಾರಿಯುತ ವ್ಯವಸ್ಥೆ ನಿರ್ಮಿಸಬೇಕು. ಈ ದುರ್ಘಟನೆಯಲ್ಲಿ ಅನೇಕರು ಮೃತಪಟ್ಟಿರುವುದು ಆಘಾತಕಾರಿ ಬೆಳವಣಿಗೆ. ಎರಡು ಜಿಲ್ಲೆಗಳ ಜನರಿಗೆ ಗಾಬರಿ ಉಂಟು ಮಾಡಿದ್ದಕ್ಕೆ ಯಾರು ಹೊಣೆ? ಇದರ ಜವಾಬ್ದಾರಿ ಯಾರು ಹೊತ್ತುಕೊಳ್ಳುತ್ತಾರೆ? ಎಂಬುದನ್ನು ನಾವು ಯೋಚಿಸಬೇಕು ಎಂದರು.
ಕೇವಲ ತನಿಖೆಗೆ ಆದೇಶಿಸುವುದಲ್ಲಿ ಸ್ವತಃ ಮುಖ್ಯಮಂತ್ರಿಗಳು ನೂತನ ಗಣಿ ಸಚಿವರು ಅಲ್ಲಿ ಹೋಗಿ ಪರಿಸ್ಥಿತಿ ಅವಲೋಕಿಸಬೇಕು. ಚರ್ಚೆ ಮಾಡಬೇಕು ಎಂದು ಹೇಳಿದರು.
ಹಾಸನ : ಜಿಲ್ಲೆಯಲ್ಲಿಂದು ಹೊಸದಾಗಿ 7 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,381 ಏರಿಕೆಯಾಗಿದೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ 68 ಮಂದಿ ಸಕ್ರಿಯ ಸೋಂಕಿತರು ಮಾತ್ರ ಹಾಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 27,848 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 11 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕೋವಿಡ್ನಿಂದ ಒಂದು ಸಾವು ಸಂಭವಿಸಿದ್ದು. ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 465 ಮಂದಿ ಸಾವನ್ನಪ್ಪಿದಾರೆ.
ಇಂದು ಪತ್ತೆಯಾದ 7 ಕೋವಿಡ್ ಪ್ರಕರಣಗಳಲ್ಲಿ ಹೊಳೆನರಸೀಪುರ ತಾಲ್ಲೂಕಿನಲ್ಲಿ 2 ಮಂದಿ, ಹಾಸನ ತಾಲ್ಲೂಕಿನಲ್ಲಿ 4 ಮಂದಿ,ಅರಕಲಗೂಡು ತಾಲ್ಲೂಕಿನಲ್ಲಿ ಒಬ್ಬರಿಗೆ ಕೋವಿಡ್ ದೃಡ ಪಟ್ಟಿದ್ದು ಹಾಗೂ ಕೋವಿಡ್ ನಿಂದ ಒಬ್ಬರು ಮೃತ ಪಟ್ಟಿದ್ದಾರೆ ಎಂದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ.
ಬೆಂಗಳೂರು : ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ನಂತರ ವಿಜಯಪುರ ಜಿಲ್ಲೆಯ ಕೂಡಗಿಯಲ್ಲಿ ಗೋಹತ್ಯೆ ಮಾಡಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರ ಮಾಹಿತಿ ಮೇರೆಗೆ ಪೊಲೀಸ್ ಇಲಾಖೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೃತ್ಯದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಕೂಡಗಿ ಗ್ರಾಮದ ಬಳಿಯ ರೈಲ್ವೆ ಹಳಿ ಹತ್ತಿರದ ಖಾಸಗಿ ಶೆಡ್ ವೊಂದರಲ್ಲಿ ವ್ಯಕ್ತಿಯೊಬ್ಬ ಎತ್ತೊಂದನ್ನು ಕತ್ತರಿಸಿ ಮಾಂಸ ಮಾರಾಟದಲ್ಲಿ ತೊಡಗಿದ್ದ ವೇಳೆ ಕೂಡಗಿ ಪಿಎಸ್ಐ ರೇಣುಕಾ ಜಕನೂರು ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸ್ ಇಲಾಖೆಯ ಕ್ಷಿಪ್ರ ಕಾರ್ಯಕ್ಕೆ ಸಚಿವರು ಶ್ಲಾಘಿಸಿದ್ದಾರೆ.
ಸಿಖಂದರ್ಸಾಬ್ ರಾಜಾಸಾಬ್ ಬೇಪಾರಿ (35) ಬಂಧಿತ ಆರೋಪಿ. ಒಂದು ಎತ್ತನ್ನು ಕತ್ತರಿಸಿ ಮಾಂಸ ಮಾರಾಟ ಮಾಡುತ್ತಿದ್ದ ಸಾರ್ವಜನಿಕರ ಮಾಹಿತಿ ಮೆರೆಗೆ ಕೂಡಗಿ ಪೊಲೀಸರು ಸ್ಥಳಕ್ಕೆ ಧಾವಿಸಿ ಅಲ್ಲೇ ಇದ್ದ ಇನ್ನೊಂದು ಎತ್ತನ್ನು ರಕ್ಷಿಸಿ ಯಲಗೂರು ಗೋಶಾಲೆಗೆ ನೀಡಿದ್ದಾರೆ. ಕೂಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಹತ್ಯೆ ನಿಷೇಧ ಕಾಯ್ದೆಯ ಅನುಷ್ಠಾನದ ನಂತರ ವಿಜಯಪುರ ಜಿಲ್ಲೆಯಲ್ಲಿ ರಾಜ್ಯದ ಮೊದಲ ಪ್ರಕರಣ ದಾಖಲಾಗಿದ್ದು ಸಾರ್ವಜನಿಕರ ಸಮಯ ಪ್ರಜ್ಞೆ ಹಾಗೂ ಪೊಲೀಸ್ ಇಲಾಖೆಯ ಕಾರ್ಯಾಚರಣೆಯಿಂದ ಒಂದು ಗೋವಿನ (ಎತ್ತು) ರಕ್ಷಣೆ ಆಗಿದ್ದು ಸಂತಸ ತಂದಿದೆ.
ಗೋವುಗಳ ಅಕ್ರಮ ಸಾಗಣೆ ಮತ್ತು ಗೋಹತ್ಯೆ ಮಾಡಿ ಮಾಂಸ ಮಾರಾಟ ಮಾಡುವುದು ಗಮನಕ್ಕೆ ಬಂದರೆ ತಕ್ಷಣದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ಗೋವುಗಳ ರಕ್ಷಣೆಗೆ ಮುಂದಾಗಿ ನಿಮ್ಮ ಸಮಯ ಪ್ರಜ್ಞೆ ಮೂಕ ಪ್ರಾಣಿಯ ಜೀವ ಉಳಿಸಬಲ್ಲದು. ಕಾನೂನನ್ನು ಕೈಗೆತ್ತಿಕೊಳ್ಳದೆ ಆರಕ್ಷರ ಸಹಾಯದಿಂದ ರಕ್ಷಣೆಗೆ ಮುಂದಾಗಬೇಕು ಎಂದು ಸಚಿವರು ತಿಳಿಸಿದ್ದಾರೆ.
ರಾಂಚಿ : ಆರ್ ಜೆ ಡಿ ಅಧ್ಯಕ್ಷ ಹಾಗೂ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಮತ್ತಷ್ಟು ಗಂಭೀರಗೊಂಡಿದೆ. ಹೀಗಾಗಿ ರಾಂಚಿಯ ರಿಮ್ಸ್ ಆಸ್ಪತ್ರೆಗೆ ಅವರ ಕುಟುಂಬಸ್ಥರು ದೌಡಾಯಿಸಿದ್ದಾರೆ.
ಅನಾರೋಗ್ಯದಿಂದಾಗಿ ನಿನ್ನೆ ರಾಂಚಿಯ ರಿಮ್ಸ್ ಆಸ್ಪತ್ರೆಗೆ ರಾಷ್ಟ್ರೀಯ ಜನತಾದಳ(ಆರ್ ಜೆ ಡಿ) ಅಧ್ಯಕ್ಷ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ದಾಖಲಾಗಿದ್ದಾರೆ. ಇಂತಹ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಮತ್ತಷ್ಟು ಗಂಭೀರ ಸ್ವರೂಪವನ್ನು ತಲುಪಿದೆ ಎನ್ನಲಾಗಿದೆ. ಇದೇ ಕಾರಣದಿಂದಾಗಿ ಮಗಳು ಮಿಸಾ ಭಾರತೀ, ಕಿರಿಯ ಮಗ ತೇಜಸ್ವಿ ಯಾದವ್ ಮತ್ತು ಪತ್ನಿ ರಾಬ್ರಿ ದೇವಿ ದೌಡಾಯಿಸಿದ್ದಾರೆ.
ಇತ್ತ ರಿಮ್ಸ್ ನಿರ್ದೇಶಕ ಡಾ.ಕಾಮೇಶ್ವರ್ ಪ್ರಸಾದ್, ಲಾಲು ಪ್ರಸಾದ್ ಆರೋಗ್ಯ ಸ್ಥಿರವಾಗಿದೆ. ಅವರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊರೋನಾ ಪರೀಕ್ಷೆಯ ವರದಿ ನಾಳೆ ಬರಲಿದೆ ಎಂದು ತಿಳಿಸಿದ್ದಾರೆ.
ಚಿತ್ರದುರ್ಗ : ಶಿವಮೊಗ್ಗ ಹುಣಸೋಡಿನಲ್ಲಿ ನಡೆದ ಘಟನೆ ಯಡಿಯೂರಪ್ಪ ನೆರಳಲ್ಲಿ ನಡೆದಿರುವುದರಿಂದ ಮತ್ತು ಶಿವಮೊಗ್ಗ ಉಸ್ತುವಾರಿ ಈಶ್ವರಪ್ಪನವರ ಸಹಕಾರ ಮತ್ತು ಕುಮ್ಮಕ್ಕು ಇರುವುದರಿಂದ ಅಲ್ಲಿನ ಸಾರ್ವಜನಿಕರು ಯಡಿಯೂರಪ್ಪ ಮತ್ತು ಈಶ್ವರಪ್ಪನ ಮೇಲೆ ನೇರ ಆರೋಪ ಮಾಡಿರುವುದರಿಂದ ಭೀಕರ ಘಟನೆ ನೈತಿಕ ಹೊಣೆ ಹೊತ್ತು ಇಬ್ಬರೂ ರಾಜೀನಾಮೆ ನೀಡಬೇಕೆಂದು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯಾದ್ಯಕ್ಷ ಶಿವುಯಾದವ್ ಒತ್ತಾಯಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅಕ್ರಮವಾಗಿ ಗಣಿಗಾರಿಕೆ ನಡೆಯಲು ಸರ್ಕಾರ ಮತ್ತು ಅಲ್ಲಿನ ಅಧಿಕಾರಿಗಳ ಕುಮ್ಮಕ್ಕು ಇರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಅದ್ದರಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಪೊಲಿಸ್ ವರಿಷ್ಟಾದಿಕಾರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳನ್ನು ಈ ಕೂಡಲೇ ಅಮಾನತ್ತು ಮಾಡಿ. ಸದರಿ ಘಟನೆಯನ್ನು ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳ ನೇತ್ರತ್ವದಲ್ಲಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಅಕ್ರಮವಾಗಿ ನಡೆಯುತ್ತಿರು ಈ ಗಣಿಗಾರಿಕೆ ನಡೆಸುವವರು ಬಲಾಡ್ಯರು ಮತ್ತು ಪ್ರಾಭಾವಿಗಳು ಆಗಿರುವುದರಿಂದ ಮುಖ್ಯ ಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಮಂತ್ರಿಗಳ ಸಹಕಾರ ಮತ್ತು ಕುಮ್ಮಕ್ಕು ಇರುವುದರಿಂದ ಸದರಿ ಘಟನೆ ಸತ್ಯ ಸತ್ಯತೆ ಹೊರ ಬರಬೇಕಾದರೆ ಮತ್ತು ನಿಷ್ಪಕ್ಷಪಾತ ರೀತಿಯಲ್ಲಿ ತನಿಖೆ ನಡೆಯ ಬೇಕಾದರೆ ಯಡಿಯೂರಪ್ಪ ಮತ್ತು ಈಶ್ವರಪ್ಪನವರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಇಂತಹ ಘಟನೆಗಳು ಮತ್ತು ಅಕ್ರಮ ಗಣಿಗಾರಿಕೆ ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರವಲ್ಲದೆ ರಾಜ್ಯದಾದ್ಯಂತ ಎಗ್ಗಿಲ್ಲದೆ ನಡೆಯುತ್ತಿದೆ ಮತ್ತು ಅಕ್ರಮವಾಗಿ ನಡೆಸುವವರ ಬೆಂಬಲಕ್ಕೆ ಅಧಿಕಾರಿಗಳು ಮತ್ತು ಸರ್ಕಾರ ನಿಂತಿರುವುದು ದುರದೃಷ್ಟಕರ.. ಚಿತ್ರದುರ್ಗ ಜಿಲ್ಲೆಯಲ್ಲಿ ಅಕ್ರಮವಾಗಿ ಅನೈತಿಕವಾಗಿ ನಡೆಯುತ್ತಿರುವ ಅಕ್ರಮ ಗಣಿಗಾರಿಯನ್ನು ಜನರು ನೊಡಿನೊಡಿ ಇಡಿ ಶಾಪ ಹಾಕುತ್ತಿದ್ದಾರೆ. ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಈ ಕೂಡಲೇ ನಿಲ್ಲಿಸಬೇಕು. ಒಂದು ವೇಳೆ ನಿಲ್ಲಿಸದೇ ಹೋದ್ರೆ.. ಅಕ್ರಮ ಗಣಿಗಾರಿಕೆ ಮತ್ತು ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದೆಂದು ಶಿವುಯಾದವ್ ತಿಳಿಸಿದ್ದಾರೆ.
ಹಾಸನ : ಎತ್ತಿನಹೊಳೆ ಯೋಜನೆಯ ಹಂತ 1 ಮತ್ತು 2 ಕಾಮಗಾರಿಗಳು 33 ಕಿ.ಮೀ.ವರೆಗಿನ ಗುರುತ್ವಾ ಕಾಲುವೆ ಕಾಮಗಾರಿಗಳನ್ನು ಇದೇ ಮೇ ತಿಂಗಳೊಳಗೆ ಪೂರ್ಣಗೊಳಿಸಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವರಾದ ರಮೆಶ್ ಜಾರಕಿಹೊಳಿ ತಿಳಿಸಿದ್ದಾರೆ.
ಜಿಲ್ಲೆಯ ಬೇಲೂರು ತಾಲ್ಲೂಕಿನ ಬೆಟ್ಟದ ಆಲೂರು ಗ್ರಾಮದ ಬಳಿ ಎತ್ತಿನಹೊಳೆ ಯೋಜನಾ ಕಾಮಗಾರಿಯನ್ನು ಪರಿವೀಕ್ಷಿಸಿದ ಸಚಿವರು, ಸುದ್ದಿಗಾರರೊಂದಿಗೆ ಮಾತನಾಡಿ ಮುಂದಿನ ಮಳೆಗಾಲದಲ್ಲಿ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಜಲಾಶಯಕ್ಕೆ ವೇದಾವತಿ ಕಣಿವೆ ಮೂಲಕ ತಾತ್ಕಾಲಿಕವಾಗಿ ನೀರು ಹರಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಪ್ರಾಯೋಗಿಕ ನೀರನ್ನು ವೇದಾವತಿ ಕಣಿವೆಯ ಮೂಲಕ ಹರಿಸಲು ಯೋಜನೆಯನ್ನು ರೂಪಿಸಲಾಗಿದೆ. ತುಮಕೂರಿನ ಭೈರಗೊಂಡ್ಲು ಜಲಾಶಯದ ಕಾಮಗಾರಿ ನಡೆಯದೇ ಇರುವುದರಿಂದ ಪ್ರಾಯೋಗಿಕವಾಗಿ ಈ ರೀತಿ ನೀರನ್ನು ಹರಿಸಿ, ಪ್ರಾಯೋಗಿಕ ಪರೀಕ್ಷೆ ನಡೆಸಲಾಗುತ್ತದೆ ಎಂದರು.
ಎತ್ತಿನಹೊಳೆ ಯೋಜನೆಗಾಗಿ ಜಮೀನು ಕಳೆದುಕೊಳ್ಳುವ ರೈತರಿಗೆ ಹೊಸ ಭೂಸ್ವಾಧೀನ ಕಾಯ್ದೆ 2013 ರ ಪ್ರಕಾರ ಪ್ರಕ್ರಿಯೆಯನ್ನು ಕೈಗೊಂಡಿದ್ದು ರೈತರಿಗೆ ಹಣವನ್ನು ಪಾವತಿಸಲು ಕ್ರಮ ವಹಿಸಲಾಗುವುದು ಹಾಗೂ ಹಂತ ಹಂತವಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಕಾಮಗಾರಿಗಳನ್ನು ನಿರ್ವಹಿಸಲಾಗುತ್ತದೆ. ಯೋಜನೆಗೆ ಆರಂಭಿಕ ಮೊತ್ತ 12,912.36 ಕೋಟಿ ರೂ. ನಿಗದಿಗೊಳಿಸಿದ್ದು, ಎರಡೂ ಹಂತಗಳಲ್ಲಿ ಈವರೆಗೆ ಒಟ್ಟು 7013.3 ಕೋಟಿ ರೂ. ವೆಚ್ಚವಾಗಿದೆ ಎಂದು ಹೇಳಿದರು.
ಸಣ್ಣ ನೀರಾವರಿ ಸಚಿವರಾದ ಸಿ.ಪಿ. ಯೋಗೇಶ್ವರ್, ಶಾಸಕರಾದ ಕೆ.ಎಂ. ಶಿವಲಿಂಗೆಗೌಡ, ಕೆ.ಎಸ್.ಲಿಂಗೇಶ್ ಹಾಗೂ ಎತ್ತಿನ ಹೊಳೆ ಯೋಜನೆಯ ವ್ಯವಸ್ಥಾಪಕ ನಿರ್ದೇಶಕರಾದ ಲಕ್ಷಣರಾವ್, ಮುಖ್ಯ ಇಂಜಿನಿಯರ್ ಮಾಧವ, ಸೂಪರ್ಡೆಂಟ್ ಇಂಜಿನಿಯರ್ ಶಿವಾರಂ, ಕಾರ್ಯನಿರ್ವಾಹಕ ಇಂಜಿನಿಯರ್ ಶರ್ಮಾ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಮೇಶ್.ಕೆ.ಆರ್. ಜೊತೆಯಲ್ಲಿದ್ದರು.