Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada
suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada
kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language, Insurance, Gas/Electricity, Loans, Mortgage, Attorney, Lawyer , Donate, , Conference Call, Degree, Credit, credit card, car loans, home appliances, flipkart home appliances, flipkart , amazon home appliances, online shoping, cricket, onlinegame, medicare, weight loss, hairloss, helthtips, weight loss, online classes, Snapdeal., eBay, Myntra. Shopclues.
breaking news, kannada latest news, kannada news, kannada news live, kannada online news, kannadanewsnow.com, kannadanewsnowdotcom, kanndanew newsnow dot com, karnataka latest news, karnataka news, latest news. indianews. Narendra Damodardas Modi, india breaking news, coronavirus, covid 19 india, yeddyurappa, siddaramaiah, Politicians in India, Current affairs, Elections, Political News, Current Affairs politics, Rahul Gandhi, Indian National Congress, Amit Shah, Bharatiya Janata Party, Priyanka Gandhi, Mamata Banerjee
All India Trinamool Congress, Arvind Kejriwal, Aam Aadmi Party, Asaduddin Owaisi, All India Majlis-e-Ittehadul Muslimeen, Follow, H D Deve Gowda, Janata Dal (Secular), Harsh Vardhan, Bharatiya Janata Party, KCR, Telangana Rashtra Samithi, Kamal Hassan, Makkal Neethi, MaiamLal, Krishna, Advani, Bharatiya Janata Party, Mamata Banerjee All India Trinamool Congress, Manmohan Singh, Congress, mallikarjun kharge, Indian National Congress, Nirmala Sitharaman, Bharatiya Janata Party, Nitin Gadkari, Bharatiya Janata Party, Raj Thackeray, Maharashtra Navnirman Sena, Uma Bharti, Shivsena, V K Singh, General VK Singh, Sourav Ganguly, MS Dhoni , Virat Kohli, yogi, Adithyanath
ಹಾವೇರಿ : ಬೆಳೆಸಾಲ ನೀಡಿದ ಬ್ಯಾಂಕ್ ವಿಮಾ ಪ್ರೀಮಿಯಂ ಕಡಿತಗೊಳಿಸಿ ಬೆಳೆವಿಮೆ ತುಂಬದ ಕಾರಣ ಪರಿಹಾರದಿಂದ ವಂಚಿತನಾದ ರೈತನಿಗೆ ಫ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ನಿಯಮದಂತೆ ಬ್ಯಾಂಕ್ ವತಿಯಿಂದಲೇ ಪರಿಹಾರ ಮೊತ್ತ ನೀಡಲು ಜಿಲ್ಲಾ ಗ್ರಾಹಕರ ಆಯೋಗ ಅಕ್ಕಿಆಲೂರ ಕೆನರಾ ಬ್ಯಾಂಕ್ ಶಾಖಾಧಿಕಾರಿಗಳಿಗೆ ಸೂಚನೆ ನೀಡಿ ಆದೇಶಿಸಿದೆ.
ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ತಮ್ಮ ಏಳು ಎಕರೆ 15 ಗುಂಟೆ ಜಮೀನಿನ ದಾಖಲೆಗಳನ್ನು ಅಡಮಾನವಿಟ್ಟು ಅಕ್ಕಿಆಲೂರ ಕೆನರಾ ಬ್ಯಾಂಕ್ ಶಾಖೆಯಲ್ಲಿ ಎರಡು ಲಕ್ಷ ರೂ.ಗಳ ಬೆಳೆಸಾಲ ಪಡೆಯಲಾಗಿತ್ತು. ನಿಯಮಾನುಸಾರ ವಿಮಾ ಕಂಪನಿಗೆ ಪ್ರೀಮಿಯಂ ಹಣ ತುಂಬುವುದು ಸಾಲ ನೀಡಿದ ಬ್ಯಾಂಕಿನ ಹೊಣೆಗಾರಿಕೆಯಾಗಿದ್ದರೂ ಬ್ಯಾಂಕಿನವರು ವಿಮಾ ಕಂಪನಿಗೆ ಪ್ರೀಮಿಯಂ ಹಣ ಪಾವತಿಸಿಲ್ಲ. ಈ ಕಾರಣ ವಿಮಾ ಪರಿಹಾರ ಹಣ ನನಗೆ ದೊರೆಕಿಲ್ಲ. ಲೋಪ ಎಸಗಿದ ಅಕ್ಕಿಆಲೂರ ಕೆನರಾ ಬ್ಯಾಂಕ್ಗೆ ವಿಮಾ ಪರಿಹಾರ ಹಣ ಪಾವತಿಸಲು ಸೂಚನೆ ನೀಡುವಂತೆ ಹಾನಗಲ್ ತಾಲೂಕಿನ ಹೋತನಹಳ್ಳಿ ಗ್ರಾಮದ ಕಲ್ಲಪ್ಪ ಅಜ್ಜಪ್ಪ ದೊಡ್ಡಮನಿ ಅವರು ಜಿಲ್ಲಾ ಗ್ರಾಹಕರ ಆಯೋಗದಲ್ಲಿ ದೂರು ದಾಖಲಿಸಿದ್ದರು.
ರೈತನ ಆರೋಪ ಕುರಿತಂತೆ ಆಯೋಗದ ಮುಂದೆ ವಾದಮಂಡಿಸಿ ಬ್ಯಾಂಕ್ ವಿಮಾ ಪ್ರೀಮಿಯಂ ಪಾವತಿಸುವ ಅಂತಿಮ ದಿನಾಂಕದ ಕಾಲಕ್ಕೆ ಸದರಿ ರೈತ ಸರಿಯಾದ ದಾಖಲೆಗಳನ್ನು ಸಲ್ಲಿಸದರ ಕಾರಣ ಹಾಗೂ ಅಡಮಾನವಿಟ್ಟ ಜಮೀನನ್ನು ತನ್ನ ಮಕ್ಕಳಿಗೆ ಪಾಲು ವಿಭಾಗ ಮಾಡಿಕೊಟ್ಟಿದ್ದರಿಂದ ಅಡಮಾವಿಟ್ಟ ಜಮೀನು ಸಾಲ ಪಡೆದ ರೈತನ ಮಕ್ಕಳ ಹೆಸರಿಗೆ ಇರುವ ಕಾರಣ ಪರಿಹಾರ ನಷ್ಟ ಪಾವತಿಸಲು ಬ್ಯಾಂಕ್ ತಿರಸ್ಕರಿಸಿದೆ. ಮತ್ತು ಪಿರ್ಯಾದಿ ಸಲ್ಲಿಸಲು ಕಾಲವಿಳಂಬವಾಗಿರುವುದರಿಂದ ರೈತನ ದಾವೆ ವಜಾಮಾಡುವಂತೆ ಆಯೋಗಕ್ಕೆ ಮನವಿಮಾಡಿಕೊಂಡಿತ್ತು.
ವಾದ ಪ್ರತಿವಾದ ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಅಧ್ಯಕ್ಷರಾದ ಶ್ರೀಮತಿ ಸುನಂದಾ ಹಾಗೂ ಸದಸ್ಯರಾದ ಶ್ರೀಮತಿ ಮಹೇಶ್ವರಿ ಬಿ.ಎಸ್.ಅವರು ವಿಮಾ ಪ್ರೀಮಿಯಂ ತುಂಬುವ ದಿನಾಂಕ ಮುಗಿದ ಆರು ತಿಂಗಳ ನಂತರ ಆಸ್ತಿಯ ವಿಭಾಗವಾಗಿದೆ. ಈ ಕಾರಣ ವಿಮಾ ನಿಯಮದ ಪ್ರಕಾರ ರೈತ ಕಲ್ಲಪ್ಪ ಅಜ್ಜಪ್ಪ ದೊಡ್ಡಮನಿ ಅವರಿಗೆ ವಿಮಾ ಪರಿಹಾರವಾಗಿ 1.86 ಲಕ್ಷ ರೂ. ಕೆನರಾ ಬ್ಯಾಂಕ್ ಶಾಖೆಯೇ ಪಾವತಿಸಬೇಕು. ಪಿರ್ಯಾದುದಾರರ ಮಾನಸಿಕ ವ್ಯಥೆಗೆ 3 ಸಾವಿರ ಹಾಗೂ ದಾವೆ ಖರ್ಚು 2 ಸಾವಿರ ರೂ. ಸೇರಿಸಿ ಒಂದು ತಿಂಗಳೊಳಗೆ ಪಾವತಿಸಲು ಆದೇಶ ಹೊರಡಿಸಿದ್ದಾರೆ.
ನಿಗಧಿತ ಅವಧಿಯಲ್ಲಿ ಪರಿಹಾರ ಪಾವತಿಸಲು ವಿಫಲವಾದರೆ ಪರಿಹಾರದ ಮೊತ್ತಕ್ಕೆ ವಾರ್ಷಿಕ ಶೇ.9ರ ಬಡ್ಡಿ ಸಮೇತ ನೀಡಲು ಆದೇಶಿಸಲಾಗಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಪ್ರಭಾರಿ ಸಹಾಯಕ ರಿಜಿಸ್ಟಾರ್ ಹಾಗೂ ಸಹಾಯಕ ಆಡಳಿತಾಧಿಕಾರಿ ಕರಿಯಪ್ಪ ಬಡಪ್ಪಳವರ ಅವರು ತಿಳಿಸಿದ್ದಾರೆ.
ಬೆಂಗಳೂರು : ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರ ರಾಜ್ಯ ಜಲವಿವಾದಗಳು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ಉನ್ನತ ಮಟ್ಟದ ಸಭೆ ನಾಳೆ (ಫೆ.26) ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿದೆ.
ಈ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ವಹಿಸಲಿದ್ದು, ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯದ ಅಡ್ವೊಕೇಟ್ ಜನರಲ್ ಮತ್ತು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಹಿರಿಯ ವಕೀಲರು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಇಲಾಖೆಯ ಕಾರ್ಯದರ್ಶಿ, ಅಂತರ ರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದ ತಾಂತ್ರಿಕ ಸಮಿತಿ ಸದಸ್ಯರು, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು, ಜಲಸಂಪನ್ಮೂಲ ಮತ್ತು ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಬೆಂಗಳೂರು : ಕಳೆದ ವರ್ಷ ಮಾಜಿ ಕರ್ನಾಟಕ ರಾಜ್ಯ ಪೊಲೀಸ್ ಮುಖ್ಯಸ್ಥ ಅಜಯ್ ಕುಮಾರ್ ಸಿಂಗ್ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವಂತ ಹ್ಯಾಕರ್ಸ್ 2.13 ಲಕ್ಷ ರೂಪಾಯಿ ಕದ್ದಿರುವುದಾಗಿ, ದೂರು ನೀಡಿದ್ದಾರೆ.
ಕಳೆದ 2020ರ ಜುಲೈನಲ್ಲಿ ಈ ಸೈಬರ್ ವಂಚನೆ ನಡೆದಿದ್ದು, ಮಾಜಿ ರಾಜ್ಯ ಪೊಲೀಸ್ ಮುಖ್ಯಸ್ಥ ಅಜಯ್ ಕುಮಾರ್ ಸಿಂಗ್ ದೂರಿನ ಆಧಾರದ ಮೇಲೆ, ಸೋಮವಾರ ಪೂರ್ವ ಸಿಇಎನ್ ಪೊಲೀಸ್ ಉಪ ಪೊಲೀಸ್ ಆಯುಕ್ತರ(ಪೂರ್ವ) ಸೂಚನೆ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅವರು ನೀಡಿರುವಂತ ದೂರಿನಲ್ಲಿ, ಅಜಯ್ ಕುಮಾರ್ ಸಿಂಗ್ ಬ್ಯಾಂಕ್ ಖಾತೆಗೆ ನೀಡಿರುವಂತ ಮೊಬೈಲ್ ಸಂಖ್ಯೆಗೆ ನಿರಂತರವಾಗಿ ಸಂದೇಶ ರವಾನೆಯಾಗಿತ್ತು. ಅದರಲ್ಲಿ ಬ್ಯಾಂಕ್ ಖಾತೆಯ ಓಟಿಪಿ ಕೂಡ ಸೇರಿದ್ದವು. ಸುಮಾರೂ 50 ರಿಂದ 61 ಓಟಿಪಿ ಬ್ಯಾಂಕ್ ಹಣ ವರ್ಗಾವಣೆ ಸಂಬಂಧ ಬಂದಿದ್ದವು. ಅದು ರಾತ್ರಿ 11.15ರಿಂದ 11.30ರ ಜುಲೈ ನಲ್ಲಿ ಎಂಬುದಾಗಿ ತಿಳಿಸಿದ್ದಾರೆ.
ಈ ಬಳಿಕ ಮಾರನೇ ದಿನ ಬ್ಯಾಂಕ್ ಗೆ ಹೋಗಿ ಈ ಬಗ್ಗೆ ವಿಚಾರಿಸಿದಾಗ, ನನಗೆ ಶಾಕ್ ಆಯ್ತು. ನನ್ನ ಬ್ಯಾಂಕ್ ಖಾತೆಯನ್ನೇ ಹ್ಯಾಕ್ ಮಾಡಿದ್ದಂತ ಸೈಬರ್ ವಂಚಕರು, ನನ್ನ ಬ್ಯಾಂಕ್ ಖಾತೆಯಿಂದ 2.13 ಲಕ್ಷ ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾಗಿ ತಿಳಿಯಿತು ಎಂಬುದಾಗಿ ಹೇಳಿದ್ದಾರೆ.
ಚಿಕ್ಕಮಗಳೂರು : ಸಕಾಲ ಯೋಜನೆಯಡಿ 2021ರ ಜನವರಿ ಮಾಹೆಯಲ್ಲಿ ಅರ್ಜಿ ಸ್ವೀಕರಿಸಿ ವಿಲೇವಾರಿ ಮಾಡಿದ ಜಿಲ್ಲೆಗಳಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.
ವಿಕಾಸ ಸೌಧದಲ್ಲಿ ವಿಡಿಯೋ ಕಾನ್ಫರೇನ್ಸ್ ಮೂಲಕ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿ ಮತ್ತು ಉತ್ತಮ ಕಾರ್ಯನಿರ್ವಹಿಸಿದ ಜಿಲ್ಲೆಗಳಿಗೆ ಪುರಸ್ಕಾರವನ್ನು ಪ್ರಕಟಿಸಿ ಮಾತನಾಡಿದರು.
ಜನವರಿ ತಿಂಗಳಲ್ಲಿ ಚಿಕ್ಕಮಗಳೂರು ಜಿಲ್ಲೆ 67,093 ಅರ್ಜಿಗಳನ್ನು ಸಕಾಲದಡಿ ಸ್ವೀಕರಿಸಿ 57,861 ಅರ್ಜಿಗಳನ್ನು ವಿಲೇವಾರಿ ಮಾಡಿ ರಾಜ್ಯದಲ್ಲಿ ಮೊದಲ ಸ್ಥಾನಗಳಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆ 2ನೇ ಸ್ಥಾನದಲ್ಲಿದ್ದು, ಶಿವಮೊಗ್ಗ ಜಿಲ್ಲೆ 3ನೇ ಸ್ಥಾನ ಪಡೆದುಕೊಂಡಿದೆ, ಬೆಂಗಳೂರು ನಗರ ಕೊನೆಯ ಸ್ಥಾನದಲ್ಲಿದೆ ಎಂದರು.
ತಾಲ್ಲೂಕುವಾರು ಬೆಂಗಳೂರು ದಕ್ಷಿಣ ತಾಲ್ಲೂಕು ಮೊದಲ ಸ್ಥಾನ ಪಡೆದಿದ್ದು, ನವೆಂಬರ್ನಲ್ಲಿ ಮೊದಲ ಸ್ಥಾನಗಳಿಸಿದ ಮಂಡ್ಯ ಜಿಲ್ಲೆಯ ಹಿಂದಿನ ಜಿಲ್ಲಾಧಿಕಾರಿಗಳಿಗೆ ಬೃಹತ್ ಗಡಿಯಾರ ನೀಡುವ ಮೂಲಕ ಗೌರವಿಸಲಾಯಿತು. ಜನವರಿಯಲ್ಲಿ ಸಕಾಲ ಮೂಲಕ ಅರ್ಜಿ ವಿಲೇವಾರಿ ಪ್ರಮಾಣ ಶೇಖಡ 93.25 ರಷ್ಟಿದ್ದು, 27,45,997 ಅರ್ಜಿ ಸ್ವೀಕಾರ ಮಾಡಲಾಗಿದ್ದು, ಈ ಪೈಕಿ 22,88,794 ಅರ್ಜಿ ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು.
ಇನ್ನು ಮುಂದೆ ಎಲ್ಲಾ ಜಿಲ್ಲೆಗಳಲ್ಲಿ ಸಕಾಲ ಸಪ್ತಾಹ ಕಡ್ಡಾಯಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು ಎಲ್ಲಾ ಅಪರ ಜಿಲ್ಲಾಧಿಕಾರಿಗಳು ಪ್ರತಿ ಸೋಮವಾರ ಸಕಾಲ ವಿವರ ಪ್ರಗತಿ ಪರಿಶೀಲಿಸಬೇಕು. ಪರಿಶೀಲನಾ ಸಮಿತಿ ಪ್ರತಿ ಶನಿವಾರ ತಮ್ಮ ವ್ಯಾಪ್ತಿಯಲ್ಲಿನ ವಿವಿಧ ಕಛೇರಿಗಳಿಗೆ ಭೇಟಿ ನೀಡಿ ತಪಾಸಣೆ ಮಾಡಿ ಸಕಾಲದಲ್ಲಿ ಸ್ವೀಕೃತವಾಗಿರುವ ಅರ್ಜಿ ನಿಗಧಿತ ಅವಧಿಯಲ್ಲಿ ವಿಲೇವಾರಿಯಾಗಿದೆಯೇ ಎಂಬುದರ ಕುರಿತು ಪರಿಶೀಲಿಸಬೇಕು ವಿಲೇವಾರಿ ಮಾಡದಿದ್ದರೆ ಕಾರಣ ಹುಡುಕಬೇಕು ಎಂದ ಅವರು ಎಲ್ಲಾ ಕಛೇರಿಗಳ ಮುಂದೆ ಸಕಾಲ ಮಾಹಿತಿ ಫಲಕವನ್ನು ಕಡ್ಡಾಯಗೊಳಿಸಬೇಕು ಸಕಾಲ ಒಂದೇ ನಾಗರೀಕರಿಗೆ ಸರ್ಕಾರದ ಸೇವೆಯ ತೃಪ್ತಿಪಡಿಸುವ ಪ್ರಮುಖ ಯೋಜನೆಯಾಗಿದ್ದು, ಈ ಬಗ್ಗೆ ಹೆಚ್ಚು ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ರವಿಕುಮಾರ್, ಈ ಆಡಳಿತದ ಹೆಚ್ಚುವರಿ ಕಾರ್ಯದರ್ಶಿ ರಾಜೀವ್ ಚಾವ್ಲಾ, ಸಕಾಲ ಮಿಷನ್ನ ನಿರ್ದೇಶಕಿ ಬಿ.ಆರ್.ಮಮತ ಹಾಗೂ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ವೀಡಿಯೊ ಸಂವಾದದಲ್ಲಿ ಹಾಜರಿದ್ದರು.
ಮಾರ್ಚ್ 5 ರಿಂದ 31ರವರೆಗೆ ತರಬೇತಿ ನೀಡೆಯಲಿದ್ದು, ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಮೂಲಕ ಅಂಕಪಟ್ಟಿ, ಆಧಾರ್ ಕಾರ್ಡ್ ಝರಾಕ್ಸ್ ಇತ್ತೀಚಿನ ಎರಡು ಭಾವಚಿತ್ರದೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ದಿನಾಂಕ 04-03-2021ರೊಳಗಾಗಿ ಜಿಲ್ಲಾ ಉದ್ಯೋಗ ವಿನಯಮ ಕಚೇರಿ, ಕೊಠಡಿ ಸಂಖ್ಯೆ 10, 3ನೇ ಮಹಡಿ, ‘ಎ’ಬ್ಲಾಕ್, ಜಿಲ್ಲಾ ಆಡಳಿತ ಭವನದಲ್ಲಿ ದೇವಗಿರಿ-ಹಾವೇರಿ ಈ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08375-249291 ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾಗಲಕೋಟೆ : ಬಾದಾಮಿ ತಾಲೂಕಿನ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ನಂದಿಕೇಶ್ವರದಲ್ಲಿ 33 ಕೆವಿ ಮಾರ್ಗದ ಮ್ತು ವಿದ್ಯುತ್ ವಿತರಣಾ ಕೇಂದ್ರದ ತುರ್ತು ನಿರ್ವಹಣೆ ಕೈಗೊಂಡ ಹಿನ್ನಲೆಯಲ್ಲಿ ಫೆಬ್ರವರಿ 26 ರಂದು ಬೆಳಿಗ್ಗೆ 10 ರಿಂದ ಸಂಜೆ 5 ವರೆಗೆ ಉಪ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ನಂದಿಕೇಶ್ವರ, ಮಹಾಕೂಟ, ಶಿವಯೋಗ ಮಂದಿರ, ನೆಲವಗಿ, ಬಿ.ಎನ್.ಜಾಲಿಹಾಳ, ಪಟ್ಟದಕಲ್ಲ, ಬಾಚಿನಗುಡ್ಡ, ಕಾಟಾಪೂರ, ಮಂಗಳಗುಡ್ಡ, ಚಿಮ್ಮಲಗಿ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಆಗುವ ಗ್ರಾಮಗಳು ಹಾಗೂ ಐ.ಪಿ. ಪ್ರದೇಶಗಳಿಗೆ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸುವಂತೆ ಬಾಗಲಕೋಟೆ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ : ಕೇಂದ್ರ ಸರ್ಕಾರ ಗುರುವಾರ ಎಲ್ಲ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳು 2021 ಅನ್ನು ಪ್ರಕಟಿಸಿದ್ದು, ಇದರಲ್ಲಿ ಮಧ್ಯವರ್ತಿ ಮಾರ್ಗದರ್ಶಿ ಸೂತ್ರಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ ಯನ್ನು ಒಳಗೊಂಡಿದೆ. ಹೊಸ ನಿಯಮ ಜಾರಿಗೆ ಬರಲು ಸ್ವಲ್ಪ ಸಮಯ ಹಿಡಿಯಲಿದ್ದು, ಸಂದೇಶದ ಮೂಲವನ್ನು ಗುರುತಿಸುವ ದೃಢ ನಿಲುವನ್ನು ಸರ್ಕಾರ ಮುಂದಿಟ್ಟಿದೆ. ಅಂದರೆ ಸಂದೇಶಗಳಿಗೆ ಎಂಡ್ ಟು ಎಂಡ್ ಎನ್ ಕ್ರಿಪ್ಶನ್ ಬಳಸುವ ವಾಟ್ಸಾಪ್, ಸಿಗ್ನಲ್, ಟೆಲಿಗ್ರಾಂ ಮುಂತಾದ ವೇದಿಕೆಗಳು ಸರ್ಕಾರದ ಹೊಸ ನಿಯಮವನ್ನು ಪಾಲಿಸಲು ಅದನ್ನು ಮುರಿಯಬೇಕಾಗುತ್ತದೆ. ಇಲ್ಲವಾದಲ್ಲಿ ವಾಟ್ಸ್ ಆಪ್, ಸಿಗ್ನಲ್ ಹಾಗೂ ಟೆಲಿಗ್ರಾಂ ಆಪ್ ಗಳು ಭಾರತದಲ್ಲಿ ಬ್ಯಾನ್ ಆಗಲಿವೆ.
ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳು 2021 ಅನ್ನು ಗುರುವಾರ ಪ್ರಕಟಿಸಿದ ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್ ಮತ್ತು ರವಿಶಂಕರ್ ಪ್ರಸಾದ್, ಟ್ವೀಟ್ ಅಥವಾ ಸಂದೇಶವು ಭಾರತದಲ್ಲಿ ಹುಟ್ಟದೇ ಇದ್ದಲ್ಲಿ, ಆಪ್ ಭಾರತದಲ್ಲಿ ಯಾರು ಮೊದಲು ಅದನ್ನು ಸ್ವೀಕರಿಸಿದೆ ಎಂಬುದನ್ನು ಸರ್ಕಾರಕ್ಕೆ ತಿಳಿಸಬೇಕು ಎಂದು ಸೂಚಿಸಿದರು.
ಗಮನಾರ್ಹವೆಂದರೆ, ವಾಟ್ಸ್ ಆಪ್ ಈ ಹಿಂದೆ ಸಂದೇಶಗಳ ಮೂಲವನ್ನು ಗುರುತಿಸುವಂತೆ ಸರ್ಕಾರದ ಕೋರಿಕೆಗಳನ್ನು ತಳ್ಳಿಹಾಕಿತ್ತು, ಇದು ಎಂಡ್-ಟು-ಎಂಡ್ ಗೂಢಲಿಪೀಕರಣವನ್ನು ಮುರಿಯಬಹುದು ಎಂದು ಹೇಳಿತ್ತು.
“ಪತ್ತೆಹಚ್ಚುವಿಕೆಯು ಎಂಡ್-ಟು-ಎಂಡ್ ಗೂಢಲಿಪೀಕರಣ ಮತ್ತು ವಾಟ್ಸಾಪ್ ನ ಖಾಸಗಿ ಸ್ವಭಾವವನ್ನು ದುರ್ಬಲಗೊಳಿಸುತ್ತದೆ, ಇದು ಗಂಭೀರ ದುರ್ಬಳಕೆಯ ಸಾಧ್ಯತೆಯನ್ನು ಸೃಷ್ಟಿಸುತ್ತದೆ. ನಾವು ಒದಗಿಸುವ ಖಾಸಗಿತನ ರಕ್ಷಣೆಗಳನ್ನು ವಾಟ್ಸಾಪ್ ದುರ್ಬಲಗೊಳಿಸುವುದಿಲ್ಲ’ ಎಂದು ವಾಟ್ಸಾಪ್ ವಕ್ತಾರರು 2018ರಲ್ಲಿ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹೊಸ ನಿಯಮದ ಪ್ರಕಾರ, ಜನಪ್ರಿಯ ಸಾಮಾಜಿಕ ಜಾಲತಾಣಗಳಾದ ವಾಟ್ಸ್ ಆ್ಯಪ್, ಯೂಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಂ ಮತ್ತು ಟ್ವಿಟರ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳನ್ನು ಸರ್ಕಾರ ಗುರುವಾರ ರೂಪಿಸಿರುವ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಬರಲಿದೆ.
“ಮುಖ್ಯವಾಗಿ ಸಂದೇಶದ ಸ್ವರೂಪದಲ್ಲಿ ಸೇವೆಗಳನ್ನು ಒದಗಿಸುವ ಗಮನಾರ್ಹ ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಸಂಬಂಧಿಸಿದ ಅಪರಾಧದ ಉದ್ದೇಶಗಳಿಗಾಗಿ, ರಾಜ್ಯದ ಭದ್ರತೆ, ಅಥವಾ ಸಾರ್ವಜನಿಕ ಸುವ್ಯವಸ್ಥೆ ಅಥವಾ ಅತ್ಯಾಚಾರದ ಅಪರಾಧಕ್ಕೆ ಸಂಬಂಧಿಸಿದ ಅಪರಾಧದ ಉದ್ದೇಶಗಳಿಗಾಗಿ ಮಾತ್ರ ಅಗತ್ಯವಿರುವ ಮಾಹಿತಿಯ ಮೊದಲ ಮೂಲವನ್ನು ಗುರುತಿಸಲು ಅನುವು ಮಾಡಿಕೊಡುತ್ತವೆ. , ಲೈಂಗಿಕವಾಗಿ ಸ್ಪಷ್ಟ ವಸ್ತು ಅಥವಾ ಮಕ್ಕಳ ಲೈಂಗಿಕ ದೌರ್ಜನ್ಯ ದಸ್ತಾವು ಐದು ವರ್ಷಗಳಿಗಿಂತ ಕಡಿಮೆ ಅವಧಿಯ ವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ” ಎಂದು ಸರ್ಕಾರ ಗುರುವಾರ ತನ್ನ ಹೊಸ ನಿಯಮದಲ್ಲಿ ತಿಳಿಸಿದೆ.
“ಯಾವುದೇ ಸಂದೇಶದ ವಿಷಯಗಳನ್ನು ಅಥವಾ ಯಾವುದೇ ಇತರ ಮಾಹಿತಿಯ ವಿಷಯಗಳನ್ನು ಮೊದಲ ಮೂಲಕ್ಕೆ ಬಹಿರಂಗಪಡಿಸುವ ಅಗತ್ಯವಿರುವುದಿಲ್ಲ” ಎಂದು ಸರ್ಕಾರವು ಸೂಚನೆ ನೀಡಿದೆ, ಈ ಸಂದರ್ಭದಲ್ಲಿ ಸಂದೇಶದ ಮೂಲ ಬಳಕೆದಾರನಾಗಿದ್ದರೆ, ಅಪ್ಲಿಕೇಶನ್ ಅಥವಾ ವೇದಿಕೆಯು ಬಳಕೆದಾರರನ್ನು ಎಚ್ಚರಿಸುವ ಅಗತ್ಯವಿರುವುದಿಲ್ಲ ಎಂದು ಸಹ ಸರ್ಕಾರ ವು ಸೂಚನೆ ನೀಡಿದೆ.
ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸರ್ಕಾರ ಕೇವಲ ಸಂದೇಶದ ಮೂಲವನ್ನು ಮಾತ್ರ ಕೇಳುತ್ತಿದೆಯೇ ಹೊರತು ಸಂದೇಶದ ಮೂಲವನ್ನು ಅಲ್ಲ ಎಂದು ಅವರು ಹೇಳಿದರು.
ವಾಟ್ಸ್ ಆಪ್ ನಂತಹ ಆಪ್ ಗಳು ಸಂದೇಶಗಳ ಮೂಲವನ್ನು ಪತ್ತೆ ಹಚ್ಚಲು ಸಾಧ್ಯವಾಗದಿರುವ ಬಗ್ಗೆ ಅವರ ನಿಲುವನ್ನು ಪ್ರಶ್ನಿಸುವ ಸನ್ನಿವೇಶವು ಇದೇ ಮೊದಲಲ್ಲ. ಈ ಹಿಂದೆ ಇಂತಹ ಆ್ಯಪ್ ಗಳಿಗೆ ಸರ್ಕಾರ ಕಠಿಣ ಎಚ್ಚರಿಕೆ ನೀಡಿ, ಒಂದು ಕಾಲದಲ್ಲಿ ವಾಟ್ಸಪ್ ಗೆ ದೊಡ್ಡ ಸಮಸ್ಯೆಯಾಗಿದ್ದ ತಪ್ಪು ಮಾಹಿತಿ ಗಳ ಬಗ್ಗೆ ಪರಿಹಾರ ಕಂಡುಹಿಡಿಯಲು ಮುಂದಾಗಿತ್ತು.
ಗುರುವಾರ ಹೊಸ ಐಟಿ ನಿಯಮದಲ್ಲಿ ಸರ್ಕಾರಿ ಆದೇಶಗಳನ್ನು ಪಾಲಿಸಲು ವಾಟ್ಸ್ ಆಪ್ ನಂತಹ ವೇದಿಕೆಗಳು ಯಾವ ಪರಿಹಾರವನ್ನು ತರುತ್ತವೆ ಎಂಬುದನ್ನು ಕಾದು ನೋಡಬೇಕಿದೆ. ಒಂದು ವೇಳೆ ಕೇಂದ್ರದ ಹೊಸ ಮಾರ್ಗಸೂಚಿಗಳನ್ನು ಒಪ್ಪಿಕೊಳ್ಳದಿದ್ದರೇ, ಭಾರತದಲ್ಲಿ ವಾಟ್ಸ್ ಆಪ್ ಬ್ಯಾನ್ ಆಗಲಿದೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.
ನವದೆಹಲಿ : ಈಗಾಗಲೇ ದೇಶಾದ್ಯಂತ ಫಾಸ್ಟ್ ಟ್ಯಾಗ್ ವಾಹನಗಳಿಗೆ ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಫಾಸ್ಟ್ ಟ್ಯಾಗ್ ಇಲ್ಲದಿದ್ದರೇ ದುಪ್ಪಟ್ಟು ಶುಲ್ಕವನ್ನು ವಿಧಿಸಲಾಗುತ್ತಿದೆ. ಕೆಲವೊಮ್ಮೆ ನಿಮ್ಮ ಫಾಸ್ಟ್ ಟ್ಯಾಗ್ ನಲ್ಲಿ ಬ್ಯಾಲೆನ್ಸ್ ಇದ್ದು, ಟೋಲ್ ನಲ್ಲಿ ಕಾರ್ಡ್ ರೀಡ್ ಮಾಡಲಾಗದೇ ತಾಂತ್ರಿಕ ಸಮಸ್ಯೆಯಿಂದ ಹಣ ಕಡಿತಗೊಳ್ಳದಿದ್ದರೇ, ನೀವು ಯಾವುದೇ ಕಾರಣಕ್ಕೂ ಹಣದ ರೂಪದಲ್ಲಿ ಟೋಲ್ ಗೆ ನೀಡಿ ಟಿಕೆಟ್ ಪಡೆಯುವಂತಿಲ್ಲ. ಟೋಲ್ ನವರು ಹಣವನ್ನು ಪಡೆಯುವಂತಿಲ್ಲ.
ಹೌದು. ಈ ಕುರಿತಂತೆ ಮೇ.7, 2018ರಂದೇ ಭಾರತ ಸರ್ಕಾರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯವು ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಇಂತಹ ಗೆಜೆಟ್ ಅಧಿಸೂಚನೆಯಲ್ಲಿ ವಾಹನವೊಂದು ಫಾಸ್ಟ್ ಟ್ಯಾಗ್ ಹೊಂದಿದ್ದು, ಟೋಲ್ ಫ್ಲಾಜಾ ಹಾದು ಹೋಗುವಂತ ಸಂದರ್ಭದಲ್ಲಿ ಬ್ಯಾಲೆನ್ಸ್ ಇದ್ದು, ತಾಂತ್ರಿಕ ಸಮಸ್ಯೆಯಿಂದಾಗಿ ಹಣ ಕಡಿತಗೊಳ್ಳಲು ಸಾಧ್ಯವಾಗದಿದ್ದರೇ, ಫಾಸ್ಟ್ ಟ್ಯಾಗ್ ಹೊರತಾಗಿಯೂ ಯಾವುದೇ ಮಾದರಿಯಲ್ಲಿ ಹಣವನ್ನು ಸಂಗ್ರಹಿಸುವಂತಿಲ್ಲ ಎಂದು ತಿಳಿಸಿದೆ.
ಇನ್ನೂ ಮುಂದುವರೆದು ಫಾಸ್ಟ್ ಟ್ಯಾಗ್ ನಲ್ಲಿ ಬ್ಯಾಲೆನ್ಸ್ ಇದ್ದು, ಟೋಲ್ ಫ್ಲಾಜಾದ ತಾಂತ್ರಿಕ ಸಮಸ್ಯೆಯಿಂದಾಗಿ ಹಣ ಕಡಿತಗೊಳ್ಳದ ಸಂದರ್ಭದಲ್ಲಿ ಜೀರೋ ಸಂದಾಯದ ರಸೀದಿಯನ್ನು ನೀಡಿ ಅಂತಹ ವಾಹನವನ್ನು ಉಚಿತವಾಗಿ ಸಂಚರಿಸಲು ಅವಕಾಶ ಮಾಡಿಕೊಡುವಂತೆಯೂ ಸೂಚಿಸಿದೆ.
“ಒಂದು ವೇಳೆ, ಮಾನ್ಯವಾದ, ಕ್ರಿಯಾತ್ಮಕವಾದ FASTag ಅಥವಾ ಅಂತಹ ಯಾವುದೇ ಸಾಧನವನ್ನು ಹೊಂದಿರುವ ಯಾವುದೇ ಸಾಧನವು ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ಮೂಲಸೌಕರ್ಯದೊಂದಿಗೆ ಸ್ಥಾಪಿತವಾದ ಶುಲ್ಕ ಪ್ಲಾಜಾವನ್ನು ದಾಟಿ, ಸಾಕಷ್ಟು ಬ್ಯಾಲೆನ್ಸ್ ಹೊಂದಿರುವ ಯಾವುದೇ ಸಾಧನವನ್ನು ಹೊಂದಿದ್ದರೆ, ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ಮೂಲಸೌಕರ್ಯದ ಅಸಮರ್ಪಕ ಕಾರ್ಯನಿರ್ವಹಣೆಯಿಂದಾಗಿ ಬಳಕೆದಾರರ ಶುಲ್ಕ ಪಾವತಿಸಲು ಸಾಧ್ಯವಾಗದಿದ್ದಲ್ಲಿ, ವಾಹನ ಬಳಕೆದಾರನು ಯಾವುದೇ ಬಳಕೆದಾರ ಶುಲ್ಕಪಾವತಿಸದೆ ಶುಲ್ಕ ಪ್ಲಾಜಾವನ್ನು ಪಾಸ್ ಮಾಡಲು ಅನುಮತಿಸಲಾಗುತ್ತದೆ. ಅಂತಹ ಎಲ್ಲ ವಹಿವಾಟುಗಳಿಗೆ ಶೂನ್ಯ ವಹಿವಾಟು ರಸೀದಿಯನ್ನು ಕಡ್ಡಾಯವಾಗಿ ನೀಡಬೇಕು” ಎಂದು ಹೇಳಿದರು.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಜನಪ್ರಿಯ ನಂದಿ ಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ನಂದಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಂದಿಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶ ಆಕರ್ಷಕವಾಗಿದೆ. ಇದಕ್ಕೆ ಐತಿಹಾಸಿಕ, ಧಾರ್ಮಿಕ ಪ್ರಾಮುಖ್ಯವಿದ್ದು, ವಿಶೇಷವಾದ ಸಸ್ಯಸಂಪತ್ತು ಇದೆ. ಇವೆಲ್ಲವನ್ನೂ ಗಮನಿಸಿ ಪ್ರವಾಸೋದ್ಯಮ ಕ್ಷೇತ್ರವಾಗಿಸಬಹುದು. ಇದಕ್ಕಾಗಿ ನಮ್ಮ ಸರ್ಕಾರ ಈಗಾಗಲೇ 10 ಕೋಟಿ ರೂ. ಅನುದಾನ ನೀಡಿದೆ ಎಂದು ಮಾಹಿತಿ ನೀಡಿದರು.
ಕಳೆದ 15 ವರ್ಷಗಳಿಂದ ರೋಪ್ ವೇ ಬೇಕು ಎಂದು ಜನರು ಬೇಡಿಕೆ ಇಡುತ್ತಿದ್ದಾರೆ. ಅಂತಾರಾಷ್ಟ್ರೀಯ ಕಂಪನಿಯೊಂದು ಇದನ್ನು ಮಾಡಲು ಮುಂದಾಗಿ ನಂತರ ಕಾರಣಾಂತರದಿಂದ ಯೋಜನೆ ಕೈ ಬಿಟ್ಟಿತ್ತು. ಈಗ ಆ ಕನಸು ನನಸಾಗಲಿದೆ. ಇಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು 10 ಎಕರೆಗೂ ಹೆಚ್ಚು ಜಾಗವನ್ನು ಪಡೆಯಲು ಪ್ರಯತ್ನಿಸಲಾಗಿದೆ. ಈ ರೀತಿ ಮಾಸ್ಟರ್ ಪ್ಲಾನ್ ಮಾಡಿ ಅನುಷ್ಠಾನಗೊಳಿಸಲಾಗುವುದು. ಮೂರ್ನಾಲ್ಕು ತಿಂಗಳಲ್ಲಿ ಕಾಮಗಾರಿ ಮುಗಿಯಬಹುದು ಎಂದರು.
ತಕ್ಷಣದಲ್ಲಿ ಟೆಂಡರ್ ಆಗಿ ಎಲ್ಲ ಬಗೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ನಂದಿಬೆಟ್ಟವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ರೂಪುಗೊಳಿಸಬೇಕಿದೆ. ಈ ತಾಣವು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 30 ಕಿ.ಮೀ. ದೂರದಲ್ಲಿದೆ. ಬೆಂಗಳೂರು ನಗರದಿಂದ ಒಂದು ಗಂಟೆಯಲ್ಲಿ ಬರಬಹುದು. ಈ ಪ್ರದೇಶವನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಎಲ್ಲ ಸಹಕಾರ ನೀಡಲಾಗುವುದು ಎಂದು ಉತ್ತೇಜಿಸಿದ್ದಾರೆ ಎಂದರು.
ಇದರ ಜೊತೆಗೆ ಎಕೋ-ಟೂರಿಸಂ, ಸುತ್ತಮುತ್ತಲಿನ 5 ಬೆಟ್ಟಗಳಿಗೆ ಚಾರಣ ದಾರಿಗಳು, ಪುರಾತತ್ವ ಸ್ಮಾರಕಗಳು, ನೆಲ್ಲಿಕಾಯಿ ಬಸವಣ್ಣ ಮತ್ತು ಮಂಟಪಗಳು ಸಂರಕ್ಷಣೆ, ಸುಂದರೀಕರಣ ಸೇರಿದಂತೆ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮುಖ್ಯಮಂತ್ರಿಗಳು ಮಂಡಿಸಲಿರುವ ಆಯವ್ಯಯದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಿದ್ದಾರೆ. ರಾಜ್ಯದಲ್ಲಿ ವಿಶಿಷ್ಟವಾದ ಪ್ರವಾಸಿ ತಾಣಗಳಿವೆ ಎಂದರು.
ನಂದಿಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಸಂಪೂರ್ಣ ನಿಷೇಧಿಸಲು ತೀರ್ಮಾನಿಸಲಾಗಿದೆ. ಯಾವುದೇ ರೀತಿಯ ಪ್ಲಾಸ್ಟಿಕ್ ಒಳಗೆ ತೆಗೆದುಕೊಂಡು ಹೋಗಲು ಅವಕಾಶ ನೀಡದಿರಲು ನಿರ್ಧರಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಲಂಡನ್ : 14 ಸಾವಿರ ಕೋಟಿ ರೂ.ಗಳ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ ಬಿ) ಹಗರಣದಲ್ಲಿ ವಂಚನೆ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ವಜ್ರಉದ್ಯಮಿ ನೀರವ್ ಮೋದಿ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂಬ ಬಗ್ಗೆ ಸಾಕ್ಷ್ಯಾಧಾರಗಳು ಲಭ್ಯವಾಗಿದ್ದು, ಅವರಿಗೆ ಶಿಕ್ಷೆವಿಧಿಸುವ ಸಾಧ್ಯತೆ ಇದೆ ಎಂದು ಇಂಗ್ಲೆಂಡ್ ನ್ಯಾಯಾಲಯ ಹೇಳಿದೆ. ಈ ಹಿನ್ನಲೆಯಲ್ಲಿ ವಿಚಾರಣೆಗೆ ನಿಲ್ಲಲು ನೀರವ್ ಮೋದಿಯನ್ನು ಭಾರತಕ್ಕೆ ಗಡಿಪಾರು ಮಾಡುವಂತೆ ಇಂಗ್ಲೆಂಡ್ ಗಡಿಪಾರು ನ್ಯಾಯಾಧೀಶರು ಆದೇಶ ನೀಡಿದ್ದಾರೆ.
ಪಿಎನ್ ಬಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ನೀರವ್ ಮೋದಿ ಸಾಕ್ಷ್ಯನಾಶ ಮತ್ತು ಸಾಕ್ಷಿಗಳನ್ನು ಬೆದರಿಸಲು ಸಂಚು ರೂಪಿಸಿದ್ದರು ಎಂದು ಯುಕೆ ಕೋರ್ಟ್ ತೀರ್ಪು ನೀಡಿದೆ. ಭಾರತದ ಲ್ಲೂ ನೀರವ್ ಮೋದಿಯ ಪ್ರಕರಣವಿದೆ ಎಂದು ಕೋರ್ಟ್ ತೀರ್ಪು ನೀಡಿದೆ.
UK extradition judge orders Nirav Modi to be extradited to India to stand trial pic.twitter.com/vsvy4wMqqk
ಲಂಡನ್ : 14 ಸಾವಿರ ಕೋಟಿ ರೂ.ಗಳ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ ಬಿ) ಹಗರಣದಲ್ಲಿ ವಂಚನೆ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ವಜ್ರಉದ್ಯಮಿ ನೀರವ್ ಮೋದಿ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂಬ ಬಗ್ಗೆ ಸಾಕ್ಷ್ಯಾಧಾರಗಳು ಲಭ್ಯವಾಗಿದ್ದು, ಅವರಿಗೆ ಶಿಕ್ಷೆವಿಧಿಸುವ ಸಾಧ್ಯತೆ ಇದೆ ಎಂದು ಇಂಗ್ಲೆಂಡ್ ನ್ಯಾಯಾಲಯ ಹೇಳಿದೆ. ಈ ಹಿನ್ನಲೆಯಲ್ಲಿ ವಿಚಾರಣೆಗೆ ನಿಲ್ಲಲು ನೀರವ್ ಮೋದಿಯನ್ನು ಭಾರತಕ್ಕೆ ಗಡಿಪಾರು ಮಾಡುವಂತೆ ಇಂಗ್ಲೆಂಡ್ ಗಡಿಪಾರು ನ್ಯಾಯಾಧೀಶರು ಆದೇಶ ನೀಡಿದ್ದಾರೆ.
ಪಿಎನ್ ಬಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ನೀರವ್ ಮೋದಿ ಸಾಕ್ಷ್ಯನಾಶ ಮತ್ತು ಸಾಕ್ಷಿಗಳನ್ನು ಬೆದರಿಸಲು ಸಂಚು ರೂಪಿಸಿದ್ದರು ಎಂದು ಯುಕೆ ಕೋರ್ಟ್ ತೀರ್ಪು ನೀಡಿದೆ. ಭಾರತದ ಲ್ಲೂ ನೀರವ್ ಮೋದಿ ಯಪ್ರಕರಣವಿದೆ ಎಂದು ಕೋರ್ಟ್ ತೀರ್ಪು ನೀಡಿದೆ.
ಭಾರತದಲ್ಲಿ ವಿಚಾರಣೆ ಎದುರಿಸಲು ಉನ್ನತ ಮಟ್ಟದ ಜ್ಯುವೆಲರ್ ಗೆ ಸಂಬಂಧಿಸಿದ ಪ್ರಕರಣವು ಪ್ರಬಲವಾಗಿದೆ ಎಂದು ನ್ಯಾಯಾಧೀಶರು ಹೇಳಿದರು. ನೀರವ್ ಮೋದಿ ಮತ್ತು ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ಇತರ ಕಾನ್ನಿವರ್ಸ್ ಗಳ ನಡುವೆ ಸಂಪರ್ಕವಿದೆ ಎಂದು ಅವರು ಹೇಳಿದ್ದಾರೆ.
‘ಸಾಲ ಮರುಪಾವತಿಗೆ ಮೋದಿ ಅವರೇ ಖುದ್ದಾಗಿ ಪಿಎನ್ ಬಿಗೆ ಪತ್ರ ಬರೆದಿದ್ದರು. ನೀರವ್ ಮೋದಿ ಸಂಸ್ಥೆಗಳು ಡಮ್ಮಿ ಪಾಲುದಾರರು ಎಂದು ಸಿಬಿಐ ತನಿಖೆ ನಡೆಸುತ್ತಿದೆ,” ಎಂದು ನ್ಯಾಯಾಧೀಶರು ಹೇಳಿದ್ದಾರೆ. ನೀರವ್ ಮೋದಿ ಅವರು ನಡೆಸುತ್ತಿರುವ ನೆರಳು ಕಂಪನಿಗಳು ಈ ಕಂಪನಿಗಳು ಎಂದು ಅವರು ಹೇಳಿದ್ದಾರೆ.
‘ನೀರವ್ ಮೋದಿ ಅಕ್ರಮ ದಂಧೆಯಲ್ಲಿ ತೊಡಗಿದ್ದರು ಎಂಬುದನ್ನು ನಾನು ಒಪ್ಪುವುದಿಲ್ಲ. ನನಗೆ ಯಾವುದೇ ನೈಜ ವಹಿವಾಟುಗಳು ಕಂಡುಬರುವುದಿಲ್ಲ ಮತ್ತು ಅಪ್ರಾಮಾಣಿಕತೆಯ ಪ್ರಕ್ರಿಯೆ ಇದೆ ಎಂದು ನಾನು ನಂಬುತ್ತೇನೆ.” ನೀರವ್ ಮೋದಿ ಮತ್ತು ಕೋ ವಂಚನೆ ಯಿಂದಾದ ವಂಚನೆಯ ಬಗ್ಗೆ ತೀರ್ಮಾನತೆಗೆದುಕೊಳ್ಳಲಾಗಿದೆ ಎಂದು ನ್ಯಾಯಾಧೀಶರು ಹೇಳಿದರು.
“ಇವುಗಳಲ್ಲಿ ಅನೇಕವು ಭಾರತದಲ್ಲಿ ವಿಚಾರಣೆಗೆ ಸಂಬಂಧಿಸಿದ ವಿಷಯಗಳಾಗಿವೆ. ಅವರು ಶಿಕ್ಷೆಯ ಬಗ್ಗೆ ಸಾಕ್ಷ್ಯಗಳನ್ನು ಹೊಂದಿದ್ದಾರೆಂದು ನಾನು ಮತ್ತೊಮ್ಮೆ ತೃಪ್ತಿಗೊಂಡಿದ್ದೇನೆ. ಹಣ ದುರುಪಯೋಗದ ಪ್ರಕರಣವಿದೆ’ ಎಂದು ಹೇಳಿದರು.
49 ವರ್ಷದ ನೀರವ್ ಮೋದಿ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ನೈಋತ್ಯ ಲಂಡನ್ ನ ವಾಂಟ್ಸ್ ವರ್ತ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾಣಿಸಿಕೊಂಡಿದ್ದಾರೆ.
ಭಾರತದಿಂದ ತಮಗೆ 16 ಸಂಪುಟಗಳ ಸಾಕ್ಷ್ಯಗಳು ಬಂದಿವೆ ಎಂದು ನ್ಯಾಯಾಧೀಶರು ಹೇಳಿದರು.
ಮ್ಯಾಜಿಸ್ಟ್ರೇಟ್ ಗಳ ಕೋರ್ಟ್ ತೀರ್ಪನ್ನು ಯುಕೆ ಗೃಹ ಕಾರ್ಯದರ್ಶಿ ಪ್ರೀತ್ ಪಟೇಲ್ ಅವರಿಗೆ ವಾಪಸ್ ಕಳುಹಿಸಲಾಗುತ್ತದೆ, ಫಲಿತಾಂಶಕ್ಕೆ ಅನುಗುಣವಾಗಿ ಎರಡೂ ಕಡೆ ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.
ಕೋಲಾರ : ಜಿಲ್ಲೆಯಲ್ಲಿ ಆರು ವರ್ಷದ ಬಾಲಕಿಯ ಮೇಲೆ 60 ವರ್ಷಯ ವೃದ್ಧರೊಬ್ಬರು ಅತ್ಯಾಚಾರಕ್ಕೆ ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಇಂತಹ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕೋಲಾರ ತಾಲೂಕಿನ ಛತ್ರಕೋಡಿಹಳ್ಳಿ ಗ್ರಾಮದಲ್ಲಿ ನಡೆದಲ್ಲಿ 6 ವರ್ಷದ ಬಾಲಕಿಗೆ ಚಾಕಲೇಟ್ ಕೊಡಿಸುವ ನೆಪದಲ್ಲಿ ನಿನ್ನೆ 60 ವರ್ಷದ ತಿಮ್ಮಪ್ಪ ಎಂಬುವರು ಅತ್ಯಾಚಾರ ಎಸಗಲು ಯತ್ನಿಸಿದ್ದಾಗಿ ತಿಳಿದು ಬಂದಿದೆ.
ಆರೋಪಿ ತಿಮ್ಮಪ್ಪ ಅವರ ಪುತ್ರ ಕುಮಾರ್ ಎಂಬುವರು ಗ್ರಾಮ ಪಂಚಾಯ್ತಿ ಸದಸ್ಯನಾಗಿದ್ದು, ಪೊಲೀಸರಿಗೆ ದೂರು ನೀಡದಂತೆ ಬೆದರಿಕೆ ಕೂಡ ಹಾಕಿದ್ದರು ಎನ್ನಲಾಗಿದೆ. ಇದರ ನಡುವೆಯೂ, ಬಾಲಕಿಯ ಪೋಷಕರು ಹಾಗೂ ಸಮುದಾಯದ ಮುಖಂಡರು ಆರೋಪಿಯ ವಿರುದ್ಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದಾವಣಗೆರೆ : ರಾಜ್ಯದಲ್ಲಿನ ಸ್ಫೋಟಕಗಳನ್ನು ಪತ್ತೆ ಹಚ್ಚಲು ಎಲ್ಲಾ ಗಣಿಗಾರಿಕೆ ಕೇಂದ್ರಗಳ ಮೇಲೆ ವಿಶೇಷ ಕಾರ್ಯಾಚರಣೆ ಮಾಡಿ ಒಟ್ಟಾರೆ ಸ್ಪೋಟಕಗಳ ಆಡಿಟ್ ಮಾಡಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಗುರುವಾರ ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗಣಿ ಮತ್ತು ಗೃಹ ಇಲಾಖೆ ಅಧಿಕಾರಿಗಳ ತಂಡಗಳು ಜಂಟಿಯಾಗಿ ಈ ಕಾರ್ಯಾಚರಣೆ ಮಾಡಲಿವೆ ಎಂದರು.
ರಾಜ್ಯದಲ್ಲಿನ ಹಲವಾರು ಗಣಿಗಾರಿಕೆ ಕೇಂದ್ರಗಳಿವೆ. ಅವುಗಳ ಪೈಕಿ ಅಕ್ರಮ ಮತ್ತು ಸಕ್ರಮ ಗಣಿಗಾರಿಕೆ ಕೇಂದ್ರಗಳೂ ಇವೆ. ಈ ಎಲ್ಲಾ ಗಣಿಗಾರಿಕೆ ಕೇಂದ್ರಗಳ ವಿರುದ್ಧ ಜಂಟಿ ಕಾರ್ಯಾಚರಣೆ ಆರಂಭ ಮಾಡುತ್ತೇವೆ.
ಇದುವರೆಗೆ ೩ ತಿಂಗಳಿಗೆ ಒಮ್ಮೆ ಗಣಿಗಾರಿಕೆ ಕೇಂದ್ರಗಳನ್ನು ತಪಾಸಣೆ ಮಾಡಲಾಗುತ್ತಿತ್ತು. ಈಗ ಆ ನಿಯಮವನ್ನು ಕಠಿಣಗೊಳಿಸಲಾಗಿದೆ. ಈ ಸಂಬಂಧ ವಿಶೇಷ ಸುತ್ತೋಲೆ ಹೊರಡಿಸಲಾಗಿದೆ. ಇನ್ನು ಮುಂದೆ 15 ದಿನಗಳಿಂದ 1 ತಿಂಗಳ ಅವಧಿಯಲ್ಲಿ ಒಂದು ಬಾರಿ ರಾಜ್ಯದ ಎಲ್ಲ ಗಣಿಗಾರಿಕೆ ಕೇಂದ್ರಗಳನ್ನು ತಪಾಸಣೆ ಮಾಡುತ್ತೇವೆ. ಅಲ್ಲಿ ಸಂಗ್ರಹಿಸಿರುವ ಸ್ಫೋಟಕಗಳನ್ನು ಪತ್ತೆ ಮಾಡುತ್ತೇವೆ. ಅಕ್ರಮ- ಸಕ್ರಮ ಸ್ಪೋಟಕಗಳನ್ನು ಪತ್ತೆ ಮಾಡುತ್ತೇವೆ. ಅಕ್ರಮವಾಗಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಹಾವೇರಿ : ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕು ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ಫೆ.25 ರಂದು ರಾತ್ರಿ 10-30 ಕ್ಕೆ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದೆ.
ಕಾರಣ ಸಾರ್ವಜನಿಕರು ನದಿಪಾತ್ರದಲ್ಲಿ ತಿರುಗಾಡುವುದಾಗಲಿ, ದನಕರುಗಳನ್ನು ನದಿಗೆ ಇಳಿಸುವುದಾಗಲಿ ಇತ್ಯಾದಿ ಚಟುವಟಿಕೆಗಾಗಿ ನದಿ ಪಾತ್ರದಲ್ಲಿ ನಡೆಸದಂತೆ ಹಾಗೂ ನದಿ ನೀರಿನಲ್ಲಿ ಇಳಿಸಿದಂತೆ ಎಚ್ಚರಿಕೆ ನೀಡಲಾಗಿದೆ ಹಾಗೂ ರೈತರು ಪಂಪ್ಸೆಟ್ ಮೂಲಕ ನೀರು ಎತ್ತದಂತೆ ನಿಷೇಧಿಸಲಾಗಿದೆ ಎಂದು ಭದ್ರಾ ಜಲಾಶಯ ಯೋಜನೆ ಕುಡಿಯುವ ನೀರಿನ ಯೋಜನೆ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ : ಕೇಂದ್ರ ಸರ್ಕಾರವು ಕಾರ್ಮಿಕರ ರಾಜ್ಯ ವಿಮಾ ನಿಗಮದ ಮೂಲಕ ಅಟಲ್ ಬಿಮಿತ್ ವ್ಯಕ್ತಿ ಕಲ್ಯಾಣ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಅರ್ಹ ವಿಮಾದಾರರಾಗಿ ನೋಂದಾಯಿತ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತರಾದ ಡಿ.ಜಿ. ನಾಗೇಶ ಅವರು ತಿಳಿಸಿದ್ದಾರೆ.
ಈ ಯೋಜನೆಯು 2021ರ ಜೂನ್ ಅಂತ್ಯದವರೆಗೆ ಚಾಲ್ತಿಯಲ್ಲಿರುತ್ತದೆ. ವಿಮಾದಾರರಾಗಿ ನೋಂದಾಯಿತ ಕಾರ್ಮಿಕರು ಹಲವಾರು ಕಾರಣಗಳಿಂದ ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾದಾಗ ಅವರಿಗೆ ನಿರುದ್ಯೋಗ ಅವಧಿಗೆ ನಗದು ಪರಿಹಾರ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ನೋಂದಣಿಯಾದ ಕನಿಷ್ಠ 2 ವರ್ಷಗಳ ಅವಧಿಯಲ್ಲಿ ವಂತಿಕೆಯನ್ನು ಪಾವತಿಸಿ ನಿರುದ್ಯೋಗಿಯಾದ ವಿಮಾದಾರನಿಗೆ, 2020ರ ಮಾರ್ಚ್ 23ರ ಪೂರ್ವದಲ್ಲಿ ದಿನಗಳಿಕೆಯ ಶೇ.25 ರಂತೆ ಗರಿಷ್ಠ 90 ದಿನಗಳ ನಿರುದ್ಯೋಗ ಪರಿಹಾರ ನೀಡಲಾಗುತ್ತದೆ. 2020ರ ಮಾರ್ಚ್ 24ರಿಂದ ಡಿಸೆಂಬರ್ 31ರ ಅವಧಿಯಲ್ಲಿ ನಿರುದ್ಯೋಗಿಯಾಗಿದ್ದಲ್ಲಿ ಶೇ.50 ರಂತೆ ಗರಿಷ್ಠ 90 ದಿನಗಳ ನಿರುದ್ಯೋಗ ಪರಿಹಾರ ನೀಡಲಾಗುವುದು.
ನಿರುದ್ಯೋಗಿಯಾದ ದಿನಾಂಕದ ಪೂರ್ವ ಮೂರು ವಂತಿಕೆ ಅವಧಿಯಲ್ಲಿ ಕನಿಷ್ಠ 78 ದಿನಗಳ ಹಾಗೂ ನಿರುದ್ಯೋಗಿಯಾದ ದಿನಾಂಕದ ಪೂರ್ವ ಎರಡು ವರ್ಷಗಳಲ್ಲಿ ಕನಿಷ್ಠ 78 ದಿನಗಳ ವಂತಿಕೆ ಪಾವತಿಸಿರಬೇಕು.
ಅರ್ಹ ವಿಮಾದಾರರು www.esic.nic.in ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವಿಮಾದಾರರು ಸಲ್ಲಿಸಿದ ಅರ್ಜಿಯನ್ನು ಸ್ಥಳೀಯ ಇ.ಎಸ್.ಐ. ಕಚೇರಿಯವರು ಸ್ವೀಕರಿಸಿ, ವಿಮಾದಾರರು ನಿರುದ್ಯೋಗಿ ಎಂಬುದನ್ನು ಖಚಿತಪಡಿಸಿಕೊಂಡು ನಂತರ ಪರಿಹಾರ ವಿಮಾದಾರನ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು : ಬಿಜೆಪಿಯ ಎಂಟಿಬಿ ನಾಗರಾಜ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ನಿಂತು, ಗೆಲುವನ್ನು ಸಾಧಿಸಿದ್ದಂತ ಶಾಸಕ ಶರತ್ ಬಚ್ಚೇಗೌಡ ಅವರು, ಇಂದು ಅಧಿಕೃತವಾಗಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಇಂದು ಸರಳವಾಗಿ ನಡೆದಂತ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು, ಕಾಂಗ್ರೆಸ್ ಸದಸ್ಯತ್ವ ಪತ್ರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಂದ ಸದಸ್ಯತ್ವ ಪತ್ರವನ್ನು ಪಡೆಯುವ ಮೂಲಕ, ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.
ಪಕ್ಷ ಸೇರ್ಪಡೆ ಕಾರ್ಯಕ್ರಮದ ಬಳಿಕ ಮಾತನಾಡಿದಂತ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಹೊಸಕೋಟೆಯಲ್ಲಿ ಹಿಂಬಾಗಿಲಿನಿಂದ ಬಂದಂತ ಎಂಟಿಬಿ ನಾಗರಾಜ್ ಅವರಿಗೆ ಜನರು ವೋಟ್ ಹಾಕಿಲ್ಲ. ಹೊಸಕೋಟೆ ಜನರು ಶರತ್ ಗೆ ವೋಟ್ ಹಾಕಿರೋದು ಎಂಬುದಾಗಿ ಹೇಳುವ ಮೂಲಕ, ಎಂಟಿಬಿ ನಾಗರಾಜ್ ವಿರುದ್ಧ ವಾಗ್ದಾಳಿ ನಡೆಸಿದರು.
ಗದಗ : ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ, ಕೂಲಿ ಕೆಲಸ ಮುಗಿಸಿ ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದಂತ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, 7 ಜನರು ಗಾಯಗೊಂಡಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿಗೆ ಕೂಲಿ ಕೆಲಸಕ್ಕಾಗಿ ತೆರಳಿದ್ದಂತ ಕಾರ್ಮಿಕರು, ಟ್ರ್ಯಾಕ್ಟರ್ ನಲ್ಲಿ ವಾಪಾಸ್ ಆಗುತ್ತಿದ್ದರು. ಇಂತಹ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಗುಂಜಳ ರಸ್ತೆಯಲ್ಲಿ ಪಲ್ಟಿಯಾದ ಪರಿಣಾಮ, ಅದರಲ್ಲಿದ್ದಂತ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, 7 ಜನರು ಗಾಯಗೊಂಡಿರುವ ಘಟನೆ ನಡೆಸಿದೆ.
ಮೃತರನ್ನು ಲಕ್ಷ್ಮೇಶ್ವರ ನಿವಾಸಿಗಳಾದಂತ ಸರೋಜವ್ವಾ ಹಿತ್ತಲಮನಿ, ಸೋಮವ್ವಾ ಅಡುಗೆಮನಿ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕುಂಬಳಗೂಡಿನ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು, ಆಘಾತಕ್ಕೆ ಒಳಗಾಗಿದ್ದಳು. ಇಂತಹ ವಿದ್ಯಾರ್ಥಿನಿ ಯಶ್ವಿನಿ ಮನೆಗೆ ಭೇಟಿ ನೀಡಿದಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು, ವಿದ್ಯಾರ್ಥಿನಿಗೆ ಆತ್ಮವಿಶ್ವಾಸ ಹೆಚ್ಚಿಸಿ, ಆತ್ಮಸ್ಥೈರ್ಯವನ್ನು ತುಂಬಿದರು.
ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದು, ಕುಂಬಳ ಗೂಡಿನ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ #ಯಶಸ್ವಿನಿ ಮನೆಗೆ ಇಂದು ಬೆಳಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದೆ. ಯಶಸ್ವಿನಿ ಜನವರಿ 25ರಂದು ರಾಷ್ಟ್ರೀಯ ಮಟ್ಟದ ಪ್ರತಿಭಾ ಅನ್ವೇಷಣಾ ಪರೀಕ್ಷೆಗೆ ಹಾಜರಾಗಲು ತಂದೆಯೊಂದಿಗೆ ಹೋಗುತ್ತಿದ್ದಾಗ ಕೆಂಗೇರಿ ಬಳಿ ದೊಡ್ಡಮಟ್ಟದ ರಸ್ತೆ ಅಪಘಾತಕ್ಕೆ ಸಿಲುಕಿ ಕತ್ತಿನ ಬಳಿಯ ಬೆನ್ನುಮೂಳೆ ಮತ್ತು ಬಲಗೈ ಗೆ ತೀವ್ರವಾಗಿ ಘಾಸಿಯಾಗಿತ್ತು. ಈ ಬಾಲಕಿಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಎರಡು ಶಸ್ತ್ರಚಿಕಿತ್ಸೆ ಮಾಡಲಾಗಿದೆ.
ಈ ಬಾಲಕಿಗೆ ತನ್ನ ಕತ್ತು ತಿರುಗಿಸಲು ಇನ್ನೂ ಸುಮಾರು ಮೂರು ವಾರಗಳು ಬೇಕಿದೆ. ಬಲಗೈ ಎತ್ತಲು ಸಹ ಸುಮಾರು ಅಷ್ಟೇ ಸಮಯ ಬೇಕಾಗುತ್ತದೆ. ಶಿಕ್ಷಣ ಇಲಾಖೆಯಿಂದ ಆಕೆಯ ಶಸ್ತ್ರ ಚಿಕಿತ್ಸೆಗೆ ಅಗತ್ಯ ಹಣವನ್ನು ಪಾವತಿ ಮಾಡಲಾಗಿದೆ. (ಫೆಬ್ರವರಿ 2 ರಂದು ನಾನು NIMHANS ಗೆ ಹೋಗಿ ಈ ಮಗುವಿನ ಚಿಕಿತ್ಸೆಗೆ ಶಿಕ್ಷಣ ಇಲಾಖೆಯ ವತಿಯಿಂದ ಚೆಕ್ ನೀಡಿ ಬಂದಿದ್ದೆ)
ಈಗ “ಯಶಸ್ವಿನಿ” ಯಲ್ಲಿ ಮುಂಬರುವ ಎಸ್ಎಸ್ಎಲ್ಸಿ ಪರೀಕ್ಷೆಯನ್ನು “ಯಶಸ್ವಿ” ಯಾಗಿ ಎದುರಿಸುತ್ತೇನೆ ಎಂದು ವಿಶ್ವಾಸ ಕಾಣುತ್ತಿದೆ. ಇಂದು ನಾನು ಆಕೆಯ ಮನೆಗೆ ಹೋಗಿ ಆಕೆಯನ್ನು ಮಾತನಾಡಿಸಿ ಆತ್ಮವಿಶ್ವಾಸವನ್ನು ಹೆಚ್ಚಿಸುವ ಪ್ರಯತ್ನ ಮಾಡಿದೆ.
ಈ ಬಾಲಕಿಗೆ ಇನ್ನುಮುಂದೆ ಸಹ ಪಾಠ ಕಲಿಯಲು ಬೇಕಾದ ಎಲ್ಲಾ ಸಹಾಯ ನೀಡಲಾಗುತ್ತದೆ. ಪೂರ್ಣ ಗುಣಮುಖವಾಗುವವರೆಗೆ ಮನೆಗೆ ಶಾಲಾ ಶಿಕ್ಷಕರು ಪಾಠ ಹೇಳಿಕೊಡುವ ವ್ಯವಸ್ಥೆ ಮಾಡಲಾಗಿದೆ. ತಾನು ಎಸ್ಎಸ್ಎಲ್ಸಿ ಪರೀಕ್ಷೆ ಪಡೆದು ನನ್ನಿಂದಲೇ ಬಹುಮಾನ ಸ್ವೀಕರಿಸುತ್ತೇನೆ ಎಂಬ ಆತ್ಮ ವಿಶ್ವಾಸದ ಮಾತುಗಳನ್ನು ಹೇಳಿರುವ ಯಶಸ್ವಿನಿಗೆ ಎಲ್ಲ ರೀತಿಯಿಂದ ಶುಭವಾಗಲಿ ಎಂದು ಹಾರೈಸಿ ಬಂದಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.
ಹೊಸದಿಲ್ಲಿ : ದೆಹಲಿಯಲ್ಲಿ ಇಂದಿನಿಂದ ಎಲ್ ಪಿಜಿ ಸಿಲಿಂಡರ್ ಬೆಲೆ 25 ರೂಪಾಯಿ ಹೆಚ್ಚಳ ಮಾಡಲಾಗಿದೆ. ಫೆಬ್ರವರಿಯಲ್ಲಿ ಏರಿಕೆಯಾದ ಮೂರನೇ ಏರಿಕೆ ಇದು, ಒಂದು ತಿಂಗಳಲ್ಲಿ ಪ್ರತಿ ಸಿಲಿಂಡರ್ ಗೆ 100 ರೂ ಏರಿಕೆಯಾದಂತೆ ಆಗಿದೆ. ಈ ಮೂಲಕ ಒಂದೇ ತಿಂಗಳಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 3 ಬಾರಿ ಏರಿಕೆ ಕಂಡು, ಜನಸಾಮಾನ್ಯರಿಗೆ ಅನಿಲಾಘಾತವನ್ನು ನೀಡಿದಂತೆ ಆಗಿದೆ.
ಇಂದಿನಿಂದ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 794 ರೂ. ಈ ಹಿಂದೆ ದೆಹಲಿಯಲ್ಲಿ 14.2 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆ 769 ರೂ. ಮೊದಲಿಗೆ ಫೆಬ್ರವರಿ 4ರಂದು 25 ರೂ(ಬೆಲೆ: 719 ರೂ) ಮತ್ತು ನಂತರ ಫೆಬ್ರವರಿ 14ರಂದು 50 ರೂ.ಗೆ (ಬೆಲೆ: 769 ರೂ.) ಡಿಸೆಂಬರ್ ನಿಂದ ಅಡುಗೆ ಅನಿಲ ದರವನ್ನು ಪ್ರತಿ ಸಿಲಿಂಡರ್ ಗೆ 200 ರೂ.
ಭಾರತದಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮಾಸಿಕವಾಗಿ ಪರಿಷ್ಕರಿಸಲ್ಪುತ್ತಿರುವ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ನಿರ್ಧರಿಸುವಲ್ಲಿ ವೆರಿಟೇಜಿಂಗ್ ಕೆಲಸವನ್ನು ನಿರ್ವಹಿಸಿವೆ. ಇದು ಅಂತಾರಾಷ್ಟ್ರೀಯ ಇಂಧನಗಳ ದರಗಳಿಂದ ಹೆಚ್ಚು ಪರಿಣಾಮ ಬೀರುತ್ತದೆ.
ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಗುರುವಾರದಿಂದ ಮತ್ತೆ ಪ್ರತಿ ಗೃಹಬಳಕೆಯ ಅನಿಲ ಸಿಲಿಂಡರ್ (14.2 ಕೆ.ಜಿ) ದರವನ್ನು 25 ರೂ.ನಷ್ಟು ಏರಿಕೆ ಮಾಡಿದೆ. ಈ ಮೂಲಕ ಬೆಲೆ ಏರಿಕೆಯಿಂದ ತತ್ತರಿಸಿರುವಂತ ಜನಸಾಮಾನ್ಯರಿಗೆ ದರ ಏರಿಕೆಯ ಬರೆಯನ್ನು ನೀಡಿ, ಬಿಗ್ ಶಾಕ್ ನೀಡಿದೆ.
ಇದು ಫೆಬ್ರವರಿ ತಿಂಗಳೊಂದರಲ್ಲೇ ಮೂರನೇ ಏರಿಕೆ. ದೆಹಲಿಯಲ್ಲಿ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆ ಈಗ 794 ರೂ. ಫೆಬ್ರವರಿ ತಿಂಗಳೊಂದರಲ್ಲೇ ಸಿಲಿಂಡರ್ ಮೇಲೆ 100 ರೂ ಆಗಿದೆ.
ಇದಕ್ಕೂ ಮೊದಲು ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಫೆಬ್ರವರಿ 14 ಮತ್ತು ಫೆಬ್ರವರಿ 4ರಂದು ಏರಿಸಲಾಗಿತ್ತು. ಭಾರತದ ಇತ್ತೀಚಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಡುಗೆ ಅನಿಲ ದರಗಳು ತಿಂಗಳಲ್ಲಿ ಮೂರು ಬಾರಿ ಏರಿಕೆಯಾಗಿವೆ. ಡಿಸೆಂಬರ್ ನಿಂದ ಅಡುಗೆ ಅನಿಲ ದರವನ್ನು ಪ್ರತಿ ಸಿಲಿಂಡರ್ ಗೆ 200 ರೂ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಎಲ್ ಪಿಜಿ ಬೆಲೆ ಏರಿಕೆ ಕಂಡಿದೆ.
ನೈಸರ್ಗಿಕ ಅನಿಲ ಮತ್ತು ಕಚ್ಚಾ ತೈಲ ವನ್ನು ಮರುಉತ್ಪಾದಿಸುವ ಒಂದು ಉಪ ಉತ್ಪನ್ನLPG. ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ನಿರ್ಧರಿಸುತ್ತವೆ. 2020ರ ನವೆಂಬರ್ ವರೆಗೆ ಮಾಸಿಕ ಆಧಾರದಲ್ಲಿ ಇದನ್ನು ಪರಿಷ್ಕರಿಸಲಾಗುತ್ತದೆ. ಆದರೆ, ಡಿಸೆಂಬರ್ ನಲ್ಲಿ ಒಎಂಸಿಗಳು ಎರಡು ಬಾರಿ ದರ ಏರಿಕೆ ಮಾಡಿದವು. ಎಲ್ ಪಿಜಿ ಬೆಲೆ ಅಂತಾರಾಷ್ಟ್ರೀಯ ಇಂಧನ ದರ ಗಳು ಮತ್ತು ಯುಎಸ್ ಡಾಲರ್-ರೂಪಾಯಿ ವಿನಿಮಯ ದರಗಳಂತಹ ಅಂಶಗಳನ್ನು ಅವಲಂಬಿಸಿದೆ. ಈ ಅಂಶಗಳನ್ನು ಆಧರಿಸಿ ಬೆಲೆಗಳು ಏರುತ್ತಲೇ ಇರುತ್ತದೆ ಅಥವಾ ಇಳಿಯುತ್ತಲೇ ಇರುತ್ತದೆ.
ಬಾಗಲಕೋಟೆ : ಆಸ್ತಿ ತಮ್ಮ ಹೆಸರಿಗೆ ಮಾಡಿಕೊಡದ ಸಿಟ್ಟಿನಿಂದಾಗಿ ತಂದೆ-ಮಗರಿಬ್ಬರು ಸೇರಿ ತಹಶೀಲ್ದಾರ್ ಮೇಲೆಯೇ ಸೀಮೆಎಣ್ಣೆ ಸುರಿದು, ಕೊಲೆ ಮಾಡೋದಕ್ಕೆ ಯತ್ನಿಸಿರುವಂತ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ.
2016ರಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದ ಸರ್ವೆ ನಂ.190/2ರಲ್ಲಿರುವಂತ 4 ಎಕರೆ, 16 ಗುಂಟೆ ಜಾಗವನ್ನು ತಮ್ಮ ಹೆಸರಿಗೆ ಮಾಡಿಕೊಡುವಂತೆ ರೈತ ಲಕ್ಷ್ಮಣ ಕಿತ್ತೂರು ಅರ್ಜಿ ಸಲ್ಲಿಸಿದ್ದರು. ಇಂತಹ ಅರ್ಜಿಯನ್ನು ಪರಿಶೀಲಿಸಿದ್ದಂತ ಜಮಖಂಡಿಯ ಗ್ರೇಡ್-2 ತಹಶೀಲ್ದಾರ್ ನಾಗಪ್ಪ ಬಿರಡಿ ಅವರು, ಇದು ತಮಗೆ ಬರೋದಿಲ್ಲ ಎಂಬುದಾಗಿ ಎಂಬುದಾಗಿ ಹೇಳಿ, ಅರ್ಜಿಯನ್ನು ವಜಾ ಮಾಡಿದ್ದರು.
ಇದೇ ಸಿಟ್ಟಿನಲ್ಲಿ ಫೆಬ್ರವರಿ 20ರಂದು ಜಮಖಂಡಿ ತಹಶೀಲ್ದಾರ್ ಅವರ ಕಚೇರಿಗೆ ಲಕ್ಷ್ಮಣ ಕಿತ್ತೂರು ಹಾಗೂ ಮಗ ಬಸವರಾಜ ಕಿತ್ತೂರು ಜೊತೆಗೆ ಬ್ಯಾಗ್ ನಲ್ಲಿ ಸೀಮೆ ಎಣ್ಣೆ ಇಟ್ಟಿಕೊಂಡು ತೆರಳಿದ್ದಾರೆ. ತಹಶೀಲ್ದಾರ್ ನಾಗಪ್ಪ ಬಿರಡಿ ಮೇಲೆ ದಿಢೀರ್ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಲು ಮುಂದಾದಾಗ ತಹಶೀಲ್ದಾರ್ ಕಚೇರಿಯಿಂದ ಹೊರ ಓಡಿ ಬಂದು ಪ್ರಾಣ ರಕ್ಷಣೆಗಾಗಿ ಕೋರಿಕೊಂಡಿದ್ದಾರೆ.
ಈ ಬಳಿಕ ತಹಶೀಲ್ದಾರ್ ನಾಗಪ್ಪ ಬಿರಡಿ ದೂರಿನ ಮೇಲೆ ಜಮಖಂಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತಹಶೀಲ್ದಾರ್ ಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಲು ಮುಂದಾದಂತ ರೈತ ಲಕ್ಷ್ಮಣ ಕಿತ್ತೂರು ಹಾಗೂ ಮಗ ಬಸವರಾಜ ಕಿತ್ತೂರು ವಿರುದ್ಧ ಐಪಿಸಿ ಸೆಕ್ಷನ್ 353, 307, 504, 506 ಹಾಗೂ 34 ಅಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿ, ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ರಾಜ್ಯದಲ್ಲಿ 6 ರಿಂದ 12ನೇ ತರಗತಿಯವರೆಗೆ ಪೂರ್ಣ ಪ್ರಮಾಣದ ಶಾಲೆಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿಸಿದೆ. ಈಗಾಗಲೇ ಫೆಬ್ರವರಿ 22ರಿಂದ 6 ರಿಂದ 8ನೇ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಗೊಂಡಿವೆ. ಇಂತಹ ಸಂದರ್ಭದಲ್ಲಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ವಿತರಿಸುವ ಸಂದರ್ಭದಲ್ಲಿ ಪಾಲಿಸಬೇಕಾದ ಪ್ರಮಾಣಿತ ಕಾರ್ಯಕಾರಿ ವಿಧಾನಗಳು(ಎಸ್ಓಪಿ)ಯನ್ನು ಕೂಡ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಇಂತಹ ನಿಯಮಗಳ ಪಾಲನೆಯನ್ನು ಕಡ್ಡಾಯಗೊಳಿಸಿದೆ.
ಈ ಕುರಿತಂತೆ ಕೇಂದ್ರ ಸರ್ಕಾರ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ವಿತರಿಸುವ ಸಂದರ್ಭದಲ್ಲಿ ಪಾಲಿಸಬೇಕಾದ ಪ್ರಮಾಣಿತ ಕಾರ್ಯಕಾರಿ ವಿಧಾನಗಳು(SOP) ಬಿಡುಗಡೆ ಮಾಡಿದ್ದು, ಕೋವಿಡ್-19 ಸೋಂಕು ತಡೆಗಟ್ಟುವ ಸಂದರ್ಭದಲ್ಲಿ ಶಾಲಾ ಮಕ್ಕಳಲ್ಲಿ ಪೌಷ್ಟಿಕತೆ ಹಾಗೂ ರೋಗನಿರೋಧಕ ಶಕ್ತಿ ಕಾಪಾಡಿಕೊಳ್ಳಲು ಪ್ರತಿ ರಾಜ್ಯವು ಬಿಸಿಯಾದ ಮತ್ತು ಶುಚಿ-ರುಚಿಯಿಂದ ಕೂಡಿದ ಸಿದ್ಧ ಪಡಿಸಿದ ಸುರಕ್ಷಿತ ಬಿಸಿಯೂಟವನ್ನು ಇಲ್ಲವೆ ಅದಕ್ಕೆ ಸಮನಾದ ಆಹಾರ ಭದ್ರತಾ ಭತ್ಯೆಯನ್ನು ಎಲ್ಲಾ ಫಲಾನುಭವಿ ಮಕ್ಕಳಿಗೆ ಶಾಲೆಗಳು ಮುಚ್ಚಲ್ಪಟ್ಟ ಹಾಗೂ ಬೇಸಿಗೆ ರಜಾ ಅವಧಿಯಲ್ಲಿ ನೀಡಬೇಕಾಗಿರುವುದು ಅಗತ್ಯವಿರುತ್ತದೆ.
ಈ ಹಿನ್ನಲೆಯಲ್ಲಿ ಈ ಕೆಳಕಂಡ ವಿಸ್ತೃತ ಮಾರ್ಗಸೂಚಿಯು ಪ್ರತಿಯೊಂದು ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಶಾಲಾ ಶಿಕ್ಷಣ ಮತ್ತು ಮಧ್ಯಾಹ್ನ ಉಪಹಾರ ಯೋಜನೆಯ ಅನುಷ್ಠಾನ ಮತ್ತು ಮೇಲ್ವಿಚಾರಣೆ ಮಾಡುತ್ತಿರುವ ಮುಖ್ಯಸ್ಥರಿಗೆ ಯಾವುದೇ ಸಮಸ್ಯೆಗಳಿಲ್ಲದೆ ಹಾಗೂ ಸುಲಲಿತವಾಗಿ ಮಧ್ಯಾಹ್ನ ಉಪಹಾರವನ್ನು ಸಿದ್ಧಪಡಿಸಿ, ಮಕ್ಕಳಿಗೆ ವಿತರಿಸುವ ಸಂದರ್ಭದಲ್ಲಿ ಗಮನಿಸಬೇಕಾದ ಅಂಶಗಳಾದ ಸುರಕ್ಷತೆ, ಆರೋಗ್ಯ ಮತ್ತು ನೈರ್ಮಲ್ಯ ಹಾಗೂ ಸಾಮಾಜಿಕ ಅಂತರ ಇವುಗಳಿಗೆ ಆದ್ಯ ಗಮನ ಹರಿಸಿ, ಈ ಕೆಳಕಂಡ ಪ್ರಮಾಣಿತ ಕಾರ್ಯಕಾರಿ ವಿಧಾನಗಳನ್ನು ಅನುಸರಿಸೋದು ಕಡ್ಡಾಯಗೊಳಿಸಿದೆ.
ಮೈಸೂರು : ನಿನ್ನೆ ನಡೆದಂತ ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನದ ಆಯ್ಕೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದವು. ಇದರಿಂದಾಗಿ ಬಿಜೆಪಿಗೆ ಬಿಗ್ ಶಾಕ್ ನೀಡಲಾಗಿತ್ತು. ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ನ ರುಕ್ಮಿಣಿ ಮೇಯರ್ ಆಗಿ ಆಯ್ಕೆಗೊಂಡರೇ, ಜೆಡಿಎಸ್ ಬೆಂಬಲದೊಂದಿಗೆ ಕಾಂಗ್ರೆಸ್ ನ ಅನ್ವರ್ ಬೇಗ್ ಉಪ ಮೇಯರ್ ಆಗಿ ಆಯ್ಕೆಗೊಂಡಿ, ಬಿಜೆಪಿಗೆ ಶಾಕ್ ನೀಡಲಾಗಿತ್ತು. ಹೀಗಾಗಿ ಬಿಜೆಪಿಗೆ ಮೈಸೂರು ಮೇಯರ್ ಸ್ಥಾನ ಸಿಗದ ಹಿನ್ನಲೆ, ಇದೀಗ ಪಾಲಿಕೆ ಸದಸ್ಯೆ ಸ್ಥಾನಕ್ಕೆ ಬಿಜೆಪಿ ಸದಸ್ಯೆ ರಾಜೀನಾಮೆಗೆ ಮುಂದಾಗಿದ್ದಾರೆ.
ಈ ಕುರಿತಂತೆ ಮೈಸೂರಿನ ಕುವೆಂಪುನಗರ ವಾರ್ಡ್ ನಂ.59ರ ಸದಸ್ಯೆ ಸುನಂದಾ ಪಾಲನೇತ್ರಾ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ಬಿಜೆಪಿಗೆ ಪಾಲಿಕೆ ಮೇಯರ್ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡು, ರಾಜೀನಾಮೆಗೆ ಮುಂದಾಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಈ ಬಗ್ಗೆ ಮಾರ್ಗದರ್ಶನ ನೀಡುವಂತೆಯೂ ಸಿಎಂಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ವಿಜಯನಗರ : ಪ್ರತಿ ವರ್ಷದಂತೆ ಈ ವರ್ಷವೂ ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವವನ್ನು ಮಾರ್ಚ್ 7ರಂದು ನಡೆಸಲು ಜಿಲ್ಲಾಡಳಿತ ನಿರ್ಧರಿಸಿತ್ತು. ಆದ್ರೇ ಕೊರೋನಾ ಎರಡನೇ ಅಲೆಯ ಭೀತಿಯ ಹಿನ್ನಲೆಯಲ್ಲಿ ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವ ರದ್ದು ಪಡಿಸಲಾಗಿದೆ.
ವಿಜಯನಗರ ಜಿಲ್ಲೆಯ ಪ್ರಸಿದ್ಧ ರಥೋತ್ಸವಗಳಲ್ಲಿ ಒಂದು, ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವ ಆಗಿದೆ. ಇಂತಹ ರಥೋತ್ಸವವನ್ನು ಕೊರೋನಾ ಸೋಂಕಿನ ಭೀತಿಯ ನಡುವೆಯೂ ಮಾರ್ಚ್ 7ರಂದು ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಕೂಡ ಮಾಡಿಕೊಂಡಿತ್ತು.
ಆದ್ರೇ ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಭೀತಿ ಆರಂಭಗೊಂಡಿರುವ ಕಾರಣ, ರಥೋತ್ಸವಕ್ಕೆ ಆರೋಗ್ಯ ಇಲಾಖೆ ಬ್ರೇಕ್ ಹಾಕಿದೆ. ಈ ಹಿನ್ನಲೆಯಲ್ಲಿ ಮಾರ್ಚ್ 7ರಂದು ನಡೆಸಲು ನಿರ್ಧರಿಸಿದ್ದಂತ ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವವನ್ನು ಜಿಲ್ಲಾಡಳಿತ ರದ್ದು ಪಡಿಸಿದೆ. ಅಲ್ಲದೇ ಪೂಜಾ ಕೈಂಕರ್ಯಗಳಿಗೆ ಮಾತ್ರವೇ ಅವಕಾಶ ನೀಡಿದೆ.
ಬೆಂಗಳೂರು : ಫೆಬ್ರವರಿ 28ರ, ಭಾನುವಾರದಂದು ಈಗಾಗಲೇ ಮುಂದೂಡಿಕೆಯಾಗಿದ್ದಂತ ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಇಂತಹ ಪರೀಕ್ಷೆಗೆ ಹಳೆಯ ಪ್ರವೇಶ ಪತ್ರ ರದ್ದು ಪಡಿಸಲಾಗಿದ್ದು, ಹೊಸ ಪ್ರವೇಶ ಪತ್ರ ಡೌನ್ ಲೋಡ್ ಗೆ ಕೆಪಿಎಸ್ಸಿ ಅನುಮತಿಸಿದೆ. ಇದೇ ಸಂದರ್ಭದಲ್ಲಿ ಪರೀಕ್ಷೆಗೆ ಹಾಜರಾಗುತ್ತಿರುವಂತ ಅಭ್ಯರ್ಥಿಗಳು ಪಾಲಿಸಬೇಕಾದಂತ ಸೂಚನೆಗಳನ್ನು ಕರ್ನಾಟಕ ಲೋಕಸೇವಾ ಆಯೋಗವು ತಿಳಿಸಿದೆ. ಅಂತಹ ಅಭ್ಯರ್ಥಿಗಳ ಸೂಚನೆಗಳು ಈ ಕೆಳಗಿನಂತಿವೆ.
ಎಫ್.ಡಿ.ಎ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುತ್ತಿರುವಂತ ಅಭ್ಯರ್ಥಿಗಳು ಇತ್ತೀಚೆಗೆ ಬಸ್, ರೈಲು, ಇತ್ಯಾದಿ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ನಿಗದಿತ ಸಮಯಕ್ಕಿಂತ ಮೊದಲು ಪರೀಕ್ಷಾ ಕೇಂದ್ರವನ್ನು ತಲುಪಲು, ಅಭ್ಯರ್ಥಿಗಳು ಹೆಚ್ಚಿನ ಮುನ್ನೆಚ್ಚರಿಕೆಯಿಂದ ವ್ಯವಸ್ಥೆಯನ್ನು ಮಾಡಿಕೊಳ್ಳುವುದು ಸೂಕ್ತ
ಅಭ್ಯರ್ಥಿಗಳು ಪರೀಕ್ಷೆಯ ಮೊದನೆಯ ಬೆಲ್ ಆಗುವ ಕನಿಷ್ಟ ಎರಡು ಗಂಟೆಯ ಮೊದಲು ಪರೀಕ್ಷಾ ಕೇಂದ್ರದ ಆವರಣದಲ್ಲಿ ಹಾಜರಿರಬೇಕು
ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಅನ್ನು ಕ್ರಮ ಬದ್ಧವಾಗಿ ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಪರೀಕ್ಷಾ ಕೇಂದ್ರದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು
ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮ್ಯಾಥಮ್ಯಾಟಿಕಲ್ ಟೇಬಲ್ಸ್, ಸ್ಟೈಡ್ ರೋಲ್ಸ್, ಕ್ಯಾಲುಕುಲೇಟರ್, ಪೇಜರ್, ಮೊಬೈಲ್ ಪೋನ್, ಬ್ಲೂಟೂತ್, ಮಾರ್ಕರ್ಸ್, ವೈಟ್ ಪ್ಲೂಯಿಡ್, ವೈರ್ ಲೆಸ್ ಸೆಟ್ಸ್ ಇತ್ಯಾದಿಗಳನ್ನು ತರುವುದನ್ನು ನಿಷೇಧಿಸಾಗಿದೆ.
ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು, ತೆಗೆದುಕೊಂಡು ಹೋಗುವಂತಿಲ್ಲ. ವಿವಿಧ ಸಮಯಗಳಲ್ಲಿ ಬಾರಿಸುವ ಎಚ್ಚರಿಕೆಯ ಗಂಟೆಗಳ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಚುರ ಪಡಿಸಿರುವ ಬೆಲ್ ಸಮಯವನ್ನು ನೋಡುವುದು.
ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ ಮೊದಲನೆಯ ಬೆಲ್ ಆದ ತಕ್ಷಣ ಅಂದರೆ ಮಧ್ಯಾಹ್ನ 2 ನಂತರ ಪರೀಕ್ಷಾ ಕೊಠಡಿಯನ್ನು ಪ್ರವೇಶಿಸಿ ತಮ್ಮ ನಿಗದಿತ ಆಸನಗಳಲ್ಲಿ ಕುಳಿತುಕೊಳ್ಳಬೇಕು.
ಮೂರನೆಯ ಬೆಲ್ ಅಂದರೆ ಮಧ್ಯಾಹ್ನ 2.30 ಆದ ನಂತ್ರ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯನ್ನು ಪ್ರವೇಶಿಸಲು ಅನಮತಿ ನೀಡಲಾಗುವುದಿಲ್ಲ.
ಓಎಂಆರ್ ಉತ್ತರ ಪತ್ರಿಕೆಯಲ್ಲಿ ಅಭ್ಯರ್ಥಿಯ ರೋಲ್ ನಂಬರ್, ಅಭ್ಯರ್ಥಿಯ ಹೆಸರು ಮತ್ತು ಪ್ರಶ್ನೆ ಪತ್ರಿಕೆಯ ವರ್ಷನ್ ಕೋಡ್ ಅನ್ನು ಮುದ್ರಿಸಲಾಗಿರುತ್ತದೆ. ಆದ್ದರಿಂದ ಅಭ್ಯರ್ಥಿಗಳು ಕೊಠಡಿಯ ಮೇಲ್ವಿಚಾರಕು ತಮಗೆ ನೀಡುವ ಉತ್ತರ ಪತ್ರಿಕೆಯಲ್ಲಿ ಮುದ್ರಿತವಾಗಿರುವ ರೋಲ್ ನಂಬರ್, ಹೆಸರು ಹಾಗೂ ಪ್ರವೇಶ ಪತ್ರದಲ್ಲಿ ಮುತ್ರಿತವಾಗಿರುವ ರೋಲ್ ನಂಬರ್ ಒಂದೇ ಆಗಿದ್ಯಾ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ಜೊತೆಗೆ ನಿಮಗೆ ನೀಡುವ ಪ್ರಶ್ನೆ ಪತ್ರಿಕೆ ಮತ್ತು ಓಎಂಆರ್ ಉತ್ತರ ಪತ್ರಿಕೆಯ ವರ್ಷನ್ ಕೋಡ್ ಒಂದೇ ಆಗಿದ್ಯಾ ಅಂತ ಖಾತ್ರಿ ಪಡಿಸಿಕೊಳ್ಳುವುದು.
ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆಯ ವರ್ಷನ್ ಕೋಡ್, ಕ್ರಮ ಸಂಖ್ಯೆಯನ್ನು ನಾಮಿನಲ್ ರೋಲ್ ನಲ್ಲಿ ಬರೆಯಬೇಕು
ಪರೀಕ್ಷೆಯ ನಿಗದಿತ ಸಮಯ ಮುಗಿಯುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ನೀಡಲಾಗುವುದಿಲ್ಲ.(ಕೊನೆಯ ಬೆಲ್ ಅಂದರೆ ಸಂಜೆ 4.30 ಆಗುವವರೆಗೂ)
ಅಭ್ಯರ್ಥಿಗಳು ನೀಲಿ ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್ ಅನ್ನು ಮಾತ್ರ ಓಎಂಆರ್ ಉತ್ತರ ಪತ್ರಿಕೆಯಲ್ಲಿ ಉತ್ತರಿಸಲು ಬಳಸಬೇಕು.
ಪ್ರವೇಶ ಪತ್ರದಲ್ಲಿ ಮುದ್ರಿಸಿರುವ ಪರೀಕ್ಷಾ ಕೇಂದ್ರದಲ್ಲಿಯೇ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು.
ಪರೀಕ್ಷಾ ದಿನದಂದು ಒಂದು ವೇಳೆ ಅಭ್ಯರ್ಥಿಗೆ ಕೆಮ್ಮು ಅಥವಾ ನೆಗಡಿ ಅಥವಾ ಜ್ವರ ಇದ್ದರೇ, ಪರೀಕ್ಷಾ ಕೇಂದ್ರದ ಉಪ ಮುಖ್ಯಸ್ಥರಿಗೆ ತಿಳಿಸುವುದು.
ಓಎಂಆರ್ ಉತ್ತರ ಪತ್ರಿಕೆಯ ಕೆಳಭಾಗದಲ್ಲಿ ನಿಗದಿಪಡಿಸಿರುವ ಸ್ಥಳದಲ್ಲಿ ಅಭ್ಯರ್ಥಿಗಳು ಸಹಿ ಮಾಡಬೇಕು.
ಬೆಂಗಳೂರು : ಫೆಬ್ರವರಿ 28ರ, ಭಾನುವಾರದಂದು ಈಗಾಗಲೇ ಮುಂದೂಡಿಕೆಯಾಗಿದ್ದಂತ ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಇಂತಹ ಪರೀಕ್ಷೆಗೆ ಹಳೆಯ ಪ್ರವೇಶ ಪತ್ರ ರದ್ದು ಪಡಿಸಲಾಗಿದ್ದು, ಹೊಸ ಪ್ರವೇಶ ಪತ್ರ ಡೌನ್ ಲೋಡ್ ಗೆ ಕೆಪಿಎಸ್ಸಿ ಅನುಮತಿಸಿದೆ. ಇದೇ ಸಂದರ್ಭದಲ್ಲಿ ಪರೀಕ್ಷೆಗೆ ಹಾಜರಾಗುತ್ತಿರುವಂತ ಅಭ್ಯರ್ಥಿಗಳು ಪಾಲಿಸಬೇಕಾದಂತ ಸೂಚನೆಗಳನ್ನು ಕರ್ನಾಟಕ ಲೋಕಸೇವಾ ಆಯೋಗವು ತಿಳಿಸಿದೆ. ಅಂತಹ ಅಭ್ಯರ್ಥಿಗಳ ಸೂಚನೆಗಳು ಈ ಕೆಳಗಿನಂತಿವೆ.
ಎಫ್.ಡಿ.ಎ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುತ್ತಿರುವಂತ ಅಭ್ಯರ್ಥಿಗಳು ಇತ್ತೀಚೆಗೆ ಬಸ್, ರೈಲು, ಇತ್ಯಾದಿ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ನಿಗದಿತ ಸಮಯಕ್ಕಿಂತ ಮೊದಲು ಪರೀಕ್ಷಾ ಕೇಂದ್ರವನ್ನು ತಲುಪಲು, ಅಭ್ಯರ್ಥಿಗಳು ಹೆಚ್ಚಿನ ಮುನ್ನೆಚ್ಚರಿಕೆಯಿಂದ ವ್ಯವಸ್ಥೆಯನ್ನು ಮಾಡಿಕೊಳ್ಳುವುದು ಸೂಕ್ತ
ಅಭ್ಯರ್ಥಿಗಳು ಪರೀಕ್ಷೆಯ ಮೊದನೆಯ ಬೆಲ್ ಆಗುವ ಕನಿಷ್ಟ ಎರಡು ಗಂಟೆಯ ಮೊದಲು ಪರೀಕ್ಷಾ ಕೇಂದ್ರದ ಆವರಣದಲ್ಲಿ ಹಾಜರಿರಬೇಕು
ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಅನ್ನು ಕ್ರಮ ಬದ್ಧವಾಗಿ ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಪರೀಕ್ಷಾ ಕೇಂದ್ರದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು
ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮ್ಯಾಥಮ್ಯಾಟಿಕಲ್ ಟೇಬಲ್ಸ್, ಸ್ಟೈಡ್ ರೋಲ್ಸ್, ಕ್ಯಾಲುಕುಲೇಟರ್, ಪೇಜರ್, ಮೊಬೈಲ್ ಪೋನ್, ಬ್ಲೂಟೂತ್, ಮಾರ್ಕರ್ಸ್, ವೈಟ್ ಪ್ಲೂಯಿಡ್, ವೈರ್ ಲೆಸ್ ಸೆಟ್ಸ್ ಇತ್ಯಾದಿಗಳನ್ನು ತರುವುದನ್ನು ನಿಷೇಧಿಸಾಗಿದೆ.
ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು, ತೆಗೆದುಕೊಂಡು ಹೋಗುವಂತಿಲ್ಲ. ವಿವಿಧ ಸಮಯಗಳಲ್ಲಿ ಬಾರಿಸುವ ಎಚ್ಚರಿಕೆಯ ಗಂಟೆಗಳ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಚುರ ಪಡಿಸಿರುವ ಬೆಲ್ ಸಮಯವನ್ನು ನೋಡುವುದು.
ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ ಮೊದಲನೆಯ ಬೆಲ್ ಆದ ತಕ್ಷಣ ಅಂದರೆ ಮಧ್ಯಾಹ್ನ 2 ನಂತರ ಪರೀಕ್ಷಾ ಕೊಠಡಿಯನ್ನು ಪ್ರವೇಶಿಸಿ ತಮ್ಮ ನಿಗದಿತ ಆಸನಗಳಲ್ಲಿ ಕುಳಿತುಕೊಳ್ಳಬೇಕು.
ಮೂರನೆಯ ಬೆಲ್ ಅಂದರೆ ಮಧ್ಯಾಹ್ನ 2.30 ಆದ ನಂತ್ರ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯನ್ನು ಪ್ರವೇಶಿಸಲು ಅನಮತಿ ನೀಡಲಾಗುವುದಿಲ್ಲ.
ಓಎಂಆರ್ ಉತ್ತರ ಪತ್ರಿಕೆಯಲ್ಲಿ ಅಭ್ಯರ್ಥಿಯ ರೋಲ್ ನಂಬರ್, ಅಭ್ಯರ್ಥಿಯ ಹೆಸರು ಮತ್ತು ಪ್ರಶ್ನೆ ಪತ್ರಿಕೆಯ ವರ್ಷನ್ ಕೋಡ್ ಅನ್ನು ಮುದ್ರಿಸಲಾಗಿರುತ್ತದೆ. ಆದ್ದರಿಂದ ಅಭ್ಯರ್ಥಿಗಳು ಕೊಠಡಿಯ ಮೇಲ್ವಿಚಾರಕು ತಮಗೆ ನೀಡುವ ಉತ್ತರ ಪತ್ರಿಕೆಯಲ್ಲಿ ಮುದ್ರಿತವಾಗಿರುವ ರೋಲ್ ನಂಬರ್, ಹೆಸರು ಹಾಗೂ ಪ್ರವೇಶ ಪತ್ರದಲ್ಲಿ ಮುತ್ರಿತವಾಗಿರುವ ರೋಲ್ ನಂಬರ್ ಒಂದೇ ಆಗಿದ್ಯಾ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ಜೊತೆಗೆ ನಿಮಗೆ ನೀಡುವ ಪ್ರಶ್ನೆ ಪತ್ರಿಕೆ ಮತ್ತು ಓಎಂಆರ್ ಉತ್ತರ ಪತ್ರಿಕೆಯ ವರ್ಷನ್ ಕೋಡ್ ಒಂದೇ ಆಗಿದ್ಯಾ ಅಂತ ಖಾತ್ರಿ ಪಡಿಸಿಕೊಳ್ಳುವುದು.
ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆಯ ವರ್ಷನ್ ಕೋಡ್, ಕ್ರಮ ಸಂಖ್ಯೆಯನ್ನು ನಾಮಿನಲ್ ರೋಲ್ ನಲ್ಲಿ ಬರೆಯಬೇಕು
ಪರೀಕ್ಷೆಯ ನಿಗದಿತ ಸಮಯ ಮುಗಿಯುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ನೀಡಲಾಗುವುದಿಲ್ಲ.(ಕೊನೆಯ ಬೆಲ್ ಅಂದರೆ ಸಂಜೆ 4.30 ಆಗುವವರೆಗೂ)
ಅಭ್ಯರ್ಥಿಗಳು ನೀಲಿ ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್ ಅನ್ನು ಮಾತ್ರ ಓಎಂಆರ್ ಉತ್ತರ ಪತ್ರಿಕೆಯಲ್ಲಿ ಉತ್ತರಿಸಲು ಬಳಸಬೇಕು.
ಪ್ರವೇಶ ಪತ್ರದಲ್ಲಿ ಮುದ್ರಿಸಿರುವ ಪರೀಕ್ಷಾ ಕೇಂದ್ರದಲ್ಲಿಯೇ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು.
ಪರೀಕ್ಷಾ ದಿನದಂದು ಒಂದು ವೇಳೆ ಅಭ್ಯರ್ಥಿಗೆ ಕೆಮ್ಮು ಅಥವಾ ನೆಗಡಿ ಅಥವಾ ಜ್ವರ ಇದ್ದರೇ, ಪರೀಕ್ಷಾ ಕೇಂದ್ರದ ಉಪ ಮುಖ್ಯಸ್ಥರಿಗೆ ತಿಳಿಸುವುದು.
ಓಎಂಆರ್ ಉತ್ತರ ಪತ್ರಿಕೆಯ ಕೆಳಭಾಗದಲ್ಲಿ ನಿಗದಿಪಡಿಸಿರುವ ಸ್ಥಳದಲ್ಲಿ ಅಭ್ಯರ್ಥಿಗಳು ಸಹಿ ಮಾಡಬೇಕು.
ಪಶ್ಚಿಮ ಬಂಗಾಳ : ವಿಧಾನಸಭೆ ಚುನಾವಣೆಗೂ ಮುನ್ನ ಮಾಜಿ ಕ್ರಿಕೆಟಿಗ ಅಶೋಕ್ ದಿಂಡ ಅವರು ಬುಧವಾರ ಕೋಲ್ಕತಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರ್ಜುನ್ ಸಿಂಗ್ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿ ಸೇರಿದರು.
ಫೆಬ್ರವರಿ 2ರಂದು ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ ದಿನಾ, 36 ವರ್ಷದ ವೇಗದ ಬೌಲರ್ ಅಲ್ಪಕಾಲೀನ ಅಂತಾರಾಷ್ಟ್ರೀಯ ವೃತ್ತಿಜೀವನ ಹೊಂದಿದ್ದರೂ, ದೇಶೀಯ ಕ್ರಿಕೆಟ್ ನಲ್ಲಿ ಬಂಗಾಳಕ್ಕಾಗಿ ನೀಡಿದ ಕೊಡುಗೆ ಅಪಾರ.
ಬಂಗಾಳ ಪರ 116 ಪ್ರಥಮ ದರ್ಜೆ ಪಂದ್ಯಗಳನ್ನಾಡಿರುವ ಡಿಂಡಾ 28.28 ರ ಬೌಲಿಂಗ್ ಸರಾಸರಿಯಲ್ಲಿ 420 ವಿಕೆಟ್ ಗಳನ್ನು ಕಬಳಿಸಿದ್ದಾರೆ. ಲಿಸ್ಟ್ ಎ ಪಂದ್ಯಗಳಲ್ಲಿ ಅವರು ತಮ್ಮ ವೃತ್ತಿ ಜೀವನದಲ್ಲಿ 151 ವಿಕೆಟ್ ಗಳನ್ನು ಕಬಳಿಸಿ98 ಪಂದ್ಯಗಳನ್ನು ಆಡಿದ್ದರು.
ತಮ್ಮ ಅಂತಾರಾಷ್ಟ್ರೀಯ ವೃತ್ತಿ ಜೀವನದಲ್ಲಿ 13 ಏಕದಿನ ಮತ್ತು 9 ಟಿ20 ಪಂದ್ಯಗಳನ್ನು ಆಡಿರುವ ಅವರು ಕ್ರಮವಾಗಿ 12 ಮತ್ತು 17 ವಿಕೆಟ್ ಗಳನ್ನು ಕಬಳಿಸಿದ್ದಾರೆ.
ಕಳೆದ ವಾರ ಪಶ್ಚಿಮ ಬಂಗಾಳ ಬಿಜೆಪಿ ವೀಕ್ಷಕ ಕೈಲಾಶ್ ವಿಜಯ ವರ್ಗೀಯ, ಬಿಜೆಪಿ ರಾಜ್ಯಸಭಾ ಸಂಸದ ಸ್ವಪನ್ ದಾಸ್ ಗುಪ್ತಾ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಅವರ ಸಮ್ಮುಖದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಜನಪ್ರಿಯ ಬಂಗಾಳಿ ನಟ ಯಶ್ ದಾಸ್ ಗುಪ್ತಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಚುನಾವಣೆ ಸಮೀಪಿಸುತ್ತಿರುವಂತೆಯೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅವರನ್ನು ಸೋಲಿಸುವ ಎಲ್ಲಾ ತಂತ್ರಗಾರಿಕೆಯನ್ನು ಹೆಣೆಯುತ್ತಿದೆ.
ಇತ್ತೀಚೆಗೆ ಟಿಎಂಸಿಯಿಂದ ಹೊರನಡೆದಿದ್ದಂತ ಟಿಎಂಸಿಯ ಮಾಜಿ ಹೆವಿವೇಟ್ ಸುವೇಂದು ಅಧಿಕಾರಿ, ಮಾಜಿ ಅರಣ್ಯ ಸಚಿವ ರಜಿಬ್ ಬ್ಯಾನರ್ಜಿ, ಮಾಜಿ ಕ್ರಿಕೆಟ್ ಆಡಳಿತಗಾರ ಜಗಮೋಹನ್ ದಾಲ್ಮಿಯಾ ಅವರ ಪುತ್ರಿ ಬೈಶಾಲಿ ದಾಲ್ಮಿಯಾ, ಹೌರಾ ಮಾಜಿ ಮೇಯರ್ ರತಿನ್ ಚಕ್ರವರ್ತಿ, ಮಾಜಿ ಶಾಸಕ ಹಾಗೂ ರಾಣಾಘಾಟ್ ನ ಮಾಜಿ ಮುಖ್ಯಸ್ಥ ಪಾರ್ಥ ಸಾರಥಿ ಚಟರ್ಜಿ ಮತ್ತು ನಟ ಟಿಎಂಸಿ ಯ ರಾಜಕಾರಣಿ ರುದ್ನಿನಿಲ್ ಘೋಷ್ ಕೇಸರಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರು : ಸಮಯ ಸಂದರ್ಭ ವಿಷಘಳಿಗೆ ಪ್ರೀತಿ ವಿಶ್ವಾಸಕ್ಕೆ ತಾತ್ಕಾಲಿಕ ಸಮಸ್ಯ! ವೈಶಾಲ್ಯತೆ ಚಿಂತನೆ ಹೃದಯ ಇದ್ದಾಗ ಅಪನಂಬಿಕೆ ಮೋಡ ಸರಿದು ಮತ್ತೆ ಸೂರ್ಯ ಪ್ರಜ್ವಲಿಸುತ್ತಾನೆ! ಕನ್ನಡಕ್ಕೆ ಒಗ್ಗಟ್ಟಿರಲಿ! ಧನ್ಯವಾದ ದರ್ಶನ್, ಮನಸ್ಸು ಹಗುರವಾಯಿತು.. ಧನ್ಯವಾದ ಮಾಧ್ಯಮಮಿತ್ರರಿಗೆ, ಧನ್ಯವಾದ ಕನ್ನಡದ ಮನಗಳಿಗೆ, ಇನ್ನೆಂದು ಇಂಥ ದಿನ ಬರದಿರಲಿ ಎಂಬುದಾಗಿ ನಟ ಜಗ್ಗೇಶ್ ಕ್ಷಮೆ ಕೋರಿದಂತ ನಟ ದರ್ಶನ್ ಗೆ ಧನ್ಯವಾದ ಅರ್ಪಿಸಿದ್ದಾರೆ.
ನಟ ಜಗ್ಗೇಶ್ ಆಡಿಯೋ ಇಟ್ಟುಕೊಂಡು ನಟ ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತ ಪಡಿಸಿದಂತ ಪ್ರಕರಣ ದಿನದಿಂದ ದಿನಕ್ಕೆ ಬಿಗ್ ಟ್ವಿಸ್ಟ್ ಪಡೆಯುತ್ತಿತ್ತು. ನಟ ಜಗ್ಗೇಶ್ ದರ್ಶನ್ ಅಭಿಮಾನಿಗಳು, ದರ್ಶನ್ ಬಗ್ಗೆ ವಾಗ್ದಾಳಿ ನಡೆಸಿದ್ದರು. ಇಂತಹ ಸಂದರ್ಭದಲ್ಲೇ ನಟ ದರ್ಶನ್ ಘಟನೆಯ ಕುರಿತಂತೆ ನಟ ಜಗ್ಗೇಶ್ ಗೆ ಅಭಿಮಾನಿಗಳ ಪರವಾಗಿ ಕ್ಷಮೆ ಕೇಳಿದ್ದರು.
ಈ ಕುರಿತಂತೆ ಟ್ವಿಟ್ ಮಾಡಿರುವಂತ ನಟ ಜಗ್ಗೇಶ್, ಸಮಯ ಸಂದರ್ಭ ವಿಷಘಳಿಗೆ ಪ್ರೀತಿ ವಿಶ್ವಾಸಕ್ಕೆ ತಾತ್ಕಾಲಿಕ ಸಮಸ್ಯ! ವೈಶಾಲ್ಯತೆ ಚಿಂತನೆ ಹೃದಯ ಇದ್ದಾಗ ಅಪನಂಬಿಕೆ ಮೋಡ ಸರಿದು ಮತ್ತೆ ಸೂರ್ಯ ಪ್ರಜ್ವಲಿಸುತ್ತಾನೆ! ಕನ್ನಡಕ್ಕೆ ಒಗ್ಗಟ್ಟಿರಲಿ! ಧನ್ಯವಾದ ದರ್ಶನ್, ಮನಸ್ಸು ಹಗುರವಾಯಿತು.. ಧನ್ಯವಾದ ಮಾಧ್ಯಮಮಿತ್ರರಿಗೆ. ಧನ್ಯವಾದ ಕನ್ನಡದ ಮನಗಳಿಗೆ. ಇನ್ನೆಂದು ಇಂಥ ದಿನ ಬರದಿರಲಿ ಎಂಬುದಾಗಿ ನಟ ಜಗ್ಗೇಶ್ ಕ್ಷಮೆ ಕೋರಿದಂತ ನಟ ದರ್ಶನ್ ಗೆ ಧನ್ಯವಾದ ಅರ್ಪಿಸಿದ್ದಾರೆ.
ಸಮಯ ಸಂದರ್ಭ ವಿಷಘಳಿಗೆ ಪ್ರೀತಿ ವಿಶ್ವಾಸಕ್ಕೆ ತಾತ್ಕಾಲಿಕ ಸಮಸ್ಯ! ವೈಶಾಲ್ಯತೆ ಚಿಂತನೆ ಹೃದಯ ಇದ್ದಾಗ ಅಪನಂಬಿಕೆ ಮೋಡ ಸರಿದು ಮತ್ತೆ ಸೂರ್ಯ ಪ್ರಜ್ವಲಿಸುತ್ತಾನೆ! ಕನ್ನಡಕ್ಕೆ ಒಗ್ಗಟ್ಟಿರಲಿ! ಧನ್ಯವಾದ @dasadarshan ಮನಸ್ಸು ಹಗುರವಾಯಿತು.. ಧನ್ಯವಾದ ಮಾಧ್ಯಮಮಿತ್ರರಿಗೆ. ಧನ್ಯವಾದ ಕನ್ನಡದ ಮನಗಳಿಗೆ. ಇನ್ನೆಂದು ಇಂಥ ದಿನ ಬರದಿರಲಿ🙏 pic.twitter.com/1rJQSYsiRr
ಬೆಂಗಳೂರು : ಕುರಿಗಾಹಿಗಳಿಗೆ ಆರ್ಥಿಕ ಅನುಕೂಲ ಆಗುವ ಅನುಗ್ರಹ ಯೋಜನೆಯನ್ನು ಮತ್ತೆ ಜಾರಿಗೆ ತರಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವಂತ ಮಾಜಿ ಸಿಎಂ ಸಿದ್ದರಾಮಯ್ಯ, ಕುರಿಗಾಹಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವಧಿಯಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ವಿಷಮೇವು ತಿಂದು ಅಥವಾ ಇನ್ನಿತರ ಕಾರಣಗಳಿಂದಾಗಿ ಆಕಸ್ಮಿಕವಾಗಿ ಕುರಿಗಳು ಹಾಗೂ ಇತರ ಜಾನುವಾರುಗಳು ಸತ್ತಾಗ ಪಶುಪಾಲಕರಿಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಯೋಜನೆ ಜಾರಿಗೊಳಿಸಲಾಗಿತ್ತು. ಆದರೆ ಇದೀಗ ಈ ಯೋಜನೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.
ಈ ನಿಟ್ಟಿನಲ್ಲಿ ಇದೀಗ ಮತ್ತೆ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಮತ್ತೆ ಪತ್ರ ಬರೆದಿದ್ದಾರೆ. ಶಿರಾ ತಾಲೂಕಿನ ಕುಂಟನ ಹಟ್ಟಿ ಎಂಬಲ್ಲಿ ಗ್ರಾಮದ ಚಿತ್ತಣ್ಣ ಎಂಬುವವರಿಗೆ ಸೇರಿದ ಸುಮಾರು 200 ಕುರಿಗಳು ವಿಷಕಾರಿ ಮೇವು ತಿಂದು ಸಾವನ್ನಪ್ಪಿದೆ.
ರಾಜ್ಯದ ಉದ್ದಗಳಕ್ಕೂ ಪದೇ ಪದೇ ಇಂತಹ ದುರಂತಗಳು ನಡೆಯುತ್ತಿರುತ್ತವೆ. ಈ ನಿಟ್ಟಿನಲ್ಲಿ ಆಕಸ್ಮಿಕವಾಗಿ ಮರಣ ಹೊಂದಿದ ಕುರಿ, ಮೇಕೆ, ಹಸು, ಎಮ್ಮೆಗಳಿಗೆ ಈ ಹಿಂದೆ ನೀಡುತ್ತಿದ್ದ ಹಾಗೆ 5000 ರಿಂದ 10,000 ರೂಪಾಯಿ ಪರಿಹಾರ ನೀಡುವಂತೆ ಪತ್ರದ ಮೂಲಕ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.
ಬೆಂಗಳೂರು : ಪೂರ್ವದ ಯೋಗ, ಅಧ್ಯಾತ್ಮ ಹಾಗೂ ಪಶ್ಚಿಮದ ಆಧುನಿಕ ವಿಜ್ಞಾನವನ್ನು ಬಳಸಿಕೊಂಡು ಉತ್ತಮ ಆರೋಗ್ಯ ವ್ಯವಸ್ಥೆ ನಿರ್ಮಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಎಸ್-ವ್ಯಾಸ ವಿಶ್ವವಿದ್ಯಾಲಯದಲ್ಲಿ ಶ್ರೀ ಯೋಗದಕ್ಷಿಣಾಮೂರ್ತಿ ದೇವಸ್ಥಾನ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೂರ್ವದ ರಾಷ್ಟ್ರದಲ್ಲಿ ಯೋಗ, ಅಧ್ಯಾತ್ಮವಿದೆ. ಪಶ್ಚಿಮದ ರಾಷ್ಟ್ರಗಳಲ್ಲಿ ಆಧುನಿಕ ವಿಜ್ಞಾನವಿದೆ. ಇವೆರಡನ್ನೂ ಒಂದುಗೂಡಿಸಿ ಉತ್ತಮ ಆರೋಗ್ಯ ವ್ಯವಸ್ಥೆ ಕಲ್ಪಿಸಬೇಕಿದೆ. ಸ್ವಾಮಿ ವಿವೇಕಾನಂದರ ಆಶಯಗಳನ್ನು ಈ ಕಾಲೇಜು ಈಡೇರಿಸುತ್ತಿದೆ. ಸುಶ್ರುತ, ಚರಕ ಮೊದಲಾದವರ ಪುರಾತನ ಜ್ಞಾನವನ್ನು ಬಳಸಿಕೊಂಡು ಹೊಸದಾಗಿ ಆವಿಷ್ಕಾರ ಮಾಡುವ ನಿಟ್ಟಿನಲ್ಲಿ ಪ್ರಯೋಗಗಳು ನಡೆಯಬೇಕು ಎಂದು ಸಲಹೆ ನೀಡಿದರು.
ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರಯೋಗವೊಂದರಲ್ಲಿ 80% ಜನರು ಹಣ ಸಂಗ್ರಹಿಸಿದರೆ ಹೆಚ್ಚು ಸಂತೋಷವಾಗಿರುತ್ತೇವೆ ಎಂದರು. ಇನ್ನೂ ಕೆಲವರು ಹೆಸರು ಮಾಡಿದರೆ ಸಂತಸವಾಗಿರುತ್ತೇವೆ ಎಂದರು. ಶ್ರೀಮಂತರನ್ನು ವಿಚಾರಿಸಿದಾಗ ಅವರೆಲ್ಲರೂ ಸರಿಯಾಗಿ ನಿದ್ದೆ ಮಾಡುತ್ತಿಲ್ಲ, ನೆಮ್ಮದಿಯಿಂದ ಬದುಕುತ್ತಿಲ್ಲ ಎಂದು ತಿಳಿದುಬಂತು. ಸಂಪತ್ತು ಒಂದು ವಸ್ತುವೇ ಹೊರತು ಅದೇ ನಮ್ಮ ಜೀವನವನ್ನು ಆಳಬಾರದು. ಈ ಸೂಕ್ಷ್ಮವನ್ನು ತಿಳಿಯಲು ಯೋಗ, ಏಕತೆಯ ಬಗ್ಗೆ ತಿಳಿಯಬೇಕು. ಇದನ್ನು ಎಸ್-ವ್ಯಾಸದಂತಹ ಸಂಸ್ಥೆಗಳಲ್ಲಿ ಮಾತ್ರ ಕಲಿಯಬಹುದು ಎಂದರು.
ಕಾಗೆ ಸೀಸೆಗೆ ಕಲ್ಲು ತುಂಬಿ ನೀರು ಕುಡಿಯುವಂತೆ, ವಿದ್ಯಾರ್ಥಿ ತಾಳ್ಮೆ, ಪರಿಶ್ರಮ ಹೊಂದಿರಬೇಕು. ವಿದ್ಯಾರ್ಥಿಗಳು ಸಣ್ಣ ವಿಚಾರಗಳಿಗಾಗಿ ಗುರಿಯನ್ನು ಕೈ ಬಿಡಬಾರದು. ಕ್ಷುಲ್ಲಕ ಆಸೆ, ಆಮಿಷಗಳನ್ನು ಬಿಡಬೇಕು. ಶ್ವಾನ ನಿದ್ದೆ ಮಾಡುವಂತೆ ಕಂಡರೂ ಅದು ಸದಾ ಎಚ್ಚರವಾಗಿರುತ್ತದೆ. ಹೀಗೆ ವಿದ್ಯಾರ್ಥಿಗಳು ಸದಾ ಎಚ್ಚರವಾಗಿದ್ದು, ಗುರಿ ಕಡೆ ಏಕಾಗ್ರತೆ ಹೊಂದಿರಬೇಕು ಎಂದು ಕಿವಿಮಾತು ಹೇಳಿದರು.
ಕೇರಳ, ಮಹಾರಾಷ್ಟ್ರದಿಂದ ಬರುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಆದರೆ ರಾಜ್ಯದೊಳಗೆ ಬರಲು ಯಾರಿಗೂ ನಿಷೇಧ ಹೇರಿಲ್ಲ. ಆ ಎರಡು ರಾಜ್ಯಗಳಲ್ಲಿ ಕೋವಿಡ್ ಹೆಚ್ಚಾಗಿ ಹರಡುತ್ತಿರುವುದರಿಂದ ಈ ಕ್ರಮ ವಹಿಸಲಾಗಿದೆ. ಈ ಕುರಿತು ಮಾರ್ಗಸೂಚಿಯನ್ನು ನೀಡಲಾಗಿದೆ. ಆದರೆ ಕೆಲವೆಡೆ ಗೊಂದಲ ಉಂಟಾಗಿದೆ ಎಂದರು.
ಬೆಂಗಳೂರು : ಹಿರೇನಾಗವಲ್ಲಿ ಸ್ಫೋಟ ಪ್ರಕರಣದ ಆರೋಪಿಗಳನ್ನು ರಕ್ಷಿಸುವ ಇರಾದೆ ಸರ್ಕಾರಕ್ಕೆ ಇಲ್ಲ. ಮಾಲೀಕ ಸೇರಿದಂತೆ ಕೆಲವರನ್ನು ಈಗಾಗಲೇ ಬಂಧಿಸಿ ಸಿಐಡಿ ತನಿಖೆಗೆ ಆದೇಶಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಇಷ್ಟಾದರೂ ಕೆಲವರು ಘಟನೆಗೆ ರಾಜಕೀಯ ಲೇಪ ಹಚ್ಚುವ, ವೈಯಕ್ತಿಕ ಆರೋಪ ಮಾಡುವ ಕೀಳು ಮಟ್ಟಕ್ಕೆ ಇಳಿದಿದ್ದಾರೆ. ಉರಿವ ಮನೆಯಲ್ಲಿ ಗಳ ಇರಿಯುವ ಇಂತಹ ವರ್ತನೆ ಸಾರ್ವಜನಿಕ ಜೀವನದಲ್ಲಿ ಶೋಭೆ ತರುವುದಿಲ್ಲ ಎಂದು ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿ ಟೀಕಾಕಾರರಿಗೆ ತಿರುಗೇಟು ನೀಡಿದರು.
ಶಿವಮೊಗ್ಗ ಸ್ಫೋಟದ ಬಳಿಕ ಜಿಲ್ಲಾಡಳಿತದ ಜತೆ ಮೂರು ಸಭೆ ನಡೆಸಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ, ಸ್ಫೋಟಕಗಳ ಸರಬರಾಜು, ದಾಸ್ತಾನು ಮತ್ತು ಬಳಕೆ ಮೇಲೆ ಕಟ್ಟುನಿಟ್ಟು ಕ್ರಮ ತೆಗೆದುಕೊಳ್ಳುವಂತೆ ಹಾಗೂ ನಿಯಮಿತವಾಗಿ ಗಣಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ನಿರ್ದೇಶನ ನೀಡಿದ್ದೆನು. ಆ ಹಿನ್ನಲೆಯಲ್ಲೇ ಅಧಿಕಾರಿಗಳು ಎಲ್ಲಾ ಕ್ವಾರಿಗಳಿಗೂ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ ಎಂದರು.
ಘಟನೆಗೆ ಕಾರಣವಾದ ಬ್ರಮರವರ್ಷಿಣಿ ಕ್ರಷರ್ಗೆ ಕಳೆದ ಏಳರಂದು ಎಸ್ಪಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಅದು ಸಕ್ರಮವಾಗಿ ನಡೆಯುತ್ತಿರುವ ಗಣಿ. ಆದರೆ ಸ್ಫೋಟಕಗಳ ದಾಸ್ತಾನು ಮತ್ತು ಬಳಕೆಯಲ್ಲಿ ಕಾನೂನು ಪಾಲನೆ ಮಾಡುತ್ತಿರಲಿಲ್ಲ. ಆ ಕಾರಣಕ್ಕೆ ಅದೇ ದಿನ ಕ್ವಾರಿಯನ್ನು ಸ್ಥಗಿತಗೊಳಿಸಲು ಆದೇಶಿಸಿ ದೂರು ದಾಖಲು ಮಾಡಲಾಗಿದೆ. ಮಾತ್ರವಲ್ಲ, ಮತ್ತೆ ಪರಿಶೀಲನೆಗಾಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇದರಿಂದ ಆತಂಕಕ್ಕೆ ಒಳಗಾದ ಮಾಲೀಕ ಅಕ್ರಮವಾಗಿ ದಾಸ್ತಾನು ಮಾಡಿದ್ದ ಸ್ಫೋಟಕಗಳನ್ನು ಸಮೀಪದ ಕುರುಚಲು ಕಾಡಿನಲ್ಲಿ ವಿಲೇವಾರಿ ಮಾಡಲು ಕೆಲಸಗಾರರಿಗೆ ಸೂಚನೆ ನೀಡಿದ್ದನಂತೆ, ಇದರಿಂದಾಗಿಯೇ ಅನಾಹುತ ಸಂಭವಿಸಿದೆ ಎಂದು ವಿವರಿಸಿದರು.
ಪ್ರಾಥಮಿಕ ತನಿಖೆಯಲ್ಲಿ ಸ್ಫೋಟಕಗಳನ್ನು ಕ್ವಾರಿಯಿಂದ ಒಂದೂವರೆ ಕಿಲೋಮೀಟರ್ ದೂರದಲ್ಲಿರುವ ಕೊಠಡಿಯೊಂದರಲ್ಲಿ ಇರಿಸಿದ್ದ ಅಂಶ ಗೊತ್ತಾಗಿದೆ. ಪೊಲೀಸರ ದಾಳಿ ಬಳಿಕ ಹೆದರಿದ ಮಾಲೀಕರು ಅದನ್ನು ಸಮೀಪದ ಕಾಡಿನಲ್ಲಿ ಬಿಸಾಡುವಂತೆ ಹೇಳಿದ್ದರಿಂದ ಸಿಬ್ಬಂದಿಗಳು ಅದನ್ನು ತೆಗೆದುಕೊಂಡು ಘಟನೆ ನಡೆದ ಸ್ಥಳಕ್ಕೆ ತೆರಳಿದ್ದಾರೆ. ಕ್ಯಾಂಪ್ಫೈರ್ ಮಾದರಿಯಲ್ಲಿ ಬೆಂಕಿ ಹಚ್ಚಿಕೊಂಡು ಅಲ್ಲೇ ಎಲ್ಲರೂ ಮದ್ಯ ಸೇವಿಸಿ ಪಾರ್ಟಿ ಮಾಡಿದ್ದಾರೆ. ಬಳಿಕ ಸ್ಫೋಟಕಗಳನ್ನು ಅದೇ ಬೆಂಕಿಗೆ ಎಸೆದಿದ್ದಾರೆ. ಅದರಿಂದ ಅನಾಹುತ ಸಂಭವಿಸಿತು ಎಂದು ಬದುಕುಳಿದಿರುವ ಚಾಲಕ ನೀಡಿರುವ ಹೇಳಿಕೆ ಮತ್ತು ಸ್ಥಳ ಪರಿಶೀಲನೆ ನಡೆಸಿದ ತಜ್ಞರು ನೀಡಿದ ಮಾಹಿತಿಯಿಂದ ಬೆಳಕಿಗೆ ಬಂದಿದೆ ಎಂದರು.
ಇದು ವಾಸ್ತವ ಸಂಗತಿ. ಆದರೂ ಕೆಲ ನಾಯಕರು ಘಟನೆಗೆ ರಾಜಕೀಯ ಬೆರೆಸುವ ಮತ್ತು ವೈಯಕ್ತಿಕ ಆರೋಪ ಮಾಡುವ ಕೀಳು ಮಟ್ಟಕ್ಕೆ ಇಳಿದಿದ್ದು ದುರದೃಷ್ಟಕರ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಲ್ಲದೆ, ಗೃಹ, ಗಣಿ ಸಚಿವರು ಮತ್ತು ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದ್ದೇನೆ. ಮೃತಪಟ್ಟ ಕುಟುಂಬದ ಸದಸ್ಯರ ಮನೆಗಳಿಗೂ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ. ಸಿಎಂ ಅವರ ಸೂಚನೆ ಮೇರೆಗೆ ತಲಾ ಐದು ಲಕ್ಷ ಪರಿಹಾರವನ್ನೂ ಪ್ರಕಟಿಸಲಾಗಿದೆ. ಒಂದು ವೇಳೆ ಆರೋಪಿಗಳನ್ನು ರಕ್ಷಿಸುವಂತಿದ್ದರೆ ಘಟನೆಯ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸುವ ಔಚಿತ್ಯ ಏನಿತ್ತು ಎಂದು ಪ್ರಶ್ನಿಸಿದರು.
ಗಣಿಗಾರಿಕೆಗೆ ಮತ್ತು ನನಗೂ ತಳುಕು ಹಾಕಲು ಕೆಲವರು ಯತ್ನಿಸಿದ್ದಾರೆ. ಎಂದಿಗೂ ಆ ಪ್ರಯತ್ನ ಫಲ ನೀಡುವುದಿಲ್ಲ. ಕಾನೂನು ಬದ್ಧವಾಗಿ ನಡೆಯುವ ಗಣಿ ಚಟುವಟಿಕೆಗಳಿಗೆ ಮಾತ್ರ ಅವಕಾಶ ಇದೆಯೇ ಹೊರತು, ಅಕ್ರಮಗಳಿಗೆ ಜಿಲ್ಲೆಯಲ್ಲಿ ಎಂದಿಗೂ ಅವಕಾಶ ನೀಡುವುದಿಲ್ಲ. ಈಗಾಗಲೇ ಅನಾಹುತದ ಸಂಬಂಧ ಸರ್ಕಲ್ ಇನ್ಸ್ಪೆಕ್ಟರ್, ಸಬ್ಇನ್ಸ್ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿದೆ. ಗಣಿ ಇಲಾಖೆ ಹಿರಿಯ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಸಚಿವ ಮುರುಗೇಶ್ ನಿರಾಣಿ ಅವರ ಜತೆ ಮಾತನಾಡಿರುವುದಾಗಿ ಸಚಿವ ಸುಧಾಕರ್ ವಿವರಿಸಿದರು.
ಬೆಂಗಳೂರು : ನಟ ಜಗ್ಗೇಶ್ ಆಡಿಯೋ ಇಟ್ಟುಕೊಂಡು ನಟ ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತ ಪಡಿಸಿದಂತ ಪ್ರಕರಣ ದಿನದಿಂದ ದಿನಕ್ಕೆ ಬಿಗ್ ಟ್ವಿಸ್ಟ್ ಪಡೆಯುತ್ತಿತ್ತು. ನಟ ಜಗ್ಗೇಶ್ ದರ್ಶನ್ ಅಭಿಮಾನಿಗಳು, ದರ್ಶನ್ ಬಗ್ಗೆ ವಾಗ್ದಾಳಿ ನಡೆಸಿದ್ದರು. ಇಂತಹ ಸಂದರ್ಭದಲ್ಲೇ ನಟ ದರ್ಶನ್ ಘಟನೆಯ ಕುರಿತಂತೆ ನಟ ಜಗ್ಗೇಶ್ ಗೆ ಅಭಿಮಾನಿಗಳ ಪರವಾಗಿ ಕ್ಷಮೆ ಕೇಳಿದ್ದಾರೆ.
ಈ ಕುರಿತಂತೆ ಖಾಸಗಿ ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ಪ್ರತಿಕ್ರಿಯಿಸಿರುವಂತ ನಟ ದರ್ಶನ್, ಹಿರಿಯರು ಯಾವಾಗಲೂ ಮುಂದಿರಬೇಕು. ಕಿರಿಯರು ಹಿಂದಿರಬೇಕು. ವಿವಾದ ಆಗುವ ದಿನ ನಾನು ತಿರುಪತಿಯಲ್ಲಿ ಇದ್ದೆ. ಅಲ್ಲಿಂದ ಮನೆಗೆ ಬಂದಿದ್ದು ರಾತ್ರಿ 2 ಗಂಟೆಗೆ. ಈ ವೇಳೆಗಾಗಗಲೇ ನಿರ್ಮಾಪಕ ವಿಖ್ಯಾತ್ 50 ರಿಂದ 60 ಬಾರಿ ಕಾಲ್ ಮಾಡಿದ್ದರು. ತಡರಾತ್ರಿ ಕರೆ ಮಾಡೋದು ಸರಿಯಲ್ಲ ಎಂಬುದಾಗಿ ಸುಮ್ಮನಾಗಿದ್ದೆ ಎಂದರು.
ಬೆಳಿಗ್ಗೆ ಜಿಮ್ ಗೆ ಹೋಗಿ ಮುಗಿಸಿದ ನಂತ್ರ ನಿರ್ಮಾಪಕ ವಿಖ್ಯಾತ್ ಗೆ ಕರೆ ಮಾಡಿದೆ. ಆಗ ನನ್ನ ಅಭಿಮಾನಿಗಳು ನಟ ಜಗ್ಗೇಶ್ ಸಿನಿಮಾ ಸೆಟ್ ಗೆ ಹೋಗಿದ್ದಂತ ವಿಚಾರ ತಿಳಿಯಿತು. ನನ್ನ ಅಭಿಮಾನಿಗಳು ಜಗ್ಗೇಶ್ ಸಿನಿಮಾ ಸೆಟ್ ಗೆ ಹೋಗೋ ವಿಚಾರ ನನಗೆ ಗೊತ್ತಿರಲಿಲ್ಲ. ಗೊತ್ತಿದ್ದರೇ ಹೋಗಬೇಡಿ ಎನ್ನುತ್ತಿದ್ದೆ. ನಟ ಜಗ್ಗೇಶ್ ನಮ್ಮ ಸೀನಿಯರ್. ನಮ್ಮ ಬಗ್ಗೆ ಅವರು ಮಾತನಾಡದೇ ಮತ್ತಾರು ಮಾತನಾಡುತ್ತಾದೆ. ಇಂತಹ ನಟ ಜಗ್ಗೇಶ್ ಗೆ ನಮ್ಮ ಅಭಿಮಾನಿಗಳಿಂದಾಗಿ ಬೇಸರವಾಗಿದ್ದರೇ ಅವರ ಪರವಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂಬುದಾಗಿ, ನಟ ಜಗ್ಗೇಶ್ ಗೆ ನಟ ದರ್ಶನ್ ಅಭಿಮಾನಿಗಳ ಪರವಾಗಿ ಕ್ಷಮೆ ಕೋರಿದ್ದಾರೆ.
ಬೆಂಗಳೂರು : ಅರಸೀಕೆರೆ ತಾಲೂಕು ಬೈರಗೊಂಡನಹಳ್ಳಿ ಬಳಿ ಬೆಳಗ್ಗೆ ತಾಯಿ ಮಗನ ಮೇಲೆ ದಾಳಿ ಮಾಡಿದ್ದ ಚಿರತೆ ಚಂದ್ರಮ್ಮ ಮತ್ತು ಕಿರಣ್ ಎಂಬುವರನ್ನು ಗಾಯಗೊಳಿಸಿತ್ತು. ತಾಯಿಯನ್ನು ರಕ್ಷಣೆ ಮಾಡಲು ಚಿರತೆಯೊಂದಿಗೆ ಸೆಣಸಾಡಿದ್ದಂತ ಕಿರಣ್, ಗಾಯಗೊಂಡಿದ್ದರು. ಇಂತಹ ತಾಯಿಯ ಪ್ರಾಣ ಕಾಪಾಡಲು ಚಿರತೆಯೊಂದಿಗೆ ಸೆಣಸಿ ಗಾಯಗೊಂಡಿರುವ ಕಿಣರ್ ಗೆ ಚಿಕಿತ್ಸೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ 25 ಸಾವಿರ ನೀಡಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ತಾಯಿ ಪ್ರಾಣ ಕಾಪಾಡಲು ಚಿರತೆಯೊಡನೆ ಸೆಣಸಿ ಕೊಂದ ಅರಸೀಕೆರೆಯ ಕಿರಣ್ ನ ಶೌರ್ಯವನ್ನು ನಾನು ಪ್ರಶಂಸಿಸುತ್ತೇನೆ. ಈ ವೇಳೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ತಾಯಿ-ಮಗನನ್ನು ಭೇಟಿಯಾಗುವಂತೆ ಹಾಸನ ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದೇನೆ. ಅವರ ಚಿಕಿತ್ಸೆಗೆ ₹25,000 ಹಣವನ್ನೂ ತಲುಪಿಸಲಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.
ತಾಯಿ ಪ್ರಾಣ ಕಾಪಾಡಲು ಚಿರತೆಯೊಡನೆ ಸೆಣಸಿ ಕೊಂದ ಅರಸೀಕೆರೆಯ ಕಿರಣ್ ನ ಶೌರ್ಯವನ್ನು ನಾನು ಪ್ರಶಂಸಿಸುತ್ತೇನೆ.
ಈ ವೇಳೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ತಾಯಿ-ಮಗನನ್ನು ಭೇಟಿಯಾಗುವಂತೆ ಹಾಸನ ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದೇನೆ.
ತಮಿಳುನಾಡು : ಮಹಿಳಾ ಐಪಿಎಸ್ ಅಧಿಕಾರಿ ಲೈಂಗಿಕ ಕಿರುಕುಳದ ಬಗ್ಗೆ ವಿಶೇಷ ಪೊಲೀಸ್ ಮಹಾ ನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ರಾಜೇಶ್ ದಾಸ್ ಅವರು ನೀಡಿದ ದೂರಿನ ತನಿಖೆಗಾಗಿ ತಮಿಳುನಾಡು ಗೃಹ ಇಲಾಖೆಯು ಬುಧವಾರ ಆರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಯೋಜನೆ ಮತ್ತು ಅಭಿವೃದ್ಧಿ) ಜಯಶ್ರೀ ರಘುನಂದನ್ ಅವರು ಸಮಿತಿಯ ಅಧ್ಯಕ್ಷರಾಗಿ ಕಾರ್ಯ ಪ್ರವಹಿಸುತ್ತಾರೆ ಎಂದು ಗೃಹ ಕಾರ್ಯದರ್ಶಿ ಎಸ್ ಕೆ ಪ್ರಭಾಕರ್ ಆದೇಶ ಹೊರಡಿಸಿದ್ದಾರೆ.
ಮೂಲಗಳ ಪ್ರಕಾರ, ಮಹಿಳಾ ಅಧಿಕಾರಿ ತನ್ನ ವಾಹನದಲ್ಲಿ ರಾಜೇಶ್ ದಾಸ್ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಮಹಿಳೆ ದೂರು ದಾಖಲಿಸದಂತೆ ಸಹ ಅಧಿಕಾರಿಗಳು ಪ್ರಯತ್ನಮಾಡಿದ್ದಾರೆ ಎಂದು ಅನಾಮಧೇಯತೆಯ ಷರತ್ತಿನ ಮೇರೆಗೆ ಮತ್ತೊಬ್ಬ ಐಪಿಎಸ್ ಅಧಿಕಾರಿ ತಿಳಿಸಿದ್ದಾರೆ. ಆದರೆ, ಆಕೆ ಅದನ್ನು ಮುಂದುವರೆಸಿಕೊಂಡು ಹೋದಳು. ಆಕೆಯ ಧೈರ್ಯಕ್ಕೆ ಅನೇಕ ಮಹಿಳಾ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
ಸೀಮಾ ಅಗರ್ ವಾಲ್, (ಹೆಚ್ಚುವರಿ ಡಿಜಿಪಿ), ಎ.ಅರುಣ್ (ಐಜಿಪಿ), ಶಾಮೂಂಡೇಶ್ವರಿ (ಡೆಪ್ಯುಟಿ ಐಜಿ), ವಿಕೆ ರಮೇಶ್ ಬಾಬು (ಡಿಜಿಪಿ ಕಚೇರಿಯ ಮುಖ್ಯ ಆಡಳಿತಾಧಿಕಾರಿ) ಮತ್ತು ಇಂಟರ್ ನ್ಯಾಷನಲ್ ಜಸ್ಟಿಸ್ ಮಿಷನ್ ನ ಭಾಗವಾಗಿರುವ ಲೊರೆಟ್ಟಾ ಜೋನಾ ಅವರು ಈ ಸಮಿತಿಯಲ್ಲಿ ಇರಲಿದ್ದಾರೆ.
ತಮಿಳುನಾಡಿನಲ್ಲಿ ಐಪಿಎಸ್ ಅಧಿಕಾರಿಯೊಬ್ಬರ ಮೇಲೆ ಲೈಂಗಿಕ ಕಿರುಕುಳ ದರೋದನೆ ಇದೇ ಮೊದಲಲ್ಲ. 2018ರ ಆಗಸ್ಟ್ ನಲ್ಲಿ ತಮಿಳುನಾಡಿನ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಎಸ್ ಮುರುಗನ್ ಐಪಿಎಸ್, ಜಾಗೃತ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯದ (ಡಿವಿಎಸಿ) ಜಂಟಿ ನಿರ್ದೇಶಕ ರಾಗಿದ್ದ ಎಸ್ ಮುರುಗನ್ ಐಪಿಎಸ್ ಅವರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು.
ಡಿಜಿಪಿ ಮಟ್ಟದ ಅಧಿಕಾರಿಯಾಗಿದ್ದ ಲಕ್ಷ್ಮೀ ಪ್ರಸಾದ್ ನೇತೃತ್ವದಲ್ಲಿ ಆಂತರಿಕ ಸಮಿತಿ ರಚಿಸಲಾಗಿತ್ತು. ನಂತರ, ಅವರು ಮದ್ರಾಸ್ ಹೈಕೋರ್ಟ್ ಮೊರೆ ಹೋಗಬೇಕಾಯಿತು, ಅಲ್ಲಿ ಅವರು ಸಮಿತಿಯ ಅಧ್ಯಕ್ಷರು ಮತ್ತು ಇತರರು ಆರೋಪಿಗೆ ಬೆಂಬಲ ವಾಗಿ ದ್ದಾರೆ ಎಂದು ಆರೋಪಿಸಿದ್ದರು. ಮದ್ರಾಸ್ ಹೈಕೋರ್ಟ್ ಈ ಪ್ರಕರಣದ ತನಿಖೆಯನ್ನು ತೆಲಂಗಾಣ ಪೊಲೀಸರಿಗೆ ವರ್ಗಾಯಿಸಿತ್ತು. ಆದರೆ, ಒಂದು ತಿಂಗಳ ನಂತರ 2019ರ ಸೆಪ್ಟೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ಈ ಆದೇಶಕ್ಕೆ ತಡೆ ನೀಡಿತ್ತು.
ಮೈಸೂರು : ಇಂದು ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಆಯ್ಕೆ ಪ್ರಕ್ರಿಯೆ ನಡೆಯಿತು. ಇಂತಹ ಆಯ್ಕೆ ಪ್ರಕ್ರಿಯೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಗಿ ಜೆಡಿಎಸ್ ನ ರುಕ್ಮಿಣಿ ಅಧಿಕಾರದ ಗದ್ದುಗೆ ಹಿಡಿದರು. ಇಂತಹ ಖುಷಿಯಲ್ಲಿ ಪತ್ನಿ ಮೇಯರ್ ಆಗಿದ್ದಕ್ಕೆ ಪತಿ ಮಾದೇಗೌಡ, ಸಭಾಂಗಣದಲ್ಲೇ ಮುತ್ತಿಟ್ಟರು.
ತೀವ್ರ ಕುತೂಹಲ ಮೂಡಿಸಿದ್ದಂತ ಮೈಸೂರು ಮಹಾನಗರ ಪಾಲಿಕೆ ಗದ್ದುಗೆ ಗುದ್ದಾಟದಲ್ಲಿ ಕೊನೆಗೂ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಯಶಸ್ವಿಯಾಯಿತು. ಮೈಸೂರಿನ 23ನೇ ಮೇಯರ್ ಆಗಿ ಜೆಡಿಎಸ್ ನ ರುಕ್ಮಿಣಿ ಮಾದೇಗೌಡ ಆಯ್ಕೆಯಾದ್ರೇ, ಉಪ ಮೇಯರ್ ಆಗಿ ಜೆಡಿಎಸ್ ಬೆಂಬಲದೊಂದಿಗೆ ಅನ್ವರ್ ಬೇಗ್ ಆಯ್ಕೆಯಾದ್ರು.
ಕಾಂಗ್ರೆಸ್ ಬೆಂಬಲದೊಂದಿಗೆ ಮೈಸೂರು ಮೇಯರ್ ಆಗಿ ಪತ್ನಿ ರುಕ್ಮಿಣಿ ಆಯ್ಕೆಯಾಗುತ್ತಿದ್ದಂತೆ, ಅದೇ ಖುಷಿಯಲ್ಲಿ ಮೈಸೂರು ಪಾಲಿಕೆ ಸಭಾಂಗಣದಲ್ಲೇ ಪತ್ನಿ ರುಕ್ಮಿಣಿಗೆ, ಪತಿ ಮಾದೇಗೌಡ ಮುತ್ತಿಟ್ಟು ಖುಷಿ ಹಂಚಿಕೊಂಡರು.
ಚಿಕ್ಕಬಳ್ಳಾಪುರ : ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಗುಡಿಬಂಡೆ ಪೊಲೀಸ್ ಠಾಣೆ ಪಿಎಸ್ ಐ ಆರ್ ಗೋಪಾಲ ರೆಡ್ಡಿ ಅಮಾನತು ಮಾಡಿ, ಗೃಹ ಇಲಾಖೆ ಆದೇಶ ಹೊರಡಿಸಿದೆ.
ಈ ಕುರಿತಂತೆ ಕೇಂದ್ರ ವಲಯದ ಪೊಲೀಸ್ ಮಹಾ ನಿರೀಕ್ಷಕರಾದಂತ ಎಂ ಚಂದ್ರಶೇಖರ್ ಅವರು ಆದೇಶ ಹೊರಡಿಸಿದ್ದು, ಹಿರೇನಾಗವಲ್ಲಿ ಕ್ವಾರಿಯ ಮೇಲೆ ದಾಳಿ ನಡೆದ ನಂತರ ಆರೋಪಿಗಳನ್ನು ದಸ್ತಗಿರಿ ಮಾಡಲು ಪಿಎಸ್ಐ ಆದ ಗೋಪಾಲ ರೆಡ್ಡಿ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಪ್ರಕರಣ ದಾಖಲಿಸಿದ ಬಗ್ಗೆ ಪೊಲೀಸ್ ಐಟಿ ತಂತ್ರಾಂಶದಲ್ಲಿ ನಮೂದಿಸಿರಲಿಲ್ಲ. ಪ್ರಕರಣದ ತನಿಖೆ ನಡೆಸದೇ ಫೆ. 21 ಮತ್ತು 22 ರಂದು ರಜೆ ಮೇಲೆ ತೆರಳಿರುತ್ತೀರಿ, ಅರೋಪಿಗಳನ್ನು ದಸ್ತಗಿರಿ ಮಾಡದೇ ಇದ್ದಿದ್ದರಿಂದ ಈ ಸ್ಪೋಟ ಸಂಭವಿಸಿದೆ. ಆರೋಪಿ ನಾಗರಾಜ ಸೂಚನೆ ಮೇರೆಗೆ ಅಕ್ಕಿ ಚೀಲದಲ್ಲಿ ಸ್ಪೋಟಕ ಸಾಗಿಸಲಾಗುತ್ತಿತ್ತು.
ಹಿರೇನಾಗವಲ್ಲಿ ಗ್ರಾಮದ ಪ್ರದೇಶದಲ್ಲಿ ನಡೆದ ಸ್ಪೋಟದಲ್ಲಿ ಆರು ಜನರು ಮೃತರಾಗಿರುವ ಘಟನೆಯನ್ನು ತಪ್ಪಿಸಬಹುದಾಗಿತ್ತು. ಆದ್ರೇ ತನಿಖಾಧಿಕಾರಿಯಾದ ನೀವು ಯಾವುದೇ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳದೇ ನಿಮ್ಮ ಕರ್ತವ್ಯದಲ್ಲಿ ಅತೀವ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನವನ್ನು ತೋರ್ಪಡಿಸಿರುವುದು ಕಂಡು ಬರುತ್ತದೆ.
ಈ ಎಲ್ಲಾ ಅಂಶಗಳಿಂದ ಗುಡಿಬಂಡೆ ಪೊಲೀಸ್ ಠಾಣಾ ಪಿಎಸ್ಐ ಆರ್.ಗೋಪಾಲರೆಡ್ಡಿ ಆದ ನೀವು, ನಿಮ್ಮ ಕರ್ತವ್ಯದಲ್ಲಿ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನವನ್ನು ತೋರ್ಪಿಡಿಸಿರುವುದು ವರದಿ ಹಾಗೂ ತನಿಖೆಯಿಂದ ಕಂಡುಬಂದಿದೆ. ಆದ್ದರಿಂದ ನಿಮ್ಮನ್ನು ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತು ನಡವಳಿ) ನಿಯಮಗಳು 1965 / 89ರ ನಿಯಮ 5ರಡಿಯಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ಕರ್ತವ್ಯದಿಂದ ಅಮಾನತ್ತಿನಲ್ಲಿ ಇರಿಸಿ, ಆದೇಶಿಸಿದ್ದಾರೆ.
ಬೆಂಗಳೂರು : ಪಿಎಂಕಿಸಾನ್ ಯೋಜನೆಯಡಿ 97% ಆಧಾರ್ ಕಾರ್ಡ್ ರೈತರ ಅಕೌಂಟಿಗೆ ಜೋಡಣೆಯಾಗಿದಕ್ಕೆ ಆಧಾರಿತ ಪಾವತಿಯಾಗಿದ್ದಕ್ಕೆ ಕರ್ನಾಟಕ ಮೊದಲ ಸ್ಥಾನ ಪಡೆದಿದೆ.
ಪಿಎಂ ಕಿಸಾನ್ ಯೋಜನೆಯಡಿ ಕರ್ನಾಟಕ ಸ್ಥಾನ ಮೊದಲ ಸ್ಥಾನ ಪಡೆದಿದ್ದಕ್ಕಾಗಿ ಕೇಂದ್ರ ಸರ್ಕಾರ ಕರ್ನಾಟಕದ ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ಅವರನ್ನು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಿಸಿ ಸನ್ಮಾನಿಸಿದರು.
ಇತ್ತೀಚೆಗೆ ಕರ್ನಾಟಕದಲ್ಲಿ ಮೊಬೈಲ್ ಬೆಳೆ ಸಮೀಕ್ಷೆ ಸಹ ಯಶಸ್ವಿಯಾಗಿದ್ದು, ಕೇಂದ್ರದಿಂದ ಮೆಚ್ಚುಗೆಯನ್ನು ಸಹ ಪಡೆದಿದೆ.ಅಲ್ಲದೇ ಇತರೆ ರಾಜ್ಯಗಳಿಗೂ ಮಾದರಿಯಾಗಿದೆ.ಅಲ್ಲದೇ ಕೃಷಿಸಂಜೀವಿನಿ ಯೋಜನೆಯೂ ಶ್ಲಾಘನೆ ಪಡೆದಿದ್ದು, ಕರ್ನಾಟಕದ ಕೃಷಿ ಇಲಾಖೆಯಲ್ಲಿ ತಂತ್ರಜ್ಞಾನ ಅಳವಡಿಕೆ ಹಾಗೂ ರೈತರಿಗೆ ಹೊಸಹೊಸ ಯೋಜನೆಗಳನ್ನು ಪರಿಚಯಿಸುತ್ತಿರುವುದಕ್ಕೆ ಬಿ.ಸಿ.ಪಾಟೀಲರನ್ನು ಕೇಂದ್ರ ಶ್ಲಾಘಿಸಿದೆ.
“ಪ್ರಧಾನ ಮಂತ್ರಿ ಕಿಸಾನ ಸಮ್ಮಾನ ನಿಧಿ ಯೋಜನೆಯಡಿಯಲ್ಲಿ ರಾಜ್ಯವು ಅತಿ ಹೆಚ್ಚು ಶೇಕಡ ಪ್ರಮಾಣದಲ್ಲಿ ಆಧಾರ ಜೋಡಣೆ ಆಧಾರಿತ ಮೂಲಕ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಅನುಷ್ಟಾನಗೊಳಿಸಿರುವುದಕ್ಕೆ ರಾಜ್ಯವು ಈ ಪ್ರಶಸ್ತಿಗೆ ಭಾಜನವಾಗಿದೆ. ನವದೆಹಲಿಯ ‘ಪೂಸಾ’ದಲ್ಲಿ ನಡೆದ ಪಿ.ಎಂ.ಕಿಸಾನ್ ಯೋಜನೆಯ 2ನೇ ವರ್ಷದ ವರ್ಷಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಇಲಾಖಾ ಅಧಿಕಾರಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಈ ಯೋಜನೆಯಡಿ ರಾಜ್ಯವು ಶೇ 97 ರಷ್ಟು ‘ಆಧಾರ’ ದೃಡೀಕರಿಸಿದ ದತ್ತಾಂಶವನ್ನು ಹೊಂದಿದ್ದು, ರಾಜ್ಯದ ಶೇ 90ಕ್ಕೂ ಹೆಚ್ಚು ಫಲಾನುಭವಿಗಳಿಗೆ ‘ಆಧಾರ’ ಆಧಾರಿತ ನೇರ ನಗದು ವರ್ಗಾವಣೆ ವಿಧಾನದ ಮೂಲಕ ಈ ಯೋಜನೆಯಡಿ ಪ್ರಯೋಜನಗಳನ್ನು ನೀಡಲಾಗುತ್ತಿದೆ. ರಾಜ್ಯವು ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಿತ್ತಿರುವುದಕ್ಕೆ ಈ ಪ್ರಶಸ್ತಿ ಸಂದಿದೆ.
ಈ ಕಾರ್ಯಕ್ರಮದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಡಾ.ರಾಜಕುಮಾರ್ ಖತ್ರಿ, ಕೃಷಿ ಇಲಾಖೆಯ ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷೀತ್, ಕೃಷಿ ಇಲಾಖೆಯ ನಿರ್ದೇಶಕ, ಬಿ.ವೈ.ಶ್ರೀನಿವಾಸ ಪಾಲ್ಗೊಂಡಿದ್ದರು.
ನವದೆಹಲಿ : ಎರಡನೇ ಹಂತದ COVID-19 ಲಸಿಕೆ ಅಭಿಯಾನ ವು 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ವರ್ಷ ಮೇಲ್ಪಟ್ಟವರಿಗೆ ಮಾರ್ಚ್ 1ರಿಂದ ಪ್ರಾರಂಭವಾಗಲಿದೆ. ಇಂತಹ ಎರಡನೇ ಹಂತದ ಲಸಿಕಾ ಅಭಿಯಾನದಲ್ಲಿ 60, 45 ವರ್ಷ ಮೇಲ್ಪಟ್ಟ ಕೋಬಿರ್ಡ್ ಖಾಯಿಲೆಗಳನ್ನು ಹೊಂದಿರುವವರಿಗೆ ಮಾತ್ರ ಉಚಿತವಾಗಿ ಕೊರೋನಾ ಲಸಿಕೆ ದೇಶಾದ್ಯಂತ ನೀಡಲಾಗುತ್ತಿದೆ.
ಈ ಕುರಿತಂತೆ ಇಂದು ಸಂಪುಟ ನಿರ್ಣಯಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಎರಡನೇ ಹಂತದಲ್ಲಿ 10 ಸಾವಿರ ಸರ್ಕಾರಿ ಮತ್ತು 20 ಸಾವಿರ ಖಾಸಗಿ ಕೇಂದ್ರಗಳಲ್ಲಿ ನಡೆಯಲಿದೆ. ಸರಕಾರಿ ಸೌಲಭ್ಯಗಳಿಗೆ ತೆರಳುವವರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು. “ಭಾರತ ಸರ್ಕಾರ ಅವರಿಗೆ ಹಣ ವನ್ನು ನೀಡಲಿದೆ. ಕೇಂದ್ರ ಸರ್ಕಾರ ಅಗತ್ಯ ವಸ್ತುಗಳನ್ನು ಖರೀದಿಸಿ ರಾಜ್ಯಗಳಿಗೆ ವಿತರಿಸಲಿದೆ,” ಎಂದು ಹೇಳಿದರು.
ಖಾಸಗಿ ಸೌಲಭ್ಯಗಳಿಂದ ಲಸಿಕೆ ತೆಗೆದುಕೊಳ್ಳುವವರಿಗೆ ಈ ಲಸಿಕೆ ಉಚಿತವಲ್ಲ. ಲಸಿಕೆಗೆ ಹಣ ಪಾವತಿಸಬೇಕಾಗುತ್ತದೆ. ‘ಲಸಿಕೆಯ ಮೊತ್ತವನ್ನು ಆರೋಗ್ಯ ಸಚಿವಾಲಯವು ತಯಾರಕರು ಮತ್ತು ಆಸ್ಪತ್ರೆಗಳೊ೦ದಿಗೆ ಚರ್ಚಿಸಿದ ನಂತರ ಮೂರ್ನಾಲ್ಕು ದಿನಗಳ ಒಳಗೆ ಘೋಷಿಸಲಾಗುವುದು’ ಎಂದು ಅವರು ಹೇಳಿದರು.
ಭಾರತದಲ್ಲಿ 60 ವರ್ಷ ಮೇಲ್ಪಟ್ಟ ಸುಮಾರು 10 ಕೋಟಿ ಜನರಿದ್ದಾರೆ. ಮೊದಲ ಹಂತದಲ್ಲಿ ಲಸಿಕೆ ಹಾಕಿಸಲು ಇದುವರೆಗೆ 1.7 ಕೋಟಿ ಜನರಿಗೆ ಲಸಿಕೆ ಹಾಕಲಾಗಿದೆ. 14 ಲಕ್ಷ ಜನರಿಗೆ ಎರಡನೇ ಡೋಸ್ ನೀಡಲಾಗಿದೆ ಎಂದು ಅವರು ಹೇಳಿದರು. ಹೆಲ್ತ್ ಕೇರ್ ಮತ್ತು ಫ್ರಂಟ್ ಲೈನ್ ಕಾರ್ಯಕರ್ತರಿಗೆ ಲಸಿಕೆಯನ್ನು ಉಚಿತವಾಗಿ ನೀಡಲಾಯಿತು ಎಂದು ತಿಳಿಸಿದರು.
ಮಂಗಳವಾರ ಸಂಜೆ 6 ರವರೆಗೆ 2,53,434 ಸೆಷನ್ ಗಳಲ್ಲಿ ಒಟ್ಟು 1,19,07,392 ಲಸಿಕೆ ಡೋಸ್ ಗಳನ್ನು ನೀಡಲಾಗಿದೆ ಎಂದು ತಾತ್ಕಾಲಿಕ ವರದಿ ತಿಳಿಸಿದೆ.
ಫಲಾನುಭವಿಗಳು 64,71,047 ಹೆಲ್ತ್ ಕೇರ್ ವರ್ಕರ್ಸ್ (ಎಚ್ ಸಿಡಬ್ಲ್ಯೂ) ಮೊದಲ ಡೋಸ್ ತೆಗೆದುಕೊಂಡವರು, 13,21,635 ಎಚ್ ಸಿಡಬ್ಲ್ಯೂಗಳು ಮತ್ತು ಎರಡನೇ ಡೋಸ್ ತೆಗೆದುಕೊಂಡ 41,14,710 ಫ್ರಂಟ್ ಲೈನ್ ವರ್ಕರ್ಸ್ (ಎಫ್ ಎಲ್ ಡಬ್ಲ್ಯೂಗಳು) ಮೊದಲ ಡೋಸ್ ತೆಗೆದುಕೊಂಡಿದ್ದಾರೆ.
ಜನವರಿ 16ರಂದು ದೇಶಾದ್ಯಂತ ಲಸಿಕೆ ಅಭಿಯಾನ ಜಾರಿಗೊಂಡರೆ, ಫೆ.2ರಿಂದ ಎಫ್ ಎಲ್ ಡಬ್ಲ್ಯೂಗಳ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
‘ದೇಶಾದ್ಯಂತ COVID-19 ಲಸಿಕೆಯ 39ನೇ ದಿನವಾದ ಮಂಗಳವಾರ ಸಂಜೆ 6 ಗಂಟೆಯವರೆಗೆ ಒಟ್ಟು 1,61,840 ಲಸಿಕೆ ಡೋಸ್ ಗಳನ್ನು ನೀಡಲಾಗಿತ್ತು. ಅದರಲ್ಲಿ 98,382 ಫಲಾನುಭವಿಗಳಿಗೆ ಮೊದಲ ಡೋಸ್ ಗೆ ಲಸಿಕೆ ಯನ್ನು ಹಾಕಲಾಗಿದ್ದು, 63,458 ಎಚ್ ಸಿಡಬ್ಲ್ಯೂಗಳು ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದ್ದಾರೆ’ ಎಂದು ಸಚಿವಾಲಯ ತಿಳಿಸಿದೆ.
ಲಸಿಕೆ ಅಭಿಯಾನದ 39ನೇ ದಿನ ಸಂಜೆ 6 ರವರೆಗೆ ಲಸಿಕೆಯ ಎರಡನೇ ಡೋಸ್ ಗೆ ಸಂಬಂಧಿಸಿದ ಲಸಿಕೆ (ಎಇಎಫ್ ಐ) ಮತ್ತು ಎಇಎಫ್ ಐ ನ ಮೂರು ಪ್ರಕರಣಗಳು ವರದಿಯಾಗಿವೆ ಎಂದು ಸಚಿವಾಲಯ ತಿಳಿಸಿದೆ. ಒಟ್ಟು 1,19,07,392 ಫಲಾನುಭವಿಗಳಿಗೆ ಲಸಿಕೆ ಯನ್ನು ಹಾಕಿಸಿದ್ದರೆ, ಬಿಹಾರದ 5,82,966 ಮಂದಿ ಲಸಿಕೆ ಯನ್ನು ಹಾಕಿಸದ್ದಾರೆ. ಈ ವರದಿಯ ಪ್ರಕಾರ ಕೇರಳದಿಂದ 4,68,145, ಕರ್ನಾಟಕದಿಂದ 7,20,392, ಮಧ್ಯಪ್ರದೇಶದಿಂದ 6,75,401, ಮಹಾರಾಷ್ಟ್ರದಿಂದ 10,03,706, ದೆಹಲಿಯಿಂದ 3,41,283, ಗುಜರಾತ್ ನಿಂದ 9,01,400, ಉತ್ತರ ಪ್ರದೇಶದಿಂದ 12,26,775, ಪಶ್ಚಿಮ ಬಂಗಾಳದಿಂದ 7,60,539 ಎಂದು ವರದಿ ಹೇಳಿದೆ.
ನವದೆಹಲಿ: ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್ ಮತ್ತು ರವಿಶಂಕರ್ ಪ್ರಸಾದ್ ಅವರು ಇಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಕೈಗೊಂಡ ಸಚಿವ ಸಂಪುಟ ನಿರ್ಧಾರಗಳ ಬಗ್ಗೆ ಮಾಧ್ಯಮಗಳಿಗೆ ವಿವರಣೆ ನೀಡಿದರು.ಮಾರ್ಚ್ 01ರಿಂದ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ -19 ಲಸಿಕೆ ಯನ್ನು ತೆಗೆದುಕೊಳ್ಳಲು ಅವಕಾಶ ನೀಡುವುದಾಗಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಅಂತ ಹೇಳಿದರು.
ಇದೇ ವೇಳೆ ಅವರು 10, 000ಕ್ಕೂ ಹೆಚ್ಚು ಸರ್ಕಾರಿ ಸೌಲಭ್ಯಗಳಲ್ಲಿ ಜನರಿಗೆ ಉಚಿತವಾಗಿ ಲಸಿಕೆ ಯನ್ನು ಒದಗಿಸುವ ನಿರ್ಧಾರವನ್ನು ಸಚಿವ ಸಂಪುಟ ತೆಗೆದುಕೊಂಡಿದ್ದು, ಕೊಮೊರ್ಬಿಡಿಟಿಹೊಂದಿರುವ 45 ವರ್ಷ ಮೇಲ್ಪಟ್ಟ ವರು COVID-19 ಲಸಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಅಂತ ಮಾಹಿತಿ ನೀಡಿದರು. 20 ಸಾವಿರ ಖಾಸಗಿ ವೈದ್ಯಕೀಯ ಕೇಂದ್ರದಿಂದ ಜನರು 19 ಲಸಿಕೆ ಯನ್ನು ತೆಗೆದುಕೊಳ್ಳಲು ಸರ್ಕಾರ ಅನುಮತಿ ನೀಡಿದೆ ಅಂತ ಹೇಳಿದರು.
ಮೈಸೂರು : ಅಂತೂ ಇಂತೂ ಕೊನೆಗೂ ಮೈಸೂರು ಮಹಾನಗರ ಪಾಲಿಕೆ ಅಧಿಕಾರ ಚುಕ್ಕಾಣಿ ಹಿಡಿಯುವಲ್ಲಿ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಯಶಸ್ವಿಯಾಗಿದೆ. ಮೈಸೂರು ನೂತನ ಮೇಯರ್ ಆಗಿ ಜೆಡಿಎಸ್ ನ ರುಕ್ಮಿಣಿ ಮಾದೇಗೌಡ ಆಯ್ಕೆಯಾಗಿದ್ದರೇ, ಉಪ ಮೇಯರ್ ಆಗಿ ಕಾಂಗ್ರೆಸ್ ನ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ.
ಇಂದು ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆಯಿತು. ಇಂತಹ ಆಯ್ಕೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಗದ್ದುಗೆ ಏರುವಂತ ಕನಸ್ಸು ಕಾಣುಟ್ಟಿದ್ದಂತ ಬಿಜೆಪಿ ಕನಸು ಭಗ್ನವಾಗಿದೆ.
ಮೇಯರ್, ಉಪ ಮೇಯರ್ ಸ್ಥಾನಕ್ಕೆ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿವೆ. ಪರಿಣಾಮವಾಗಿ ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಜೆಡಿಎಸ್ ನ ರುಕ್ಮಿಣಿ ಮಾದೇಗೌಡ ಆಯ್ಕೆಯಾದ್ರೇ, ಉಪ ಮೇಯರ್ ಆಗಿ ಕಾಂಗ್ರೆಸ್ ನ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಮೇಯರ್ ಪಟ್ಟದ ಅಲಂಕರಿಸುವಂತ ಬಿಜೆಪಿಯ ಆಸೆಗೆ ಭಗ್ನವಾಗಿದೆ.
ಬೆಂಗಳೂರು : ರಾಜ್ಯ ಸರ್ಕಾರದಿಂದ ಜಿಲ್ಲಾಧಿಕಾರಿಗಳ, ಉಪ ವಿಭಾಗಾಧಿಕಾರಿಗಳ, ತಹಶೀಲ್ದಾರರ ನ್ಯಾಯಾಲಯಗಳಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಮತ್ತು ಇತರೆ ಕಾಯ್ದೆಗಳ ಅಡಿಯಲ್ಲಿ ದಾಖಲಾಗುವ ಅರ್ಜಿಗಳು, ಮೇಲ್ಮನವಿ, ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಕುರಿತು ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.
ಈ ಕುರಿತಂತೆ ಕಂದಾಯ ಇಲಾಖೆ(ಪ್ರ) ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಸುತ್ತೋಲೆ ಹೊರಡಿಸಿದ್ದು, ಮ್ಯುಟೇಷನ್, ಖಾತಾ ಮತ್ತು ಆರ್ ಟಿ ಸಿ ಬದಲಾವಣೆಗಳಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗುವ ಅರ್ಜಿಗಳು ವಿವಾದರಹಿತವಾದ ಪ್ರಕರಣಗಳಾಗಿದ್ದಲ್ಲಿ ಖಾತೆ ಬದಲಾವಣೆಯನ್ನು 60 ದಿನಗಳಲ್ಲಿ ಭೂಮಿ ತಂತ್ರಾಂಶದ ಮೂಲಕ ಸಕಾಲ ಸೇವೆಗಳಡಿ ಈಗಾಗಲೇ ಕ್ರಮ ವಹಿಸಲಾಗುತ್ತಿದೆ. ಸದಸಿ ಅರ್ಜಿಯು ಆಸ್ತಿಯ ಹಕ್ಕಿನ ಹೊರತಾದ ವಿವಾದಿತ ಪ್ರಕರಣವಾಗಿದ್ದಲ್ಲಿ ಸದರಿ ಪ್ರಕರಣವನ್ನು ಕರ್ನಾಟಕ ಭೂ ಕಂದಾಯ ಅಧಿನಿಯಮದಡಿ ಪರಿಶೀಲಿಸಿ ಅರ್ಜಿ ಸ್ವೀಕೃತಗೊಂಡ ಮೂರು ತಿಂಗಳೊಳಗಾಗಿ ಇತ್ಯರ್ಥ ಪಡಿಸಲು ತಹಶೀಲ್ದರರು ಕ್ರಮವಹಿಸುವುದು ಎಂಬುದಾಗಿ ತಿಳಿಸಿದ್ದಾರೆ.
ಮ್ಯುಟೇಷನ್, ಖಾತಾ ಮತ್ತು ಆರ್ ಟಿ ಸಿ ಬದಲಾವಣೆಗಳಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗುವ ಅರ್ಜಿಗಳು ಆಸ್ತಿ ಹಕ್ಕಿನ ಕುರಿತಾದ ವಿವಾದಕ್ಕೆ ಸಂಬಂಧಿಸಿದ್ದಲ್ಲಿ, ಈ ಬಗ್ಗೆ ತಹಶೀಲ್ದಾರವರು ನಿಯಮಾನುಸಾರ ಪರಿಶೀಲಿಸಿ, ಆಕ್ಷೇಪಣಾ ಅವಧಿ ಮುಕ್ತಾಯಗೊಂಡ 15 ದಿನಗಳ ಒಳಗಾಗಿ ಉಭಯ ಪಕ್ಷಕಾರರಿಗೆ ಸಕ್ಷಮ ಸಿವಿಲ್ ನ್ಯಾಯಾಲಯಕ್ಕೆ ಮೊರೆ ಹೋಗುವಂತೆ ಸೂಕ್ತ ಹಿಂಬರಹ ನೀಡುವುದು ಎಂದು ಹೇಳಿದ್ದಾರೆ.
ಬೆಂಗಳೂರು : ಅರಣ್ಯ ಪ್ರದೇಶಗಳಲ್ಲಿ ಅರಣ್ಯ ಇಲಾಖೆ ಹಣ್ಣಿನ ಮರಗಳನ್ನು ಹೆಚ್ಚು ಬೆಳೆಸಲು ಕ್ರಮ ತೆಗೆದುಕೊಳ್ಳಿ, ಇದರಿಂದ ಪ್ರಾಣಿ-ಪಕ್ಷಿಗಳಿಗೆ ಆಹಾರವನ್ನು ಒದಗಿಸುವುದರ ಜೊತೆ ಅರಣ್ಯ ಪ್ರದೇಶದ ಹೆಚ್ಚಳ ಆಗುತ್ತದೆ, ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಅದು ಇಂದು ಬೆಂಗಳೂರಿನ ಅರಣ್ಯ ಭವನದಲ್ಲಿ ಎಲ್ಲಾ ವೃತ್ತಗಳ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಪ್ರಾದೇಶಿಕ ವನ್ಯಜೀವಿ /ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ ಅವರು, ಅರಣ್ಯ ಅಭಿವೃದ್ಧಿಗೆ ಅರಣ್ಯವಾಸಿಗಳ ಮತ್ತು ರೈತರ ಸಹಕಾರ ಬಹಳ ಮುಖ್ಯ ,ಅವರೊಂದಿಗೆ ಸೌಹಾರ್ದಯುತ ಸಂಬಂಧ ಬೆಳೆಸಿಕೊಳ್ಳುವುದು ಅರಣ್ಯ ಅಧಿಕಾರಿಗಳ ಕರ್ತವ್ಯ ಎಂದು ಕಿವಿಮಾತು ಹೇಳಿದರು.
ರಾಜ್ಯದಲ್ಲಿ ಹಸಿರು ವಲಯ ಹೆಚ್ಚಳ ಮಾಡಬೇಕಿದೆ. ಈಗ ಶೇಕಡ 22.8 ರಷ್ಟಿದೆ .ಅದನ್ನು ಶೇಕಡಾ 33 ರಷ್ಟು ಹೆಚ್ಚಿಸಬೇಕು, ಅದಕ್ಕೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ಒದಗಿಸುವುದಾಗಿ ಅವರು ತಿಳಿಸಿದರು.
ಬೇಸಿಗೆ ಸಮೀಪಿಸುತ್ತಿದೆ, ಕಾಡ್ಗಿಚ್ಚು ಹಬ್ಬ ಬಹುದು, ಅದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಿ, ಅರಣ್ಯ ಅಭಿವೃದ್ಧಿಗೆ ಬೇಕಾದ ಅನುದಾನವನ್ನು ನೀಡಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಮಾತನಾಡಿದ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಅರವಿಂದ ಲಿಂಬಾವಳಿ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಕಟ್ಟುನಿಟ್ಟಾಗಿ ತಡೆಯಬೇಕು ಅರಣ್ಯ ಪ್ರದೇಶಗಳಲ್ಲಿ ಗಣಿಗಾರಿಕೆಗೆ ಅನುಮತಿ ನೀಡಬಾರದು, ಗಣಿಗಾರಿಕೆಯಿಂದ ಪ್ರಾಣಿಗಳ ಆಹಾರ ಪದ್ಧತಿ ಬದಲಾಗಿದೆ, ಹಾಗೂ ಆ ಶಬ್ದಗಳಿಂದ ಹೆದರಿ ಅವು ಸಮೀಪ ಇರುವ ನಗರ ಪಟ್ಟಣ ಪ್ರದೇಶಗಳಿಗೆ ನುಗ್ಗುತ್ತಿದೆ ಇದರಿಂದ, ಅನೇಕ ರೀತಿಯ ಆಪತ್ತುಗಳು ಉಂಟಾಗುತ್ತಿವೆ ಎಂದು ಅವರು ಹೇಳಿದರು.
ಮಾನವ ಮತ್ತು ಪ್ರಾಣಿಗಳ ಸಂಘರ್ಷದ ಬಗ್ಗೆ ಅರಣ್ಯ ಇಲಾಖೆ ಹೆಚ್ಚು ಗಮನ ಹರಿಸಿದೆ. ಕಾಡು ಪ್ರಾಣಿಗಳಿಂದ ಮನುಷ್ಯರು ಸಾವಿಗೀಡಾದಾಗ ನೀಡಲಾಗುತ್ತಿರುವ ಪರಿಹಾರವನ್ನು ಹೆಚ್ಚು ಮಾಡಬೇಕು, ದೊಡ್ಡ ಪ್ರಾಣಿಗಳು ಮತ್ತು ಸಣ್ಣ ಪ್ರಾಣಿಗಳು ಸತ್ತಾಗ ನಾವು 5000 ಮತ್ತು ಹತ್ತು ಸಾವಿರ ರೂಪಾಯಿಗಳ ಪರಿಹಾರ ನೀಡುತ್ತಿದ್ದೇವೆ, ಇದನ್ನು ಹೆಚ್ಚಳ ಮಾಡಬೇಕಿದೆ ಎಂದು ಅವರು ಹೇಳಿದರು.
ಮುಖ್ಯವಾಗಿ ಕೆಳಹಂತದ ಅರಣ್ಯ ಇಲಾಖೆಯ ನೌಕರರು ಅರಣ್ಯ ಸಂರಕ್ಷಣೆಗೆ ವಾಹನ ಬಳಸಬೇಕಾದ್ದು ಅನಿವಾರ್ಯ . ಆದರೆ ನಾವು ಅವರಿಗೆ ವಾಹನ ಬದಗಿಸಿಲ್ಲ, ಅವರದ್ದೇ ಸ್ವಂತ ದ್ವಿಚಕ್ರವಾಹನ ಬಳಸುತ್ತಿದ್ದಾರೆ ,ನಾವು ಕನಿಷ್ಠ ಇಂಧನ ಭತ್ಯೆಯನ್ನದರೂ ಕೊಡಬೇಕಿದೆ ಎಂದು ಅವರು ತಿಳಿಸಿದರು.
ಕಾಡು ಪ್ರಾಣಿಗಳು ನಗರಕ್ಕೆ ನುಗ್ಗದಂತೆ ವಿಶೇಷವಾಗಿ ಕಾಡಾನೆಗಳು ಬರದಹಾಗೆ ಬ್ಯಾರಿಕೇಡ್ ನಿರ್ಮಾಣ ಮಾಡಲು ಅನುಮತಿ ಕೋರಿ ಸದ್ಯದಲ್ಲೇ ಸರ್ಕಾರಕ್ಕೆ ನಿಯೋಗದೊಂದಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು
ಬೆಂಗಳೂರು : ಆ ಇಬ್ಬರು ಡಿಲಿವರಿ ಬಾಯ್ ಗಳಾಗಿ ಕೆಲಸ ಮಾಡುತ್ತಿದ್ದರು. ನಡುರಾತ್ರಿಯಲ್ಲಿ ಹಸಿದವರಿಗೆ ಊಟ ಕೊಟ್ಟು, ಹಿಂದಿರುಗುತ್ತಿದ್ದ ವೇಳೆ, ಯಮರೂಪಿಯಾಗಿ ಬಂದಂತ ಕಾರೊಂದು, ದಿಢೀರ್ ಡಿಕ್ಕಿ ಹೊಡೆದಿತ್ತು. ಕಾರು ಡಿಕ್ಕಿಯಾದಂತ ರಭಸಕ್ಕೆ ನೂರು ಮೀಟರ್ ದೂರ ಹಾರಿ ಬಿದ್ದು, ಹಸಿದವರ ಹೊಟ್ಟೆ ತುಂಬಿಸಲು ಹೋಗಿ, ಪ್ರಾಣವನ್ನೇ ತೆತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಅಪಘಾದತ ಐದು ಸೆಕೆಂಡ್ ದೃಶ್ಯಾವಳಿ, ಬೆಟ್ಟಿ ಬೀಳಿಸುತ್ತಿದೆ.
ಹೌದು.. ಇಂತದ್ದೊಂದು ಘಟನೆ ಬೆಂಗಳೂರಿನ ಜಾಲಹಳ್ಳಿ ವಿಲೇಜ್ ರಸ್ತೆಯಲ್ಲಿ ನಡೆದಿದೆ. ಗೌತಮ್ ಹಾಗೂ ಶ್ರೀಕಾಂತ್ ಡಿಸಿಲವರಿ ಬಾಯ್ ಗಳಾಗಿ ಕೆಲಸ ಮಾಡುತ್ತಿದ್ದರು. ಮಂಗಳವಾರ ರಾತ್ರಿ 1.20ರ ವೇಳೆಗೆ ಜಾಲಹಳ್ಳಿ ವಿಲೇಜ್ ರಸ್ತೆಯ ಅಪಾರ್ಟ್ಮೆಂಟ್ ಒಂದರಲ್ಲಿ ಊಟದ ಆರ್ಡರ್ ಬಂದಿದ್ದರಿಂದ ತಮ್ಮ ಸ್ಕೂಟಿಯಲ್ಲಿ ತೆಗೆದುಕೊಂಡು ಹೋಗಿ, ಕೊಟ್ಟು ಹೊರಡುತ್ತಿದ್ದರು.
ಊಟ ಕೊಟ್ಟು ರಸ್ತೆಗೆ ತಮ್ಮ ಸ್ಕೂಟಿ ತಿರುಗಿಸಿದ್ದೇ ತಡ, ದಿಢೀರ್ ಶರವೇಗವಾಗಿ ಬಂದಂತ ಕಾರೊಂದು, ಸ್ಕೂಟಿಗೆ ಡಿಕ್ಕಿ ಹೊಡಿದಿದೆ. ಡಿಕ್ಕಿಯಿಂದಾಗಿ ಗೌತಮ್ ಮತ್ತು ಶ್ರೀಕಾಂತ್ ನೂರು ಮೀಟರ್ ಹಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಸ್ಕೂಟಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕ ಕಾರು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಜಸ್ಟ್ ಐದು ಸೆಕೆಂಡ್ ನಲ್ಲಿ ನಡೆದುಹೋದಂತ ಅಪಘಾತದ ದೃಶ್ಯ ಅಪಾರ್ಟ್ಮೆಂಟ್ ಮುಂದಿರುವಂತ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ಕೇರಳದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದಂತ ವಿದ್ಯಾರ್ಥಿನಿಗೆ ಕಾಮುಕನೊಬ್ಬ, ರೈಲಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಇಂತಹ ಕಿರುಕುಳವನ್ನು ವಿದ್ಯಾರ್ಥಿನಿ ರೆಕಾರ್ಡ್ ಮಾಡಿಕೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಮಂಗಳೂರಿನಲ್ಲಿ ಬಂದಿಸಿದ್ದಾರೆ.
ಈ ಎಲ್ಲಾ ಲೈಂಗಿಕ ಕಿರುಕುಳದ ಕಾಮುಕನ ಆಟವನ್ನು ವಿದ್ಯಾರ್ಥಿನಿ ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದು, ನಂತ್ರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, ಕಾಮುಕನ ಬಂಧನಕ್ಕೆ ಮನವಿ ಮಾಡಿದ್ದಳು. ಈ ವೀಡಿಯೋ ದೃಶ್ಯಾವಳಿ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದಂತ ರೈಲ್ವೆ ಪೊಲೀಸರು, ಕಾಮುಕನನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ.
ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದಂತೆ ಅನಾಮಧೇಯ ದೂರುಗಳನ್ನು ತನಿಖೆಗೆ ಒಳಪಡಿಸದೇ ಇರೋದಕ್ಕೆ ಆದೇಶಿಸಿತ್ತು. ಇದನ್ನೇ ದುರುಪಯೋಗಪಡಿಸಿಕೊಂಡು, ಕೆಲವರು ಈಗ ನಕಲಿ ಹೆಸರು ಹಾಗೂ ನಕಲಿ ವಿಳಾಸದಿಂದ ಪತ್ರ ಬರೆದು, ಸರ್ಕಾರಿ ನೌಕರರ ವಿರುದ್ಧ ದೂರು ನೀಡುತ್ತಿದ್ದಾರೆ. ಇಂತಹ ಅನಗತ್ಯ ಕಿರಿಕಿರಿಗೆ ಬ್ರೇಕ್ ಹಾಕಿರುವಂತ ರಾಜ್ಯ ಸರ್ಕಾರ, ದೂರು ನೀಡಿರುವ ವ್ಯಕ್ತಿಯ ಹೆಸರು, ವಿಳಾಸವನ್ನು ಖಚಿತಪಡಿಸಿಕೊಂಡು ಆನಂತ್ರ ಅದಕ್ಕೆ ಸಂಬಂಧಿಸಿದಂತ ದಾಖಲೆ ಒದಗಿಸಿದ್ರೇ ಮಾತ್ರವೇ ಅಂತಹ ಸರ್ಕಾರಿ ನೌಕರನ ವಿರುದ್ಧ ಪ್ರಾಥಮಿಕ ತನಿಖೆ, ವಿಚಾರಣೆ ನಡೆಸಲು ಕ್ರಮ ಕೈಗೊಳ್ಳುವ ನಿರ್ಧಾರ ಕೈಗೊಂಡಿದೆ. ಈ ಮೂಲಕ ರಾಜ್ಯದ ಸರ್ಕಾರಿ ನೌಕರರಿಗೆ ಬಿಗ್ ರಿಲೀಫ್ ನೀಡಿದೆ.
ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆದೇಶಿಸಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಅನಾಮಧೇಯ ದೂರುಗಳು ತನಿಖೆಗೆ ಒಳಪಡಿಸದೇ ಇರಲು ಕೇಂದ್ರ ಸರ್ಕಾರದ ಮಾದರಿಯಲ್ಲೇ ರಾಜ್ಯ ಸರ್ಕಾರದಿಂದ ದಿನಾಂಕ 3-10-2019ರನ್ವಯ ಸುತ್ತೋಲೆಯಲ್ಲಿ ಹೊರಡಿಸಲಾಗಿತ್ತು.
ಆದ್ರೇ ಸದರಿ ಸುತ್ತೋಲೆಯನ್ನು ಅನೇಕರು ದುರುಪಯೋಗಪಡಿಸಿಕೊಂಡು ನಕಲಿ ಹೆಸರು ಮತ್ತು ನಕಲಿ ವಿಳಾಸವನ್ನು ಬಳಸಿಕೊಂಡು ರಾಜ್ಯ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಬೇನಾಮಿ ದೂರುಗಳನ್ನು ನೀಡಿ, ನೌಕರರನ್ನು ಅನಗತ್ಯವಾಗಿ ತನಿಖೆಗೆ, ವಿಚಾರಣೆಗೆ ಒಳಪಡಿಸುವುದರಿಂದ ಅಧಿಕಾರಿ, ನೌಕರರಿಗೆ ತಮ್ಮ ದೈನಂದಿನ ಕೆಲಸ ಕಾರ್ಯಗಳಲ್ಲಿ ಹಸ್ತಕ್ಷೇಪ ಉಂಟಾಗಿ, ದಕ್ಷ ಹಾಗೂ ಪ್ರಾಮಾಣಿಕ ನೌಕರರಿಗೆ ಧಕ್ಯೆ ಉಂಟಾಗುತ್ತಿದೆ. ಅಲ್ಲದೇ ಆಡಳಿತಾತ್ಮಕ ಸಮಸ್ಯೆಗಳು ಉದ್ಭವವಾಗಿ, ಸರ್ಕಾರಿ ಕೆಲಸ ಕಾರ್ಯಗಳು, ಯೋಜನೆಗಳು ಕುಂಠಿತವಾಗುತ್ತಿವೆ. ಇದನ್ನು ತಪ್ಪಿಸಿ ಮುಕ್ತ ಮತ್ತು ನಿರ್ಭೀತಿಯಿಂದ ಸರ್ಕಾರಿ ಅಧಿಕಾರಿ, ನೌಕರರ ಕರ್ತವ್ಯ ನಿರ್ವಹಿಸಲು ಅನುಕೂಲ ಕಲ್ಪಿಸಲು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ನೌಕರರ ಪರವಾಗಿ ಕೋರಿರುತ್ತಾರೆ.
ಇದರಿಂದಾಗಿ ಈಗಾಗಲೇ ಹೊರಡಿಸಿರುವ ಸರ್ಕಾರದ ಸುತ್ತೋಲೆಯ ಕಂಡಿಕೆ-4ರಲ್ಲಿ ಪೂರ್ಣ ವಿಳಾಸ ಸಹಿತವಿರುವ ದೂರುಗಳನ್ನು ತನಿಖೆಗೆ, ವಿಚಾರಣೆಗೆ ಪರಿಗಣಿಸುವುದು ಎಂಬುದನ್ನು ಮಾರ್ಪಡಿಸಿ, ದೂರು ನೀಡಿರುವ ವ್ಯಕ್ತಿಯ ಹೆಸರು ಮತ್ತು ವಿಳಾಸವನ್ನು ಖಚಿತಪಡಿಸಿಕೊಂಡು ಅರ್ಜಿದಾರರು, ದೂರುದಾರರು ಅಗತ್ಯ ಪೂರಕ ದಾಖಲೆಗಳನ್ನು ಒದಗಿಸಿದ ನಂತ್ರ ಸದರಿ ದೂರುದಾರರ ಆರೋಪವು ಮೇಲ್ನೋಟಕ್ಕೆ ಕಂಡುಬಂದಲ್ಲಿ, ಅಂತಹ ದೂರು ಅರ್ಜಿಗಳನ್ನು ಪ್ರಾಥಮಿಕ ತನಿಖೆಗೆ, ವಿಚಾರಣೆಗೆ ಪರಿಗಣಿಸುವುದು ಎಂಬುದಾಗಿ ಸೂಕ್ತ ಆದೇಶ ಹೊರಡಿಸುವಂತೆ ವಿನಂತಿಸಿರುತ್ತಾರೆ.
ಈ ಹಿನ್ನಲೆಯಲ್ಲಿ, ರಾಜ್ಯದ ಸರ್ಕಾರಿ ಅಧಿಕಾರಿ, ನೌಕರರು ಮುಕ್ತ ಮತ್ತು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಿಸಲು ಹಾಗೂ ಆಡಳಿತ ವ್ಯವಸ್ಥೆಯಲ್ಲಿನ ಕಾನೂನಿನ ದುರುಪಯೋಗವನ್ನು ತಡೆಗಟ್ಟುವ ದೃಷ್ಠಿಯಿಂದ ಸೂಕ್ತ ಆದೇಶ ಹೊರಡಿಸಲು ಸೂಚಿಸಿದ್ದಾರೆ. ಈ ಮೂಲಕ ರಾಜ್ಯದ ಸರ್ಕಾರಿ ಅಧಿಕಾರಿ, ನೌಕರರಿಗೆ ಬಿಗ್ ರಿಲೀಫ್ ನೀಡಿದ್ದಾರೆ.
ಕಲಬುರಗಿ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಸಂಘಗಳಿಗೆ ಆರ್ಥಿಕ ಚಟುವಟಿಕೆಗಳಿಗಾಗಿ ಪ್ರಸ್ತುತ ನೀಡಲಾಗುತ್ತಿರುವ ಷೇರು ಬಂಡವಾಳದ ಮೊತ್ತವನ್ನು 10 ಲಕ್ಷ ರೂ. ದಿಂದ 20 ಲಕ್ಷ ರೂ. ಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯಡಿಯಲ್ಲಿ ಸಹಕಾರ ಸಂಘವು ನೋಂದಣೆಯಾಗಿರಬೇಕು. ಸಹಕಾರ ಸಂಘವು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿರಬೇಕು. ಕರ್ನಾಟಕದ ಸಹಕಾರ ಸಂಘಗಳ ಕಾಯ್ದೆಯನ್ವಯ ಎಲ್ಲಾ ಷರತ್ತು ಮತ್ತು ನಿಬಂಧನೆಗಳನ್ನು ಪಾಲಿಸಬೇಕು.
ಸಹಕಾರ ಸಂಘವು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯನ್ವಯ ವಾರ್ಷಿಕ ವರದಿ ಕಡ್ಡಾಯವಾಗಿ ಪ್ರಕಟಿಸಬೇಕು. ಸಹಕಾರ ಸಂಘದ ಸದಸ್ಯರಿಂದ ಪಾವತಿಯಾದ ಷೇರು ಬಂಡವಾಳದ ಶೇ.50 ರಷ್ಟು ಅಥವಾ ಗರಿಷ್ಟ 20.00 ಲಕ್ಷ ರೂ.ಗಳ ಷೇರು ಬಂಡವಾಳ ರೂಪದಲ್ಲಿ ಸರ್ಕಾರದಿಂದ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ : 2020-21ನೇ ಸಾಲಿಗೆ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯ 2 ವಿದ್ಯುತ್ಮಗ್ಗ ಯೋಜನೆಯಡಿ ವಿದ್ಯುತ್ ಮಗ್ಗ ಚಟುವಟಿಕೆ ಕೈಗೊಳ್ಳುವ ಉದ್ದೇಶವಿರುವ ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ (ಜಿ.ಪಂ.) ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಘಟಕದ ವೆಚ್ಚ 3,00,000 ರೂ.ಗಳಾಗಿದ್ದು, ಈ ಮೊತ್ತವನ್ನು ಹಣಕಾಸು ಸಂಸ್ಥೆಗಳಿಂದ (ಬ್ಯಾಂಕ್) ಸಾಲ ಪಡೆದು ನಂತರ ಯಂತ್ರೋಪಕರಣಗಳನ್ನು ಖರೀದಿಸಿ ಅಳವಡಿಸಿ ಉತ್ಪಾದನೆ ಪ್ರಾರಂಭಿಸಿದ ನಂತರ ಅರ್ಜಿ ಸಲ್ಲಿಸಬಹುದಾಗಿದೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.90 ರಷ್ಟು ಸಹಾಯಧನವನ್ನು ಸಂಬಂಧಪಟ್ಟ ಸಾಲ ನೀಡಿದ ಬ್ಯಾಂಕುಗಳಿಗೆ ಆರ್.ಟಿ.ಜಿ.ಎಸ್ ಮೂಲಕ ಜಮಾ ಮಾಡಲಾಗುವುದು. ಆಸಕ್ತಿಯುಳ್ಳ ಫಲಾನುಭವಿಗಳು 2021ರ ಫೆಬ್ರವರಿ 28 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಎರಡನೇ ಮಹಡಿ, ಕೊಠಡಿ ಸಂಖ್ಯೆ 15, ಮಿನಿ ವಿಧಾನ ಸೌಧ, ಕಲಬುರಗಿ-585102 ಕಚೇರಿಯನ್ನು ಅಥವಾ ಕಚೇರಿ ದೂರವಾಣಿ ಸಂಖ್ಯೆ: 08472-278629ಗೆ ಸಂಪರ್ಕಿಸಲು ಕೋರಲಾಗಿದೆ.
ತರಬೇತಿ ಪಡೆಯಲಿಚ್ಚಿಸುವ ಏರೋನಾಟಿಕಲ್, ಮೆಕಾನಿಕ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್, ಸಿವಿಲ್, ಕಂಪ್ಯೂಟರ್ ಸೈನ್ಸ್ ಮತ್ತು ಇನ್ಫರ್ಮೇಷನ್ ಸೈನ್ಸ್, ಮೆಟಲರ್ಜಿ, ಕಮರ್ಷಿಯಲ್ ಪ್ರಾಕ್ಟೀಸ್ ಇಂಜಿನಿಯರಿಂಗ್ಗಳನ್ನು ಪಾಸಾಗಿರುವ ಅಭ್ಯರ್ಥಿಗಳು 2ನೇ ಕ್ರಾಸ್, ಪಂಪನಗರ, ಗುತ್ಯಪ್ಪ ಕಾಲೋನಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಅರ್ಜಿಯನ್ನು ದಿ: 10/03/2021 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಶಿವಮೊಗ್ಗ : ಜಿಲ್ಲಾ ತೋಟಗಾರಿಕೆ ಇಲಾಖೆಯು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ರೈತರಿಗೆ 2020-21ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ/ತುಂತುರು ನೀರಾವರಿ ಅಳವಡಿಕೆಗೆ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-222633 ನ್ನು ಅಥವಾ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿ ಅಥವಾ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕಾ ಅಧಿಕಾರಿಗಳನ್ನು ಸಂಪರ್ಕಿಸುವುದು.
ಮೈಸೂರು : ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕದ ಪೊಲೀಸರು ನಂಬರ್ 1 ಆಗಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕೊಲೆ ಆರೋಪಿಗಳನ್ನು ಬಂಧಿಸಿದ್ದೇ ಕರ್ನಾಟಕ ಪೊಲೀಸರು. ನಮ್ಮ ಪೊಲೀಸ್ ಇಲಾಖೆ ದೇಶದಲ್ಲಿಯೇ ಮಾದರಿ. ಕಾನೂನು ರೀತಿ ಪೊಲೀಸ್ ಅಧಿಕಾರಿ ನಡೆದರೆ ಯಾರೂ ಹಸ್ತಕ್ಷೇಪ ಮಾಡಲ್ಲ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಇಲ್ಲಿನ ಪೋಲಿಸ್ ಅಕಾಡೆಮಿಯಲ್ಲಿ ಡಿವೈಎಸ್ಪಿ ಹಾಗೂ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಬ್ಯಾಚ್ ನ ಪ್ರಶಿಕ್ಷಣಾರ್ಥಿಗಳ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಯಾವುದೇ ರಾಜ್ಯಕ್ಕೆ ಹೋಗಲಿ ಕರ್ನಾಟಕ ಪೊಲೀಸ್ ಬಗ್ಗೆ ಅಭಿಮಾನ ಹಾಗೂ ಮಾದರಿಯಾಗಿ ಹೇಳಲಾಗುತ್ತದೆ ಎಂದು ಅಭಿಮಾನವನ್ನು ವ್ಯಕ್ತಪಡಿಸಿದರು.
ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕರಾದ ವಿಪುಲ್ ಕುಮಾರ್ ಅವರು ಸಮರ್ಥ ಹಾಗೂ ದಕ್ಷ ಪೊಲೀಸ್ ಅಧಿಕಾರಿಯಾಗಿದ್ದಾರೆ. ಅವರ ನೇತೃತ್ವದಲ್ಲಿ ಅಕಾಡೆಮಿಯಲ್ಲಿ ವ್ಯವಸ್ಥಿತವಾಗಿ ನೋಡಿಕೊಳ್ಳಲಾಗುತ್ತಿದೆ. ಸ್ವಚ್ಛತೆಯನ್ನು ಕಾಯ್ದುಕೊಳ್ಳಲಾಗಿದೆ. ಆಸ್ಪತ್ರೆ, ಜಿಮ್, ಮೈದಾನ ಸೇರಿದಂತೆ ಇನ್ನಿತರ ವಿಭಾಗಗಳನ್ನು ಗಮನಿಸಿದ್ದು, ಉತ್ತಮವಾಗಿ ನಿರ್ವಹಣೆ ಮಾಡಲಾಗುತ್ತಿದೆ ಎಂದು ಸಚಿವರಾದ ಸೋಮಶೇಖರ್ ಶ್ಲಾಘನೆ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ನಾನು ಕಳೆದ ಒಂದು ವರ್ಷದಿಂದ ಸಂಚರಿಸುತ್ತಿದ್ದೇನೆ. ಇದುವರೆಗೆ ಒಂದು ಸಣ್ಣ ಗಲಾಟೆ ಸಹ ಆಗಿಲ್ಲ. ಕೋವಿಡ್ ಸಂದರ್ಭದಲ್ಲಿಯೂ ಸಹ ಉತ್ತಮವಾಗಿ ಪೋಲಿಸರು ಕಾರ್ಯನಿರ್ವಹಣೆ ಮಾಡಿದ್ದಾರೆ. ಇಂದು ರಾಜ್ಯದ ಜನ ರಾತ್ರಿ ನೆಮ್ಮದಿಯಾಗಿ ಮಲಗುತ್ತಿದ್ದಾರೆಂದರೆ ಪೊಲೀಸರ ಪಾತ್ರ ಮಹತ್ವದ್ದಾಗಿದೆ. ಇದರಲ್ಲಿ ನೂತನ ಪೊಲೀಸರ ಜವಾಬ್ದಾರಿ ಹೆಚ್ಚಿದೆ ಕೇಂದ್ರ ಸಚಿವರಾದ ಸೋಮಶೇಖರ್ ಅವರು ಕಿವಿಮಾತು ಹೇಳಿದರು.
ಪೊಲೀಸರು ಉತ್ತಮ ತರಬೇತಿ ಪಡೆಯಬೇಕು. ಜೊತೆಗೆ ಮೈಸೂರಿನಲ್ಲಿ ಸುಸಜ್ಜಿತ ಗ್ರಂಥಾಲಯವಿದೆ. ಕೆಲವೊಂದು ಮಹತ್ವದ ತೀರ್ಪುಗಳ ಪ್ರತಿಗಳು ಸಿಗಲಿವೆ. ಇಂಥವುಗಳನ್ನು ಅಭ್ಯಾಸ ಮಾಡಬೇಕು. ಯಾವುದೇ ಒಂದು ಪ್ರಕರಣ ಇರಲಿ, ಅದರ ಸಂಪೂರ್ಣ ಆಯಾಮದಲ್ಲಿ ತನಿಖೆ ನಡೆಸಬೇಕಿದೆ. ನೀವು ದಕ್ಷ, ಪ್ರಾಮಾಣಿಕ ಅಧಿಕಾರಿಯಾದರೆ ಜನರ ಅಭಿಮಾನಿಸುವುದರ ಜೊತೆಗೆ ಕ್ರಿಮಿನಲ್ ಗಳು ಹೆದರುತ್ತಾರೆ ಎಂದು ಸಚಿವರು ಸಲಹೆ ನೀಡಿದರು.
ನೂತನ ಪೊಲೀಸ್ ಅಧಿಕಾರಿಗಳು ಉತ್ಸುಕತೆಯಿಂದ ಕೆಲಸ ಮಾಡಬೇಕು. ತಮ್ಮ ಸೇವೆ ನಮ್ಮ ಕರ್ನಾಟಕದ ಜನತೆಗೆ ಉತ್ತಮ ರೀತಿಯಲ್ಲಿ ಸಿಗಲಿ ಎಂದು ಸಚಿವರಾದ ಸೋಮಶೇಖರ್ ಅವರು ಹಾರೈಸಿದರು.