Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್ : ಪ್ರಕರಣದ ಬಗ್ಗೆ ಮಧ್ಯಂತರ ವರದಿಗೆ ಬಿಜೆಪಿ ಒತ್ತಡ : ಗೃಹ ಸಚಿವ ಜಿ.ಪರಮೇಶ್ವರ್

11/08/2025 11:03 AM

ಪರಿಷ್ಕೃತ ಹೊಸ ಆದಾಯ ತೆರಿಗೆ ಮಸೂದೆ 2025: ಇಂದು ಮಂಡನೆಯಾಗಲಿರುವ ಮಸೂದೆಯಲ್ಲಿ 10 ಪ್ರಮುಖ ಬದಲಾವಣೆಗಳು

11/08/2025 10:58 AM

ಇಂದು ಲೋಕಸಭೆಯಲ್ಲಿ `ಹೊಸ ಆದಾಯ ತೆರಿಗೆ ಮಸೂದೆ’ ಮಂಡನೆ : ಇದರ ವಿಶೇಷತೆಗಳ ಬಗ್ಗೆ ತಿಳಿಯಿರಿ

11/08/2025 10:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಂದಿನ ವರ್ಷದಿಂದ ಶಂಕರಾಚಾರ್ಯರರ ಹೆಸರಲ್ಲಿ ಪ್ರಶಸ್ತಿ: ಸಚಿವ ಶಿವರಾಜ್ ತಂಗಡಗಿ
KARNATAKA

ಮುಂದಿನ ವರ್ಷದಿಂದ ಶಂಕರಾಚಾರ್ಯರರ ಹೆಸರಲ್ಲಿ ಪ್ರಶಸ್ತಿ: ಸಚಿವ ಶಿವರಾಜ್ ತಂಗಡಗಿ

By kannadanewsnow0902/05/2025 8:58 PM

ಬೆಂಗಳೂರು: ಶಂಕರಾಚಾರ್ಯರ ಹೆಸರಿನಲ್ಲಿ ಮುಂದಿನ ವರ್ಷದಿಂದ ಪ್ರಶಸ್ತಿ ನೀಡಲಾಗುವುದು ಎಂದು ಸಚಿವರು ಇದೇ ವೇಳೆ ಘೋಷಿಸಿದರು. ಪ್ರಶಸ್ತಿ ಆಯ್ಕೆಗಾಗಿ ಸಮಿತಿಯನ್ನು ರಚಿಸಲಾಗುವುದು. ಅರ್ಹರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಶ್ರೀ ಆದಿ ಶಂಕರಾಚಾರ್ಯರ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆದಿ ಶಂಕರಾಚಾರ್ಯರು ಅದ್ವೈತ ವೇದಾಂತದ ಅಡಿಪಾಯವನ್ನು ಹಾಕುವ ಮೂಲಕ ಸಾಂಸ್ಕೃತಿಕ ಮತ್ತು ಧಾರ್ಮಿಕ ಅವನತಿಯ ಸಮಯದಲ್ಲಿ ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು ಎಂದು ಅಭಿಪ್ರಾಯಪಟ್ಟರು.

ಆಧ್ಯಾತ್ಮಿಕ ಕ್ರಾಂತಿಕ ಹರಿಕಾರರಾಗಿದ್ದ ಶಂಕರಾಚಾರ್ಯರು ಭಾರತೀಯ ತತ್ವಶಾಸ್ತ್ರದ ಶ್ರೇಷ್ಠ ವ್ಯಕ್ತಿಯಲ್ಲಿ ಒಬ್ಬರಾಗಿದ್ದರು.‌ 8ನೇ ವಯಸ್ಸಿನಲ್ಲೇ ಮಹನೀಯರು ಅಪಾರ ಜ್ಞಾನ ಹೊಂದಿದ್ದರು. ತಮ್ಮ 32 ವಯಸ್ಸಿನಲ್ಲೇ ಅಪಾರ ಮೈಲಿಗಲ್ಲು ಸ್ಥಾಪಿಸಿದ್ದರು ಎಂದು ಶ್ಲಾಘಿಸಿದರು.

ಧರ್ಮದ‌ ಹೆಸರಲ್ಲಿ ದಾರಿ‌ ತಪ್ಪಿಸುವ ಕೆಲಸ:

ಧರ್ಮದ ಹೆಸರಿನಲ್ಲಿ ಹರಡುತ್ತಿರುವ ವಿವಿಧ ರೀತಿಯ ತಪ್ಪು ಕಲ್ಪನೆಗಳನ್ನು ಹೋಗಲಾಡಿಸವ ಕೆಲವನ್ನು ಶಂಕರಾಚಾರ್ಯರು ಮಾಡಿದ್ದರು. ಆದರೆ ಇವತ್ತು ಧರ್ಮದ ಹೆಸರಿನಲ್ಲಿ ಕೆಲವರು ಯುವ ಸಮುದಾಯವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಈ ವಿಚಾರವಾಗಿ ಜನ ಜಾಗೃತರಾಗಬೇಕು ಎಂದು ಸಚಿವರು ಕಿವಿಮಾತು ಹೇಳಿದರು.

ಶಂಕರಾಚಾರ್ಯರು, ಬಸವಣ್ಣ, ಕನಕದಾಸರು ಸೇರಿದಂತೆ ಹಲವು ಮಹನೀಯರು ಯಾವುದೇ ಒಂದು ಧರ್ಮ ಮತ್ತು ಜಾತಿಗೆ ಸಿಮೀತವಾದವರಲ್ಲ. ಈ ಮೇಲಿನ‌ ಮಹನೀಯರೆಲ್ಲರೂ ಚಿಕ್ಕ ವಯಸ್ಸಿನಲ್ಲೇ ಅಪಾರ ಸಾಧನೆ ಮಾಡಿದವರು. ಅವರೆಲ್ಲರ ಆಚಾರ,‌ ವಿಚಾರ ಮತ್ತು ಚಿಂತನೆಗಳು ಎಂದೆಂದಿಗೂ ಪ್ರಸ್ತುತ ಎಂದರು.

ಶಂಕರಾಚಾರ್ಯರರ ಹೆಸರಲ್ಲಿ ಮುಂದಿನ ವರ್ಷದಿಂದ ಪ್ರಶಸ್ತಿ

ಶಂಕರಾಚಾರ್ಯರ ಹೆಸರಿನಲ್ಲಿ ಮುಂದಿನ ವರ್ಷದಿಂದ ಪ್ರಶಸ್ತಿ ನೀಡಲಾಗುವುದು ಎಂದು ಸಚಿವರು ಇದೇ ವೇಳೆ ಘೋಷಿಸಿದರು. ಪ್ರಶಸ್ತಿ ಆಯ್ಕೆಗಾಗಿ ಸಮಿತಿಯನ್ನು ರಚಿಸಲಾಗುವುದು. ಅರ್ಹರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ‌ ದಿನೇಶ್ ಗುಂಡೂರಾವ್, ಕರ್ನಾಟಕ ರಾಜ್ಯ ಬ್ರಾಹ್ಮಣ‌ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆಸಗೋಡು ಜಯಸಿಂಹ, ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಸ್.ರಘುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ನಿರ್ದೇಶಕಿ ಕೆ.ಎಂ.ಗಾಯಿತ್ರಿ, ಡಾ.ಬಿ.ಎಸ್.ದ್ವಾರಕನಾಥ್, ವಿ.ಆರ್.ಗೌರಿಶಂಕರ್ ಹಾಗೂ ಇನ್ನಿತರ ಉಪಸ್ಥಿತರಿದ್ದರು.

ಬಿಜೆಪಿಯಿಂದ ಜಾತಿ- ಜಾತಿ ನಡುವೆ ವಿಷ ಬೀಜ ಬಿತ್ತುವ ಕೆಲಸ: ಸಚಿವ ಶಿವರಾಜ್ ತಂಗಡಗಿ ಕಿಡಿ

BREAKING : ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಕೇಸ್ : ಪ್ರಕರಣ ರದ್ದು ಕೋರಿ ಸಿ.ಟಿ ರವಿ ಸಲ್ಲಿಸಿದ್ದ ಅರ್ಜಿ ವಜಾ

Share. Facebook Twitter LinkedIn WhatsApp Email

Related Posts

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್ : ಪ್ರಕರಣದ ಬಗ್ಗೆ ಮಧ್ಯಂತರ ವರದಿಗೆ ಬಿಜೆಪಿ ಒತ್ತಡ : ಗೃಹ ಸಚಿವ ಜಿ.ಪರಮೇಶ್ವರ್

11/08/2025 11:03 AM1 Min Read

SHOCKING : ಬಂಡೀಪುರದಲ್ಲಿ ‘ಸೆಲ್ಪಿ’ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನನ್ನು ಅಟ್ಟಾಡಿಸಿ ತುಳಿದ `ಕಾಡಾನೆ’ : ವೀಡಿಯೋ ವೈರಲ್ |WATCH VIDEO

11/08/2025 10:49 AM1 Min Read

ಬಿಜೆಪಿಯವರು ಬೆಂಗಳೂರಿಗೆ ಏನು ತಂದಿಲ್ಲ, ಅದಕ್ಕೆ ನಾನು ಪ್ರಧಾನಿ ಮೋದಿಗೆ ಮನವಿ ಮಾಡಿದ್ದೇನೆ : ಡಿಸಿಎಂ ಡಿಕೆ ಶಿವಕುಮಾರ್

11/08/2025 10:37 AM1 Min Read
Recent News

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್ : ಪ್ರಕರಣದ ಬಗ್ಗೆ ಮಧ್ಯಂತರ ವರದಿಗೆ ಬಿಜೆಪಿ ಒತ್ತಡ : ಗೃಹ ಸಚಿವ ಜಿ.ಪರಮೇಶ್ವರ್

11/08/2025 11:03 AM

ಪರಿಷ್ಕೃತ ಹೊಸ ಆದಾಯ ತೆರಿಗೆ ಮಸೂದೆ 2025: ಇಂದು ಮಂಡನೆಯಾಗಲಿರುವ ಮಸೂದೆಯಲ್ಲಿ 10 ಪ್ರಮುಖ ಬದಲಾವಣೆಗಳು

11/08/2025 10:58 AM

ಇಂದು ಲೋಕಸಭೆಯಲ್ಲಿ `ಹೊಸ ಆದಾಯ ತೆರಿಗೆ ಮಸೂದೆ’ ಮಂಡನೆ : ಇದರ ವಿಶೇಷತೆಗಳ ಬಗ್ಗೆ ತಿಳಿಯಿರಿ

11/08/2025 10:54 AM

‘ಒಂದು ರಾಷ್ಟ್ರ ಒಂದು ಚುನಾವಣೆ’: ಆ. 19ರಂದು ಮಾಜಿ ಸಿಜೆಐ ಸಭೆ ನಡೆಸಲಿರುವ ಜೆಪಿಸಿ | One Nation, One Election

11/08/2025 10:52 AM
State News
KARNATAKA

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್ : ಪ್ರಕರಣದ ಬಗ್ಗೆ ಮಧ್ಯಂತರ ವರದಿಗೆ ಬಿಜೆಪಿ ಒತ್ತಡ : ಗೃಹ ಸಚಿವ ಜಿ.ಪರಮೇಶ್ವರ್

By kannadanewsnow0511/08/2025 11:03 AM KARNATAKA 1 Min Read

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆಯುತ್ತಿರುವಂತಹ SIT ಅಧಿಕಾರಿಗಳು ಅಸ್ಥಿಪಂಜರ ಶೋಧ ಕಾರ್ಯ ನಡೆಸುತ್ತಿದ್ದು, ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್…

SHOCKING : ಬಂಡೀಪುರದಲ್ಲಿ ‘ಸೆಲ್ಪಿ’ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನನ್ನು ಅಟ್ಟಾಡಿಸಿ ತುಳಿದ `ಕಾಡಾನೆ’ : ವೀಡಿಯೋ ವೈರಲ್ |WATCH VIDEO

11/08/2025 10:49 AM

ಬಿಜೆಪಿಯವರು ಬೆಂಗಳೂರಿಗೆ ಏನು ತಂದಿಲ್ಲ, ಅದಕ್ಕೆ ನಾನು ಪ್ರಧಾನಿ ಮೋದಿಗೆ ಮನವಿ ಮಾಡಿದ್ದೇನೆ : ಡಿಸಿಎಂ ಡಿಕೆ ಶಿವಕುಮಾರ್

11/08/2025 10:37 AM

BREAKING : ಆಸ್ಪತ್ರೆ ಉದ್ಘಾಟನೆ ವೇಳೆ 10 ನಿಮಿಷ `ಲಿಫ್ಟ್’ನಲ್ಲಿ ಸಿಲುಕಿದ ಸಚಿವ ರಾಮಲಿಂಗಾ ರೆಡ್ಡಿ.!

11/08/2025 10:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.