ನವದೆಹಲಿ: ‘ಆಜಾದಿ ಕಾ ಅಮೃತ್ ಮಹೋತ್ಸವ್’ ಜನಾಂದೋಲನವಾಗಿ ಬದಲಾಗುತ್ತಿದೆ. ಆಗಸ್ಟ್ 2 ಮತ್ತು 15 ರ ನಡುವೆ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ತಮ್ಮ ಖಾತೆಗಳ ಪ್ರೊಫೈಲ್ ಪಿಕ್ಚರ್ ಆಗಿ ‘ತಿರಂಗಾ’ ಅನ್ನು ಹಾಕುವಂತೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಆಗಸ್ಟ್ 13 ರಿಂದ 15 ರವರೆಗೆ ನಡೆಯಲಿರುವ ‘ಆಜಾದಿ ಕಾ ಅಮೃತ್ ಮಹೋತ್ಸವ’ದಡಿ ‘ಹರ್ ಘರ್ ತಿರಂಗಾ’ ಎಂಬ ವಿಶೇಷ ಆಂದೋಲನವನ್ನು ಆಯೋಜಿಸಲಾಗಿದೆ ಎಂದು ಮೋದಿ ತಮ್ಮ ಮನ್ ಕಿ ಬಾತ್ ರೇಡಿಯೋದಲ್ಲಿ ಹೇಳಿದ್ದಾರೆ.ನಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಈ ಆಂದೋಲನವನ್ನು ಮುಂದುವರಿಸೋಣ” ಎಂದು ಹೇಳಿದ್ದಾರೆ.
ಆಗಸ್ಟ್ 2 ರಿಂದ 15 ರವರೆಗೆ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ತಮ್ಮ ಖಾತೆಗಳ ಪ್ರೊಫೈಲ್ ಚಿತ್ರವಾಗಿ ತ್ರಿವರ್ಣ ಧ್ವಜವನ್ನು ಹಾಕುವಂತೆ ಮೋದಿ ಜನರನ್ನು ಒತ್ತಾಯಿಸಿದರು.
ಮನ್ ಕಿ ಬಾತ್ನ ಮುಂದಿನ ಕಾರ್ಯಕ್ರಮದಲ್ಲಿ ಮುಂದಿನ 25 ವರ್ಷ ಹೇಗಿರಬೇಕು ಎನ್ನುವ ಬಗ್ಗೆ ಚಿಂತನೆ ನಡೆಸೋಣ. ನೀವು ಅಷ್ಟೇ, ನಿಮ್ಮ ಮನೆಗಳಲ್ಲಿ ಹೇಗೆ ಸ್ವಾತಂತ್ರ್ಯ ದಿನ ಆಚರಿಸಿದಿರಿ ಎನ್ನುವ ಬಗ್ಗೆ ನನ್ನೊಂದಿಗೆ ಮಾಹಿತಿ ಹಂಚಿಕೊಳ್ಳಿ ಎಂದು ನರೇಂದ್ರ ಮೋದಿ ಹೇಳಿದ್ದಾರೆ.