ದಾವಣಗೆರೆ : ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಕೆ.ಜಿ ಪ್ರತಾಪ್ ಕುಮಾರ್ (42) ಸೋಮವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕತ್ತಲಗೆರೆ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಬಿ.ಸಿ.ಪಾಟೀಲ್ ಅವರ ಪುತ್ರಿ ಸೌಮ್ಯಾ ಪಾಟೀಲ್ ರನ್ನು 2008 ರಲ್ಲಿ ವಿವಾಹವಾಗಿದ್ದ ಪ್ರತಾಪ್ ಕುಮಾರ್ ಹೊನ್ನಾಳಿ ತಾಲೂಕಿನ ಶಿವಮೊಗ್ಗ-ಹರಿಹರ ರಸ್ತೆಯಲ್ಲಿರುವ ಅರಕೆರೆ ಗ್ರಾಮದ ರಸ್ತೆ ಬಳಿ ಪ್ರತಾಪ್ ಅವರ ಕಾರು ಪತ್ತೆಯಾಗಿದ್ದು, ಕೂಡಲೇ ಸ್ಥಳೀಯರು ಕಿಟಿಕಿ ಗಾಜಿನ ಮೂಲಕ ನೋಡಿದಾಗ, ಕಾರಿನ ಮುಂದಿನ ಸೀಟು ಬಳಿ ಕೃಷಿಗೆ ಬಳಸುವ ಕೀಟನಾಶಕದ ಬಾಟಲಿ ಕಂಡಿದೆ. ಪಕ್ಕದಲ್ಲೇ ಪ್ರತಾಪ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗಮಧ್ಯೆಯೇ ಪ್ರತಾಪ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಇನ್ನು ಇಂದು ಮಧ್ಯಾಹ್ನ 2 ಗಂಟೆಗೆ ದಾವಣಗೆರೆ ಜಿಲಲೆಯ ಚನ್ನಗಿರಿ ತಾಲೂಕಿನ ಕತ್ತಲಗೆರೆಯಲ್ಲಿ ಪ್ರತಾಪ್ ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ.