Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಬಳಿ ಇನ್ನೂ ಇನ್ನೂ 2000 ರೂ.ಗಳ ನೋಟುಗಳಿದ್ರೂ ಬದಲಾಯಿಸಬಹುದು : `RBI’ ನಿಂದ ಹೊಸ ಗೈಡ್ ಲೈನ್ಸ್ ಜಾರಿ

02/08/2025 11:04 AM

BREAKING: ಪ್ರಧಾನಿ ಮೋದಿ ಚೇಳು ಎಂಬ ಹೇಳಿಕೆ: ಶಶಿ ತರೂರ್ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

02/08/2025 11:00 AM

SHOCKING : ಚೆನ್ನಾಗಿ ಓದುವಂತೆ ಗದರಿಸಿದ ಪೋಷಕರು : ಕಟ್ಟಡದಿಂದ ಜಿಗಿದು 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!

02/08/2025 10:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚು ಅನುದಾನ ಕೊಡಿ: ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ಬಿ.ವೈ.ವಿಜಯೇಂದ್ರ ಮನವಿ
KARNATAKA

ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚು ಅನುದಾನ ಕೊಡಿ: ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ಬಿ.ವೈ.ವಿಜಯೇಂದ್ರ ಮನವಿ

By kannadanewsnow0928/02/2025 2:05 PM

ಬೆಂಗಳೂರು: ಬೆಂಗಳೂರು ಮಹಾನಗರದ ಅಭಿವೃದ್ಧಿ ದೃಷ್ಟಿಯಿಂದ ಶಾಸಕರಿಗೆ ಹೆಚ್ಚು ಅನುದಾನವನ್ನು ನೀಡಬೇಕೆಂದು ಹಾಗೂ ಬಜೆಟ್‍ನಲ್ಲಿ 6ರಿಂದ 8 ಸಾವಿರ ಕೋಟಿ ಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲಸೌಕರ್ಯ ವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ಹಣ ಕೊಡಬೇಕಿದೆ. ಫ್ಲೈಓವರ್, ವಿವಿಧ ಯೋಜನೆಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಅವುಗಳಿಗೆ ಹೆಚ್ಚು ಅನುದಾನ ನೀಡಿ ಹೆಚ್ಚು ಒತ್ತು ಕೊಡಬೇಕೆಂದು ಕೋರಿರುವುದಾಗಿ ವಿವರಿಸಿದರು.

ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ ಅವರು, ಮೆಟ್ರೋ ಪ್ರಯಾಣ ದರ ಜಾಸ್ತಿ ಆಗಿದ್ದು ಅದನ್ನು ಕಡಿಮೆ ಮಾಡುವ ಕುರಿತಂತೆ ಸಲಹೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು. ಅಭಿವೃದ್ಧಿಗೆ ಅನುದಾನ ಮಾತ್ರವಲ್ಲದೆ, ಮೊದಲ ಬಾರಿ ಗೆದ್ದ ಶಾಸಕರಿಗೆ ಅನುದಾನ ಕೊಡುವಂತೆ ಮನವಿಯಲ್ಲಿ ತಿಳಿಸಲಾಗಿದೆ ಎಂದರು.

ಹಿಂದೆ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿದ್ದಾಗ ಪ್ರತಿಸಾರಿಯೂ ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಸಂಬಂಧಿಸಿ ಬಿಬಿಎಂಪಿಗೆ ಆರರಿಂದ 8 ಸಾವಿರ ಕೋಟಿ ಅನುದಾನವನ್ನು ಬಜೆಟ್‍ನಲ್ಲಿ ನೀಡುತ್ತಿದ್ದರು. ಆದರೆ, ಕಳೆದೆರಡು ವರ್ಷಗಳಿಂದ ಬೆಂಗಳೂರಿನ ಅಭಿವೃದ್ಧಿಗೆ ಅನುದಾನ ನೀಡಿಲ್ಲ ಎಂದು ಆಕ್ಷೇಪಿಸಿದರು. ಶೀಘ್ರವೇ ಬಿಬಿಎಂಪಿ ಚುನಾವಣೆ ನಡೆಸಲು ಒತ್ತಾಯಿಸಲಾಗಿದೆ ಎಂದರು. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ತಮ್ಮ ಇತಿಮಿತಿಯೊಳಗೆ ಎಷ್ಟು ಅನುದಾನ ಕೊಡಲು ಸಾಧ್ಯವೋ ಆ ಕಡೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದೆ ಯಾವತ್ತೂ ಬೆಂಗಳೂರು ನಗರಕ್ಕೆ ಇಂಥ ದುಸ್ಥಿತಿ ಬಂದಿರಲಿಲ್ಲ; ಪ್ರತಿ ಬಜೆಟ್‍ನಲ್ಲೂ ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಆರರಿಂದ 8 ಸಾವಿರ ಕೋಟಿ ಅನುದಾನವನ್ನು ಬಜೆಟ್‍ನಲ್ಲಿ ನೀಡುತ್ತಿದ್ದರು. ಯಡಿಯೂರಪ್ಪನವರು ಹಿಂದೆ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಶಾಸಕರಿಗೂ ಹೆಚ್ಚಿನ ಅನುದಾನ ನೀಡಿದ್ದರು. ಕರ್ನಾಟಕವನ್ನು ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲಕ ನೋಡುತ್ತಾರೆ ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರಿನ ಹೆಸರಿನಲ್ಲಿ ಬಿಬಿಎಂಪಿ ಚುನಾವಣೆ ಮುಂದೂಡಬಾರದು ಎಂಬ ಕುರಿತು ನಾವು ಸದನದಲ್ಲೂ ಚರ್ಚೆ ಮಾಡುತ್ತೇವೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಅವೈಜ್ಞಾನಿಕ ಟನೆಲ್ ರಸ್ತೆ ಕುರಿತು ಕೂಡ ಸದನದಲ್ಲಿ ಪ್ರಸ್ತಾಪಿಸಲಿದ್ದೇವೆ ಎಂದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಬೆಂಗಳೂರಿನ ರಸ್ತೆಗಳ ಅವ್ಯವಸ್ಥೆ, ಕಾಮಗಾರಿಗಳು ಆರಂಭವಾಗದೆ ಇರುವುದು, ಪಾರ್ಕಿನ ವಾಚ್‍ಮೆನ್‍ಗೆ ಹಣ ಕೊಡಲೂ ಸಾಧ್ಯ ಆಗದೆ ಇರುವುದನ್ನು ನೋಡಿ, ಎರಡು ವರ್ಷ ಕಾದು ವಿಧಿಯಿಲ್ಲದೆ ಸಿಎಂ ಭೇಟಿ ಮಾಡಿದ್ದೇವೆ. ಬೆಂಗಳೂರಿನ ಅಭಿವೃದ್ಧಿ ಕುಂಠಿತವಾದ ಕುರಿತು ಗಮನ ಸೆಳೆದಿದ್ದೇವೆ ಎಂದರು.

ಒಂದೆಡೆ ಬೆಲೆ ಏರಿಕೆ, ಇನ್ನೊಂದೆಡೆ ಅಭಿವೃದ್ಧಿಯೂ ಕುಂಠಿತವಾಗಿದೆ ಎಂದ ಅವರು, ಬೆಂಗಳೂರಿಗೆ ಅನುದಾನ ಕೊಡಿ; ರಾಜ್ಯದ ಎಲ್ಲ ಬಿಜೆಪಿ ಶಾಸಕರಿಗೆ ಅನುದಾನ ಕೊಡಿ ಎಂದು ಕೇಳಿದ್ದೇವೆ. ವಿಪಕ್ಷಗಳಿಗೆ ಅನ್ಯಾಯ ಮಾಡದಿರಿ; ರಾಜ್ಯದ ಸಮಗ್ರ ಬೆಳವಣಿಗೆಗೆ ಅನುದಾನ ನೀಡಿ ಎಂದು ಕೇಳಿದ್ದಾಗಿ ವಿವರಿಸಿದರು.

ಹಿಂದೆ ನಮ್ಮ ಸರಕಾರ ಸಿದ್ದರಾಮಯ್ಯನವರಿಗೆ ವರ್ಷಕ್ಕೆ 100 ಕೋಟಿ ಅನುದಾನವನ್ನು ಕೊಟ್ಟಿತ್ತು ಎಂದು ಗಮನ ಸೆಳೆದರು. ಈಗ ಪ್ರತಿ ಕ್ಷೇತ್ರಕ್ಕೆ 120ರಿಂದ 150 ಕೋಟಿ ಕೊಡಲು ಕೇಳಿದ್ದಾಗಿ ತಿಳಿಸಿದರು.

BREAKING : ಬೆಂಗಳೂರಲ್ಲಿ ವಾಟ್ಸಪ್ ಮೂಲಕ ‘ಡ್ರಗ್ಸ್’ ಮಾರಾಟ : ಇಬ್ಬರು ವಿದೇಶಿಗರು ಸೇರಿ ಮೂವರು ಡ್ರಗ್ ಪೆಡ್ಲರ್ ಗಳು ಅರೆಸ್ಟ್

BREAKING : ಚಿಕ್ಕಬಳ್ಳಾಪುರಲ್ಲಿ ಭೀಕರ ಮರ್ಡರ್ : ಕ್ಷುಲ್ಲಕ ಕಾರಣಕ್ಕೆ ಬಾರ್ ಸಪ್ಲೈಯರ್ ನನ್ನು ಕೊಂದ ದುಷ್ಕರ್ಮಿಗಳು

Share. Facebook Twitter LinkedIn WhatsApp Email

Related Posts

ಬಳ್ಳಾರಿ : ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ!

02/08/2025 10:55 AM1 Min Read

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಸುರಕ್ಷತಾ ಅನುಮೋದನೆ, ಆ. 15ಕ್ಕೆ ಚಾಲನೆ ಸಾಧ್ಯತೆ | Namma Metro

02/08/2025 10:48 AM1 Min Read

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು ಯೋಜನೆ’ಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

02/08/2025 10:40 AM1 Min Read
Recent News

ನಿಮ್ಮ ಬಳಿ ಇನ್ನೂ ಇನ್ನೂ 2000 ರೂ.ಗಳ ನೋಟುಗಳಿದ್ರೂ ಬದಲಾಯಿಸಬಹುದು : `RBI’ ನಿಂದ ಹೊಸ ಗೈಡ್ ಲೈನ್ಸ್ ಜಾರಿ

02/08/2025 11:04 AM

BREAKING: ಪ್ರಧಾನಿ ಮೋದಿ ಚೇಳು ಎಂಬ ಹೇಳಿಕೆ: ಶಶಿ ತರೂರ್ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

02/08/2025 11:00 AM

SHOCKING : ಚೆನ್ನಾಗಿ ಓದುವಂತೆ ಗದರಿಸಿದ ಪೋಷಕರು : ಕಟ್ಟಡದಿಂದ ಜಿಗಿದು 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!

02/08/2025 10:55 AM

ಬಳ್ಳಾರಿ : ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ!

02/08/2025 10:55 AM
State News
KARNATAKA

ಬಳ್ಳಾರಿ : ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ!

By kannadanewsnow0502/08/2025 10:55 AM KARNATAKA 1 Min Read

ಬಳ್ಳಾರಿ : ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರವಿಹಾಳ…

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಸುರಕ್ಷತಾ ಅನುಮೋದನೆ, ಆ. 15ಕ್ಕೆ ಚಾಲನೆ ಸಾಧ್ಯತೆ | Namma Metro

02/08/2025 10:48 AM

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು ಯೋಜನೆ’ಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

02/08/2025 10:40 AM

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕಲಬುರ್ಗಿಯಲ್ಲಿ ಎದೆ ನೋವಿಂದ ಯುವಕ ಸಾವು!

02/08/2025 10:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.