ಶಿವಮೊಗ್ಗ: ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಈ ಪ್ರಯುಕ್ತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಗಣಪತಿ ಕೆರೆಯಲ್ಲಿ ಬೋಟಿಂಗ್ ಗೆ ಚಾಲನೆ ನೀಡಿದರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಗಣಪತಿ ಕೆರೆಯಲ್ಲಿ ಮಾರಿಕಾಂಬ ಜಾತ್ರಾ ಮಹೋತ್ಸವದ ಪ್ರಯುಕ್ತ ಬೋಟಿಂಗ್ ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿದರು. ಆ ಬಳಿಕ ತಾವು ಕೂಡ ಒಂದೆರಡು ಸುತ್ತು ಬೋಟಿಂಗ್ ಮಾಡಿದರು.

ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಾರಿಕಾಂಬ ಜಾತ್ರಾ ಮಹೋತ್ಸವದ ಹಿನ್ನಲೆಯಲ್ಲಿ ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಲಾಗಿದೆ. ಬೋಟಿಂಗ್ ಅನುಭವ ಅತ್ಯದ್ಭುತವಾಗಿತ್ತು. ಸಾಗರದ ಸಮಸ್ತ ನಾಗರೀಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದರು.
ಇದೇ ವೇಳೆ ಸಮೀಪದಲ್ಲೇ ಇದ್ದಂತ ಶಾಲಾ ಮಕ್ಕಳು ಶಾಸಕರನ್ನು ಕೈ ಬೀಸಿ ಮಾತನಾಡಿಸಿದಾಗ, ಅವರನ್ನೆಲ್ಲ ಕರೆದುಕೊಂಡು ಬಂದು, ಶಾಲಾ ಮಕ್ಕಳಿಗೂ ಗಣಪತಿ ಕೆರೆಯಲ್ಲಿ ಒಂದು ರೌಂಡ್ ಬೋಟಿಂಗ್ ಮಾಡಿಸಿದರು. ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಬೋಟಿಂಗ್ ಮಾಡಿಸಿದ್ದರಿಂದ ಶಾಲಾ ಮಕ್ಕಳು ಪುಲ್ ಖುಷ್ ಆಗಿದ್ದು ಕಂಡು ಬಂದಿತು.

ಈ ವೇಳೆ ಬೋಟಿಂಗ್ ಆಯೋಜಿಸಿದ್ದಂತ ಮಿಲನ್ ಸಾಗರ್, ಕೃಷ್ಣಮೂರ್ತಿ, ಸಾಗರ ನಗರಸಭೆ ಸದಸ್ಯ ಸೈಯದ್ ಜಾಕೀರ್, ವಿಪಕ್ಷ ನಾಯಕ ಗಣಪತಿ ಮಂಡಗಳಲೆ, ಅಶೋಕ್ ಬೇಳೂರು, ಶಾಸಕರ ಪುತ್ರ ನಿಯಾನ್, ಸೈಯದ್ ನಯಾಜ್, ಅನ್ವರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ಬೆಂಗಳೂರಲ್ಲಿ ನಿಯಮ ಪಾಲಿಸದ ಪಿಜಿ, ಹೋಟೆಲ್ ಗಳಿಗೆ ಜಿಬಿಎ ಶಾಕ್: 2.57 ದಂಡ ವಸೂಲಿ







