ಬಾಗಲಕೋಟೆ : ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಿಂದ ಆಯ ತಪ್ಪಿ  ವಿದ್ಯಾರ್ಥಿನಿ ಒಬ್ಬಳು ಬಿದ್ದು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಪಟ್ಟಣದ ಕೋರ್ಟ್ ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದೆ.

ಬಸ್ ನಿಲ್ಲುವ ಮುನ್ನವೇ ವಿದ್ಯಾರ್ಥಿನಿ ಆತುರದಲ್ಲಿ ಇಳಿದಿದ್ದರಿಂದ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗುತ್ತಿದೆ.ಆಯತಪ್ಪಿ ಬಿದ್ದು ತಲೆಗೆ ಪೆಟ್ಟಾಗಿ ವಿದ್ಯಾರ್ಥಿನಿ ಸೃಷ್ಟಿ ಮಾದರ (9)ಮೃತ ವಿದ್ಯಾರ್ಥಿನಿ ಎಂದು ಹೇಳಲಾಗುತ್ತಿದ್ದು, ಬೀಳಗಿ ತಾಲೂಕಿನ ಟಕ್ಕಳಕಿ ನಿವಾಸಿ ಎಂದು ತಿಳಿದು ಬಂದಿದೆ.ಘಟನಾ ಸ್ಥಳಕ್ಕೆ ಬೀಳಗಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೀಳಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share.
Exit mobile version