Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿಕ್ಕ ವಯಸ್ಸಿನಲ್ಲೇ ನಿಮ್ಮ ಕೂದಲು ಉದುರುತ್ತಿವ್ಯಾ.? ಸ್ವಾಮಿ ರಾಮದೇವ್ ತಿಳಿಸಿದ ಅದ್ಭುತ ಪರಿಹಾರಗಳಿವು.!

22/11/2025 10:00 PM

ಮೈಮರೆತು ‘ಮೈದಾ’ ತಿನ್ನುವ ಮುನ್ನ ಎಚ್ಚರ ; ಅಪಾಯ ತಪ್ಪಿದ್ದಲ್ಲ ಎಂದ ವೈದ್ಯರು!

22/11/2025 9:44 PM

ಒಬ್ಬ IAS ಅಧಿಕಾರಿ ಮನಸ್ಸು ಮಾಡಿದರೇ ಏನೆಲ್ಲಾ ಮಾಡಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ!

22/11/2025 9:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯಾಧ್ಯಂತ ‘ಕಬಾಬ್, ಫಿಶ್, ಚಿಕನ್’ಗೆ ಬಳಸುವ ‘ಕೃತಕ ಬಣ್ಣ’ ನಿಷೇಧ: ನಿಯಮ ಮೀರಿದ್ರೆ ’10 ಲಕ್ಷ ದಂಡ’ ಫಿಕ್ಸ್ | Kabab Colour Ban
KARNATAKA

BIG NEWS: ರಾಜ್ಯಾಧ್ಯಂತ ‘ಕಬಾಬ್, ಫಿಶ್, ಚಿಕನ್’ಗೆ ಬಳಸುವ ‘ಕೃತಕ ಬಣ್ಣ’ ನಿಷೇಧ: ನಿಯಮ ಮೀರಿದ್ರೆ ’10 ಲಕ್ಷ ದಂಡ’ ಫಿಕ್ಸ್ | Kabab Colour Ban

By kannadanewsnow0924/06/2024 6:16 PM

ಬೆಂಗಳೂರು: ರಾಜ್ಯಾಧ್ಯಂತ ಕೃತಕ ಬಣ್ಣವನ್ನು ನಿಷೇಧಿಸಿ ಸರ್ಕಾರ ಆದೇಶಿಸಿದೆ. ಅಂದರೆ ಕಬಾಬ್, ಫಿಶ್, ಚಿಕನ್ ಗೆ ಬಳಸುವಂತ ಕೃತಕ ಬಣ್ಣವನ್ನು ರಾಜ್ಯಾಧ್ಯಂತ ನಿಷೇಧ ಮಾಡಿ, ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಕುರಿತಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಅದರಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳು ಗುಣಮಟ್ಟ ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಾಗಿ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕರಿಂದ ವರದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ ಎಂದಿದ್ದಾರೆ.
–
ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ. ವಿಶ್ಲೇಷಣೆಗೊಳಪಡಿಸಲಾದ ಮಾದರಿಗಳಲ್ಲಿ 08 ಕಬಾಬ್‌ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ 07 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 01) ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದ್ದು, The Food Safety and Standards Act, 2006 ರ ನಿಯಮ 3(1) (zz)(viii)ರನ್ವಯ ಅಸುರಕ್ಷಿತ ಎಂದು ವರದಿ ಮಾಡಲ್ಪಟ್ಟಿರುತ್ತವೆ ಎಂದು ತಿಳಿಸಿದ್ದಾರೆ.

The Food Safety and Standards (Food Products Standards and Food Additives) Regulations, 2011 ರ ನಿಯಮ 16.0 ರನ್ವಯ ಕಬಾಬ್‌ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿರುವುದಿಲ್ಲ. ಕೃತಕ ಬಣ್ಣಗಳು ಬಳಕೆದಾರರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟು ಮಾಡಬಹುದಾಗಿರುತ್ತದೆ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಕಬಾಬ್‌ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ The Food Safety and Standards Act, 2006 ರ ನಿಯಮ 3 (1)(zz)(viii) ಮತ್ತು The Food Safety and Standards (Food Products Standards and Food Additives) Regulations, 2011 ರ ನಿಯಮ 16.0 ಗಳಡಿ ಅವಕಾಶವಿಲ್ಲದಿರುವುದರಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ವೆಜ್ /ಚಿಕನ್/ಫಿಶ್ ಇತರೆ ಕಬಾಬ್‌ಗಳ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿರ್ಬಂಧಿಸಿ ಆದೇಶಿಸಿದೆ. ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10.00 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂಬುದಾಗಿ ಎಚ್ಚರಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ನಾನು ಅಧಿಕಾರಕ್ಕಾಗಿ ಚನ್ನಪಟ್ಟಣ ಬಿಟ್ಟು ಓಡಿ ಹೋಗುವವನಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

BREAKING: ರಾಜ್ಯ ಸರ್ಕಾರದಿಂದ ‘ಗ್ರಾ.ಪಂ ಕಾರ್ಯದರ್ಶಿ’ಗಳನ್ನು ಜನನ, ಮರಣ ‘ಉಪ ನೋಂದಣಾಧಿಕಾರಿ’ಗಳನ್ನಾಗಿ ನೇಮಿಸಿ ಆದೇಶ

Share. Facebook Twitter LinkedIn WhatsApp Email

Related Posts

ಒಬ್ಬ IAS ಅಧಿಕಾರಿ ಮನಸ್ಸು ಮಾಡಿದರೇ ಏನೆಲ್ಲಾ ಮಾಡಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ!

22/11/2025 9:17 PM1 Min Read

GOOD NEWS: ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಪ್ರಸಕ್ತ ವರ್ಷದಿಂದಲೇ 4,056 ಸರ್ಕಾರಿ ಶಾಲೆಗಳಲ್ಲಿ LGK, UKG ಆರಂಭ

22/11/2025 8:46 PM1 Min Read

ಹೀಗಿದೆ ‘ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ’ಯಡಿ ಕೈಗೊಳ್ಳಬಹುದಾದ ‘ಕಾಮಗಾರಿ’ಗಳ ಪಟ್ಟಿ

22/11/2025 8:39 PM3 Mins Read
Recent News

ಚಿಕ್ಕ ವಯಸ್ಸಿನಲ್ಲೇ ನಿಮ್ಮ ಕೂದಲು ಉದುರುತ್ತಿವ್ಯಾ.? ಸ್ವಾಮಿ ರಾಮದೇವ್ ತಿಳಿಸಿದ ಅದ್ಭುತ ಪರಿಹಾರಗಳಿವು.!

22/11/2025 10:00 PM

ಮೈಮರೆತು ‘ಮೈದಾ’ ತಿನ್ನುವ ಮುನ್ನ ಎಚ್ಚರ ; ಅಪಾಯ ತಪ್ಪಿದ್ದಲ್ಲ ಎಂದ ವೈದ್ಯರು!

22/11/2025 9:44 PM

ಒಬ್ಬ IAS ಅಧಿಕಾರಿ ಮನಸ್ಸು ಮಾಡಿದರೇ ಏನೆಲ್ಲಾ ಮಾಡಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ!

22/11/2025 9:17 PM

ಮೋದಿ ಸರ್ಕಾರದ ಮಹತ್ವದ ನಿರ್ಧಾರ ; 2026ರಿಂದ ₹500 ನೋಟುಗಳು ಇರೋದಿಲ್ವಾ.? ಬ್ಯಾಂಕ್’ಗಳಿಗೆ ಪ್ರಮುಖ ಆದೇಶ!

22/11/2025 9:06 PM
State News
KARNATAKA

ಒಬ್ಬ IAS ಅಧಿಕಾರಿ ಮನಸ್ಸು ಮಾಡಿದರೇ ಏನೆಲ್ಲಾ ಮಾಡಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ!

By kannadanewsnow0922/11/2025 9:17 PM KARNATAKA 1 Min Read

ಬೆಂಗಳೂರು: ಒಬ್ಬ ಐಎಎಸ್ ಅಧಿಕಾರಿ ಮನಸ್ಸು ಮಾಡಿದರೇ ಏನೆಲ್ಲ ಮಾಡಬಹುದು ಎಂಬುದಕ್ಕೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರೇ ಸಾಕ್ಷಿಯಾಗಿದ್ದಾರೆ.…

GOOD NEWS: ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಪ್ರಸಕ್ತ ವರ್ಷದಿಂದಲೇ 4,056 ಸರ್ಕಾರಿ ಶಾಲೆಗಳಲ್ಲಿ LGK, UKG ಆರಂಭ

22/11/2025 8:46 PM

ಹೀಗಿದೆ ‘ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ’ಯಡಿ ಕೈಗೊಳ್ಳಬಹುದಾದ ‘ಕಾಮಗಾರಿ’ಗಳ ಪಟ್ಟಿ

22/11/2025 8:39 PM

ಜೆಡಿಎಸ್ ಪಕ್ಷಕ್ಕೆ ರಜತ ಸಂಭ್ರಮ ಬೆಳ್ಳಿನಾಣ್ಯ, ವಾಟ್ಸಪ್ ಲೈನ್ ನಂಬರ್ HDD, HDK ಲೋಕಾರ್ಪಣೆ

22/11/2025 8:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.