Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೆಹಲಿ ಸ್ಫೋಟ : ನಕಲಿ ದಾಖಲೆಗಳ ಮೂಲಕ ಪುಲ್ವಾಮಾ ನಿವಾಸಿಗೆ ಮಾರಾಟವಾಗಿದ್ದ ಹ್ಯುಂಡೈ ಐ20!

11/11/2025 6:50 AM

BIG NEWS : ರಾಜ್ಯದಲ್ಲಿ `ಅನರ್ಹ ಪಡಿತರ ಚೀಟಿ’ ಗುರುತಿಸಿ ರದ್ದು ಮಾಡಲು ಮಹತ್ವದ ಕ್ರಮ : CM ಸಿದ್ದರಾಮಯ್ಯ

11/11/2025 6:49 AM

BREAKING: ದೆಹಲಿ ಸ್ಫೋಟ: ವಿಮಾನ ನಿಲ್ದಾಣ, ಸರ್ಕಾರಿ ಕಟ್ಟಡಗಳು, ಪ್ರಮುಖ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಿಸಿದ CISF

11/11/2025 6:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ರಾಜಕಾಲುವೆಯ ಅಕ್ಕಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣ ನಿಷೇಧ
KARNATAKA

ಬೆಂಗಳೂರಿನ ರಾಜಕಾಲುವೆಯ ಅಕ್ಕಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣ ನಿಷೇಧ

By kannadanewsnow0925/10/2024 2:29 PM

ಬೆಂಗಳೂರು: ಕೆರೆಗಳ ನಡುವೆ ಸಂಪರ್ಕ ಕಲ್ಪಿಸುವ ರಾಜಕಾಲುವೆಯ ಅಕ್ಕಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣ ನಿಷೇಧಿಸುವುದು ಹಾಗೂ ಅಪಾಯಕಾರಿ, ಅನಧಿಕೃತ ಕಟ್ಟಡಗಳ ತೆರವು ಮಾಡಲು ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಅತಿವೃಷ್ಠಿ ವಿಪತ್ತು ನಿರ್ವಹಣೆ ಮತ್ತಿತರ ವಿಷಯಗಳ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿ ಮತ್ತಿತರ ಅಧಿಕಾರಿಗಳ ಜತೆ ತುರ್ತುಸಭೆ ನಡೆಸಿದರು. ಬೆಂಗಳೂರು ನಗರದಲ್ಲಿ ಅತಿವೃಷ್ಠಿ ಸಮಸ್ಯೆ ನಿವಾರಣೆಗಾಗಿ ಹಲವು ಪ್ರಮುಖ ತೀರ್ಮಾನ ಕೈಗೊಂಡಿದ್ದು, ಅಧಿಕಾರಿಗಳಿಗೆ ಕೆಲವು ನಿರ್ದೇಶನ ನೀಡಿದ್ದೇನೆ. ಎಲ್ಲೆಲ್ಲಿ ಮಳೆನೀರು ವಸತಿ ಪ್ರದೇಶಗಳಿಗೆ ನುಗ್ಗಿ ಸಮಸ್ಯೆ ಎದುರಾಗುತ್ತಿದೆಯೋ ಅಲ್ಲಿ ಪರಿಹಾರಕ್ಕೆ ಯೋಜನೆ ರೂಪಿಸಿ, ಅದಕ್ಕೆ ಅಗತ್ಯವಿರುವ ಹಣಕಾಸಿನ ಅಂದಾಜನ್ನು ನೀಡಲು ವಲಯವಾರು ಆಯುಕ್ತರು, ಮುಖ್ಯ ಎಂಜಿನಿಯರ್ ಗಳು ಹಾಗೂ ಮಳೆನೀರುಗಾಲುವೆ ನಿರ್ವಹಣೆ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಸಮಿತಿ ರಚಿಸಲಾಗಿದೆ. ಮುಂದಿನ ಒಂದು ವಾರದ ಒಳಗಾಗಿ ವರದಿ ನೀಡುವಂತೆ ಸೂಚಿಸಲಾಗಿದೆ. ಈ ಅಧಿಕಾರಿಗಳಿಗೆ ಆಯಾ ಪ್ರದೇಶದಲ್ಲಿ ಎಷ್ಟು ಮಳೆ ಬಂದರೆ ಯಾವ ರೀತಿ ತೊಂದರೆಯಾಗುತ್ತದೆ ಎಂಬುದರ ಅರಿವಾಗಿದೆ.

ಮಳೆನೀರು ಸಾಗಲು ಕೆರೆಗಳ ನಡುವೆ ಸಂಪರ್ಕ:

ಎಲ್ಲಾ ಕೆರೆಗಳ ನಡುವೆ ಸಂಪರ್ಕ ಏರ್ಪಡಿಸಿ ಮಳೆನೀರು ಸರಾಗವಾಗಿ ಹರಿಯುವಂತೆ ಮಾಡಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸಲು ಸೂಚಿಸಲಾಗಿದೆ. ಬರಗಾಲದಲ್ಲಿ ಕೆರೆಗಳು ಬತ್ತಿ ಹೋಗಿದ್ದವು. ಕೆರೆಗಳು ತುಂಬಬೇಕು, ಅಂತರ್ಜಲ ಪುನಶ್ಚೇತನಗೊಳ್ಳಬೇಕು. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಕೆರೆಗಳಿಗೆ ಕೊಳಚೆ ನೀರನ್ನು ಹರಿಸುವುದಲ್ಲ. ಕೇವಲ ಮಳೆ ನೀರು ಹೋಗುವಂತೆ ನೋಡಿಕೊಳ್ಳಬೇಕು. ಹೀಗಾಗಿ ಕೆರೆಗಳ ನಡುವೆ ಸಂಪರ್ಕ ಸಾಧಿಸಲು ಯೋಜನೆ ರೂಪಿಸಲು ಸೂಚಿಸಿದ್ದೇನೆ.

ಈ ಕಾಮಗಾರಿಗೆ ಎಲ್ಲೆಲ್ಲಿ ಖಾಸಗಿ ಭೂಮಿ ಅಡ್ಡಬರುತ್ತದೆಯೋ ಅಲ್ಲಿ ಟಿಡಿಆರ್ ನೀಡುವ ಮೂಲಕ ಭೂಮಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದೇವೆ.

ಇನ್ನು ರಾಜಕಾಲುವೆಗಳ ಒತ್ತುವರಿ ತೆರವಿಗೆ ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಪ್ರವಾಹದ ನೀರು ಕೆರೆಗೆ ಹೋಗುವುದು ಹಾಗೂ ಕೆರೆಯಿಂದ ಕೋಡಿ ಬೀಳುವ ನೀರು ಸರಾಗವಾಗಿ ಹೋಗಲು ಅನುವಾಗುವಂತೆ ಗೇಟ್ ಅಳವಡಿಸಲು ಸೂಚಿಸಿದ್ದೇನೆ. ಇದಕ್ಕೆ ಬೇಕಾಗಿರುವ ಮೂಲಸೌಕರ್ಯ ತಯಾರಿ ಮಾಡಿಕೊಳ್ಳಲು ಬಿಡಿಎ, ಬಿಬಿಎಂಪಿ ಹಾಗೂ ಕೆರೆ ಅಭಿವೃದ್ಧಿ ಪ್ರಾಧಿಕಾರದವರಿಗೆ ಸೂಚಿಸಿದ್ದೇನೆ.

ರಾಜಕಾಲುವೆ ಅಕ್ಕಪಕ್ಕ 50 ಅಡಿ ಕಟ್ಟಡ ನಿರ್ಮಾಣ ಮಾಡುವಂತಿಲ್ಲ:

ರಾಜಕಾಲುವೆ ಅಕ್ಕಪಕ್ಕದಲ್ಲಿ 50 ಅಡಿಗಳಷ್ಟು ಅಂತರದಲ್ಲಿ ಯಾರೂ ಕಟ್ಟಡ ಕಟ್ಟುವಂತಿಲ್ಲ. ಇಂತಹ ಜಾಗವನ್ನು ಗುರುತಿಸಿದ್ದು, ಇಲ್ಲಿ 300 ಕಿ.ಮೀ. ಉದ್ದದ ರಸ್ತೆ ನಿರ್ಮಾಣ ಮಾಡಲಾಗುವುದು. ಇದರಿಂದ ಒತ್ತುವರಿ ನಿಲ್ಲುತ್ತದೆ ಹಾಗೂ ಮಳೆನೀರು ಹರಿಯಲು ನೆರವಾಗುತ್ತದೆ. ಯೋಜನೆಯ ಆರಂಭಿಕ ಹಂತಕ್ಕೆ ಹಣ ಮೀಸಲಿಡಲಾಗಿದೆ. ಈ ಭಾಗದ ಭೂಮಾಲೀಕರಿಗೆ ಟಿಡಿಆರ್ ಮೂಲಕ ಪರಿಹಾರ ನೀಡಲಾಗುವುದು.

ಮಳೆ ಪೀಡಿತ ಪ್ರದೇಶಗಳಲ್ಲಿ ಪರಿಹಾರಗಳು ಭರದಿಂದ ಸಾಗುತ್ತಿದೆ. ಕೇಂದ್ರಿಯ ವಿಹಾರ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ನಿವಾಸಿಗಳನ್ನು ಸ್ಥಳಾಂತರ ಮಾಡಿದ್ದೇವೆ. ನೀರನ್ನು ಹೊರತೆಗೆಯಲಾಗುತ್ತಿದೆ. ಕೆಲವು ಕುಟುಂಬಗಳು ಸ್ಥಳಾಂತರಗೊಳ್ಳಲು ಒಪ್ಪದ ಕಾರಣ ಅವರ ಜವಾಬ್ದಾರಿ ವಹಿಸಿಕೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.

ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ:

ಇನ್ನು ಅನಧಿಕೃತವಾಗಿ ನಿರ್ಮಾಣವಾಗುತ್ತಿರುವ ಅನೇಕ ಕಟ್ಟಡಗಳು ಪಾಲಿಕೆ ಗಮನಕ್ಕೆ ಬಂದಿದ್ದು, ಅವುಗಳನ್ನು ಕೂಡಲೇ ಒಡೆದು ಹಾಕಲು ಆದೇಶ ನೀಡಲಾಗಿದೆ. ನಂಜಪ್ಪ ಗಾರ್ಡನ್ ಪ್ರದೇಶದಲ್ಲಿ 10 x 25 ಅಡಿ ನಿವೇಶನದಲ್ಲಿ ನೆಲಮಹಡಿ ಜತೆಗೆ 5 ಮಹಡಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಇದನ್ನು ತೆರವುಗೊಳಿಸಲು ಸೂಚಿಸಿದ್ದೇನೆ. ಪ್ರತಿ ವಲಯದಲ್ಲಿ ಅಕ್ರಮ, ಕಳಪೆ ಗುಣಮಟ್ಟದ ಕಾಮಗಾರಿ ಹಾಗೂ ಜೀವಕ್ಕೆ ಅಪಾಯ ತರಬಹುದಾದ ಕಟ್ಟಡಗಳ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದೇನೆ.

ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಅಗತ್ಯ ಕ್ರಮ ಕೈಗೊಳ್ಳಲು ನಮಗೆ ಸಂಪೂರ್ಣ ಅಧಿಕಾರವಿದೆ. ಈ ಪರಿಸ್ಥಿತಿಯಲ್ಲಿ ಸರ್ಕಾರ ಯಾವುದೇ ಆಸ್ತಿಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡು ಕ್ರಮಕೈಗೊಳ್ಳಲು ಅಧಿಕಾರವಿದೆ. ಬಿಎಂಟಿಎಫ್, ಬಿಡಿಎ, ಬಿಬಿಎಂಪಿ, ಬಿಎಂಆರ್ ಡಿಎ ಕೆಲವು ತಿದ್ದುಪಡಿ ತಂದು ಅವರಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು. ಈ ಹಿಂದೆಯೂ ಅಧಿಕಾರವನ್ನು ಮೇಲ್ಕಂಡ ಸಂಸ್ಥೆಗಳಿಗೆ ನೀಡಲಾಗಿತ್ತು. ಆದರೆ 2020-21ರ ಸಮಯದಲ್ಲಿ ಅದನ್ನು ಹಿಂಪಡೆಯಲಾಗಿತ್ತು. ಈಗ ಮತ್ತೆ ನೀಡಲಾಗುತ್ತಿದೆ. ಕಂದಾಯ ಬಡಾವಣೆಯಾಗಿರಲಿ, ಬೇರೆ ಬಡಾವಣೆಯಾಗಿರಲಿ ಅಕ್ರಮ ಕಟ್ಟಡ ನಿರ್ಮಾಣ ಹಾಗೂ ಒತ್ತುವರಿ ನಿಲ್ಲಿಸಲು ಸುಗ್ರೀವಾಜ್ಞೆ ತರಲು ಗೃಹ ಕಾರ್ಯದರ್ಶಿಗಳಿಗೆ ಸೂಚಿಸಿದ್ದೇವೆ. ಈ ವಿಚಾರವಾಗಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗುವುದು.

BREAKING: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ: ಭಾರತೀಯ ಸೇನೆಯ ಮತ್ತೋರ್ವ ಯೋಧ ಹುತಾತ್ಮ, ಸಾವಿನ ಸಂಖ್ಯೆ 5ಕ್ಕೆ ಏರಿಕೆ

JOB ALERT: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ 4,115 ನೇಮಕಾತಿಗೆ ಗ್ರೀನ್ ಸಿಗ್ನಲ್ | Karnataka Police Recruitment 2024

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ `ಅನರ್ಹ ಪಡಿತರ ಚೀಟಿ’ ಗುರುತಿಸಿ ರದ್ದು ಮಾಡಲು ಮಹತ್ವದ ಕ್ರಮ : CM ಸಿದ್ದರಾಮಯ್ಯ

11/11/2025 6:49 AM2 Mins Read

BREAKING : ದೆಹಲಿಯಲ್ಲಿ ಕಾರು ಸ್ಪೋಟ : ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸುವಂತೆ `CM’ ಸಿದ್ದರಾಮಯ್ಯ ಸೂಚನೆ.!

11/11/2025 6:42 AM1 Min Read

ALERT : ‘ಚೆಕ್’ ನೀಡುವಾಗ ಈ ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್, ನಿಯಮಗಳೇನು ತಿಳಿಯಿರಿ | Check Bounce

11/11/2025 6:38 AM2 Mins Read
Recent News

ದೆಹಲಿ ಸ್ಫೋಟ : ನಕಲಿ ದಾಖಲೆಗಳ ಮೂಲಕ ಪುಲ್ವಾಮಾ ನಿವಾಸಿಗೆ ಮಾರಾಟವಾಗಿದ್ದ ಹ್ಯುಂಡೈ ಐ20!

11/11/2025 6:50 AM

BIG NEWS : ರಾಜ್ಯದಲ್ಲಿ `ಅನರ್ಹ ಪಡಿತರ ಚೀಟಿ’ ಗುರುತಿಸಿ ರದ್ದು ಮಾಡಲು ಮಹತ್ವದ ಕ್ರಮ : CM ಸಿದ್ದರಾಮಯ್ಯ

11/11/2025 6:49 AM

BREAKING: ದೆಹಲಿ ಸ್ಫೋಟ: ವಿಮಾನ ನಿಲ್ದಾಣ, ಸರ್ಕಾರಿ ಕಟ್ಟಡಗಳು, ಪ್ರಮುಖ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಿಸಿದ CISF

11/11/2025 6:44 AM

BREAKING : ದೆಹಲಿಯಲ್ಲಿ ಕಾರು ಸ್ಪೋಟ : ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸುವಂತೆ `CM’ ಸಿದ್ದರಾಮಯ್ಯ ಸೂಚನೆ.!

11/11/2025 6:42 AM
State News
KARNATAKA

BIG NEWS : ರಾಜ್ಯದಲ್ಲಿ `ಅನರ್ಹ ಪಡಿತರ ಚೀಟಿ’ ಗುರುತಿಸಿ ರದ್ದು ಮಾಡಲು ಮಹತ್ವದ ಕ್ರಮ : CM ಸಿದ್ದರಾಮಯ್ಯ

By kannadanewsnow5711/11/2025 6:49 AM KARNATAKA 2 Mins Read

ಮೈಸೂರು : ಅನರ್ಹ ಪಡಿತರ ಚೀಟಿಗಳನ್ನು ಗುರುತಿಸುವುದು ಮತ್ತು ಅವುಗಳನ್ನು ರದ್ದು ಮಾಡಲು ಕ್ರಮಕೈಗೊಳ್ಳಲಾಗುವುದು. ಬಾಕಿ ಇರುವ ಯೋಜನೆಗಳನ್ನು ಆದ್ಯತೆ…

BREAKING : ದೆಹಲಿಯಲ್ಲಿ ಕಾರು ಸ್ಪೋಟ : ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸುವಂತೆ `CM’ ಸಿದ್ದರಾಮಯ್ಯ ಸೂಚನೆ.!

11/11/2025 6:42 AM

ALERT : ‘ಚೆಕ್’ ನೀಡುವಾಗ ಈ ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್, ನಿಯಮಗಳೇನು ತಿಳಿಯಿರಿ | Check Bounce

11/11/2025 6:38 AM

ರಾಜ್ಯದ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಇಂದು ‘ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

11/11/2025 6:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.