Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಭಾರತ ಸೇರಿದಂತ ವಿಶ್ವದಾದ್ಯಂತ `YouTube’ ಡೌನ್ : ಬಳಕೆದಾರರ ಪರದಾಟ | Youtube Outage

16/10/2025 12:18 PM

BIG NEWS: ರಾಜ್ಯದ ‘ಸರ್ಕಾರಿ ಶಾಲಾ ಆವರಣ’ದಲ್ಲಿ ಖಾಸಗಿ ಕಾರ್ಯಕ್ರಮ ಬ್ಯಾನ್: 2013ರಲ್ಲೇ ಆದೇಶ, ಪತ್ರ ವೈರಲ್

16/10/2025 12:12 PM

BREAKING : ಕೊಪ್ಪಳದಲ್ಲಿ ರಾತ್ರೋರಾತ್ರಿ ದಲಿತರ ಮನೆಗೆ ಬೆಂಕಿ ಇಟ್ಟ ಸವರ್ಣಿಯರು : ಸ್ಥಳದಲ್ಲಿ ಬಿಗುವಿನ ವಾತಾವರಣ!

16/10/2025 12:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದ ‘ಸರ್ಕಾರಿ ಶಾಲಾ ಆವರಣ’ದಲ್ಲಿ ಖಾಸಗಿ ಕಾರ್ಯಕ್ರಮ ಬ್ಯಾನ್: 2013ರಲ್ಲೇ ಆದೇಶ, ಪತ್ರ ವೈರಲ್
KARNATAKA

BIG NEWS: ರಾಜ್ಯದ ‘ಸರ್ಕಾರಿ ಶಾಲಾ ಆವರಣ’ದಲ್ಲಿ ಖಾಸಗಿ ಕಾರ್ಯಕ್ರಮ ಬ್ಯಾನ್: 2013ರಲ್ಲೇ ಆದೇಶ, ಪತ್ರ ವೈರಲ್

By kannadanewsnow0916/10/2025 12:12 PM

ಬೆಂಗಳೂರು: ರಾಜ್ಯದ ಸರ್ಕಾರಿ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘ( RSS) ಚಟುವಟಿಕೆ ನಿಷೇಧಿಸುವಂತೆ ಸಚಿವ ಪ್ರಿಯಾಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಬಿಜೆಪಿ, RSS ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲೇ, ನಿಷೇಧ ಮಾಡಿ ನೋಡಿ ಎಂಬುದಾಗಿ ಸವಾಲ್ ಹಾಕಿದ್ದರು. ಇದರ ನಡುವೆ ರಾಜ್ಯದ ಸರ್ಕಾರಿ ಶಾಲಾ ಆವರಣದಲ್ಲಿ ಖಾಸಗಿ ಕಾರ್ಯಕ್ರಮವನ್ನು ಬ್ಯಾನ್ ಮಾಡಲಾಗಿತ್ತು. 2013ರಲ್ಲಿಯೇ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ್ದಂತ ಆದೇಶ ಪತ್ರ ಈಗ ವೈರಲ್ ಆಗಿದೆ.

ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿಷೇಧ ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಪತ್ರ ಬರೆದಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಜೊತೆಗೆ ಸಚಿವ ಪ್ರಿಯಾಂಕ್ ಖರ್ಗೆಗೂ ಈ ಸಂಬಂಧ ಬೆದರಿಕೆ ಹಾಕಲಾಗಿತ್ತು. ಇದೀಗ ಬೆದರಿಕೆ ಹಾಕಿದಂತ ವ್ಯಕ್ತಿಯನ್ನು ಪತ್ತೆ ಹಚ್ಚಿರುವಂತ ಪೊಲೀಸರು, ಆತನ ವಿರುದ್ಧ ಎಫ್ಐಆರ್ ಕೂಡ ದಾಖಲಿಸಿದ್ದಾರೆ.

ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ

ಸಿಎಂ ಸಿದ್ಧರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಂದು ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ನಾಗರಿಕ ಸೇವಾ(ನಡತೆ) ನಿಯಮಗಳು, 2021ರ ಅಡಿಯ ನಿಯಮ 5(1)ರಲ್ಲಿಯೇ ಯಾರೇ ಸರ್ಕಾರಿ ನೌಕರನ, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ. ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ ಎಂಬುದಾಗಿ ಹೇಳಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ಅಧಿಕಾರಿ ಮತ್ತು ನೌಕರರು ರಾಷ್ಟ್ರೀಯ ಸ್ವಂಯ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಹಾಗೂ ಇದನ್ನು ಉಲ್ಲಂಘಿಸುವ ಅಧಿಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದೆಂದು ತಿಳಿಸುವ ಸುತ್ತೋಲೆಯನ್ನು ಹೊರಡಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದಾರೆ.

2013ರಲ್ಲಿ ಸರ್ಕಾರಿ ಶಾಲಾ ಆವರಣದಲ್ಲಿ ಖಾಸಗಿ ಕಾರ್ಯಕ್ರಮ ಆಯೋಜನೆ ನಿಷೇಧ, ಪತ್ರ ವೈರಲ್

ಇದರ ನಡುವೆ 2013ರಲ್ಲಿಯೇ ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದಂತೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಮೈದಾನಗಳನ್ನು ಅನುಮತಿಯನ್ನು ನೀಡಬಾರದು ಎಂಬುದಾಗಿ ಆದೇಶಿಸಿದಂತ ಆದೇಶ ಪತ್ರವು ವೈರಲ್ ಆಗಿದೆ.

ವೈರಲ್ ಆಗಿರುವಂತ ಆದೇಶ ಪತ್ರದಲ್ಲಿ ದಿನಾಂಕ 07-02-2013ರಲ್ಲಿ ಅಂದಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾಗಿದ್ದಂತ ಎಸ್.ಆರ್ ಉಮಾಶಂಕರ್ ಅವರು, ಬೆಂಗಳೂರು ದಕ್ಷಿಣದ ಉಪನಿರ್ದೇಶಕರು(ಆಡಳಿತ) ಇವರು ಖಾಸಗಿ ಸಂಸ್ಥೆಗಳ ಮನವಿಯ ಮೇರೆಗೆ ಖಾಸಗಿ ಕಾರ್ಯಕ್ರಮಗಳಿಗೆ ಸರ್ಕಾರಿ ಪ್ರೌಢಶಾಲೆ, ಕೋಟೆ, ಚಾಮರಾಜಪೇಟೆ, ಬೆಂಗಳೂರು ಈ ಶಾಲೆಯ ಮೈದಾನದಲ್ಲಿ ನಡೆಸುವ ಬಗ್ಗೆ ಅನುಮತಿ ಕೋರಿದ್ದಾರೆ ಎಂದಿದ್ದಾರೆ.

ಈ ಕುರಿತು ಪರಿಶೀಲಿಸಲಾಗಿದ್ದು, ಶಾಲಾ ಆವರಣವು ಶಾಲೆಯಲ್ಲಿ ಮಕ್ಕಳಿಗೆ ದೈನಂದಿನ ಪಾಠಪ್ರವಚನಗಳೊಂದಿಗೆ ಪಠ್ಯೇತರ ಚಟುವಟಿಕೆಗಳು ಮತ್ತು ಆಟೋಟ ಕಾರ್ಯಕ್ರಮಗಳು, ಶಾರೀರಿಕ ಶಿಕ್ಷಣ ಹಾಗೂ ವ್ಯಾಯಾಮ ಮತ್ತಿತರ ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಸದ್ವಿನಿಯೋಗವಾಗಬೇಕು ಎಂದಿದ್ದಾರೆ.

ಆದುದ್ದರಿಂದ ಶಾಲಾ ಮೈದಾನ, ಆವರಣವನ್ನು ಯಾವುದೇ ಸಂದರ್ಭದಲ್ಲಿ ಯಾವುದೇ ಕಾರಣಕ್ಕಾಗಲಿ ಶೈಕ್ಷಣಿಕೇತರ ಚಟುವಟಿಕೆಗಳಿಗೆ, ಉದ್ದೇಶಗಳಿಗೆ ಬಳಸಬಾರದು ಹಾಗೂ ಅನುಮತಿಯನ್ನು ನೀಡಬಾರದಾಗಿ ಸೂಚಿಸಿದ್ದಾರೆ.

ಈ ರೀತಿಯ ಖಾಸಗಿ, ಶೈಕ್ಷಣಿಕೇತರ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಶಾಲಾ ಮೈದಾನ, ಆವರಣವನ್ನು ಬಳಸುವ ಅನುಮತಿಗಾಗಿ ಈ ಕಚೇರಿಗೆ ಪ್ರಸ್ತಾವನೆಗಳು, ಮನವಿಯನ್ನು ಸಲ್ಲಿಸ ಬಾರದಾಗಿಯೂ ಸಹ ಖಡಕ್ ಸೂಚನೆ ನೀಡಲಾಗಿದೆ.

ಒಟ್ಟಾರೆಯಾಗಿ ರಾಜ್ಯದ ಶಾಲಾ ಅವರಣದಲ್ಲಿ ಶೈಕ್ಷಣಿಕ ಚಟುವಟಿಕೆಯ ಹೊರತಾಗಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿಯಿಲ್ಲ ಎಂಬುದು ಆದೇಶದಲ್ಲಿ ಸ್ಪಷ್ಟವಾಗಿದೆ. ಈ ಮೂಲಕ ಶಾಲಾ ಆವರಣದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಡೆಸುವುದು ನಿಷೇಧ ಎಂಬುದನ್ನು ಸರ್ಕಾರ ಸ್ಪಷ್ಟವಾಗಿ ತಿಳಿಸಿದಂತೆ ಆಗಿದೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

BREAKING: ಇಂಡೋನೇಷ್ಯಾದ ಪಪುವಾದಲ್ಲಿ 6.7 ತೀವ್ರತೆಯಲ್ಲಿ ಪ್ರಬಲ ಭೂಕಂಪ | Earthquake hits Indonesia

Share. Facebook Twitter LinkedIn WhatsApp Email

Related Posts

BREAKING : ಕೊಪ್ಪಳದಲ್ಲಿ ರಾತ್ರೋರಾತ್ರಿ ದಲಿತರ ಮನೆಗೆ ಬೆಂಕಿ ಇಟ್ಟ ಸವರ್ಣಿಯರು : ಸ್ಥಳದಲ್ಲಿ ಬಿಗುವಿನ ವಾತಾವರಣ!

16/10/2025 12:11 PM1 Min Read

ನಿಮ್ಮಪ್ಪನಂತೆ ಒಳ್ಳೆಯ ಕೆಲಸ ಮಾಡಲು ಜನ ನಿನ್ನ ಗೆಲ್ಲಿಸಿದ್ದಾರೆ : ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್ ವಿಶ್ವನಾಥ್ ವಾಗ್ದಾಳಿ

16/10/2025 12:06 PM1 Min Read

ದೀಪಾವಳಿಯಂದು ಹಳೆಯ ದೀಪಗಳನ್ನು ಹಚ್ಚುವುದು ಶುಭವೋ ಅಶುಭವೋ? ದೀಪಗಳನ್ನು ಹಚ್ಚಲು ಸರಿಯಾದ ನಿಯಮಗಳನ್ನು ತಿಳಿಯಿರಿ.!

16/10/2025 12:04 PM2 Mins Read
Recent News

BREAKING : ಭಾರತ ಸೇರಿದಂತ ವಿಶ್ವದಾದ್ಯಂತ `YouTube’ ಡೌನ್ : ಬಳಕೆದಾರರ ಪರದಾಟ | Youtube Outage

16/10/2025 12:18 PM

BIG NEWS: ರಾಜ್ಯದ ‘ಸರ್ಕಾರಿ ಶಾಲಾ ಆವರಣ’ದಲ್ಲಿ ಖಾಸಗಿ ಕಾರ್ಯಕ್ರಮ ಬ್ಯಾನ್: 2013ರಲ್ಲೇ ಆದೇಶ, ಪತ್ರ ವೈರಲ್

16/10/2025 12:12 PM

BREAKING : ಕೊಪ್ಪಳದಲ್ಲಿ ರಾತ್ರೋರಾತ್ರಿ ದಲಿತರ ಮನೆಗೆ ಬೆಂಕಿ ಇಟ್ಟ ಸವರ್ಣಿಯರು : ಸ್ಥಳದಲ್ಲಿ ಬಿಗುವಿನ ವಾತಾವರಣ!

16/10/2025 12:11 PM

BREAKING: ಇಂಡೋನೇಷ್ಯಾದ ಪಪುವಾದಲ್ಲಿ 6.7 ತೀವ್ರತೆಯಲ್ಲಿ ಪ್ರಬಲ ಭೂಕಂಪ | Earthquake hits Indonesia

16/10/2025 12:11 PM
State News
KARNATAKA

BIG NEWS: ರಾಜ್ಯದ ‘ಸರ್ಕಾರಿ ಶಾಲಾ ಆವರಣ’ದಲ್ಲಿ ಖಾಸಗಿ ಕಾರ್ಯಕ್ರಮ ಬ್ಯಾನ್: 2013ರಲ್ಲೇ ಆದೇಶ, ಪತ್ರ ವೈರಲ್

By kannadanewsnow0916/10/2025 12:12 PM KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘ( RSS) ಚಟುವಟಿಕೆ ನಿಷೇಧಿಸುವಂತೆ ಸಚಿವ ಪ್ರಿಯಾಕ್ ಖರ್ಗೆ ಅವರು…

BREAKING : ಕೊಪ್ಪಳದಲ್ಲಿ ರಾತ್ರೋರಾತ್ರಿ ದಲಿತರ ಮನೆಗೆ ಬೆಂಕಿ ಇಟ್ಟ ಸವರ್ಣಿಯರು : ಸ್ಥಳದಲ್ಲಿ ಬಿಗುವಿನ ವಾತಾವರಣ!

16/10/2025 12:11 PM

ನಿಮ್ಮಪ್ಪನಂತೆ ಒಳ್ಳೆಯ ಕೆಲಸ ಮಾಡಲು ಜನ ನಿನ್ನ ಗೆಲ್ಲಿಸಿದ್ದಾರೆ : ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್ ವಿಶ್ವನಾಥ್ ವಾಗ್ದಾಳಿ

16/10/2025 12:06 PM

ದೀಪಾವಳಿಯಂದು ಹಳೆಯ ದೀಪಗಳನ್ನು ಹಚ್ಚುವುದು ಶುಭವೋ ಅಶುಭವೋ? ದೀಪಗಳನ್ನು ಹಚ್ಚಲು ಸರಿಯಾದ ನಿಯಮಗಳನ್ನು ತಿಳಿಯಿರಿ.!

16/10/2025 12:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.