ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 16 ರ ಇಂದು ವಿದ್ಯುತ್‌ ಕಡಿತ ಘೋಷಿಸಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಬೆಂಗಳೂರು ಬೆಳಗ್ಗೆ 10ರಿಂದ ಮಧ್ಯಾಹ್ನ 5 ರವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವನ್ನು ಘೋಷಿಸಿವೆ.

ಜೂ.16 ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಜೂ.16ರಂದು ತಾವರೆಕೆರೆ ಉಪ ವಿಭಾಗ ವ್ಯಾಪ್ತಿಯ ಚಂದ್ರಪ್ಪ ಸರ್ಕಲ್ ಉಪ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ 10 ಗಂಟೆಯಿಂದ 5 ಗಂಟೆವರೆಗೆ ಚಿಕ್ಕನಹಳ್ಳಿ, ಸೂಲಿವಾರ, ಗೊಲ್ಲಹಳ್ಳಿ, ಚಂದ್ರಪ್ಪ ಸರ್ಕಲ್, ಹುಲವೇನಹಳ್ಳಿ, ಮಾದಾಪಟ್ಟಣ ಸುತ್ತಮುತ್ತಲಿನ ಪ್ರದೇಶ ಕುರುಬರಪಾಳ್ಯ ಮತ್ತು ಸುತ್ತಮುತ್ತಲಿನ ಜೆಲ್ಲಿ ಕ್ರಷರ್, ಪೀಣ್ಯ ಕೇಂದ್ರದಲ್ಲಿ ಫೀಡರ್‌ಗಳ ನಿರ್ವಹಣೆ ಹಿನ್ನೆಲೆಯಲ್ಲಿ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಎಚ್‌ಎಂಟಿ ರಸ್ತೆ, ಆರ್ ಅಪಾರ್ಟ್‌ಮೆಂಟ್, ಬೋರ್ ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್, ವೈಷ್ಣವಿ ಮಾಲ್, ಕಾವೇರಿ ಮಾಲ್, ಗಣಪತಿನಗರ ಮುಖ್ಯರಸ್ತೆ, ಕೆಎಚ್‌ಬಿ ಬಡಾವಣೆ, ರಾಜೇ ಶ್ವರಿನಗರ, ಭೈರೇಶ್ವರನಗರ, ರಾಜಗೊ ಪಾಲನಗರ, ಕಸ್ತೂರಿ ಬಡಾವಣೆ,ಇಎಸ್‌ಐ ಆಸ್ಪತ್ರೆ, ಜಿಕೆಡಬ್‌ಲ್ಯೂ ಬಡಾವಣೆಯಲ್ಲಿ ವ್ಯತ್ಯಯ ಉಂಟಾಗಲಿದೆ

Share.
Exit mobile version