ಬೆಂಗಳೂರು: “ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರು ವಿಶ್ವಮಟ್ಟದಲ್ಲಿ ಕನ್ನಡದ ರಾಯಭಾರಿಗಳಾಗಿ ಬೆಳಗಿದ್ದಾರೆ. ಬೂಕರ್ ಪ್ರಶಸ್ತಿ ಗೆದ್ದು ಕನ್ನಡದ ಜ್ಯೋತಿಯನ್ನು ಬೆಳಗಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.
ಬೂಕರ್ ಪ್ರಶಸ್ತಿ ಗಳಿಸಿದ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
“ಕನ್ನಡ ಭಾರತಿ ಈಗ ದೇಶಕ್ಕೆ ಆರತಿ. ಸಪ್ತ ಸಾಗರದ ಆಚೇ ಕನ್ನಡ ಡಿಂಡಿಮ ಕೇಳಿಸುತ್ತಿದೆ. ಕನ್ನಡದ ಹಿರಿಮೆಯನ್ನು ಹೆಚ್ಚಿಸಿದ ಇಬ್ಬರು ಮಹಿಳೆಯರಿಗೆ ಸರ್ಕಾರದ ಕಡೆಯಿಂದ ತುಂಬು ಹೃದಯದ ಕೃತಜ್ಞತೆಗಳು” ಎಂದರು.
“ನಮ್ಮ ದೇಶದಲ್ಲಿ 780 ಕ್ಕೂ ಹೆಚ್ಚು ಪ್ರಮುಖ ಭಾಷೆಗಳಿವೆ. 19,500 ಉಪ ಭಾಷೆಗಳಿವೆ. ಇಡೀ ಪ್ರಪಂಚದಲ್ಲಿ 7,800 ಕ್ಕೂ ಹೆಚ್ಚು ಭಾಷೆಗಳಿವೆ. ನಾವು ಅರ್ಜಿಯಲ್ಲಿ ಬರೆಯುವಾಗ ಪಿತೃಭಾಷೆ ಯಾವುದು ಎಂದು ಬರೆಯುವುದಿಲ್ಲ. ಮಾತೃಭಾಷೆ ಎಂದು ಬರೆಯುತ್ತೇವೆ. ಭಾಷೆಗೆ ತಾಯಿಯ ಸ್ಥಾನ ನೀಡಿದ್ದೇವೆ” ಎಂದು ಹೇಳಿದರು.
ಬೆಂಗಳೂರಲ್ಲಿ ‘ಇವಿ ಹಬ್’ ಲೋಕಾರ್ಪಣೆ: ಚಾರ್ಜ್ ಮಾಡುವುದು ಹೇಗೆ? ದರ ಎಷ್ಟು ಗೊತ್ತಾ?
BREAKING : ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ್ ಗೆ ಬಿಗ್ ಶಾಕ್ : ಗಡಿಪಾರು ನೋಟಿಸ್ ಜಾರಿ!