ವಿಜಯಪುರ : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರ ವಿರುದ್ಧ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಲೇವಡಿ ಮಾಡಿದ್ದು, 180 ಸೀಟು ಗೆದ್ದುಕೊಡುವುದಾದರೆ ಯಡಿಯೂರಪ್ಪ ಪ್ರ ವಾಸ ಮಾಡಲಿ ಎಂದು ಲೇವಡಿ ಮಾಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದವರು ರಾಜ್ಯ ಪ್ರವಾಸ ಮಾಡಿ 180 ಸೀಟು ಗೆದ್ದುಕೊಡುವುದಾದರೆ ಮಾಡಲಿ, ತನಗೇನು ಅಭ್ಯಂತರವಿಲ್ಲ ಎಂದಿದ್ದಾರೆ. ಮುಂದುವರೆದು ಕಾಂಗ್ರೆಸ್ ಜೋಡೋ ಯಾತ್ರೆ ಕುರಿತು ಲೇವಡಿ ಮಾಡಿದ ಯತ್ನಾಳ್ ಪ್ರಧಾನಿ ನರೇಂದ್ರ ಮೋದಿಯವರು ಭ್ರಷ್ಟರನ್ನು ಬೀದಿಗೆ ತರುತ್ತೇನೆ ಎಂದು ಹೇಳಿದ್ದರು. ಅದರ ಫಲಶೃತಿಯಾಗಿಯೇ ರಾಹುಲ್ ಹಾಗೂ ಸೋನಿಯಾ ಗಾಂಧಿ ಮತ್ತಿತರರು ರೋಡಿಗೆ ಬಂದಿದ್ದಾರೆ ಎಂದು ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಗೆ ವ್ಯಂಗ್ಯವಾಡಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ  ರಾಜ್ಯ ಬಿಜೆಪಿ ಘಟಕದ ನಾಯಕರು  ರಾಜ್ಯ ಪ್ರವಾಸ ಕೈಗೊಂಡಿದ್ದು, ಅಕ್ಟೋಬರ್ 11 ರಿಂದ ಕ್ಷೇತ್ರ ಸಂಚಾರಕ್ಕೆ ಬಿಜೆಪಿ ಸಿದ್ದವಾಗಿದೆ.

ರಾಯಚೂರಿನಿಂದ ಮುಖ್ಯಮಂತ್ರಿಗಳ ಚುನಾವಣಾ ಪ್ರಚಾರ ಆರಂಭವಾಗಲಿದ್ದು, ಮಾಜಿ ಸಿಎಂ ಯಡಿಯೂರಪ್ಪಅವರೊಂದಿಗೆ ಸಿಎಂ ಬೊಮ್ಮಾಯಿ ಪ್ರವಾಸ ಕೈಗೊಂಡಿದ್ದಾರೆ.  ಮೊದಲ ಹಂತದಲ್ಲಿಅಕ್ಟೋಬರ್ 11 ರಿಂದ 13 ರವರೆಗೆ ಮುಖ್ಯಮಂತ್ರಿ ಕ್ಷೇತ್ರ ಪ್ರವಾಸ ಕೈಗೊಂಡಿದ್ದು, ರಾಯಚೂರು, ಮಸ್ಕಿ, ಕುಷ್ಟಗಿಯಲ್ಲಿ ಮೊದಲ ಹಂತದ ರ್ಯಾಲಿ ನಡೆಸಲಿದ್ದಾರೆ.

ನಂತರ ಅಕ್ಟೋಬರ್ 17 ರಿಂದ ಎರಡನೇ ಹಂತದಲ್ಲಿ ಕಲಬುರ್ಗಿ ಮತ್ತು ಬೀದರ್ ನಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಪ್ರವಾಸ ಕೈಗೊಳ್ಳಲಿದ್ದಾರೆ. ಎರಡು ತಿಂಗಳಿನಲ್ಲಿ 50 ಕ್ಷೇತ್ರಗಳಿಗೆ ಇಬ್ಬರು ನಾಯಕರು ಭೇಟಿ  ನೀಡಲಿದ್ದಾರೆ.

BIG ALEART: ನೀವು ಫೇಸ್ಬುಕ್ನಲ್ಲಿ ಖಾತೆಯನ್ನು ಸಹ ಹೊಂದಿದ್ದೀರಾ? ತಡಮಾಡದೆ ತಕ್ಷಣವೇ ಪಾಸ್ ವರ್ಡ್ ಬದಲಿಸಿ

BIGG NEWS: PFI ಸೇರಿದಂತೆ ದ್ವೇಷ ಹರಡುವವರ ವಿರುದ್ಧ ಇದ್ದೇವೆ; ಸಮಾಜದಲ್ಲಿ ಶಾಂತಿ ಕದಡುವವರು ಯಾರೇ ಇದ್ದರೂ ಸಹಿಸಲ್ಲ ; ಸುದ್ದಿಗೋಷ್ಠಿಯಲ್ಲಿ ರಾಹುಲ್‌ ಗಾಂಧಿ

Share.
Exit mobile version