ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಕಲಬುರಗಿಯಲ್ಲಿ ಬಸವಣ್ಣ ಮತ್ತು ವಚನ ಮಂಟಪ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದಲ್ಲದೇ ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ನೀಡಲಾಗುವುದು. 233 ಕೋಟಿ ರೂ. ವೆಚ್ಚದಲ್ಲಿ ಸೈನ್ಸ್ ಸಿಟಿ ನಿರ್ಮಾಣ, ಮಾಡಲಾಗುವುದು ಅಂಥ ತಿಳಿಸಿದರು.