ಬೆಂಗಳೂರು: ನಗರದಲ್ಲಿ ಪ್ಲಾಸ್ಟಿಕ್ ತಯಾರಿಸುವ 2 ಕಾರ್ಖಾನೆಗಳಿಗೆ ಭೇಟಿ ನೀಡಿ 810 ಕೆ.ಜಿ. ಪ್ಲಾಸ್ಟಿಕ್ ಅನ್ನು ಬಿಬಿಎಂಪಿಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಕಾರ್ಖಾನೆಗೆ 5 ಸಾವಿರ ದಂಡವನ್ನು ವಿಧಿಸಿದ್ದಾರೆ.

ಮಾಜಿ ಸ್ವೀಕರ್ ರಮೇಶ್ ಕುಮಾರ್ ಹೇಳಿಕೆ ಸಮರ್ಥಿಸಿಕೊಂಡ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ದಾಸರಹಳ್ಳಿ ವಲಯ ವ್ಯಾಪ್ತಿಯ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ತಯಾರಿಸುವ 2 ಕಾರ್ಖಾನೆಗಳನ್ನು ಪರಿಶೀಲಿಸಿ, ಸುಮಾರು 810 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು 5,000 ರೂ. ದಂಡವನ್ನು ವಿಧಿಸಲಾಗಿರುತ್ತದೆ.

ಇಂದಿನ ಸಚಿವ ಸಂಪುಟ ಸಭೆ, ಚುನಾವಣೆ ಸಭೆ: ಸಂಪುಟ ನಿರ್ಣಯಗಳ ಬಗ್ಗೆ ಮಾಜಿ CM ಕುಮಾರಸ್ವಾಮಿ ಲೇವಡಿ

ಸದರಿ ವೇಳೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಯ ಪರಿಸರ ಅಧಿಕಾರಿಗಳು ಹಾಗೂ ದಾಸರಹಳ್ಳಿ ವಲಯದ ಘನತ್ಯಾಜ್ಯ ನಿರ್ವಹಣೆ ವಿಭಾಗದ ಅಧೀಕ್ಷಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಮಾರ್ಷಲ್‌ ಸೂಪರ್‌ವೈಜರ್‌ ಮತ್ತು ಇನ್ನಿತರ ಅಧಿಕಾರಿಗಳು ಸ್ಥಳದಲ್ಲಿದ್ದರು. ಇನ್ನು ಮುಂದೆ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಉತ್ಪಾದನೆ ಮಾಡದಂತೆ ಸೂಚನೆ ನೀಡಲಾಗಿರುತ್ತದೆ.

ವಿಪತ್ತು ನಿರ್ವಹಣೆಯ ಕರ್ನಾಟಕ ವಿನೂತನ ಕ್ರಮವನ್ನು ಪ್ರಧಾನಮಂತ್ರಿ ಶ್ಲಾಘಿಸಿದ್ದಾರೆ – ಸಿಎಂ ಬೊಮ್ಮಾಯಿ

ವಶಪಡಿಸಿಕೊಂಡ ನಿಷೇಧಿತ ಪ್ಲಾಸ್ಟಿಕ್ ಅನ್ನು ಮಾನ್ಯ ಮುಖ್ಯ ಆಯುಕ್ತರು ದಾಸರಹಳ್ಳಿ ವಲಯ ಕಛೇರಿಗೆ ಭೇಟಿ ನೀಡಿದಾಗ ಪರಿಶೀಲಿಸಿ, ವಶಪಡಿಸಿಕೊಂಡ ಪ್ಲಾಸ್ಟಿಕ್ ಅನ್ನು ಚೂರು ಚೂರು ಮಾಡಿ ಹರಾಜು ಮುಖಾಂತರ ವಿಲೇವಾರಿ ಮಾಡಲು ಸೂಚನೆ ನೀಡಿದರು.

Share.
Exit mobile version