Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

16/05/2025 6:58 PM

ಬೆಂಗಳೂರಿನ ಪೌರ ಕಾರ್ಮಿಕರಿಗೆ ಈ ಮಹತ್ವದ ಮಾಹಿತಿ ನೀಡಿದ ಬಿಬಿಎಂಪಿ

16/05/2025 6:55 PM

ಇದು ​ಶುಕ್ರವಾರ ಲಕ್ಷ್ಮಿ ಆರಾಧನೆಯ ಮಹತ್ವ: ಆರಾಧಿಸಿ ನೋಡಿ, ನಿಮ್ಮ ಕಷ್ಟ ಪರಿಹಾರ ಗ್ಯಾರಂಟಿ

16/05/2025 6:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಪೌರ ಕಾರ್ಮಿಕರಿಗೆ ಈ ಮಹತ್ವದ ಮಾಹಿತಿ ನೀಡಿದ ಬಿಬಿಎಂಪಿ
KARNATAKA

ಬೆಂಗಳೂರಿನ ಪೌರ ಕಾರ್ಮಿಕರಿಗೆ ಈ ಮಹತ್ವದ ಮಾಹಿತಿ ನೀಡಿದ ಬಿಬಿಎಂಪಿ

By kannadanewsnow0916/05/2025 6:55 PM

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಯಂ ನೇಮಕಾತಿಗೆ ಒಳಪಟ್ಟಿರುವ ಪೌರಕಾರ್ಮಿಕರ ಸಿಂಧುತ್ವ ಪ್ರಮಾಣ ಪತ್ರಕ್ಕಾಗಿ ಸಲ್ಲಿಸಬೇಕಿರುವ ಇತರೆ ಪ್ರಮಾಣ ಪತ್ರಗಳಿಗೆ ತಗಲುವ ವೆಚ್ಚವನ್ನು ಪಾಲಿಕೆಯಿಂದಲೇ ಭರಿಸಲಾಗುವುದು.

ಪಾಲಿಕೆಯ ಘನತ್ಯಾಜ್ಯ ನಿರ್ವಹಣೆಯ ವಿಭಾಗದಲ್ಲಿ ನೇರಪಾವತಿಯಡಿ (ಡಿಪಿಎಸ್) ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರುಗಳ ಪೈಕಿ, ರೋಸ್ಟರ್ ಅಥವಾ ಮೀಸಲಾತಿ ನಿಯಮಾವಳಿಗಳನ್ವಯ 12,692 ಪೌರಕಾರ್ಮಿಕರ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು 16ನೇ ನವೆಂಬರ್ 2024 ರಂದು ಪ್ರಚುರಪಡಿಸಲಾಗಿರುತ್ತದೆ.

ಈಗಾಗಲೇ ಸುಮಾರು 4,000 ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಲಾಗಿದ್ದು, ಉಳಿದ ಪೌರಕಾರ್ಮಿಕರಿಗೆ ಅತಿ ಶೀಘ್ರದಲ್ಲೇ ನೇಮಕಾತಿ ಆದೇಶ ಪತ್ರಗಳನ್ನು ನೀಡಲು ಕ್ರಮ ವಹಿಸಲಾಗುತ್ತಿದೆ.

ನೇಮಕಗೊಂಡ ಪೌರಕಾರ್ಮಿಕ ಅಭ್ಯರ್ಥಿಗಳ ಸಿಂಧುತ್ವ ಪರಿಶೀಲನೆಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಂದ ವರದಿಯನ್ನು ಪಡೆಯಬೇಕಿದ್ದು, ಈ ಸಲುವಾಗಿ ಸೇವಾಸಿಂಧು ಪೋರ್ಟಲ್ ನಲ್ಲಿ ಈಗಾಗಲೇ ಅರ್ಜಿಗಳನ್ನು ಅಪ್ಲೋಡ್ ಮಾಡಲಾಗಿರುತ್ತದೆ. ಈ ಪೈಕಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಮೇಲ್ವಿಚಾರಣೆ ಮಾಡಲಾಗುತ್ತಿದೆ.

ಬಿಬಿಎಂಪಿ ವತಿಯಿಂದಲೇ ವೆಚ್ಚ ಭರಿಸಲಾಗುವುದು:

ಸೇವಾ ಸಿಂಧು ಅರ್ಜಿದಾರರ ಪ್ರಮಾಣ ಪತ್ರ ಪೋರ್ಟಲ್ ನಲ್ಲಿ ಅರ್ಜಿದಾರರ ಲಾಗಿನ್ ನಿಂದ ಪ್ರಮಾಣ ಪತ್ರ-1 ಹಾಗೂ ಪ್ರಮಾಣ ಪತ್ರ-2 ಆಪ್ಲೋಡ್ ಮಾಡಬೇಕಾಗಿರುತ್ತದೆ. ಈ ಸಂಬಂಧ ಎರಡೂ ಪ್ರಮಾಣ ಪತ್ರಗಳ ಛಾಪಾ ಕಾಗದ ಹಾಗೂ ನೋಟರಿ ಸೇರಿದಂತೆ ಇನ್ನಿತರೆ ದಾಖಲಾತಿಗಳಿಗೆ ತಗಲುವ ವೆಚ್ಚವನ್ನು ನೇಮಕಾತಿ ಆದೇಶ ಪತ್ರಗಳು ನೀಡಿದವರನ್ನು ಹೊರತುಪಡಿಸಿ ಇನ್ನುಳಿದ ಪೌರಕಾರ್ಮಿಕರಿಗೆ ಪಾಲಿಕೆಯಿಂದಲೇ ಭರಿಸಲಾಗುವುದು.

ಪ್ರಮಾಣ ಪತ್ರಗಳಿಗೆ ತಗಲುವ ಮೊತ್ತವನ್ನು ಪ್ರಸಕ್ತ ಸಾಲಿನ ಆಯವ್ಯಯದ ಲೆಕ್ಕ ಶೀರ್ಷಿಕೆ ಸಂಖ್ಯೆ: 02-210999 ಇತರೆ ಸಾಮಾನ್ಯ ಮತ್ತು ವಿವಿಧ ವೆಚ್ಚಗಳಡಿ ಭರಿಸುವಂತೆ ಎಲ್ಲಾ ವಲಯ ಜಂಟಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ.

ಯಾವುದೇ ಆಮಿಷಗಳಿಗೆ ಒಳಗಾಗದಿರಿ:

ಪೌರಕಾರ್ಮಿಕ ನೇಮಕಾತಿ ವಿಚಾರವಾಗಿ ಪ್ರಮಾಣ ಪತ್ರಗಳನ್ನು ಸಿದ್ಧಪಡಿಸಿ, ಅಪ್ಲೋಡ್ ಮಾಡಲು ಪಾಲಿಕೆಯ ಅಧಿಕಾರಿಗಳು ಸಹಕರಿಸಲಿದ್ದು, ಈ ಸಂಬಂಧ ನೇಮಕಗೊಂಡ ಪೌರಕಾರ್ಮಿಕರು ಯಾವುದೇ ಮಧ್ಯವರ್ತಿಗಳನ್ನು ಭೇಟಿ ಮಾಡಕೂಡದು. ಜೊತೆಗೆ ಯಾವುದೇ ಆಮಿಷಗಳಿಗೆ ಒಳಗಾಗಬಾರದೆಂದು ಪೌರಕಾರ್ಮಿಕ ಹುದ್ದೆಗೆ ಆಯ್ಕೆಯಾಗಿರುವ, ಸಿಂಧುತ್ವ ಪ್ರಮಾಣ ಪತ್ರ ಅಗತ್ಯವಿರುವವರಲ್ಲಿ ಆಡಳಿತ ವಿಭಾಗದ ವಿಶೇಷ ಆಯುಕ್ತರು ಹಾಗೂ ಪೌರಕಾರ್ಮಿಕರ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಯಾದ ನವೀನ್ ಕುಮಾರ್ ರಾಜು ರವರು ಕೋರಿದ್ದಾರೆ.

ನಿಮ್ಮ ಮೊಬೈಲ್ ಫೋನಿನ `ಬ್ಯಾಕ್ ಕವರ್’ ಬಣ್ಣ ಬದಲಾಗಲು ಕಾರಣ ಏನು ಗೊತ್ತಾ?

ಭಜರಂಗಿ ಖ್ಯಾತಿಯ ನಟಿ ರುಕ್ಮಿಣಿ ವಿಜಯ್ ಕುಮಾರ್ ಬ್ಯಾಗ್, ಡೈಮಂಡ್ ರಿಂಗ್ ಕದ್ದಿದ್ದ ಕ್ಯಾಬ್ ಚಾಲಕ ಅರೆಸ್ಟ್

Share. Facebook Twitter LinkedIn WhatsApp Email

Related Posts

ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

16/05/2025 6:58 PM2 Mins Read

ಇದು ​ಶುಕ್ರವಾರ ಲಕ್ಷ್ಮಿ ಆರಾಧನೆಯ ಮಹತ್ವ: ಆರಾಧಿಸಿ ನೋಡಿ, ನಿಮ್ಮ ಕಷ್ಟ ಪರಿಹಾರ ಗ್ಯಾರಂಟಿ

16/05/2025 6:49 PM3 Mins Read

SHOCKING : ಬೀದರ್ ನಲ್ಲಿ ಘೋರ ದುರಂತ : ಹಾಸ್ಟೆಲ್ ನಲ್ಲೆ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು!

16/05/2025 6:35 PM1 Min Read
Recent News

ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

16/05/2025 6:58 PM

ಬೆಂಗಳೂರಿನ ಪೌರ ಕಾರ್ಮಿಕರಿಗೆ ಈ ಮಹತ್ವದ ಮಾಹಿತಿ ನೀಡಿದ ಬಿಬಿಎಂಪಿ

16/05/2025 6:55 PM

ಇದು ​ಶುಕ್ರವಾರ ಲಕ್ಷ್ಮಿ ಆರಾಧನೆಯ ಮಹತ್ವ: ಆರಾಧಿಸಿ ನೋಡಿ, ನಿಮ್ಮ ಕಷ್ಟ ಪರಿಹಾರ ಗ್ಯಾರಂಟಿ

16/05/2025 6:49 PM

SHOCKING : ಬೀದರ್ ನಲ್ಲಿ ಘೋರ ದುರಂತ : ಹಾಸ್ಟೆಲ್ ನಲ್ಲೆ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು!

16/05/2025 6:35 PM
State News
KARNATAKA

ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

By kannadanewsnow0916/05/2025 6:58 PM KARNATAKA 2 Mins Read

ಮಂಡ್ಯ : ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ ಕಲ್ಪಿಸುವ ಉದ್ದೇಶದಿಂದ ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕರ್ನಾಟಕ ಪಬ್ಲಿಕ್‌…

ಬೆಂಗಳೂರಿನ ಪೌರ ಕಾರ್ಮಿಕರಿಗೆ ಈ ಮಹತ್ವದ ಮಾಹಿತಿ ನೀಡಿದ ಬಿಬಿಎಂಪಿ

16/05/2025 6:55 PM

ಇದು ​ಶುಕ್ರವಾರ ಲಕ್ಷ್ಮಿ ಆರಾಧನೆಯ ಮಹತ್ವ: ಆರಾಧಿಸಿ ನೋಡಿ, ನಿಮ್ಮ ಕಷ್ಟ ಪರಿಹಾರ ಗ್ಯಾರಂಟಿ

16/05/2025 6:49 PM

SHOCKING : ಬೀದರ್ ನಲ್ಲಿ ಘೋರ ದುರಂತ : ಹಾಸ್ಟೆಲ್ ನಲ್ಲೆ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು!

16/05/2025 6:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.