Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಟೀಮ್ ಇಂಡಿಯಾ ವೈಟ್ ಬಾಲ್ ಸರಣಿಗಾಗಿ ಬಾಂಗ್ಲಾದೇಶಕ್ಕೆ ಪ್ರಯಾಣಿಸುವ ಸಾಧ್ಯತೆ ಕಡಿಮೆ: ವರದಿ

04/07/2025 11:11 AM

BREAKING: ತೆಲಂಗಾಣ ಮಾಜಿ ಸಿಎಂ ಚಂದ್ರಶೇಖರ್ ರಾವ್ ಆಸ್ಪತ್ರೆಗೆ ದಾಖಲು

04/07/2025 11:04 AM

ALERT : ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ದಿಂದ ಪಾರಾಗಲು ತಪ್ಪದೇ ಮಾಡದೇ ಈ ಟೆಸ್ಟ್ ಮಾಡಿಸಿಕೊಳ್ಳಿ.!

04/07/2025 11:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಸೇವಾನ್ಯೂನ್ಯತೆ ಪರಿಗಣಿಸಿ ಪರಿಹಾರ ನೀಡಲು ಗ್ರಾಹಕರ ನ್ಯಾಯಾಲಯ ಆದೇಶ
WORLD

ಶಿವಮೊಗ್ಗ: ಸೇವಾನ್ಯೂನ್ಯತೆ ಪರಿಗಣಿಸಿ ಪರಿಹಾರ ನೀಡಲು ಗ್ರಾಹಕರ ನ್ಯಾಯಾಲಯ ಆದೇಶ

By kannadanewsnow0919/03/2024 6:31 PM

ಶಿವಮೊಗ್ಗ: ಅರ್ಜಿದಾರರಾದ ಗೋವಿಂದನಾಯ್ಕರವರು ಕರ್ನಾಟಕ ಗ್ರಾಮೀಣ ಬ್ಯಾಂಕ್, ಆಯನೂರು, ಶಿವಮೊಗ್ಗ ಶಾಖೆ ಹಾಗೂ ಯೂನಿವರ್ಸಲ್ ಸೊಂಪೊ ಜನರಲ್ ಇನ್ಶೂರೆನ್ಸ್ ಕಂಪೆನಿ ಶಿವಮೊಗ್ಗ ಇವರ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಅರ್ಜಿದಾರರಿಗೆ ವಿಮಾ ಮೊತ್ತ ಪಾವತಿಸುವಂತೆ ಎದುರುದಾರರಿಗೆ ಆದೇಶಿಸಿದೆ.

ಅರ್ಜಿದಾರ ಗೋವಿಂದನಾಯ್ಕರು 2014 ರಲ್ಲಿ ಆಯನೂರಿನ ಕರ್ನಾಟಕ ಗ್ರಾಮೀಣ ಬ್ಯಾಂಕ್‍ನಲ್ಲಿ ಉಳಿತಾದ ಖಾತೆ ಹೊಂದಿದ್ದು, ಈ ಖಾತೆಗೆ ಯೂನಿವರ್ಸಲ್ ಸೊಂಪೊ ಜನರಲ್ ಇನ್ಶೂರೆನ್ಸ್ ಕಂಪೆನಿಯಿಂದ ಕೆಬಿಎಲ್ ಸುರಕ್ಷಾ ಪಾಲಿಸಿ ಪಡೆದಿರುತ್ತಾರೆ. 2020 ರ ಜೂನ್ 2 ರಂದು ಎಲೆಕ್ಟ್ರಿಕ್ ಶಾಕ್‍ನಿಂದ ಅರ್ಜಿದಾರರು ಮೃತಪಟ್ಟಿದ್ದು ಮೃತರ ತಂದೆ ಬ್ಯಾಂಕ್ ಮತ್ತು ವಿಮಾ ಕಂಪೆನಿಯನ್ನು ಸಂಪರ್ಕಿಸಿ ವಿಮಾ ಪರಿಹಾರ ಮೊತ್ತ ಸಂದಾಯ ಮಾಡುವಂತೆ ಕೋರಿರುತ್ತಾರೆ.

ಆದರೆ ಬ್ಯಾಂಕ್‍ನವರು ಮೃತರ ಖಾತೆ ಮುಕ್ತಾಯಗೊಳಿಸಿರುವುದರಿಂದ ಕೆಬಿಎಲ್ ಸುರಕ್ಷಾ ಸರ್ಟಿಫಿಕೇಟ್ ಡೌನ್‍ಲೋಡ್ ಮಾಡಲು ಸಾಧ್ಯವಿಲ್ಲವೆಂದು ತಿಳಿಸಿರುತ್ತಾರೆ. ಹಾಗೂ ವಿಮಾ ಕಂಪೆನಿಯವರು ಪರಿಹಾರ ಕೋರಿಕೆ ಅರ್ಜಿ ತಡವಾಗಿ ಹಾಜರು ಮಾಡಿರುತ್ತಾರೆಂದು ಪರಿಹಾರ ಮೊತ್ತ ನೀಡಲು ನಿರಾಕರಿಸಿರುತ್ತಾರೆ.

ಆಯೋಗವು ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಿ, ಬ್ಯಾಂಕ್‍ನವರು ಖಾತೆ ಮುಕ್ತಾಯಗೊಳಿಸುವ ಪೂರ್ವದಲ್ಲಿ ಸದರಿ ಖಾತೆಗೆ ಯಾವುದಾದರೂ ವಿಮೆ ಮಾಡಿಸಲಾಗಿದೆಯೇ ಎಂಬುದನ್ನು ತಪಾಸಣೆ ಮಾಡಿರುವುದಿಲ್ಲ ಮತ್ತು ಮೃತರ ಸಂಬಂಧಿಗಳಿಗೆ ಮಾಹಿತಿ ನೀಡಿರುವುದಿಲ್ಲ. ಅಲ್ಲದೇ ಆ ವೇಳೆ ಕೋವಿಡ್ ಲಾಕ್‍ಡೌನ್ ಸಹ ಇರುತ್ತದೆ. ಈ ಎಲ್ಲಾ ಕಾರಣದಿಂದ ಅರ್ಜಿದಾರರು ವಿಮಾ ಕಂಪೆನಿಗೆ ಅರ್ಜಿ ಸಲ್ಲಿಸಲು ತಡವಾಗಿರುತ್ತದೆ. ಆದ್ದರಿಂದ ಆಯೋಗವು 1ನೇ ಎದುರುದಾರ ಬ್ಯಾಂಕ್ ಮತ್ತು 2ನೇ ಎದುರುದಾರ ವಿಮಾ ಕಂಪನಿಯವರ ನಿರ್ಲಕ್ಷ್ಯತನದಿಂದ ಕೂಡಿದ ನಿರಾಕರಣೆ ಕಾರ್ಯವು ಸೇವಾನ್ಯೂನ್ಯತೆ ಎಂದು ಪರಿಗಣಿಸಿ ಪ್ರಕರಣವನ್ನು ಭಾಗಶಃ ಪುರಸ್ಕರಿಸಿರುತ್ತದೆ.

ಎದುರುದಾರರಿಗೆ ನೋಟಿಸ್‍ಗಳನ್ನು ಆಯೋಗ ಜಾರಿಗೊಳಿಸಿದ ಸಂದರ್ಭದಲ್ಲಿ ವಿಮಾ ಕಂಪೆನಿ ಅರ್ಜಿದಾರರ ಖಾತೆಗೆ ವಿಮಾ ಮೊತ್ತ ರೂ.10,00,000/- ಗಳನ್ನು ಜಮೆ ಮಾಡಿರುತ್ತದೆ. ಹೀಗಾಗಿ ಆಯೋಗವು ಸದರಿ ಮೊತ್ತಕ್ಕೆ ಸಂಬಂಧಿಸಿದಂತೆ ಶೇ.10 ಬಡ್ಡಿ ಮೊತ್ತವನ್ನು 2ನೇ ಎದುರುದಾರರು, ರೂ.10,000 ಮಾನಸಿಕ ಪರಿಹಾರ ಹಾಗೂ ರೂ.15,000 ಗಳನ್ನು ನ್ಯಾಯಾಲಯದ ಖರ್ಚುವೆಚ್ಚಗಳ ಬಾಬ್ತು ಎಂದು 1 ಮತ್ತು 2ನೇ ಎದುರುದಾರರು ಪಾವತಿಸಬೇಕೆಂದು ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ, ಸದಸ್ಯರಾದ ಬಿ.ಪಟ್ಟಣಶೆಟ್ಟಿ, ಬಿ.ಡಿ.ಯೋಗಾನಂದ ಬಾಂಡ್ಯ ಇವರ ಪೀಠವು ಮಾ.14 ರಂದು ಆದೇಶಿಸಿರುತ್ತದೆ.

ಕೂದಲು ಉದುರುವ ಸಮಸ್ಯೆಗೆ ‘ಈ ಪದಾರ್ಥ’ ಶಾಶ್ವತ ಪರಿಹಾರ, ಏನದು.?

ಮಿಸ್ಟರ್‌ ಡಿ.ಕೆ.ಶಿವಕುಮಾರ್‌, ಇವತ್ತು ‘ಜೆಡಿಎಸ್‌-ಬಿಜೆಪಿ ಮೈತ್ರಿ’ಗೆ ನೀವೇ ಕಾರಣ – H.D ಕುಮಾರಸ್ವಾಮಿ ಕಿಡಿ

ಶಿವಮೊಗ್ಗ: ಸೇವಾನ್ಯೂನ್ಯತೆ ಪರಿಗಣಿಸಿ ಪರಿಹಾರ ನೀಡಲು ಗ್ರಾಹಕರ ನ್ಯಾಯಾಲಯ ಆದೇಶ
Share. Facebook Twitter LinkedIn WhatsApp Email

Related Posts

BREAKING : ತಾಲಿಬಾನ್ ಸರ್ಕಾರಕ್ಕೆ ಮಾನ್ಯತೆ ಘೋಷಿಸಿದ ರಷ್ಯಾ : ಬೆಂಬಲ ನೀಡುವುದಾಗಿ ಹೇಳಿಕೆ | Taliban government

04/07/2025 8:13 AM1 Min Read

BREAKING : ಥೈಲ್ಯಾಂಡ್ ಹಂಗಾಮಿ ಪ್ರಧಾನಿಯಾಗಿ ‘ಫುಮ್ಥಾಮ್’ ನೇಮಕ

03/07/2025 9:21 PM1 Min Read

BREAKING : ಚಿಕಾಗೋದಲ್ಲಿ ಗುಂಡಿನ ದಾಳಿ ; ನಾಲ್ವರು ಸಾವು, 14 ಮಂದಿಗೆ ಗಾಯ

03/07/2025 4:20 PM1 Min Read
Recent News

ಟೀಮ್ ಇಂಡಿಯಾ ವೈಟ್ ಬಾಲ್ ಸರಣಿಗಾಗಿ ಬಾಂಗ್ಲಾದೇಶಕ್ಕೆ ಪ್ರಯಾಣಿಸುವ ಸಾಧ್ಯತೆ ಕಡಿಮೆ: ವರದಿ

04/07/2025 11:11 AM

BREAKING: ತೆಲಂಗಾಣ ಮಾಜಿ ಸಿಎಂ ಚಂದ್ರಶೇಖರ್ ರಾವ್ ಆಸ್ಪತ್ರೆಗೆ ದಾಖಲು

04/07/2025 11:04 AM

ALERT : ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ದಿಂದ ಪಾರಾಗಲು ತಪ್ಪದೇ ಮಾಡದೇ ಈ ಟೆಸ್ಟ್ ಮಾಡಿಸಿಕೊಳ್ಳಿ.!

04/07/2025 11:00 AM

BREAKING : ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : FIR ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ MLC ಎನ್.ರವಿಕುಮಾರ್

04/07/2025 10:58 AM
State News
KARNATAKA

ALERT : ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ದಿಂದ ಪಾರಾಗಲು ತಪ್ಪದೇ ಮಾಡದೇ ಈ ಟೆಸ್ಟ್ ಮಾಡಿಸಿಕೊಳ್ಳಿ.!

By kannadanewsnow5704/07/2025 11:00 AM KARNATAKA 2 Mins Read

ಇತ್ತೀಚಿನ ದಿನಗಳಲ್ಲಿ ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿದೆ. ಜೀವನಶೈಲಿ ಮತ್ತು ಹೆಚ್ಚುತ್ತಿರುವ ಒತ್ತಡವು ಹೃದಯದ ಆರೋಗ್ಯದ…

BREAKING : ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : FIR ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ MLC ಎನ್.ರವಿಕುಮಾರ್

04/07/2025 10:58 AM

BREAKING : ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ : `FIR’ ಪ್ರಶ್ನಿಸಿ MLC ರವಿಕುಮಾರ್ ಹೈಕೋರ್ಟ್ ಗೆ ಅರ್ಜಿ.!

04/07/2025 10:54 AM

BREAKING : ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಒಂದೇ ಜಿಲ್ಲೆಯಲ್ಲಿ 270ಮಿ.ಮೀ ದಾಖಲೆ ಮಳೆ!

04/07/2025 10:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.