ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2025 (ಐಪಿಎಲ್ 2025) ಸಮಾರೋಪ ಸಮಾರಂಭದಲ್ಲಿ ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಭಾರತೀಯ ಸಶಸ್ತ್ರ ಪಡೆಗಳಿಗೆ ವಿಶೇಷ ಗೌರವ ಸಲ್ಲಿಸಲಿದೆ ಎಂದು ಕಾರ್ಯದರ್ಶಿ ಸೈಕಿಯಾ ದೇವಜಿತ್ ಸೈಕಿಯಾ ಖಾಸಗಿ ಮಾಧ್ಯಮಕ್ಕೆ ದೃಢಪಡಿಸಿದ್ದಾರೆ.
ಆಪರೇಷನ್ ಸಿಂಧೂರ್ ಯಶಸ್ವಿಯಾಗಿ ನಡೆಸಿದಭಾರತವು ಮೇ 7 ರಂದು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು, ಇದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಅಡಗುತಾಣಗಳ ಮೇಲೆ ನಿಖರವಾದ ದಾಳಿಯಾಗಿತ್ತು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ ನಂತರ ಈ ಕಾರ್ಯಾಚರಣೆಯನ್ನು ನಡೆಸಲಾಯಿತು. ಸಶಸ್ತ್ರ ಪಡೆಗಳ ಶೌರ್ಯ, ಧೈರ್ಯ ಮತ್ತು ನಿಸ್ವಾರ್ಥ ಸೇವೆಯನ್ನು ಗೌರವಿಸಲು, ಬಿಸಿಸಿಐ ಸಮಾರೋಪ ಸಮಾರಂಭವನ್ನು ರಾಷ್ಟ್ರದ ವೀರರಿಗೆ ಅರ್ಪಿಸಲು ನಿರ್ಧರಿಸಿದೆ ಎಂದು ದೇವಜಿತ್ ಸೈಕಿಯಾ ಬಹಿರಂಗಪಡಿಸಿದ್ದಾರೆ. ಸಶಸ್ತ್ರ ಪಡೆಗಳ ಶೌರ್ಯವನ್ನು ಗೌರವಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.