ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಮೂಲಕ ಆಸ್ತಿ ನಷ್ಟ, ಶಾಂತಿಭಂಗವನ್ನು ಉಂಟು ಮಾಡಿದರೇ ಮೂರು ವರ್ಷ ಜೈಲು, 50,000 ವರೆಗೆ ದಂಡವನ್ನು ವಿಧಿಸಲಾಗುತ್ತದೆ.
ಈ ಬಗ್ಗೆ ವಿಧಾನಮಂಡಲದ ಅಧಿವೇಶನದಲ್ಲಿ ಮಾತನಾಡಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ರಾಜ್ಯ ಸರ್ಕಾರದಿಂದ ಹೊಸ ಕಾನೂನು ಜಾರಿಗೊಳಿಸಲಾಗುತ್ತಿದೆ. ಸಾರ್ವಜನಿಕ ಕಾರ್ಯಕ್ರಮಕ್ಕೆ ಸಂಬಂಧಿಸಿ ಸುಳ್ಳು ಸುದ್ದಿ, ಆಸ್ತಿ ನಷ್ಟ, ಶಾಂತಿಭಂಗಕ್ಕೆ ಪ್ರಚೋದಿಸಿದರೆ ಮೂರು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು, ₹50 ಸಾವಿರ ದಂಡ ಅಥವಾ ಎರಡನ್ನೂ ವಿಧಿಸಬಹುದು. ಪೊಲೀಸರ ನಿರ್ದೇಶನ ಉಲ್ಲಂಘಿಸಿದರೆ ಒಂದು ತಿಂಗಳ ಶಿಕ್ಷೆ, ₹50 ಸಾವಿರ ದಂಡ ವಿಧಿಸಲಾಗುವುದು ಎಂದಿದ್ದಾರೆ.
ಜೊತೆಗೆ ಸ್ವತ್ತಿಗೆ ಉಂಟಾದ ನಷ್ಟವನ್ನು ಆಯೋಜಕರು ಭರಿಸಬೇಕು. ಜೀವಹಾನಿ ಜವಾಬ್ದಾರಿಯನ್ನೂ ಹೊರಬೇಕು. 50 ಸಾವಿರ ಜನರಿಗಿಂತ ಹೆಚ್ಚಿದ್ದಾಗ ₹1 ಕೋಟಿ ಮೊತ್ತದ ನಷ್ಟ ಭರ್ತಿ ಬಾಂಡ್ ನೀಡಬೇಕು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಸಾರ್ವಜನಿಕ ಕಾರ್ಯಕ್ರಮಕ್ಕೆ ಸಂಬಂಧಿಸಿ ಸುಳ್ಳು ಸುದ್ದಿ, ಆಸ್ತಿ ನಷ್ಟ, ಶಾಂತಿಭಂಗಕ್ಕೆ ಪ್ರಚೋದಿಸಿದರೆ ಮೂರು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು, ₹50 ಸಾವಿರ ದಂಡ ಅಥವಾ ಎರಡನ್ನೂ ವಿಧಿಸಬಹುದು. ಪೊಲೀಸರ ನಿರ್ದೇಶನ ಉಲ್ಲಂಘಿಸಿದರೆ ಒಂದು ತಿಂಗಳ ಶಿಕ್ಷೆ, ₹50 ಸಾವಿರ ದಂಡ ವಿಧಿಸಲಾಗುವುದು. ಜೊತೆಗೆ ಸ್ವತ್ತಿಗೆ ಉಂಟಾದ ನಷ್ಟವನ್ನು… pic.twitter.com/etpqkMGbRo
— DIPR Karnataka (@KarnatakaVarthe) August 22, 2025
ಹೆಗಡೆಯವರೇ SIT ನಿರ್ಧಾರ ಸ್ವಾಗತ, ಆದರೇ ಬಿಜೆಪಿಗರು ಹಿಡ್ಕೊಂಡು ಅಲ್ಲಾಡಿಸ್ತಿದ್ದಾರೆ: ಸಿಎಂ ಸಿದ್ಧರಾಮಯ್ಯ
ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಸುದ್ದಿ : ಬ್ಯಾಂಕಿಂಗ್, ಹಣಕಾಸು ಕ್ಷೇತ್ರದಲ್ಲಿ 2.5 ಲಕ್ಷ ಹೊಸ ಉದ್ಯೋಗಗಳು ಲಭ್ಯ