Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಲ್ಮನೆಯಲ್ಲೂ ಬಾಲ್ಯ ವಿವಾಹ ನಿಷೇಧ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್‌

20/08/2025 9:39 PM

ಯುಜಿಸಿಇಟಿ/ನೀಟ್ ಗೆ 2ನೇ ಸುತ್ತಿನ ಕೌನ್ಸೆಲಿಂಗ್ ಆರಂಭ: ಆ.29ಕ್ಕೆ ತಾತ್ಕಾಲಿಕ ಫಲಿತಾಂಶ ಪ್ರಕಟ

20/08/2025 9:25 PM

ಈ ಪೋಸಿಷನಲ್’ನಲ್ಲಿ ಸೆಕ್ಸ್ ಮಾಡುವ 99% ಮಹಿಳೆಯರಿಗೆ ಕ್ಯಾನ್ಸರ್ ಬರುತ್ತೆ ; ಶಾಕಿಂಗ್ ವರದಿ

20/08/2025 9:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯುಜಿಸಿಇಟಿ/ನೀಟ್ ಗೆ 2ನೇ ಸುತ್ತಿನ ಕೌನ್ಸೆಲಿಂಗ್ ಆರಂಭ: ಆ.29ಕ್ಕೆ ತಾತ್ಕಾಲಿಕ ಫಲಿತಾಂಶ ಪ್ರಕಟ
KARNATAKA

ಯುಜಿಸಿಇಟಿ/ನೀಟ್ ಗೆ 2ನೇ ಸುತ್ತಿನ ಕೌನ್ಸೆಲಿಂಗ್ ಆರಂಭ: ಆ.29ಕ್ಕೆ ತಾತ್ಕಾಲಿಕ ಫಲಿತಾಂಶ ಪ್ರಕಟ

By kannadanewsnow0920/08/2025 9:25 PM

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ಎಲ್ಲ ವೃತ್ತಿಪರ ಕೋರ್ಸ್ ಗಳ ಎರಡನೇ ಸುತ್ತಿನ ಪ್ರವೇಶ ಪ್ರಕ್ರಿಯೆ ಬುಧವಾರದಿಂದ ಆರಂಭವಾಗಿದೆ. ಲಭ್ಯ ಸೀಟುಗಳ ವಿವರಗಳನ್ನು ಕೂಡ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಗುರುವಾರದಿಂದ (ಆ.21) ಇಚ್ಛೆ/ಆಯ್ಕೆಗಳನ್ನು ಬದಲಿಸುವ/ತೆಗೆಯುವ ಕೆಲಸವನ್ನೂ ಮಾಡಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಆ.25ರವರೆಗೆ ಇಚ್ಛೆ/ಆಯ್ಕೆಗಳನ್ನು ಬದಲಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಆ.29ರಂದು ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆರ್ಯುವೇದ ಕೋರ್ಸ್ ಗಳ ಸೀಟ್ ಮ್ಯಾಟ್ರಿಕ್ಸ್ ಕೂಡ ಪ್ರಕಟಿಸಿದ್ದು, ಈ ಕೋರ್ಸ್ ಗೆ ಮಾತ್ರ ಇಚ್ಚೆ/ಆಯ್ಕೆಗಳನ್ನು ದಾಖಲು ಮಾಡಲು ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮೊದಲ ಸುತ್ತಿನಲ್ಲಿ ಚಾಯ್ಸ್-1 ಆಯ್ಕೆ ಮಾಡಿಕೊಂಡು ಪ್ರವೇಶ ಪಡೆದಿರುವವರನ್ನು ಹೊರತುಪಡಿಸಿ, ಛಾಯ್ಸ್- 2 ಹಾಗೂ 3 ಆಯ್ಕೆ ಮಾಡಿದವರಿಗೂ ಆಯುರ್ವೇದ ಕೋರ್ಸ್ ಗಳ ಪ್ರವೇಶಕ್ಕೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅವಕಾಶ ಇರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದುವರೆಗೂ ಸೀಟು ಹಂಚಿಕೆಯಾಗದಿರುವವರು ಈ ಸುತ್ತಿನಲ್ಲಿ ಭಾಗವಹಿಸಬೇಕಿದ್ದರೆ ಕಡ್ಡಾಯವಾಗಿ ಲಾಗಿನ್ ಆಗಿ ತಮಗೆ ಸೀಟಿನ ಅಗತ್ಯ ಇದೆ ಎನ್ನುವುದನ್ನು ಖಾತರಿಪಡಿಸಲು ಒಪ್ಪಿಗೆಯ (I Agree) ಬಟನ್ ಒತ್ತಬೇಕು. ಹಾಗೆಯೇ ತಮ್ಮ ಇಚ್ಛೆ/ಆಯ್ಕೆಗಳನ್ನು ಕೂಡ ಮೇಲೆ/ಕೆಳಗೆ ಮಾಡುವ ಹಾಗೂ ತೆಗೆದು ಹಾಕುವುದಕ್ಕೂ ಅವಕಾಶ ನೀಡಲಾಗಿದೆ. ಏನೂ ಮಾಡದೆ ಸುಮ್ಮನಿದ್ದರೂ ಅಂತಹವರನ್ನು ಮುಂದಿನ ಸುತ್ತಿಗೆ ಪರಿಗಣಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಎರಡನೇ ಸುತ್ತಿನಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳಿಗೆ ಸೀಟು ಹಂಚಿಕೆಯಾದವರು ಕಡ್ಡಾಯವಾಗಿ ಕಾಲೇಜಿಗೆ ಹೋಗಿ ಸೇರಲೇ ಬೇಕು. ಇವರಿಗೆ ಛಾಯ್ಸ್- 2 ಮತ್ತು ಛಾಯ್ಸ್-3ಕ್ಕೆ ಅವಕಾಶವೇ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಅಣಕು ಫಲಿತಾಂಶ

ಅಭ್ಯರ್ಥಿಗಳು, ಈಗಾಗಲೇ ನಮೂದಿಸಿರುವ ತಮ್ಮ ಇಚ್ಛೆ/ಆಯ್ಕೆಗಳನ್ನು ಅದಲುಬದಲು ಮಾಡಿಕೊಂಡ ನಂತರ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟಿಸಲಾಗುತ್ತದೆ. ಇದು ಬಹುತೇಕ ಅಂತಿಮ ಫಲಿತಾಂಶವೇ ಆಗಿರುತ್ತದೆ. ಎಂಸಿಸಿ ವತಿಯಿಂದ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಣೆ ನಂತರ ಆಲ್ ಇಂಡಿಯಾ ಕೋಟಾ ಅಥವಾ ಬೇರೆ ರಾಜ್ಯದಲ್ಲಿ ಸೀಟು ಸಿಕ್ಕಿ, ಅಲ್ಲಿಗೆ ಹೋಗಲು ಆಸಕ್ತಿ ಇರುವವರಿಗೆ ಯಾವುದೇ ದಂಡ ಇಲ್ಲದೆ ಹೊರಗೆ ಹೋಗಲು ಈ ಹಂತದಲ್ಲಿ ಅವಕಾಶ‌ ಮಾಡಿಕೊಡಲಾಗುತ್ತದೆ. ಎಂಸಿಸಿ ಫಲಿತಾಂಶ ಪ್ರಕಟಣೆಯಾದ ಒಂದು ದಿನ ಅವಕಾಶ ಕೊಟ್ಟು ಹೊರ ಹೋಗುವವರನ್ನು ನೋಡಿಕೊಂಡು, ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಅಖಿಲ ಭಾರತ ಕೋಟಾದಲ್ಲಿ ಸೀಟು ಸಿಕ್ಕಿ ಅಲ್ಲೇ ಪ್ರವೇಶ ಪಡೆಯುವವರು ಹೊರ ಹೋದರೆ ನಮ್ಮದೇ ರಾಜ್ಯದ ಮತ್ತಷ್ಟು ಮಕ್ಕಳಿಗೆ ಅನುಕೂಲ ಮಾಡಿಕೊಡಲು ಎರಡನೇ ಸುತ್ತಿನ ಫಲಿತಾಂಶವನ್ನು ಒಂದು ದಿನ ತಡ ಮಾಡಿ ಪ್ರಕಟಿಸಲಾಗುವುದು. ಇದು ಈ ಬಾರಿಯ ವಿಶೇಷ ಎಂದು ಅವರು ವಿವರಿಸಿದ್ದಾರೆ.

ಬಾಲಕನ ಚಿಕಿತ್ಸೆಗೆ 5 ಲಕ್ಷ ನೆರವು ನೀಡಿದ ಸಚಿವ ಜಮೀರ್ ಅಹಮದ್ ಖಾನ್

ಸಾಗರ, ಹೊಸನಗರದಲ್ಲಿ ಅಭಿವೃದ್ಧಿ ಪರ್ವಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಾಂದಿ: 1 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ

Share. Facebook Twitter LinkedIn WhatsApp Email

Related Posts

ಮೇಲ್ಮನೆಯಲ್ಲೂ ಬಾಲ್ಯ ವಿವಾಹ ನಿಷೇಧ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್‌

20/08/2025 9:39 PM1 Min Read

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿವೈ ವಿಜಯೇಂದ್ರ ವಾಗ್ಧಾಳಿ

20/08/2025 8:59 PM2 Mins Read

BREAKING: ‘ಅನನ್ಯ ಭಟ್ ನಾಪತ್ತೆ’ ಪ್ರಕರಣವನ್ನು ‘SIT’ಗೆ ಹಸ್ತಾಂತರಿಸಿ ‘ರಾಜ್ಯ ಸರ್ಕಾರ’ ಆದೇಶ

20/08/2025 8:48 PM2 Mins Read
Recent News

ಮೇಲ್ಮನೆಯಲ್ಲೂ ಬಾಲ್ಯ ವಿವಾಹ ನಿಷೇಧ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್‌

20/08/2025 9:39 PM

ಯುಜಿಸಿಇಟಿ/ನೀಟ್ ಗೆ 2ನೇ ಸುತ್ತಿನ ಕೌನ್ಸೆಲಿಂಗ್ ಆರಂಭ: ಆ.29ಕ್ಕೆ ತಾತ್ಕಾಲಿಕ ಫಲಿತಾಂಶ ಪ್ರಕಟ

20/08/2025 9:25 PM

ಈ ಪೋಸಿಷನಲ್’ನಲ್ಲಿ ಸೆಕ್ಸ್ ಮಾಡುವ 99% ಮಹಿಳೆಯರಿಗೆ ಕ್ಯಾನ್ಸರ್ ಬರುತ್ತೆ ; ಶಾಕಿಂಗ್ ವರದಿ

20/08/2025 9:24 PM

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿವೈ ವಿಜಯೇಂದ್ರ ವಾಗ್ಧಾಳಿ

20/08/2025 8:59 PM
State News
KARNATAKA

ಮೇಲ್ಮನೆಯಲ್ಲೂ ಬಾಲ್ಯ ವಿವಾಹ ನಿಷೇಧ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್‌

By kannadanewsnow0920/08/2025 9:39 PM KARNATAKA 1 Min Read

ವಿಧಾನಪರಿಷತ್‌: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಾಲ್ಯವಿವಾಹ ನಿಷೇಧ (ತಿದ್ದುಪಡಿ) ಕಾಯ್ದೆ ಹಾಗೂ ದೇವದಾಸಿ ಪದ್ಧತಿ ನಿಷೇಧ ಕಾಯ್ದೆಗೆ ವಿಧಾನ ಪರಿಷತ್‌ನಲ್ಲೂ ಗ್ರೀನ್‌…

ಯುಜಿಸಿಇಟಿ/ನೀಟ್ ಗೆ 2ನೇ ಸುತ್ತಿನ ಕೌನ್ಸೆಲಿಂಗ್ ಆರಂಭ: ಆ.29ಕ್ಕೆ ತಾತ್ಕಾಲಿಕ ಫಲಿತಾಂಶ ಪ್ರಕಟ

20/08/2025 9:25 PM

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿವೈ ವಿಜಯೇಂದ್ರ ವಾಗ್ಧಾಳಿ

20/08/2025 8:59 PM

BREAKING: ‘ಅನನ್ಯ ಭಟ್ ನಾಪತ್ತೆ’ ಪ್ರಕರಣವನ್ನು ‘SIT’ಗೆ ಹಸ್ತಾಂತರಿಸಿ ‘ರಾಜ್ಯ ಸರ್ಕಾರ’ ಆದೇಶ

20/08/2025 8:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.