ಬೆಳಗಾವಿ: ಇಂದು ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿಯೇ ನಡೆದಿದೆ. ಪೊಲೀಸರೇ ಎದುರೇ ಎರಡು ಪಕ್ಷದ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಮುಂದೂಡಬೇಕು ಎನ್ನುವ ಉದ್ದೇಶದಿಂದ ಠರಾವು ಪಾಸ್ ಮಾಡಬೇಕಿದ್ದಂತ ಸೆಕ್ರೇಟರಿಯನ್ನೇ ಕಾಂಗ್ರೆಸ್ ಕಾರ್ಯಕರ್ತರು ಅಪಹರಿಸಲು ಯತ್ನಿಸಿದ್ದರು. ಕಾರಿನಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್ ಸೆಕ್ರೇಟರಿ ಭೀಮಪ್ಪ ಅವರನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ತೆರಳುತ್ತಿದ್ದರು.
ಈ ವಿಷಯ ತಿಳಿದಂತ ಬಿಜೆಪಿ ಕಾರ್ಯಕರ್ತರು ಕಾರನ್ನು ತಡೆದಿದ್ದಾರೆ. ಅಲ್ಲದೇ ಕಾರಿನ ಗ್ಲಾಸ್ ಒಡೆಯಲು ಯತ್ನಿಸಿದಂತ ವೇಳೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿದೆ. ಬಿಜೆಪಿ ಬೆಂಬಲಿತ ಕಾರ್ಯಕರ್ತರು ಕಾರನ್ನು ಸುತ್ತುವರೆದು ಅದರಲ್ಲಿದ್ದಂತ ಸೆಕ್ರೆಟರಿ ಭೀಮಪ್ಪ ಅವರನ್ನು ಕೆಳಗೆ ಇಳಿಸಿದ್ದಾರೆ.
ಗಲಾಟೆ ತಾರಕ್ಕೆ ಏರಿದಂತ ಸಂದರ್ಭದಲ್ಲಿ ಪೊಲೀಸರು ತಿಳಿಗೊಳಿಸೋದಕ್ಕೆ ಯತ್ನಿಸಿದ್ದಾರೆ. ಆದರೇ ಅದು ಸಾಧ್ಯವಾಗದೇ ಪೊಲೀಸರ ಎದುರೇ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡು ಹೊಡೆದಾಡಿಕೊಂಡಿರುವುದಾಗಿ ಹೇಳಲಾಗುತ್ತಿದೆ.