ಬೆಳಗಾವಿ : ತಾನೇ ಹೆತ್ತಂತ ಮಗುವನ್ನು ಪಾಪಿ ತಾಯಿಯೊಬ್ಬಳು ಕೆರೆಗೆ ಎಸೆದಿರುವ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಗ್ರಾಮದಲ್ಲಿ ನಡೆದಿದೆ. ಮಗುವನ್ನು ಕೆರೆಗೆ ಎಸೆದಿರುವುದಕ್ಕೆ ಕಾರಣ ಏನೆಂದರೆ ಮಗುವಿಗೆ ಪಿಡ್ಸ್ ಮಗುವಿಗೆ ಪಿಡ್ಸ್ ಸಮಸ್ಯೆ ಇದೆ ಎಂದು ತಾಯಿ ಹೇಳಿಕೊಂಡಿದ್ದಾಳೆ.
ಹೌದು ಮಗುವಿಗೆ ಪಿಡ್ಸ್ ಬರುತ್ತೆ ಅಂತಾ ಹೆತ್ತ ಎರಡು ತಿಂಗಳ ಹೆಣ್ಣು ಹಸುಗೂಸನ್ನು ತಾಯಿ ಕೆರೆಗೆ ಎಸೆದಿರುವಂತಹ ಮತ್ತೊಂದು ಅಮಾನವೀಯ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಗ್ರಾಮದಲ್ಲಿ ನಡೆದಿದೆ. ತಾಯಿ ಮಗುವನ್ನು ಕೆರೆಗೆ ಎಸೆಯುವುದನ್ನ ನೋಡಿದ ದನ, ಕರು ತೊಳೆಯುತ್ತಿದ್ದ ಯುವಕರು ತಕ್ಷಣವೇ ಕೆರೆಗೆ ಹಾರಿ ಮಗು ರಕ್ಷಣೆ ಮಾಡಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಣಬರಗಿ ಗ್ರಾಮದ ನಿವಾಸಿ ಶಾಂತಿ ಕರವಿನಕೊಪ್ಪ ಎಂಬುವವರು ಈ ಕೃತ್ಯವೆಸಗಿದ್ದಾರೆ. ಮಗುವನ್ನು ಕೆರೆಗೆ ಎಸೆದು ಓಡಿ ಹೋಗುತ್ತಿದ್ದ ತಾಯಿಯನ್ನ ತಡೆದು ಸ್ಥಳೀಯರು ಬುದ್ದಿ ಹೇಳಿದ್ದಾರೆ. ಮಗುವನ್ನ ರಕ್ಷಣೆ ಮಾಡಿ ಅವಳ ಕೈಗೆ ನೀಡಿದ್ದಾರೆ. ಬಳಿಕ ಬೆಳಗಾವಿ ನಗರದ ಚಿಕ್ಕ ಮಕ್ಕಳ ಖಾಸಗಿ ಆಸ್ಪತ್ರೆಗೆ ಮಗು ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಕೆರೆಗೆ ಮಗುವನ್ನ ಎಸೆದು ಶಾಂತಿ ಓಡುತ್ತಿದ್ದಂತೆ ಹಿಂಬಾಲಿಸಿದ ಸ್ಥಳೀಯರು ಕೂಡಲೇ ಆಕೆಯನ್ನ ಹಿಡಿದು ಕೆರೆ ಕಡೆಗೆ ಕರೆದುಕೊಂಡು ಬಂದಿದ್ದಾರೆ. ರಕ್ಷಣೆ ಮಾಡಿದ ಮಗುವನ್ನ ಆಕೆ ಕೈಗೆ ಕೊಟ್ಟು ಬುದ್ದಿವಾದ ಹೇಳಿದ್ದಾರೆ. ಆ್ಯಂಬುಲೆನ್ಸ್ ಕರೆಸಿ ಮಗುವನ್ನ ನಗರದಲ್ಲಿರುವ ಚಿಕ್ಕ ಮಕ್ಕಳ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಈ ಕುರಿತು ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ತಾಯಿ ವಿರುದ್ದ ಕೊಲೆ ಕೇಸ್ ದಾಖಲಾಗಿದ್ದು, ಇತ್ತ ಮಗುವನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.