Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕರ್ನಾಟಕದ ಪ್ರಸಿದ್ಧ ಜನಪದ ವಿಧ್ವಾಂಸ `ಡಾ. ಎನ್.ಆರ್.ನಾಯಕ’ ನಿಧನ | N.R. Nayak passes away

15/09/2025 7:30 AM

BIG NEWS : ಕುರುಬ ಸಮುದಾಯ `ST’ ಸೇರ್ಪಡೆ ಸಂಬಂಧ ನಾಳೆ ಮಹತ್ವದ ಸಭೆ ನಿಗದಿ

15/09/2025 7:19 AM

ರಾಜ್ಯಾದ್ಯಂತ ಇಂದು ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಣೆ : ಸರ್ಕಾರದಿಂದ ಮಹತ್ವದ ಆದೇಶ

15/09/2025 7:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ: ಏ.7 ರಿಂದ 9ರ ನಡುವೆ ಕೇಂದ್ರ ತಂಡ ಸ್ಥಳ ಪರಿಶೀಲನೆಗೆ ಆಗಮನ
KARNATAKA

ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ: ಏ.7 ರಿಂದ 9ರ ನಡುವೆ ಕೇಂದ್ರ ತಂಡ ಸ್ಥಳ ಪರಿಶೀಲನೆಗೆ ಆಗಮನ

By kannadanewsnow0922/03/2025 2:56 PM

ಬೆಂಗಳೂರು: ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ. ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕೆಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏ.7ರಿಂದ 9ರೊಳಗೆ ರಾಜ್ಯಕ್ಕೆ ಆಗಮಿಸಲಿದೆ. ಈ ಸಂಬಂಧ ಈಗಾಗಲೇ ಪ್ರಾಧಿಕಾರಕ್ಕೆ ಕೆಎಸ್ಐಐಡಿಸಿ ವತಿಯಿಂದ ₹1.21 ಕೋಟಿ ಶುಲ್ಕವನ್ನು ಪಾವತಿಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶನಿವಾರ ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು ಕನಕಪುರ ರಸ್ತೆಯಲ್ಲಿ ಎರಡು ಮತ್ತು ನೆಲಮಂಗಲ- ಕುಣಿಗಲ್ ರಸ್ತೆಯಲ್ಲಿ ಒಂದು ಜಾಗವನ್ನು ಈ ಸಲುವಾಗಿ ಗುರುತಿಸಲಾಗಿದೆ ಎಂದರು.

ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಅಂತಿಮಪಡಿಸಿರುವ ತಾಣಗಳನ್ನು ಬಂದು ಪರಿಶೀಲಿಸುವಂತೆ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ನಮ್ಮ ಇಲಾಖೆಯಿಂದ ಈ ತಿಂಗಳ 5ರಂದು ಪತ್ರ ಬರೆಯಲಾಗಿತ್ತು. ಅದರಂತೆ ತಂಡವು ಬರುತ್ತಿದೆ. ತಂಡದ ಸೂಚನೆಯಂತೆ ನಾವು ಈ ತಾಣಗಳ ಕಂದಾಯ ನಕಾಶೆ, 10 ವರ್ಷಗಳ ಹವಾಮಾನ ವರದಿ, ಈ ಜಾಗಗಳ ಜಾಮಿತೀಯ ಲಕ್ಷಣಗಳನ್ನು ವಿವರಿಸುವ ಚಿತ್ರ, ಭಾರತೀಯ ಸರ್ವೇ ಇಲಾಖೆಯ ನಕಾಶೆ, ಉದ್ದೇಶಿತ ನಿಲ್ದಾಣದಲ್ಲಿನ ಕಾರ್ಯಾಚರಣೆ ಸ್ವರೂಪ (ವಿಎಫ್ಆರ್/ಐಎಫ್ಆರ್) ತಿಳಿಸುವ ವಿವರ ಮುಂತಾದವನ್ನು ಸಿದ್ಧಪಡಿಸಿಕೊಂಡಿದ್ದೇವೆ ಎಂದು ಅವರು ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ಈಗ ಇರುವ ವಿಮಾನ ನಿಲ್ದಾಣದ ಮೇಲೆ ಅತೀವ ಒತ್ತಡವಿದೆ. ಇನ್ನೊಂದೆಡೆಯಲ್ಲಿ, 2033ಕ್ಕೆ ಸರಿಯಾಗಿ 150 ಕಿ.ಮೀ ವ್ಯಾಪ್ತಿಯಲ್ಲಿ ಮತ್ತೊಂದು ವಿಮಾನ ನಿಲ್ದಾಣ ಹೊಂದುವಂತಿಲ್ಲ ಎನ್ನುವ ಷರತ್ತು ಕೊನೆಗೊಳ್ಳಲಿದೆ. ಇವೆಲ್ಲವನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡು ಎರಡನೆಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಿನಿಂದಲೇ ಮುಂದಡಿ ಇಡಲಾಗುತ್ತಿದೆ. ಹೀಗೆಯೇ ಮುಂದುವರಿದರೆ 2033ರ ಹೊತ್ತಿಗೆ ಅದು ಬಳಕೆಗೆ ಸಿದ್ಧವಾಗಬಹುದು ಎಂದು ಪಾಟೀಲ ಹೇಳಿದ್ದಾರೆ.

`ಕೆಲವರು ತುಮಕೂರಿನ ಶಿರಾ ಸಮೀಪ ಉದ್ದೇಶಿತ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ. ಆದರೆ ಈ ಕಾರ್ಯಬೇಡಿಕೆ ಸಾಧುವಲ್ಲ. ಶಿರಾದಲ್ಲಿ ವಿಮಾನ ನಿಲ್ದಾಣ ಮಾಡಿದರೆ ಶಿವಮೊಗ್ಗ, ವಿಜಯಪುರದಲ್ಲಿ ಇರುವಂತೆ ಅದೇನಿದ್ದರೂ ಜಿಲ್ಲಾ ಮಟ್ಟದ್ದಾಗುತ್ತದೆ ಅಷ್ಟೆ. ಬೆಂಗಳೂರಿನ ಜನರಿಗೆ‌ ಅನುಕೂಲ ಆಗಬೇಕಾದರೆ ಅದು ಬೆಂಗಳೂರಿಗೆ ಸನಿಹದಲ್ಲೇ ಇರಬೇಕು. ಆಗ ಮಾತ್ರ ಹೂಡಿಕೆದಾರ ಸಂಸ್ಥೆಗಳು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬರುತ್ತಾರೆ. ಇಲ್ಲದಿದ್ಧರೆ ಯೋಜನೆಯೇ ಕಾರ್ಯಸಾಧುವಾಗುವುದಿಲ್ಲ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಲ್ದೋಟ ಮಾಲಿನ್ಯ: ಸೂಕ್ತ ಕ್ರಮ

ಕೊಪ್ಪಳದಲ್ಲಿ ಬಲ್ದೋಟ ಸಮೂಹವು 54 ಸಾವಿರ ಕೋಟಿ ರೂ. ಹೂಡಿಕೆ ಮಾಡಿ, ಬಹುದೊಡ್ಡ ಉಕ್ಕು ತಯಾರಿಕೆ ಕಾರ್ಖಾನೆ ಸ್ಥಾಪಿಸಲು ಮುಂದಾಗಿದೆ. ಇದರಿಂದ ಮಾಲಿನ್ಯ ಉಂಟಾಗಲಿದೆ ಎಂದು ಗವಿಮಠದ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಮಾಲಿನ್ಯದ ಬಗ್ಗೆ ಐಐಎಸ್ಸಿಯಂತಹ ತಟಸ್ಥ ಸಂಸ್ಥೆಯಿಂದ ಅಧ್ಯಯನ ನಡೆಸಲಾಗುತ್ತಿದೆ. ಅದರ ವರದಿಗೆ ಅನುಗುಣವಾಗಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಒಬ್ಬ ಸಚಿವನಾಗಿ ನನಗೆ ಉದ್ಯಮಗಳು ಬೆಳೆಯಬೇಕಾದ ಅನಿವಾರ್ಯತೆ ಮತ್ತು ಸಾರ್ವಜನಿಕರ ಧ್ವನಿ ಎರಡೂ ಅರ್ಥವಾಗುತ್ತವೆ. ಇದರಲ್ಲಿ ರಾಜಕೀಯವೇನೂ ಇಲ್ಲ ಎಂದು ಪಾಟೀಲ ಭರವಸೆ ನೀಡಿದ್ದಾರೆ.

BREAKING NEWS: ‘ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್’ ವಿರುದ್ಧ ದೂರು ದಾಖಲು

ನಾಗ್ಪುರ ಹಿಂಸಾಚಾರ: ಮತ್ತೆ 14 ಮಂದಿ ಬಂಧನ, ಬಂಧಿತರ ಸಂಖ್ಯೆ 105ಕ್ಕೆ ಏರಿಕೆ, 3 ಹೊಸ FIR ದಾಖಲು | Nagpur violence

Share. Facebook Twitter LinkedIn WhatsApp Email

Related Posts

BREAKING : ಕರ್ನಾಟಕದ ಪ್ರಸಿದ್ಧ ಜನಪದ ವಿಧ್ವಾಂಸ `ಡಾ. ಎನ್.ಆರ್.ನಾಯಕ’ ನಿಧನ | N.R. Nayak passes away

15/09/2025 7:30 AM1 Min Read

BIG NEWS : ಕುರುಬ ಸಮುದಾಯ `ST’ ಸೇರ್ಪಡೆ ಸಂಬಂಧ ನಾಳೆ ಮಹತ್ವದ ಸಭೆ ನಿಗದಿ

15/09/2025 7:19 AM1 Min Read

ರಾಜ್ಯಾದ್ಯಂತ ಇಂದು ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಣೆ : ಸರ್ಕಾರದಿಂದ ಮಹತ್ವದ ಆದೇಶ

15/09/2025 7:13 AM5 Mins Read
Recent News

BREAKING : ಕರ್ನಾಟಕದ ಪ್ರಸಿದ್ಧ ಜನಪದ ವಿಧ್ವಾಂಸ `ಡಾ. ಎನ್.ಆರ್.ನಾಯಕ’ ನಿಧನ | N.R. Nayak passes away

15/09/2025 7:30 AM

BIG NEWS : ಕುರುಬ ಸಮುದಾಯ `ST’ ಸೇರ್ಪಡೆ ಸಂಬಂಧ ನಾಳೆ ಮಹತ್ವದ ಸಭೆ ನಿಗದಿ

15/09/2025 7:19 AM

ರಾಜ್ಯಾದ್ಯಂತ ಇಂದು ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಣೆ : ಸರ್ಕಾರದಿಂದ ಮಹತ್ವದ ಆದೇಶ

15/09/2025 7:13 AM

‘ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ತೋರುವ ಸಮಯ ಮುಗಿದಿದೆ’: ಭಾರತೀಯ ವ್ಯಕ್ತಿಯ ಹತ್ಯೆ ಬಗ್ಗೆ ಟ್ರಂಪ್

15/09/2025 7:11 AM
State News
KARNATAKA

BREAKING : ಕರ್ನಾಟಕದ ಪ್ರಸಿದ್ಧ ಜನಪದ ವಿಧ್ವಾಂಸ `ಡಾ. ಎನ್.ಆರ್.ನಾಯಕ’ ನಿಧನ | N.R. Nayak passes away

By kannadanewsnow5715/09/2025 7:30 AM KARNATAKA 1 Min Read

ಹೊನ್ನಾವರ : ಕರ್ನಾಟಕದ ಪ್ರಸಿದ್ಧ ಜನಪದ ವಿದ್ವಾಂಸ, ಸಂಶೋಧಕ ಡಾ. ಎನ್.ಆರ್. ನಾಯಕ (90) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಎನ್.ಆರ್. ನಾಯಕ…

BIG NEWS : ಕುರುಬ ಸಮುದಾಯ `ST’ ಸೇರ್ಪಡೆ ಸಂಬಂಧ ನಾಳೆ ಮಹತ್ವದ ಸಭೆ ನಿಗದಿ

15/09/2025 7:19 AM

ರಾಜ್ಯಾದ್ಯಂತ ಇಂದು ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಣೆ : ಸರ್ಕಾರದಿಂದ ಮಹತ್ವದ ಆದೇಶ

15/09/2025 7:13 AM
vidhana soudha

ರಾಜ್ಯದ `ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್’ : ಸರ್ಕಾರದಿಂದಲೇ ಉಚಿತ `ಕ್ಯಾನ್ಸರ್’ ಚಿಕಿತ್ಸೆ

15/09/2025 6:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.