ಬೆಂಗಳೂರು : ಲಾರಿ ಡಿಕ್ಕಿಯಾಗಿ ರಸ್ತೆಯಲ್ಲಿ ತೆರಳುತ್ತಿದ್ದ 11 ವರ್ಷದ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹಾರೋಕ್ಯಾತನಹಳ್ಳಿ ಎಂಬಲ್ಲಿ ನಡೆದಿದೆ.
ರಸ್ತೆಯಲ್ಲಿ ತನ್ನ ಪಾಡಿಗೆ ತಾನು ತೆರಳುತ್ತಿದ್ದ ಬಾಲಕ ಶಕೀಲ್ (11) ಮೃತಪಟ್ಟಿದ್ದಾನೆ. ಮೃತ ಬಾಲಕ ಪಶ್ಚಿಮ ಬಂಗಾಳ ಮೂಲದವನೆಂದು ಎಂದು ಹೇಳಲಾಗುತ್ತಿದೆ. ಗುಲಾಮ್ ನೂರ್ ಹಾಗೂ ಹಂಗೀನಾ ದಂಪತಿಯ ಮೂರನೇ ಪುತ್ರ ಶಕೀಲ್ ಎಂದು ಹೇಳಲಾಗುತ್ತಿದೆ.
ಹಾರೋಕ್ಯಾತನಹಳ್ಳಿಯಲ್ಲಿ ಕೂಲಿ ಕೆಲಸ ಮಾಡಿ ದಂಪತಿಗಳು ಜೀವನ. ಸಾಗಿಸುತ್ತಿದ್ದರು. ಅಪಘಾತದ ಬಳಿಕ ಸ್ಥಳದಲ್ಲೇ ಲಾರಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ.ಮೃತ ಬಾಲಕನ ಪೋಷಕರ ಆಕ್ರಂದನ ಇದೀಗ ಮುಗಿಲು ಮುಟ್ಟಿದೆ.ಘಟನೆ ಕುರಿತಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.